Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: 15 ನೇ ಹಣಕಾಸು ಆಯೋಗದ (ಎಕ್ಸ್ವಿ-ಎಫ್ಸಿ) ಶಿಫಾರಸುಗಳ ಆಧಾರದ ಮೇಲೆ 2024-25ರ ಹಣಕಾಸು ವರ್ಷದಲ್ಲಿ ವಿವಿಧ ಶೀರ್ಷಿಕೆಗಳ ಅಡಿಯಲ್ಲಿ ಕೇಂದ್ರವು ರಾಜ್ಯಗಳಿಗೆ 71,889 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ ಎಂದು ಹಣಕಾಸು ಸಚಿವಾಲಯ ಭಾನುವಾರ ತಿಳಿಸಿದೆ. ಕೇಂದ್ರವು ಈ ನಿಧಿಯನ್ನು ರಾಷ್ಟ್ರೀಯ ವಿಪತ್ತು ತಗ್ಗಿಸುವ ನಿಧಿ (ಎನ್ಡಿಎಂಎಫ್), ವಿಕೇಂದ್ರೀಕರಣದ ನಂತರದ ಆದಾಯ ಕೊರತೆ ಅನುದಾನ, ರಾಜ್ಯ ವಿಪತ್ತು ಪ್ರತಿಕ್ರಿಯೆ ನಿಧಿಯ ಕೇಂದ್ರ ಪಾಲು, ರಾಜ್ಯ ವಿಪತ್ತು ತಗ್ಗಿಸುವ ನಿಧಿ, ಸ್ಥಳೀಯ ಸಂಸ್ಥೆಗಳಿಗೆ ಅನುದಾನ ಮತ್ತು ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ನಿಧಿ (ಎನ್ಡಿಆರ್ಎಫ್) ಯಿಂದ ಹೆಚ್ಚುವರಿ ಕೇಂದ್ರ ಸಹಾಯವಾಗಿ ಮಂಜೂರು ಮಾಡಿದೆ. ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಎಕ್ಸ್ನಲ್ಲಿನ ಪೋಸ್ಟ್ನಲ್ಲಿ, ಹಣಕಾಸು ಸಚಿವಾಲಯವು ಬಿಡುಗಡೆಯಾದ ನಿಧಿಗಳ ವಿಭಜನೆಯನ್ನು ಹಂಚಿಕೊಂಡಿದೆ, ವಿಕೇಂದ್ರೀಕರಣದ ನಂತರದ ಆದಾಯ ಕೊರತೆ ಅನುದಾನದ ಅಡಿಯಲ್ಲಿ 18,362.25 ಕೋಟಿ ರೂ. ನಗರ ಸ್ಥಳೀಯ ಸಂಸ್ಥೆಗಳ ಅನುದಾನದಡಿ 6,845.04 ಕೋಟಿ ರೂ., ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಅನುದಾನದಡಿ 20,847.25 ಕೋಟಿ ರೂ., ಆರೋಗ್ಯ…
ಹುಬ್ಬಳ್ಳಿ : “ಕೆಲವೊಮ್ಮೆ ಶಿಕ್ಷಣದಿಂದಲೂ ನಾವು ಎಡವಬಹುದು. ಆದರೆ ತಾಯಿ ನೀಡಿದ ಸಂಸ್ಕಾರದಿಂದ ಎಂದೂ ಎಡವಲು ಸಾಧ್ಯವಿಲ್ಲ” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಅಭಿಪ್ರಾಯಪಟ್ಟರು. ಹುಬ್ಬಳ್ಳಿಯ ಗುಜರಾತ್ ಭವನದಲ್ಲಿ ನಡೆದ ಮಾತೃಶ್ರೀ ಗುರವ್ವ ಶಿವಲಿಂಗಪ್ಪ ಹೊರಟ್ಟಿ ಅವರ ಹದಿನಾಲ್ಕನೇ ಪುಣ್ಯ ಸ್ಮರಣೆ ಹಾಗೂ ‘ಅವ್ವ’ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಶಿವಕುಮಾರ್ ಅವರು ಭಾನುವಾರ ಮಾತನಾಡಿದರು. “ನಾವು ಎಷ್ಟೇ ಎತ್ತರಕ್ಕೆ ಏರಿದರು ತಾಯಿಗೆ ಮಗನಾಗಿಯೇ ಇರುತ್ತೇವೆ. ಜನರು ದೇವರು, ಧರ್ಮವನ್ನು ಬದಲಾವಣೆ ಮಾಡುತ್ತಾರೆ ಆದರೆ ಯಾವುದೇ ಕಾರಣಕ್ಕೂ ತಾಯಿ ಹೇಳಿಕೊಟ್ಟ ಬದುಕಿನ ಪಾಠ ಹಾಗೂ ಗುರುವಿನ ಸ್ಥಾನವನ್ನು ಬದಲಾವಣೆ ಮಾಡಲು ಸಾಧ್ಯವಿಲ್ಲ. ತಾಯಿ ಹೇಳಿಕೊಟ್ಟ ಸಂಸ್ಕಾರ, ಮಮತೆಯನ್ನು ಯಾವುದೇ ಕಾರಣಕ್ಕೂ ನಾವುಗಳು ಮರೆಯಲು ಸಾಧ್ಯವಿಲ್ಲ. ಈ ಅವ್ವ ಪ್ರಶಸ್ತಿ ಕಾರ್ಯಕ್ರಮ ಇಡೀ ರಾಜ್ಯಕ್ಕೆ ಮಾದರಿ ಕಾರ್ಯಕ್ರಮ. ಅವ್ವ ಹೆಸರಿನ ಪ್ರಶಸ್ತಿ ಪಡೆದವರು ಸಂತೋಷ ಪಡಬೇಡಿ ಏಕೆಂದರೆ ನಿಮ್ಮ ಮೇಲೆ ಹೆಚ್ಚಿನ ಜವಾಬ್ದಾರಿ ಬಂದಿದೆ. ಏಕೆಂದರೆ ಇಡೀ ಸಮಾಜವೇ ನಿಮ್ಮನ್ನು ಗಮನಿಸುತ್ತಿರುತ್ತದೆ. ನಿಮ್ಮೆಲ್ಲರ…
ಗದಗ : “ಅಭಿವೃದ್ಧಿಯೇ ನಮ್ಮ ತಾಯಿ ತಂದೆ, ಗ್ಯಾರಂಟಿಯೇ ನಮ್ಮ ಬಂಧು ಬಳಗ ಎಂದು ನಾವು ನಂಬಿದ್ದು, ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಗದಗದ ರೋಣ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಭಾನುವಾರ ಭಾಗವಹಿಸಿದರು. ಈ ವೇಳೆ ಮಾತನಾಡಿದ ಅವರು ಹೇಳಿದಿಷ್ಟು; “ಜಿ.ಎಸ್ ಪಾಟೀಲ್ ಪಾಟೀಲ್ ಅವರು ಈ ಕ್ಷೇತ್ರದಲ್ಲಿ ಹಮ್ಮಿಕೊಂಡಿರುವ ಅಭಿವೃದ್ಧಿ ಯೋಜನೆಗಳ ಮಾಹಿತಿಯ ಕಲ್ಲುಗಳನ್ನು ನೋಡುತ್ತಿದ್ದರೆ, ಅದರಲ್ಲೇ ಒಂದು ಮನೆ ಕಟ್ಟಿಕೊಳ್ಳಬಹುದು. ಆಮೂಲಕ ಅವರು ಈ ಕ್ಷೇತ್ರವನ್ನು ಅಭಿವೃದ್ಧಿ ಕಡೆಗೆ ಕೊಂಡೊಯ್ಯುತ್ತಿದ್ದಾರೆ. ಅಧಿಕಾರ ನಶ್ವರ, ಕಾಂಗ್ರೆಸ್ ಸಾಧನೆಗಳು ಅಜರಾಮರ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರನೇ ಈಶ್ವರ ಎಂಬಂತೆ ನಾವು ನಿಮ್ಮ ಸೇವೆ ಮಾಡುತ್ತಿದ್ದೇವೆ. ಕೇವಲ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆಗೆ ಮಾತ್ರ ನಾನು ಬಂದಿಲ್ಲ. ಸಜ್ಜನ, ಕ್ರಿಯಾಶೀಲವಾಗಿ ಕ್ಷೇತ್ರವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸುವ ಧೀಮಂತ ನಾಯಕ ಜಿ.ಎಸ್ ಪಾಟೀಲ್ ಅವರನ್ನು ನಾಲ್ಕು ಬಾರಿ ವಿಧಾನಸಭೆಗೆ ಆರಿಸಿ ಕಳುಹಿಸಿದ…
ಕೆಎನ್ಎನ್ ಸ್ಪೋರ್ಟ್ಸ್: ಡಬ್ಲ್ಯುಪಿಎಲ್ 2025 ಹರಾಜಿನಲ್ಲಿ ಪ್ರೀಮಿಯರ್ ಮಹಿಳಾ ಟಿ 20 ಫ್ರ್ಯಾಂಚೈಸ್ ಲೀಗ್ನಲ್ಲಿ ಐದು ತಂಡಗಳು 19 ಆಟಗಾರರನ್ನು ಖರೀದಿಸಿವೆ. ಐದು ತಂಡಗಳಲ್ಲಿ ನಾಲ್ಕು ತಂಡಗಳು ನಾಲ್ಕು ಸ್ಲಾಟ್ಗಳನ್ನು ಭರ್ತಿ ಮಾಡಲು ಹರಾಜಿಗೆ ಹೋದವು, ಉಳಿದ ತಂಡವು ಖಾಲಿ ಇರುವ ಮೂರು ಸ್ಥಾನಗಳನ್ನು ಭರ್ತಿ ಮಾಡುವ ಅಗತ್ಯವನ್ನು ಹೊಂದಿತ್ತು. ಆ ಮಿನಿ ಹರಾಜಿನಲ್ಲಿ ಮಾರಟವಾದ ಆಟಗಾರರ ಸಂಪೂರ್ಣ ಪಟ್ಟಿ ಮುಂದಿದೆ ಓದಿ. ಗುಜರಾತ್ ಜೈಂಟ್ಸ್ ತಂಡ ಸಿಮ್ರಾನ್ ಶೇಕ್ ಅವರನ್ನು 1.9 ಕೋಟಿ ರೂ.ಗೆ ಖರೀದಿಸಿದೆ. ವಿಂಡೀಸ್ ಆಲ್ರೌಂಡರ್ ಡಿಯಾಂಡ್ರಾ ಡಾಟಿನ್ ಅವರನ್ನು 1.7 ಕೋಟಿ ರೂ.ಗೆ ಖರೀದಿಸುವ ಮೂಲಕ ಜಿಜಿ ತಮ್ಮ ವೆಚ್ಚದ ಉತ್ಸಾಹವನ್ನು ದ್ವಿಗುಣಗೊಳಿಸಿತು. ತಮಿಳುನಾಡಿನ ಯುವ ಆಟಗಾರ್ತಿ ಜಿ ಕಮಲಿನಿ ಅವರನ್ನು ಮುಂಬೈ ಇಂಡಿಯನ್ಸ್ 1.6 ಕೋಟಿ ರೂ.ಗೆ ಖರೀದಿಸಿದರೆ, ಹರಿದ್ವಾರದ ಪ್ರೇಮಾ ರಾವತ್ ಅವರು 1.2 ಕೋಟಿ ರೂ.ಗೆ ಆಲ್ರೌಂಡರ್ ಅನ್ನು ಖರೀದಿಸುವುದರೊಂದಿಗೆ ಒಂದು ಕೋಟಿ ಗಡಿ ದಾಟಿದ ನಾಲ್ವರು ಆಟಗಾರ್ತಿಯರಲ್ಲಿ ಒಬ್ಬರಾದರು. ಮಾರಾಟವಾದ…
