Author: kannadanewsnow09

ಬೆಂಗಳೂರು 15: 66/11 ಕೆವಿ ಸಹಕಾರನಗರ ಸ್ಟೇಷನ್ ಕೆಪಿಟಿಸಿಎಲ್‌ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಹೆಬ್ಬಾಳ ವಿಭಾಗದ ಸಿ-8 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 15.09.2025 ರಿಂದ 29.09.2025 ವರಗೆ ಸಮಯ ಬೆಳಗ್ಗೆ 09:00 ರಿಂದ ಸಂಜೆ 17:00 ಗಂಟೆವರೆಗೆ ಮಧ್ಯಂತರವಾಗಿ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ. ಎ ಬ್ಲಾಕ್, ಇ ಬ್ಲಾಕ್, ಬಳ್ಳಾರಿ ಮುಖ್ಯ ರಸ್ತೆ, ಜಿ ಬ್ಲಾಕ್, ಎಫ್ ಬ್ಲಾಕ್, ತಲಕಾವೇರಿ ಲೇಔಟ್, ಅಮೃತಹಳ್ಳಿ, ಬಿಜಿಎಸ್ ಲೇಔಟ್, ನವ್ಯ ನಗರ ಬ್ಲಾಕ್, ಶಬರಿ ನಗರ, ಬೈತರಾಯನಪುರ ಜಕ್ಕೂರು ಬಡಾವಣೆ, ಜಿಕೆವಿಕೆ ಲೇಔಟ್, ಜಕ್ಕೂರು ಪ್ಲಾಂಟೇಶನ್, ಯೋಷಾದ ನಗರಾಮೃತಹಳ್ಳಿ, ಡಿ, ಅಮೃತಹಳ್ಳಿ ಬಿ ಬ್ಲಾಕ್, ಸಿ ಬ್ಲಾಕ್, ಸಿಕ್ಯುಎಎಲ್ ಲೇಯೋಟ್, ಡಿ ಬ್ಲಾಕ್, ಇ ಬ್ಲಾಕ್, ಸಂಪಿಗೆಹಳ್ಳಿ, ಅಗ್ರಹಾರ ಗ್ರಾಮ, ಜಯಸೂರ್ಯ ಲೇಔಟ್, ವಿಧಾನಸೌಧ ಲೇಔಟ್ ಸಾಯಿಬಾಬಾ ಲೇಔಟ್, ಟೆಲಿಕಾಂ ಲೇಔಟ್, ಎಂಸಿಇಸಿಎಚ್ಎಸ್ ಲೇಔಟ್, ಎಂಸಿಇಸಿಎಚ್ಎಸ್ ಲೇಔಟ್, ಎಂಸಿ ಪಿಎಚ್‌ಎಸ್ ಲೇಔಟ್, ಸೂರ್ಯೋದಯ ನಗರ. 2 ,…

Read More

ಶಿವಮೊಗ್ಗ: ಜಿಲ್ಲೆಯ ರಿಪ್ಪನ್ ಪೇಟೆ ಸಮೀಪದ ಇತಿಹಾಸ ಪ್ರಸಿದ್ಧ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವ ಪ್ರಾರಂಭವಾಗಿದ್ದು ಎರಡನೇ ಮಹಾಲಯ ಜಾತ್ರಾ ಮಹೋತ್ಸವ ಶುಕ್ರವಾರ ವಿಜ್ರಂಭಣೆಯಿಂದ ಜರುಗಿತು. ದೇವಸ್ಥಾನದ ಜಾತ್ರಾ ಸಮಿತಿಯ ಕಾರ್ಯಾಧ್ಯಕ್ಷರಾದ ಕಲಗೋಡು ರತ್ನಾಕರ್ ಅವರು ದೇವಿಯ ದರ್ಶನ ಪಡೆದು ಮಹಾಲಯ ಜಾತ್ರಾ ಮಹೋತ್ಸವದ ಪ್ರಯುಕ್ತ ಮಂಗಳವಾರ (16-09-2025) ಮತ್ತು ಶುಕ್ರವಾರ(19-09-2025) ದಂದು ಹಾಗೂ ನವರಾತ್ರಿಯಲ್ಲಿ ಒಂಬತ್ತು ದಿನ ದೇವಿಗೆ ವಿಶೇಷ ಅಲಂಕಾರದ ಜೊತೆಗೆ ವಿಶೇಷ ಪೂಜೆ ವಿಜೃಂಭಣೆಯಿಂದ ಜರುಗಲಿದೆ. ರಿಪ್ಪನ್ ಪೇಟೆಯ ಅಮ್ಮನಘಟ್ಟದ ಜೇನುಕಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವದಲ್ಲಿ ಭಕ್ತಾದಿಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವಿಯ ದರ್ಶನವನ್ನು ಪಡೆಯಬೇಕು ಎಂದು ಜಾತ್ರಾ ಮಹೋತ್ಸವಕ್ಕೆ ಸಮಸ್ತ ಭಕ್ತಾದಿಗಳಿಗೆ ಜಾತ್ರಾ ಸಮಿತಿಯ ಪರವಾಗಿ ಆಹ್ವಾನಿಸಲಾಗಿದೆ. https://kannadanewsnow.com/kannada/rural-journalists-free-bus-pass-conditions-relaxed-cm-media-advisor-k-v-prabhakar-assures/ https://kannadanewsnow.com/kannada/shivamogga-tomorrow-a-student-awareness-program-will-be-held-at-ramakrishna-school-in-ml-halli-sagar-with-santosh-hegde-participating/

