Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಹೈಕೋರ್ಟ್ ನಿಂದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜಾಮೀನು ಸಿಕ್ಕ ನಂತ್ರ, ಜಾಮೀನು ಅರ್ಜಿಗೆ ಸಹಿ ಮಾಡುವುದು ಸೇರಿದಂತೆ ವಿವಿಧ ಕೆಲಸಗಳ ನಿಮಿತ್ತ ಬಿಜಿಎಸ್ ಆಸ್ಪತ್ರೆಯಿಂದ ವೈದ್ಯರ ಅನುಮತಿ ಪಡೆದು ನಟ ದರ್ಶನ್ ಹೊರ ಬಂದಿದ್ದರು. ಇದೀಗ ಜಾಮೀನಿಗೆ ಸಹಿ ಮಾಡಿದ ಬಳಿಕ, ಬೆಂಗಳೂರಿನ ಕೆಂಗೇರಿ ಬಳಿಯ ಬಿಜಿಎಸ್ ಆಸ್ಪತ್ರೆಗೆ ವಾಪಾಸ್ ಆಗಿದ್ದಾರೆ. ನಟ ದರ್ಶನ್ ಅವರಿಗೆ ಹೈಕೋರ್ಟ್ ನಿಂದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜಾಮೀನು ದೊರೆತಿತ್ತು. ಮಧ್ಯಂತರ ಜಾಮೀನಿನ ಬಳಿಕ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿತ್ತು. ಹೀಗಾಗಿ ಬಿಜಿಎಸ್ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಗೆ ದಾಖಲಾಗಿದ್ದಂತ ಅವರು, ಇಂದು ಸೆಷನ್ಸ್ ಕೋರ್ಟ್ ನ್ಯಾಯಾಧೀಶರ ಮುಂದೆ ಹಾಜರಾಗಿದ್ದರು. ಅಲ್ಲಿ ಜಾಮೀನು ಅರ್ಜಿಗೆ ಸಹಿ ಮಾಡಿದ್ದರು. ಈ ಬಳಿಕ ಬಿಜಿಎಸ್ ಆಸ್ಪತ್ರೆಗೆ ನಟ ದರ್ಶನ್ ವಾಪಾಸ್ ಆಗಿದ್ದಾರೆ. https://kannadanewsnow.com/kannada/bengaluru-another-man-commits-suicide-after-being-harassed-by-wife/ https://kannadanewsnow.com/kannada/alert-beware-of-the-public-if-you-play-this-game-on-your-mobile-you-will-run-out-of-money-in-your-account/
ಬೆಂಗಳೂರು: ನಗರದಲ್ಲಿ ದಿನೇ ದಿನೇ ಪತ್ನಿಯ ಕಾಟಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಟೆಕ್ಕಿ ಅತುಲ್ ಸುಭಾಷ್ ಬಳಿಕ, ಈಗ ವ್ಯಕ್ತಿಯೊಬ್ಬ ತನ್ನ ಹೆಂಡತಿಯ ಕಾಟಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಉತ್ತರ ತಾಲ್ಲೂಕಿ ಹೆಸರುಘಟ್ಟ ರಸ್ತೆಯಲ್ಲಿರುವಂತ ಸಿಲುವೆಪುರದಲ್ಲಿ ಪತ್ನಿಯ ಕಿರುಕುಳ ಹಾಗೂ ಆಕೆಯ ಅಕ್ರಮ ಸಂಬಂಧದಿಂದ ಬೇಸತ್ತು ಬಾಲರಾಜ್(41) ಎಂಬಾತ ಆತ್ಮಹತ್ಯೆಗೆ ಶರಣಾಗಿದ್ದಾನೆ. 