Subscribe to Updates
Get the latest creative news from FooBar about art, design and business.
Author: kannadanewsnow09
ಚಿಕ್ಕಮಗಳೂರು : ಚಿಕ್ಕಮಗಳೂರು, ಕೊಡಗು, ಹಾಸನ ಸೇರಿದಂತೆ ರಾಜ್ಯದ ನಾನಾ ಭಾಗದಲ್ಲಿನ ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಲು ಪ್ರಯತ್ನ ಮಾಡುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಭರವಸೆ ನೀಡಿದರು. ಬಾಳೆ ಹೊನ್ನೂರಿನ ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರವು ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಗೆ ಕೈಗೊಂಡಿರುವ ಕ್ರಮಗಳ ಫಲವಾಗಿ ಕರ್ನಾಟಕದಲ್ಲಿ 6395 ಆನೆಗಳಿದ್ದು. ಆನೆಗಳ ಸಂಖ್ಯೆಯಲ್ಲಿ ದೇಶದಲ್ಲೇ ಮೊದಲ ಸ್ಥಾನದಲ್ಲಿದ್ದರೆ, ಹುಲಿಯ ಸಂಖ್ಯೆಯಲ್ಲಿ 2ನೇ ಸ್ಥಾನದಲ್ಲಿದೆ. ಆದರೆ ಅರಣ್ಯ ಪ್ರದೇಶ ಕಡಿಮೆ ಆಗುತ್ತಿರುವುದರಿಂದ ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳವಾಗಿದ್ದು ಇದರ ನಿಯಂತ್ರಣಕ್ಕೆ ಸರ್ಕಾರ ಮತ್ತು ಅರಣ್ಯ ಇಲಾಖೆ ಹಗಲಿರುಳು ಶ್ರಮಿಸುತ್ತಿದೆ ಎಂದರು. ಆನೆಗಳು ನಾಡಿಗೆ ಬರುವುದನ್ನು ತಡೆಯಲು ರೈಲ್ವೆ ಬ್ಯಾರಿಕೇಡ್, ಕಂದಕ, ಸೌರ ಬೇಲಿ ಹಾಕಲಾಗುತ್ತಿದೆ. ತುರ್ತು ಸ್ಪಂದನ ಪಡೆ, ಆನೆ ಕಾರ್ಯಪಡೆಯನ್ನು ರಚಿಸಿದ್ದು, ಜನರಿಗೆ ಆನೆಗಳ ಚಲನವಲನದ ಬಗ್ಗೆ ಮಾಹಿತಿ ನೀಡಲಾಗುತ್ತಿದೆ. ಇದರ ಜೊತೆಗೆ 2 ಸಾವಿರ ಹೆಕ್ಟೇರ್ ಕಾನನ ಪ್ರದೇಶದಲ್ಲಿ…
ಶಿವಮೊಗ್ಗ: ಜೋಗಕ್ಕೆ ಪ್ರವಾಸಕ್ಕೆ ಬರುತ್ತಿದ್ದಂತ ಮಂಗಳೂರಿನ ಜನರಿದ್ದಂತ ಬಸ್ ಅಪಘಾತಗೊಂಡು, 15ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿತ್ತು. ಈ ವಿಷಯ ತಿಳಿದಂತ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಗಾಯಾಳುಗಳು ದಾಖಲಾಗಿದ್ದಂತ ಸಾಗರ ಉಪ ವಿಭಾಗೀಯ ಆಸ್ಪತ್ರೆಗೆ ಭೇಟಿ ನೀಡಿ, ಖುದ್ದು ಮುಂದೆ ನಿಂತು ತುರ್ತು ಚಿಕಿತ್ಸೆಯ ವ್ಯವಸ್ಥೆ ಮಾಡಿಸಿ, ಮಾನವೀಯತೆ ಮೆರೆದಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರದ ಜೋಗ-ಕಾರ್ಗಲ್ ಸಮೀಪದ ಅರಳಗೋಡು ರಸ್ತೆಯ ತಿರುವಿನಲ್ಲಿ ಮಂಗಳೂರಿನಿಂದ ಜೋಗದ ಜಲಪಾತ ವೀಕ್ಷಣೆಗಾಗಿ ಬರುತ್ತಿದ್ದಂತ ಪ್ರವಾಸಿಗರ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿತ್ತು. ಈ ಅಪಘಾತದಲ್ಲಿ 15ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿತ್ತು. ಕೂಡಲೇ ಅವರನ್ನು ಕಾರ್ಗಲ್ ಹಾಗೂ ಸಾಗರದ ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಈ ವಿಷಯ ತಿಳಿದಂತ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಕೂಡಲೇ ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ಭೇಟಿ ನೀಡಿ, ಬಸ್ ಅಪಘಾತದಲ್ಲಿ ಗಾಯಗೊಂಡಿದ್ದಂತ ಗಾಯಾಳುಗಳ ಆರೋಗ್ಯವನ್ನು ವಿಚಾರಿಸಿದರು. ಅಲ್ಲದೇ ಆಸ್ಪತ್ರೆಯಲ್ಲೇ ಬೀಡು ಬಿಟ್ಟು ವೈದ್ಯರು, ವೈದ್ಯಕೀಯ…
ದಾವಣಗೆರೆ: ಜಿಲ್ಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಬಣವು ಮತ್ತೊಂದು ಶಕ್ತಿ ಪ್ರದರ್ಶನ ನೀಡಲು ಮುಂದಾಗಿದೆ. ಫೆಬ್ರವರಿ.27ರಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಜನ್ಮದಿನವನ್ನು ಅದ್ಧೂರಿಯಾಗಿ ಕಾರ್ಯಕ್ರಮ ಆಯೋಜಿಸಿ ಆಚರಿಸಲು ನಿರ್ಧರಿಸಲಾಗಿದೆ. ಇಂದು ಬಿವೈ ವಿಜಯೇಂದ್ರ ಅವರನ್ನು ಬೆಂಬಲಿಸುವಂತ ಬಣವೊಂದು ಸಭೆಯನ್ನು ನಡೆಸಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಈ ಬಗ್ಗೆ ಸಭೆಯ ಬಳಿಕ ಮಾಜಿ ಸಚಿವ ಎಸ್ ಎ ರವೀಂದ್ರನಾಥ್ ಅವರು ಮಾಹಿತಿ ನೀಡಿದ್ದೂ, ಫೆಬ್ರವರಿ 27ರಂದು ದಾವಣಗೆರೆಯಲ್ಲಿ ಬಿಎಸ್ ಯಡಿಯೂರಪ್ಪ ಜನ್ಮದಿನ ಆಚರಿಸಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಈ ಸಭೆಯ ವೇಳೆಯಲ್ಲಿ ಹತ್ತು ಜನರ ಒಂದು ಸಮಿತಿ ಮಾಡಲಾಗಿದೆ. ಈ ಸಮಿತಿ ರಾಜ್ಯಾಧ್ಯಂತ ಪ್ರವಾಸ ಮಾಡಲಿದೆ ಎಂಬುದಾಗಿ ಮಾಜಿ ಶಾಸಕ ರೇಣುಕಾಚಾರ್ಯ ತಿಳಿಸಿದ್ದಾರೆ. ಅಲ್ಲದೇ ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಮುಂದಿನ ಚುನಾವಣೆಯಲ್ಲಿ 140 ಸ್ಥಾನ ಗೆಲ್ಲುವುದಾಗಿ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ. https://kannadanewsnow.com/kannada/high-drama-near-jamia-masjid-in-srirangapatna-mandya-tension-prevails-at-the-site/ https://kannadanewsnow.com/kannada/digital-arrest-elderly-woman-loses-rs-80-lakh-due-to-digital-arrest/ https://kannadanewsnow.com/kannada/breaking-bengaluru-mobile-thieves-on-the-rise-ex-corporator-chases/
ಮಂಡ್ಯ: ಜಿಲ್ಲೆಯಲ್ಲಿ ಹನುಮ ಸಂಕೀರ್ತನಾ ಯಾತ್ರೆ ತೆರಳುತ್ತಿದ್ದಂತ ಸಂದರ್ಭದಲ್ಲಿ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಬಳಿಯಲ್ಲಿ ಭಾರೀ ಹೈಡ್ರಾಮಾವೇ ನಡೆದಿದೆ. ಇದೀಗ ಸ್ಥಳದಲ್ಲಿ ಬಿಗುವಿನ ವಾತಾವರಣ ಇರುವುದಾಗಿ ಹೇಳಲಾಗುತ್ತಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಬಳಿಯಲ್ಲಿ ಹನುಮ ಸಂಕೀರ್ತನಾ ಯಾತ್ರೆ ತೆರಳುತ್ತಿದ್ದ ಸಂದರ್ಭದಲ್ಲಿ ಪೊಲೀಸರು, ಹನುಮ ಮಾಲಾಧಾರಿಗಳ ನಡುವೆ ತಳ್ಳಾಟ ನೂಕಾಟ ನಡೆದಿದೆ. ಈ ಮೂಲಕ ಹೈಡ್ರಾಮಾವೇ ನಡೆದಿದೆ. ಬ್ಯಾರಿಕೇಡ್ ಹಾಕಿದ್ದನ್ನು ಲೆಕ್ಕಿಸದೇ ಹನುಮ ಮಾಲಾಧಾರಿಗಳು ನುಗ್ಗಲು ಯತ್ನಿಸಿದ್ದಾರೆ. ಅವರನ್ನು ತಡೆದು ಪೊಲೀಸರು ನಿಲ್ಲಿಸಿದ್ದಾರೆ. ಇದೀಗ ಸ್ಥಳದಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/digital-arrest-elderly-woman-loses-rs-80-lakh-due-to-digital-arrest/ https://kannadanewsnow.com/kannada/breaking-bengaluru-mobile-thieves-on-the-rise-ex-corporator-chases/
