Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ: ಮನುಷ್ಯನಿಗೆ ಶತೃ ದುರಾಸೆ. ಮನುಷ್ಯ ದುರಾಸೆಯಿಂದ ತನ್ನತನ ಕಳೆದುಕೊಳ್ಳುತ್ತಿದ್ದಾನೆ. ಆ ಮೂಲಕ ಭ್ರಷ್ಟಾಚಾರದಂತಹ ಜಾಲದಲ್ಲಿ ಸಿಲುಕುತ್ತಿದ್ದಾನೆ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಹೇಳಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಎಂ.ಎಲ್.ಹಳ್ಳಿಯಲ್ಲಿ ಭಾನುವಾರ ರಾಮಕೃಷ್ಣ ವಿವೇಕಾನಂದ ವಸತಿ ವಿದ್ಯಾಲಯ, ರಾಮಕೃಷ್ಣ ಸಮೂಹ ಸಂಸ್ಥೆ ಹಾಗೂ ಯುವ ಸ್ಪೂರ್ತಿ ಅಕಾಡೆಮಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಭ್ರಷ್ಟಮುಕ್ತ ಸಮಾಜ ನಿರ್ಮಾಣಕ್ಕೆ ವಿದ್ಯಾರ್ಥಿ ಜಾಗೃತಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಯಾರಿಗೆ ಹಣ, ಅಧಿಕಾರ, ಸಂಪತ್ತು ಗಳಿಸುವ ಹಪಹಪಿ ಇರುತ್ತದೆಯೋ ಅಂತಹವರಿಂದ ಸಮಾಜದಲ್ಲಿ ಭ್ರಷ್ಟಾಚಾರ ಹೆಚ್ಚುತ್ತದೆ. ಅಡ್ಡದಾರಿಯಿಂದ ಹಣ ಮಾಡುವುದು ದೊಡ್ಡ ಅಪಾಯ. ಇದ್ದದ್ದರಲ್ಲಿಯೆ ಸಂತೋಷ ಪಡುವ, ಅಲ್ಪಸ್ವಲ್ಪ ದಾನ ಮಾಡಿ ತೃಪ್ತಿಪಡುವ, ಮಾನವೀಯ ಮೌಲ್ಯವನ್ನು ಬಿತ್ತುವ ಕೆಲಸವಾಗಬೇಕು. ನಾನು ಲೋಕಾಯುಕ್ತಕ್ಕೆ ಬರುವ ಮೊದಲು ಎಲ್ಲವೂ, ಎಲ್ಲರೂ ಒಳ್ಳೆಯವರು ಎಂದು ಕೊಂಡಿದ್ದೆ. ಆದರೆ ಲೋಕಾಯುಕ್ತಕ್ಕೆ ಬಂದ ಮೇಲೆ ಭ್ರಷ್ಟಾಚಾರದ ಅನಾವರಣವಾಗುತ್ತಾ ಹೋಯಿತು ಎಂದರು. ಹಿಂದೆ ನಾವು ಓದುವ ಪಾಠಗಳಲ್ಲಿ ನೀತಿ ಶಿಕ್ಷಣ ಇತ್ತು.…
ಶಿವಮೊಗ್ಗ : ಸಾಲ ವಸೂಲಾತಿ ಹೆಸರಿನಲ್ಲಿ ರೈತರಿಗೆ ನೀಡುತ್ತಿರುವ ಕಿರುಕುಳವನ್ನು ತಕ್ಷಣ ನಿಲ್ಲಿಸಬೇಕು. ನ್ಯಾಯಾಲಯದ ಮೂಲಕ ಬ್ಯಾಂಕ್ಗಳು, ಮೈಕ್ರೋಫೈನಾನ್ಸ್ಗಳು ರೈತರ ಸಾಲ ವಸೂಲಾತಿಗೆ ಹೊಸ ಅಸ್ತ್ರ ಪ್ರಯೋಗಿಸುತ್ತಿವೆ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಕಿಡಿಕಾರಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಭಾನುವಾರ ಕರೆಯಲಾಗಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಅನೇಕ ಕಡೆಗಳಲ್ಲಿ ಸಾಲ ವಸೂಲಾತಿ ಹೆಸರಿನಲ್ಲಿ ರೈತರ ಆಸ್ತಿ ಹರಜು ಹಾಕುವ ಪ್ರಕ್ರಿಯೆ ನಡೆಯುತ್ತಿದೆ. ತಕ್ಷಣ ರಾಜ್ಯ ಸರ್ಕಾರ ಇದರ ಬಗ್ಗೆ ಗಮನ ಹರಿಸಬೇಕು ಎಂದು ಹೇಳಿದರು. ಬೆಳೆ ಉತ್ತಮವಾಗಿ ಬಂದರೆ ರೈತ ಸಾಲ ತೀರಿಸಲು ಹೆದರುವುದಿಲ್ಲ. ಆದರೆ ಮಳೆ ಕಣ್ಣುಮುಚ್ಚಾಲೆಯಿಂದ ರೈತ ಫಸಲು ಕಳೆದುಕೊಂಡು ಸಂಕಷ್ಟದಲ್ಲಿದ್ದಾನೆ. ಇಂತಹ ಹೊತ್ತಿನಲ್ಲಿ ರೈತ ಸಾಲ ಹೇಗೆ ತೀರಿಸಲು ಸಾಧ್ಯ ಎನ್ನುವ ಕನಿಷ್ಟ ಪರಿಜ್ಞಾನ ಸರ್ಕಾರಕ್ಕೆ ಇರಬೇಕು. ಮುಖ್ಯಮಂತ್ರಿಗಳು ರೈತರ ಮೇಲೆ ದಬ್ಬಾಳಿಕೆ ಮಾಡಿ ಸಾಲ ವಸೂಲಿ ಮಾಡುವಂತೆ ಇಲ್ಲ ಎಂದು ಮೈಕ್ರೋಫೈನಾನ್ಸ್ ಕಂಪನಿಗಳಿಗೆ…
ಆ ಹಾಡಿನ ಮೂಲಕ ರಾತ್ರೋ ರಾತ್ರಿ ಫೇಮಸ್ ಆದಂತ ಆ ಹುಡುಗಿಯ ಇನ್ಸ್ಟಾ ಗ್ರಾಂ ಫಾಲೋವರ್ಸ್ ಸಂಖ್ಯೆಯೂ ಅಷ್ಟೇ ವೇಗವಾಗಿ ಏರಿಕೆಯಾಗಿದೆ. 150 ಮಂದಿ ಫಾಲೋವರ್ಸ್ ಹೊಂದಿದ ಆ ಯುವತಿ, ಇಂದು 40,000 ಫಾಲೋವರ್ಸ್ ಹೊಂದಿದ್ದಾಳೆ. ಆ ಬಗ್ಗೆ ಮುಂದೆ ಓದಿ. ಸೋಷಿಯಲ್ ಮೀಡಿಯಾವೇ ಹಾಗೆ ಜನಸಾಮಾನ್ಯರನ್ನು ರಾತ್ರಿ ಕಳೆದು ಬೆಳಗಾಗುವ ಅಷ್ಟರಲ್ಲಿ ಫೇಮಸ್ ಮಾಡಿ ಬಿಡುತ್ತದೆ. ಕೆಲವರು ರೀಲ್ಸ್ ಮಾಡಿ ಫೇಮಸ್ ಆದ್ರೇ, ಮತ್ತೆ ಕೆಲವರು ತಾರಾವರಿ ವೀಡಿಯೋ ಮಾಡಿ ಪ್ರಸಿದ್ಧಿ ಗಳಿಸಿದ್ದಾರೆ. ಫೇಮಸ್ ಆಗೋದಕ್ಕೆ ಸಾಮಾಜಿಕ ಮಾಧ್ಯಮಗಳು ವೇದಿಕೆಯನ್ನು ಕಲ್ಪಿಸಿವೆ. ಕಳೆದ ಮೂರು ನಾಲ್ಕು ದಿನಗಳ ಹಿಂದೆ ಹೀಗೆ ಫೇಮಸ್ ಆದಂತ ಯುವತಿಯೇ ನಿತ್ಯಾಶ್ರೀ. ಈಕೆ ಹೂವಿನ ಬಾಣದಂತೆ ಹಾಡಿದಂತ ಹಾಡಿನ ಮೂಲಕ ರಾತ್ರಿ ಕಳೆದು ಬೆಳಗಾಗುವ ವೇಳೆಗೆ ಹೂವಿನ ಬಾಣದಂತೆ ಹಾಡಿನ ಮೂಲಕ ಫೇಮಸ್ ಆಗಿ ಬಿಟ್ಟಿದ್ದಾಳೆ. ಸ್ನೇಹಿತರ ಗುಂಪಿನಲ್ಲಿ ತಮಾಷೆಗೆಂದು ಹಾಡಿದ ಹೂವಿನ ಬಾಣದಂತೆ ಹಾಡು, ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ನಿತ್ಯಾಶ್ರೀ ಹಾಡಿದಂತ…