Read More

ಮೈಸೂರು: ಹಿಂದೂ ಧರ್ಮದಲ್ಲಿ ಅಸಮಾನತೆ ಇದೆ. ಹೀಗಾಗಿ ಹಲವರು ಮತಾಂತರ ಆಗ್ತಿದ್ದಾರೆ. ಆದರೇ ನಾನೆಂದೂ ಮುಸ್ಲೀಂ ಆಗಿ ಮತಾಂತರ ಆಗಲ್ಲ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ಇಂದು ಮೈಸೂರಲ್ಲಿ ಸುದ್ದಿಗಾರರೊಂದಿಗೆ ಜಾತಿ ಗಣತಿಯಲ್ಲಿ ಹೊಸ ಜಾತಿಗಳ ಸೇರ್ಪಡೆ ವಿಚಾರವಾಗಿ ಮಾತನಾಡಿ, ನಾನು ಮುಸ್ಲೀಂ ಆಗಿ ಮತಾಂತರ ಆದ್ರೆ ನನ್ನ ಜಾತಿಯೂ ಆ ಧರ್ಮದ ಜೊತೆ ಸೇರುತ್ತೆ ಅಲ್ವ? ನಾನೇನೂ ಮುಸ್ಲಿಂ ಆಗಿ ಮತಾಂತರ ಆಗಲ್ಲ. ಸುಮ್ಮನೆ ಉದಾಹರಣೆಗೆ ಇದನ್ನು ಹೇಳಿದೆ ಅಷ್ಟೇ ಎಂದರು. ಹಿಂದೂ ಧರ್ಮದಲ್ಲಿ ಅಸಮಾನತೆ ಇದೆ. ಹೀಗಾಗಿ ಹಲವರು ಮತಾಂತರ ಆಗ್ತಿದ್ದಾರೆ. ಮತಾಂತರ ಆದವರ ಜಾತಿಯೂ ಮುಖ್ಯ ಎಂದರು. https://kannadanewsnow.com/kannada/shivamogga-tomorrow-a-student-awareness-program-will-be-held-at-ramakrishna-school-in-ml-halli-sagar-with-santosh-hegde-participating/ https://kannadanewsnow.com/kannada/rural-journalists-free-bus-pass-conditions-relaxed-cm-media-advisor-k-v-prabhakar-assures/

