Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ದೆಹಲಿಯ ಕಾವೇರಿ ಅಪಾರ್ಟ್ಮೆಂಟ್ನಲ್ಲಿ ಶನಿವಾರ ಮಧ್ಯಾಹ್ನ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯನ್ನು ನಂದಿಸಲು ಕನಿಷ್ಠ ಆರು ಅಗ್ನಿಶಾಮಕ ದಳದ ವಾಹನಗಳನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಾವೇರಿ ಅಪಾರ್ಟ್ಮೆಂಟ್ನಲ್ಲಿ ಹಲವಾರು ಸಂಸದರ ಫ್ಲಾಟ್ಗಳಿವೆ. ದೆಹಲಿ ಅಗ್ನಿಶಾಮಕ ಸೇವೆಗಳ ಪ್ರಕಾರ, ಮಧ್ಯಾಹ್ನ 1.22 ರ ಸುಮಾರಿಗೆ ಬೆಂಕಿಯ ಬಗ್ಗೆ ಮಾಹಿತಿ ಬಂದ ನಂತರ ಅದು ತನ್ನ ತಂಡಗಳನ್ನು ನಿಯೋಜಿಸಿತು. ಬ್ರಹ್ಮಪುತ್ರ ಅಪಾರ್ಟ್ಮೆಂಟ್ಸ್, ರಾಜ್ಯಸಭಾ ಸಂಸದರ ವಸತಿ ಸಂಕೀರ್ಣವಾಗಿದ್ದು, ನವದೆಹಲಿಯ ಡಾ. ಬಿಶಂಬರ ದಾಸ್ ಮಾರ್ಗದಲ್ಲಿದೆ. https://twitter.com/ANI/status/1979465333997211761
ಮೈಸೂರು: ಸಂಘ ಪರಿವಾರ ಮತ್ತು RSS ನವರು ಅಂಬೇಡ್ಕರ್ ಅವರ ಸಂವಿಧಾನವನ್ನು ವಿರೋಧಿಸಿದ್ದರು. ಈಗಲೂ ವಿರೋಧಿಸುತ್ತಿದ್ದಾರೆ. ಹೀಗಾಗಿ ಇವರ ಬಗ್ಗೆ ಎಚ್ಚರಿಕೆ ಇಂದ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆಕೊಟ್ಟರು. ಮೈಸೂರು ವಿಶ್ವ ವಿದ್ಯಾಲಯದ ರಜತ ಮಹೋತ್ಸವ ಹಾಗೂ ನೂತನ ಜ್ಞಾನ ದರ್ಶನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು. ಅಂಬೇಡ್ಕರ್ ಅವರು ತಮ್ಮ ಜ್ಞಾನವನ್ನು ಸಮಾಜದ ಬದಲಾವಣೆಗೆ ಬಳಸಿದ ಮಹಾನ್ ಚೇತನ. ಇವರು ಸಮಾಜವನ್ನು ಅರ್ಥ ಮಾಡಿಕೊಳ್ಳಲು ಜ್ಞಾನ ಸಂಪಾದನೆ ಮಾಡಿದರು. ಬಳಿಕ ತಮ್ಮ ಜ್ಞಾನವನ್ನು ಬದುಕಿನುದ್ದಕ್ಕೂ ಸಮಾಜದ ಬದಲಾವಣೆಗೆ ಬಳಸಿದರು ಎಂದು ಮೆಚ್ಚುಗೆ ಸೂಚಿಸಿದರು. ಅಂಬೇಡ್ಕರ್ ಅವರ ಹೆಸರಲ್ಲಿ ಬಿಜೆಪಿಯವರು, ಸಂಘ ಪರಿವಾರದವರು ಅಪಪ್ರಚಾರ ಮಾಡುತ್ತಿದ್ದಾರೆ. ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದು ಕಾಂಗ್ರೆಸ್ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಆದರೆ, ಸತ್ಯ ಏನೆಂದರೆ “ನನ್ನನ್ನು ಚುನಾವಣೆಯಲ್ಲಿ ಸೋಲಿಸಿದ್ದು ಸಾವರ್ಕರ್ ಮತ್ತು ಡಾಂಗೆ” ಎಂದು ಸ್ವತಃ ಅಂಬೇಡ್ಕರ್ ಅವರೇ ತಮ್ಮದೇ ಹಸ್ತಾಕ್ಷರದಲ್ಲಿ ಬರೆದಿದ್ದಾರೆ. ಇಂಥಾ ಸತ್ಯಗಳನ್ನು ಸಮಾಜದ ಮುಂದಿಟ್ಟು ಸಂಘ ಪರಿವಾರದ ಸುಳ್ಳುಗಳನ್ನು ಬಹಿರಂಗಗೊಳಿಸಬೇಕು…
ಫೋನ್ಗಳು ನಮ್ಮ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿ ಮಾರ್ಪಟ್ಟಿವೆ. ಅದು ಪ್ರಾಯೋಗಿಕವಾಗಿ ನಮ್ಮ ಕೈಗಳ ವಿಸ್ತರಣೆಯಾಗಿದೆ. ಫೋನ್ ಇಲ್ಲದೆ ಬದುಕುವುದು ಅನೇಕರಿಗೆ ವೈಯಕ್ತಿಕ ನರಕವಾಗಿದೆ ಮತ್ತು ನಮ್ಮ ಕೈಯಲ್ಲಿರುವ ಸಣ್ಣ ಡಿಜಿಟಲ್ ಇಟ್ಟಿಗೆ ನಮ್ಮ ಡಿಜಿಟಲ್ ಜೀವನದ ಬಹುಭಾಗವನ್ನು ಹಿಡಿದಿಟ್ಟುಕೊಳ್ಳುತ್ತದೆ – ಸಾಮಾಜಿಕ ಮಾಧ್ಯಮದಿಂದ ಕೆಲಸದ ಇಮೇಲ್ಗಳವರೆಗೆ ಬ್ಯಾಂಕಿಂಗ್ವರೆಗೆ – ಇಂದಿನ ಜಗತ್ತಿನಲ್ಲಿ ಫೋನ್ಗಳಿಲ್ಲದ ಜೀವನವನ್ನು ಊಹಿಸಲೂ ಸಾಧ್ಯವಿಲ್ಲ, ಆದ್ದರಿಂದ ಈ ಸಾಧನಗಳನ್ನು ರಕ್ಷಿಸುವುದು ಮುಖ್ಯವಾಗಿದೆ. ನಿಮ್ಮ ಫೋನ್ ಕಾಣೆಯಾಗುವ ಮೊದಲು ಮತ್ತು ನಂತರ ನೀವು ಮಾಡಬೇಕಾದ ಕೆಲವು ವಿಷಯಗಳು ಇಲ್ಲಿವೆ. ಮೂಲಭೂತ ವಿಷಯಗಳೊಂದಿಗೆ ಪ್ರಾರಂಭಿಸೋಣ: ನಿಮ್ಮ ಫೋನ್ ಕಾಣೆಯಾಗುವ ಮೊದಲು ಏನು ಮಾಡಬೇಕು. ನಿಮ್ಮ ಫೋನ್ ಕದ್ದರೆ ಅದನ್ನು ಕಡಿಮೆ ನೋಯುವಂತೆ ಮಾಡಲು ನೀವು ಮಾಡಬಹುದಾದ ವಿಷಯಗಳಿವೆ. ಈ ಕೆಲವು ವೈಶಿಷ್ಟ್ಯಗಳು ಹೆಚ್ಚು ತಾಂತ್ರಿಕ ಸ್ವಭಾವವನ್ನು ಹೊಂದಿರುವುದರಿಂದ, ಜನರು ಸಾಮಾನ್ಯವಾಗಿ ಅವುಗಳನ್ನು ನಿರ್ಲಕ್ಷಿಸುತ್ತಾರೆ. ನಿಮ್ಮ ಸಾಧನವನ್ನು ಸಾಧ್ಯವಾದಷ್ಟು ಸುರಕ್ಷಿತಗೊಳಿಸಿ. ಕನಿಷ್ಠ, ಪಾಸ್ವರ್ಡ್ ಅನ್ನು ಹೊಂದಿಸಿ ಅಥವಾ ಅದನ್ನು ಅನ್ಲಾಕ್ ಮಾಡಲು…