ಬೆಂಗಳೂರು: ಕೇಂದ್ರದಲ್ಲಿ ನಮ್ಮ ಕಾಂಗ್ರೆಸ್ ಸರ್ಕಾರ ಇದ್ದಿದ್ದರೇ ಭಾರತ-ಪಾಕಿಸ್ತಾನ ಪಂದ್ಯಾವಳಿಯನ್ನು ರದ್ದು ಮಾಡುತ್ತಿದ್ದೆವು ಎಂಬುದಾಗಿ ಶಾಸಕ ಪ್ರದೀಪ್ ಈಶ್ವರ್ ಹೇಳಿದ್ದಾರೆ. ನಗರದಲ್ಲಿ ಸದ್ದಿಗಾರೊಂದಿಗೆ ಮಾತನಾಡಿದಂತ ಅವರು, ಭಾರತ-ಪಾಕ್ ಮ್ಯಾಚ್ ರದ್ದು ಮಾಡಬೇಕು. ಯಾವ ಮುಖ ಇಟ್ಕೊಂಡು ಇವರು ಮ್ಯಾಚ್ ನಡೆಸುತ್ತಿದ್ದಾರೆ. ಪಹಲ್ಗಾಮ್ ಘಟನೆಯ ನೋವು ನಮಗೆ ಇನ್ನೂ ಇದೆ ಎಂಬುದಾಗಿ ಕಿಡಿಕಾರಿದರು. ಅಮಿತಾ ಶಾ ಪುತ್ರ ಜೈ ಶಾಗೆ ಬ್ಯುಸಿನೆಸ್ ಮುಖ್ಯ. ಇಲ್ಲಿ ಅಶೋಕ್, ವಿಜಯೇಂದ್ರ, ಯತ್ನಾಳ್ ಅವರೇ ನಿಮಗೆ ಧಮ್ಮು, ತಾಕತ್ತು ಇದ್ರೆ ಕೇಂದ್ರ ಸರ್ಕಾರಕ್ಕೆ ಹೇಳಿ ಭಾರತ-ಪಾಕಿಸ್ತಾನ ಮ್ಯಾಚ್ ನಿಲ್ಲಿಸಿ. ನಾವು ಇನ್ನೂ ಪಹಲ್ಗಾಮ್ ದಾಳಿಯನ್ನು ಮರೆತಿಲ್ಲ. ನಮಗೆ ನೋವಿದೆ. ಅದಕ್ಕೆ ನಾನು ಇವತ್ತಿನ ಪಂದ್ಯಾವಳಿಯನ್ನು ನೋಡೋದಿಲ್ಲ ಎಂಬುದಾಗಿ ತಿಳಿಸಿದರು. https://kannadanewsnow.com/kannada/how-to-get-your-aadhar-card-on-whatsapp-here-is-the-information/ https://kannadanewsnow.com/kannada/kpcc-in-full-swing-for-greater-bengaluru-authority-elections-dk-orders-formation-of-preparatory-committee/
ನಾಗ್ಪುರ: ನಾನು ಬ್ರೋಕರ್ ಅಲ್ಲ. ನನ್ನ ಬುದ್ಧಿವಂತಿಕೆಯಿಂದ ಪ್ರತಿ ತಿಂಗಳು 200 ಕೋಟಿ ರೂಪಾಯಿ ಸಂಪಾದಿಸುವುದಾಗಿ ಕೇಂದ್ರ ರಸ್ತೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. ಹೀಗೆ ಏಕೆ ಹೇಳಿದ್ದು ಅಂತ ಮುಂದೆ ಓದಿ. ಕಳೆದ ಕೆಲವು