Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಮದ್ಯದ ದರವನ್ನು ಹೆಚ್ಚಳ ಮಾಡಲಾಗಿತ್ತು. ಹೀಗಾಗಿ ಎಣ್ಣೆ ಪ್ರಿಯರಿಗೆ ಶಾಕ್ ಮೇಲೆ ಶಾಕ್ ನೀಡಲಾಗಿತ್ತು. ಆದರೇ ಇದೀಗ ಶೀಘ್ರವೇ ಕರ್ನಾಟಕದಲ್ಲಿ ಶೇ.15ರಿಂದ 25ರಷ್ಟು ಮದ್ಯದ ದರ ಇಳಿಕೆ ಮಾಡುವ ಮುನ್ಸೂಚನೆಯೊಂದು ಹೊರಬಿದ್ದಿದೆ. ಹೌದು… ಇಂತಹ ಸುದ್ದಿಯೊಂದು ರಾಜ್ಯ ಸರ್ಕಾರದ ಉನ್ನತ ಮೂಲಗಳಿಂದ ಹೊರ ಬಿದ್ದಿ. ಮಾಹಿತಿಯ ಪ್ರಕಾರ ಕರ್ನಾಟಕ ಅಬಕಾರಿ ತಿದ್ದುಪಡಿ ನಿಯಮಗಳು 2024ಕಕ್ಕೆ ಜೂನ್ ನಲ್ಲಿ ತಿದ್ದುಪಡಿ ನೀಡಲಾಗಿತ್ತು. ಈಗ ಈ ತಿದ್ದುಪಡಿ ಕಾಯ್ದೆಯನ್ನು ಮುಂದಿನ ವಾರದೊಳಗೆ ಗೆಜೆಟ್ ಅಧಿಸೂಚನೆಯಲ್ಲಿ ಪ್ರಕಟಿಸೋ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ರಾಜ್ಯ ಅಬಕಾರಿ ಇಲಾಖೆಯ ಉನ್ನತ ಮೂಲಗಳ ಮಾಹಿತಿಯಂತೆ ಹೊರ ರಾಜ್ಯಗಳಿಗಿಂತ ಭಾರತೀಯ ನಿರ್ಮಿತ ಮದ್ಯದ ಮೇಲಿನ ಅಬಕಾರಿ ಸುಂಕದ ಸ್ಲ್ಯಾಬ್ ಗಳ ಸಂಖ್ಯೆಯನ್ನು 18 ರಿಂದ 16ಕ್ಕೆ ಇಳಿಸುವ ಸಾಧ್ಯತೆ ಇದೆ. ಈ ಮೂಲಕ ಕರ್ನಾಟಕದಲ್ಲಿ ಮದ್ಯದ ದರ ಇಳಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. https://kannadanewsnow.com/kannada/bjp-will-protest-to-resolve-internal-issues-dy-cm-dk-shivakumar-shivakumars-sarcasm/ https://kannadanewsnow.com/kannada/good-news-for-the-women-of-the-state-you-will-get-the-benefits-of-these-schemes-from-the-state-government/ https://kannadanewsnow.com/kannada/big-news-7-years-in-jail-along-with-rs-2-lakh-fine-for-assaulting-doctors-in-state/
ಬೆಂಗಳೂರು : “ಬಿಜೆಪಿಯಲ್ಲಿ ಆಂತರಿಕವಾಗಿ ಸಮಸ್ಯೆಯಿದೆ. ಅದನ್ನು ಸರಿ ಮಾಡಿಕೊಳ್ಳಲು ಈಗ ಮತ್ತೊಮ್ಮೆ ಪ್ರತಿಭಟನೆ ಮಾಡುತ್ತಿದ್ದಾರೆ. ಅವರ ಪ್ರತಿಭಟನೆಯಲ್ಲಿ ಯಾವುದೇ ಹುರುಳಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವ್ಯಂಗ್ಯವಾಡಿದರು. ಸದಾಶಿವನಗರದ ನಿವಾಸದ ಬಳಿ ಬಿಜೆಪಿಯ ಪ್ರತಿಭಟನೆ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು “ಮುಡಾ ಅಕ್ರಮ ಎಂದು ಮೈಸೂರು ಚಲೋ ಮಾಡಿದರು. ಅದಕ್ಕೆ ಈಗಾಗಲೇ ನಾವು ಉತ್ತರ ಕೊಟ್ಟಿದ್ದೇವೆ. ಈಗ ಪ್ರತಿಭಟನೆ ಮಾಡುವವರನ್ನು ಬೇಡ ಎನ್ನಲು ಆಗುತ್ತದೆಯೇ? ಬೇಡ ಎಂದು ಹೇಳಿದವರು ಯಾರು?” ಎಂದು ಕುಟುಕಿದರು. ತುಂಗಭದ್ರಾ ತುಂಬಿದ ತಕ್ಷಣ ಬಾಗಿನ ಅರ್ಪಣೆ “ತುಂಗಭದ್ರಾ ಅಣೆಕಟ್ಟಿನ ಗೇಟ್ ಅನ್ನು ಕಾರ್ಮಿಕರ, ಇಂಜಿನಿಯರ್ ಗಳ, ಅಧಿಕಾರಿಗಳ ಶ್ರಮದಿಂದ ದುರಸ್ತಿ ಮಾಡಲಾಗಿದೆ. ಅಣೆಕಟ್ಟು ತುಂಬಿದ ತಕ್ಷಣ ನಾನು ಮತ್ತು ಮುಖ್ಯಮಂತ್ರಿಗಳು ಬಾಗಿನ ಅರ್ಪಿಸುವ ಕೆಲಸ ಮಾಡುತ್ತೇವೆ” ಎಂದರು. “ದುರಸ್ತಿ ಕಾರ್ಯದಲ್ಲಿ ತೊಡಗಿಕೊಂಡ ಪ್ರತಿಯೊಬ್ಬ ಕಾರ್ಮಿಕರನ್ನು ಗೌರವಿಸುವ ಕೆಲಸ ಸರ್ಕಾರ ಮಾಡಲಿದೆ. ಇಡೀ ದೇಶವೇ ಏನಾಗಬಹುದು ಎಂದು ಕಾತರದಿಂದ ನೋಡುತ್ತಿತ್ತು. ನಾವು ಇದರಲ್ಲಿ ಯಶಸ್ಸು ಕಂಡಿದ್ದೇವೆ.…
ನವದೆಹಲಿ: ನೀವು ವೈದ್ಯಕೀಯ ತುರ್ತುಸ್ಥಿತಿಯನ್ನು ಎದುರಿಸುತ್ತಿದ್ದರೆ ಅಥವಾ ತುರ್ತು ಚಿಕಿತ್ಸೆಯ ಅಗತ್ಯವಿದ್ದರೆ, ನಿಮ್ಮ ಉದ್ಯೋಗಿ ಭವಿಷ್ಯ ನಿಧಿ (Employee Provident Fund -EPF) ಖಾತೆಯಿಂದ ಹಣವನ್ನು ಹಿಂಪಡೆಯಬಹುದು. ವೈದ್ಯಕೀಯ ಚಿಕಿತ್ಸೆ, ಮದುವೆ, ಶಿಕ್ಷಣ, ಗೃಹ ಸಾಲಗಳು ಮತ್ತು ಮನೆ ನಿರ್ಮಾಣ ವೆಚ್ಚಗಳಂತಹ ನಿರ್ದಿಷ್ಟ ಅನಿರೀಕ್ಷಿತ ಹಣಕಾಸು ಅಗತ್ಯಗಳನ್ನು ಸರಿದೂಗಿಸಲು ಇಪಿಎಫ್ಒ ಸದಸ್ಯರಿಗೆ ತಮ್ಮ ಖಾತೆಗಳಿಂದ ಮುಂಗಡ ಹಿಂಪಡೆಯಲು ಅವಕಾಶ ನೀಡುತ್ತದೆ. ನೌಕರರ ಭವಿಷ್ಯ ನಿಧಿ (ಇಪಿಎಫ್) ಸಂಬಳ ಪಡೆಯುವ ಉದ್ಯೋಗಿಗಳಿಗೆ ನಿವೃತ್ತಿ ಉಳಿತಾಯ ಕಾರ್ಯಕ್ರಮವಾಗಿದ್ದು, ಅಲ್ಲಿ ಅವರ ಮಾಸಿಕ ಆದಾಯದ ಒಂದು ಭಾಗವನ್ನು ನೌಕರರ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್ಒ) ಯಲ್ಲಿ ಠೇವಣಿ ಇಡಲಾಗುತ್ತದೆ. ಉದ್ಯೋಗದಾತರು ಸಹ ಈ ನಿಧಿಗೆ ನಿಗದಿತ ಮೊತ್ತವನ್ನು ಕೊಡುಗೆ ನೀಡುತ್ತಾರೆ. ಕಾಲಾನಂತರದಲ್ಲಿ, ಸಂಗ್ರಹವಾದ ಕಾರ್ಪಸ್ ಉದ್ಯೋಗಿಗೆ ಅವರ ಸೇವೆಯ ಸಮಯದಲ್ಲಿ ಅಥವಾ ನಿವೃತ್ತಿಯ ನಂತರ ಆರ್ಥಿಕ ಸಂಪನ್ಮೂಲವಾಗಿ ಕಾರ್ಯನಿರ್ವಹಿಸುತ್ತದೆ. ವೈದ್ಯಕೀಯ ತುರ್ತು ಮಿತಿಗಾಗಿ ಪಿಎಫ್ ಹಿಂಪಡೆಯುವಿಕೆ ವೈದ್ಯಕೀಯ ತುರ್ತು ಪರಿಸ್ಥಿತಿಗಳು ಅಥವಾ ಮಾರಣಾಂತಿಕ ಪರಿಸ್ಥಿತಿಗಳಿಂದಾಗಿ ಆಸ್ಪತ್ರೆಗೆ…
ರಾಂಚಿ: ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಚಂಪೈ ಸೊರೆನ್ ಅವರ ಬೆಂಗಾವಲು ವಾಹನ ಬುಧವಾರ ಮುಂಜಾನೆ ಅಪಘಾತಕ್ಕೀಡಾಗಿದೆ. ಅಪಘಾತದಲ್ಲಿ ಓರ್ವ ಪೊಲೀಸ್ ಕಾನ್ಸ್ಟೇಬಲ್ ಸಾವನ್ನಪ್ಪಿದ್ದು, ಇತರ ಐವರು ಗಾಯಗೊಂಡಿದ್ದಾರೆ. ಚಂಪೈ ಸೊರೆನ್ ಅವರನ್ನು ಜಾರ್ಖಂಡ್ನ ಅವರ ಗ್ರಾಮದಲ್ಲಿ ಬಿಟ್ಟ ನಂತರ ಬೆಂಗಾವಲು ವಾಹನವು ರಾತ್ರಿ 2 ಗಂಟೆ ಸುಮಾರಿಗೆ ಹಿಂದಿರುಗುತ್ತಿತ್ತು. ಜಾರ್ಖಂಡ್ನ ಸರೈಕೆಲಾ-ಖರ್ಸಾವನ್ ಜಿಲ್ಲೆಯ ಜಿಲಿಂಗೋಡಾದಲ್ಲಿರುವ ಅವರ ಗ್ರಾಮದಲ್ಲಿ ಚಂಪೈ ಸೊರೆನ್ ಅವರನ್ನು ಬಿಟ್ಟು ಬೆಂಗಾವಲು ವಾಹನ ಹಿಂದಿರುಗುತ್ತಿತ್ತು. ಈ ವೇಳೆ ಸರೈಕೆಲಾ-ಕಂದ್ರಾ ಮುಖ್ಯರಸ್ತೆಯ ಮುಡಿಯಾ ಬಳಿ ಅಪರಿಚಿತ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ಸುದ್ದಿ ಹರಡಿದ ಕೂಡಲೇ ಸ್ಥಳೀಯ ಗ್ರಾಮಸ್ಥರು ಘಟನಾ ಸ್ಥಳಕ್ಕೆ ಬಂದರು. ಅಪಘಾತದ ಸಮಯದಲ್ಲಿ, ಪೊಲೀಸ್ ಬೆಂಗಾವಲು ವಾಹನವು ಪಲ್ಟಿಯಾದ ಪರಿಣಾಮವಾಗಿ ಚಾಲಕ ಕಾನ್ಸ್ಟೇಬಲ್ ವಿನಯ್ ಕುಮಾರ್ ಸಿಂಗ್ ಸಾವನ್ನಪ್ಪಿದ್ದಾರೆ. ವಾಹನದಲ್ಲಿದ್ದ ಇತರ ಐವರು ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸದರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡ ಎಲ್ಲರನ್ನು ಉತ್ತಮ ಚಿಕಿತ್ಸೆಗಾಗಿ ಜೆಮ್ಷೆಡ್ಪುರಕ್ಕೆ ಕಳುಹಿಸಲಾಗಿದೆ. ಗಾಯಗೊಂಡ ಪೊಲೀಸ್ ಅಧಿಕಾರಿಗಳ ಗುರುತುಗಳು…
ಕೊಪ್ಪಳ : ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪ್ರಕರಣದಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯಪಾಲರು, ತನ್ನ ವಿರುದ್ದ ಮಾತ್ರ ಯಾವುದೇ ತನಿಖಾ ವರದಿಯನ್ನು ಆಧರಿಸದೇ ಪ್ರಾಸಿಕ್ಯೂಷನ್ ಗೆ ಅನುಮತಿ ಅನುಮತಿ ನೀಡಿದ್ದಾರೆ. ಇದು ತಾರತಮ್ಯವಲ್ಲವೇ ಎಂದು ಮುಖ್ಯಮಂತ್ರಿಗಳು ಖಾರವಾಗಿ ಪ್ರಶ್ನಿಸಿದರು. ಅವರು ಇಂದು ಗಿಣಿಗೇರ ಏರ್ಸ್ಟ್ರಿಪ್ ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ವಿರುದ್ಧ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸುವ ಬಗ್ಗೆಯೇ ಮುಖ್ಯಮಂತ್ರಿಗಳು ಯೋಚಿಸುತ್ತಿದ್ದಾರೆ ಎಂಬ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಾ, ಕುಮಾರಸ್ವಾಮಿಯವರನ್ನು ಬಂಧಿಸುವ ಅಗತ್ಯಬಿದ್ದರೆ ಮುಲಾಜಿಲ್ಲದೆ ಬಂದಿಸ್ತೀವಿ. ಆದರೆ ಈಗ ಇನ್ನೂ ಬಂಧಿಸುವ ಸನಗನಿವೇಶ ಬಂದಿಲ್ಲ. ಕುಮಾರಸ್ವಾಮಿಯವರು ಈಗಲೇ ಹೆದರಿದ್ದಾರೆ ಎಂದು ಸ್ಪಷ್ಟವಾಗಿ ನುಡಿದರು. ಆದರೆ ಈ ಪ್ರಕರಣ ಸಂಬಂಧಪಟ್ಟಂತೆ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಬಹುದು ಎಂಬ ಭಯ ಅವರನ್ನು ಕಾಡುತ್ತಿದೆ. ಅವರ ವಿರುದ್ಧ ಲೋಕಾಯುಕ್ತ ಎಸ್ ಐ ಟಿಯವರು ತನಿಖಾ ವರದಿ ನೀಡಿ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿದ್ದಾಗ್ಯೂ , ರಾಜ್ಯಪಾಲರಿಂದ ಯಾವುದೇ ಕ್ರಮವಾಗದ ಕಾರಣ, ಎಸ್ ಐ ಟಿ…
ಚಾಮರಾಜನಗರ: ರಾಜ್ಯದಲ್ಲಿ ಮಾಂಗಲ್ಯ ಭಾಗ್ಯ ಯೋಜನೆಯ ಅಡಿಯಲ್ಲಿ ಸಾಮೂಹಿಕ ಮದುವೆಗಳಿಗೆ ಉತ್ತೇಜನ ನೀಡಲಾಗುವುದು ಎಂಬುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ಇಂದು ಚಾಮರಾಜನಗರದ ಮಲೆಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಮಾಂಗಲ್ಯ ಭಾಗ್ಯ ಯೋಜನೆಯಡಿ ಸಾಮೂಹಿತ ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಿ, ನವ ದಂಪತಿಗಳನ್ನು ಹರಿಸಿದರು. ಮಾಂಗಲ್ಯ ಭಾಗ್ಯ ಯೋಜನೆಯಡಿ ಇಂದು ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ 66 ಜೋಡಿಗಳಿಗೆ ಉಚಿತ ಸಾಮೂಹಿಕ ವಿವಾಹ ಮಹೋತ್ಸವ ವನ್ನು ಆಯೋಜಿಸಲಾಗಿತ್ತು. ಪ್ರವರ್ಗ ‘ಎ’ ಮತ್ತು ‘ಬಿ’ ಅಧಿಸೂಚಿತ ದೇವಾಲಯಗಳಲ್ಲಿ ‘ಮಾಂಗಲ್ಯ ಭಾಗ್ಯ’ ಯೋಜನೆ ಅಡಿ ಸಾಮೂಹಿಕ ವಿವಾಹಗಳ ಆಯೋಜನೆ ಮಾಡಲಾಗುತ್ತಿದೆ. ಈ ಯೋಜನೆಯಡಿಯಲ್ಲಿ ವಧು-ವರರಿಗೆ ರೂ.55,000/-ಗಳ ಪ್ರೋತ್ಸಾಹ ಧನವನ್ನು ಆದಾಯ ಕಡಿಮೆ ಇರುವ ದೇವಾಲಯಗಳ ನಿಧಿಯಿಂದ ಬಳಸಿಕೊಳ್ಳಲಾಗುವುದು. ಆದಾಯ ಕಡಿಮೆ ಇರುವ ದೇವಾಲಯಗಳಲ್ಲಿ ರೂ.55,000/-ಗಳ ಪ್ರೋತ್ಸಾಹ ಧನವನ್ನು ಸಾಮಾನ್ಯ ಸಂಗ್ರಹಣಾ ನಿಧಿಯಿಂದ ನೀಡಲಾಗುವುದು. ಈ ಕಾರ್ಯಕ್ರಮವು ರಾಮಲಿಂಗಾ ರೆಡ್ಡಿ, ಸಾರಿಗೆ ಮತ್ತು ಮುಜರಾಯಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದಿದ್ದು,…