ರಾಯಚೂರು: ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಂತ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಯೊಬ್ಬರನ್ನು ಅಮಾನತುಗೊಳಿಸಲಾಗಿದೆ. ರಾಯಚೂರು ಜಿಲ್ಲೆಯ ಸಿರವಾರದಲ್ಲಿ ಪಿಡಿಒ ಆಗಿ ಪ್ರವೀಣ್ ಕಾರ್ಯನಿರ್ವಹಿಸುತ್ತಿದ್ದರು. ಆರ್ ಎಸ್ ಎಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರಿಂದ ಪ್ರವೀಣ್ ಕುಮಾರ್ ಅವರನ್ನು ಅಮಾನತುಗೊಳಿಸಲಾಗಿದೆ. ರಾಯಚೂರು ಜಿಲ್ಲೆಯ ಸಿರಿವಾರ ತಾಲ್ಲೂಕಿನ ಪಿಡಿಓ ಪ್ರವೀಣ್ ಕುಮಾರ್ ಆರ್ ಎಸ್ ಎಸ್ ನ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಸಮವಸ್ತ್ರ ಧರಿಸಿ ಪಥ ಸಂಚಲನದಲ್ಲಿ ಭಾಗಿಯಾಗಿದ್ದರು. ಈ ಹಿನ್ನಲೆಯಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಯು ಪಿಡಿಓ ಪ್ರವೀಣ್ ಕುಮಾರ್ ಅಮಾತುಗೊಳಿಸಿ ಆದೇಶಿಸಿದೆ. https://kannadanewsnow.com/kannada/recite-this-mantra-of-lakshmi-kubera-on-diwali-and-your-wealth-growth-is-guaranteed/ https://kannadanewsnow.com/kannada/if-rss-is-banned-there-will-be-a-state-and-emergency-situation-mp-basavaraj-bommai/
ದೀಪಾವಳಿ ಎಂದ ಕೂಡಲೇ ಚಿಕ್ಕ ಮಕ್ಕಳಿಗೆ ಮೊದಲು ನೆನಪಿಗೆ ಬರುವುದು ಸಿಹಿತಿಂಡಿಗಳು, ಪಟಾಕಿಗಳು ಮತ್ತು ಹೊಸ ಬಟ್ಟೆಗಳು. ವಯಸ್ಕರಿಗೆ, ದೀಪಾವಳಿಯಂದು ಆಹಾರ ಮತ್ತು ಪೂಜೆ ಅತ್ಯಂತ ಮುಖ್ಯವಾದ ಕೆಲಸ. ಉತ್ತರ ಪ್ರದೇಶದ ಅನೇಕ ಜನರು ಪ್ರತಿ ವರ್ಷ ದೀಪಾವಳಿಯಂದು ಮತ್ತು ದೀಪಾವಳಿಯ ನಂತರ ಬರುವ ಐಪಾಸಿಯ ಅಮಾವಾಸ್ಯೆಯಂದು ಸಮೃದ್ಧ ಜೀವನವನ್ನು ನಡೆಸಲು ಲಕ್ಷ್ಮಿ ಪೂಜೆಯನ್ನು ಮಾಡುತ್ತಾರೆ. ಇದು ಅತ್ಯಂತ ಜನಪ್ರಿಯ ಆಚರಣೆಗಳಲ್ಲಿ ಒಂದಾಗಿದೆ. ಈ ಆಧ್ಯಾತ್ಮಿಕ ಪೋಸ್ಟ್ನಲ್ಲಿ, ಸಮೃದ್ಧ ಜೀವನವನ್ನು ನಡೆಸಲು ಲಕ್ಷ್ಮಿ ಕುಬೇರ ಮಂತ್ರವನ್ನು ನಾವು ನೋಡಲಿದ್ದೇವೆ , ಅಂತಹ ಲಕ್ಷ್ಮಿ ಪೂಜೆಯನ್ನು ಮಾಡಲು ಸಾಧ್ಯವಾಗದವರು ಸಹ ಸಮೃದ್ಧ ಜೀವನವನ್ನು ನಡೆಸಲು ಪಠಿಸಬೇಕು. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ…