18 ವರ್ಷದ ಹಿಂದೆ ಬಾಲರಾಜ್ ಅವರು ಪತ್ನಿ ಕುಮಾರಿಯನ್ನು ಎರಡನೇ ಮದುವೆಯಾಗಿದ್ದರು. ಈ ಬಳಿಕ ಆಕೆ ಕಿರುಕುಳ ನೀಡುತ್ತಿದ್ದರು. ಜೊತೆಗೆ ಅಕ್ರಮ ಸಂಬಂಧ ಕೂಡ ಹೊಂದಿದ್ದರು ಎನ್ನಲಾಗಿದೆ. ಈ ವಿಚಾರಕ್ಕೆ ಗಂಡ-ಹೆಂಡತಿಯರ ನಡುವೆ ಗಲಾಟೆ ಕೂಡ ಆಗಿತ್ತು. ಆಗ ಗಂಡನ ಮನೆಯನ್ನು ತೊರೆದಿದ್ದಂತ ಕುಮಾರಿ, ತವರು ಮನೆ ಸೇರಿದ್ದಳು. ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ಬಾಲರಾಜ್ ಪತ್ನಿಯ ಕಿರುಕುಳ, ಆಕೆಯ ಅಕ್ರಮ ಸಂಬಂಧದ ಬಗ್ಗೆ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/mandya-forest-officials-seize-ambergris-worth-crores-of-rupees/ https://kannadanewsnow.com/kannada/alert-beware-of-the-public-if-you-play-this-game-on-your-mobile-you-will-run-out-of-money-in-your-account/
ಮಂಡ್ಯ: ನಾಗಮಂಗಲ ಪಟ್ಟಣದಲ್ಲಿ ದುಬಾರಿ ಬೆಲೆಯ ತಿಮಿಂಗಿಲ ವಾಂತಿಯನ್ನು ಅರಣ್ಯ ಸಂಚಾರಿ ದಳದ ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಸುಮಾರು 3 ಕೆಜಿ ತೂಕದ ತಿಮ್ಮಿಂಗಲ ವಾಂತಿ ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಾಗಮಂಗಲ ಪಟ್ಟಣದ ಮೇಗಲಕೇರಿ ನಿವಾಸಿ ವಿನಯ್ ಕುಮಾರ್ ಎಂಬಾತನೇ ಅಕ್ರಮವಾಗಿ ತಿಮಿಂಗಿಲ ವಾಂತಿಯನ್ನು ಶೇಖರಿಸಿದ್ದನು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯ ಸಂಚಾರಿ ದಳದ ಅಧಿಕಾರಿಗಳು, ಆರೋಪಿಯನ್ನು ವಶಕ್ಕೆ ಪಡೆದು ಮತ್ತಷ್ಟು ತನಿಖೆ ನಡೆಸುತ್ತಿದ್ದಾರೆ. ವರದಿ : ಗಿರೀಶ್ ರಾಜ್, ಮಂಡ್ಯ https://kannadanewsnow.com/kannada/how-is-it-a-crime-to-chant-jai-shri-ram-inside-a-mosque-supreme-court/ https://kannadanewsnow.com/kannada/alert-beware-of-the-public-if-you-play-this-game-on-your-mobile-you-will-run-out-of-money-in-your-account/
