Subscribe to Updates
Get the latest creative news from FooBar about art, design and business.
Author: kannadanewsnow09
BIG BREAKING: ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ಟ್ರಕ್ ಹರಿದು 8 ಮಂದಿ ಸಾವು, 26 ಜನರಿಗೆ ಗಾಯ: ಸಚಿವ ಕೃಷ್ಣಭೈರೇಗೌಡ
ಹಾಸನ: ಶುಕ್ರವಾರ ರಾತ್ರಿ ಹಾಸನದ ಮೊಸಳೆಹೊಸಳ್ಳಿಯಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಟ್ರಕ್ ಒಂದು ಜನರ ಮೇಲೆ ನುಗ್ಗಿದ ಪರಿಣಾಮವಾಗಿ 8 ಜನರು ಸ್ಥಳದಲ್ಲೇ ಸಾವನ್ನಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಮಾಹಿತಿ ನೀಡಿದ್ದಾರೆ. ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಹಾಸನದ ಮೊಸಳೆ ಹೊಸಳ್ಳಿಯಲ್ಲಿ ಗಣೇಶ ವಿಸರ್ಜನೆಯ ಮೆರವಣಿಗೆ ವೇಳೆ ಟ್ರಕ್ ಹರಿದು 8 ಜನರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. 26 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ 18 ಜನರನ್ನು ಹಾಸನದ ಹಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನುಳಿದ 7 ಜನರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಈ ಕೆಳಗಿದೆ ಘೋರ ಘಟನೆಯ ವೀಡಿಯೋ ನೋಡಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಸಂತಾಪ ಹಾಸನ ತಾಲೂಕಿನ ಮೊಸಳೆಹೊಸಳ್ಳಿಯಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಭೀಕರ ಅಪಘಾತ ಸಂಭವಿಸಿ ಹಲವರು ಜೀವ ಕಳೆದುಕೊಂಡು, 20ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿರುವ ಸುದ್ದಿ ಕೇಳಿ ತೀವ್ರ ಆಘಾತ…
ಹಾಸನ: ಜಿಲ್ಲೆಯಲ್ಲಿ ಘೋರ ದುರ್ಘಟನೆಯೊಂದು ಸಂಭವಿಸಿದೆ. ಗಣೇಶ ಮೆರವಣಿಗೆ ವೇಳೆ ಟ್ರಕ್ ಹರಿದು ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದರೇ, 20ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ. ಇದೀಗ ಭಯಾನಕ ವೀಡಿಯೋ ವೈರಲ್ ಆಗಿದೆ. ಹಾಸನ ತಾಲ್ಲೂಕಿನ ಮೊಸಳೆಹೊಸಳ್ಳಿ ಬಳಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಟ್ರಕ್ ಗಣೇಶ ಮೆರವಣಿಗೆ ಜನರ ಮೇಲೆ ನುಗ್ಗಿದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಕಠ್ಮಂಡು: ನೇಪಾಳದ ಮಾಜಿ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ ಶುಕ್ರವಾರ ನೇಪಾಳದ ಮಧ್ಯಂತರ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು, ದೇಶದ ಮೊದಲ ಮಹಿಳಾ ಸರ್ಕಾರದ ಮುಖ್ಯಸ್ಥೆಯಾದರು. ಪ್ರಧಾನಿ ಹುದ್ದೆಗೆ ಸ್ಪರ್ಧಿಗಳೆಂದು ಪರಿಗಣಿಸಲಾದ ಕುಲ್ಮನ್ ಘಿಸಿಂಗ್ ಮತ್ತು ಸುಡಾನ್ ಗುರುಂಗ್ ಸೇರಿದಂತೆ ಅನೇಕ ಕ್ಯಾಬಿನೆಟ್ ಮಂತ್ರಿಗಳೊಂದಿಗೆ ಅವರು ಪ್ರಮಾಣ ವಚನ ಸ್ವೀಕರಿಸಿದರು. ಕೆಪಿ ಶರ್ಮಾ ಓಲಿ ಅವರ ಸರ್ಕಾರವನ್ನು ಉರುಳಿಸಿದ ದೇಶದ ಜನರಲ್ ಝಡ್ ನೇತೃತ್ವದ ದಿನಗಳ ಮಾರಕ ಪ್ರತಿಭಟನೆಗಳ ನಂತರ ಈ ಪ್ರಗತಿ ಸಂಭವಿಸಿತು ಮತ್ತು ಹಿಮಾಲಯನ್ ರಾಷ್ಟ್ರವು ಪ್ರಕ್ಷುಬ್ಧತೆಗೆ ಒಳಗಾಯಿತು. ಸೇನಾ ಮುಖ್ಯಸ್ಥ ಅಶೋಕ್ ರಾಜ್ ಸಿಗ್ಡೆಲ್ ಮತ್ತು ಅಧ್ಯಕ್ಷ ರಾಮ್ ಚಂದ್ರ ಪೌಡೆಲ್ ಅವರೊಂದಿಗೆ ಪ್ರತಿಭಟನಾಕಾರರು ಮ್ಯಾರಥಾನ್ ಮಾತುಕತೆ ನಡೆಸಿದ ನಂತರ 73 ವರ್ಷದ ಸುಶೀಲಾ ಕರ್ಕಿ ಅವರನ್ನು ಮಧ್ಯಂತರ ಸರ್ಕಾರದ ಮುಖ್ಯಸ್ಥೆಯಾಗಿ ನೇಮಿಸುವ ನಿರ್ಧಾರ ತೆಗೆದುಕೊಳ್ಳಲಾಯಿತು, ನಂತರ ಸಂಸತ್ತನ್ನು ವಿಸರ್ಜಿಸಿ ಕಾರ್ಕಿಯನ್ನು ಮಧ್ಯಂತರ ಪ್ರಧಾನಿಯಾಗಿ ನೇಮಿಸಬೇಕೆಂಬ ಪ್ರತಿಭಟನಾಕಾರರ ಬೇಡಿಕೆಗಳನ್ನು ಅಂಗೀಕರಿಸಲಾಯಿತು. https://twitter.com/ANI/status/1966534602438132029
ಹಾಸನ: ಜಿಲ್ಲೆಯಲ್ಲಿ ಘೋರ ದುರ್ಘಟನೆಯೊಂದು ಸಂಭವಿಸಿದೆ. ಗಣೇಶ ಮೆರವಣಿಗೆ ವೇಳೆ ಟ್ರಕ್ ಹರಿದು ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದರೇ, 20ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ. ಹಾಸನ ತಾಲ್ಲೂಕಿನ ಮೊಸಳೆಹೊಸಳ್ಳಿ ಬಳಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಟ್ರಕ್ ಗಣೇಶ ಮೆರವಣಿಗೆ ಜನರ ಮೇಲೆ ನುಗ್ಗಿದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. https://kannadanewsnow.com/kannada/increase-in-booking-volume-at-pilgrimage-sites-on-make-my-trip/ https://kannadanewsnow.com/kannada/sushila-karki-takes-the-oath-as-the-new-prime-minister-of-nepal/