ಬೆಂಗಳೂರು: ಪರಮ್ ಫೌಂಡೇಶನ್ನ ವಿಶಿಷ್ಟ ಉಪಕ್ರಮವಾದ ‘ ಕಲಾ ಸಂವಾದ’ ಕಾರ್ಯಕ್ರಮದ ಎರಡನೇ ಆವೃತ್ತಿಯಾದ ‘ಮಹಾಕ್ಷತ್ರಿಯ’ ನೃತ್ಯರೂಪಕದ ವಿಡಿಯೋ ಪ್ರದರ್ಶನ ಅಕ್ಟೋಬರ್ 19ರಂದು ನಡೆಯಲಿದ್ದು, ಕಲಾರಸಿಕರನ್ನು ಪೌರಾಣಿಕ ಜಗತ್ತಿನತ್ತ ಕರೆದೊಯ್ಯಲು ಸಿದ್ಧವಾಗಿದೆ. ಇಲ್ಲಿ ಕೇವಲ ಪ್ರದರ್ಶನ ಮಾತ್ರವಲ್ಲದೆ, ನೃತ್ಯ ರೂಪಕದ ಸೃಜನಾತ್ಮಕ ಪ್ರಕ್ರಿಯೆಯ ಹಿಂದಿನ ಒಳನೋಟಗಳ ಕುರಿತು ಗಹನವಾದ ಚರ್ಚೆ ನಡೆಯಲಿದೆ. ಕಲೆ, ಸಂಸ್ಕೃತಿ ಮತ್ತು ಸೃಜನಾತ್ಮಕ ಪ್ರಕ್ರಿಯೆಗಳ ಕುರಿತು ಕಲಾವಿದರು, ವಿದ್ವಾಂಸರು ಮತ್ತು ಪ್ರೇಕ್ಷಕರನ್ನು ಒಟ್ಟುಗೂಡಿಸುವ ಉದ್ದೇಶ ಹೊಂದಿರುವ ‘ಕಲಾ ಸಂವಾದ’, ಈ ಬಾರಿ ಶ್ರೀ ದೇವುಡು ನರಸಿಂಹ ಶಾಸ್ತ್ರಿಯವರ ‘ಮಹಾ ಬ್ರಾಹ್ಮಣ’ ಕೃತಿಯಿಂದ ಸ್ಫೂರ್ತಿ ಪಡೆದ ಮನಮೋಹಕ ನೃತ್ಯ ನಾಟಕವಾದ ‘ಮಹಾಕ್ಷತ್ರಿಯ’ ನೃತ್ಯರೂಪಕದ ರೆಕಾರ್ಡೆಡ್ ವಿಡಿಯೋವನ್ನು ಮೊದಲಿಗೆ ಪ್ರದರ್ಶಿಸಲಿದೆ. ಮಹಾಕ್ಷತ್ರಿಯ: ದೃಶ್ಯ ಪ್ರದರ್ಶನ ಮತ್ತು ಆಳವಾದ ಸಂವಾದ ‘ಮಹಾಕ್ಷತ್ರಿಯ’ ನೃತ್ಯ ನಾಟಕವು ಋಷಿಗಳಾದ ವಿಶ್ವಮಿತ್ರ ಮತ್ತು ವಸಿಷ್ಠರ ಕಾಲಾತೀತ ಕಥೆಯನ್ನು ಆಧರಿಸಿದೆ. ರೆಕಾರ್ಡೆಡ್ ವಿಡಿಯೋ ಪ್ರದರ್ಶನದ ನಂತರ, ಪ್ರೇಕ್ಷಕರು ಹಾಗೂ ಯುವ ಕಲಾವಿದರೊಂದಿಗೆ ಸಂವಾದಾತ್ಮಕ ಚರ್ಚೆ (Interactive Discussion)…
ರಾಯಚೂರು: ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಂತ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಯೊಬ್ಬರನ್ನು ಅಮಾನತುಗೊಳಿಸಲಾಗಿದೆ. ರಾಯಚೂರು ಜಿಲ್ಲೆಯ ಸಿರವಾರದಲ್ಲಿ ಪಿಡಿಒ ಆಗಿ ಪ್ರವೀಣ್ ಕಾರ್ಯನಿರ್ವಹಿಸುತ್ತಿದ್ದರು. ಆರ್ ಎಸ್ ಎಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರಿಂದ ಪ್ರವೀಣ್ ಕುಮಾರ್ ಅವರನ್ನು ಅಮಾನತುಗೊಳಿಸಲಾಗಿದೆ.
