Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ನನಗೆ ಭಯ ಶುರುವಾಗಿದೆಯಾ? ನನ್ನ ನೋಡಿದರೆ ನಿಮಗೆ ಹಾಗೆ ಅನಿಸುತ್ತಾ? ಸಿಎಂ ಕಳೆದ ವಾರದಿಂದ ಹೇಗೆ ನಡೆದುಕೊಡಿದ್ದಾರೆ ನೋಡಿದ್ದೀರಲ್ಲಾ? ನನ್ನನ್ನು ಬಂಧಿಸಲು ನೂರು ಜನ ಸಿದ್ದರಾಮಯ್ಯಗಳು ಬರಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಸವಾಲು ಹಾಕಿದರು. ಅಗತ್ಯವಿದ್ದರೆ ಕುಮಾರಸ್ವಾಮಿಯನ್ನು ಮುಲಾಜಿಲ್ಲದೆ ಬಂಧಿಸುತ್ತೇವೆ ಎಂದು ಕೊಪ್ಪಳದಲ್ಲಿ ಸಿಎಂ ಸಿದ್ದರಾಮಯ್ಯ ನೀಡಿರುವ ಹೇಳಿಕೆಗೆ ತಿರುಗೇಟು ಕೊಟ್ಟರು ಕೇಂದ್ರ ಸಚಿವರು. ಮೈಸೂರಿನ ಮೂಡಾ ದಾಖಲೆ ಇದೆಯಲ್ಲ. ಮುಡಾ ಆಸ್ತಿಯನ್ನು ನನ್ನ ಆಸ್ತಿ ಎಂದು ಹೇಳುತ್ತಿದ್ದಾರೆ. ಇಂತಹ ಭಂಡತನ ಯಾವ ಸಿಎಂ ಕೂಡ ತೋರಿಲ್ಲ. ನನ್ನ ಬಂಧನ ಮಾಡುವುದಕ್ಕೆ ನೂರು ಜನ ಸಿದ್ದರಾಮಯ್ಯರು ಬರಬೇಕು ಎಂದು ವಾಗ್ದಾಳಿ ನಡೆಸಿದರು. ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ಪ್ರಕರಣದ ಬಗ್ಗೆ ಕೇಂದ್ರ ಸಚಿವರು ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಬೆನ್ನಲ್ಲೇ ಸಿಎಂ ಮೇಲಿನಂತೆ ಹೇಳಿಕೆ ನೀಡಿದ್ದರು. ಇದಕ್ಕೆ ಖಾರವಾಗಿ ತಿರುಗೇಟು ಕೊಟ್ಟ ಸಚಿವರು;ನನಗೆ ಯಾವುದೇ ಭಯ ಇಲ್ಲ. ನನ್ನ ವಿರುದ್ಧ ರಾಜ್ಯಪಾಲರ ಪ್ರಾಸಿಕ್ಯೂಷನ್ಗೆ ಅನುಮೋದನೆಗೆ ಕೋರಿದ್ದಾರೆ. ಅನುಮತಿ ಕೋರಿರೋದು 2023…
ನವದೆಹಲಿ: ಐಡಿಬಿಐ ಬ್ಯಾಂಕ್ ಸೀಮಿತ ಅವಧಿಗೆ ತನ್ನ ಉತ್ಸವ್ ಫಿಕ್ಸೆಡ್ ಡಿಪಾಸಿಟ್ ಸ್ಕೀಂನ ಹೆಚ್ಚಿಸಿದ ಬಡ್ಡಿದರಗಳನ್ನು ಪ್ರಕಟಿಸಿದೆ. ಈ ಬ್ಯಾಂಕ್ 444 ಮತ್ತು 375 ದಿನಗಳ ವಿಶೇಷ ಅವಧಿಗೆ ಬಡ್ಡಿದರಗಳನ್ನು ಹೆಚ್ಚಿಸಿದ್ದು ಈಗ ಕ್ರಮವಾಗಿ ವಾರ್ಷಿಕ ಶೇ.7.85 ಮತ್ತು ಶೇ.7.75 ಬಡ್ಡಿದರ ನೀಡುತ್ತಿದೆ. ಈ ಹೆಚ್ಚಳದಿಂದ ಉತ್ಸವ್ ಫಿಕ್ಸೆಡ್ ಡಿಪಾಸಿಟ್ ಅನ್ನು ಹೆಚ್ಚಿನ ಗಳಿಕೆ ಬಯಸುವ ಗ್ರಾಹಕರಿಗೆ ಮತ್ತಷ್ಟು ಆಕರ್ಷಕ ಆಯ್ಕೆಯಾಗಿಸಿದೆ. ಈ ಸೀಮಿತ ಅವಧಿಯ ಕೊಡುಗೆಯು ಸೆಪ್ಟೆಂಬರ್ 30, 2024ರವರೆಗೆ ಮಾತ್ರ ಲಭ್ಯವಿರುತ್ತದೆ. ಗ್ರಾಹಕರು ಬ್ಯಾಂಕಿನ ವೆಬ್ ಸೈಟ್ ಅಥವಾ ಮೊಬೈಲ್ ಬ್ಯಾಂಕಿಂಗ್ ಅಪ್ಲಿಕೇಷನ್ ಅಥವಾ ಐಡಿಬಿಐ ಬ್ಯಾಂಕ್ ಶಾಖೆಗೆ ಭೇಟಿ ನೀಡಿ ಉತ್ಸವ್ ಫಿಕ್ಸೆಡ್ ಡಿಪಾಸಿಟ್ ಅನ್ನು ತೆರೆಯಬಹುದು. ಇದಲ್ಲದೆ ಐಡಿಬಿಐ ಬ್ಯಾಂಕ್ ಉತ್ಸವ್ ಫಿಕ್ಸೆಡ್ ಡಿಪಾಸಿಟ್ ಸ್ಕೀಂ ಅಡಿಯಲ್ಲಿ ವಿಶೇಷ ಅವಧಿಗಳಿಗೆ ಸ್ಪರ್ಧಾತ್ಮಕ ಬೆಲೆಗಳನ್ನು ನೀಡುತ್ತಿದೆ. 700 ದಿನಗಳ ಅವಧಿಯು ವಾರ್ಷಿಕ ಶೇ.7.70ರ ಗರಿಷ್ಠ ದರ ನೀಡುತ್ತದೆ, 300-ದಿನಗಳ ಅವಧಿಯು ವಾರ್ಷಿಕ ಶೇ.7.55ರಷ್ಟು ಬಡ್ಡಿ ನೀಡುತ್ತದೆ. ಈ…