ಹೊಸನಗರ: ಹಳೇ ದ್ವೇಷ ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಸಹಿಸದೇ ನಿಟ್ಟೂರು ಗ್ರಾಮ ಪಂಚಾಯ್ತಿ ಸದಸ್ಯ ನಾಗೋಡಿ ವಿಶ್ವನಾಥ್ ಮೇಲೆ ಹಡಹಗಲೇ ಮಾರಣಾಂತಿಕ ಹಲ್ಲೆಯನ್ನು ದೇವರಾಜ್ ಎಂಬುವರು ನಡೆಸಿದ್ದರು. ಈ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಆರೋಪಿ ದೇವರಾಜ್ ಬಂಧಿಸಬೇಕು. ಈತನ ವಿರುದ್ಧ ಗೂಂಡಾ ಕಾಯ್ದೆ ಜಾರಿಗೊಳಿಸಬೇಕು ಎಂಬುದಾಗಿ ನಗರ ಠಾಣೆಯ ಪೊಲೀಸರಿಗೆ ಸಾರ್ವಜನಿಕರು ಮನವಿ ಮಾಡಿದ್ದಾರೆ. ಬಿಜೆಪಿ ಕಾರ್ಯಕರ್ತ ದೇವರಾಜ್ ಎಂಬಾತ ಹೊಸನಗರ ತಾಲ್ಲೂಕಿನ ನಿಟ್ಟೂರಿನ ಗ್ರಾಮ ಪಂಚಾಯ್ತಿ ಸದಸ್ಯ ನಾಗೋಡಿ ವಿಶ್ವನಾಥ್ ಎಂಬುವರ ಮೇಲೆ ಹಲ್ಲೆ ನಡೆಸಿದ್ದರು. ಅಲ್ಲದೇ ಮರ್ಮಾಂಗ ಹಿಸುಕಿ ಕೊಲೆಗೂ ಯತ್ನಿಸಿದ್ದರು. ಈ ಸಂಬಂಧ ನಾಗೋಡಿ ವಿಶ್ವನಾಥ್ ನೀಡಿದಂತ ದೂರಿನ ಹಿನ್ನಲೆಯಲ್ಲಿ ಹೊಸನಗರ ಪೊಲೀಸ್ ಠಾಣೆಯಲ್ಲಿ ದೇವರಾಜ್ ವಿರುದ್ಧ ಕೇಸ್ ದಾಖಲಾಗಿದೆ. ನಿಟ್ಟೂರು ಗ್ರಾಮ ಪಂಚಾಯ್ತಿ ಸದಸ್ಯ ನಾಗೋಡಿ ವಿಶ್ವನಾಥ್ ಮೇಲೆ ದೇವರಾಜ್ ಹಲ್ಲೆ ಮಾಡಿದ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇಂತಗ ಗೂಂಡಾಗಿರಿ ವರ್ತನೆ ತೋರಿದಂತ ದೇವರಾಜ್ ವಿರುದ್ಧ ಸಾರ್ವಜನಿಕರು ಆಕ್ರೋಶವನ್ನು ಹೊರ ಹಾಕಿದ್ದಾರೆ.…
ನವದೆಹಲಿ: ಮಸೀದಿ ಆವರಣದಲ್ಲಿ ‘ಜೈ ಶ್ರೀರಾಮ್’ ಘೋಷಣೆ ಕೂಗಿದ್ದಕ್ಕಾಗಿ ಇಬ್ಬರು ವ್ಯಕ್ತಿಗಳ ವಿರುದ್ಧ ದಾಖಲಾದ ಎಫ್ಐಆರ್ ಅನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ 2024 ರ ಸೆಪ್ಟೆಂಬರ್ 13 ರ ಆದೇಶದ ನಿಖರತೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ ಸೋಮವಾರ ಒಪ್ಪಿಕೊಂಡಿದೆ. ನ್ಯಾಯಮೂರ್ತಿಗಳಾದ ಪಂಕಜ್ ಮಿಥಾಲ್ ಮತ್ತು ಸಂದೀಪ್ ಮೆಹ್ತಾ ಅವರ ನ್ಯಾಯಪೀಠವು ದೂರುದಾರ ಹೇದರ್ ಅಲಿ ಸಿಎಂ ಸಲ್ಲಿಸಿದ ಅರ್ಜಿಯ ಬಗ್ಗೆ ನ್ಯಾಯಾಲಯವು ನೋಟಿಸ್ ನೀಡುವುದಿಲ್ಲ ಎಂದು ಹೇಳಿದೆ. ಅರ್ಜಿಯನ್ನು ರಾಜ್ಯ ವಕೀಲರಿಗೆ ಸಲ್ಲಿಸುವಂತೆ ಹಿರಿಯ ವಕೀಲ ದೇವದತ್ ಕಾಮತ್ ಅವರಿಗೆ ನ್ಯಾಯಾಲಯವು ಸೂಚಿಸಿತು, ಏಕೆಂದರೆ ಈ ವಿಷಯವನ್ನು 2025 ರ ಜನವರಿಯಲ್ಲಿ ವಿಚಾರಣೆಗೆ ನಿಗದಿಪಡಿಸಲಾಯಿತು. ಎಫ್ಐಆರ್ ದಾಖಲಾದ 20 ದಿನಗಳಲ್ಲಿ ಹೈಕೋರ್ಟ್ ತನಿಖೆಗೆ ಮಧ್ಯಸ್ಥಿಕೆ ವಹಿಸಿದೆ ಎಂದು ಕಾಮತ್ ಹೇಳಿದರು. “ಆರೋಪಿಗಳು ಧಾರ್ಮಿಕ ಪ್ರಾರ್ಥನೆ ಮಾಡುತ್ತಿದ್ದರು., ಅದು ಅಪರಾಧವೇ? ಅಪರಾಧಗಳ ಅಂಶಗಳನ್ನು ಮುಟ್ಟುವುದಿಲ್ಲ ಎಂದು ಹೈಕೋರ್ಟ್ ಹೇಳುತ್ತದೆ ಎಂದು ನ್ಯಾಯಪೀಠ ಹೇಳಿದೆ. ಇದು ಐಪಿಸಿಯ ಸೆಕ್ಷನ್ 153 ಎ…
ಚಿತ್ರದುರ್ಗ : ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ನಾಡೋಜ ದಿ.ಎಸ್.ನಿಜಲಿಂಗಪ್ಪ ಅವರ ನಿವಾಸದ ಕೀಯನ್ನು ಸೋಮವಾರ ನಿಜಲಿಂಗಪ್ಪ ಸ್ಮಾರಕ ಟ್ರಸ್ಟಿ ಕೆಇಬಿ ಷಣ್ಮುಖಪ್ಪ ಅವರು ಜಿಲ್ಲಾಡಳಿತಕ್ಕೆ ಹಸ್ತಾಂತರಿಸಿದರು. ಚಿತ್ರದುರ್ಗ ನಗರದ ವಿ.ಪಿ.ಬಡಾವಣೆಯಲ್ಲಿರುವ ದಿ.ಎಸ್.ನಿಜಲಿಂಗಪನವರು ವಾಸವಿದ್ದ ಮನೆಯನ್ನು ಸರ್ಕಾರ ವತಿಯಿಂದ ಖರೀದಿ ಮಾಡಲಾಗಿದ್ದು, ಈ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಾಗೂ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅವರು ನಿಜಲಿಂಗಪ್ಪ ಅವರ ನಿವಾಸದ ಕಟ್ಟಡದ ಸುಸ್ಥಿತಿಯನ್ನು ಪರಿಶೀಲನೆ ನಡೆಸಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಮಾಜಿ ಮುಖ್ಯಮಂತ್ರಿಗಳಾದ ದಿ. ಎಸ್.ನಿಜಲಿಂಗಪ್ಪ ಅವರ ವಾಸವಿದ್ದ ಮನೆಯನ್ನು ಸರ್ಕಾರದಿಂದ ಖರೀದಿ ಮಾಡಿ ಸಂರಕ್ಷಣೆ ಮಾಡಿ, ಸ್ಮಾರಕ ಮಾಡಬೇಕು ಎಂಬ ಬೇಡಿಕೆ ಹಿನ್ನಲೆಯಲ್ಲಿ ಸರ್ಕಾರದ ನಿರ್ದೇಶನದಂತೆ ಕಳೆದ ವಾರ ಸರ್ಕಾರ ವತಿಯಿಂದ ಖರೀದಿ ಮಾಡಲಾಗಿದ್ದು, ಪುನರುಜ್ಜೀವನ ಮಾಡುವ ಉದ್ದೇಶದಿಂದ ಎಸ್.ನಿಜಲಿಂಗಪ್ಪ ಅವರ ಮನೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಲಾಗುತ್ತಿದೆ ಎಂದು ಹೇಳಿದರು. ನಿಜಲಿಂಗಪ್ಪ ಅವರ ಮನೆಯನ್ನು ಸ್ಮಾರಕವನ್ನಾಗಿ ಮಾಡುವ ನಿಟ್ಟಿನಲ್ಲಿ ಇಂಜಿನಿಯರ್ಗಳೊಂದಿಗೆ ಚರ್ಚಿಸಿ, ಮೊಟ್ಟ ಮೊದಲನೇಯದಾಗಿ ಸಿವಿಲ್ ಕಾಮಗಾರಿಗಳನ್ನು ದುರಸ್ಥಿ…
ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಹೆಚ್.ಎಸ್.ಆರ್. ವಿಭಾಗದ ಆರ್.ಬಿ.ಐ ವಿ.ವಿ.ಕೇಂದ್ರ, ನಾಗನಾಥಪುರ ಸ್ವೀಕರಣಾ ಕೇಂದ್ರ, ಶೋಭಾ ಫಾರೆಸ್ಟ್ ವ್ಯೂ ಉಪಕೇಂದ್ರಗಳಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ 17.12.2024 (ಮಂಗಳವಾರ) ಮತ್ತು 18.12.2024 (ಬುಧವಾರ) ರಂದು ಬೆಳಗ್ಗೆ 10:00 ರಿಂದ ಮಧ್ಯಾಹ್ನ 03:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. “ಆರ್.ಬಿ.ಐ ಲೇಔಟ್, ಕೊತ್ತನೂರು, ಜೆ.ಪಿ.ನಗರ 5ನೇ ಹಂತ, ಶ್ರೇಯಸ್ ಕಾಲೋನಿ, ಗೌರವ್ ನಗರ ಅಪಾರ್ಟ್ ಮೆಂಟ್, ಸಿ.ಕೆ.ನಗರ-ಹೊಸರೋಡ್, ಸಿಂಗಸಂದ್ರ, ಹೊಂಗಸಂದ್ರ, .ಇ.ಸಿ.ಎಸ್. ಲೇಔಟ್, ಎ& ಬಿ ಬ್ಲಾಕ್, ಹುಸ್ಕೂರು, ನಾಗನಾಥಪುರ, ಮೈಕೋ, ಬಾಷ್, ಕೊಡ್ಲೂ, ಮುನೇಶ್ವರ ಲೇಔಟ್, ದೊಡ್ಡನಾಗಮಂಗಲ, ಪರಪ್ಪನ ಅಗ್ರಹಾರ, ಚಿಕ್ಕತೋಗೂರು, ಬೆಳ್ಳಂದೂರು-2, ಮಹಾವೀರ ರಾಂಚಸ್ ಅಪಾರ್ಟ್ ಮೆಂಟ್ ಕ್ಲಾಸಿಕ್ ಲ್ಯಾಂಡ್ ಮಾರ್ಕ್, ಶೋಭಾ ಫಾರೆಸ್ಟ್ ಅಪಾರ್ಟ್ ಮೆಂಟ್, ತಲಘಟ್ಟಪುರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ. ವಿದ್ಯುತ್ ಗ್ರಾಹಕರು ಸಹಕರಿಸುವಂತೆ ಬೆಸ್ಕಾಂ ಮನವಿ ಮಾಡಿದೆ.. https://kannadanewsnow.com/kannada/alert-beware-of-the-public-if-you-play-this-game-on-your-mobile-you-will-run-out-of-money-in-your-account/ https://kannadanewsnow.com/kannada/46-arrested-in-decoy-operation-against-foeticide-in-karnataka/
ಬೆಳಗಾವಿ ಸುವರ್ಣಸೌಧ: ರಾಜ್ಯದಲ್ಲಿ 2023-24 ರಿಂದ ಇಲ್ಲಿಯವರೆಗೆ ಭ್ರೂಣಹತ್ಯೆ ಸಂಬಂಧಿಸಿದಂತೆ 8 ಪ್ರಕರಣ ದಾಖಲಿಸಿ 46 ಜನರನ್ನು ಬಂಧಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇದೇ ವೇಳೆ ಸದನಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದರು. ರಾಜ್ಯದಲ್ಲಿ ಸ್ಕ್ಯಾನಿಂಗ್ ಸೆಂಟರ್ ಮತ್ತು ಆಸ್ಪತ್ರೆಗಳ ಮೇಲೆ ತಪಾಸಣೆಗಳನ್ನು ಜಾಸ್ತಿ ಮಾಡಿರುವುದರಿಂದ ಹೆಚ್ಚಿನ ಸಂಖ್ಯೆಯ ಭ್ರೂಣ ಹತ್ಯೆ ಪ್ರಕರಣಗಳು ಕಂಡುಹಿಡಿಯಲಾಗಿದೆ. ಅಲ್ಲದೇ ಡಿಕಾಯ್ ಆಪರೇಷನ್ಗಳ ಯಶಸ್ವಿ ಕಾರ್ಯಾಚರಣೆಗಳನ್ನ ನಡೆಸಿ ಭ್ರೂಣೆ ಹತ್ಯೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು. ರಾಜ್ಯದಲ್ಲಿ ಭ್ರೂಣ ಹತ್ಯೆ ತಡೆಯಲು ಸರ್ಕಾರವು ಪಿ.ಸಿ&ಪಿ.ಎನ್.ಡಿ.ಟಿ. ಕಾಯ್ದೆಯಡಿ ಬರುವ ಎಲ್ಲಾ ಶಾಸನಬದ್ದ ಸಮಿತಿಗಳನ್ನು ರಾಜ್ಯ ಮತ್ತು ಜಿಲ್ಲೆಗಳಲ್ಲಿ ರಚನೆ ಮಾಡಲಾಗಿದೆ. 2018 ರಿಂದ ರಾಜ್ಯದಲ್ಲಿ ‘ಬಾಲಿಕಾ’ ಆನ್ಲೈನ್ ಸಾಪ್ಟ್ವೇರ್ ಮುಖಾಂತರ ಎಲ್ಲಾ ಸ್ಕ್ಯಾನಿಂಗ್ ಸೆಂಟರ್ಗಳನ್ನು ಕಡ್ಡಾಯವಾಗಿ ನೋಂದಣಿ ಮತ್ತು ನವೀಕರಣ ನಡೆಸಲಾಗುತ್ತಿದೆ. ರಾಜ್ಯ ಮಟ್ಟದಲ್ಲಿ ಶೇ.100 ರಷ್ಟು ಗರ್ಭಿಣಿಯರ ನೊಂದಣಿ ಪ್ರಕ್ರಿಯೆಯು ಚಾಲ್ತಿಯಲ್ಲಿದ್ದು, ಗ್ರಾಮ ಮಟ್ಟದಲ್ಲಿ ಜನನ ಸಮಯದ ಲಿಂಗಾನುಪಾತದ ದತ್ತಾಂಶಗಳನ್ನು…
ಬೆಂಗಳೂರು: ರಾಜ್ಯದಲ್ಲಿ ಸಿಸೇರಿಯನ್ ಹೆರಿಗೆಗಳನ್ನ ನಿಯಂತ್ರಿಸುವ ನಿಟ್ಟಿನಲ್ಲಿ ಮುಂದಿನ ತಿಂಗಳು ನೂತನ ಕಾರ್ಯಕ್ರಮ ಜಾರಿಗೊಳೊಸುತ್ತಿರುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಳಗಾವಿಯ ಸುವರ್ಣಸೌಧದಲ್ಲಿ ಇಂದು ವಿಧಾನ ಪರಿಷತ್ ಕಲಾಪದಲ್ಲಿ ಪರಿಷತ್ ಸದಸ್ಯ ಜಗದೇವ ಗುತ್ತೇದಾರ ಅವರ ಪ್ರಶ್ನೆಗೆ ಉತ್ತರಿಸುವ ವೇಳೆ ಸಚಿವರು ಈ ವಿಷಯ ತಿಳಿಸಿದರು. ರಾಜ್ಯದಲ್ಲಿ ಪ್ರತಿ ವರ್ಷ ಸಿಸೇರಿಯನ್ ಹೆರಿಗೆ ಪ್ರಮಾಣ ಹೆಚ್ಚಾಗುತ್ತಿದೆ. 