Read More

ದಾವಣಗೆರೆ: ತೀರಾ ಅಗತ್ಯ ಇರುವ ಬಡ ಪತ್ರಕರ್ತರಿಗೆ ರಿಯಾಯ್ತಿ ದರದಲ್ಲಿ ನಿವೇಶನ ಒದಗಿಸುವ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ವಸತಿ ಸಚಿವರ ಜೊತೆ ಚರ್ಚಿಸುತ್ತೇನೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಅಭಿಪ್ರಾಯಪಟ್ಟರು. ಜಿಲ್ಲಾ ವರದಿಗಾರರ ಕೂಟ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ನಾನೂ ಕೂಡ ಗ್ರಾಮೀಣ ಭಾಗದಿಂದಲೇ ಪತ್ರಕರ್ತ ವೃತ್ತಿ ಆರಂಭಿಸಿರುವುದರಿಂದ ಪತ್ರಕರ್ತ ಸಮುದಾಯದ ಸಮಸ್ಯೆ, ಸಂಕಷ್ಟಗಳನ್ನು ಅನುಭವಿಸಿದ್ದೇನೆ. ಹೀಗಾಗಿ ಪತ್ರಕರ್ತ ಸಮುದಾಯದ ಎಲ್ಲಾ ಬೇಡಿಕೆಗಳನ್ನೂ ಹಂತ ಹಂತವಾಗಿ ಈಡೇರಿಸಲಾಗಿದೆ. ಗ್ರಾಮೀಣ ಪತ್ರಕರ್ತರ ಪಾಸ್ ಗೆ ವಿಧಿಸಿರುವ ಷರತ್ತುಗಳನ್ನು ಸಡಿಲಗೊಳಿಸುವ ದಿಕ್ಕಿನಲ್ಲಿ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ ಎಂದರು. ಪತ್ರಕರ್ತರ ಗಿಲ್ಡ್ ಗೆ ಸ್ವಂತ ನಿವೇಶನ ಮತ್ತು ಕಟ್ಟಡ ನಿರ್ಮಿಸಲು ಅಗತ್ಯ ಸಹಕಾರ ನೀಡುವಂತೆ ಗಿಲ್ಡ್ ಪದಾಧಿಕಾರಿಗಳು ಮುಂದಿಟ್ಟ ಬೇಡಿಕೆ ಬಗ್ಗೆಯೂ ಪರಿಶೀಲಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. https://kannadanewsnow.com/kannada/shivamogga-tomorrow-a-student-awareness-program-will-be-held-at-ramakrishna-school-in-ml-halli-sagar-with-santosh-hegde-participating/ https://kannadanewsnow.com/kannada/shivamogga-essay-competition-announced-by-navachetana-forum-in-sagar-winners-names-announced/

Read More

ಶಿವಮೊಗ್ಗ: ಸಾಗರದ ಲಿಂಗದಹಳ್ಳಿ ಬಳಿಯಲ್ಲಿರುವಂತ ರಾಮಕೃಷ್ಣ ವಸತಿ ಶಾಲೆಯಲ್ಲಿ ನಾಳೆ ಭ್ರಷ್ಟ ಮುಕ್ತ ಸಮಾಜ ನಿರ್ಮಾಣಕ್ಕೆ  ವಿದ್ಯಾರ್ಥಿಗಳ ಜಾಗೃತಿ ಕಾರ್ಯಕ್ರಮ ನಡೆಯಲಿದೆ. ಸುಪ್ರೀಂ ಕೋರ್ಟ್, ಲೋಕಾಯುಕ್ತದ ವಿಶ್ರಾಂತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಅವರು ಭಾಗಿಯಾಗಿ, ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಶ್ರೀ ರಾಮಕೃಷ್ಣ ಸಮೂಹ ಸಂಸ್ಥೆಗಳ ಸಂಸ್ಥಾಪಕರಾದಂತ ದೇವರಾಜ್ ಮಾಹಿತಿ ಹಂಚಿಕೊಂಡರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿನ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ದಿನಾಂಕ 14-09-2025ರ ಭಾನುವಾರದಂದು ಭ್ರಷ್ಟ ಮುಕ್ತ ಸಮಾಜ ನಿರ್ಮಾಣಕ್ಕೆ ವಿದ್ಯಾರ್ಥಿ ಜಾಗೃತಿ ಕಾರ್ಯಕ್ರಮವನ್ನು ಶ್ರೀ ರಾಮಕೃಷ್ಣ ವಸತಿ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಹಿಂದೆ ಹೈಕೋರ್ಟ್ ನ್ಯಾಯಮೂರ್ತಿ ಹೆಚ್.ಪಿ ಸತೀಶ್ ಅವರನ್ನು ಕರೆಯಿಸಿ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವಂತ ಕೆಲಸವನ್ನು ನಮ್ಮ ಶಾಲೆ ವತಿಯಿಂದ ಮಾಡಲಾಗಿತ್ತು ಎಂದರು. ನಾಳೆ ಬೆಳಗ್ಗೆ 11 ಗಂಟೆಗೆ ಎಂಎಲ್ ಹಳ್ಳಿಯ ಶಾಲಾ ಆವರಣದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಸುಪ್ರೀಂ ಕೋರ್ಟ್, ಲೋಕಾಯುಕ್ತದ ವಿಶ್ರಾಂತ ನ್ಯಾಯಾಧೀಶರಾದಂತ ಸಂತೋಷ್ ಹೆಗಡೆ…

