Author: kannadanewsnow09

ಬೆಂಗಳೂರು: ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಸಂಬಂಧಿಸಿದಂತೆ ಇಚ್ಛೆ/ಆಯ್ಕೆಗಳನ್ನು (ಆಪ್ಷನ್ಸ್ ) ದಾಖಲಿಸಲು ಇದ್ದ ಕೊನೆ ದಿನಾಂಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಜುಲೈ 22ರವರೆಗೆ ವಿಸ್ತರಿಸಿದೆ. ಎಂಜಿನಿಯರಿಂಗ್, ದಂತ ವೈದ್ಯಕೀಯ, ಪಶು ವೈದ್ಯಕೀಯ, ಕೃಷಿ ವಿಜ್ಞಾನ, ಬಿಎಸ್ ಸಿ ನರ್ಸಿಂಗ್, ಬಿಪಿಟಿ, ಬಿಪಿಒ, ಎಎಚ್ಎಸ್ ಕೋರ್ಸ್ ಗಳ ಸೀಟ್ ಮ್ಯಾಟ್ರಿಕ್ಸ್ ಸರ್ಕಾರದಿಂದ ಬಂದಿದ್ದು ಜುಲೈ 8ರಿಂದಲೂ ಆಪ್ಷನ್ಸ್ ದಾಖಲಿಸಲು ಅವಕಾಶ ನೀಡಲಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ. ವೈದ್ಯಕೀಯ, ಆಯುರ್ವೇದ, ಹೋಮಿಯೋಪತಿ ಮತ್ತು ಯುನಾನಿ, ಫಾರ್ಮಸಿ ಕೋರ್ಸ್ ಗಳ ಸೀಟ್ ಮ್ಯಾಟ್ರಿಕ್ಸ್ ಸರ್ಕಾರದಿಂದ ಬಂದ ನಂತರ ಅವುಗಳಿಗೂ ಆಪ್ಷನ್ಸ್ ದಾಖಲಿಸಲು ಅವಕಾಶ ನೀಡಲಾಗುವುದು. ಕೊನೆ ದಿನಾಂಕದವರೆಗೆ ಎಷ್ಟು ಬಾರಿಯಾದರೂ ಇಚ್ಛೆ/ಆಯ್ಕೆಗಳನ್ನು ಬದಲಿಸಿಕೊಳ್ಳಬಹುದು. ಆದರೆ ಅಂತಿಮವಾಗಿ ಬದಲಿಸಿದ್ದ ವಿವರಗಳನ್ನು ಮಾತ್ರ ಸೀಟು ಹಂಚಿಕೆಗೆ ಪರಿಗಣಿಸಲಾಗುತ್ತದೆ ಎಂದು ಅವರು ವಿವರಿಸಿದ್ದಾರೆ. ಸರ್ಕಾರ ನಿಗದಿಪಡಿಸಿರುವ ವಿವಿಧ ಕೋರ್ಸ್ ಗಳ ಶುಲ್ಕದ ವಿವರಗಳನ್ನು ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಶುಲ್ಕ…

Read More

ಬೆಂಗಳೂರು: ರಾಜ್ಯದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ (ಉದ್ಯೋಗ ಕ್ರಮೀಕರಣ ಮತ್ತು ಸೇವಾ ಷರತ್ತುಗಳು) ನಿಯಮ 2006ರ ತಿದ್ದುಪಡಿಯನ್ವಯ ಧನಸಹಾಯ, ಪರಿಹಾರದ ಮೊತ್ತವನ್ನು ಪರಿಷ್ಕರಿಸಿ ಸರ್ಕಾರ ಆದೇಶಿಸಿದೆ. ಈ ಸಂಬಂಧ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಸುತ್ತೋಲೆ ಹೊರಡಿಸಲಾಗಿತ್ತು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ (ಉದ್ಯೋಗ ಕ್ರಮೀಕರಣ ಮತ್ತು ಸೇವಾ ಷರತ್ತುಗಳು) ನಿಯಮ 2006ರ ತಿದ್ದುಪಡಿ ಮಾಡಿ ಧನಸಹಾಯ, ಪರಿಹಾರದ ಮೊತ್ತವನ್ನು ಪರಿಷ್ಕರಿಸಿ ದಿನಾಂಕ 16-07-2025ರಂದು ಸರ್ಕಾರವು ಅಧಿಸೂಚನೆಯನ್ನು ಹೊರಡಿಸಿದೆ ಎಂದಿದ್ದಾರೆ. ಈ ಹಿನ್ನಲೆಯಲ್ಲಿ ಸದರಿ ನಿಯಮಗಳನ್ನು ಅನುಷ್ಠಾನಗೊಳಿಸುವಾಗ ರಾಜ್ಯದಲ್ಲಿ ಏಕ ರೂಪತೆಯನ್ನು ಕಾಪಾಡುವ ದೃಷ್ಟಿಯಿಂದ ಈ ಕೆಳಕಂಡ ನಿರ್ದೇಶನಗಳನ್ನು ಎಲ್ಲಾ ಅನುಷ್ಠಾನ ಅಧಿಕಾರಿಗಳಿಗೆ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ. ಹೀಗಿದೆ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಧನ ಸಹಾಯ, ಪರಿಹಾರದ ಪರಿಷ್ಕೃತ ಮೊತ್ತ ಅನುಗ್ರಹರಾಶಿ ವೆಚ್ಚವನ್ನು ರೂ.71,000ದಿಂದ ರೂ.1,46,000ಕ್ಕೆ ಹೆಚ್ಚಿಸಲಾಗಿದೆ. ದಿನಾಂಕ 16-07-2025ರಿಂದ ಚಾಲಿಗೆ ಬರುವಂತೆ ಅಂತಿಮ ಸಂಸ್ಕಾರ ವೆಚ್ಚ ರೂ.4000…

Read More

ಬೆಂಗಳೂರು: ದಿನೇ ದಿನೇ ಯುಪಿಐ ವಹಿವಾಟು ನಡೆಸಿದಂತ ಸಣ್ಣ ವ್ಯಾಪಾರಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆಯಿಂದ ಶಾಕ್ ನೀಡಲಾಗುತ್ತಿದೆ. ಬೆಂಗಳೂರಲ್ಲಿ ಹೂವಿನ ವ್ಯಾಪಾರಿಗೂ ತೆರಿಗೆ ಇಲಾಖೆಯಿಂದ ನೋಟಿಸ್ ನೀಡಲಾಗಿದೆ. ಬರೋಬ್ಬರಿ 52 ಲಕ್ಷ ತೆರಿಗೆ ಪಾವತಿಸುವಂತೆ ನೋಟಿಸ್ ನೀಡಲಾಗಿದೆ. ಬೆಂಗಳೂರಿನ ಉಳ್ಳಾಲದಲ್ಲಿರೋ ಹೂವಿನ ವ್ಯಾಪಾರಿಯೊಬ್ಬರಿಗೂ ವಾಣಿಜ್ಯ ತೆರಿಗೆ ಇಲಾಖೆಯಿಂದ ತೆರಿಗೆ ಕಟ್ಟುವಂತೆ ನೋಟಿಸ್ ನೀಡಲಾಗಿದೆ. ಉಳ್ಳಾಲದಲ್ಲಿರುವಂತ ಹೂವಿನ ವ್ಯಾಪಾರಿ ಸೋಮೇಗೌಡ ಎಂಬುರಿಗೆ ವಾಣಿಜ್ಯ ತೆರಿಗೆ ಇಲಾಖೆಯಿಂದ 52 ಲಕ್ಷ ತೆರಿಗೆ ಪಾವತಿಸುವಂತೆ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಬೆಂಗಳೂರಿನ ಉಳ್ಳಾಲದಲ್ಲಿ 10 ವರ್ಷಗಳಿಂದ ಸೋಮೇಗೌಡ ಹೂವಿನ ವ್ಯಾಪಾರ ಮಾಡುತ್ತಿದ್ದಾರೆ. ನನಗೆ ಒಂದು ತಿಂಗಳ ಹಿಂದೆ ಒಂದು ನೋಟಿಸ್ ಕೊಟ್ಟರು. 52 ಲಕ್ಷ ಎಲ್ಲಿಂದ ಹಣ ಕೊಟ್ಟೋದು ಎಂಬುದಾಗಿ ಸೋಮೇಗೌಡ ಅಲವತ್ತು ಕೊಂಡಿದ್ದಾರೆ. ಅಂದಹಾಗೇ ಈಗಾಗಲೇ ಬೆಂಗಳೂರಲ್ಲಿ ವಾಣಿಜ್ಯ ತೆರಿಗೆ ಇಲಾಖೆಯ ನೋಟಿಸ್ ನಿಂದ ಬೆಚ್ಚಿ ಬಿದ್ದಿರುವಂತ ವ್ಯಾಪಾರಿಗಳು ಯುಪಿಐ ಬಳಕೆಯನ್ನು ಸ್ಥಗಿತಗೊಳಿಸಿದ್ದಾರೆ. ಚಿಲ್ಲರೆ ಅಂಗಡಿಗಳಲ್ಲಿ ಯುಪಿಐ ಬಳಕೆಯಿಲ್ಲ. ಕ್ಯಾಶ್ ಓನ್ಲಿ, ದಯವಿಟ್ಟು ದುಡ್ಡು ಕೊಟ್ಟು…

