Author: kannadanewsnow09

ಬೆಂಗಳೂರು: ಪ್ರತಿ ದಿನ ಜಿಲ್ಲಾವಾರು ಕನಿಷ್ಠ ಶೇಕಡಾ 10ರಷ್ಟು ಸಮೀಕ್ಷೆ ಗುರಿಯನ್ನು ಸಾಧಿಸಬೇಕು. ಪ್ರಾದೇಶಿಕ ಆಯುಕ್ತರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಸಮೀಕ್ಷೆ ಪ್ರಗತಿಯ ಪರಿಶೀಲನೆ ನಡೆಸಬೇಕು ಮತ್ತು ಸಕ್ರಿಯವಾಗಿ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಸೂಚನೆ ನೀಡಲಾಗಿದೆ. ಸಮೀಕ್ಷೆ ಕಾರ್ಯದಲ್ಲಿ ನಿರ್ಲಕ್ಷ್ಯ ವಹಿಸುವ ಗಣತಿದಾರರ ಮೇಲೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಖಡಕ್ ಎಚ್ಚರಿಕೆ ನೀಡಿದ್ದಾರೆ. ಇಂದು ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯ ಕುರಿತಂತೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಅಧಿಕಾರಿಗಳ ಜೊತೆಗೆ ವೀಡಿಯೋ ಸಂವಾದ ನಡೆಸಿದರು. * ಸಮೀಕ್ಷೆ ಕಾರ್ಯ ರಾಜ್ಯಾದ್ಯಂತ ಆರಂಭವಾಗಿದ್ದು, ಆರಂಭದಲ್ಲಿ ಕೆಲವು ತಾಂತ್ರಿಕ ತೊಂದರೆಗಳ ಕಾರಣ ಸಮೀಕ್ಷೆ ನಿಧಾನವಾಗಿತ್ತು. ಈಗ ಎಲ್ಲಾ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲಾಗಿದೆ. ಇಂದಿನಿಂದ ಸಮೀಕ್ಷೆ ಕಾರ್ಯವನ್ನು ಚುರುಕುಗೊಳಿಸಲು ಎಲ್ಲಾ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ. * ಸಮೀಕ್ಷೆ ಕಾರ್ಯಕ್ಕೆ ಯಾವುದೇ ತಾಂತ್ರಿಕ ತೊಂದರೆಗಳು ಉಂಟಾಗದಂತೆ ಎಚ್ಚರಿಕೆ ವಹಿಸಬೇಕು. ತಾಂತ್ರಿಕ ತೊಂದರೆಗಳು ಎದುರಾದರೆ ತಕ್ಷಣ…

Read More

ಶಿವಮೊಗ್ಗ : ಜಿಲ್ಲೆಯ ಸಾಗರದ ಸರ್ಕಾರಿ ಬಸ್ ನಿಲ್ದಾಣವನ್ನು 3 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ದಿಪಡಿಸಲಾಗುತ್ತಿದ್ದು, ಡೆಲ್ಟಾ ಯೋಜನೆಯಡಿ 1 ಕೋಟಿ ಹಾಗೂ ಮುಖ್ಯಮಂತ್ರಿಗಳ ವಿಶೇಷ ಅನುದಾನ 2 ಕೋಟಿ ರೂ. ಮಂಜೂರಾಗಿದ್ದು, ಕಾಮಗಾರಿ ಸದ್ಯದಲ್ಲಿಯೆ ಪ್ರಾರಂಭಗೊಳ್ಳಲಿದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಶುಕ್ರವಾರ ವಿವಿಧ ಅಭಿವೃದ್ದಿ ಕಾಮಗಾರಿಗಳ ಸ್ಥಳ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾನು ಶಾಸಕನಾಗಿದ್ದ ಸಂದರ್ಭದಲ್ಲಿಯೆ ಹಿಂದೆ ಲೋಕಾರ್ಪಣೆ ಮಾಡಲಾಗಿತ್ತು. ಅಂದಿನಿಂದ ಹೊಸ ಅಭಿವೃದ್ದಿ ಕೆಲಸಗಳು ನಡೆದಿಲ್ಲ. ಇದೀಗ ಪ್ರಯಾಣಿಕರ ನಿರೀಕ್ಷಣಾ ಕೊಠಡಿಗಳಿಗೆ ಮೇಲ್ಚಾವಣಿ, ಮುಖ್ಯ ಕಟ್ಟಡ ಹಾಗೂ ನೆಲಕ್ಕೆ ಗ್ರಾನೈಟ್, 8 ಬಸ್ ನಿಲ್ಲಿಸುವುದಕ್ಕೆ ಹೊಸದಾಗಿ 3 ಬಸ್ ನಿಲ್ಲಿಸಲು ಜಾಗ ವಿಸ್ತರಿಸುವುದು, ಸುಸಜ್ಜಿತ ಶೌಚಾಲಯ, ಶುದ್ದ ಕುಡಿಯುವ ನೀರಿನ ಘಟಕ, ಪಾರ್ಕಿಂಗ್ ವ್ಯವಸ್ಥೆ ವಿಸ್ತರಣೆ, ಉಪಹಾರ ಗೃಹ ನವೀಕರಣ, ಮಹಿಳೆಯರಿಗೆ…

