Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯಪಾಲರಿಗೆ ಈಗಾಗಲೇ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡದಂತೆ ಸಲಹೆಯನ್ನು ನೀಡಲಾಗಿತ್ತು. ಹೀಗಿದ್ದೂ ಸಿಎಂ ಸಿದ್ಧರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದರು. ಈಗ ರಾಜ್ಯಪಾಲರಿಗೆ ಬಾಕಿ ಪ್ರಾಸಿಕ್ಯೂಷನ್ ಗಳ ವಿಚಾರದಲ್ಲಿ ಕ್ರಮ ಕೈಗೊಳ್ಳಲು ಸಲಹೆ ನೀಡುವಂತ ನಿರ್ಧಾರವನ್ನು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯಿಸಲಾಗಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ವಿಧಾನಸೌಧದಲ್ಲಿ ನಡೆಯಿತು. ಈ ಸಭೆಯಲ್ಲಿ ರಾಜ್ಯಪಾಲರಿಗೆ ಸಲಹೆ ನೀಡಲು ನಿರ್ಧಾರವನ್ನು ಕೈಗೊಳ್ಳಲಾಗಿದೆ. ಬಾಕಿ ಇರುವ ಪ್ರಾಸಿಕ್ಯೂಷನ್ ಗಳ ವಿಚಾರದಲ್ಲಿ ಸಲಹೆ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯದ ವಿವಿಧ ನಾಯಕರ ವಿರುದ್ಧದ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಗೆ ಕ್ರಮ ಕೈಗೊಳ್ಳುವಂತೆ ಸಲಹೆ ನೀಡಲು ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. https://kannadanewsnow.com/kannada/nifty-above-24800-sensex-up-148-pts/ https://kannadanewsnow.com/kannada/as-long-as-i-am-there-there-will-be-no-scope-for-privatisation-of-bwssb-dk-shivakumar/
ನವದೆಹಲಿ: ಕೆಲ ದಿನಗಳಿಂದ ಕುಸಿತಗೊಂಡಿದ್ದಂತ ಶೇರು ಮಾರುಕಟ್ಟೆ ಇಂದು ಕೊಂಚ ಚೇತರಿಕೆ ಕಂಡಿದೆ. ನಿಫ್ಟಿ 24,800 ಅಂಕವನ್ನು ಏರಿಕೆ ಕಂಡರೇ, ಸೆನ್ಸೆಕ್ಟ್ 148 ಅಂಕಗಳಿಗೆ ಜಿಗಿದಿದೆ. ಭಾರತೀಯ ಬೆಂಚ್ ಮಾರ್ಕ್ ಸೂಚ್ಯಂಕಗಳು ಆಗಸ್ಟ್ 22 ರಂದು ನಿಫ್ಟಿ 24,800 ಕ್ಕಿಂತ ಹೆಚ್ಚಾಗಿದೆ. ಸೆನ್ಸೆಕ್ಸ್ 147.89 ಪಾಯಿಂಟ್ ಅಥವಾ ಶೇಕಡಾ 0.18 ರಷ್ಟು ಏರಿಕೆ ಕಂಡು 81,053.19 ಕ್ಕೆ ತಲುಪಿದೆ ಮತ್ತು ನಿಫ್ಟಿ 41.30 ಪಾಯಿಂಟ್ ಅಥವಾ 0.17 ಶೇಕಡಾ ಏರಿಕೆ ಕಂಡು 24,811.50 ಕ್ಕೆ ತಲುಪಿದೆ. ಸುಮಾರು 2111 ಷೇರುಗಳು ಮುಂದುವರಿದವು, 1299 ಷೇರುಗಳು ಕುಸಿದವು ಮತ್ತು 92 ಷೇರುಗಳು ಬದಲಾಗಲಿಲ್ಲ. ಗ್ರಾಸಿಮ್ ಇಂಡಸ್ಟ್ರೀಸ್, ಟಾಟಾ ಕನ್ಸೂಮರ್ ಪ್ರಾಡಕ್ಟ್ಸ್, ಟಾಟಾ ಸ್ಟೀಲ್, ಭಾರ್ತಿ ಏರ್ಟೆಲ್ ಮತ್ತು ಅಪೊಲೊ ಹಾಸ್ಪಿಟಲ್ಸ್ ನಿಫ್ಟಿಯಲ್ಲಿ ಪ್ರಮುಖ ಲಾಭ ಗಳಿಸಿದರೆ, ಟಾಟಾ ಮೋಟಾರ್ಸ್, ಡಾ.ರೆಡ್ಡೀಸ್ ಲ್ಯಾಬ್ಸ್, ಎನ್ಟಿಪಿಸಿ, ವಿಪ್ರೋ ಮತ್ತು ಎಂ & ಎಂ ನಷ್ಟ ಅನುಭವಿಸಿದ ಷೇರುಗಳಾಗಿವೆ. ವಲಯಗಳ ಪೈಕಿ ವಿದ್ಯುತ್ ಸೂಚ್ಯಂಕವು ಶೇಕಡಾ 1 ರಷ್ಟು…
ಬೆಂಗಳೂರು: ಬಿಡಬ್ಲ್ಯೂ ಎಸ್ ಎಸ್ ಬಿ ನನ್ನ ಬಳಿಯೇ ಇರುವ ಕಾರಣ ಅನೇಕರು ನೂತನ ಯೋಜನೆ ಕುರಿತು ಚರ್ಚೆ ನಡೆಸಲು ಬಂದರು. ಈ ಹಿಂದೆ ಇಂಧನ ಇಲಾಖೆಯಲ್ಲಿ ಇದ್ದಾಗಲು ಇದೇ ಪ್ರಸ್ತಾವನೆ ಬಂದಿತ್ತು. ಮುಂಬೈ ಸೇರಿದಂತೆ ಇತರೆಡೆ ಅದಾನಿ ಹಾಗೂ ಇತರೇ ಕಂಪೆನಿಗಳು ವಿದ್ಯುತ್ ಸರಬರಾಜು ಮಾಡುತ್ತಿವೆ. ನಾನು ಇರುವ ತನಕ ಇದೆಲ್ಲವೂ ಸಾಧ್ಯವಿಲ್ಲ. ಈ ವಿಚಾರ ಇಲ್ಲಿಗೆ ಬಿಟ್ಟುಬಿಡಿ, ಇದರ ಸುದ್ದಿಗೆ ಬರಬೇಡಿ ಎಂದು ವಾಪಸ್ ಕಳುಹಿಸಿದೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದರು. ವಿಧಾನಸೌಧದ ಆವರಣದಲ್ಲಿ ಗುರುವಾರ ನಡೆದ “ಬಾಗಿಲಿಗೆ ಬರಲಿದೆ ಕಾವೇರಿ ಸಂಪರ್ಕ, 110 ಹಳ್ಳಿಗಳಿಗೆ ಕಾವೇರಿ ನೀರಿನ ಸಂಪರ್ಕ” ಅಭಿಯಾನಕ್ಕೆ ಚಾಲನೆ ನೀಡಿ ಶಿವಕುಮಾರ್ ಅವರು ಮಾತನಾಡಿದರು. “ಜಲ ಹಾಗೂ ಇಂಧನ ಇವೆರಡೂ ಬಹಳ ಮುಖ್ಯವಾದವುಗಳು. ಈ ಹಿಂದೆ ನಾನು ಇಂಧನ ಸಚಿವನಾಗಿದ್ದೆ. ಈಗ ನೀರಾವರಿ ಸಚಿವನಾಗಿದ್ದೇನೆ. ಜೆ.ಹೆಚ್ ಪಟೇಲ್ ಅವರ ಕಾಲದಲ್ಲಿ ನೀರು ಸರಬರಾಜನ್ನು ಖಾಸಗಿಯವರಿಗೆ ನೀಡಬೇಕು ಎನ್ನುವ ಪ್ರಸ್ತಾವನೆ ಬಂದಿತ್ತು. ನಂತರ ಎಸ್.ಎಂ ಕೃಷ್ಣ…
