Author: kannadanewsnow09

ಇನ್ನು ಜೀವನದಲ್ಲಿ ಕಷ್ಟಗಳು ಇದ್ದರೆ,ಶ್ರೀ ಆಂಜನೇಯ ಸ್ವಾಮಿಗೆ ಈ ರೀತಿಯಾಗಿ  ಹರಕೆ ಮಾಡಿಕೊಂಡರೆ ,ಜೀವನದಲ್ಲಿ ಇರುವಂತಹ ಇಂತಹ ಕಷ್ಟಗಳುಇದು ಯಾವ ರೀತಿಯ ಕಷ್ಟವೇ ಆದರೂ ಸರಿ ಆಂಜನೇಯಸ್ವಾಮಿ ಕೃಪೆಯಿಂದ ಎಲ್ಲಾ ಕಷ್ಟಗಳು  ಜೀವನದಲ್ಲಿ ಪರಿಹಾರವಾಗುತ್ತದೆ . ಪಂಡಿತ್  ವಿದ್ಯಾಧರ್ ನಕ್ಷತ್ರಿ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸೃಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಶ್ರೀ ವಿದ್ಯಾಧರ್ ನಕ್ಷತ್ರಿ ಪ್ರಧಾನ್ ತಾಂತ್ರಿಕ್ 9686268564 ಎಲ್ಲಾ ಸಂಕಷ್ಟಗಳು ದೂರವಾಗುವುದು ಖಚಿತ. ಸಾಕ್ಷಾತ್ ಶ್ರೀರಾಮ ಭಕ್ತ ಆಂಜನೇಯನ ಮಹಿಮೆಗಳು ಅಪಾರ. ನಂಬಿ…

Read More

ಗದಗ: ಏಪ್ರಿಲ್ 19 ರಂದು ಹಾವೇರಿ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಲಿದ್ದು, ಅಂದು ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲ ವಿಧಾನಸಭಾ ಕ್ಷೇತ್ರಗಳಿಂದ ಸಾವಿರಾರು ಜನರು ಬರುವ ನಿರೀಕ್ಷೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾವು ಎಂಟು ಕ್ಷೇತ್ರದ ಜನರು ಕಾರ್ಯಕರ್ತರಿಗೆ ಬರಲು ಸೂಚನೆ ನೀಡಿದ್ದೇವೆ. ಸಾವಿರಾರು ಜನರು ಬರುತ್ತಾರೆ. ಅಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಪ್ರತಿಪಕ್ಷದ ನಾಯಕರಾದ ಆರ್. ಅಶೋಕ್, ಮಾಜಿ ಸಚಿವರಾರ ಬೈರತಿ ಬಸವರಾಜ, ಮುರುಗೇಶ್ ನಿರಾಣಿ ಬರುತ್ತಾರೆ ಎಂದರು. ಇದೇ ವೇಳೆ ಸಂಸದ ಕರಡಿ ಸಂಗಣ್ಣ ಬಿಜೆಪಿ ತೊರೆದಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸಂಗಣ್ಣ ಅವರು ಕಾಂಗ್ರೆಸ್ ಸೇರ್ಪಡೆ ಆಗುತ್ತಿರುವುದು  ದುರದುಷ್ಟಕರ, ನಾವು ಅವರ ಮನವೊಲಿಸುವ ಕೆಲಸ ಮಾಡಿದ್ದೇವು ಕಾಂಗ್ರೆಸ್ ನವರು ಅವರಿಗೆ ಪ್ರಚೋದನೆ ಮಾಡಿದ್ದಾರೆ. ಚುನಾವಣೆ  ಸಂದರ್ಭದಲ್ಲಿ ಟಿಕೆಟ್ ಸಿಗದವರು ಬೇಸರ ಮಾಡಿಕೊಳ್ಳುವುದು…

Read More

ಶಿವಮೊಗ್ಗ : ತೀರ್ಥಹಳ್ಳಿ ತಾಲೂಕಿನ ಬಿದರಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಗುಂಬೆ ಹೋಬಳಿಯ ಕಣಗಲು, ಸುರುಳಿಗದ್ದೆ, ಹಾಗೂ ಉಳುಮಡಿ ಗ್ರಾಮಗಳಲ್ಲಿ ಸು 45 ಕುಟುಂಬಗಳು ವಾಸಿಸುತ್ತಿದ್ದು, ಇಲ್ಲಿಗೆ ಅನೇಕ ವರ್ಷಗಳಿಂದ ಮೂಲಭೂತ ಸೌಕರ್ಯಗಳಾದ ರಸ್ತೆ, ಕರೆಂಟ್ ವ್ಯವಸ್ಥೆಗಳಿಲ್ಲದೆ ಶಾಲೆಗೆ ಹೋಗುವ ಮಕ್ಕಳಿಗೆ ತೊಂದರೆಯಾಗುತ್ತಿದ್ದು ಜೊತೆಗೆ ಇಲ್ಲಿನ 20- 30 ಯುವಕರಿಗೆ ಮದುವೆ ಗೆ ಹೆಣ್ಣು ಕೊಡದಿರಿವುದು,ಕಾಡು ಪ್ರಾಣಿಗಳ ಸಮಸ್ಯೆ ಮತ್ತು ನೆಟ್ವರ್ಕ್ ಸಮಸ್ಯೆ ಉಂಟಾಗಿದ್ದು ಶಾಸಕರು ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಈ ಬಗ್ಗೆ ಮನವಿ ಸಲ್ಲಿಸಿದ್ದರು ಕ್ಯಾರೇ ಎನ್ನದ ಸರ್ಕಾರ ಹಾಗೂ ಆಡಳಿತಕ್ಕೆ ಗ್ರಾಮಸ್ಥರು ಚುನಾವಣೆ ಬಹಿಷ್ಕಾರ ಮಾಡುವುದರ ಮೂಲಕ ತಮ್ಮ ಅಕ್ರೋಶ ವ್ಯಕ್ತಪಡಿಸಿದ್ದಾರೆ. ಇದೆ ವೇಳೆ ತಲ್ಲೂರಂಗಡಿ ಕೈಮರದಿಂದ ಉಳುಮಡಿ ಹೋಗುವ ಸು 5ಕಿಮೀ ರಸ್ತೆ 8 ತಿಂಗಳ ಹಿಂದೆ ಮಾಡಿದ್ದಾದರೂ ಅಲ್ಲಲ್ಲಿ ರಸ್ತೆ ಕಿತ್ತು ಬಂದು ಕಳಪೆಯಾಗಿದೆ ಎಂದು ಗ್ರಾಮಸ್ಥರು ಆಗ್ರಸಿದ್ದಾರೆ. ಈ ಪ್ರದೇಶ ನಕ್ಸಲ್ ಪೀಡಿತ ಪ್ರದೇಶಕ್ಕೆ ಒಳಪಟ್ಟಿದ್ದು ಮೂಲಭೂತ ಸೌಕರ್ಯಗಳು ದೊರಕುತ್ತಿಲ್ಲ ಎಂಬುದು ಗ್ರಾಮಸ್ಥರ ಅಸಮಾಧಾನಕ್ಕೆ…