Read More

ಶಿವಮೊಗ್ಗ: ಮಹಿಳೆಯರ ಸಬಲೀಕರಣಕ್ಕಾಗಿ ರಚನೆಯಾದಂತ ಸಾಗರ ತಾಲ್ಲೂಕು ಮಟ್ಟದ ಒಕ್ಕೂಟದ ಅಧ್ಯಕ್ಷರಾಗಿ ಶ್ಯಾಮಲಾ ದೇವರಾಜ್, ಉಪಾಧ್ಯಕ್ಷರಾಗಿ ಲತಾ ಆಯ್ಕೆಯಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕು ಮಟ್ಟದ ಒಕ್ಕೂಟಕ್ಕೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಎನ್ ಆರ್ ಎಲ್ ಎಂ ಸಂಜೀವಿನಿ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಸಾಗರ ತಾಲ್ಲೂಕಿನಾಧ್ಯಂತ ಗ್ರಾಮ ಪಂಚಾಯ್ತಿಗೊಂದು ಒಕ್ಕೂಟ ರಚನೆಯಾಗಿದೆ. ಸಾಗರ ತಾಲ್ಲೂಕಿನಲ್ಲಿ 35 ಒಕ್ಕೂಟದ ಸದಸ್ಯರಿದ್ದು, ಪ್ರತಿ ಎರಡು ವರ್ಷಗಳಿಗೊಮ್ಮೆ ಸಾಗರ ತಾಲ್ಲೂಕು ಮಟ್ಟದ ಒಕ್ಕೂಟಕ್ಕೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗುತ್ತದೆ. ಇಂದು ಸಾಗರ ತಾಲ್ಲೂಕು ಮಟ್ಟದ ಒಕ್ಕೂಟದ ಅಧ್ಯಕ್ಷರಾಗಿ ಶ್ಯಾಮಲಾ ದೇವರಾಜ್, ಉಪಾಧ್ಯಕ್ಷರಾಗಿ ಲತಾ, ಕಾರ್ಯದರ್ಶಿಯಾಗಿ ಮಮತಾ, ಸಹ ಕಾರ್ಯದರ್ಶಿಯಾಗಿ ಶಾಂತಾ ಬಿ.ಸಿ ಹಾಗೂ ಖಜಾಂಚಿಯಾಗಿ ವನಿತಾ ಆಯ್ಕೆಯಾಗಿದ್ದಾರೆ. ಏನಿದು ತಾಲ್ಲೂಕು ಮಟ್ಟದ ಒಕ್ಕೂಟ? ಏನಿದರ ಕಾರ್ಯ ನಿರ್ವಹಣೆ? ಎನ್ ಆರ್ ಎಲ್ ಎಂ ಸಂಜೀವಿನಿ ಯೋಜನೆಯಡಿ ಸರ್ಕಾರದಿಂದ ವಿವಿಧ ಸೌಲಭ್ಯಗಳನ್ನು ಮಹಿಳಾ ಸ್ವಸಹಾಯ ಸಂಘಗಳಿಗೆ ತಲುಪಿಸುವಂತ ಕೆಲಸವನ್ನು ಮಾಡುವುದಕ್ಕೆ ರಚನೆಯಾದಂತ ಒಕ್ಕೂಟ ಇದಾಗಿದೆ. ಪ್ರತಿ ಗ್ರಾಮ ಪಂಚಾಯ್ತಿ…

Read More

ಮಂಡ್ಯ: ಇಂದು ಸಂಜೆ ಕೆ ಆರ್ ಎಸ್ ನಲ್ಲಿ ಕಾವೇರಿ ಆರತಿಗೆ ಚಾಲನೆ ನೀಡಲಾಗುತ್ತದೆ. ವಿರೋಧದ ನಡುವೆಯೂ KRS ನಲ್ಲಿ ಕಾವೇರಿ ಆರತಿ ನಡೆಸಲಾಗುತ್ತಿದೆ. ಈ ಕಾವೇರಿ ಆರತಿ ವಿರೋಧಿಸಿ ರೈತರ ಪ್ರತಿಭಟನೆ ನಡೆಸಲಾಗುತ್ತಿದೆ. ಕಪ್ಪು ಪಟ್ಟಿ ಕಟ್ಟಿ ರೈತ ಸಂಘಟನೆಗಳಿಂದ KRS ಚಲೋ ನಡೆಸುತ್ತಿದ್ದಾರೆ. ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ರೈತರ ಪ್ರತಿಭಟನೆ ನಡೆಸಲಾಗುತ್ತಿದೆ. ಹೋರಾಟಕ್ಕೆ ಬಸ್ ನಲ್ಲಿ ಮಂಡ್ಯದಿಂದ KRS ಗೆ ನೂರಾರು ರೈತರು ತೆರಳಿದ್ದಾರೆ. ದಸರಾ ಅಂಗವಾಗಿ ಇಂದಿನಿಂದ KRSನಲ್ಲಿ ಕಾವೇರಿ ಆರತಿ ಆರಂಭಗೊಳ್ಳಲಿದೆ. ಇಂದಿನಿಂದ 5 ದಿನಗಳ ಕಾಲ ಸಾಂಕೇತಿಕವಾಗಿ ಕಾವೇರಿ ಆರತಿ ನಡೆಯಲಿದೆ. ಕಾವೇರಿ ಆರತಿ ನಡೆಸುತ್ತಿರುವಂತ ರಾಜ್ಯ ಸರ್ಕಾರದ ವಿರುದ್ಧ ರೈತರು ಘೋಷಣೆ ಕೂಗಿ ಆಕ್ರೋಶ ಹೊರ ಹಾಕುತ್ತಿದ್ದಾರೆ. ಕಾವೇರಿ ಆರತಿ ಮಾಡದಂತೆ ರೈತರ ಎಚ್ಚರಿಕೆ ನೀಡಿದ್ದಾರೆ. ಕೋರ್ಟ್ ನಲ್ಲಿ ಮಧ್ಯಂತರ ಆದೇಶ ಇದ್ದರು ಕಾವೇರಿ ಆರತಿಗೆ ಹಠ ಬಿದ್ದಿದೆ ಎಂದು ಆಕ್ರೋಶ ವ್ಯಕ್ತ ಪಡಿಸಲಾಗಿದೆ. ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ರಾಜ್ಯ…