ಹಾವೇರಿ: ರಾಜ್ಯ ಸರ್ಕಾರದ ಬೇಜವಾಬ್ದಾರಿ ತನದಿಂದ ಪ್ರತಿಷ್ಠಿತ ಗೂಗಲ್ ಕಂಪನಿ ನಮ್ಮ ರಾಜ್ಯಬಿಟ್ಟು ಆಂಧ್ರಪ್ರದೇಶಕ್ಕೆ ಹೋಗುವಂತಾಗಿದೆ. ಸರ್ಕಾರ ಪ್ರಗತಿಪರವಾಗಿದ್ದರೆ ನಮ್ಮ ರಾಜ್ಯ ಬಿಟ್ಟು ಯೋಜನೆಗಳು ಹೋಗುವುದಿಲ್ಲ. ಈಗಿನ ಸರ್ಕಾರ ನೀವು ಹೋಗುವುದಿದ್ದರೆ ಹೋಗಿ ಅಂತ ಬೇಜವಾಬ್ದಾರಿ ತೋರುತ್ತಿರುವುದರಿಂದ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು. ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರತಿಷ್ಠಿತ ಸಂಸ್ಥೆ ಅಮೇರಿಕಾದ ಹೊರಗಡೆ 1.23 ಲಕ್ಷ ಕೋಟಿ ಬಂಡವಾಳ ಹೂಡುವ ಸಂಸ್ಥೆ ರಾಜ್ಯಕ್ಕೆ ಬರಬೇಕಿತ್ತು ಅದು ಬರದಿರುವುದು ದುರ್ದೈವದ ಸಂಗತಿ, ಕಾರಣ ರಾಜ್ಯ ಸರ್ಕಾರದ ಆಡಳಿತ ವ್ಯವಸ್ಥೆ, ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಎಲ್ಲದಕ್ಕೂ ದರ ಪಟ್ಟಿ ಸಿದ್ದವಾಗಿದೆ. ಮೂಲ ಸೌಕರ್ಯ ಕುಸಿದು ಬಿದ್ದಿದೆ. ಇಲ್ಲಿ ಸಾಮಾಜಿಕವಾಗಿ ಶಾಂತಿ ಸುವ್ಯವಸ್ಥೆ ಹದಗೆಟ್ಟಿದೆ. ಅಪರಾಧ ಪ್ರಕರಣ ಹೆಚ್ಚಾಗಿದೆ ಹೀಗಾಗಿ ಆಂಧ್ರದಲ್ಲಿ ಅಷ್ಡೊಂದು ಮಾನವ ಸಂಪನ್ಮೂಲ ಅವಕಾಶ ಇಲ್ಲದಿದ್ದರೂ ಆ ಸಂಸ್ಥೆ ಆಂದ್ರಪ್ರದೇಶದ ಕ್ಕೆ ಹೋಯಿತು. ನಾವಿದ್ದಾಗ ಪಾಸ್ಕಾನ್ ಕಂಪನಿ ಬಂದಾಗ ಆಂಧ್ರ ಪ್ರದೇಶ, ತಮಿಳುನಾಡು…
ಮೈಸೂರು : ಬಡಗಲಾಪುರದಲ್ಲಿ ಹುಲಿ ದಾಳಿಗೆ ತುತ್ತಾದ ಮಹದೇವಗೌಡ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದ್ದು, ಕುಟುಂಬಕ್ಕೆ ಸಂಪೂರ್ಣ ಪರಿಹಾರದ ಮೊತ್ತ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದರು. ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿದ ಮುಖ್ಯಮಂತ್ರಿಗಳು ಚಿಕಿತ್ಸೆಗೆ ಒಳಗಾಗಿರುವ ಮಹದೇವಗೌಡ ಅವರ ಕುಟುಂಬದವರ ಜೊತೆ ಚರ್ಚಿಸಿದ ಬಳಿಕ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಿಎಂ ಸೂಚನೆಗಳು… *ಸಂಪೂರ್ಣ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿದೆ. *ಪರಿಹಾರದ ಮೊತ್ತವನ್ನು ಸಂಪೂರ್ಣವಾಗಿ ಬಿಡುಗಡೆಗೊಳಿಸಲು ಸಿಎಂ ಸೂಚನೆ. *ಎರಡು ಕಣ್ಣುಗಳ ದೃಷ್ಟಿ ಮತ್ತೆ ಬರುವ ಸಾಧ್ಯತೆ ಇಲ್ಲ ಎಂದು ವೈದ್ಯರು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಪರಿಹಾರವನ್ನು ಗಾಯಾಳು ಲೆಕ್ಕದಲ್ಲಿ ಕೊಡಬಾರದು. ಬದುಕು ಕಳೆದುಕೊಂಡ, ಕುಟುಂಬದ ಆಸರೆ ಕಳೆದುಕೊಂಡವರ ಲೆಕ್ಕದಲ್ಲಿ ಪೂರ್ತಿ ಪರಿಹಾರ ಒದಗಿಸುವಂತೆ ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು. https://kannadanewsnow.com/kannada/job-fair-in-every-district-of-the-state-cm-siddaramaiah-announces/
ಮೈಸೂರು: ನಾವು ನುಡಿದಂತೆ ನಡೆದಿರುವ, ನಡೆಯುತ್ತಿರುವ ಸರ್ಕಾರ. ಕೌಶಲ್ಯ ತರಬೇತಿಗೆ ಬಂದರೆ ಯುವನಿಧಿ ಭತ್ಯೆ ನಿಲ್ಲಿಸ್ತಾರೆ ಎನ್ನುವ ಬಿಜೆಪಿಯ ಸುಳ್ಳುಗಳಿಗೆ ಕಿವಿಗೊಡಬೇಡಿ. ಉದ್ಯೋಗ ಸಿಕ್ಕ ಬಳಿಕ ಮಾತ್ರ ಉದ್ಯೋಗ ಪಡೆದವರ ಯುವನಿಧಿ ನಿಲ್ಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೆ ಸ್ಪಷ್ಟಪಡಿಸಿದರು. ಕೌಶಲ್ಯಾಭಿವೃದ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ ಮೈಸೂರಿನಲ್ಲಿ ಆಯೋಜಿಸಿದ್ದ ಯುವ ಸಮೃದ್ಧಿ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದರು. ಕೊಟ್ಟ ಮಾತು ತಪ್ಪಿ ನಡೆಯಲು ನಾನು ಪ್ರಧಾನಿ ಮೋದಿ ಅಲ್ಲ. ಮೋದಿಯವರು ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿ ಮಾತು ತಪ್ಪಿದರು. ಈ 11 ವರ್ಷದಲ್ಲಿ 22 ಕೋಟಿ ಉದ್ಯೋಗ ಸೃಷ್ಟಿಸಬೇಕಿದ್ದ ಮೋದಿಯವರು ಸುಳ್ಳು ಹೇಳಿದರು. ನಾವು ಅವರಂತೆ ಸುಳ್ಳು ಹೇಳುವುದಿಲ್ಲ ಎಂದು ಸರ್ಕಾರದಿಂದ ಭರ್ತಿಯಾದ ಹುದ್ದೆಗಳ ಮತ್ತು ಉದ್ಯೋಗ ಮೇಳದಲ್ಲಿ ಭರ್ತಿಯಾದ ಹುದ್ದೆಗಳ ವಿವರಗಳನ್ನು ನೀಡಿದರು. ಕಳೆದ ಎರಡೂವರೆ ವರ್ಷಗಳಲ್ಲಿ ನಮ್ಮ ಸರ್ಕಾರ ಬೆಂಗಳೂರಿನಲ್ಲಿ ನಡೆಸಿದ ಉದ್ಯೋಗ ಮೇಳದಿಂದಾಗಿ 58892 ಮಂದಿ ಉದ್ಯೋಗಾಕಾಂಕ್ಷಿಗಳು ಉದ್ಯೋಗ ಮೇಳದಲ್ಲಿ…