Read More

ಶಿವಮೊಗ್ಗ: ಸಾಗರದ ನವಚೇತನ ವೇದಿಕೆಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ಇಂದಿನ ಶಿಕ್ಷಣ ವ್ಯವಸ್ಥೆ ಎಂಬ ವಿಷಯ ಕುರಿತು ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿತ್ತು. ಈ ಪ್ರಬಂಧ ಸ್ಪರ್ದೆಯಲ್ಲಿ ವಿಜೇತರಾದಂತ ವಿತೇತರ ಹೆಸರನ್ನು ನವಚೇತನ ವೇದಿಕೆ ಅಧ್ಯಕ್ಷ ಪ್ರಶಾಂತ್ ಘೋಷಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನವಚೇತನ ವೇದಿಕೆಯಿಂದ 2025-26ನೇ ಸಾಲಿನ ಶಿಕ್ಷಕ ದಿನಾಚರಣೆಯ ಅಂಗವಾಗಿ ಇಂದಿನ ಶಿಕ್ಷಣ ವ್ಯವಸ್ಥೆಯ ಕುರಿತಂತೆ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಕೈ ಬರಹದಲ್ಲೇ ಕನ್ನಡದಲ್ಲೇ ಪ್ರಬಂಧ ಬರೆದು ಕಳುಹಿಸಲು ಕೋರಲಾಗಿತ್ತು. ಅದರಂತೆ ಸುಮಾರು 300 ಜನರು ಪ್ರಬಂಧ ಬರೆದು ಕಳುಹಿಸಿದ್ದರು ಎಂದರು. ಸಾಗರ ತಾಲ್ಲೂಕಿನವರು ಅಲ್ಲದೇ ಹಾಸನ, ಮೈಸೂರು, ಉಡುಪಿ, ಬೇಳಗಾವಿ, ಸಿಂದಗಿ, ಉತ್ತರ ಕರ್ನಾಟಕ ಭಾಗದವರು ಪ್ರಬಂಧ ಸ್ಪರ್ಧೆಯಲ್ಲಿ ಭಾಗಿಯಾಗಿದ್ದರು. ಜೊತೆಗೆ ಹೊರ ರಾಜ್ಯದವರು  ಪ್ರಬಂಧಗಳನ್ನು ಕಳುಹಿಸಿದ್ದರು. ಇವುಗಳನ್ನು ಸಾಗರದ ಇಂದಿರಾ ಗಾಂಧಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ಅಶೋಕ್ ರೇವಣಕರ್ ಮೌಲ್ಯ ಮಾಪನ ನಡೆಸಿದರು…