ಬೆಂಗಳೂರು : “ಬೆಂಗಳೂರಿನಲ್ಲಿ ಕಳೆದ 12-13 ವರ್ಷಗಳಿಂದ ನೀರಿನ ದರ ಹೆಚ್ಚಳ ಮಾಡಿಲ್ಲ. ಆದರೂ ಬಿಡಬ್ಲ್ಯೂ ಎಸ್ ಎಸ್ ಬಿ ಕಷ್ಟಪಟ್ಟು ನಿರ್ವಹಣೆ ಮಾಡುತ್ತಿದೆ. ಯಾರೇ ಆಕ್ಷೇಪ ವ್ಯಕ್ತಪಡಿಸಿದರೂ ನೀರಿನ ದರ ಏರಿಕೆ ಅನಿವಾರ್ಯ. ಅದನ್ನು ಮಾಡುತ್ತೇವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ವಿಧಾನಸೌಧದ ಆವರಣದಲ್ಲಿ ಗುರುವಾರ ನಡೆದ “ಬಾಗಿಲಿಗೆ ಬರಲಿದೆ ಕಾವೇರಿ ಸಂಪರ್ಕ, 110 ಹಳ್ಳಿಗಳಿಗೆ ಕಾವೇರಿ ನೀರಿನ ಸಂಪರ್ಕ” ಅಭಿಯಾನಕ್ಕೆ ಚಾಲನೆ ನೀಡಿ ಶಿವಕುಮಾರ್ ಅವರು ಮಾತನಾಡಿದರು. “ರಾಜಧಾನಿಯ 1.40 ಕೋಟಿ ಜನಸಂಖ್ಯೆಗೆ ನೀರನ್ನು ಒದಗಿಸಲೇ ಬೇಕು. ಇದಕ್ಕಾಗಿ ಸಾಲ ಮಾಡಿ, ಸಂಪರ್ಕ ಜಾಲವನ್ನು ಹೆಚ್ಚಿಸದ ಹೊರತು ನೀರು ಕೊಡಲು ಕಷ್ಟವಾಗುತ್ತದೆ. ದರ ಹೆಚ್ಚಳ ಮಾಡದಿದ್ದರೇ ನೀರು ಸರಬರಾಜು ಕಂಪನಿ ಉಳಿಯುವುದಿಲ್ಲ, ನೌಕರರು ಬದುಕಲು ಆಗುವುದಿಲ್ಲ. ಸಂಸ್ಥೆಗೆ ವಿದ್ಯುತ್ ಬಿಲ್ ಕಟ್ಟಲು ಆಗುತ್ತಿಲ್ಲ. ಎಲ್ಲರಿಗೂ ನೀರಿನ ದರ ಹೆಚ್ಚಳ ಮಾಡುವುದಿಲ್ಲ. ಎಷ್ಟು ಏರಿಕೆ ಮಾಡಬೇಕು ಎಂದು ಇನ್ನೂ ನಿರ್ಧರಿಸಿಲ್ಲ. ಚರ್ಚೆ ಮಾಡಲಿ. ಧರಣಿ ಮಾಡಲಿ ನಾನು ಇದಕ್ಕೆ ಬದ್ಧವಾಗಿದ್ದೇನೆ”…
ಬೆಂಗಳೂರು: ದಲಿತರ ವಿರುದ್ಧ ಕಾಂಗ್ರೆಸ್ ಪಕ್ಷದ ಅನ್ಯಾಯವನ್ನು ಪ್ರತಿಭಟಿಸಿ ಕಾಂಗ್ರೆಸ್ಸಿನಲ್ಲಿರುವ ದಲಿತ ಮುಖಂಡರು, ಜನಪ್ರತಿನಿಧಿಗಳು ರಾಜೀನಾಮೆ ಕೊಡಬೇಕು ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಒತ್ತಾಯಿಸಿದರು. ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಇಂದು ನಡೆದ ಬಿಜೆಪಿಯ ಬೃಹತ್ ಪ್ರತಿಭಟನೆ ಸಂದರ್ಭದಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್ ಪಕ್ಷದಲ್ಲಿರುವ ಎಲ್ಲ ದಲಿತ ಮುಖಂಡರಿಗೂ ಧಿಕ್ಕಾರವಿರಲಿ. ದಲಿತರಿಗೆ ಅನ್ಯಾಯ ಮಾಡಿದ ಮುಖ್ಯಮಂತ್ರಿಗಳು ರಾಜೀನಾಮೆ ಕೊಡಬೇಕು ಎಂದು ಆಗ್ರಹವನ್ನು ಮುಂದಿಟ್ಟರು. ನಾನು ಹಿಂದುಳಿದ ವರ್ಗದ ನಾಯಕ. ಆದ್ದರಿಂದಲೇ ನನಗೆ ಬಿಜೆಪಿಯವರು ತೊಂದರೆ ಕೊಡುತ್ತಿದ್ದಾರೆ ಎಂದು ಮುಖ್ಯಮಂತ್ರಿಗಳು ಹೇಳುತ್ತಾರೆ. ಹಾಗಿದ್ದರೆ ಈ ದೇಶದ ಪ್ರಧಾನಮಂತ್ರಿ ಯಾರು? ಅವರು ಕೂಡ ಹಿಂದುಳಿದವರು. ಅವರು ನಿಮ್ಮ ಥರ ಕರಿಕಾಗೆ ಅಲ್ಲ. ಅವರು ಕಳಂಕವೇ ಇಲ್ಲದವರು ಎಂದು ವಿವರಿಸಿದರು. ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೆ ನಾವು ವಿರಮಿಸುವುದಿಲ್ಲ ಎಂದು ಪ್ರಕಟಿಸಿದ ಅವರು, ಭ್ರಷ್ಟಾಚಾರದ ಕಪ್ಪನ್ನು ಅಳಿಸುವವರೆಗೆ, ನಿಮ್ಮನ್ನು ಮನೆಗೆ ಕಳಿಸುವವರೆಗೆ ನಾವು ವಿರಮಿಸುವುದಿಲ್ಲ. ನಾವು ಹೋರಾಟದಿಂದ ವಿರಮಿಸುವುದಿಲ್ಲ ಎಂದು ತಿಳಿಸಿದರು. ನಿಮ್ಮ…
ಬೆಂಗಳೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಅಧಿಕೃತ ರಾಷ್ಟ್ರೀಯ ಕ್ರೀಡಾ ಸಂಸ್ಥೆಗಳು ಆಯೋಜಿಸುವ ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ಪಡೆದ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಿಗೆ ಭಾರತ ಸರ್ಕಾರದಿಂದ ನಿಯೋಜಿಸಲ್ಪಟ್ಟ ತಂಡದಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡಿದ ರಾಜ್ಯದ ಕ್ರೀಡಾಪಟುಗಳು 2024-25 ನೇ ಸಾಲಿನ ಶೈಕ್ಷಣಿಕ ಶುಲ್ಕವನ್ನು ಮರುಪಾವತಿಸುವ ಯೋಜನೆಯನ್ನು ಅನುಷ್ಠಾನಗೊಳಿಸಲು ಅರ್ಹ ಕ್ರೀಡಾಪುಟಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಕ್ರೀಡಾಪಟುಗಳು ನಿಗದಿತ ನಮೂನೆ ಅರ್ಜಿಯನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕಚೇರಿಯಿಂದ ಪಡೆದು ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಸೆ. 25 ರೊಳಗಾಗಿ ಸಲ್ಲಿಸುವಂತೆ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08182-223328 ನ್ನು ಸಂಪರ್ಕಿಸುವುದು. https://kannadanewsnow.com/kannada/commissioner-orders-deployment-of-two-lady-cops-for-night-shift-in-all-traffic-police-stations-in-bengaluru/ https://kannadanewsnow.com/kannada/big-shock-for-flipkart-customers-charges-on-order-of-goods-hiked/ https://kannadanewsnow.com/kannada/breaking-another-victim-of-bike-wheeling-madness-in-the-state-priest-dies-without-treatment/
ಬೆಂಗಳೂರು: ಕೋಲ್ಕತ್ತಾದ ವೈದ್ಯಕೀಯ ಕಾಲೇಜಿನಲ್ಲಿ ಮಹಿಳಾ ಡಾಕ್ಟರ್ ಮೇಲಿನ ಅತ್ಯಾಚಾರ, ಕೊಲೆಯಿಂದಾಗಿ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಬೆಂಗಳೂರಲ್ಲಿ ಮಹಿಳೆಯರ ಸುರಕ್ಷತೆಗಾಗಿ ಮಹತ್ವದ ಕ್ರಮವನ್ನು ವಹಿಸಲಾಗಿದೆ. ಬೆಂಗಳೂರಿನ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ರಾತ್ರಿ ವೇಳೆಯಲ್ಲಿ ಇಬ್ಬರು ಪೊಲೀಸ್ ಪೇದೆಗಳನ್ನು ಡ್ಯೂಟಿಗೆ ನಿಯೋಜಿಸುವಂತೆ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶಿಸಿದ್ದಾರೆ. ಈ ಕುರಿತಂತೆ ಬೆಂಗಳೂರು ನಗರ ಸಂಚಾರ ಜಂಟಿ ಪೊಲೀಸ್ ಆಯುಕ್ತರಾದಂತ ಎಂಎನ್ ಅನುಚೇತ್ ಅವರು ಜ್ಞಾಪನ ಆದೇಶವನ್ನು ಎಲ್ಲಾ ಸಂಚಾರ ವಿಭಾಗದ ಪಿಐಗಳಿಗೆ ಹೊರಡಿಸಿದ್ದಾರೆ. ಅದರಲ್ಲಿ ಬೆಂಗಳೂರು ನಗರದಲ್ಲಿ ರಾತ್ರಿ ವೇಳೆಯಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯಗಳಿಗೆ ಸಂಬಂಧಿಸಿದಂತೆ ದೂರುಗಳು ಹೆಚ್ಚಾಗುತ್ತಿವೆ ಎಂದಿದ್ದಾರೆ. ಈ ಹಿನ್ನಲೆಯಲ್ಲಿ ಈ ದೂರುಗಳಿಗೆ ತ್ವರಿತವಾಗಿ ಸ್ಪಂದಿಸುವ ಸಲುವಾಗಿ, ಸಂಚಾರ ವಿಭಾಗದ ಎಲ್ಲಾ ಸಂಚಾರ ಪೊಲೀಸ್ ಠಾಣೆಗಳಲ್ಲಿ ಪ್ರತಿ ದಿನ ರಾತ್ರಿ ಕರ್ತವ್ಯಕ್ಕೆ ಇಬ್ಬರು ಮಹಿಳಾ ಹೆಚ್ ಸಿ, ಪಿಸಿ ಸಿಬ್ಬಂದಿಗಳನ್ನು ಕಡ್ಡಾಯವಾಗಿ ನಿಯೋಜಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. https://kannadanewsnow.com/kannada/breaking-another-victim-of-bike-wheeling-madness-in-the-state-priest-dies-without-treatment/ https://kannadanewsnow.com/kannada/big-shock-for-flipkart-customers-charges-on-order-of-goods-hiked/