ನವದೆಹಲಿ: ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಚಂಪೈ ಸೊರೆನ್ ಬುಧವಾರ ರಾಜ್ಯ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಹೊಸ ರಾಜಕೀಯ ಪಕ್ಷವನ್ನು ಸ್ಥಾಪಿಸುವುದಾಗಿ ಘೋಷಿಸಿದ್ದಾರೆ. ಅವರು ಯಾವುದೇ ಪಕ್ಷದೊಂದಿಗೆ ಮೈತ್ರಿಗೆ ಮುಕ್ತರಾಗಿದ್ದಾರೆ ಎಂದು ಹೇಳಿದರು. ನಾನು ಮೂರು ಆಯ್ಕೆಗಳನ್ನು ಉಲ್ಲೇಖಿಸಿದ್ದೆ – ನಿವೃತ್ತಿ, ಸಂಘಟನೆ ಅಥವಾ ಸ್ನೇಹಿತ. ನಾನು ನಿವೃತ್ತಿ ಹೊಂದುವುದಿಲ್ಲ. ನಾನು ಪಕ್ಷವನ್ನು ಬಲಪಡಿಸುತ್ತೇನೆ, ಹೊಸ ಪಕ್ಷವನ್ನು ಬಲಪಡಿಸುತ್ತೇನೆ ಮತ್ತು ದಾರಿಯಲ್ಲಿ ಉತ್ತಮ ಸ್ನೇಹಿತನನ್ನು ಭೇಟಿಯಾದರೆ, ಅವರೊಂದಿಗೆ ಮುಂದುವರಿಯುತ್ತೇನೆ ಎಂದು ಮಾಜಿ ಸಿಎಂ ಹೇಳಿದರು. https://twitter.com/PTI_News/status/1826214428880019474 ಹೇಮಂತ್ ಸೊರೆನ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದ ನಂತರ ಚಂಪೈ ಸೊರೆನ್ ಅವರನ್ನು ಜಾರ್ಖಂಡ್ ಮುಖ್ಯಮಂತ್ರಿಯಾಗಿ ಅಭಿಷೇಕಿಸಲಾಯಿತು. ಜೈಲಿನಿಂದ ಹೊರಬಂದ ನಂತರ ಹೇಮಂತ್ ಗೆ ದಾರಿ ಮಾಡಿಕೊಡಲು ಅವರು ಹುದ್ದೆಯಿಂದ ಕೆಳಗಿಳಿಯಬೇಕಾಯಿತು. ಈ ಹಿಂದೆ ಚಂಪೈ ಅವರು ಕೋಲ್ಕತ್ತಾದಲ್ಲಿ ಬಿಜೆಪಿ ನಾಯಕರನ್ನು ಭೇಟಿಯಾದ ವರದಿಗಳು ಬಂದಿದ್ದವು. ಚಂಪೈ ಅವರು ಜಾರ್ಖಂಡ್ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕಹಿ ಅವಮಾನ ಅನುಭವಿಸಿದ್ದರು. ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ, ಜುಲೈ ಮೊದಲ ವಾರದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಲಾಗುತ್ತದೆ. ಈ ಬಗ್ಗೆ ಶೀಘ್ರದಲ್ಲೇ ಆದೇಶ ಹೊರಡಿಸಲಾಗುವುದು ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಸ್ಥಾಪನೆಗೆ ಶೀಘ್ರದಲ್ಲೇ ಆದೇಶ ಹೊರಡಿಸಲಾಗುವುದು. ಗುರುಗಳು ಈಡಿಗ ಜನಾಂಗದಲ್ಲಿ ಜನಿಸಿದ್ದರೂ ಯಾವುದೇ ಧರ್ಮ, ಜಾತಿ, ಭಾಷೆಗೆ ಸೀಮಿತರಾಗಿದ್ದವರಲ್ಲ ಎಂದು ಅವರು ಹೇಳಿದ್ದಾರೆ. ಅವರು ಸಮಾಜದಲ್ಲಿ ಸುಧಾರಣೆ ಬಯಸಿ ಅದಕ್ಕಾಗಿ ಜೀವನ ಮುಡಿಪಾಗಿಟ್ಟವರು. ಅವರು ಪ್ರತಿಪಾದಿಸಿದಂತೆ ಎಲ್ಲರೂ ಮನುಷ್ಯರಾಗಿ ಗೌರವದಿಂದ ಬದುಕುವಂತಹ ಸಮ ಸಮಾಜದ ನಿರ್ಮಾಣ ನಮ್ಮ ಗುರಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. https://twitter.com/KarnatakaVarthe/status/1826212940866801668 ನಾರಾಯಣ ಗುರು ಅವರು ಈಡಿಗ ಜನಾಂಗದಲ್ಲಿ ಜನಿಸಿದ್ದರೂ, ಯಾವುದೇ ಧರ್ಮ, ಜಾತಿ, ಭಾಷೆಗೆ ಸೀಮಿತರಾಗಿದ್ದವರಲ್ಲ. ಅವರು ಬುದ್ಧ, ಬಸವ, ಕನಕದಾಸ ರೀತಿಯ ಸಂತರು. ಸಮಾಜದಲ್ಲಿ ಸುಧಾರಣೆ ಬಯಸಿ ಅದಕ್ಕಾಗಿ ಜೀವನವನ್ನು ಮುಡಿಪಾಗಿಟ್ಟವರು. ಈ ಹಿನ್ನೆಲೆಯಲ್ಲಿ ಸರ್ಕಾರದ ವತಿಯಿಂದ ಎಲ್ಲಾ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಿಸಲಾಗುತ್ತಿದೆ.…
ಬೆಂಗಳೂರು: ಕೋಲ್ಕತ್ತಾದಲ್ಲಿ ಮಹಿಳಾ ವೈದ್ಯೆಯ ಮೇಲೆ ಅತ್ಯಾಚಾರ ನಡೆಸಿ, ಕೊಲೆ ಮಾಡಿದ ಬೆನ್ನಲ್ಲೇ, ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಕರ್ನಾಟಕದಲ್ಲಿ ಆರೋಗ್ಯ ಇಲಾಖೆಯಲ್ಲಿನ ಮಹಿಳಾ ವೈದ್ಯರು, ಸಿಬ್ಬಂದಿಯ ಮೇಲಿನ ಹಲ್ಲೆ ತಡೆಗೆ ಮುಂಜಾಗ್ರತಾ ಕ್ರಮಗಳನ್ನು ಸೂಚಿಸಲು ಸಮಿತಿಯನ್ನು ರಚಿಸಿ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ಅಧಿಕೃತ ಜ್ಞಾಪನ ಪತ್ರವನ್ನು ಹೊರಡಿಸಿದ್ದಾರೆ. ಅದರಲ್ಲಿ ಇತ್ತಿಚಿಗೆ ಆರೋಗ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ವೈದ್ಯಾಧಿಕಾರಿಗಳು ಹಾಗೂ ಮಹಿಳಾ ಸಿಬ್ಬಂದಿಯ ಮೇಲೆ ನಡೆಯುತ್ತಿರುವ ಹಲ್ಲೆಗಳನ್ನು ತಡೆಗಟ್ಟಲು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳನ್ನು ಮೇಲಧಿಕಾರಿಗಳಿಗೆ ಶಿಪಾರಸ್ಸು ಮಾಡಲು ನಿರ್ದೇಶಕರು, ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಸ್ಥೆ, ಬೆಂಗಳೂರು ರವರ ಅಧ್ಯಕ್ಷತೆಯಲ್ಲಿ, ಈ ಕೆಳಕಂಡ ಅಧಿಕಾರಿಗಳನ್ನು ಒಳಗೊಂಡ ಸಮಿತಿಯನ್ನು ರಚಿಸಲಾಗಿದೆ. ಇನ್ನೂ ಸಮಿತಿಯ ಅಧ್ಯಕ್ಷರನ್ನಾಗಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಸ್ಥೆಯ ನಿರ್ದೇಶಕರನ್ನು ನೇಮಕ ಮಾಡಲಾಗಿದೆ. ಸದಸ್ಯರನ್ನಾಗಿ ಜಂಟಿ ನಿರ್ದೇಶಕರು, ವೈದ್ಯಕೀಯ, ಆರೋಗ್ಯ ಸೌಧ, ಬೆಂಗಳೂರು, ಉಪ ನಿರ್ದೇಶಕರು ಆರೋಗ್ಯ…