ಪಾದಚಾರಿ ಮಾರ್ಗದಲ್ಲಿ ವಾಸಿಸುವ ವ್ಯಕ್ತಿಯಿಂದ ಹಿಡಿದು ಬಂಗಲೆಯಲ್ಲಿ ವಾಸಿಸುವ ಶ್ರೀಮಂತ ಉದ್ಯಮಿಯವರೆಗೆ ಎಲ್ಲರಿಗೂ ಸಾಲದ ಸಮಸ್ಯೆ ಇದೆ. ಆ ಸಾಲದ ಸಮಸ್ಯೆಯು ಪ್ರಮಾಣದಲ್ಲಿ ಬದಲಾಗುತ್ತದೆ ಆದರೆ ಪ್ರತಿಯೊಬ್ಬರಿಗೂ ಒಂದಲ್ಲ ಒಂದು ರೂಪದಲ್ಲಿ ಉಳಿಯುತ್ತದೆ. ಕೆಲವು ಜನರು ಪಾವತಿಸದ ಸಾಲಕ್ಕೆ ಬಡ್ಡಿಯನ್ನು ಪಾವತಿಸುವ ಮೂಲಕ ಬಳಲುತ್ತಿದ್ದಾರೆ. ಈ ಸಂಧರ್ಭದಲ್ಲಿ ಎಂತಹ ಸಾಲದ ಹೊರೆಯಿದ್ದರೂ ಆ ಋಣ ತೀರಿಸಲು ನಾವು ಮಾಡಬಹುದಾದ ಉಪಾಯವೇ ಇಳನೇರ್ ದೀಪಂ. ಈ ಆಧ್ಯಾತ್ಮಿಕ ಪೋಸ್ಟ್ನಲ್ಲಿ, ಎಳನೀರನ್ನು ಬಳಸಿ ದೀಪವನ್ನು ಹೇಗೆ ಬೆಳಗಿಸಬೇಕು ಎಂದು ನಾವು ನೋಡಲಿದ್ದೇವೆ . ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ,…
ಮಹಾರಾಷ್ಟ್ರ: ಬಿಜೆಪಿ ನೇತೃತ್ವದ ಮಹಾರಾಷ್ಟ್ರ ಸರ್ಕಾರದ ಸಂಪುಟ ವಿಸ್ತರಣೆಯ ಪ್ರಮಾಣ ವಚನ ಸ್ವೀಕಾರ ಸಮಾರಂಭವು ಭಾನುವಾರ ನಾಗ್ಪುರದಲ್ಲಿ ಪ್ರಾರಂಭವಾಗಿದ್ದು, 39 ಮಂತ್ರಿಗಳು ಪ್ರಮಾಣ ವಚನ ಸ್ವೀಕರಿಸಿದರು. ಸಂಪುಟ ವಿಸ್ತರಣೆಯಲ್ಲಿ ಬಿಜೆಪಿಗೆ 19, ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಗೆ 11 ಮತ್ತು ಅಜಿತ್ ಪವಾರ್ ಅವರ ಎನ್ಸಿಪಿಗೆ 9 ಸಚಿವ ಸ್ಥಾನಗಳು ಸಿಕ್ಕಿವೆ. 33 ಶಾಸಕರು ಕ್ಯಾಬಿನೆಟ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರೆ, ಆರು ಶಾಸಕರು ರಾಜ್ಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು ಡಿಸೆಂಬರ್ 16 ರಿಂದ 21 ರವರೆಗೆ ನಾಗ್ಪುರದಲ್ಲಿ ನಡೆಯಲಿರುವ ರಾಜ್ಯ ವಿಧಾನಸಭೆಯ ಚಳಿಗಾಲದ ಅಧಿವೇಶನದ ಮುನ್ನಾದಿನದಂದು ನಡೆದ ಸಮಾರಂಭದಲ್ಲಿ ರಾಜ್ಯಪಾಲ ಪಿ.ಸಿ.ರಾಧಾಕೃಷ್ಣನ್ ಹೊಸ ಸಚಿವರಿಗೆ ಪ್ರಮಾಣ ವಚನ ಬೋಧಿಸಿದರು. ಡಿಸೆಂಬರ್ 5 ರಂದು ಮುಂಬೈನಲ್ಲಿ ಪ್ರಮಾಣವಚನ ಸ್ವೀಕರಿಸಿದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಉಪಮುಖ್ಯಮಂತ್ರಿಗಳಾದ ಏಕನಾಥ್ ಶಿಂಧೆ ಮತ್ತು ಅಜಿತ್ ಪವಾರ್ ಉಪಸ್ಥಿತರಿದ್ದರು. ರಾಧಾಕೃಷ್ಣ ವಿಖೆ ಪಾಟೀಲ್ ಮತ್ತು ಹಸನ್ ಮುಶ್ರಿಫ್ ಅವರೊಂದಿಗೆ ಬಿಜೆಪಿ ಮುಖ್ಯಸ್ಥ ಚಂದ್ರಶೇಖರ್ ಬವಾನ್ಕುಲೆ…
ಬೆಂಗಳೂರು: ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಬೆಂಬಲಿತ ಕೆಂಚಪ್ಪಗೌಡರು ಆಯ್ಕೆಯಾಗಿದ್ದಾರೆ. ರಾಜ್ಯ ಒಕ್ಕಲಿಗರ ಸಂಘದ ಚುನಾವಣೆಯಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಮೇಲುಗೈ ಸಾಧಿಸಿದ್ದಾರೆ. ಆದರೇ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಭಾರೀ ಹಿನ್ನಡೆಯಾಗಿದೆ. ಈ ಮೂಲಕ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಡಿಕೆಶಿ ಬೆಂಬಲಿತ ಕೆಂಚಪ್ಪಗೌಡ ಆಯ್ಕೆಯಾಗಿದ್ದಾರೆ. ಇನ್ನೂ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಬೆಂಬಲದೊಂದಿಗೆ ಸ್ಪರ್ಧಿಸಿದ್ದ ಡಾ. ಅಂಜಿನಪ್ಪಗೆ ಸೋಲು ಕಂಡಿದ್ದಾರೆ. ಡಿಕೆ ಶಿವಕುಮಾರ್ ಬೆಂಬಲದೊಂದಿಗೆ ಸ್ಪರ್ಧಿಸಿದ್ದ ಕೆಂಚಪ್ಪಗೌಡಗೆ 21 ಸದಸ್ಯರ ಬೆಂಬಲದೊಂದಿಗೆ ಗೆಲುವು ಸಾಧಿಸಿದ್ದಾರೆ. ಇನ್ನೂ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರ ಬೆಂಬಲಿತ ಅಭ್ಯರ್ಥಿ ಆಂಜಿನಪ್ಪ ಅವರು ಕೇವಲ 14 ಸದಸ್ಯರ ಮತಗಳನ್ನು ಪಡೆದು ಸೋಲು ಕಂಡಿದ್ದಾರೆ. https://kannadanewsnow.com/kannada/dali-dhananjaya-and-dhanyas-wedding-invitation-card-goes-viral-netizens-go-gaga-over-it/ https://kannadanewsnow.com/kannada/breaking-bengaluru-mobile-thieves-on-the-rise-ex-corporator-chases/