Read More

ಕೋಲಾರ: ಜಿಲ್ಲೆಯಲ್ಲಿ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಕಾಂಗ್ರೆಸ್ ತೊಡಗಿದೆ. ಮಂಡ್ಯ ಬಳಿಕ, ಕೋಲಾರದಲ್ಲಿ ರಾಹುಲ್ ಗಾಂಧಿ ಅವರು ಚುನಾವಣಾ ಪ್ರಚಾರ ನಡೆಸಿದರು. ಈ ವೇಳೆಯಲ್ಲಿ ರಾಹುಲ್ ಗಾಂಧಿಯವರು ಎಡವಟ್ಟು ಮಾಡಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಚೀಫ್ ಮಿನಿಸ್ಟರ್ ಡಿ.ಕೆ ಶಿವಕುಮಾರ್ ಎಂಬುದಾಗಿ ಸಂಭೋಧಿಸಿದಂತ ಘಟನೆ ನಡೆದಿದೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಚೊಕ್ಕಂಡಹಳ್ಳಿ ಬಳಿಯಲ್ಲಿ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಬೃಹತ್ ಪ್ರಚಾರ ಸಮಾವೇಶ ಆಯೋಜಿಸಲಾಗಿತ್ತು. ಈ ಸಮಾವೇಶದಲ್ಲಿ ಭಾಗಿಯಾಗಿದ್ದಂತ ರಾಹುಲ್ ಗಾಂಧಿ ಅವರು, ನೆರೆದಿದ್ದಂತ ಕಾರ್ಯಕರ್ತರು, ಜನತೆಯನ್ನು ಉದ್ದೇಶಿಸಿ ಭಾಷಣ ಮಾಡಿದರು. ಭಾಷಣ ಆರಂಭಿಸಿದ ಕೆಲವೇ ಕ್ಷಣಗಳಲ್ಲಿ ರಾಹುಲ್ ಗಾಂಧಿಯವರು ಡಿಸಿಎಂ ಡಿಕೆ ಶಿವಕುಮಾರ್ ಎಂಬುದಾಗಿ ಹೇಳೋ ಬದರು, ಚೀಫ್ ಮಿನಿಸ್ಟರ್ ಡಿ.ಕೆ ಶಿವಕುಮಾರ್ ಎಂಬುದಾಗಿ ಸಂಭೋದಿಸಿ ಎಡವಟ್ಟು ಮಾಡಿದರು. ಇದನ್ನ ಗಮನಿಸಿದಂತ ಕಾಂಗ್ರೆಸ್ ನಾಯಕರು, ಅವರಿಗೆ ಮನವರಿಕೆ ಮಾಡಿ ಕೊಟ್ಟಾಗ ಮತ್ತೆ ತಮ್ಮ ತಪ್ಪನ್ನು ತಿದ್ದುಕೊಂಡು, ಡಿಸಿಎಂ ಡಿ.ಕೆ ಶಿವಕುಮಾರ್ ಎಂಬುದಾಗಿ ಹೇಳಿ ತಪ್ಪು ಸರಿಪಡಿಸಿದಂತ…

Read More

ಬೆಂಗಳೂರು: ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಸಂಬಂಧ ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ ಹಾಗೂ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಅಗತ್ಯ ಸೇವೆಗಳ(AVES) ಸಿಬ್ಬಂದಿಗಳಿಗೆ ಮತ ಚಲಾಯಿಸಲು 3 ಲೋಕಸಭಾ ಕ್ಷೇತ್ರಗಳಲ್ಲೂ ಅಂಚೆ ಮತದಾನ ಕೇಂದ್ರ(Postal Voting Center) ವನ್ನು ಸ್ಥಾಪಿಸಲಾಗಿದೆ. ನಗರದ ಮೂರು ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ 1348 ಅಗತ್ಯ ಸೇವೆಗಳ ಸಿಬ್ಬಂದಿಯು ಅಂಚೆ ಮತದಾನ ಮಾಡಲು ನೋಂದಣಿ ಮಾಡಿಕೊಂಡಿದ್ದಾರೆ. ಈ ಸಂಬಂಧ ಅಗತ್ಯ ಸೇವೆ ಸಿಬ್ಬಂದಿಗಳಿಗೆ ದಿನಾಂಕ: 19-04-2024 ರಿಂದ 21-04-2024 ರವರೆಗೆ ಮೂರು ದಿನಗಳ ಕಾಲ ಬೆಳಗ್ಗೆ 9.00 ರಿಂದ ಸಂಜೆ 5.00 ಗಂಟೆಯರೆಗೆ ಮತ ಚಲಾಯಿಸಲು ಅವಕಾಶ ಕಲ್ಪಿಸಲಾಗಿದ್ದು, ಅಂಚೆ ಮತದಾನ ಕೇಂದ್ರ ಸ್ಥಾಪಿಸಿರುವ ಸ್ಥಳಗಳ ವಿವರ ಈ ಕೆಳಕಂಡಂತಿದೆ. 1. ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಪಿವಿಸಿ: ಚುನಾವಣಾಧಿಕಾರಿಗಳ ಕಛೇರಿ, ಕೊಠಡಿ ಸಂಖ್ಯೆ 17, ನೆಲ ಮಹಡಿ, ಮುಖ್ಯ ಸಾರ್ವಜನಿಕ ಸಂಪರ್ಕಧಿಕಾರಿಗಳ ಕಛೇರಿ ಪಕ್ಕ, ಬಿಬಿಎಂಪಿ ಕೇಂದ್ರ ಕಛೇರಿ, ನರಸಿಂಹ ರಾಜ ವೃತ್ತ, ಬೆಂಗಳೂರು-560002. 2.…