Read More

ಶಿವಮೊಗ್ಗ: ಇಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಚಾಲನೆ ನೀಡಿದಂತ ಮನೆ ಮನೆಗೆ ಪೊಲೀಸ್ ಪರಿಕಲ್ಪನೆಯನ್ನು ಸಾಗರ ತಾಲ್ಲೂಕಿನಲ್ಲೂ ಜಾರಿಗೊಳಿಸುವುದಾಗಿ ಡಿವೈಎಸ್ಪಿ ಗೋಪಾಲಕೃಷ್ಣ ಟಿ ನಾಯಕ್ ತಿಳಿಸಿದ್ದಾರೆ. ಇಂದು ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಸಮುದಾಯ ಪೊಲೀಸ್ ವ್ಯವಸ್ಥೆಯನ್ನು ಬಲಪಡಿಸುವ ದಿಸೆಯಲ್ಲಿ ಸಾರ್ವಜನಿಕರೊಂದಿಗೆ ಪೊಲೀಸ್ ಇಲಾಖೆಯ ಉತ್ತಮ ಹಾಗೂ ಸ್ನೇಹಪರ ಸಂಬಂಧವನ್ನು ಬೆಸೆದು ಸೌಹಾರ್ದತೆಯ ಸಮಾಜವನ್ನು ನಿರ್ಮಿಸಲು, ಆಗಬಹುದಾದ ಅಪರಾಧಗಳನ್ನು ತಡೆದು, ಘಟಿಸಿದ ಅಪರಾಧಗಳನ್ನು ಪರಿಣಾಮಕಾರಿಯಾಗಿ ಪತ್ತೆ ಮಾಡಲು ಹಾಗೂ ಪೊಲೀಸ್ ವ್ಯವಸ್ಥೆಯಲ್ಲಿ ಸಾರ್ವಜನಿಕ ಸಹಭಾಗಿತ್ವವನ್ನು ಹೆಚ್ಚಿಸಲಿದೆ ಎಂದರು. https://youtu.be/Zu9xiuiP9pk ಪೊಲೀಸ್ ಇಲಾಖೆಯನ್ನು ಸಾರ್ವಜನಿಕ ಸ್ನೇಹಿಯಾಗಿಸಿ, ಸಮಾಜಕ್ಕೆ ಉತ್ತಮ ಸಕ್ರಿಯ ಪೊಲೀಸ್ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಮಹತ್ವಾಕಾಂಕ್ಷೆಯ ಯೋಜನೆಯಾದ “ಮನೆ-ಮನೆಗೆ ಪೊಲೀಸ್” ಪರಿಕಲ್ಪನೆಯನ್ನು ಜಾರಿಗೆ ತರಲಾಗುತ್ತಿದೆ ಎಂದು ತಿಳಿಸಿದರು. ಮನೆ ಮನೆಗೆ ಪೊಲೀಸ್ ಪರಿಕಲ್ಪನೆಯಡಿಯಲ್ಲಿ ಸಾರ್ವಜನಿಕರು ಮತ್ತು ಪೊಲೀಸರು ಒಂದಾಗಿ ಸಮಸ್ಯೆಗಳನ್ನು ಬಗೆಹರಿಸುವ ದೃಷ್ಠಿಯಿಂದ ಸಾರ್ವಜನಿಕರ ಕುಂದುಕೊರತೆಗಳು ಹಾಗೂ ಸಮಸ್ಯೆಗಳ ಬಗ್ಗೆ ವಿಚಾರಿಸಲು ಸ್ಥಳೀಯ ಪೊಲೀಸರು…