ನವದೆಹಲಿ: ದಕ್ಷಿಣ ಮಧ್ಯ ರೈಲ್ವೆ (ಎಸ್ಸಿಆರ್) ಶಬರಿಮಲೆ ಯಾತ್ರಾರ್ಥಿಗಳಿಗಾಗಿ ವಿಶೇಷ ರೈಲುಗಳನ್ನು ಓಡಿಸುತ್ತಿದೆ, ಇದು ಮಾರ್ಗದುದ್ದಕ್ಕೂ ಪ್ರಮುಖ ಧಾರ್ಮಿಕ ಸ್ಥಳಗಳನ್ನು ಒಳಗೊಂಡಿದೆ. ತೆಲಂಗಾಣ ಮತ್ತು ಆಂಧ್ರಪ್ರದೇಶದಿಂದ ಪ್ರಯಾಣಿಸುವ ಅಯ್ಯಪ್ಪ ಭಕ್ತರಿಗೆ ಸಹಾಯ ಮಾಡಲು ಈ ರೈಲುಗಳನ್ನು ವಿನ್ಯಾಸಗೊಳಿಸಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಈ ವಿಶೇಷ ಸೇವೆಗಳ ಪ್ರಯಾಣಿಕರು ದಾರಿಯುದ್ದಕ್ಕೂ ಕೇರಳದ ಪ್ರಮುಖ ದೇವಾಲಯಗಳಿಗೆ ಅನುಕೂಲಕರವಾಗಿ ಭೇಟಿ ನೀಡಬಹುದು. ಪಂದಲಂ, ಕುಲತುಪುಳ, ಆರ್ಯನ್ಕಾವು, ಅಚಂಕೋವಿಲ್ ಮತ್ತು ಎರುಮೇಲಿಯ ಸಾಸ್ತಾ ದೇವಾಲಯಗಳು ಸರ್ಕ್ಯೂಟ್ನಲ್ಲಿ ಸೇರಿವೆ. ಡಿಸೆಂಬರ್ 19 ಮತ್ತು 26 ರಂದು ಚಲಿಸುವ ಸಿಕಂದರಾಬಾದ್-ಕೊಲ್ಲಂ (07175), ಡಿಸೆಂಬರ್ 21 ಮತ್ತು 28 ರಂದು ಚಲಿಸುವ ಕೊಲ್ಲಂ-ಸಿಕಂದರಾಬಾದ್ (07176), ಜನವರಿ 2, 9 ಮತ್ತು 16 ರಂದು ಚಲಿಸುವ ಸಿಕಂದರಾಬಾದ್-ಕೊಲ್ಲಂ (07175) ಮತ್ತು ಮುಂದಿನ ವರ್ಷ ಜನವರಿ 4, 11 ಮತ್ತು 18 ರಂದು ಚಲಿಸುವ ಕೊಲ್ಲಂ-ಸಿಕಂದರಾಬಾದ್ (07176) ರೈಲು ಸೇವೆಗಳಲ್ಲಿ ಸೇರಿವೆ. ಎಸ್ಸಿಆರ್ ಪ್ರಕಾರ, ಈ ವಿಶೇಷ ರೈಲುಗಳು ಫಸ್ಟ್ ಎಸಿ, 2ಎಸಿ,…
ಬೆಳಗಾವಿ: ರಾಜ್ಯದಲ್ಲೊಂದು ಅಮಾನವೀಯ ಘಟನೆ ಎನ್ನುವಂತೆ ಹೆತ್ತ ಕಂದಮ್ಮನನ್ನೇ ಕೆರೆಗೆ ತಾಯಿಯೊಬ್ಬಳು ಎಸೆದು ಹೋಗಿರುವಂತ ಘಟನೆ ನಡೆದಿದೆ. ಆಗತಾನೇ ಹುಟ್ಟಿದಂತ ಶಿಶವನ್ನೇ ತಾಯಿಯೊಬ್ಬಳು ಬಿಟ್ಟು ಹೋಗಿದ್ದಂತ ಘಟನೆ ಬೆಳಗಾವಿಯ ಜಿಲ್ಲಾಸ್ಪತ್ರೆಯಲ್ಲಿ ನಡೆದಿತ್ತು. ಈ ಘಟನೆ ಮಾಸೋ ಮುನ್ನವೇ ಈಗ ರಾಜ್ಯದಲ್ಲೇ ಅಮಾನವೀಯ ಎನ್ನುವಂತೆ ತಾಯಿಯೊಬ್ಬಳು ಕೆರೆಗೆ ಹುಟ್ಟಿದ ಹೆತ್ತ ಕಂದಮ್ಮನನ್ನೇ ಎಸೆದು ಹೋಗಿದ್ದಾಳೆ. ಬೆಳಗಾವಿ ಜಿಲ್ಲೆಯ ಕಣಬರಗಿ ಗ್ರಾಮದಲ್ಲಿ 2 ತಿಂಗಳ ಹೆಣ್ಣುಮಗುವನ್ನೇ ತಾಯಿಯೊಬ್ಬಳು ಕೆರೆಗೆ ಎಸೆದು ಹೋಗಿರೋದಾಗಿ ತಿಳಿದು ಬಂದಿದೆ. ಕೆರೆಯಲ್ಲಿ ದನಗಳನ್ನು ಮೈ ತೊಳೆಯುತ್ತಿದ್ದಂತವರು ಕೂಡಲೇ ಹಸುಗೂಸನ್ನು ರಕ್ಷಣೆ ಮಾಡಿದ್ದಾರೆ. ಅಲ್ಲದೇ ಕೆರೆಗೆ ಎಸೆದು ಹೋಗುತ್ತಿದ್ದಂತ ತಾಯಿಯನ್ನು ತಡೆದು, ಬುದ್ಧಿವಾದ ಹೇಳಿದ್ದಾರೆ. ಅಲ್ಲದೇ ಮಗುವನ್ನು ಕೈಗೆ ನೀಡಿ, ಕಳುಹಿಸಿದ್ದಾರೆ. https://kannadanewsnow.com/kannada/house-to-discuss-north-karnataka-issues-for-3-days-from-monday-siddaramaiah/ https://kannadanewsnow.com/kannada/breaking-bengaluru-mobile-thieves-on-the-rise-ex-corporator-chases/
ಗದಗ: ಸೋಮವಾರದಿಂದ ಬುಧವಾರದವರೆಗೆ ಮೂರು ದಿನ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಾಗುವುದು, ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಗದಗ ಜಿಲ್ಲೆಯ ರೋಣ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು. ವಕ್ಫ್ ವಿಚಾರದಲ್ಲಿ ಬಿ.ವೈ.ವಿಜಯೇಂದ್ರ 150 ಕೋಟಿ ಆ ಮಿಷದ ಒಡ್ಡಿದ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, ಮಾನಪ್ಪಾಡಿ ಅವರು ಅವರದೇ ವಿಡಿಯೊದಲ್ಲಿ ನೀಡಿದ ಹೇಳಿಕೆ ಆಧಾರದ ಮೇಲೆ ಕೇಂದ್ರಕ್ಕೆ ಪತ್ರ ಬರೆದಿದ್ದೇವೆ ಎಂದರು. ಸಿಬಿಐ ತನಿಖೆಗೆ ಕೊಟ್ಟರೆ ಕಾಂಗ್ರೆಸ್ಸಿನವರೇ ಸಿಕ್ಕಿ ಬೀಳ್ತಾರೆ ಎನ್ನುವ ಬಿಜೆಪಿ ಆರೋಪದ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, ಹಾಗಿದ್ರೆ CBI ತನಿಖೆಗೆ ಕೊಡ್ಲಿ ಎಂದರು. ವಿಡಿಯೊದಲ್ಲಿರುವ ಧ್ವನಿ ಮಾನಪ್ಪಾಡಿ ಅವರದ್ದೋ ಅಲ್ವೋ ಎಂದು ಮಾಧ್ಯಮದವರಿಗೇ ಚೆನ್ನಾಗಿ ಗೊತ್ತಿರತ್ತೆ ತಾನೇ ಎಂದು ಸಿಎಂ ಪ್ರಶ್ನಿಸಿದರು. https://kannadanewsnow.com/kannada/kas-officer-who-became-ascetic-crowned-as-successor-of-vishwa-vokkaliga-mahasamsthana/ https://kannadanewsnow.com/kannada/breaking-bengaluru-mobile-thieves-on-the-rise-ex-corporator-chases/