ತಿಂಗಳುಗಳಲ್ಲಿ, ದೇಶದಲ್ಲಿ ಎಥೆನಾಲ್ ಬಗ್ಗೆ ವಿವಾದವೊಂದು ಕಂಡುಬಂದಿದೆ. ಎಥೆನಾಲ್ ನಿಂದಾಗಿ ತಮ್ಮ ವಾಹನಗಳು ಹಾನಿಗೊಳಗಾಗುತ್ತಿವೆ ಎಂದು ಜನರು ಹೇಳುತ್ತಿದ್ದರು. ಈ ಇಡೀ ವಿಷಯ ಸುಪ್ರೀಂ ಕೋರ್ಟ್ನ ಮೆಟ್ಟಿಲೇರಿತ್ತು. ಇದಕ್ಕೆ ಕೇಂದ್ರ ರಸ್ತೆ ಸಚಿವ ನಿತಿನ್ ಗಡ್ಕರಿ ಅವರೇ ಕಾರಣ. ಆದರೆ, ನ್ಯಾಯಾಲಯ ಅದನ್ನು ತಿರಸ್ಕರಿಸಿತು. ಈ ವಿಷಯದ ಬಗ್ಗೆ ಗಡ್ಕರಿ ಮಾತನಾಡಿ, ಈ ಸಂಪೂರ್ಣ ವಿವಾದ ಸಾಮಾಜಿಕ ಮಾಧ್ಯಮದ ಪರಿಣಾಮವಾಗಿದೆ ಎಂದು ಹೇಳಿದರು. ಅವರು ನನ್ನ ಬುದ್ಧಿವಂತಿಕೆಯಿಂದ ಪ್ರತಿ ತಿಂಗಳು 200 ಕೋಟಿ ರೂ. ಗಳಿಸುತ್ತದೆ. ನನಗೆ ಹಣದ ಕೊರತೆಯಿಲ್ಲ ಮತ್ತು ನಾನು ಕುಗ್ಗುವುದಿಲ್ಲ ಎಂದರು. ತಮ್ಮ ಕೆಲಸ ಮತ್ತು ಪ್ರಯೋಗಗಳು ರೈತರ ಹಿತಕ್ಕಾಗಿಯೇ ಹೊರತು ಹೆಚ್ಚು ಗಳಿಸುವ ಅಗತ್ಯದಿಂದಲ್ಲ ಎಂದು ಅವರು ಹೇಳಿದರು.…
ಅಸ್ಸಾಂ: ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೇ ಪ್ರಕಾರ ಭಾನುವಾರ ಸಂಜೆ ಅಸ್ಸಾಂನಲ್ಲಿ 5.9 ತೀವ್ರತೆಯ ಭೂಕಂಪ ಸಂಭವಿಸಿದೆ. ತಕ್ಷಣಕ್ಕೆ ಯಾವುದೇ ಜೀವಹಾನಿ ಅಥವಾ ಆಸ್ತಿಪಾಸ್ತಿಗೆ ಹಾನಿಯಾದ ವರದಿಯಾಗಿಲ್ಲ ಎಂದು ಅಧಿಕಾರಿಗಳು ಪಿಟಿಐಗೆ ತಿಳಿಸಿದ್ದಾರೆ. https://twitter.com/USGSted/status/1967189308604866913 ಗುವಾಹಟಿಯಲ್ಲಿ ಕಂಪನದ ಅನುಭವವಾಗಿದ್ದು, ಅನೇಕ ನಿವಾಸಿಗಳು ಭಯಭೀತರಾಗಿ ತಮ್ಮ ಮನೆಗಳಿಂದ ಹೊರಗೆ ಓಡಿಬಂದರು. “ಇದು ಎಂದಿಗೂ ನಿಲ್ಲುವುದಿಲ್ಲ ಎಂಬಂತೆ ಭಾಸವಾಯಿತು” ಎಂದು ಗುವಾಹಟಿ ನಿವಾಸಿಯೊಬ್ಬರು HT ಗೆ ತಿಳಿಸಿದರು. “ಒಂದು ನಿಮಿಷ, ನಾನು ಸತ್ತಿದ್ದೇನೆ ಎಂದು ಭಾವಿಸಿದೆ. ಛಾವಣಿ ಕುಸಿಯುತ್ತದೆ ಎಂದು ನಾನು ನಿಜವಾಗಿಯೂ ನಂಬಿದ್ದೆ” ಎಂದು ಮತ್ತೊಬ್ಬ ನಿವಾಸಿ ಹೇಳಿದರು. ಅಸ್ಸಾಂನ ಮಾಜಿ ಮುಖ್ಯಮಂತ್ರಿ ಸರ್ಬಾನಂದ ಸೋನೋವಾಲ್ ಕೂಡ X ಗೆ ಕರೆದರು: “ಅಸ್ಸಾಂನಲ್ಲಿ ದೊಡ್ಡ ಭೂಕಂಪ. ಎಲ್ಲರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ನನ್ನ ಪ್ರಾರ್ಥನೆಗಳು ಎಂದಿದ್ದಾರೆ. https://kannadanewsnow.com/kannada/mother-in-law-harassing-daughter-in-law-to-maintain-an-illegal-relationship-with-the-uncle-fir-registered/
ಅಸ್ಸಾಂ: ಭಾನುವಾರ ಅಸ್ಸಾಂನ ತೇಜ್ಪುರ ಬಳಿ 5.8 ತೀವ್ರತೆಯ ಭೂಕಂಪ ಸಂಭವಿಸಿದ್ದು, ಮೇಘಾಲಯ, ನಾಗಾಲ್ಯಾಂಡ್ ಮತ್ತು ತ್ರಿಪುರ ಸೇರಿದಂತೆ ಹಲವಾರು ಈಶಾನ್ಯ ರಾಜ್ಯಗಳಲ್ಲಿ ಕಂಪನ ಉಂಟಾಗಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಅಸ್ಸಾಂನ ಸೋನಿತ್ಪುರ ಜಿಲ್ಲೆಯ ತೇಜ್ಪುರ ಪಟ್ಟಣದ ಬಳಿ ಭೂಕಂಪದ ಕೇಂದ್ರಬಿಂದು ಇತ್ತು. ಸಾವುನೋವುಗಳು ಅಥವಾ ದೊಡ್ಡ ಹಾನಿಯ ಬಗ್ಗೆ ತಕ್ಷಣದ ವರದಿಗಳಿಲ್ಲ. https://twitter.com/RT_India_news/status/1967191487223074919 ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೇ ಪ್ರಕಾರ ಭಾನುವಾರ ಸಂಜೆ ಅಸ್ಸಾಂನಲ್ಲಿ 5.8 ತೀವ್ರತೆಯ ಭೂಕಂಪ ಸಂಭವಿಸಿದೆ. ತಕ್ಷಣಕ್ಕೆ ಯಾವುದೇ ಜೀವಹಾನಿ ಅಥವಾ ಆಸ್ತಿಪಾಸ್ತಿಗೆ ಹಾನಿಯಾದ ವರದಿಯಾಗಿಲ್ಲ ಎಂದು ಅಧಿಕಾರಿಗಳು ಪಿಟಿಐಗೆ ತಿಳಿಸಿದ್ದಾರೆ. ಗುವಾಹಟಿಯಲ್ಲಿ ಕಂಪನದ ಅನುಭವವಾಗಿದ್ದು, ಅನೇಕ ನಿವಾಸಿಗಳು ಭಯಭೀತರಾಗಿ ತಮ್ಮ ಮನೆಗಳಿಂದ ಹೊರಗೆ ಓಡಿಬಂದರು. “ಇದು ಎಂದಿಗೂ ನಿಲ್ಲುವುದಿಲ್ಲ ಎಂಬಂತೆ ಭಾಸವಾಯಿತು” ಎಂದು ಗುವಾಹಟಿ ನಿವಾಸಿಯೊಬ್ಬರು HT ಗೆ ತಿಳಿಸಿದರು. “ಒಂದು ನಿಮಿಷ, ನಾನು ಸತ್ತಿದ್ದೇನೆ ಎಂದು ಭಾವಿಸಿದೆ. ಛಾವಣಿ ಕುಸಿಯುತ್ತದೆ ಎಂದು ನಾನು ನಿಜವಾಗಿಯೂ ನಂಬಿದ್ದೆ” ಎಂದು ಮತ್ತೊಬ್ಬ ನಿವಾಸಿ ಹೇಳಿದರು.
