Author: kannadanewsnow09

ಮೊದಲಿಗೇ ಸ್ಪಷ್ಟಪಡಿಸುತ್ತಿದ್ದೇನೆ. ಇದು ಯಾರನ್ನೂ ಹೆದರಿಸುವ ಬೆದರಿಸುವ ಪ್ರಯತ್ನವಲ್ಲ. ಬದಲಿಗೆ ಹಲವು ಜ್ಯೋತಿಷ್ಯಕಾರರ 45 ವರ್ಷಗಳಿಗೂ ಹೆಚ್ಚು ಕಾಲ ಕ್ರಮಬದ್ಧವಾಗಿ , ವೈಜ್ಞಾನಿಕವಾಗಿ ಒಂದು ಲಕ್ಷಕ್ಕೂ ಮೀರಿದ ಜಾತಕಗಳ ಪರಿಶೀಲನೆ, ವಿಶ್ಲೇಷಣೆ, 10000 ಕ್ಕೂ ಹೆಚ್ಚು ದೋಷ ನಿವಾರಣಾ ಹೋಮಗಳನ್ನು ಮಾಡಿಸಿದ ಹಾಗೂ ಜ್ಯೋತಿಷ್ಯಶಾಸ್ತ್ರದ ಅಭ್ಯಾಸ , ಅನುಭವ, ಜ್ಞಾನಾಧಾರಿತ ಬರಹವಿದು. ಕರ್ಮ ಸಿದ್ಧಾಂತ, ಪುನರ್ಜನ್ಮ ಸಿದ್ಧಾಂತಗಳ ಪ್ರತ್ಯಕ್ಷಾನುಭವದ ಹಿನ್ನೆಲೆ ಈ ಬರಹಗಳಿಗಿದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ,…

Read More

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸ್ಣಾಪಿಸಲಾಗಿರುವ ಚೆಕ್ ಪೋಸ್ಟ್ ಗಳಲ್ಲಿ ಎಲ್ಲಾ ವಾಹನಗಳ ತಪಾಸಣೆ ಕಡ್ಡಾಯ ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಅವರು ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಹಾಯಕ ಚುನಾವಣಾಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ನೋಟೀಸ್ ಜಾರಿ ಕೆಲವು ಚೆಕ್ ಪೋಸ್ಟ್ ಗಳಲ್ಲಿ ಸಿಬ್ಬಂದಿಗಳು ಕೆಲವು ವಾಹನಗಳನ್ನು ತಪಾಸಣೆ ಮಾಡದೇ ಇರುವುದು ಹಾಗೂ ರಾತ್ರಿ ವೇಳೆ ನಿದ್ದೆ ಮಾಡುತ್ತಿರುವ ಬಗ್ಗೆ ಚುನಾವಣಾ ವೆಚ್ಚ ವೀಕ್ಷಕರು ಗಮನಿಸಿರುವ ಹಿನ್ನಲೆಯಲ್ಲಿ ಕಾರಣ ಕೇಳಿ ನೋಟೀಸ್ ಜಾರಿ ಮಾಡಲಾಗಿದೆ. ಲೋಪ ಕಂಡು ಬಂದಲ್ಲಿ ಆರ್.ಪಿ ಆಕ್ಟ್ ಪ್ರಕಾರ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು. ಪ್ರತಿ ದಿನ ಸಹಾಯಕ ಚುನಾವಣಾಧಿಕಾರಿ ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿ ಸಿಬ್ಬಂದಿಗಳ ಕಾರ್ಯನಿರ್ವಹಣೆ ಬಗ್ಗೆ ಪರಿಶೀಲಿಸ ಬೇಕು. ಜಿಲ್ಲಾಧಿಕಾರಿ ಗಳ ಕಚೇರಿಯ ದೂರು ನಿರ್ವಾಹಣಾ ಕೇಂದ್ರದಲ್ಲಿ ಚೆಕ್ ಪೋಸ್ಟ್ ಗಳ ಕಾರ್ಯನಿರ್ವಾಹಣೆಯ ಬಗ್ಗೆ ಪರಿಶೀಲಿಸಲಾಗುತ್ತಿದೆ. ಕಾರ್ಯನಿರ್ವಹಣೆ ಯಲ್ಲಿ ಲೋಪ ಕಂಡುಬಂದಲ್ಲಿ ತಕ್ಷಣ ಕ್ರಮ ಕೈಗೊಳ್ಳಲಾಗುವುದು ಎಂದರು. ಏ.16…