ನವದೆಹಲಿ: ಭಾರತೀಯ ವಾಯುಪಡೆಯ (ಐಎಎಫ್) ಯುದ್ಧ ವಿಮಾನದಿಂದ ಏರ್ ಸ್ಟೋರ್ ಅನ್ನು ಪೋಖ್ರಾನ್ ಫೈರಿಂಗ್ ರೇಂಜ್ ಪ್ರದೇಶದ ಬಳಿ ತಾಂತ್ರಿಕ ದೋಷದಿಂದಾಗಿ ಆಕಸ್ಮಿಕವಾಗಿ ಬಿಡುಗಡೆ ಮಾಡಲಾಗಿದೆ. ಈ ಘಟನೆಯ ಬಗ್ಗೆ ತನಿಖೆ ನಡೆಸಲು ಐಎಎಫ್ ತನಿಖೆಗೆ ಆದೇಶಿಸಿದೆ. ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿಗೆ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://twitter.com/WIONews/status/1826201175546339694 https://kannadanewsnow.com/kannada/good-news-for-students-of-the-state-science-centres-to-be-set-up-in-every-district/ https://kannadanewsnow.com/kannada/good-news-for-the-women-of-the-state-you-will-get-the-benefits-of-these-schemes-from-the-state-government/
ಬೆಂಗಳೂರು: ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಪ್ರತಿ ಜಿಲ್ಲೆಗಳಲ್ಲಿ ವಿಜ್ಞಾನ ಕೇಂದ್ರ ಸ್ಥಾಪಿಸುವುದಾಗಿ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್ ಎಸ್ ಭೋಸರಾಜು ತಿಳಿಸಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿರುವಂತ ಅವರು, ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಲು ಸರ್ಕಾರ ಪ್ರತಿ ಜಿಲ್ಲೆಗಳಲ್ಲಿ ವಿಜ್ಞಾನ ಕೇಂದ್ರ ಸ್ಥಾಪನೆ ಮಾಡಲು ನಿರ್ಧರಿಸಿದೆ. ವಿಜ್ಞಾನಿಗಳು ಹಾಗೂ ಶಿಕ್ಷಕರು ಇದಕ್ಕೆ ಪೂರಕವಾದ ಕಾರ್ಯಕ್ರಮ ಆಯೋಜಿಸಿ ಪ್ರೋತ್ಸಾಹಿಸಬೇಕು ಎಂದು ಹೇಳಿದ್ದಾರೆ. ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯಿಂದ 830 ವಸತಿ ಶಾಲೆಗಳಲ್ಲಿ ಮೊದಲನೇ ಹಂತದಲ್ಲಿ ಟೆಲಿಸ್ಕೋಪ್ ವಿತರಿಸುವ ಯೋಜನೆ ರೂಪಿಸಲಾಗಿದೆ. ಬೆಂಗಳೂರಿನಲ್ಲಿ ದೇಶದ ಅತಿ ದೊಡ್ಡ ವಿಜ್ಞಾನ ಗ್ಯಾಲರಿ ₹100 ಕೋಟಿ ವೆಚ್ಚದಲ್ಲಿ ಸ್ಥಾಪಿಸಲಾಗುತ್ತಿದೆ. ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಅರಿವು ಮೂಡಿಸುವ ಮೂಲಕ ಹೊಸ ಸಂಶೋಧನೆ ಮಾಡಬೇಕು. ಭವಿಷ್ಯದಲ್ಲಿ ದೇಶಕ್ಕೆ ಕೊಡುಗೆ ನೀಡುವ ಆಶಾಭಾವನೆ ಇದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ. https://twitter.com/KarnatakaVarthe/status/1826195501986750659 https://kannadanewsnow.com/kannada/cm-siddaramaiah-deputy-cm-dk-shivakumar-dedicate-to-alamatti-reservoir-in-vijayapura/ https://kannadanewsnow.com/kannada/good-news-for-the-women-of-the-state-you-will-get-the-benefits-of-these-schemes-from-the-state-government/ https://kannadanewsnow.com/kannada/big-news-7-years-in-jail-along-with-rs-2-lakh-fine-for-assaulting-doctors-in-state/
ಬೆಂಗಳೂರು: ನಗರದ ಸರ್ ಎಂ ವಿಶ್ವೇಶ್ವರಯ್ಯ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಮೂರು ದಿನಗಳ ವಿಚಾರ ಸಂಕೀರಣ ಯಶಸ್ವಿಯಾಗಿ ನಡೆಯಿತು. AICTE, Delhi ಅವರ ಸಹಯೋಗದೊಂದಿಗೆ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ವಿಭಾಗ, ಸರ್ ಎಂ ವಿಶ್ವೇಶ್ವರಯ್ಯ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ, ಬೆಂಗಳೂರು ರವರು AICTE-VAANI ಯೋಜನೆಯಡಿ ದಿನಾಂಕ 19-08-2024 ರಿಂದ 21-08-2024 ರವರೆಗೆ “ಸ್ಥಳೀಯ ಭಾಷೆಯ ಮೂಲಕ ಇಂಧನ ಸಬಲೀಕರಣ, ಸುಸ್ಥಿರತೆ ಮತ್ತು ಹವಾಮಾನ ಬದಲಾವಣೆಯಲ್ಲಿ ಆವಿಷ್ಕಾರಗಳು” ಎಂಬ ವಿಷಯದ ಬಗ್ಗೆ ಆಯೋಜಿಸಿರುವ ಮೂರು ದಿನಗಳ ವಿಚಾರ ಸಂಕಿರಣವನ್ನು ಲತಾ ಎನ್ ಪಾಟೀಲ್, ಸಹಾಯಕ ಪ್ರಧಾನ ವ್ಯವಸ್ಥಾಪರು, ಕ್ರೆಡಲ್ ರವರು ಉದ್ಘಾಟಿಸಿದರು. ಈ ವಿಷಯದ ಕುರಿತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನವನ್ನು ನೀಡಿದರು. ಈ ಕಾರ್ಯಕ್ರಮದಲ್ಲಿ ಡಾ. ಹೆಚ್ ಎಲ್ ಸುರೇಶ್, ವಿಭಾಗದ ಮುಖ್ಯಸ್ಥರು, ಡಾ ಮಹೇಶ ಕೆ., ಪ್ರಾಧ್ಯಾಪಕರು ಮತ್ತು ಡಾ ಕೆ.ಎಸ್ ಶಣ್ಮುಖರಾಧ್ಯ, ಯಾಂತ್ರಿಕ ವಿಭಾಗದ ಮುಖ್ಯಸ್ಥರು ವೇದಿಕೆಯಲ್ಲಿ ಉಪಸ್ಥಿತರಿದರು. ವಿವಿಧ ವಿಶ್ವವಿದ್ಯಾಲಯಗಳ ಅಧ್ಯಾಪಕರುಗಳು, ಕೈಗಾರಿಕಾ ಪ್ರತಿನಿಧಿಗಳು, ಸಾತಕೋತ್ತರ ಪದವಿ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.…