ಶಿವಮೊಗ್ಗ: ಜಿಲ್ಲೆಯ ಸಾಗರ ನಗರದ ಗಾಂಧಿ ಮೈದಾನದಲ್ಲಿ ಆಗಸ್ಟ್.24ರ ಶನಿವಾರದಂದು ಅವ್ವ ಮಹಾಸಂತೆಯನ್ನು ಆಯೋಜಿಸಲಾಗುತ್ತಿದೆ. ಈ ಸಂತೆಯಲ್ಲಿ ರಾಜ್ಯದ ಬೇರೆ ಬೇರೆ ಭಾಗಗಳಿಂದ ಮಹಿಳಾ ಉತ್ಪಾದಕರು ಆಗಮಿಸಲಿದ್ದು, ಗೃಹೋತ್ಪನ್ನಗಳು ಹಾಗೂ ಆಹಾರ ಪದಾರ್ಥಗಳು ಒಂದೆಡೆ ಲಭ್ಯವಾಗಲಿದೆ. ಇಂದು ಸಾಗರ ತಾಲ್ಲೂಕು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಹಿತಿ ಹಂಚಿಕೊಂಡಂತ ಜೀವನ್ಮುಖಿ ಸಂಸ್ಥೆಯ ಎಂ.ವಿ ಪ್ರತಿಭಾ ಅವರು, ಜೀವನ್ಮುಖಿ ಹಾಗೂ ಚಕರ ಮಹಿಳಾ ವಿವಿಧೋದ್ದೇಶ ಕೈಗಾರಿಕಾ ಸಹಕಾರಿ ಸಂಘದಿಂದ ದಿನಾಂಕ 24-08-2024ರ ಶನಿವಾರದಂದು ಬೆಳಿಗ್ಗೆ 11 ಗಂಟೆಗೆ ಗಾಂಧಿ ಮೈದಾನದ, ನಗರಸಭೆ ಆವರಣದಲ್ಲಿ ಅವ್ವ ಮಹಾಸಂತೆ 2024 ಆಯೋಜಿಸಲಾಗುತ್ತಿದೆ ಎಂದರು. ಅವ್ವ ಮಹಾಸಂತೆಯನ್ನು ಇನ್ಸ್ಟಿಟ್ಯೂಟ್ ಫಾರ್ ಕಲ್ಚರಲ್ ರಿಸರ್ಚ್ ಅಂಡ್ ಆಕ್ಷನ್ (ಇಕ್ರಾ) ಬೆಂಗಳೂರು ಇದರ ವಿ.ಗಾಯತ್ರಿ ಉದ್ಘಾಟನೆ ಮಾಡಲಿದ್ದಾರೆ. ಅಧ್ಯಕ್ಷತೆಯನ್ನು ಸಾಗರ ಉಪವಿಭಾಧಿಕಾರಿ ಯತೀಶ್.ಆರ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಾಗರ ನಗರಸಭೆ ಪೌರಾಯುಕ್ತ ನಾಗಪ್ಪ ಹೆಚ್.ಕೆ ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು. ಕೋವಿಡ್ ನಂತ್ರ ಜೀವನ್ಮುಖಿ ಸಂಸ್ಥೆಯನ್ನು ಆರಂಭಿಸಲಾಗಿತ್ತು.…
ಶಿವಮೊಗ್ಗ: ಶರಾವತಿ ನದಿ ನೀರನ್ನು ಬೆಂಗಳೂರಿಗೆ ಕೊಂಡೊಯ್ಯೋದಕ್ಕೆ ಬಿಡುವುದಿಲ್ಲ. ಪಶ್ಚಿಮ ಘಟ್ಟದ ಅಮೂಲ್ಯ ಸಸ್ಯ ಸಂಪತ್ತಿನ ಒಡಲು ಬಗೆಯುವುದಕ್ಕೆ ಅವಕಾಶ ನೀಡುವುದಿಲ್ಲ. ಶರಾವತಿ ನದಿ ನೀರು ಉಳಿವಿಗಾಗಿ ಪಕ್ಷಾತೀತ ಹೋರಾಟ ಮಾಡುವುದಾಗಿ ಬಿಜೆಪಿಯ ಮಾಜಿ ಸಚಿವ ಹರತಾಳು ಹಾಲಪ್ಪ ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಈ ಹಿಂದೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಡಾ.ಜಿ ಪರಮೇಶ್ವರ್ ಬೆಂಗಳೂರಿಗೆ ಶರಾವತಿ ನದಿ ನೀರು ಕೊಂಡೊಯ್ಯುವ ಬಗ್ಗೆ ಮುಂದಾಗಿದ್ದರು. ಅದಕ್ಕೆ ನಾವು ವಿರೋಧ ವ್ಯಕ್ತ ಪಡಿಸಿದ್ವಿ. ಆನಂತ್ರ ಬಂದಂತ ಸರ್ಕಾರಕ್ಕೆ ಶರಾವತಿ ನದಿ ನೀರು ಬೆಂಗಳೂರಿಗೆ ಒಯ್ಯುವುದರಿಂದ ಆಗುವಂತ ಪರಿಸರ ಹಾನಿಯ ಬಗ್ಗೆ ಮನವರಿಕೆ ಮಾಡಿಕೊಡಲಾಗಿತ್ತು. ಹೀಗಾಗಿ ಅಂದು ಈ ಯೋಜನೆಯನ್ನು ಕೈಬಿಡಲಾಗಿತ್ತು ಎಂದರು. ರಾಜ್ಯ ಕಾಂಗ್ರೆಸ್ ಸರ್ಕಾರ ಈಗ ಶರಾವತಿ ನದಿ ನೀರನ್ನು ಬೆಂಗಳೂರಿನ ಜನತೆಗೆ ಕುಡಿಯುವ ನೀರಿಗಾಗಿ ಡಿಪಿಆರ್ ಸಿದ್ಧಪಡಿಸಿದೆ. 30 ಟಿಎಂಸಿ ನೀರನ್ನು ಶರಾವತಿ ನದಿಯಿಂದ ಬೆಂಗಳೂರಿಗೆ…
ದಕ್ಷಿಣ ಕನ್ನಡ: ಸ್ವ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಕಂಪ್ಯೂಟರ್ ಡಿಸೈನ್ ಉಚಿತ ತರಬೇತಿಗೆ ಅರ್ಜಿಯನ್ನು ರುಡ್ ಸೆಟ್ ಸಂಸ್ಥೆಯಿಂದ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯ ರುಡ್ ಸೆಟ್ ಸಂಸ್ಥೆಯಿಂದ 45 ದಿನಗಳ ಕಂಪ್ಯೂಟರ್ ಡಿಸೈನ್ ಉಚಿತ ತರಬೇತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ದಿನಾಂಕ 02-09-2024 ರಿಂದ ಆರಂಭಗೊಂಡು ದಿನಾಂಕ 10-10-2024ರವರೆಗೆ ನಡೆಯಲಿದೆ. ಕಂಪ್ಯೂಟರ್ ಡಿಸೈನ್ ವೇಳೆ ಏನೆಲ್ಲ ತರಬೇತಿ? ಕಂಪ್ಯೂಡರ್ ಡಿಸೈನ್, ಡಿಟಿಪಿ ಜೊತೆಗೆ ನುಡಿ, ಪೇಜ್ ಮೇಕರ್, ಪೋಟೋ ಶಾಪ್, ಇನ್ ಡಿಸೈನ್, ಕೋರಲ್ ಡ್ರಾ, ಇಲ್ಲಸ್ಟ್ರೇಟರ್ ಸೇರಿದಂತೆ ವಿವಿಧ ತರಬೇತಿಯನ್ನು ನೀಡಲಾಗುತ್ತದೆ. 