ದೇವಸ್ಥಾನದಲ್ಲಿ ಕೊಡುವ ಹೂವು ಪ್ರಸಾಧ ಅಕ್ಷತೆಕಾಳುಗಳು ತುಂಬಾ ಮಹತ್ವವಾದವು ಈ ಮಂತ್ರಾಕ್ಷತೆಯನ್ನು ಏನು ಮಾಡಬೇಕು ಗೋತ್ತಾ? ನಮಸ್ಕಾರ ಪ್ರಿಯ ಬಂಧೂಗಳೇ ನಾವು ನಮ್ಮ ಮನಸ್ಸಿನಲ್ಲಿ ಇರುವ ಕೋರಿಕೆಗಳನ್ನು ಈಡೇರಿಸಿಕೊಳ್ಳಲು ಹಾಗೇನೆ ನಮ್ಮ ಜೀವನದಲ್ಲಿ ಇರುವ ಸಮಸ್ಯೆಗಳಿಂದ ಮುಕ್ತಿ ಹೊಂದಲು ದೇವಸ್ಥಾನಕ್ಕೆ ಹೋಗುತ್ತೇವೆ ಏಕೆಂದರೆ ದೇವಸ್ಥಾನದಲ್ಲಿ ದೇವರಿಗೆ ನಮಸ್ಕರಿಸಿ ಕುಳಿತರೆ ಮನಸ್ಸಿಗೆ ನೆಮ್ಮದಿ ಸಿಗುತ್ತದೆ ಏಕೆಂದರೆ ದೇವಸ್ಥಾನ ಒಂದು ಪವಿತ್ರವಾದ ತಾಣವಾಗಿದೆ ಅಲ್ಲಿ ಪ್ರಶಾಂತತೆ ತುಂಬಿರುತ್ತದೆ ಆ ದೇವರು ಆ ಪವಿತ್ರವಾದ ಜಾಗದಲ್ಲಿ ನೆಲೆಸಿದ್ದಾನೆ ಎನ್ನುವ ಭಕ್ತಿಭಾವ ನಮ್ಮ ಮನಸ್ಸಿನಲ್ಲಿ ಬೇರೂರಿರುತ್ತದೆ ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ಸಿಂಗದೂರು ಚೌಡಮ್ಮನವರ ಉಪಾಸಕರು ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ,…
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಮನವಿ ಸಲ್ಲಿಸುವ ಸಂಬಂಧ ನಿಯಮಗಳನ್ನು ಮೀರುತ್ತಿದ್ದಾರೆ. ಇನ್ಮುಂದೆ ಅದಕ್ಕೆ ಅವಕಾಶವಿಲ್ಲ. ನಿಯಮಾನುಸಾರ ಮನವಿಗಳನ್ನು ಸಂಬಂಧಿಸಿದವರಿಗೆ ಸಲ್ಲಿಸಬೇಕು. ಸೂಚನೆಗಳನ್ನು ಮೀರಿದ್ರೇ ಅಂತವರ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗುತ್ತದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಖಡಕ್ ಎಚ್ಚರಿಕೆ ನೀಡಿದ್ದಾರೆ. ಈ ಕುರಿತಂತೆ ಇಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಟಿಪ್ಪಣಿ ಹೊರಡಿಸಿದ್ದಾರೆ. ಅದರಲ್ಲಿ ಸರ್ಕಾರಿ ಆದೇಶ ಸಂಖ್ಯೆ: ಜಿಎಡಿ, ಎಆರ್ ಆರ್ 64, ದಿನಾಂಕ: 29.08.1966ರಲ್ಲಿ ಸರ್ಕಾರಿ ನೌಕರರು, ಸರ್ಕಾರಕ್ಕೆ ಮನವಿಗಳನ್ನು ಸಲ್ಲಿಸುವಾಗ ಸಂಬಂಧಪಟ್ಟ ಇಲಾಖೆಯ ಕಾರ್ಯದರ್ಶಿಯವರಿಗೆ ಸಲ್ಲಿಸುವಂತೆ ಮತ್ತು ಇಲಾಖಾ ಸಚಿವರಿಗೆ ನೇರವಾಗಿ ಸಲ್ಲಿಸದಿರುವಂತೆ ಹಾಗೂ ಸರ್ಕಾರದ ಅಧಿಕೃತ ಜ್ಞಾಪನ ಸಂಖ್ಯೆ: ಡಿಪಿಎಆರ್ 11 ಎಸ್ ಸಿ 80, ದಿನಾಂಕ: 21.05.1980 ರಲ್ಲಿ ಸರ್ಕಾರಿ ನೌಕರರು ತಮ್ಮ ಸೇವಾ ವಿಷಯಗಳ ಬಗ್ಗೆ ರಾಜಕೀಯ ಅಥವಾ ಇನ್ನಿತರೆ ಪುಭಾವವನ್ನು ಬೀರದಿರುವ ಬಗ್ಗೆ ಸೂಕ್ತ ನಿರ್ದೇಶನಗಳನ್ನು ನೀಡಲಾಗಿದೆ ಎಂದಿದ್ದಾರೆ. ಆದಾಗ್ಯೂ, ಕೆಲವು ಸರ್ಕಾರಿ ನೌಕರರು ಸದರಿ ಸೂಚನೆಗಳನ್ನು ಪಾಲಿಸದ ತಮ್ಮ ವರ್ಗಾವಣೆ ಮತ್ತು…
ನವದೆಹಲಿ: 151 ಹಾಲಿ ಸಂಸದರು ಮತ್ತು ಶಾಸಕರು ತಮ್ಮ ಚುನಾವಣಾ ಅಫಿಡವಿಟ್ಗಳಲ್ಲಿ ಮಹಿಳೆಯರ ವಿರುದ್ಧದ ಅಪರಾಧಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ಘೋಷಿಸಿದ್ದಾರೆ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (Association for Democratic Reforms -ADR) ಮತ್ತು ನ್ಯಾಷನಲ್ ಎಲೆಕ್ಷನ್ ವಾಚ್ (National Election Watch -NEW) ಬುಧವಾರ ವರದಿ ಮಾಡಿದೆ. ಈ ವರದಿಯು 4,693 ಸಂಸದರು ಮತ್ತು ಶಾಸಕರ ಐದು ವರ್ಷಗಳ ದತ್ತಾಂಶವನ್ನು ವಿಶ್ಲೇಷಿಸಿದೆ. 2019 ಮತ್ತು 2024 ರ ನಡುವೆ ನಡೆದ ಚುನಾವಣೆಗಳನ್ನು ವರದಿ ಮಾಡಿ ಈಗ ಸಂಸದರು ಮತ್ತು ಶಾಸಕರಾಗಿ ಸೇವೆ ಸಲ್ಲಿಸುತ್ತಿರುವ ಅಭ್ಯರ್ಥಿಗಳು ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಅಫಿಡವಿಟ್ಗಳನ್ನು ಆಧರಿಸಿ ಈ ವರದಿಯನ್ನು ಸಿದ್ಧಪಡಿಸಲಾಗಿದೆ.ವರದಿಯ ಪ್ರಕಾರ, 151 ರಲ್ಲಿ 16 ಹಾಲಿ ಸಂಸದರು ಮತ್ತು 135 ಹಾಲಿ ಶಾಸಕರು ಇದ್ದಾರೆ. ಮಹಿಳೆಯರ ವಿರುದ್ಧದ ಅಪರಾಧಗಳಿಗೆ ಸಂಬಂಧಿಸಿದ 54 ಪ್ರಕರಣಗಳೊಂದಿಗೆ ಭಾರತೀಯ ಜನತಾ ಪಕ್ಷದ ನಾಯಕರು ಅಗ್ರಸ್ಥಾನದಲ್ಲಿದ್ದಾರೆ ಎಂದು ಎಡಿಆರ್ ವರದಿ ತಿಳಿಸಿದೆ. ಕಾಂಗ್ರೆಸ್ (23) ಮತ್ತು ತೆಲುಗು…