Subscribe to Updates
Get the latest creative news from FooBar about art, design and business.
Author: kannadanewsnow09
ವಿಜಯಪುರ: ಜಿಲ್ಲೆಯಲ್ಲಿ ಮಾಜಿ ಕಾರ್ಪೊರೇಟರ್ ಒಬ್ಬರ ಪುತ್ರ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ಇಂದು ನಡೆದಿದೆ. ವಿಜಯಪುರದಲ್ಲಿ ಮಾಜಿ ಕಾರ್ಪೊರೇಟರ್ ಪುತ್ರ ಆತ್ಮಹತ್ಯೆಗೆ ಶರಣಾಗಿದ್ದಾನೆ. ತಲೆಗೆ ಗುಂಡು ಹಾರಿಸಿಕೊಂಡು ಅಶನಾಮ್ ಪ್ರಕಾಶ್(22) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ಶರಣಾದಂತ ಅಶನಾಮ್ ಪ್ರಕಾಶ್ ವಿಜಯಪುರದ ಮಾಜಿ ಕಾರ್ಪೊರೇಟರ್ ಪ್ರಕಾಶ್ ಮಿರ್ಜಿ ಅವರ ಪುತ್ರರಾಗಿದ್ದಾರೆ. ವಿಜಯಪುರ ನಗರದ ಶಿಕಾರಿಖಾನೆ ಏರಿಯಾದ ಮನೆಯಲ್ಲಿ ಈ ಘಟನೆ ನಡೆದಿದೆ. https://kannadanewsnow.com/kannada/hc-stays-bescom-prepaid-meter-charges/ https://kannadanewsnow.com/kannada/minister-madhu-bangarappa-condoles-the-death-of-former-minister-begane-ramayya/
ಬೆಂಗಳೂರು: ಬೆಸ್ಕಾಂ ಪ್ರೀಪೇಯ್ಡ್ ಮೀಟರ್ ಶುಲ್ಕಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಈ ಮೂಲಕ ಬೆಸ್ಕಾಂ ಗ್ರಾಹಕರಿಗೆ ಬಿಗ್ ರಿಲೀಫ್ ನೀಡಿದೆ. ಬೆಸ್ಕಾಂನಿಂದ ಸ್ಮಾರ್ಟ್ ಪ್ರೀಪೇಯ್ಡ್ ಮೀಟರ್ ಕಡ್ಡಾಯ ವಿಚಾರವಾಗಿ ಬೆಸ್ಕಾಂ ಕ್ರಮ ಪ್ರಶ್ನಿಸಿ ಜಯಲಕ್ಷ್ಮೀ ಎಂಬುವರಿಂದ ರಿಟ್ ಅರ್ಜಿ ಸಲ್ಲಿಸಿದ್ದರು. 2000 ರೂಪಾಯಿ ಇದ್ದ ಮೀಟರ್ ಈಗ 8910 ರೂ ಕೊಡಬೇಕಾಗಿದೆ. ಬೇರೆ ರಾಜ್ಯಗಳಲ್ಲಿ 900 ರೂ ಗಳಿಗೆ ಪ್ರೀಪೆಯ್ಡ್ ಮೀಟರ್ ನೀಡಲಾಗುತ್ತಿದೆ. ಕೆಇಆರ್ ಸಿ ಸ್ಮಾರ್ಟ್ ಮೀಟರ್ ಕಡ್ಡಾಯವಲ್ಲವೆಂದಿತ್ತು. ಆದರೇ ಬೆಸ್ಕಾಂ ಸುತ್ತೋಲೆ ಸ್ಮಾರ್ಟ್ ಮೀಟರ್ ಕಡ್ಡಾಯ ಎಂದಿದೆ ಎಂಬುದಾಗಿ ಅರ್ಜಿದಾರರ ಪರ ಹಿರಿಯ ವಕೀಲ ಪ್ರಭುಲಿಂಗ ನಾವದಗಿ ವಾದ ಮಂಡಿಸಿದರು. ಈ ವೇಳೆ ದುಬಾರಿ ಪ್ರೀಪೆಯ್ಡ್ ವಿದ್ಯುತ್ ಮೀಟರ್ ಗೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತು. ನಿಮ್ಮಿಂದ ಯಾರು ಫ್ರೀ ವಿದ್ಯುತ್ ಕೇಳಿದ್ದರು ಎಂಬುದಾಗಿ ಹೈಕೋರ್ಟ್ ಪ್ರಶ್ನೆ ಮಾಡಿತು. ಬಡವರಿಂದ ಇಷ್ಟು ಹಣ ಕಿತ್ತರೆ ಎಲ್ಲಿಗೆ ಹೋಗಬೇಕು ಎಂಬುದಾಗಿ ಪ್ರಶ್ನಿಸಿತು. ಎಲ್ಲರೂ ಸ್ಮಾರ್ಟ್ ಮೀಟರ್ ಹಾಕಬೇಕೆಂದರೇ ಬಡವರೇನು ಮಾಡಬೇಕು. ನ್ಯಾ.ಎಂ ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಅಸಮಾಧಾನ ವ್ಯಕ್ತಪಡಿಸಿತು. ಅಲ್ಲದೇ ಬೆಸ್ಕಾಂ ಪ್ರೀಪೇಯ್ಡ್…
ನವದೆಹಲಿ: ಎರಡು ದಿನಗಳ ಹಿಂದೆ ಪಾಕಿಸ್ತಾನ ಗಡಿಯನ್ನು ಅಕಸ್ಮಾತ್ ಪ್ರವೇಶಿಸಿದ್ದಂತ ಭಾರತೀಯ ಯೋಧ ಪಿ.ಕೆ ಸಾಹು ಅನ್ನು ಪಾಕಿಸ್ತಾನ ರೇಂಜರ್ಸ್ ಬಂಧಿಸಿದ್ದರು. ಅವರನ್ನು ಬಿಡುಗಡೆಗೆ ಪಾಕಿಸ್ತಾನ ನಕಾರ ವ್ಯಕ್ತಪಡಿಸಿದೆ. ಅಂತಾರಾಷ್ಟ್ರೀಯ ಗಡಿ ರೇಖೆ ದಾಟಿ ಪಾಕ್ ನೊಳಗೆ ಪ್ರವೇಶವನ್ನು ಭಾರತೀಯ ಯೋಧ ಪಿ.ಕೆ ಸಾಹು ಮಾಡಿದ್ದರು. ಈ ವೇಳೆ ಪಾಕ್ ಯೋಧರು ಅವರನ್ನು ವಶಕ್ಕೆ ಪೆಡದಿದ್ದರು. ಪಾಕ್ ಪ್ರದೇಶದ ಹೊಲದಲ್ಲಿ ಕೆಲಸ ಮಾಡ್ತಿದ್ದಂತ ರೈತರೊಂದಿಗೆ ಗೊತ್ತಿಲ್ಲದೇ ಬಿಎಸ್ಎಫ್ ಯೋಧ ಸಾಹು ಪಾಕ್ ನೊಳಗೆ ಪ್ರವೇಶಿಸಿದ್ದರು. ಅವರನ್ನು ಬಂಧಿಸಿದ್ದಂತ ಪಾಕಿಸ್ತಾನ, ಯೋಧನ ಪೋಟೋಕೂಡ ಬಿಡುಗಡೆ ಮಾಡಿತ್ತು. ನಿನ್ನೆ ರೇಂಜರ್ ಗಳು ಬಾರದ ಕಾರಣ ನಿನ್ನೆ ಧ್ವಜ ಸಭೆ ನಡೆದಿರಲಿಲ್ಲ. ಇದೀಗ ಅವರನ್ನು ಬಿಡುಗಡೆಗೆ ಪಾಕ್ ನಿರಾಕರಿಸಿದೆ ಎನ್ನಲಾಗುತ್ತಿದೆ. ಮತ್ತೊಂದೆಡೆ ಅವರನ್ನು ಮರಳಿ ಕರೆತರುವಂತೆ ಕುಟುಂಬಸ್ಥರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ನವದೆಹಲಿ: ವಕ್ಫ್ ಕಾನೂನಿಗೆ ತಂದ ತಿದ್ದುಪಡಿಗಳನ್ನು ಸಮರ್ಥಿಸಿಕೊಂಡ ಕೇಂದ್ರ ಸರ್ಕಾರ, ಧರ್ಮ ಮತ್ತು ಆಸ್ತಿಯ ಆಧಾರದ ಮೇಲೆ ಸವಾಲುಗಳನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿರುವಾಗ ನಿಬಂಧನೆಗಳ ಯಾವುದೇ ಮಧ್ಯಂತರ ವಿರಾಮದ ವಿರುದ್ಧ ಶುಕ್ರವಾರ ವಾದಿಸಿತು. ಈ ತಿಂಗಳ ಆರಂಭದಲ್ಲಿ, ಸುಪ್ರೀಂ ಕೋರ್ಟ್ ವಕ್ಫ್ ಕಾಯ್ದೆ, 2025 ರ ಮೂರು ನಿಬಂಧನೆಗಳಿಗೆ ಮಧ್ಯಂತರ ವಿರಾಮ ನೀಡಿತು. ‘ಬಳಕೆದಾರರಿಂದ ವಕ್ಫ್’ ತೆಗೆದುಹಾಕುವುದು, ವಕ್ಫ್ ಮಂಡಳಿಗಳಲ್ಲಿ ಮುಸ್ಲಿಮೇತರರನ್ನು ಸೇರಿಸುವುದು. ವಿವಾದಿತ ಸರ್ಕಾರಿ ಭೂಮಿಯಲ್ಲಿ ವಕ್ಫ್ನ ಸ್ಥಾನಮಾನವನ್ನು ನಿರ್ಧರಿಸುವಾಗ ಕಲೆಕ್ಟರ್ನ ಅಧಿಕಾರಗಳ ಬಗ್ಗೆ ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿದೆ. ಸುಪ್ರೀಂ ಕೋರ್ಟ್ನ ಮಧ್ಯಂತರ ತಡೆಯಾಜ್ಞೆಯ ಒಂದು ದಿನದ ನಂತರ, ಕೇಂದ್ರವು ವಕ್ಫ್ ಸ್ವರೂಪದಲ್ಲಿ ಯಾವುದೇ ಬದಲಾವಣೆ ಮಾಡುವುದಿಲ್ಲ ಅಥವಾ ಅದಕ್ಕೆ ಯಾವುದೇ ನೇಮಕಾತಿಗಳನ್ನು ಮಾಡುವುದಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದೆ.
ಮೈಸೂರು/ ಮಂಡ್ಯ: “ಬಿಡದಿ ಸೇರಿದಂತೆ ಏಳು ಕಡೆ ಟೌನ್ ಶಿಪ್ ಮಾಡಲು ಹೊರಟಿದ್ದವರು ಹಾಗೂ ಈ ಯೋಜನೆಯ ಪಿತಾಮಹರೇ ಕುಮಾರಸ್ವಾಮಿ. ಈಗ ಅವರ ಕುಟುಂಬದವರೇ ವಿರೋಧ ಮಾಡಿದರೆ ಯಾವ ನ್ಯಾಯ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು. ಮೈಸೂರಿನಲ್ಲಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಬಿಡದಿ ಟೌನ್ ಶಿಪ್ ಗೆ ದೇವೇಗೌಡರು ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಕೇಳಿದಾಗ, “ದೇವೇಗೌಡರು ದೊಡ್ಡವರು. ಪಾಪ ಅವರು ಮರೆತಿರಬೇಕು. ಬಿಡದಿ, ಸಾತನೂರು, ನಂದಗುಡಿ ಈ ಭಾಗದಲ್ಲಿ ಟೌನ್ ಶಿಪ್ ಗೆ ನೋಟಿಫಿಕೇಶನ್ ಹೊರಡಿಸಿದ್ದು ಅವರ ಸುಪುತ್ರ ಕುಮಾರಸ್ವಾಮಿ. ಅವರೇ ಈ ತೀರ್ಮಾನ ಮಾಡಿ ಡಿಎಲ್ ಎಫ್ ಅವರಿಂದ 300 ಕೋಟಿ ರೂ. ಹಣ ಕಟ್ಟಿಸಿಕೊಂಡಿದ್ದರು. ಆನಂತರ ಬಿಜೆಪಿ ಸರ್ಕಾರ ಬಂದಾಗ ಯೋಜನೆ ಮಾಡಲು ಸಾಧ್ಯವಿಲ್ಲ ಎಂದು ಹಣ ವಾಪಸ್ ನೀಡಿದ್ದರು” ಎಂದು ನೆನಪಿಸಿದರು. “ನಾನು ಈಗ ಯಾವುದೇ ಜಮೀನು ಡಿನೋಟಿಫಿಕೇಷನ್ ಮಾಡಲು ತಯಾರಿಲ್ಲ. ಇದು ಮಾಡಿದ ತಕ್ಷಣ ದುಡ್ಡು-ಕಾಸು ಹೊಡೆದರು ಎನ್ನುವ…
ಬೆಂಗಳೂರು: ಇಸ್ರೋ ಮಾಜಿ ಅಧ್ಯಕ್ಷ ಕೆ.ಕಸ್ತೂರಿರಂಗನ್ ಅವರು ಇಂದು ನಿಧನರಾಗಿದ್ದಾರೆ. ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ. ಈ ಸಂಬಂಧ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಬಾಹ್ಯಾಕಾಶ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತದ ಕೀರ್ತಿಪತಾಕೆಯನ್ನು ಆಗಸದೆತ್ತರಕ್ಕೆ ಹಾರಿಸಿದ್ದ ಖ್ಯಾತ ಖಭೌತ ವಿಜ್ಞಾನಿ ಡಾ.ಕೆ.ಕಸ್ತೂರಿ ರಂಗನ್ ಅವರ ನಿಧನದಿಂದ ಆಘಾತವಾಗಿದೆ. ಕರ್ನಾಟಕ ಮೂಲದ ಡಾ.ಕಸ್ತೂರಿರಂಗನ್ ಅವರಿಗೆ ನಮ್ಮ ರಾಜ್ಯದ ಬಗ್ಗೆ ಅಪಾರವಾದ ಪ್ರೀತಿ ಮತ್ತು ಕಾಳಜಿ ಇತ್ತು ಎಂದಿದ್ದಾರೆ. ಭಾರತದ ಹೆಮ್ಮೆಯ ಇಸ್ರೋ ಸಂಸ್ಥೆಗೆ ದೀರ್ಘ ಕಾಲ ಅಧ್ಯಕ್ಷರಾಗಿ ಮತ್ತು ಕೇಂದ್ರದ ಬಾಹ್ಯಾಕಾಶ ಮಂಡಳಿಯ ನಿರ್ದೇಶಕರಾಗಿ ಡಾ.ಕಸ್ತೂರಿ ರಂಗನ್ ಅವರು ಸಲ್ಲಿಸಿದ ಸೇವೆಯಿಂದಾಗಿ ಭಾರತ ಇಂದು ಬಾಹ್ಯಾಕಾಶ ವಿಜ್ಞಾನ ಕ್ಷೇತ್ರದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುವಂತಾಗಿದೆ ಎಂದು ಹೇಳಿದ್ದಾರೆ. ಡಾ.ಕಸ್ತೂರಿ ರಂಗನ್ ಅವರನ್ನು ಕಳೆದುಕೊಂಡಿರುವ ಅವರ ಕುಟುಂಬದ ಸದಸ್ಯರು ಮತ್ತು ಅಭಿಮಾನಿಗಳ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಮೃತರ ಆತ್ಮಕ್ಕೆ ಶಾಂತಿಯನ್ನು ಕೋರುತ್ತೇನೆ ಎಂದಿದ್ದಾರೆ. https://twitter.com/siddaramaiah/status/1915693260649173279 