ಬೆಂಗಳೂರು: ಮಾವನ ಜೊತೆಗೆ ಅಕ್ರಮ ಸಂಬಂಧ ಹೊಂದುವಂತೆ ಸೊಸೆಗೆ ಕಿರುಕುಳ ನೀಡಲಾಗಿದೆ. ಈ ಸಂಬಂಧ ಸೊಸೆ ನೀಡಿದಂತ ದೂರಿನ ಹಿನ್ನಲೆಯಲ್ಲಿ ಅತ್ತೆ-ಮಾವರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಬೆಂಗಳೂರಿ ಬಿಟಿಎಂ ಲೇಔಟ್ ನಿವಾಸಿ ಯಾಸೀನ್ ಪಾಷಾ ಮತ್ತು ಪತ್ನಿ ಶಾಸೀಯಾರಿಂದ ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ ಸೆಕ್ಷನ್ 351(2), 352,2(5) ರಡಿ ಪ್ರಕರಣ ದಾಖಲಾಗಿದೆ. ಯಾಸೀನ್ ಪಾಷಾ ಹಾಗೂ ಶಾಸೀಯಾ ಜೊತೆಗೆ ಕಳೆದ ಮೇ ತಿಂಗಳಿನಲ್ಲಿ ನಿಶ್ಚಿತಾರ್ಥವಾಗಿತ್ತು. ಆದರೇ ನಂತ್ರ ದಿನಗಳಲ್ಲಿ ಮದುವೆ ಮಾಡಲು ಹುಡುಗನ ಪೋಷಕರು ನಿರಾಕಸಿದ್ದರು. ಯಾಸಿನ್ ನಿಶ್ಚಿತಾರ್ಥದ ಬಳಿಕ ಪೋಷಕರ ವಿರೋಧದ ನಡುವೆ ಮೈಸೂರಲ್ಲಿ ಮದುವೆಯಾಗಿ, ಮನೆಗೆ ಬಂದಿದ್ದರು. ಇದರಿಂದ ಕೋಪಗೊಂಡಿದ್ದಂತ ಅತ್ತೆ ಹುಮೇದಾ ಹಾಗೂ ಮಲತಂದೆ ಅಕ್ಬರ್ ಸೊಸೆಗೆ ಕಿರುಕುಳ ನೀಡುತ್ತಿದ್ದರು. ಇದಷ್ಟೇ ಅಲ್ಲದೇ ಮಾವನ ಜೊತೆಗೆ ಅನೈತಿಕ ಸಂಬಂಧ ಹೊಂದುವಂತೆಯೂ ಕಿರುಕುಳ ನೀಡುತ್ತಿದ್ದರು. ಇದಕ್ಕೆ ಒಪ್ಪದಿದ್ದಾಗ ಸೊಸೆ ಶಾಸೀಯಾನನ್ನು ಆತ್ಮಹತ್ಯೆ ಮಾಡಿಕೊಳ್ಳುವಂತೆಯೂ ಬೆದರಿಕೆ ಹಾಕಿದ್ದರು ಎಂಬುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ದೂರು ಆಧರಿಸಿ ಎಫ್ಐಆರ್ ದಾಖಲಾಗಿದೆ.…
ಅಸ್ಸಾಂ: ಭಾನುವಾರ ಅಸ್ಸಾಂನ ದರ್ರಾಂಗ್ನಲ್ಲಿ ನಡೆದ ರ್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ಪಕ್ಷದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು. ಅದು ರಾಷ್ಟ್ರವಿರೋಧಿ ಶಕ್ತಿಗಳ ಜೊತೆ ಸೇರುತ್ತಿದೆ ಮತ್ತು ಪಾಕಿಸ್ತಾನದಿಂದ ಪೋಷಿಸಲ್ಪಟ್ಟ ಭಯೋತ್ಪಾದಕರನ್ನು ಬೆಂಬಲಿಸುತ್ತಿದೆ ಎಂದು ಆರೋಪಿಸಿದರು. ನಮ್ಮ ಧೈರ್ಯಶಾಲಿ ಸೈನಿಕರೊಂದಿಗೆ ನಿಲ್ಲುವ ಬದಲು, ಕಾಂಗ್ರೆಸ್ ಒಳನುಸುಳುವವರು ಮತ್ತು ಭಾರತದ ಏಕತೆಗೆ ಬೆದರಿಕೆ ಹಾಕುವವರನ್ನು ಬೆಂಬಲಿಸಲು ಆಯ್ಕೆ ಮಾಡಿದೆ. ಈ ಪಕ್ಷವು ಪದೇ ಪದೇ ರಾಷ್ಟ್ರವಿರೋಧಿ ಶಕ್ತಿಗಳಿಗೆ ರಕ್ಷಣೆ ನೀಡಿದೆ ಎಂದು ಪ್ರಧಾನಿ ಮೋದಿ ಆರೋಪಿಸಿದರು. ಆಪರೇಷನ್ ಸಿಂಧೂರ್ ಯಶಸ್ಸು ಆಪರೇಷನ್ ಸಿಂಧೂರ್ ಮುಗಿದ ನಂತರ ಪ್ರಧಾನಿಯವರ ಮೊದಲ ಭೇಟಿ ಇದಾಗಿದ್ದು, ಇದನ್ನು ಅವರು “ದೊಡ್ಡ ಯಶಸ್ಸು” ಎಂದು ಬಣ್ಣಿಸಿದರು, ಇದನ್ನು ಮಾ ಕಾಮಾಕ್ಯ ಮತ್ತು ಶ್ರೀಕೃಷ್ಣನಿಗೆ ಅರ್ಪಿಸಿದರು. “ಆಪರೇಷನ್ ಸಿಂಧೂರ್ ನಂತರ ನಿನ್ನೆ ಅಸ್ಸಾಂಗೆ ನನ್ನ ಮೊದಲ ಭೇಟಿಯಾಗಿತ್ತು. ಮಾ ಕಾಮಾಕ್ಯಳ ಆಶೀರ್ವಾದದೊಂದಿಗೆ, ಕಾರ್ಯಾಚರಣೆ ಯಶಸ್ವಿಯಾಯಿತು. ಇಂದು, ಈ ಪವಿತ್ರ ಭೂಮಿಯಲ್ಲಿ ದೈವಿಕ ಸಂಪರ್ಕವಿದೆ ಎಂದು ನಾನು ಭಾವಿಸುತ್ತೇನೆ” ಎಂದು ಅವರು…
ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅಂದರೆ ಕೇವಲ ಒಬ್ಬ ವ್ಯಕ್ತಿಯಲ್ಲ. ಒಂದು ಸಿದ್ದಾಂತ. ಬೆವರಿನ ಸಂಸ್ಕೃತಿಗೆ ಮೌಲ್ಯ ಮತ್ತು ಘನತೆ ತಂದು ಕೊಡುವ ಸಿದ್ಧಾಂತ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಜಿಲ್ಲಾ ಶಾಖೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಪತ್ರಕರ್ತನಾಗಿ ಎರಡು ಕಣ್ಣುಗಳಿಂದ ಸಮಾಜವನ್ನು ನೋಡುತ್ತಿದ್ದ ನನಗೆ, ಸಮಾಜದ ಲಕ್ಷಾಂತರ ಕಣ್ಣುಗಳು ನನ್ನೊಬ್ಬನನ್ನು ಗಮನಿಸುತ್ತಿರುತ್ತದೆ ಎನ್ನುವ ಸಾಮಾಜಿಕ ಎಚ್ಚರವನ್ನು ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೆರಳಲ್ಲಿ ಕಲಿತುಕೊಂಡೆ. ಒಂದು ಬಲಿಷ್ಠವಾದ ವ್ಯವಸ್ಥೆ ಏಕಲವ್ಯರ ಬೆರಳುಗಳನ್ನು, ಅವಕಾಶ ಮತ್ತು ಪ್ರತಿಭೆಗಳನ್ನು ಹೇಗೆ ಕಿತ್ತುಕೊಳ್ಳುತ್ತದೆ ಎನ್ನುವುದನ್ನು ನಾನು ಪತ್ರಕರ್ತನಾಗಿ ಕಲಿತಿದ್ದೆ. ಆದರೆ, ಏಕಲವ್ಯರ ಬೆರಳುಗಳಿಗೆ ಶಕ್ತಿ ತುಂಬಿ ಬೆವರಿನ ಸಂಸ್ಕೃತಿಗೆ ಘನತೆ ತರುವುದು ಹೇಗೆ ಎನ್ನುವುದನ್ನು ನಾನು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಕಲಿತೆ. ನಾನು ಮಾನ್ಯ ಮುಖ್ಯಮಂತ್ರಿಗಳ ನೆರಳಿಗೆ ಬಂದು ಒಂದು ಡಜನ್ ವರ್ಷಗಳೇ ಕಳೆದವು. ಈ ಅವಧಿಯಲ್ಲಿ ನಾನು ಗ್ರಹಿಸಿದ್ದು ಏನೆಂದರೆ,…