Read More

ಬೆಂಗಳೂರು: ಕರ್ನಾಟಕದಲ್ಲಿ ಪರಿಟೋನೀಯಲ್ ಡಯಾಲಿಸಿಸ್ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆಯನ್ನು ನೀಡಲಾಗಿದೆ. ಈ ಕಾರ್ಯಕ್ರಮದ ಅಡಿಯಲ್ಲಿ ಡಯಾಲಿಸಿಸ್ ರೋಗಿಗಳಿಗೆ ಮನೆಯಲ್ಲೇ ಚಿಕಿಸ್ತೆ ದೊರೆಯುವಂತೆ ಆಗಲಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆಯಿಂದ ನಡವಳಿಯನ್ನು ಹೊರಡಿಸಿದ್ದು,  ಅಭಿಯಾನ ನಿರ್ದೇಶಕರು, ರಾಷ್ಟ್ರೀಯ ಆರೋಗ್ಯ ಅಭಿಯಾನ ಇವರಿಂದ ಸ್ವೀಕೃತವಾದ ಏಕಕಡತ ಸಂಖ್ಯೆ: HFWS-DLSOFILE/20/2025(1780906)ರಲ್ಲಿ ಕರ್ನಾಟಕದಲ್ಲಿ ಮೂತ್ರಪಿಂಡದ ಕಾಯಿಲೆ ಹಾಗೂ ಎಂಡ್-ಸೈಜ್ ರಿನಲ್ ಕಾಯಿಲೆ (ESRD) ಗಳು ಹೆಚ್ಚಾಗುತ್ತಿದ್ದು, ಇದರಿಂದ ಆರೋಗ್ಯ ವ್ಯವಸ್ಥೆಗೆ ದೊಡ್ಡ ಸವಾಲಾಗಿ ಎದುರಾಗುತ್ತಿದೆ. ಮೂತ್ರಪಿಂಡ ಕಾಯಿಲೆಗೆ ಮುಖ್ಯವಾದ Renal Replacement Therapy (RRT) ಆಗಿರುವ ಹೀಮೊಡಯಾಲಿಸಿಸ್ ಸೌಲಭ್ಯಗಾಗಿ ವಿಶೇಷ ಮೂಲಸೌಕರ್ಯ ಮತ್ತು ಕಡ್ಡಾಯವಾಗಿ ಆಸ್ಪತ್ರೆಗೆ ಭೇಟಿ ಮಾಡಬೇಕಾಗಿರುತ್ತದೆ. ಗಂಟೋನೀಯಲ್ ಡಯಾಲಿಸಿಸ್‌ (FD) ಒಂದು ಸುಲಭವಾಗಿ ಮಾಡಬಹುದಾದ ಮತ್ತು ರೋಗಿಗಳಿಗೆ ಅನುಕೂಲಕರವಾದ ಪರ್ಯಾಯ ಚಿಕಿತ್ಸೆ ವಿಭಾಗವಾಗಿರುತ್ತದೆ. ಸದರಿ ವೆರಿಟೋನೀಯಲ್ ಡಯಾಲಿಸಿಸ್ (PD) ಅನ್ನು ಮನೆಯಲ್ಲಿಯ ಚಿಕಿತ್ಸೆ ನಡೆಸಲು ಸಾಧ್ಯವಾಗುವುದರಿಂದ ಆಸ್ಪತ್ರೆಗೆ ಭೇಟಿನೀಡುವ ಅವಶ್ಯಕತೆ ಕಡಿಮೆಯಾಗುತ್ತದೆ. ಪ್ರಧಾನಮಂತ್ರಿ ರಾಷ್ಟ್ರೀಯ ಡಯಾಲಿಸಿಸ್‌ ಕಾರ್ಯಕ್ರಮದಡಿಯಲ್ಲಿ (PMNDP) ಕರ್ನಾಟಕದಲ್ಲಿ ಎಲ್ಲಾ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ನೇರವಾಗಿ, ಪರೋಕ್ಷವಾಗಿ ನೇಮಕಗೊಂಡಿರುವ ಎಲ್ಲಾ ಎ ಗುಂಪಿನ ಅರ್ಹ ಅಧಿಕಾರಿಗಳು ಕಡ್ಡಾಯವಾಗಿ ಸಂಬಂಳ ಪ್ಯಾಕೇಜಿನಲ್ಲಿ ನೋಂದಾಯಿಸಿಕೊಳ್ಳುವುದು ಕಡ್ಡಾಯಗೊಳಿಸಲಾಗಿತ್ತು. ಇದರಡಿ ನೋಂದಾಯಿಸಿಕೊಳ್ಳಲು ಹೆಚ್ಚುವರಿಯಾಗಿ 15 ದಿನಗಳ ಕಾಲಾವಧಿಯನ್ನು ವಿಸ್ತರಿಸಿ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಿದ್ದು,  ಎಲ್ಲಾ ಅರ್ಹ ‘ಎ’ ಗುಂಪಿನ ಅಧಿಕಾರಿಗಳಿಗೆ ಕಡ್ಡಾಯವಾಗಿ ಸಂಬಳ ಪ್ಯಾಕೇಜಿನಲ್ಲಿ ನೋಂದಾಯಿಸಿಕೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ಹಾಗೂ ದಿನಾಂಕ: 15.09.2025ರೊಳಗಡೆ ನೋಂದಾಯಿಸಿಕೊಳ್ಳದ ಅಧಿಕಾರಿಗಳ ಸಂಬಳದ ವಿತರಣೆಯನ್ನು ತಡೆಹಿಡಿಯಲು ಕ್ರಮ ಕೈಗೊಳ್ಳಲು ತಿಳಿಸಲಾಗಿತ್ತು ಎಂದಿದ್ದಾರೆ. ಆದರೆ, ‘ಎ’ ಗುಂಪಿನ ಅಧಿಕಾರಿಗಳು ಸಂಬಳ ಪ್ಯಾಕೇಜಿನಲ್ಲಿ ನೋಂದಾಯಿಸಿಕೊಳ್ಳುವಲ್ಲಿ ಇನ್ನೂ ಹೆಚ್ಚಿನ ಕಾಲಾವಕಾಶ ಕೋರಿದ್ದರಿಂದ, ‘ಎ’ ಗುಂಪಿನ ಅಧಿಕಾರಿಗಳಿಗೆ ಸಂಬಳ ಪ್ಯಾಕೇಜಿನಲ್ಲಿ ನೋಂದಾಯಿಸಿಕೊಳ್ಳಲು ದಿನಾಂಕ:30.09.2025ರ ವರೆಗೆ ಕಾಲಾವಕಾಶವನ್ನು ವಿಸ್ತರಿಸಲಾಗಿದೆ ಎಂದು ಹೇಳಿದ್ದಾರೆ. https://kannadanewsnow.com/kannada/good-news-for-dialysis-patients-from-the-state-government-treatment-will-now-be-available-at-home/