Read More

ಬೆಂಗಳೂರು: ದೇವೇಗೌಡರೇ, ಈಗಲೂ ಕಾಲ ಮಿಂಚಿಲ್ಲ, ನಿಮ್ಮ ತಪ್ಪನ್ನು ತಿದ್ದಿಕೊಂಡು ಕನ್ನಡಿಗರಿಗೆ ಕೇಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯದ ವಿರುದ್ಧ ದನಿ ಎತ್ತಿ. ತೆರಿಗೆ ಹಂಚಿಕೆ, ಬರ ಪರಿಹಾರ ಮತ್ತು ಕೇಂದ್ರ ಪ್ರಾಯೋಜಿತ ಯೋಜನೆಗಳಲ್ಲಿ ನರೇಂದ್ರ ಮೋದಿ ಸರ್ಕಾರ ಕನ್ನಡಿಗರ ಕತ್ತು ಕುಯ್ಯುತ್ತಿದೆ. ಇದರ ವಿರುದ್ಧ ನೀವು ದನಿ ಎತ್ತದೆ ಇರುವುದರಿಂದ ವರ್ತಮಾನದಲ್ಲಿ ನಿಮ್ಮ ಪಕ್ಷಕ್ಕೆ ಒಂದಷ್ಟು ಲಾಭವಾಗಲೂ ಬಹುದು. ಆದರೆ ಇತಿಹಾಸ ನಿಮ್ಮನ್ನು ಖಂಡಿತಾ ಕ್ಷಮಿಸುವುದಿಲ್ಲ ಎಂಬುದಾಗಿ ಸಿಎಂ ಸಿದ್ಧರಾಮಯ್ಯ, ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರಿಗೆ ಸುದೀರ್ಘ ಪತ್ರದಲ್ಲಿ ಕಿಡಿಕಾರಿದ್ದಾರೆ. ಸನ್ಮಾನ್ಯ ಹೆಚ್.ಡಿ.ದೇವೇಗೌಡರೇ, ನೂರು ಕೋಟಿ ಜನರ ಪ್ರತಿನಿಧಿಯಾಗಿರುವ ಪ್ರಧಾನಮಂತ್ರಿಯವರನ್ನು ಆರು ಕೋಟಿ ಜನರ ಪ್ರತಿನಿಧಿಯಾದ ಮುಖ್ಯಮಂತ್ರಿ ಪ್ರಶ್ನೆ ಮಾಡಬಾರದು ಎಂಬ ನಿಮ್ಮ ಮಾತು ನನ್ನಲ್ಲಿ ಅತ್ಯಾಶ್ಚರ್ಯವನ್ನು ಮಾತ್ರವಲ್ಲ ನಿಮ್ಮ ಬಗ್ಗೆ ಕನಿಕರವನ್ನೂ ಉಂಟು ಮಾಡಿದೆ. ಒಂದು ಪ್ರಾದೇಶಿಕ ಪಕ್ಷವನ್ನು ಇಷ್ಟು ವರ್ಷಗಳ ಕಾಲ ಮುನ್ನಡೆಸುತ್ತಾ ಬಂದ ನೀವು ನಿರಂತರವಾಗಿ ಕೇಂದ್ರ ಸರ್ಕಾರ ಮತ್ತು ಪ್ರಧಾನಮಂತ್ರಿಯವರನ್ನು ಟೀಕಿಸುತ್ತಾ ಬಂದವರು. ಇದೀಗ…

Read More

ಬೆಂಗಳೂರು: ಶಾಲಾ ಶಿಕ್ಷಕರಾಗಬೇಕು ಅಂದ್ರೆ TET ಪರೀಕ್ಷೆ ಉತ್ತೀರ್ಣರಾಗುವುದು ಕಡ್ಡಾಯವಾಗಿದೆ. ಈ ಪರೀಕ್ಷೆಗೆ ಅರ್ಜಿ ಸಲ್ಲಿಸೋದಕ್ಕೆ ಅನೇಕ ಅಭ್ಯರ್ಥಿಗಳು ಕಾಯುತ್ತಿದ್ದಾರೆ. ಇಂತಹ ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಕೆ-ಸೆಟ್ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತಂತೆ ಇಂದು ಕೇಂದ್ರೀಕೃತ ದಾಖಲಾತಿ ಘಟಕದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ. 2024ನೇ ಸಾಲಿನ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ( KARTET-2024)ಯು ದಿನಾಂಕ 30-06-2024ರಂದು ರಾಜ್ಯಾಧ್ಯಂತ ನಡೆಯಲಿದ್ದು, ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದಿದ್ದಾರೆ. ಶಾಲಾ ಶಿಕ್ಷಣ ಇಲಾಖೆಯ ವೆಬ್ ಸೈಟ್ https://schooleducation.karnataka.gov.in ಜಾಲತಾಣಕ್ಕೆ ಭೇಟಿ ನೀಡಿ, ಅರ್ಜಿಯನ್ನು ಸಲ್ಲಿಸಬಹುದು. ಇದೇ ವೆಬ್ ಲಿಂಕ್ ನಲ್ಲಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15-05-2024 ಆಗಿರುತ್ತದೆ ಎಂದು ಹೇಳಿದ್ದಾರೆ. https://kannadanewsnow.com/kannada/demand-for-electric-vehicles-declines-tesla-to-lay-off-more-than-14000-employees/ https://kannadanewsnow.com/kannada/congress-files-complaint-with-election-commission-against-mp-tejasvi-surya/

Read More

ಬೆಂಗಳೂರು: ಮತದಾರರಿಗೆ ಅನುದಾನ ನೀಡೋದಾಗಿ ಹೇಳಿಕೆ ನೀಡುವ ಮೂಲಕ ಆಮಿಷವೊಡ್ಡಿದಂತ ಸಚಿವ ಡಿ.ಸುಧಾಕರ್ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ. ಚಿತ್ರದುರ್ಗ ಜಿಲ್ಲೆಯ ತಳುಕಿನಲ್ಲಿ ಸಚಿವ ಡಿ.ಸುಧಾಕರ್ ಅವರು 25 ಕೋಟಿ ಅನುದಾನವನ್ನು ಕಾಂಗ್ರೆಸ್ ಅಭ್ಯರ್ಥಿಯನ್ನು ಸಾಕಷ್ಟು ಲೀಡ್ ನಿಂದ ಗೆಲ್ಲಿಸಿದ್ರೆ ನೀಡೋದಾಗಿ ಆಮಿಷ ಒಡ್ಡುವಂತ ಹೇಳಿಕೆ ನೀಡಿದ್ದರು. ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಬೇಕು. 70 ಸಾವಿರ ಲೀಡ್ ಕೊಟ್ಟು ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿದ್ದೇ ಆದಲ್ಲಿ ತಳುಕು ಅಭಿವೃದ್ಧಿಗಾಗಿ 20 ಕೋಟಿ ಅನುದಾನವನ್ನು ಸರ್ಕಾರ ನೀಡಲಿದೆ. ಈಗಾಗಲೇ ಸಿಎಂ ಸಿದ್ಧರಾಮಯ್ಯ ಜೊತೆಗೆ ಈ ಬಗ್ಗೆ ಮಾತನಾಡಿದ್ದಾಗಿ ಹೇಳಿದ್ದಾರೆ. ಈ ಮೂಲಕ ಚುನಾವಣಾ ನೀತಿಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎನ್ನಲಾಗುತ್ತಿದೆ. ಈ ಹಿನ್ನಲೆಯಲ್ಲಿ ಬಿಜೆಪಿ ಪಕ್ಷದಿಂದ ನೀತಿ ಸಂಹಿತೆ ಉಲ್ಲಂಘನೆಯ ಆರೋಪದ ಹಿನ್ನಲೆಯಲ್ಲಿ ಚುನಾವಣಾ ಆಯೋಗಕ್ಕೆ ಸಚಿವ ಡಿ.ಸುಧಾಕರ್ ವಿರುದ್ಧ ದೂರು ನೀಡಲಾಗಿದೆ. https://kannadanewsnow.com/kannada/breaking-21-retired-judges-write-to-cji-condemning-attempts-to-weaken-judiciary/ https://kannadanewsnow.com/kannada/demand-for-electric-vehicles-declines-tesla-to-lay-off-more-than-14000-employees/