Read More

ಶಿವಮೊಗ್ಗ : ಮುಂದಿನ ದಿನಗಳಲ್ಲಿ ಮಾರಿಕಾಂಬಾ ವ್ಯವಸ್ಥಾಪಕ ಸಮಿತಿಯನ್ನು ಶ್ರೀ ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಟಾನ ಎಂದು ಕರೆಯಲಾಗುತ್ತಿದ್ದು, ಸದಸ್ಯರು ನಮ್ಮ ಮೇಲೆ ವಿಶ್ವಾಸ ಇರಿಸಿ ನೀಡಿದ ಅಧಿಕಾರಕ್ಕೆ ತಕ್ಕಂತೆ ದೇವಸ್ಥಾನದ ಅಭಿವೃದ್ದಿ ಮತ್ತು ಲೋಪದೋಷದಿಂದ ಕೂಡಿದ ಲೆಕ್ಕಪತ್ರವನ್ನು ಸರಿಪಡಿಸಿ ಅವ್ಯವಸ್ಥೆಯನ್ನು ಸರಿದಾರಿಗೆ ತರಲಾಗಿದೆ. ನಮ್ಮ ಸಮಿತಿಯು ಇದರ ವಿರುದ್ದ ಕಾನೂನು ಹೋರಾಟ ನಡೆಸಿ ದೇವಸ್ಥಾನವನ್ನು ಸಾರ್ವಜನಿಕರ ಕೈನಲ್ಲಿಯೆ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ ಎಂದು ಪ್ರತಿಷ್ಟಾನದ ಪ್ರಧಾನ ಕಾರ್ಯದರ್ಶಿ ಬಿ. ಗಿರಿಧರ ರಾವ್ ಎಂದು ಹೇಳಿದರು. ಇಂದು ಸಾಗರ ನಗರದ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, 2014ರ ಸರ್ವಸದಸ್ಯರ ಸಭೆಯಲ್ಲಿ ನಮಗೆ ಅಧಿಕಾರ ನೀಡಲಾಯಿತು. ಅಧಿಕಾರ ನೀಡುವ ಜೊತೆಗೆ ಲೆಕ್ಕಪತ್ರ ಸರಿಪಡಿಸುವ, ದೇವಸ್ಥಾನವನ್ನು ಕಾನೂನು ಚೌಕಟ್ಟಿನಲ್ಲಿ ತರಲು ಟ್ರಸ್ಟ್ ರಚಿಸುವ ಸೇರಿ ಹಲವು ಹೊಣೆಯನ್ನು ನೀಡಲಾಗಿತ್ತು. ಇದೀಗ ಟ್ರಸ್ಟ್ ರಚನೆಗೆ ನ್ಯಾಯಾಲಯ ಆದೇಶ ನೀಡಿದೆ ಎಂದರು. 2007 ರಿಂದ 2003 ರವರೆಗೆ ಆಡಳಿತ ನಡೆಸಿದ ಸಮಿತಿ ಲೆಕ್ಕಪತ್ರ…