ವಿಜಯಪುರ: ಜಿಲ್ಲೆಯ ಆಲಮಟ್ಟಿ ಜಲಾಶಯ ಭರ್ತಿಯಾದ ಹಿನ್ನಲೆಯಲ್ಲಿ ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬಾಗಿನ ಅರ್ಪಿಸಿದರು. ವಿಜಯಪುರ ಜಿಲ್ಲೆಯ ನಿಡಗುಂದಿ ತಾಲ್ಲೂಕಿನ ಆಲಮಟ್ಟಿ ಜಲಾಶಯಕ್ಕೆ ತೆರಳಿದಂತ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಕೃಷ್ಣಗೆ ಗಂಗಾಪೂಜೆ ನೆರವೇರಿಸಿದರು. ಈ ಬಳಿಕ ಸಂಪ್ರದಾಯದಂತೆ ಆಲಮಟ್ಟಿ ಜಲಾಯಶಕ್ಕೆ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಬಾಗಿನ ಅರ್ಪಿಸಿದರು. ಈ ವೇಳೆಯಲ್ಲಿ ಸಚಿವ ಎಂ.ಬಿ ಪಾಟೀಲ್, ಶಿವಾನಂದ ಪಾಟೀಲ್, ಆರ್.ಬಿ ತಿಮ್ಮಾಪುರ, ಹೆಚ್.ವೈ ಮೇಟಿ, ಕಾಶಪ್ಪನವರು ಸೇರಿದಂತೆ ಹಲವು ಶಾಸಕರು ಉಪಸ್ಥಿತರಿದ್ದರು. https://kannadanewsnow.com/kannada/shimoga-gas-cylinder-explodes-fire-breaks-out-at-bakery/ https://kannadanewsnow.com/kannada/good-news-for-the-women-of-the-state-you-will-get-the-benefits-of-these-schemes-from-the-state-government/
ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಈ ಪರಿಣಾಮ ಬೇಕರಿಯೊಂದು ಧಗಧಗಿಸಿ ಹೊತ್ತಿ ಉರಿದಿರುವಂತ ಘಟನೆ ಆನಂದಪುರದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಆನಂದಪುರದಲ್ಲಿ ಬೇಕರಿಯೊಂದರಲ್ಲಿನ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ, ಬೇಕರಿ ಹೊತ್ತಿ ಉರಿದಿದೆ. ಬೆಂಕಿ ಉಂಟಾಗುತ್ತಿದ್ದಂತೆ ಸ್ಥಳೀಯರು ನಂದಿಸುವ ಪ್ರಯತ್ನ ಮಾಡಿದರೂ, ಅದು ಸಾಧ್ಯವಾಗಲಿಲ್ಲ. ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೇಕರಿಯ ಮುಂಭಾಗದಲ್ಲಿ ಪೆಟ್ರೋಲ್ ಬಂಕ್ ಇದ್ದ ಕಾರಣ ಜನರಲ್ಲಿ ಹೆಚ್ಚು ಆತಂಕ ಮೂಡಿಸಿತ್ತು. ಆದರೇ ಬೆಂಕಿಯನ್ನು ಅಗ್ನಿಶಾಮಕ ಸಿಬ್ಬಂದಿ ನಂದಿಸುವ ಮೂಲಕ ಮುಂದಾಗಲಿದ್ದಂತ ಅನಾಹುತವನ್ನು ತಪ್ಪಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/good-news-for-liquor-lovers-prices-to-come-down-by-15-25-in-karnataka-soon/ https://kannadanewsnow.com/kannada/good-news-for-the-women-of-the-state-you-will-get-the-benefits-of-these-schemes-from-the-state-government/