Read More

ಬೆಂಗಳೂರು: ನಗರದಲ್ಲಿ ಸೀರೆ ಅಂಗಡಿಯಲ್ಲಿ ಸೀರೆ ಕದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬರನ್ನು ಸಾರ್ವಜನಿಕರ ಎದುರು ಅಂಗಡಿ ಮಾಲೀಕ ಹಿಗ್ಗಾಮುಗ್ಗ ಥಳಿಸಿದ್ದರು. ಗುಪ್ತಾಂಗಕ್ಕೂ ಒದ್ದು ಹಲ್ಲೆ ಮಾಡಿದ್ದರು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದಂತ ಪೊಲೀಸರು ಅಂಗಡಿ ಮಾಲೀಕ ಉಮೇದ್ ರಾಮ್ ಬಂಧಿಸಿದ್ದಾರೆ. ಬೆಂಗಳೂರಲ್ಲಿ ಸ್ಯಾರಿ ಅಂಗಡಿಯೊಂದರಲ್ಲಿ ಸೀರೆ ಕದ್ದ ಕಾರಣಕ್ಕೆ ಮಹಿಳೆಯೊಬ್ಬರನ್ನು ಅಂಗಡಿ ಮಾಲೀಕ ಉಮೇದ್ ರಾಮ್ ಎಂಬಾತ ಸಾರ್ವಜನಿಕರ ಎದುರು ಕಾಲಿನಿಂದ ಒದ್ದು ಹಲ್ಲೆ ಮಾಡಿದ್ದಂತ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಸಂಬಂಧ ಸುಮೋಟೋ ಕೇಸ್ ದಾಖಲಿಸಿದಂತ ಪೊಲೀಸರು ಸೀರೆ ಅಂಗಡಿ ಮಾಲೀಕ ಉಮೇದ್ ರಾಮ್ ಎಂಬಾತನನ್ನು ಕೆ ಆರ್ ಮಾರ್ಕೆಟ್ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಅಂದಹಾಗೇ ಆಂಧ್ರಪ್ರದೇಶ ಮೂಲದ ಹಂಪಮ್ಮ ಎಂಬಾಕೆ ಸೀರೆ ಅಂಗಡಿಯಲ್ಲಿ 50ಕ್ಕೂ ಹೆಚ್ಚು ಸೀರೆಗಳನ್ನು ಕದ್ದಿದ್ದರು. ಈ ಎಲ್ಲಾ ದೃಶ್ಯಾವಳಿಯು ಅಂಗಡಿಯಲ್ಲಿನ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ನಿನ್ನೆ ಸೀರೆ ಕದಿಯುತ್ತಿದ್ದಂತ ಸಂದರ್ಭದಲ್ಲಿ ರೆಡ್ ಹ್ಯಾಂಡ್ ಸಿಕ್ಕಿ ಬಿದ್ದಿದ್ದರು. ಈ ಕಾರಣಕ್ಕೆ ಅಂಗಡಿಯ ಮುಂಭಾಗಕ್ಕೆ ಎಳೆದು…

Read More

ಬೆಂಗಳೂರು: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೃಷ್ಣಾದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ನಡೆಸಿದ ವಿಡಿಯೊ ಕಾನ್ಫರೆನ್ಸ್ ಮುಖ್ಯಾಂಶಗಳನ್ನು ಮುಂದೆ ಓದಿ. * ಸಮೀಕ್ಷೆ ಕಾರ್ಯ ರಾಜ್ಯಾದ್ಯಂತ ಆರಂಭವಾಗಿದ್ದು, ಆರಂಭದಲ್ಲಿ ಕೆಲವು ತಾಂತ್ರಿಕ ತೊಂದರೆಗಳ ಕಾರಣ ಸಮೀಕ್ಷೆ ನಿಧಾನವಾಗಿತ್ತು. ಈಗ ಎಲ್ಲಾ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲಾಗಿದೆ. ಇಂದಿನಿಂದ ಸಮೀಕ್ಷೆ ಕಾರ್ಯವನ್ನು ಚುರುಕುಗೊಳಿಸಲು ಎಲ್ಲಾ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ. * ಸಮೀಕ್ಷೆ ಕಾರ್ಯಕ್ಕೆ ಯಾವುದೇ ತಾಂತ್ರಿಕ ತೊಂದರೆಗಳು ಉಂಟಾಗದಂತೆ ಎಚ್ಚರಿಕೆ ವಹಿಸಬೇಕು. ತಾಂತ್ರಿಕ ತೊಂದರೆಗಳು ಎದುರಾದರೆ ತಕ್ಷಣ ಅದನ್ನು ಬಗೆಹರಿಸಲು ಕ್ರಮ ಕೈಗೊಳ್ಳಬೇಕು. ಸಮೀಕ್ಷೆ ಕಾರ್ಯವನ್ನು ಎಲ್ಲಾ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು. * ರಾಜ್ಯದಲ್ಲಿ ಒಟ್ಟು 1,43,81,702 ಕುಟುಂಬಗಳ ಸಮೀಕ್ಷೆ ಕಾರ್ಯವನ್ನು ನಡೆಸಬೇಕಾಗಿದ್ದು, ಇದುವರೆಗೆ 2,76,016 ಕುಟುಂಬಗಳ ಸಮೀಕ್ಷೆ ಕಾರ್ಯ ಪೂರ್ಣಗೊಳಿಸಲಾಗಿದೆ. * ಸಮೀಕ್ಷೆ ಕಾರ್ಯಕ್ಕೆ ಒಟ್ಟು 1,20,728 ಗಣತಿದಾರರನ್ನು ನಿಯೋಜಿಸಲಾಗಿದೆ. ಒಟ್ಟು 1,22,085 ಗಣತಿ ಬ್ಲಾಕ್‌ಗಳನ್ನು ಗುರುತಿಸಲಾಗಿದೆ. ಅಕ್ಟೋಬರ್‌…