https://kannadanewsnow.com/kannada/breaking-fir-filed-against-6-people-on-suspicion-of-murdering-pregnant-woman-over-caste-barrier-to-falling-in-love-on-instagram/ https://kannadanewsnow.com/kannada/minister-madhu-bangarappa-condoles-the-death-of-former-minister-begane-ramayya/
ನವದೆಹಲಿ: ಗೃಹ ಸಚಿವಾಲಯವು ರಾಜ್ಯಗಳು ತಮ್ಮ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಅಥವಾ ವಾಸಿಸುತ್ತಿರುವ ಎಲ್ಲಾ ಪಾಕಿಸ್ತಾನಿ ಪ್ರಜೆಗಳನ್ನು ಗುರುತಿಸಿ ಗಡೀಪಾರು ಮಾಡುವಂತೆ ಕೇಳಿಕೊಂಡಿದೆ ಎಂದು ಮೂಲಗಳು ತಿಳಿಸಿವೆ., ಗೃಹ ಸಚಿವ ಅಮಿತ್ ಶಾ ಅವರು ಎಲ್ಲಾ ಮುಖ್ಯಮಂತ್ರಿಗಳೊಂದಿಗೆ ವೈಯಕ್ತಿಕವಾಗಿ ಮಾತನಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಐದು ಹಂತದ ರಾಜತಾಂತ್ರಿಕ ಪ್ರತಿದಾಳಿಯ ಭಾಗವಾಗಿ ಪಾಕಿಸ್ತಾನಿ ಪ್ರಜೆಗಳಿಗೆ ಎಲ್ಲಾ ವೀಸಾಗಳನ್ನು ರದ್ದುಗೊಳಿಸಲಾಗಿದೆ ಎಂದು ಬುಧವಾರ ಭಾರತ ಹೇಳಿದೆ. ನಿರ್ದಿಷ್ಟವಾಗಿ, ಏಪ್ರಿಲ್ 27 ರಿಂದ ಜಾರಿಗೆ ಬರುವಂತೆ ಎಲ್ಲಾ ವೀಸಾಗಳನ್ನು ರದ್ದುಗೊಳಿಸಲಾಗುವುದು ಎಂದು ಭಾರತ ಹೇಳಿದೆ. ವೈದ್ಯಕೀಯ ವೀಸಾಗಳು ಹೆಚ್ಚುವರಿ 48 ಗಂಟೆಗಳವರೆಗೆ ಮಾತ್ರ ಮಾನ್ಯವಾಗಿರುತ್ತವೆ ಎಂದು ಸರ್ಕಾರ ಹೇಳಿದೆ. ಆದಾಗ್ಯೂ, ಹಿಂದೂ ಪಾಕ್ ಪ್ರಜೆಗಳಿಗೆ ದೀರ್ಘಾವಧಿಯ ವೀಸಾಗಳು ಮಾನ್ಯವಾಗಿರುತ್ತವೆ ಎಂದು ಸರ್ಕಾರ ಹೇಳಿದೆ. ದಾಳಿಯ ಯೋಜನೆ ಮತ್ತು ಕಾರ್ಯಗತಗೊಳಿಸುವಿಕೆಯಲ್ಲಿ ಪಾಕಿಸ್ತಾನ ಭಾಗಿಯಾಗಿದೆ ಎಂಬುದಕ್ಕೆ ತನ್ನ ಬಳಿ ಪುರಾವೆಗಳಿವೆ ಎಂದು ಭಾರತ ಹೇಳಿದೆ. ಗುರುವಾರ ಅಮೆರಿಕ,…