Read More

ಲಾಸ್ ಏಂಜಲೀಸ್ ಕೌಂಟಿ ಶೆರಿಫ್ ಇಲಾಖೆಯ ತರಬೇತಿ ಕೇಂದ್ರದಲ್ಲಿ ಗುರುವಾರ ಮಾರಕ ಸ್ಫೋಟ ಸಂಭವಿಸಿದ್ದು, ಹಲವಾರು ಸಾವುನೋವುಗಳು ಸಂಭವಿಸಿವೆ ಎಂದು ವರದಿಯಾಗಿದೆ. ಪ್ರಾಥಮಿಕ ವರದಿಯಂತೆ ಮೂವರು ಸಾವನ್ನಪ್ಪಿದ್ದಾರೆ. ಫಾಕ್ಸ್‌ನ ಆರಂಭಿಕ ವರದಿಗಳ ಪ್ರಕಾರ ಸ್ಫೋಟದಿಂದ ಕನಿಷ್ಠ ಮೂರು ಜನರು ಸಾವನ್ನಪ್ಪಿದ್ದಾರೆ. ಇದು ಬಾಂಬ್ ಸ್ಕ್ವಾಡ್ ವಾಹನದ ಪಕ್ಕದಲ್ಲಿ ಸಂಭವಿಸಿದೆ ಎಂದು ನಂಬಲಾಗಿದೆ. ಸ್ಫೋಟವು ಹತ್ತಿರದ ಹಲವಾರು ವಾಹನಗಳ ಕಿಟಕಿಗಳ ಗಾಜುಗಳು ಪುಡಿಪುಡಿಯಾಗಿದ್ದಾವೆ. ಇದು ಸ್ಫೋಟದ ತೀವ್ರತೆಯನ್ನು ಸೂಚಿಸುತ್ತದೆ. ಸ್ಫೋಟದ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ ಮತ್ತು ಅಧಿಕಾರಿಗಳು ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿಲ್ಲ. ತುರ್ತು ಪ್ರತಿಕ್ರಿಯೆ ನೀಡುವವರು ಸ್ಥಳಕ್ಕೆ ಧಾವಿಸಿದ್ದು, ಘಟನೆಯ ಸುತ್ತಲಿನ ಸಂದರ್ಭಗಳನ್ನು ನಿರ್ಧರಿಸಲು ತನಿಖೆ ನಡೆಯುತ್ತಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

Read More

ಶಿವಮೊಗ್ಗ: ಸಾಗರ ತಾಲ್ಲೂಕಿಗೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬಂಪರ್ ಗಿಫ್ಟ್ ನೀಡಿದ್ದಾರೆ. ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಮನವಿಯ ಮೇರೆಗೆ ಬರೋಬ್ಬರಿ 50 ಕೋಟಿ ಅನುದಾನವನ್ನು ಮಂಜೂರು ಮಾಡಿದ್ದಾರೆ. ಈ ಅನುದಾನದಲ್ಲಿ ಸಾಗರ ತಾಲ್ಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗುತ್ತಿದೆ.  ಕರ್ನಾಟಕ ನೀರಾವರಿ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ಮಾಹಿತಿ ನೀಡಿದ್ದು ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಸಾಗರ ವಿಧಾನಸಭಾ ಕ್ಷೇತ್ರವು ಸಂಪೂರ್ಣ ಮಲೆನಾಡು ಪ್ರದೇಶವಾಗಿದ್ದು, ಮಳೆಗಾಲದಲ್ಲಿ ಅತೀ ಹೆಚ್ಚು ಮಳೆ ಬೀಳುವ ಪ್ರದೇಶವಾಗಿದ್ದು, ಬಹುತೇಕ ಭಾಗ ಶರಾವತಿ ಹಿನ್ನೀರಿನ ಪ್ರದೇಶವಾಗಿರುವುದರಿಂದ ಕೆರೆ, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಮಳೆಗಾಲದಲ್ಲಿ ಕೆರೆಕೋಡಿಗಳು ನೆರೆ ಪ್ರವಾಹದ ಪರಿಸ್ಥಿತಿ ಅಲ್ಲದೆ, ಮಕ್ಕಳು, ಹಳ್ಳಕೊಳ್ಳಗಳನ್ನು ದಾಟಿ ಹೋಗಬೇಕಾಗಿರುತ್ತದೆ. ಇದಕ್ಕೆ ಕಾಲುಸಂಕ, ತಡೆಗೋಡೆ, ಚೆಕ್ ಡ್ಯಾಂ, ಬ್ಯಾರೇಜ್ ಮತ್ತು ಸೇತುವೆ ನಿರ್ಮಾಣದ ಅವಶ್ಯಕತೆ ಇರುತ್ತದೆ. ಆದುದ್ದರಿಂದ ಕಾಮಗಾರಿಗಳನ್ನು ಕೈಗೊಳ್ಳಲು ಅಗತ್ಯವಿರುವ ರೂ.60.00 ಕೋಟಿ ಅನುದಾನವನ್ನು ಮಂಜೂರು ಮಾಡಿ, ಸದರಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸುವಂತೆ ಉಪಮುಖ್ಯಮಂತ್ರಿ…