18 ರಿಂದ 45 ವರ್ಷದೊಳಗಿನ ಯಾರಾದರೂ ಅರ್ಜಿಯನ್ನು ಸಲ್ಲಿಸಬಹುದು. ತರಬೇತಿಯ ಅವಧಿಯಲ್ಲಿ ಊಟ ಮತ್ತು ವಸತಿ ಸಂಪೂರ್ಣ ಉಚಿತವಾಗಿರುತ್ತದೆ. ಅಲ್ಲದೇ ಸಂಸ್ಥೆಯು ಸಮವಸ್ತ್ರವನ್ನು ಉಚಿತವಾಗಿ ನೀಡಲಿದೆ. ಬ್ಯಾಂಕಿನಿಂದ ಸಿಗುವ ಸಾಲದ ಬಗ್ಗೆ ಮಾಹಿತಿಯನ್ನು ಕೂಡ ನೀಡಲಿದೆ. ನಿಮಗೆ ಆಸಕ್ತಿ ಇದ್ದರೇ ವಾಟ್ಸ್ ಆಪ್ ನಲ್ಲೇ ಅರ್ಜಿ ಸಲ್ಲಿಸಬಹುದು. ವಾಟ್ಸ್ ಆಪ್ ಸಂಖ್ಯೆ 6364561982. ನೇರವಾಗಿ…
ಕೋಲ್ಕತಾ: ಕೋಲ್ಕತ್ತಾದಲ್ಲಿ ಇತ್ತೀಚೆಗೆ ನಡೆದ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಹಿರಂಗವಾಗಿ ಪ್ರತಿಭಟನೆ ನಡೆಸಿದ ನಂತರ ತೃಣಮೂಲ ಕಾಂಗ್ರೆಸ್ನ ಮಾಜಿ ಸದಸ್ಯೆ ಮತ್ತು ನಟಿ ಮಿಮಿ ಚಕ್ರವರ್ತಿ ಅವರು ಅತ್ಯಾಚಾರ ಬೆದರಿಕೆಗಳು ಮತ್ತು ಅಶ್ಲೀಲ ಸಂದೇಶಗಳಿಗೆ ಗುರಿಯಾಗಿದ್ದಾರೆ ಎಂದು ಮಂಗಳವಾರ ಬಹಿರಂಗಪಡಿಸಿದ್ದಾರೆ. ಸಂತ್ರಸ್ತೆಗೆ ನ್ಯಾಯವನ್ನು ಕೋರುವ ಬಗ್ಗೆ ಧ್ವನಿ ಎತ್ತಿರುವ ನಟಿ, ತನ್ನ ಅಗ್ನಿಪರೀಕ್ಷೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಕೋಲ್ಕತಾ ಪೊಲೀಸರ ಸೈಬರ್ ಸೆಲ್ ವಿಭಾಗವನ್ನು ಅವರ ಗಮನಕ್ಕಾಗಿ ಟ್ಯಾಗ್ ಮಾಡಿದ್ದಾರೆ. ಎಕ್ಸ್ (ಹಿಂದೆ ಟ್ವಿಟರ್) ನಲ್ಲಿ, ಮಿಮಿ ತನ್ನ ಆಘಾತ ಮತ್ತು ದಿಗ್ಭ್ರಮೆಯನ್ನು ವ್ಯಕ್ತಪಡಿಸಿ, ನಾವು ಮಹಿಳೆಯರಿಗೆ ನ್ಯಾಯವನ್ನು ಒತ್ತಾಯಿಸುತ್ತಿದ್ದೇವೆ ಅಲ್ಲವೇ? ಇವು ಅವುಗಳಲ್ಲಿ ಕೆಲವು ಮಾತ್ರ. ಅಲ್ಲಿ ವಿಷಕಾರಿ ಪುರುಷರು ಮಹಿಳೆಯರ ಪರವಾಗಿ ನಿಲ್ಲುತ್ತೇವೆ ಎಂದು ಜನಸಮೂಹದಲ್ಲಿ ಮುಖವಾಡ ಧರಿಸುವ ಮೂಲಕ ಅತ್ಯಾಚಾರದ ಬೆದರಿಕೆಗಳನ್ನು ಸಾಮಾನ್ಯಗೊಳಿಸಲಾಗಿದೆ. ಯಾವ ಪಾಲನೆ ಮತ್ತು ಶಿಕ್ಷಣವು ಇದನ್ನು ಅನುಮತಿಸುತ್ತದೆ???? ಎಂದು ಪ್ರಶ್ನಿಸಿದ್ದಾರೆ. ಮಿಮಿ ಅವರ ಪೋಸ್ಟ್ ಶೀಘ್ರದಲ್ಲೇ ಅವರ ಅಭಿಮಾನಿಗಳಿಂದ ಬೆಂಬಲವನ್ನು ಗಳಿಸಿತು, ಅವರು…