Read More

ಬೆಂಗಳೂರು: ನಗರದಲ್ಲಿ ನೀರಿನ ಆಹಾಕಾರ ಹೆಚ್ಚಾಗುತ್ತಿದೆ. ಟ್ಯಾಂಕ್ ನೀರಿಗೆ ಚಿನ್ನದ ಬೆಲೆ ಬಂದಿದ್ದು, ಇದಕ್ಕೂ ಕಡಿವಾಣ ಹಾಕಲಾಗಿದೆ. ಇದರ ನಡುವೆ ಕುಡಿಯೋ ನೀರಿನಲ್ಲಿ ಬೆಂಗಳೂರಲ್ಲಿ ಮಾರಣಾಂತಿಕ ಬ್ಯಾಕ್ಟೀರಿಯಾ ಒಂದು ಪತ್ತೆಯಾಗಿರೋ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ. ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಕಾಲರಾ ಜೊತೆಗೆ ನೀರಿನ ಬರದ ಜೊತೆಗೆ, ಈಗ ಬ್ಯಾಕ್ಟೀರಿಯಾವೊಂದು ಪತ್ತೆಯಾಗಿರೋದು ತಿಳಿದು ಬಂದಿದೆ. ಆರೋಗ್ಯ ಇಲಾಖೆಯಿಂದ ಕುಲುಷಿತ ನೀರಿನಿಂದ ಕಾಲರಾ ಹರಡುತ್ತಿರುವುದನ್ನ ತಡೆಗಟ್ಟೋ ನಿಟ್ಟಿನಲ್ಲಿ ನೀರಿನ ಪರೀಕ್ಷೆಗೆ ಇಳಿಯಲಾಗಿತ್ತು. ಬೆಂಗಳೂರು ನಗರ, ಗ್ರಾಮಾಂತರ, ಬಿಬಿಎಂಪಿ ವ್ಯಾಪ್ತಿಯ 570ಕ್ಕೂ ಹೆಚ್ಚು ಕಡೆಗಳಲ್ಲಿ ನೀರಿನ ಸ್ಯಾಂಪಲ್ ಪಡೆದು, ಲ್ಯಾಬ್ ಪರೀಕ್ಷೆಗೆ ಕಳುಹಿಸಿಕೊಡಲಾಗಿತ್ತು. 270 ನೀರಿನ ಮಾದರಿಯ ವರದಿ ರಿಪೋರ್ಟ್ ಬಂದಿದ್ದು, ಈ ಪೈಕಿ ಬೆಂಗಳೂರಿನ 20 ಕಡೆಗಳಲ್ಲಿ ಸಂಗ್ರಹಿಸಲಾಗಿರುವಂತ ನೀರಿನಲ್ಲಿ ಇ.ಕೋಲಿ ಎಂಬ ಬ್ಯಾಕ್ಟೀರಿಯಾ ಇರೋದು ಪತ್ತೆಯಾಗಿದೆ. ಇದಲ್ಲದೇ 70 ಕಡೆಯ ನೀರು ಕುಡಿಯೋದಕ್ಕೆ ಯೋಗ್ಯವಿಲ್ಲ ಅನ್ನೋದು ಕೂಡ ರಿಪೋರ್ಟ್ ನಿಂದ ತಿಳಿದು ಬಂದಿದೆ. ಅಂದಹಾಗೇ  ಬೆಂಗಳೂರು ನಗರ, ಬೆಂ.ಗ್ರಾಮಾಂತರ, ಬಿಬಿಎಂಪಿ ವ್ಯಾಪ್ತಿಯಲ್ಲಿ ನೀರು…