Read More

ಬೆಂಗಳೂರು: ಚುನಾವಣಾ ಪ್ರಚಾರದ ವೇಳೆ ನಾವು ನುಡಿದಂತೆ ನಡೆದಿದ್ದೇವೆ, ಗ್ಯಾರಂಟಿ ಈಡೇರಿಸಿದ್ದೇವೆ ಎಂಬುದಾಗಿ ಕರಪತ್ರ ಹಂಚಿದ ಆರೋಪದ ಹಿನ್ನಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾರೆಡ್ಡಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನ ಚಿಕ್ಕಪೇಟೆಯಲ್ಲಿ ಚುನಾವಣಾ ಪ್ರಚಾರದ ವೇಳೆಯಲ್ಲಿ ನಾವು ನುಡಿದಂತೆ ನಡೆದಿದ್ದೇವೆ. ಪಂಚ ಗ್ಯಾರಂಟಿ ಯೋಜನೆಯನ್ನು ಜಾರಿಗೆ ತಂದಿದ್ದೇವೆ ಎಂಬುದಾಗಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸೌಮ್ಯಾರೆಡ್ಡಿ ಪರ ಕಾರ್ಯಕರ್ತರು ಕರಪತ್ರವನ್ನು ಹಂಚಿದ್ದರು. ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಕರಪತ್ರ ಹಂಚಿದ ಕಾರಣ, ಚುನಾವಣಾಧಿಕಾರಿ ಸಂತೋಷ್ ಎಂಬುವರು ಕಲಾಸಿಪಾಳ್ಯ ಪೊಲೀಸ್ ಠಾಣೆಗೆ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾರೆಡ್ಡಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜಶೇಖರ್ ವಿರುದ್ಧ ದೂರು ನೀಡಿದ್ದರು. ಈ ದೂರು ಆಧರಿಸಿ ಎಫ್ಐಆರ್ ದಾಖಲಾಗಿದೆ. https://kannadanewsnow.com/kannada/breaking-21-retired-judges-write-to-cji-condemning-attempts-to-weaken-judiciary/ https://kannadanewsnow.com/kannada/demand-for-electric-vehicles-declines-tesla-to-lay-off-more-than-14000-employees/

Read More

ಬೆಂಗಳೂರು: ಚುನಾವಣಾ ವೀಕ್ಷಕರ ಮೇಲೆಯೇ ಹಲ್ಲೆ ಮಾಡಿ, ದರ್ಪ ತೋರಿ, ಪ್ರಕರಣ ಮುಚ್ಚಿ ಹಾಕಲು ಪ್ರಯತ್ನಿಸಿದಂತ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ಪಕ್ಷದಿಂದ ದೂರು ನೀಡಲಾಗಿದೆ. ಇಂದು ಮುಖ್ಯ ಚುನಾವಣಾಧಿಕಾರಿಗಳ ಕಚೇರಿಗೆ ತೆರಳಿದಂತ ಕಾಂಗ್ರೆಸ್ ನಾಯಕರ ನಿಯೋಗವು, ಸಂಸದ ತೇಜಸ್ವಿ ಸೂರ್ಯ ಅವರು ಚುನಾವಣಾ ವೀಕ್ಷಕರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಮೂಲಕ ದರ್ಪ ತೋರಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಚುನಾವಣಾಧಿಕಾರಿಗಳಿಗೆ ದೂರು ನೀಡಿದ ಬಳಿಕ ಮಾತನಾಡಿದಂತ ಕಾಂಗ್ರೆಸ್ ಎಂಎಲ್ಸಿ ವೆಂಕಟೇಶ್ ಅವರು, ಸಂಸದ ತೇಜಸ್ವಿ ಸೂರ್ಯ ಅವರು ಚುನಾವಣಾ ವೀಕ್ಷಕರನ್ನೇ ತಳ್ಳಿದ್ದಾರೆ. ಅವರ ಮೇಲೆ ದರ್ಪ ತೋರಿದ್ದಾರೆ. ಹಣ ಬಲ, ಅಧಿಕಾರದ ಬಲದಿಂದ ಚುನಾವಣೆ ಗೆಲ್ಲೋದಕ್ಕೆ ಹೊರಟಿದ್ದಾರೆ. ಹೀಗಾಗಿ ಅವರ ವಿರುದ್ಧ ದೂರು ನೀಡಲಾಗಿದೆ ಎಂದರು. https://kannadanewsnow.com/kannada/several-injured-in-stabbing-incident-at-church-in-sydney/ https://kannadanewsnow.com/kannada/breaking-21-retired-judges-write-to-cji-condemning-attempts-to-weaken-judiciary/

Read More

ಸಿಡ್ನಿ: ಸಿಡ್ನಿ ಸೆಂಟ್ರಲ್ ಬಿಸಿನೆಸ್ ಡಿಸ್ಟ್ರಿಕ್ಟ್ ನಿಂದ ಪಶ್ಚಿಮಕ್ಕೆ 30 ಕಿ.ಮೀ ದೂರದಲ್ಲಿರುವ ವಾಕ್ಲಿಯಲ್ಲಿರುವ ಚರ್ಚ್ ನಲ್ಲಿ ನಡೆದ ಚೂರಿ ಇರಿತದಲ್ಲಿ ಹಲವಾರು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಅಧಿಕಾರಿಗಳು ಒಬ್ಬ ಪುರುಷನನ್ನು ಬಂಧಿಸಿದ್ದಾರೆ. ಅವರು ಈ ಘಟನೆ ಕುರಿತು ತನಿಖೆಯಲ್ಲಿ ಪೊಲೀಸರಿಗೆ ಸಹಾಯ ಮಾಡುತ್ತಿದ್ದಾರೆ ಎಂದು ಪೊಲೀಸ್ ಹೇಳಿಕೆ ತಿಳಿಸಿದೆ. ಗಾಯಗೊಂಡವರಿಗೆ ಮಾರಣಾಂತಿಕವಲ್ಲದ ಗಾಯಗಳಾಗಿದ್ದು, ಅರೆವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಚರ್ಚ್ನಲ್ಲಿ ನಡೆದ ಪ್ರಾರ್ಥನೆಯ ಸಮಯದಲ್ಲಿ ಚರ್ಚ್ ನಾಯಕ ಮತ್ತು ಹಲವಾರು ಆರಾಧಕರಿಗೆ ಚೂರಿಯಿಂದ ಇರಿದಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಈ ಘಟನೆಯ ವೀಡಿಯೊಗಳು ಆನ್ ಲೈನ್ ನಲ್ಲಿ ಹರಿದಾಡುತ್ತಿದ್ದು, ವ್ಯಕ್ತಿಯೊಬ್ಬ ಚರ್ಚ್ ನ ಬಿಷಪ್ ಗೆ ಚಾಕುವಿನಿಂದ ಇರಿದಿದ್ದಾನೆ. https://kannadanewsnow.com/kannada/breaking-21-retired-judges-write-to-cji-condemning-attempts-to-weaken-judiciary/ https://kannadanewsnow.com/kannada/demand-for-electric-vehicles-declines-tesla-to-lay-off-more-than-14000-employees/