Read More

ಮಂಡ್ಯ: ರಾಜ್ಯದಲ್ಲಿ ಭೀಕರ ಅಪಘಾತ ಎನ್ನುವಂತೆ ಸ್ಕೈವಾಕ್ ಕಂಬಕ್ಕೆ ಬೈಕ್ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ತೀವ್ರತೆಗೆ ರಾಯಲ್ ಎನ್ ಫೀಲ್ಡ್ ಬೈಕ್ ನಜ್ಜುಗುಜ್ಜಾಗಿದ್ದರೇ, ಸವಾರರಿಬ್ಬರ ದೇಹಗಳು ಛಿದ್ರ ಛಿದ್ರಗೊಂಡಿದ್ದಾವೆ. ಮಂಡ್ಯದಲ್ಲಿ ಭೀಕರ ರಸ್ತೆ ಅಪಘಾತ ಯುವಕರಿಬ್ಬರ ದೇಹ ಛಿದ್ರ ಛಿದ್ರವಾಗಿವೆ. ಸ್ಕೈವಾಕ್ ಕಂಬಕ್ಕೆ ರಾಯಲ್ ಎನ್ಫೀಲ್ಡ್ ಬೈಕ್ ಡಿಕ್ಕಿ, ಸ್ಥಳದಲ್ಲೇ ಇಬ್ಬರೂ ಸಾವನ್ನಪ್ಪಿದ್ದಾರೆ. ಮಂಡ್ಯದ ಬೆಂ-ಮೈ ಹೆದ್ದಾರಿಯ ಸರ್ಕಾರಿ ಮಹಿಳಾ ಕಾಲೇಜು ಬಳಿ ಘಟನೆ ನಡೆದಿದೆ. ನೂತನವಾಗಿ ನಿರ್ಮಾಣವಾಗಿರುವ ಸ್ಕೈವಾಕ್ ಗೆ ಬೈಕ್ ಡಿಕ್ಕಿಯಾಗಿ ಭೀಕರ ಅಪಘಾತಕ್ಕೆ ಯುವಕರಿಬ್ಬರ ದೇಹ ಛಿದ್ರ ಛಿದ್ರಗೊಂಡಿವೆ. ಮಂಡ್ಯದ ಉದಯಗಿರಿ ಹಾಗೂ ಯತ್ತಗದಹಳ್ಳಿಯ ಡ್ಯಾನಿಲ್(20) ಜೋಶ್ ಆ್ಯಲ್ಡ್ಸ್ ( 20) ಮೃತ ಯುವಕರಾಗಿದ್ದಾರೆ. ಬೆಂಗಳೂರಿನಿಂದ ಮಂಡ್ಯಕ್ಕೆ ಬೈಕ್ ನಲ್ಲಿ ಯುವಕರು ಬರುತ್ತಿದ್ದರು. ಈ ವೇಳೆ ಬೆಂ-ಮೈ ಹೆದ್ದಾರಿಯಲ್ಲಿದ್ದ ಸ್ಕೈವಾಕ್ ಕಂಬಕ್ಕೆ ರಭಸವಾಗಿ ಬೈಕ್ ಡಿಕ್ಕಿಯಾಗಿದೆ. ಢಿಕ್ಕಿ ರಭಸಕ್ಕೆ ಯುವಕರ ದೇಹ ಛಿದ್ರ ಛಿದ್ರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪೊಲೀಸರ ಭೇಟಿ ನೀಡಿ…