Read More

ಬೆಂಗಳೂರು: ಪ್ರಾಣಿಗಳಲ್ಲಿ ಕಾಣಿಸಿಕೊಳ್ಳುವಂತ ಗ್ಲಾಂಡರ್ಸ್ ರೋಗವು ಬೆಂಗಳೂರಿನ ಡಿ.ಜೆ ಹಳ್ಳಿಯಲ್ಲಿನ ಕುದುರಿಯೊಂದರಲ್ಲಿ ಪತ್ತೆಯಾಗಿದೆ. ಹೀಗಾಗಿ ಡಿ.ಜೆ ಹಳ್ಳಿ ಸುತ್ತಮುತ್ತಲಿನ ಪ್ರದೇಶವನ್ನು ರೋಗಪೀಡಿತ ವಲಯ ಎಂಬುದಾಗಿ ಘೋಷಣೆ ಮಾಡಲಾಗಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಬೆಂಗಳೂರಿನ ಡಿ.ಜೆ ಹಳ್ಳಿಯಲ್ಲಿಯ ಖಲೀದ್ ಷರೀಫ್ ಎಂಬುವರಿಗೆ ಸೇರಿದಂತೆ ಕುದುರೆಗೆ ಗ್ಲಾಂಡರ್ಸ್ ರೋಗ ತಗುಲಿರುವುದು ಪರೀಕ್ಷೆಯಿಂದ ದೃಢಪಟ್ಟಿದೆ ಎಂಬುದಾಗಿ ತಿಳಿಸಿದೆ. ಗ್ಲಾಂಡರ್ಸ್ ರೋಗ ದೃಢಪಟ್ಟ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಡಿ.ಜೆ ಹಳ್ಳಿ ಸುತ್ತಾಮುತ್ತಲಿನ 5 ಕಿಲೋಮೀಟರ್ ವ್ಯಾಪ್ತಿಯನ್ನು ರೋಗಪೀಡಿತ ವಲಯ ಎಂಬುದಾಗಿ ಗುರುತಿಸಲಾಗಿದೆ. 5 ರಿಂದ 25 ಕಿಲೋಮೀಟರ್ ಪ್ರದೇಶದವನ್ನು ಜಾಗೃತ ವಲಯ ಎಂಬುದಾಗಿ ನಿಗದಿ ಪಡಿಸಿರೋದಾಗಿ ಹೇಳಿದೆ. ಪಶು ಸಂಗೋಪನೆ ಹಾಗೂ ಹೈನುಗಾರಿಕಾ ಇಲಾಖೆಯಿಂದ ಕಟ್ಟೆಚ್ಚರ ವಹಿಸಲಾಗಿದೆ. ಕುದುರೆ, ಕತ್ತೆ ಹಾಗೂ ಹೇಸರಗತ್ತೆಗಳ ಚಲನವಲನದ ಮೇಲೆ ತೀವ್ರ ನಿಗಾ ವಹಿಸಲಾಗಿದೆ ಎಂಬುದಾಗಿ ತಿಳಿಸಿದೆ. ಅಂದಹಾಗೇ ಗ್ಲಾಂಡರ್ಸ್ ಒಂದು ಸಾಂಕ್ರಾಮಿಕ ಹಾಗೂ ಮಾರಣಾಂತಿಕ ಕಾಯಿಲೆ. ಇದು ಸಾಮಾನ್ಯವಾಗಿ ಕುದುರೆಗಳು, ಕತ್ತೆಗಳು ಮತ್ತು ಹೇಸರಗತ್ತೆಗಳಲ್ಲಿ…