Read More

ಬೀದರ್ : ರಾಯಚೂರು ಕೆಡಿಪಿ ಸಭೆಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಮೊಬೈಲ್ ನಲ್ಲಿ ರಮ್ಮಿ ಆಡುತ್ತಿರುವ ವಿಡಿಯೋ ವೈರಲ್ ಆಗಿ, ಮಾಧ್ಯಮಗಳಲ್ಲಿ ವರದಿ ಆಗಿರುವ ಹಿನ್ನೆಲೆಯಲ್ಲಿ ಕಾರಣ ಕೇಳಿ ನೋಟಿಸ್ ನೀಡಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚಿಸಿದ್ದಾರೆ. ಕೆಡಿಪಿ ಸಭೆಯಲ್ಲಿ ಅಶಿಸ್ತು ತೋರಿದ ಉಪ ಅರಣ್ಯ ಸಂರಕ್ಷಣಾಧಿಕಾರಿಗೆ ನೋಟೀಸ್ ರಾಯಚೂರ ಜುಲೈ 18: ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಜುಲೈ 18ರಂದು ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಉಪ ಅರಣ್ಯ ಸಂರಕ್ಷಣಾ ಅಧಿಕಾರಿಯು ಅಶಿಸ್ತು ತೋರಿದ್ದಾಗಿ ಖಾಸಗಿ ಸುದ್ದಿವಾಹಿನಿಯಲ್ಲಿ ಪ್ರಸಾರವಾದ ವರದಿಯ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣಪ್ರಕಾಶ ಪಾಟೀಲ ಅವರು ಸಭೆಯಲ್ಲಿ ಉಪ ಅರಣ್ಯ ಸಂರಕ್ಷಣಾ ಅಧಿಕಾರಿಗೆ ಎದ್ದು ನಿಲ್ಲಿಸಿ ವಿವರಣೆ ಕೇಳಿದರು. ಈ ವೇಳೆ ಅಧಿಕಾರಿ ಪ್ರವೀಣ ಅವರು ಕ್ಷಮೆ ಕೇಳಿದರು. ಅತ್ಯಂತ ಮಹತ್ವದ ಕೆಡಿಪಿ ಸಭೆಯಲ್ಲಿ ಶಿಸ್ತಿನಿಂದ ಭಾಗಿಯಾಗದೇ ಮೋಬೈಲನಲ್ಲಿ ತಲ್ಲೀಣರಾಗಿ ಅಸಭ್ಯ ವರ್ತನೆ ತೋರಿರುವುದು ಅಕ್ಷಮ್ಯ ಎಂದು ಸಚಿವರು ತರಾಟೆ…