Read More

ಒಂದು ವೇಳೆ ನೀವು ಯಾರಿಗಾದರೂ ಹಣವನ್ನು ನೀಡಿದ್ದರೆ ಹಾಗೂ ಆ ಹಣವನ್ನು ಕೇಳಲು ಹೋದಾಗ ಇಂದು ಹಣ ಕೊಡಲು ಸಾಧ್ಯವಿಲ್ಲ ಮತ್ತೊಂದು ದಿನ ಕೊಡುತ್ತೇವೆ ಎಂದು ಹೇಳುತ್ತಿದ್ದರೆ ನಾವು ಹೇಳುವ ಈ ಉಪಾಯವನ್ನು ಮಾಡಿದರೆ ಖಂಡಿತವಾಗಿ ನಿಮ್ಮ ಹಣ ಮರಳಿ ಬರುತ್ತದೆ. ಇದರ ಜೊತೆಗೆ ಮನೆಯಲ್ಲಿ ಯಾರಿಗಾದರೂ ದೃಷ್ಟಿ ದೋಷ ಇದ್ದರೂ ಸಹ ನಿವಾರಣೆಯಾಗುತ್ತದೆ. ಈ ಉಪಾಯವನ್ನು ಮನೆಯ ಹೆಣ್ಣುಮಕ್ಕಳು ಆಗಲಿ ಅಥವಾ ಗಂಡುಮಕ್ಕಳು ಆಗಲಿ ಯಾರಾದರೂ ಮಾಡಬಹುದು. ಈ ಉಪಾಯವನ್ನು ಬೆಳಿಗ್ಗೆಯಿಂದ ರಾತ್ರಿ ತನಕ ಯಾವ ಸಮಯದಲ್ಲಿ ಬೇಕಾದರೂ ಮಾಡಬಹುದು, ಈ ಉಪಾಯ ಮಾಡುವುದಕ್ಕೆ ನಿಮಗೆ ಬೇಕಾಗಿರುವುದು ಒಂದು ಬಿಳಿಹಾಳೆ ಹಾಗೂ ಕೆಂಪು ಬಣ್ಣದ ಪೆನ್ನು. ಈ ಉಪಾಯವನ್ನು ಸ್ನಾನ ಮಾಡಿದ ನಂತರವೇ ಮಾಡಬೇಕು ಹಾಗೂ ಪರಿಪೂರ್ಣವಾದ ನಂಬಿಕೆ ಇದ್ದರೆ ಮಾತ್ರ ಮಾಡಬೇಕು. ಬಿಳಿ ಹಾಳೆಯ ಮೇಲೆ ಮೊದಲಿಗೆ ಕೆಂಪುಬಣ್ಣದ ಪೆನ್ನಿನಿಂದ 1- 2- 27- 9 ಸಂಖ್ಯೆಯನ್ನು ಬರೆಯಬೇಕು. 1-ಸೂರ್ಯನಿಗೆ ಸಂಬಂಧಪಟ್ಟಿದ್ದು 2-ಗ್ರಹಗಳಿಗೆ ಸಂಬಂಧಪಟ್ಟಿದ್ದು 27-ನಕ್ಷತ್ರಗಳಿಗೆ ಸಂಬಂಧಪಟ್ಟಿದ್ದು 9-ಸಂಖ್ಯೆಗೆ…

Read More

ಚಿತ್ರದುರ್ಗ: ಚುನಾವಣಾ ಪ್ರಚಾರದ ವೇಳೆಯಲ್ಲಿ ಎದೆ ನೋವು ಕಾಣಿಸಿಕೊಂಡ ಕಾರಣ, ಸಚಿವ ಜಮೀರ್ ಅಹ್ಮದ್ ಖಾನ್ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಇಂತಹ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಕಾರಣ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರೋದಾಗಿ ತಿಳಿದು ಬಂದಿದೆ. ಚಿತ್ರದುರ್ಗದಲ್ಲಿ ಲೋಕಸಭಾ ಚುನಾವಣೆ ಕಾರಣ ಕಾಂಗ್ರೆಸ್ ಅಭ್ಯರ್ಥಿ ಎಂ.ಚಂದ್ರಪ್ಪ ಪರವಾಗಿ ಬಿರು ಬಿಸಿಲಿನ ನಡುವೆಯೂ ಸಚಿವ ಜಮೀರ್ ಅಹ್ಮದ್ ಖಾನ್ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದರು. ಈ ವೇಳೆಯಲ್ಲಿ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಈ ಹಿನ್ನಲೆಯಲ್ಲಿ ಸಚಿವ ಜಮೀರ್ ಅಹ್ಮದ್ ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಅವರನ್ನು ವೈದ್ಯರು ತಪಾಸಣೆ ನಡೆಸಿದರು. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಕಾರಣ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿರೋದಾಗಿ ತಿಳಿದು ಬಂದಿದೆ. https://kannadanewsnow.com/kannada/hdk-accuses-dk-shivakumar-of-threatening-apartment-dwellers/ https://kannadanewsnow.com/kannada/breaking-21-retired-judges-write-to-cji-condemning-attempts-to-weaken-judiciary/

Read More