Read More

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಪಡೆದು, ಗೆಲುವು ಸಾಧಿಸುವುದರೊಂದಿಗೆ ಅಧಿಕಾರಕ್ಕೆ ಬಂದ್ರೆ ರಾಷ್ಟ್ರದ ಜನತೆಗಾಗಿ 3 ಯೋಜನೆಯನ್ನು ಜಾರಿಗೊಳಿಸೋದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಘೋಷಣೆ ಮಾಡಿದ್ದಾರೆ. ಮಂಡ್ಯದ ಪಿಇಎಸ್ ಕಾಲೇಜು ಮೈದಾನದಲ್ಲಿ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ತೊಡಗಿ ಮಾತನಾಡಿದಂತ ಅವರು ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬಂದ್ರೆ ಮೂರು ಯೋಜನೆ ಜಾರಿಗೊಳಿಸಲಾಗುತ್ತದೆ ಎಂದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ರೈತರ ಬೆಳೆಗೆ ಕನಿಷ್ಠ ಬೆಂಬಲ ಬೆಲೆ ಯೋಜನೆ ಜಾರಿಗೊಳಿಸಲಾಗುತ್ತದೆ. ರಾಷ್ಟ್ರಮಟ್ಟದಲ್ಲಿ ರೈತರ ಬೆಳೆಸಾಲ ಮನ್ನಾ ಮಾಡುತ್ತೇವೆ. 30 ದಿನಗಳಲ್ಲಿ ಬೆಳಎ ವಿಮೆ ಪಾವತಿ ಮಾಡಲು ಕ್ರಮ ಕೈಗೊಳ್ಳುತ್ತೇವೆ ಎಂದು ಘೋಷಿಸಿದರು. ನಾವು ಅಧಿಕಾರಕ್ಕೆ ಬಂದರೇ ವರ್ಷಕ್ಕೆ ಮಹಿಳೆಯರಿಗೆ 1 ಲಕ್ಷ ಕೊಡುತ್ತೇವೆ. 24 ಸಾವಿರ ಸೇರಿಸಿ 1 ಲಕ್ಷದ 24 ಸಾವಿರ ರೂ ಕೊಡುತ್ತೇವೆ. ಬಡ ಮಹಿಳೆಯರಿಗೆ ವರ್ಷಕ್ಕೆ 1.24 ಲಕ್ಷ ಕೊಡುತ್ತೇವೆ ಎಂದರು. ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರ ಸಂಬಳ ಹೆಚ್ಚಳ ಮಾಡುತ್ತೇವೆ. ಸರ್ಕಾರಿ, ಅರೆ ಸರ್ಕಾರಿ ನೌಕರರ ಗುತ್ತಿಗೆ…