ಕೆಎನ್ಎನ್ ಸಿನಿಮಾ ಡೆಸ್ಕ್: ನಟ ಡಾಲಿ ಧನಂಜಯ್ ಹಾಗೂ ಧನ್ಯತ ಮದುವೆ ಫಿಕ್ಸ್ ಆಗಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿಯಾಗಿರುವಂತ ಇಬ್ಬರೂ ತಮ್ಮ ಮದುವೆಗೆ ಆಮಂತ್ರಣ ನೀಡಿದ್ದಾರೆ. ಈ ಬೆನ್ನಲ್ಲೇ ಅವರ ಆಮಂತ್ರಣ ಪತ್ರ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಪತ್ರಕ್ಕೆ ನೆಟ್ಟಿಗರು ಮಾತ್ರ ಸೂಪರ್ ಎಂದಿದ್ದಾರೆ. ದಿನಾಂಕ 15-02-2025ರಂದು ಆರತಕ್ಷತೆ, ದಿನಾಂಕ 16-02-2025ರಂದು ಮುಹೂರ್ತದೊಂದಿಗೆ ನಟ ಡಾಲಿ ಧನಂಜಯ ಹಾಗೂ ಧನ್ಯತ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಇವರ ಆಮಂತ್ರಣ ಪತ್ರ ಮಾತ್ರ ಎಲ್ಲರನ್ನು ಗಮನ ಸೆಳೆಯುತ್ತಿದೆ. ಕೈಬರಹದ ಕನ್ನಡದ ಜೊತೆಗೆ ಇಂಗ್ಲೀಷ್ ಬಳಸಿ ಆಮಂತ್ರಣ ಪತ್ರಿಕೆಯನ್ನು ಮಾಡಿಸಲಾಗಿದೆ. ಈ ಹಿಂದಿನ ಇನ್ ಲೇಂಡ್ ಲೆಟರ್ ಮಾದರಿಯಲ್ಲಿ ಇರುವಂತ ಆಮಂತ್ರಣ ಪತ್ರಿಕೆಯಲ್ಲಿ ಆಕ್ಟರ್, ಡಾಕ್ಟರ್ ಮದುವೆಗೆ ಬಂದು ಆಶೀರ್ವದಿಸಿ ಎಂಬುದರಿಂದ ಆರಂಭಗೊಳ್ಳುತ್ತಿದೆ. ಜೊತೆಗೆ ಸುಸ್ವಾಗತವನ್ನು ಕೋರಲಾಗಿದೆ. ಆಮಂತ್ರಣ ಪತ್ರ ಎಂಬುದಾಗಿ ಪತ್ರದ ಎಡ ತುದಿಯಲ್ಲಿದ್ದು, ಒಳಗಿನ ಪುಟ ತೆರೆದು ನೋಡಿದರೇ ನಟ ಡಾಲಿ ಧನಂಜಯ್ ಅವರೇ ಕೈ ಬರಹದಲ್ಲಿ…
ಗದಗ : ನಮ್ಮ ಸರ್ಕಾರ ಜಾರಿ ಮಾಡಿರುವ ಬಡವರಿಗೆ ಶಕ್ತಿ ತುಂಬುವ ಕಾರ್ಯಕ್ರಮಗಳಿಗೆ ಬಿಜೆಪಿ-ಜೆಡಿಎಸ್ ವಿರೋಧ ವ್ಯಕ್ತಪಡಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲೆಯ ರೋಣ ವಿಧಾನಸಭಾ ಕ್ಷೇತ್ರದ 200 ಕೋಟಿ ರೂಪಾಯಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿ, ಸಿರಿ ದಾನ್ಯ ಉತ್ಪಾದನೆಯ ಲೋಕಾರ್ಪಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. 1,20,000 ಕೋಟಿ ಹಣವನ್ನು ಈ ವರ್ಷ ರಾಜ್ಯ ಸರ್ಕಾರ ಅಭಿವೃದ್ಧಿಗೆ ಮೀಸಲಿಟ್ಟಿದ್ದೇವೆ. ಇದಲ್ಲದೆ 52000 ಕೋಟಿ ರೂಪಾಯಿಯನ್ನು ಗ್ಯಾರಂಟಿಗಳ ಮೂಲಕ ರಾಜ್ಯದ ಜನರ ಜೇಬಿಗೆ ನೇರವಾಗಿ ಹಾಕುತ್ತಿದ್ದೇವೆ. ಹೀಗಿದ್ದೂ ಬಿಜೆಪಿ ಬುರುಡೆ ಬಿಡುತ್ತಿದೆ. ರಾಜ್ಯ ಸರ್ಕಾರದ ಬಳಿ ಅಭಿವೃದ್ಧಿಗೆ ಹಣ ಇಲ್ಲ ಎಂದು ಪದೇ ಪದೇ ಸುಳ್ಳು ಹೇಳಿ ಅವರ ಸುಳ್ಳನ್ನು ಸತ್ಯ ಎಂದು ಬಿಂಬಿಸಲು ಯತ್ನಿಸುತ್ತಿದ್ದಾರೆ. ಆದರೆ ರಾಜ್ಯದ ಜನತೆ ಇವರ ಸುಳ್ಳು ನಂಬುವಷ್ಟು ಮೂರ್ಖರಲ್ಲ ಎಂದರು. ರಾಜ್ಯದ 4.5 ಕೋಟಿ ಮಂದಿ ಗ್ಯಾರಂಟಿ ಯೋಜನೆಗಳ ನೇರ ಲಾಭ ಪಡೆಯುತ್ತಿದ್ದಾರೆ. ಇದಲ್ಲದೆ ರಸ್ತೆ, ನೀರು, ಕೃಷಿ,…
ಬೆಂಗಳೂರು: ಕೆಲ ದಿನಗಳ ಹಿಂದೆ ಮುರುಡೇಶ್ವರಕ್ಕೆ ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದಂತ ಶಾಲಾ ಮಕ್ಕಳು ಸಮುದ್ರಪಾಲಾಗಿ ಹೋಗಿದ್ದರು. ನೀವು ಸಮುದ್ರ ದಂಡೆಗೆ ಪ್ರವಾಸಕ್ಕೆ ತೆರಳುತ್ತಿದ್ದರೇ ಅದಕ್ಕೂ ಮುನ್ನಾ ಈ ಕೆಳಗಿನ ವಿಷಯಗಳು ತಿಳಿದಿರಲಿ. ಅದೇನು ಅಂತ ಮುಂದೆ ಓದಿ. ಈ ಮಾಹಿತಿಯನ್ನು ಮಾಜಿ ಸಚಿವ ಎಸ್ ಸುರೇಶ್ ಕುಮಾರ್ ಅವರು ತಮ್ಮ ಫೇಸ್ ಬುಕ್ ಮುಖಪುಟದಲ್ಲಿ ಶೇರ್ ಮಾಡಿದ್ದಾರೆ. ಅದರಲ್ಲಿ ಶಿಕ್ಷಣ ಇಲಾಖೆಯ ಒಂದು ಭಾಗವಾದ ಡಯಟ್ ನ ಮಂಗಳೂರು ಜಿಲ್ಲೆಯ ನಿವೃತ್ತ ಪ್ರವಾಚಕರಾದ (Reader) ದಿವಾಕರ್ ಶೆಟ್ಟಿ ಎಂಬುವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಒಂದು ಮಹತ್ವದ ಮಾಹಿತಿ ಇದು ಎಂದು ಹೇಳಿದ್ದಾರೆ. ಕರ್ನಾಟಕದ ಶಿಕ್ಷಣ ಇಲಾಖೆ ಎಲ್ಲಾ ಶಾಲೆಗಳಿಗೆ ಮತ್ತು ಕಾಲೇಜುಗಳಿಗೆ ಈ ಮಾಹಿತಿಯನ್ನು ಕಳಿಸಿ ಎಲ್ಲರಿಗೂ ಈ ಕುರಿತು ತಿಳುವಳಿಕೆ ಕೊಡುವುದು ಅತ್ಯಗತ್ಯ. ನಾನು ಈ ಮಾಹಿತಿಯನ್ನು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಶಿಕ್ಷಣ ಇಲಾಖೆಯ ಆಯುಕ್ತರ ಜೊತೆಯೂ ಹಂಚಿಕೊಂಡಿದ್ದೇನೆ ಎಂದಿದ್ದಾರೆ. ಸಮುದ್ರ ದಂಡೆಗೆ ಭೇಟಿ ನೀಡುವ ಎಲ್ಲರಿಗೂ ಈ…