Read More

ಹಾಸನ: ಶುಕ್ರವಾರ ರಾತ್ರಿ ಹಾಸನದ ಮೊಸಳೆಹೊಸಳ್ಳಿಯಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಟ್ರಕ್ ಒಂದು ಜನರ ಮೇಲೆ ನುಗ್ಗಿದ ಪರಿಣಾಮವಾಗಿ 8 ಜನರು ಸ್ಥಳದಲ್ಲೇ ಸಾವನ್ನಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಮಾಹಿತಿ ನೀಡಿದ್ದಾರೆ. ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಹಾಸನದ ಮೊಸಳೆ ಹೊಸಳ್ಳಿಯಲ್ಲಿ ಗಣೇಶ ವಿಸರ್ಜನೆಯ ಮೆರವಣಿಗೆ ವೇಳೆ ಟ್ರಕ್ ಹರಿದು 8 ಜನರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. 26 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ 18 ಜನರನ್ನು ಹಾಸನದ ಹಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನುಳಿದ 7 ಜನರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಈ ಘಟನೆಯ ಬೆಚ್ಚಿ ಬೀಳಿಸೋ ವೀಡಿಯೋ ಕೆಳಗಿದೆ ನೋಡಿ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ ಹಾಸನದಲ್ಲಿ ಗಣೇಶ ವಿಸರ್ಜನೆಗಾಗಿ ಮೆರವಣಿಗೆಯಲ್ಲಿ ತೆರಳುತ್ತಿದ್ದವರ ಮೇಲೆ ಲಾರಿ ಹರಿದು ಹಲವರು ಸಾವಿಗೀಡಾಗಿ, ಸುಮಾರು 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡ ಸುದ್ದಿ ತಿಳಿದು…

Read More

ಬೆಂಗಳೂರು: ಹಾಸನದಲ್ಲಿ ಶುಕ್ರವಾರ ರಾತ್ರಿ ಗಣೇಶ ಮೂರ್ತಿ ಮೆರವಣಿಗೆ ವೇಳೆ ಲಾರಿ ಹರಿದು ಘೋರ ದುರಂತ ಸಂಭವಿಸಿದೆ. ಈ ದುರಂತದಲ್ಲಿ ಮೃತರಾದಂತ ಕುಟುಂಬಸ್ಥರಿಗೆ ತಲಾ 5. ಲಕ್ಷ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಹಾಸನದಲ್ಲಿ ಗಣೇಶ ವಿಸರ್ಜನೆಗಾಗಿ ಮೆರವಣಿಗೆಯಲ್ಲಿ ತೆರಳುತ್ತಿದ್ದವರ ಮೇಲೆ ಲಾರಿ ಹರಿದು ಹಲವರು ಸಾವಿಗೀಡಾಗಿ, ಸುಮಾರು 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡ ಸುದ್ದಿ ತಿಳಿದು ಅತೀವ ದುಃಖವಾಯಿತು ಎಂದಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ. ಮೃತರ ಕುಟುಂಬಗಳಿಗೆ ಸರ್ಕಾರದ ವತಿಯಿಂದ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು. ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಇದು ಅತ್ಯಂತ ನೋವಿನ ಘಳಿಗೆ. ಅಪಘಾತ ಸಂತ್ರಸ್ತ ಕುಟುಂಬಗಳ ಜೊತೆ ನಾವೆಲ್ಲರೂ ನಿಲ್ಲೋಣ ಎಂದು ಹೇಳಿದ್ದಾರೆ. https://twitter.com/siddaramaiah/status/1966554413369303213 ಅಂದಹಾಗೆ ಹಾಸನದ ಮೊಸಳೆ ಹೊಸಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಲಾರಿ…

Read More