Read More

ಮಂಡ್ಯ : ಪೂರ್ವದಲ್ಲಿ ಸೂರ್ಯ ಹುಟ್ಟೋದು ಎಷ್ಟು ಸತ್ಯವೋ, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುವುದೂ ಅಷ್ಟೇ ಸತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಚಿತವಾಗಿ ನುಡಿದರು. ಮಂಡ್ಯದಲ್ಲಿ ನಡೆದ ಅಭೂತಪೂರ್ವ ಪ್ರಜಾಧ್ವನಿ-2 ಕಾರ್ಯಕ್ರಮದಲ್ಲಿ ನೆರೆದಿದ್ದ ಜನಸಾಗರವನ್ನು ಉದ್ದೇಶಿಸಿ ಮಾತನಾಡಿದರು. ಕುಮಾರಸ್ವಾಮಿ ಅವರು ರಾಮನಗರ ಜಿಲ್ಲೆ ಶಾಸಕರು. ಅವರು ಅಲ್ಲೇ ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸಬಹುದಿತ್ತು. ಆದರೆ ಸೋಲಿನ ಭಯದಿಂದ ಇಲ್ಲಿಗೆ ಬಂದು NDA ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಇಲ್ಲೂ ಖಚಿತವಾಗಿ ಸೋಲಿಸಲು ಮಂಡ್ಯ ಜಿಲ್ಲೆಯ ಜನತೆ ನಿರ್ಧರಿಸಿದ್ದಾರೆ. ಹೀಗಾಗಿ ಸೋಲು ಕಟ್ಟಿಟ್ಟ ಬುತ್ತಿ ಎಂದು ಸ್ಪಷ್ಟವಾಗಿ ನುಡಿದರು. ನರೇಂದ್ರ ಮೋದಿಯವರ ಅಚ್ಚೆ ದಿನ್ 10 ವರ್ಷ ಕಳೆದರೂ ಭಾರತೀಯರಿಗೆ ಬಂದಿಲ್ಲ. ರಾಜ್ಯದ ಜನತೆಗೆ ಅಚ್ಚೆ ದಿನ್ ಕಾಣಿಸಿಯೇ ಇಲ್ಲ. ಮೋದಿಯವರ ಕಾರಣದಿಂದ ಏರಿಕೆಯಾಗಿದ್ದ ಡೀಸೆಲ್, ಪೆಟ್ರೋಲ್, ಗ್ಯಾಸ್, ರಸಗೊಬ್ಬರ, ಬೇಳೆ-ಕಾಳು, ಅಡುಗೆ ಎಣ್ಣೆ ಸೇರಿ ಎಲ್ಲದರ ಬೆಲೆ ಏರಿಕೆ ನೀತಿಯಿಂದ ಹೈರಾಣಾಗಿದ್ದ ರಾಜ್ಯದ ಜನರ ಬದುಕಿನ‌ ಕಷ್ಟಗಳಿಗೆ ಸ್ಪಂದಿಸುವ ಉದ್ದೇಶದಿಂದ ನಾವು ಐದು…

Read More

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾಗವಹಿಸುವ ಚಿಕ್ಕಬಳ್ಳಾಪುರ ಮತ್ತು ಕೋಲಾರ ಲೋಕಸಭಾ ಕ್ಷೇತ್ರಗಳ ಚುನಾವಣಾ ಪ್ರಚಾರ ಸಭೆಯು ಇದೇ 20ರಂದು ಮಧ್ಯಾಹ್ನ ಚಿಕ್ಕಬಳ್ಳಾಪುರದಲ್ಲಿ ನಡೆಯಲಿದೆ ಎಂದು ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ರಾಜ್ಯ ಸಂಚಾಲಕ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನೀಲ್ ಕುಮಾರ್ ಅವರು ತಿಳಿಸಿದರು. ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಸುಮಾರು 1 ಲಕ್ಷ ಜನರ ನಿರೀಕ್ಷೆ ಇದೆ. ಸಂಜೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆ ಏರ್ಪಡಿಸಲಾಗುತ್ತದೆ. ಬೆಂಗಳೂರು ದಕ್ಷಿಣ, ಬೆಂಗಳೂರು ಮಧ್ಯ, ಬೆಂಗಳೂರು ಉತ್ತರ ಕ್ಷೇತ್ರಗಳು, ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳ ಸಭೆ ಇದಾಗಿರುತ್ತದೆ. 2 ಕಡೆ ವಿಜಯ ಸಂಕಲ್ಪ ಸಮಾವೇಶ ನಡೆಯಲಿದ್ದು, ಸಿದ್ಧತಾ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪ್ರವಾಸವೂ ಕೂಡ ನಿಗದಿಯಾಗಿದೆ. 23, 24ರಂದು ಕರ್ನಾಟಕದಲ್ಲಿ ವಿವಿಧ ಚುನಾವಣಾ ಪ್ರಚಾರ ಸಭೆಗಳಲ್ಲಿ ಅವರು ಭಾಗವಹಿಸುತ್ತಾರೆ. 23ರಂದು ಬೆಳಿಗ್ಗೆ ಯಶವಂತಪುರದಲ್ಲಿ ರೋಡ್…

Read More