ಚಳಿಗಾಲವು ರೋಗನಿರೋಧಕ ಶಕ್ತಿ ಮತ್ತು ಉಷ್ಣತೆಯನ್ನು ಹೆಚ್ಚಿಸುವ ಪೌಷ್ಟಿಕ ಸೂಪರ್ಫುಡ್ಗಳ ಶ್ರೇಣಿಯನ್ನು ನೀಡುತ್ತದೆ. ಮೂಲಂಗಿ, ಋತುಮಾನದ ಚಳಿಗಾಲದ ತರಕಾರಿ ವಿಶೇಷವಾಗಿ ಗಮನಾರ್ಹವಾಗಿದೆ. ಅಗತ್ಯ ಪೋಷಕಾಂಶಗಳಿಂದ ಸಮೃದ್ಧವಾಗಿರುವ ಮೂಲಂಗಿ ವಿಟಮಿನ್ ಗಳು, ಖನಿಜಗಳು ಮತ್ತು ಉತ್ಕರ್ಷಣ ನಿರೋಧಕಗಳನ್ನು ಹೇರಳವಾಗಿ ಒದಗಿಸುತ್ತದೆ. ಚಳಿಗಾಲದ ಆಹಾರದಲ್ಲಿ ಮೂಲಂಗಿಯನ್ನು ಸೇರಿಸುವುದರಿಂದ ಪೋಷಣೆ ಮತ್ತು ಪೋಷಣೆ ಸಿಗುತ್ತದೆ. ಆಗಾಗ್ಗೆ ಹಸಿಯಾಗಿ ಅಥವಾ ಬೇಯಿಸಿ ಸೇವಿಸುವ ಮೂಲಂಗಿ ವಿವಿಧ ಭಕ್ಷ್ಯಗಳಿಗೆ ಪರಿಮಳ ಮತ್ತು ವಿನ್ಯಾಸವನ್ನು ನೀಡುತ್ತದೆ. ಇದರ ಬಹುಮುಖತೆಯು ಸೂಪ್ಗಳು, ಸಲಾಡ್ಗಳು ಮತ್ತು ಸೈಡ್ ಡಿಶ್ಗಳಲ್ಲಿ ಜನಪ್ರಿಯ ಘಟಕಾಂಶವಾಗಿದೆ. ಮೂಲಂಗಿಗಳಂತಹ ಕಾಲೋಚಿತ ಉತ್ಪನ್ನಗಳನ್ನು ಅಳವಡಿಸಿಕೊಳ್ಳುವುದು ಒಟ್ಟಾರೆ ಯೋಗಕ್ಷೇಮವನ್ನು ಬೆಂಬಲಿಸುತ್ತದೆ ಮತ್ತು ಚಳಿಗಾಲದ ಪಾಕಪದ್ಧತಿಯ ರುಚಿಯನ್ನು ಹೆಚ್ಚಿಸುತ್ತದೆ. ಚಳಿಗಾಲದಲ್ಲಿ ನಿಮ್ಮ ಊಟದೊಂದಿಗೆ ಮೂಲಂಗಿ ಅಥವಾ ಮೂಲಿ ತಿನ್ನುವುದರಿಂದ ಐದು ಪ್ರಯೋಜನಗಳು ಇಲ್ಲಿವೆ. ಚಳಿಗಾಲದಲ್ಲಿ ಮೂಲಂಗಿಯ ಪ್ರಯೋಜನಗಳು ಜೀರ್ಣಕ್ರಿಯೆ ಮತ್ತು ನಿರ್ವಿಷೀಕರಣಕ್ಕೆ ಸಹಾಯ ಮಾಡುತ್ತದೆ ಮೂಲಂಗಿಯನ್ನು ಊಟದೊಂದಿಗೆ ತಿನ್ನುವುದು ಜೀರ್ಣಕ್ರಿಯೆ ಮತ್ತು ನಿರ್ವಿಷೀಕರಣಕ್ಕೆ ಸಹಾಯ ಮಾಡುತ್ತದೆ. ಇದರ ಫೈಬರ್ ಅಂಶವು ಜೀರ್ಣಕಾರಿ ಕಿಣ್ವಗಳನ್ನು…
ಬೆಂಗಳೂರು: ನಗರದ ಕೆಂಗೇರಿ ಬಳಿಯಲ್ಲಿ ಇರುವಂತ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ನೂತನ ಉತ್ತರಾಧಿಕಾರಿಯಾಗಿ ಕೆಎಎಸ್ ಅಧಿಕಾರಿ ಡಾ.ಹೆಚ್.ಎಲ್ ನಾಗರಾಜು ಅವರು ಸನ್ಯಾಸತ್ವ ಸ್ವೀಕರಿಸುವ ಮೂಲಕ, ಪಟ್ಟಾಭಿಷೇಕಕ್ಕೇರಿದ್ದಾರೆ. ಕೆಂಗೇರಿಯ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠಕ್ಕೆ ಶ್ರೀ ಕುಮಾರ ಚಂದ್ರಶೇಖರ ಸ್ವಾಮೀಜಿ ನಂತ್ರ, ಕೆಎಎಸ್ ಅಧಿಕಾರಿ ಡಾ.ಹೆಚ್.