ಬೆಂಗಳೂರು: ದೇಶಾದ್ಯಂತ ತೀರ್ಥಯಾತ್ರೆಗೆ ತೆರಳುವವರ ಸಂಖ್ಯೆ ಹೆಚ್ಚುತ್ತಿದ್ದು, 2024-25 ವರ್ಷದಲ್ಲಿ ತೀರ್ಥಯಾತ್ರೆಗಳ ವಸತಿ ಬುಕ್ಕಿಂಗ್ನಲ್ಲಿ ಶೇ. 19ರಷ್ಟು ವೃದ್ಧಿಯಾಗಿದೆ ಎಂದು ಮೇಕ್ ಮೈ ಟ್ರಿಪ್ ತಿಳಿಸಿದೆ. ಈ ಕುರಿತು ಮಾತನಾಡಿದ ಮೇಕ್ಮೈಟ್ರಿಪ್ನ ಸಹಸ್ಥಾಪಕ ಮತ್ತು ಗ್ರೂಪ್ ಸಿಇಒ ರಾಜೇಶ್ ಮಗೊವ್, ತನ್ನ ಬುಕ್ಕಿಂಗ್ ಆಪ್ನಲ್ಲಿ ತೀರ್ಥಯಾತ್ರಿಕ ಸಂಖ್ಯೆ ಹೆಚ್ಚುತ್ತಿದ್ದು, ದೇಶಾದ್ಯಂತ 34 ತಾಣಗಳಲ್ಲಿ ಎರಡಂಕಿ ಬೆಳವಣಿಗೆ ದಾಖಲಿಸಿದೆ, ಇನ್ನು, 15 ತಾಣಗಳಲ್ಲಿ ಶೇ.25ಕ್ಕಿಂತ ಹೆಚ್ಚಿನ ಬೆಳವಣಿಗೆ ಸಾಧಿಸುವ ಮೂಲಕ ಆಧ್ಯಾತ್ಮಿಕ ಪ್ರಯಾಣಕ್ಕೆ ಜನ ಆದ್ಯತೆ ನೀಡುತ್ತಿರುವುದು ತಿಳಿದುಬಂದಿದೆ. ಪ್ರಮುಖ ಧಾರ್ಮಿಕ ಸ್ಥಳಗಳಾದ ಪ್ರಯಾಗ್ರಾಜ್, ವಾರಣಾಸಿ, ಅಯೋಧ್ಯ, ಪುರಿ, ಅಮೃತ್ಸರ, ಮತ್ತು ತಿರುಪತಿ ಸೇರಿದಂತೆ ಮುಂತಾದ ಸ್ಥಳಗಳಲ್ಲಿ ಹೆಚ್ಚು ಬುಕ್ಕಿಂಗ್ ಆಗಿವೆ. ಜೊತೆಗೆ, ಖಾತುಷ್ಯಾಮ್ ಜಿ, ಓಂಕಾರೇಶ್ವರ ಮತ್ತು ತಿರುಚೆಂದೂರ್ ಮುಂತಾದ ಸ್ಥಳಗಳೂ ಕೂಡ ಹೆಚ್ಚು ಬುಕ್ಕಿಂಗ್ ನೋಡಬಹುದು. ಯಾತ್ರಾ ಬೇಡಿಕೆಯಲ್ಲಿನ ಪ್ರಬಲ ಬೆಳವಣಿಗೆಗೆ, ಪ್ರಮುಖ ಗಮ್ಯಗಳಾದ್ಯಂತ ವಸತಿಯ ಚುರುಕಾದ ವಿಸ್ತರಣೆಯೂ ಕಾರಣವಾಗಿದೆ. ಪ್ರಯಾಣಿಕರು ಬಹುತೇಕವಾಗಿ, ಚಿಕ್ಕದಾದ, ಉದ್ದಿಶ್ಯಿತ ವಸತಿಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದು,…
ಹಾಸನ: ಗಣೇಶ ಮೆರವಣಿಗೆ ವೇಳೆಯಲ್ಲಿ ಟ್ರಕ್ ಒಂದು ಚಾಲಕನ ನಿಯಂತ್ರಣ ತಪ್ಪಿ ಜನರ ಮೇಲೆ ಹರಿದ ಪರಿಣಾಮ, ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿ, ಹಲವರು ಗಾಯಗೊಂಡಿರುವಂತ ಘೋರ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ತಾಲ್ಲೂಕಿನ ಮೊಸಳೆಹೊಸಳ್ಳಿ ಬಳಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಗಣೇಶ ಮೆರವಣಿಗೆ ವೇಳೆ ಟ್ರಕ್ ಹರಿದು ನಾಲ್ವರು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದು, ಸಾವು-ನೋವಿನ ಸಂಖ್ಯೆ ಹೆಚ್ಚಾಗುವ ಸಾಖ್ಯತೆ ಇದೆ ಎನ್ನಲಾಗುತ್ತಿದೆ. https://kannadanewsnow.com/kannada/shots-fired-outside-actor-disha-patanis-house/ https://kannadanewsnow.com/kannada/the-hearing-of-the-pil-filed-against-the-selection-of-writer-banu-mushtaq-for-the-dasara-inauguration-on-the-15th-has-been-scheduled/