Read More

ಮಂಡ್ಯ :  ಪ್ರಾಮಾಣಿಕವಾಗಿ ಉನ್ನತ ಹುದ್ದೆ ಅಲಂಕರಿಸಿ ಆದರೆ ಆ ಹುದ್ದೆಯನ್ನು ಖರೀದಿ ಮಾಡಬೇಡಿ ಎಂದು ನಿವೃತ್ತ ನ್ಯಾಯಮೂರ್ತಿ ಎನ್ ಸಂತೋಷ್ ಹೆಗ್ಡೆ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಮದ್ದೂರು ತಾಲೂಕಿನ ಕೆ.ಹೊನ್ನಲಗೆರೆಯ ಆರ್.ಕೆ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಆಯೋಜಿಸಿದ್ದ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಪ್ರಾಮಾಣಿಕವಾಗಿ ಉನ್ನತ ವಿದ್ಯಾಬ್ಯಾಸ ಮಾಡಿದ ಮೇಲೆ ಭ್ರಷ್ಟ ವ್ಯವಸ್ಥೆಯಿಂದ ಕೂಡಿರುವ ಈ ಸಮಾಜದಲ್ಲಿ ಲಂಚ ಕೊಟ್ಟು ಸರ್ಕಾರಿ ನೌಕರಿ ಹುದ್ದೆಗಿಟ್ಟಿಸಿಕೊಳ್ಳಬೇಕಾದ ಅನಿವಾರ್ಯತೆ ಎದುರಾಗಿದೆ. ಹೀಗಾಗಿ ಪ್ರಾಮಾಣಿಕವಾಗಿ ಉನ್ನತ ಹುದ್ದೆ ಅಲಂಕರಿಸಿ ಆದರೆ ಆ ಹುದ್ದೆಯನ್ನು ಖರೀದಿ ಮಾಡಬೇಡಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಮನುಷ್ಯರಲ್ಲಿ ಹೆಚ್ಚಾಗಿರುವ ದುರಾಸೆ ಎಂಬ ರೋಗದಿಂದ ಇಂದು ಸಮಾಜದಲ್ಲಿ ಯಾರು ಎಷ್ಟೇ ತಪ್ಪು ಮಾಡಿದರೂ ಅವರನ್ನು ಪುರಸ್ಕರಿಸುವಂತ ಸಮಾಜದಲ್ಲಿ ನಾವಿದ್ದೇವೆ. ಮಕ್ಕಳಲ್ಲಿ ಶಾಲಾ ಶಿಕ್ಷಣ ಹಂತದಲ್ಲೇ ಪಠ್ಯಕ್ರಮದ ಮೂಲಕ ಭ್ರಷ್ಟಾಚಾರ ನಿಯಂತ್ರಣ ಹಾಗೂ ಜಾಗೃತಿಗೊಳಿಸುವ ಕೆಲಸವಾಗಬೇಕು ಆಗ ಸಮಸಮಾಜ ನಿರ್ಮಾಣಕ್ಕೆ ಆಗ ಭದ್ರ…

Read More

ಬೀದರ್: ಎಚ್ಎಂಟಿ ವಶದಲ್ಲಿನ ಅರಣ್ಯ ಭೂಮಿಯ ಡಿನೋಟಿಫಿಕೇಷನ್ ಹಾಗೂ ಸರ್ಕಾರದ ಮೇಲೆ ಸುಳ್ಳು ಆರೋಪ ಮಾಡಿ ಸಿಬಿಐಗೆ ಪತ್ರ ಬರೆದು ಅಮಾನತುಗೊಂಡಿರುವ ಐ.ಎಫ್.ಎಸ್.ಅಧಿಕಾರಿ ಆರ್.ಗೋಕುಲ್ ತಪ್ಪೊಪ್ಪಿಕೊಂಡು ಬೇಷರತ್ ಕ್ಷಮೆ ಕೋರಿದ್ದು, ಅವರಿಗೆ ಸಿಸಿಎಫ್ ಹುದ್ದೆಗೆ ಹಿಂಬಡ್ತಿ ನೀಡಿ ಅಮಾನತು ರದ್ದುಪಡಿಸಲು ಶಿಫಾರಸು ಮಾಡಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಆರ್. ಗೋಕುಲ್ ಅಮಾನತು ಅಧಿಕೃತಗೊಳಿಸಲು ಕೇಂದ್ರ ಹವಾಮಾನ ಮತ್ತು ಪರಿಸರ ಸಚಿವಾಲಯ ಒಪ್ಪದೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಇದು ತಮ್ಮ ಗಮನಕ್ಕೆ ಬಂದಿರಲಿಲ್ಲ. ಆದರೆ ಅಮಾನತು ಮಾಡಿದ 15 ದಿನಗಳ ಒಳಗಾಗಿ ಸವಿವರವಾದ ಮಾಹಿತಿಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿಲ್ಲ ಎಂಬ ತಾಂತ್ರಿಕ ಕಾರಣದ ಮೇಲೆ ಅಮಾನತು ಅಧಿಕೃತಗೊಳಿಸಲು ಈ ಹಂತದಲ್ಲಿ ಪರಿಗಣಿಸಲು ಬರುವುದಿಲ್ಲ ಎಂದು ಕೇಂದ್ರ ಹವಾಮಾನ ಮತ್ತು ಪರಿಸರ ಸಚಿವಾಲಯ ಹೇಳಿದೆ ಎಂದು ಈಗ ತಿಳಿದುಬಂದಿದೆ ಎಂದರು. ಸಿಸಿಎಫ್ ಹಿಂಬಡ್ತಿಗೆ ಶಿಫಾರಸು: ಈ…

Read More