Read More

ಚಿಕ್ಕಮಗಳೂರು: ಕಡೂರು ಹಾಗೂ ತರೀಕೆರೆ ಬಸ್ ನಿಲ್ದಾಣಕ್ಕೆ ಮತ್ತು ಕಡೂರಲ್ಲಿ ವಸತಿಗೃಹ ನಿರ್ಮಾಣಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಶಂಕುಸ್ಥಾಪನೆ ನೆರವೇರಿಸಿದರು. ದಿನಾಂಕ: 24-09-2025 ರಂದು ಕಡೂರು ಬಸ್ ನಿಲ್ದಾಣದ ಆವರಣದಲ್ಲಿ ಕಡೂರು ನೂತನ ಬಸ್ ನಿಲ್ದಾಣ ನಿರ್ಮಾಣದ ಶಂಕುಸ್ಥಾಪನೆ ಹಾಗೂ ಕಡೂರು ಬಸ್ ಘಟಕದಲ್ಲಿ ನಿರ್ಮಿಸಿರುವ ಸಿಬ್ಬಂದಿ ವಸತಿಗೃಹಗಳ ಉದ್ಘಾಟನೆಯನ್ನು ಹಾಗೂ ತರೀಕೆರೆ ಬಸ್ ನಿಲ್ದಾಣದ ಆವರಣದಲ್ಲಿ ತರೀಕೆರೆ ಬಸ್ ನಿಲ್ದಾಣದ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆಯನ್ನು ಸಾರಿಗೆ ಹಾಗೂ ಮುಜರಾಯಿ ಖಾತೆ ಸಚಿವ ರಾಮಲಿಂಗಾರೆಡ್ಡಿಯವರು ನೆರವೇರಿಸಿದರು. ಸಾರ್ವಜನಿಕರ ಅನುಕೂಲಕ್ಕಾಗಿ ಅತ್ಯಾಧುನಿಕವಾದ, ಸುಸಜ್ಜಿತವಾದ ಬಸ್ ನಿಲ್ದಾಣವನ್ನು ನಿರ್ಮಾಣ ಮಾಡಲಿದ್ದು, ಇದರ ಸದುಪಯೋಗವಾಗಲಿ ಎಂದರು. ಕಡೂರು ಮತ್ತು ತರೀಕೆರೆ ತಾಲ್ಲೂಕು ಕೇಂದ್ರಗಳಾಗಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿರುವುದರಿಂದ ಸಮರ್ಪಕ ವ್ಯವಸ್ಥೆ ಇರುವ ಸುಸಜ್ಜಿತ ನಿಲ್ದಾಣಗಳ ಅಗತ್ಯತೆ ಇರುವ ಹಿನ್ನೆಲೆಯಲ್ಲಿ ಹೊಸ ಬಸ್ ನಿಲ್ದಾಣಗಳ ನಿರ್ಮಾಣ ಕಾಮಗಾರಿಯನ್ನು ಮಾಡಲಾಗುತ್ತಿದೆ ಎಂದು ತಿಳಿಸಿದರು. ಕಡೂರು ಶಾಸಕ ಆನಂದ್ ಕೆ.ಎಸ್ ಹಾಗೂ ತರೀಕೆರೆ ಶಾಸಕ ಜಿ.ಹೆಚ್.ಶ್ರೀನಿವಾಸ್ ಅವರು…