ಚಾಮರಾಜನಗರ : ಎಲ್ಲಾ ಜಾತಿ ಮತ್ತು ಎಲ್ಲಾ ಧರ್ಮದ ಬಡವರಿಗೆ ನೆರವಾಗುವ ರೀತಿಯಲ್ಲಿ ಹಾಸ್ಟೆಲ್ ಮತ್ತು ಶಿಕ್ಷಣ ಸಂಸ್ಥೆಗಳನ್ನು ನಿರ್ಮಿಸಿ. ಇದರಿಂದ ಅಂಬೇಡ್ಕರ್ ಅವರ ಸಮಾನತೆಯ ಅವಕಾಶ ಈಡೇರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಜಿಲ್ಲಾ ಕುರುಬರ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಕನಕ ಸಮುದಾಯ ಭವನಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಈಗಾಗಲೇ 2 ಕೋಟಿ ರೂಪಾಯಿಯಲ್ಲಿ 50 ಲಕ್ಷ ರೂಪಾಯಿ ಬಿಡುಗಡೆ ಆಗಿದೆ. ಹಲವರು ದೇಣಿಗೆ ಕೂಡ ಕೊಟ್ಟಿದ್ದಾರೆ. ಇವರೆಲ್ಲರಿಗೂ ಒಳ್ಳೆಯದಾಗಲಿ ಎಂದರು. ಸಮುದಾಯ ಭವನ ಕಟ್ಟಿ. ಆದರೆ, ಇದಕ್ಕಿಂತ ಹೆಚ್ಚಾಗಿ ಹಾಸ್ಟೆಲ್ ಮತ್ತು ಶಿಕ್ಷಣ ಸಂಸ್ಥೆ ನಿರ್ಮಿಸಿ, ಜಿಲ್ಲೆಯ ಎಲ್ಲಾ ಹಿಂದುಳಿದ ಸಮುದಾಯಗಳ ಬಡ ಮಕ್ಕಳಿಗೆ ಶೈಕ್ಷಣಿಕ ನೆರವು ದೊರಕುವಂತೆ ಮಾಡಿ ಎಂದು ಕರೆ ನೀಡಿದರು. ಚಾಮರಾಜನಗರ ಜಿಲ್ಲೆ ಅತ್ಯಂತ ಹಿಂದುಳಿದಿರುವ ಜಿಲ್ಲೆ. ಇಲ್ಲಿ ಶಿಕ್ಷಣ ಹೆಚ್ಚೆಚ್ಚು ಸಿಗಬೇಕಿದೆ. ಶಿಕ್ಷಣ ಕಲಿಯಬೇಕಿದ್ದರೆ ಹಾಸ್ಟೆಲ್ ಗಳ ಅಗತ್ಯವೂ ಇದೆ. ನಮ್ಮ ಸರ್ಕಾರ ಎಲ್ಲಾ ಜಾತಿಯ ಬಡವರಿಗೂ ಅನುಕೂಲ…
ನವದೆಹಲಿ: ಭಾರತೀಯ ವಾಯುಪಡೆಯು ರಫೇಲ್ ಯುದ್ಧ ವಿಮಾನಗಳ ನೇತೃತ್ವದಲ್ಲಿ ತನ್ನ ಮುಖ್ಯವಾಹಿನಿಯ ಯುದ್ಧ ವಿಮಾನಗಳ ನೌಕಾಪಡೆಗಳನ್ನು ಒಳಗೊಂಡಂತೆ ಕೇಂದ್ರ ವಲಯದ ದೊಡ್ಡ ಪ್ರದೇಶದಲ್ಲಿ ವ್ಯಾಯಾಮ ಅಕ್ರಮನ್ (ದಾಳಿ)ಯ ಸಮರಾಭ್ಯಾಸವನ್ನು ನಡೆಸುತ್ತಿದೆ. ಭಾರತೀಯ ವಾಯುಪಡೆಯು ಪಶ್ಚಿಮ ಬಂಗಾಳದ ಅಂಬಾಲಾ ಮತ್ತು ಹಶಿಮಾರಾದಿಂದ ನೆಲೆಗೊಂಡಿರುವ ರಫೇಲ್ ವಿಮಾನದ ಎರಡು ಸ್ಕ್ವಾಡ್ರನ್ಗಳನ್ನು ನಿರ್ವಹಿಸುತ್ತದೆ. ಅತ್ಯಾಧುನಿಕ ತಂತ್ರಜ್ಞಾನದ ಯುದ್ಧ ವಿಮಾನಗಳು ನೆಲದ ದಾಳಿ ಮತ್ತು ಎಲೆಕ್ಟ್ರಾನಿಕ್ ಯುದ್ಧ ಕವಾಯತುಗಳನ್ನು ಒಳಗೊಂಡ ಸಂಕೀರ್ಣ ಕಾರ್ಯಾಚರಣೆಗಳನ್ನು ನಡೆಸುತ್ತಿವೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ. ಭಾರತೀಯ ವಾಯುಪಡೆಯ ಸ್ವತ್ತುಗಳನ್ನು ಪೂರ್ವ ಭಾಗದಿಂದ ಸೇರಿದಂತೆ ಬಹು ವಾಯುನೆಲೆಗಳಿಂದ ಸ್ಥಳಾಂತರಿಸಲಾಗಿದೆ ಎಂದು ಅವರು ಹೇಳಿದರು. ಬಯಲು ಮತ್ತು ಪರ್ವತ ಪ್ರದೇಶಗಳು ಸೇರಿದಂತೆ ವಿವಿಧ ಭೂಪ್ರದೇಶಗಳಲ್ಲಿನ ಕಾರ್ಯಾಚರಣೆಗಳಿಗಾಗಿ ಸಂಕೀರ್ಣವಾದ ನೆಲದ ದಾಳಿ ಕಾರ್ಯಾಚರಣೆಗಳಿಗಾಗಿ ಭಾರತೀಯ ವಾಯುಪಡೆಯು ಅಭ್ಯಾಸ ಮಾಡುತ್ತಿದೆ ಎಂದು ಮೂಲಗಳು ತಿಳಿಸಿವೆ. ಭಾರತೀಯ ವಾಯುಪಡೆಯು ಉಲ್ಕಾಶಿಲೆಯ ಗಾಳಿಯಿಂದ ಗಾಳಿಗೆ ಕ್ಷಿಪಣಿಗಳನ್ನು ಸೇರಿಸುವ ಮೂಲಕ ಮತ್ತು ರಾಂಪೇಜ್ ಮತ್ತು ರಾಕ್ಸ್ನಂತಹ ದೀರ್ಘ ವ್ಯಾಪ್ತಿಯ ಹೈ ಸ್ಪೀಡ್…
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಮಾಡಿದ ಬೆಲೆ ಏರಿಕೆಯ ವಿರುದ್ಧ ಬೆಂಗಳೂರಿನಲ್ಲಿ ಬಿಜೆಪಿ ಹೋರಾಟ ಮಾಡಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ವಲಯ ಆಯುಕ್ತರ ಕಚೇರಿಯ ಮುಂದೆ ಏಪ್ರಿಲ್ 28 ರಿಂದ ಮೂರು ದಿನಗಳ ಕಾಲ ಹೋರಾಟ ಮಾಡಲಾಗುತ್ತದೆ. ಹಾಲು, ವಿದ್ಯುತ್ ಹಾಗೂ ಆಸ್ತಿ ತೆರಿಗೆ ಹಾಗೂ ಪಾರ್ಕಿಂಗ್ ಶುಲ್ಕದ ಬಗ್ಗೆ ಹೋರಾಟ ಮಾಡಲಾಗುವುದು. ಬೆಂಗಳೂರಿನ ಜನರ ಮೇಲೆ ಕಾಂಗ್ರೆಸ್ ಭರಪೂರ ತೆರಿಗೆಗಳನ್ನು ಹೇರಿದೆ. ಪ್ರತಿ ಮನೆಗಳಿಗೆ ಹೋಗಿ ಕರಪತ್ರ ಹಂಚಲಾಗುವುದು. ಬಿಬಿಎಂಪಿ ಚುನಾವಣೆಯನ್ನು ಸರ್ಕಾರ ಮುಂದೂಡುತ್ತಿದೆ. ಈ ಬಗ್ಗೆ ಕೂಡ ಹೋರಾಟ ಮಾಡಲಾಗುವುದು ಎಂದು ತಿಳಿಸಿದರು. ಶಾಸಕರ ಅಮಾನತಿಗೆ ಸಂಬಂಧಿಸಿದಂತೆ ಸ್ಪೀಕರ್ ಜೊತೆ ಚರ್ಚಿಸಲಾಗಿದೆ. ಈ ಅಮಾನತು ಆ ಒಂದು ಅಧಿವೇಶನಕ್ಕೆ ಮಾತ್ರ ಸೀಮಿತವಾಗಬೇಕು. ಅದನ್ನು ಬಿಟ್ಟು ಹೊರಗೆ ಭತ್ಯೆ ಕೊಡುವುದಿಲ್ಲ ಎನ್ನುವುದು ಸರಿಯಲ್ಲ. ಇದು ಅಸಂವಿಧಾನಿಕವಾದ ಕ್ರಮ ಎಂದರು. ಗ್ರೇಟರ್ ಬೆಂಗಳೂರು ವಿಧೇಯಕದ ವಿರುದ್ಧ ಕಾನೂನು ಹೋರಾಟ ಮಾಡಲಾಗುವುದು. ರಾಜ್ಯಪಾಲರು…