2021-2022 ರಲ್ಲಿ 35% ಇದ್ದ ಸಿಸೇರಿಯನ್ ಪ್ರಮಾಣ, 2022-23 ಕ್ಕೆ 38%ಕ್ಕೆ ಏರಿಕೆಯಾಗಿತ್ತು. ಪ್ರಸ್ತುತ ರಾಜ್ಯದಲ್ಲಿ ಸಿಸೇರಿಯನ್ ಹೆರಿಗೆ ಪ್ರಮಾಣ 46% ಇದೆ. ವಿಶೇಷವಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಶೇ 61 ರಷ್ಟು ಸಿಸೇರಿಯನ್ ಗಳನ್ನ ಮಾಡಲಾಗುತ್ತಿದೆ. ಸಿಸೇರಿಯನ್ ಗಳಿಂದ ಹೆಚ್ಚು ಆದಾಯ ಬರುತ್ತದೆ ಮತ್ತು ಸುಲಭವಾಗಿ ಸಿಸೇರಿಯನ್ ಮಾಡಬಹುದು ಎಂಬ ಕಾರಣಕ್ಕೆ ಖಾಸಗಿ ಆಸ್ಪತ್ರೆಗಳು ಸಿಸೇರಿಯನ್ ಹೆರಿಗೆಗಳನ್ನೇ ಹೆಚ್ಚು ಮಾಡುತ್ತಿದ್ದಾರೆ ಎಂದರು. ತಾಯಿ ಮತ್ತು ಮಗುವಿನ ಆರೋಗ್ಯ ದೃಷ್ಟಿಯಿಂದ ಇದಕ್ಕೆ ಕಡಿವಾಣ ಹಾಕುವುದು ಅತ್ಯಗತ್ಯವಾಗಿದೆ. ಈ ನಿಟ್ಟಿನಲ್ಲಿ ಮಹಿಳೆಯರನ್ನ ಸಹಜ ಹೆರಿಗೆ ಮಾಡಿಸಿಕೊಳ್ಳಲು ಮಾನಸಿಕವಾಗಿ…
ನವದೆಹಲಿ: ಜವಾಹರಲಾಲ್ ನೆಹರೂ ಅವರು ಲೇಡಿ ಮೌಂಟ್ ಬ್ಯಾಟನ್, ಜಯಪ್ರಕಾಶ್ ನಾರಾಯಣ್ ಮತ್ತು ಇತರರಿಗೆ ಬರೆದ ಪತ್ರಗಳನ್ನು 2008 ರಲ್ಲಿ ಸೋನಿಯಾ ಗಾಂಧಿ ಅವರ ಆದೇಶದ ಮೇರೆಗೆ ಹಿಂತೆಗೆದುಕೊಳ್ಳಲಾಗಿದೆ ಎಂದು ಹೇಳಲಾದ ಪತ್ರಗಳನ್ನು ಹಿಂದಿರುಗಿಸುವಂತೆ ಪ್ರಧಾನ ಮಂತ್ರಿಗಳ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯ ಸದಸ್ಯರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ವಿನಂತಿಸಿದ್ದಾರೆ. ಸೋನಿಯಾ ಗಾಂಧಿ ಅವರಿಂದ ಯಾವುದೇ ಪ್ರತಿಕ್ರಿಯೆ ಸಿಗದ ಕಾರಣ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರನ್ನು ಸಂಪರ್ಕಿಸುವ ಕ್ರಮ ಕೈಗೊಳ್ಳಲಾಗಿದೆ ಎಂದು ಪಿಎಂಎಂಎಲ್ ಸದಸ್ಯ ರಿಜ್ವಾನ್ ಕದ್ರಿ ಎಎನ್ಐಗೆ ತಿಳಿಸಿದ್ದಾರೆ. “ಅವರಿಂದ ಯಾವುದೇ ಪ್ರತಿಕ್ರಿಯೆ ಬರದ ಕಾರಣ, ಈ ವಸ್ತುಗಳನ್ನು ಪುನಃಸ್ಥಾಪಿಸಲು ಸಹಾಯ ಮಾಡುವಂತೆ ನಾನು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ವಿನಂತಿಸಿದ್ದೇನೆ. ಈ ದಾಖಲೆಗಳು ರಾಷ್ಟ್ರದ ಪರಂಪರೆಯ ಭಾಗವಾಗಿದೆ ಮತ್ತು ಅದರ ಇತಿಹಾಸದ ಪ್ರಮುಖ ಅಂಶವಾಗಿದೆ ಎಂದು ಪರಿಗಣಿಸುವಂತೆ ನಾನು ಅವರನ್ನು ಒತ್ತಾಯಿಸಿದ್ದೇನೆ” ಎಂದು ಅವರು ಹೇಳಿದರು. “ನಾವು ಈ ವಸ್ತುಗಳನ್ನು ವೀಕ್ಷಿಸುವವರೆಗೆ,…