Read More

ಮುಂಬೈ : ಆಸ್ಟ್ರೇಲಿಯಾದ ಮಾಜಿ ಮಹಿಳಾ ಕ್ರಿಕೆಟರ್ ಮತ್ತು ಎರಡು ಬಾರಿಯ ವಿಶ್ವಕಪ್ ವಿಜೇತೆ ಲಿಸಾ ಕೈಟ್ಲಿ ಅವರನ್ನು ಮುಂಬೈ ಇಂಡಿಯನ್ಸ್ ಮಹಿಳಾ ತಂಡದ ಮುಖ್ಯ ಕೋಚ್ ಆಗಿ ಗುರುವಾರ ನೇಮಕ ಮಾಡಲಾಗಿದೆ. 1997 ಮತ್ತು 2005ರಲ್ಲಿ ಮಹಿಳೆಯರ ಏಕದಿನ ವಿಶ್ವಕಪ್ ಗೆದ್ದ ಆಸ್ಟ್ರೇಲಿಯಾ ತಂಡದ ಭಾಗವಾಗಿದ್ದ ಕೈಟ್ಲಿ, ಮಹಿಳಾ ಕ್ರಿಕೆಟ್‌ನಲ್ಲಿ ಅತ್ಯಂತ ಗೌರವಾನ್ವಿತ ತರಬೇತುದಾರರಲ್ಲಿ ಒಬ್ಬರಾಗಿದ್ದಾರೆ. ಆಸ್ಟ್ರೇಲಿಯಾ, ಇಂಗ್ಲೆಂಡ್ ಮತ್ತು ಉನ್ನತ ಜಾಗತಿಕ ಟಿ20 ಲೀಗ್‌ಗಳಲ್ಲಿನ ಶ್ರೇಷ್ಠ ಆಟದ ವೃತ್ತಿಜೀವನ ಮತ್ತು ತರಬೇತಿ ಅನುಭವದೊಂದಿಗೆ ಅವರು, ಮುಂಬೈ ಇಂಡಿಯನ್ಸ್ ತಂಡಕ್ಕೆ ಅಪ್ರತಿಮ ಅನುಭವ ಮತ್ತು ದೃಷ್ಟಿಕೋನವನ್ನು ತರಲಿದ್ದಾರೆ. ಮುಂಬೈ ಇಂಡಿಯನ್ಸ್ ಮಹಿಳಾ ತಂಡವು ಈಗಾಗಲೆ ಡಬ್ಲ್ಯುಪಿಎಲ್ ಇತಿಹಾಸದಲ್ಲಿ ಅತ್ಯಂತ ಯಶಸ್ವಿ ತಂಡವಾಗಿದ್ದು, ಕೇವಲ ಮೂರು ಆವೃತ್ತಿಗಳಲ್ಲಿ ಎರಡು ಚಾಂಪಿಯನ್‌ಷಿಪ್‌ಗಳನ್ನು ಗೆದ್ದುಕೊಂಡಿದೆ. ಮುಂಬೈ ಇಂಡಿಯನ್ಸ್ ತಂಡ 2023 ಮತ್ತು 2025ರಲ್ಲಿ ಡಬ್ಲ್ಯುಪಿಎಲ್ ಚಾಂಪಿಯನ್‌ ಆಗಿದೆ. ‘ಲಿಸಾ ಕೈಟ್ಲಿ ಅವರನ್ನು ಮುಂಬೈ ಇಂಡಿಯನ್ಸ್ ಕುಟುಂಬಕ್ಕೆ ಸ್ವಾಗತಿಸಲು ಸಂತೋಷವಾಗುತ್ತಿದೆ. ಲಿಸಾ ತನ್ನ ಉತ್ಸಾಹದಿಂದ ಹೊಸ…

Read More

ನವದೆಹಲಿ: ನವರಾತ್ರಿಯ ಹೊತ್ತಲ್ಲೇ ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ಅದೇ 2025-26ನೇ ಹಣಕಾಸು ವರ್ಷದಲ್ಲಿ ಪ್ರಧಾನ ಮಂತ್ರಿ ಉಜ್ವಲ್ ಯೋಜನೆಯ ಅಡಿಯಲ್ಲಿ 25 ಲಕ್ಷ ಹೆಚ್ಚುವರಿ ಎಲ್ ಪಿ ಜಿ ಸಂಪರ್ಕಗಳನ್ನು ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಈ ಬಗ್ಗೆ ಮಾಹಿತಿ ನೀಡಿರುವಂತ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ ದೀಪ್ ಸಿಂಗ್ ಪುರಿ ಅವರು, ಕೇಂದ್ರ ಸರ್ಕಾರವು 2025-26ನೇ ಹಣಕಾಸು ವರ್ಷದಲ್ಲಿ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಂದರೇ ಪಿಎಂಯುವೈ ಅಡಿಯಲ್ಲಿ 25 ಲಕ್ಷ ಹೆಚ್ಚುವರಿ LPG ಸಂಪರ್ಕಗಳನ್ನು ಉಚಿತವಾಗಿ ಮಹಿಳೆಯರಿಗೆ ನೀಡಲು ಅನುಮೋದಿಸಿದೆ ಎಂದಿದ್ದಾರೆ. ನವರಾತ್ರಿಯ ಹೊತ್ತಲ್ಲೇ ಉಜ್ವಲ ಯೋಜನೆಯ ಅಡಿಯಲ್ಲಿ 25 ಲಕ್ಷ ಠೇವಣಿ ರಹಿತ ಎಲ್ ಪಿಜಿ ಸಂಪರ್ಕಗಳನ್ನು ಮಹಿಳೆಯರಿಗೆ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದುರ್ಗಾ ದೇವಿಗೆ ನೀಡಿದ ಗೌರವದೊಂದಿಗೆ ಮಹಿಳೆಯರನ್ನು ನಡೆಸಿಕೊಳ್ಳುವ ಪ್ರಧಾನಿ ಮೋದಿಯವರ ಬದ್ಧತೆಗೆ ಇದು ಮತ್ತೊಂದು ಸಾಕ್ಷಿಯಾಗಿದೆ. ದೇಶದ ಮಹಿಳೆಯರು ಪಿಎಂ…

Read More