ಬೆಂಗಳೂರು: ರಾಜ್ಯ ಸರ್ಕಾರದಿಂದ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್ ಆಯ್ಕೆ ಮಾಡಲಾಗಿತ್ತು. ಈ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಸಲ್ಲಿಸಲಾಗಿತ್ತು. ಈ ಅರ್ಜಿಗಳನ್ನು ಸೆಪ್ಟೆಂಬರ್.15ಕ್ಕೆ ವಿಚಾರಣೆ ನಡೆಸಲು ನಿಗದಿ ಪಡಿಸಲಾಗಿದೆ. ಲೇಖಕಿ ಬಾನು ಮುಷ್ತಾಕ್ ಅವರು ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಹೈಕೋರ್ಟ್ ಗೆ ಮೂರು ಪಿಐಎಲ್ ಸಲ್ಲಿಕೆಯಾಗಿದ್ದವು. ಈ ಅರ್ಜಿಗಳನ್ನು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದ ವಿಭಾಗೀಯ ಪೀಠದಲ್ಲಿ ವಿಚಾರಣೆಗೆ ದಿನಾಂಕ ನಿಗದಿ ಪಡಿಸಲಾಗಿದೆ. ಸೆಪ್ಟೆಂಬರ್.15ರಂದು ಮಾಜಿ ಸಂಸದ ಪ್ರತಾಪ್ ಸಿಂಹ, ಟಿ.ಗಿರೀಶ್ ಕುಮಾರ್, ಹೆಚ್.ಎಸ್ ಗೌರವ್ ಸಲ್ಲಿಸಿದ್ದಂತ ಪಿಐಎಲ್ ಅರ್ಜಿಗಳ ವಿಚಾರಣೆ ನಡೆಯಲಿದೆ. ದಸರಾ ಉದ್ಘಾಟನೆ ಹಿಂದೂ ಸಂಪ್ರದಾಯದಂತೆ ನಡೆಯಬೇಕು. ಸರ್ಕಾರ ನೀಡಿರುವ ಆಹ್ವಾನ ಹಿಂಪಡೆಯುವಂತೆ ನಿರ್ದೇಶನ ಕೋರಲಾಗಿದೆ. https://kannadanewsnow.com/kannada/sushila-karki-takes-the-oath-as-the-new-prime-minister-of-nepal/ https://kannadanewsnow.com/kannada/shots-fired-outside-actor-disha-patanis-house/
ನೇಪಾಳ: ನೇಪಾಳ ಯುವಜನರ ನೇತೃತ್ವದ ಪ್ರತಿಭಟನೆಗಳ ನಡುವೆ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಅವರ ರಾಜೀನಾಮೆಯ ನಂತರ, ನೇಪಾಳದ ಮಾಜಿ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ ಶುಕ್ರವಾರ ಮಧ್ಯಂತರ ಸರ್ಕಾರದ ಮುಖ್ಯಸ್ಥೆಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನೇಪಾಳದ ನೂತನ ಪ್ರಧಾನಿಯಾಗಿ ಸುಶೀಲಾ ಕರ್ಕಿ ಪ್ರಮಾಣವಚನ ಸ್ವೀಕರಿಸಿದ್ದು, ನೇಪಾಳದ ಮೊದಲ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ರಾಷ್ಟ್ರಪತಿಗಳ ನಿವಾಸ ಶೀತಲ್ ನಿವಾಸ್ನಲ್ಲಿ ರಾತ್ರಿ 8:45 ಕ್ಕೆ (ಸ್ಥಳೀಯ ಸಮಯ) ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಿತು ಎಂದು ರಾಷ್ಟ್ರಪತಿ ಕಚೇರಿಯ ಮೂಲಗಳು ತಿಳಿಸಿವೆ. ನೇಪಾಳದ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿ ಕಾರ್ಕಿ, ಜುಲೈ 2016 ರಿಂದ ಜೂನ್ 2017 ರವರೆಗೆ ಸೇವೆ ಸಲ್ಲಿಸಿದರು. ಪರಿವರ್ತನಾ ನ್ಯಾಯ ಮತ್ತು ಚುನಾವಣಾ ವಿವಾದಗಳ ಕುರಿತಾದ ತೀರ್ಪುಗಳಿಗೆ ಹೆಸರುವಾಸಿಯಾದ ಅವರು 1979 ರಲ್ಲಿ ಕಾನೂನು ಅಭ್ಯಾಸ ಮಾಡಲು ಪ್ರಾರಂಭಿಸಿದರು, 2007 ರಲ್ಲಿ ಹಿರಿಯ ವಕೀಲರಾಗಿ ನೇಮಕಗೊಂಡರು ಮತ್ತು 2009 ರಲ್ಲಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡರು. ದೇಶದ Gen-Z ಚಳವಳಿಯ…
ಬರೇಲಿ: ಗುರುವಾರ ತಡರಾತ್ರಿ ಉತ್ತರ ಪ್ರದೇಶದ ಬರೇಲಿಯಲ್ಲಿರುವ ಬಾಲಿವುಡ್ ನಟಿ ದಿಶಾ ಪಟಾನಿ ಅವರ ಮನೆಯ ಹೊರಗೆ ಗುಂಡು ಹಾರಿಸಲಾಗಿದೆ. ಪೊಲೀಸರ ಪ್ರಕಾರ, ಅಪರಿಚಿತ ದುಷ್ಕರ್ಮಿಗಳು ಮೂರರಿಂದ ನಾಲ್ಕು ಸುತ್ತು ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಗುಂಡಿನ ದಾಳಿಗೆ ಕಾರಣರಾದವರನ್ನು ಪತ್ತೆಹಚ್ಚಲು ಅಧಿಕಾರಿಗಳು ಹುಡುಕಾಟ ಆರಂಭಿಸಿದ್ದಾರೆ. https://kannadanewsnow.com/kannada/do-not-take-loans-expecting-forgiveness-whoever-comes-to-power-in-the-future-will-not-forgive-loans-d-k-suresh/
ಕನಕಪುರ: “ಬೆಳೆಸಾಲ, ಹಸು ಸಾಲ ಪಡೆದು ಆರ್ಥಿಕವಾಗಿ ಸಬಲರಾಗಿ. ಬೆಂಗಳೂರಿಗೆ ವಲಸೆ ಹೋಗಿ ಸೆಕ್ಯುರಿಟಿ ಗಾರ್ಡ್ ಗಳಾಗಿ, ಹೋಟೆಲ್ ಕೆಲಸ ಮಾಡಿಕೊಂಡು ಕಷ್ಟದಲ್ಲಿ ಜೀವನ ತಳ್ಳಬೇಡಿ. ಸ್ವಂತ ಊರಿನಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಿ” ಎಂದು ಬಮುಲ್ ಅಧ್ಯಕ್ಷರಾದ ಡಿ.ಕೆ.ಸುರೇಶ್ ಅವರು ಕರೆ ನೀಡಿದರು. ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಹಾಗೂ ಕನಕಪುರ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಕನಕಪುರದ ಅಂಬೇಡ್ಕರ್ ಭವನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬೆಳೆಸಾಲ, ಸ್ತ್ರೀ ಶಕ್ತಿ ಸಹಾಯ ಸಂಘದ ಸಾಲ ಮತ್ತು ಸಾಕಾಣಿಕೆ ಸಾಲ ವಿತರಣಾ ಸಮಾರಂಭದಲ್ಲಿ ಡಿ.ಕೆ. ಸುರೇಶ್ ಅವರು ಮಾತನಾಡಿದರು. “1.10 ಲಕ್ಷ ಜನರಿಗೆ ಬಿಡಿಸಿಸಿ ಬ್ಯಾಂಕ್ ಸಾಲ ನೀಡಿದೆ. ಅದರಲ್ಲಿ ನಮ್ಮ ಕ್ಷೇತ್ರದ ಜನರೇ 15,304 ಜನರಿದ್ದಾರೆ. ಇವರಿಗೆ 300 ಕೋಟಿಯಷ್ಟು ಬೆಳೆ ಹಾಗೂ ಜಾನುವಾರು ಸಾಲ ನೀಡಲಾಗಿದೆ. ಯಾರ ಬಳಿಯೂ ಕೈಯೊಡ್ಡಿ ಬದುಕಬೇಡಿ ಎಂದು ನಾವು ನಿಮಗೆ ಆಸರೆಯಾಗಿ ನಿಲ್ಲುತ್ತಿದ್ದೇವೆ. ಬೆಂಗಳೂರಿನಲ್ಲಿ ಮನೆಗೆಲಸಕ್ಕೆ ಹೋಗುವ ಬದಲು ತಾಯಂದಿರು ಎರಡು ಹಸು…