ಎಲ್ ನಾಗರಾಜು ಪೀಠಾಧಿಪತಿಯಾಗಿ ಆಯ್ಕೆ ಮಾಡಲಾಗಿತ್ತು. ಇವರು ಪಟ್ಟಾಧಿಕಾರದ ವೇಳೆಯಲ್ಲಿ ಸನ್ಯಾಸತ್ವ ಸ್ವೀಕರಿಸಬೇಕಿತ್ತು. ಅದರಂತೆ ಇಂದು ನೂರಾರು ಶ್ರೀಗಳ ಸಮ್ಮುಖದಲ್ಲಿ ಸನ್ಯಾಸತ್ವ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದಂತ ಆದಿಚುಂಚನಗಿರಿ ಮಠದ ಡಾ.ನಿರ್ಮಲಾನಂದನಾಥ ಶ್ರೀಗಳು, ಎರಡು ಮಠಗಳ ನಡುವೆ ಒಂದು ಸಮಸ್ಯೆ ಇದೆ ಎಂದು ನಿಡುಮಾಮಿಡಿ ಶ್ರೀಗಳು ಹೇಳಿದಾಗ ಎಲ್ಲರಿಗೂ ಅನ್ನಿಸಿತ್ತು. ಆದರೇ ಮಠಗಳ ನಡುವೆ ಯಾವುದೇ ಸಮಸ್ಯೆ ಇಲ್ಲ. ಒಂದೇ ಗುರು, ಒಂದೇ ಸಮುದಾಯ, ಒಂದೇ ತಾಯಿ ಎಂದು ಪೂಜ್ಯರು ಹೇಳಿದ್ದಾರೆ ಎಂದರು. ನಾಗರಾಜ್ ಅವರು ನಿಶ್ಚಲಾನಂದನಾಥರಾಗಿ ಬದಲಾಗುವ ಸಂದರ್ಭದಲ್ಲಿ ಇಷ್ಟು ಜನ ಸೇರಿರುವುದು ಖುಷಿಯ ವಿಚಾರವಾಗಿದೆ. ನಾವೆಲ್ಲರೂ ಒಂದೇ ಗುರು ಪರಂಪರೆಯವರು. ಇಂದು ನಾಗರಾಜ್…
ರಾಮನಗರ: ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಮತ್ತೋರ್ವ ರೈತ ಬಲಿಯಾಗಿದ್ದಾನೆ. ಕನಕಪುರದ ಹೆಗ್ಗನೂರು ದೊಡ್ಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಹೆಗ್ಗನೂರು ದೊಡ್ಡಿ ಗ್ರಾಮದಲ್ಲಿ ಇಂದು ಮುಂಜಾನೆ 4 ಗಂಟೆಗೆ ಜಮೀನಿನಲ್ಲಿ ಹಾಕಿದ್ದಂತ ಮೆದೆ ನೋಡಲು ತೆರಳುತ್ತಿದ್ದಂತ ವೇಳೆಯಲ್ಲಿ ರೈತ ಕರಿಯಪ್ಪ(65) ಎಂಬುವರ ಮೇಲೆ ಕಾಡಾನೆ ದಾಳಿ ನಡೆಸಿದೆ. ಕಾಡಾನೆ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದಂತ ಕರಿಯಪ್ಪ ಅವರನ್ನು ಸ್ಥಳೀಯರು ಸಮೀಪದ ಆಸ್ಪತ್ರೆಗೆ ದಾಖಲಿಸಲು ಕರೆದೊಯ್ಯುತ್ತಿದ್ದಂತ ಸಂದರ್ಭದಲ್ಲಿ ಕೊನೆಯುಸಿರು ಎಳೆದಿದ್ದಾರೆ. ಈ ಸಂಬಂಧ ಸಾತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/over-15-injured-as-tourist-bus-overturns-in-shivamogga/ https://kannadanewsnow.com/kannada/digital-arrest-elderly-woman-loses-rs-80-lakh-due-to-digital-arrest/ https://kannadanewsnow.com/kannada/breaking-bengaluru-mobile-thieves-on-the-rise-ex-corporator-chases/