Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಬೆಂಗಳೂರು : ನಮ್ಮ ಸರ್ಕಾರವು ಎರಡೂವರೆ ವರ್ಷದ ಅವಧಿಯಲ್ಲಿ ಜನಸಮುದಾಯಕ್ಕೆ ನಾವು ನೀಡಿದ್ದ ಭರವಸೆಗಳನ್ನು ಆದ್ಯತೆಯ ಮೇಲೆ ಈಡೇರಿಸಿದ್ದೇವೆ ಎಂಬ ಸಮಾದಾನವಿದೆ‌ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆದ್ಯತೆಯ ಮೇಲೆ ಗ್ಯಾರಂಟಿ ಯೋಜನೆಗಳನ್ನು ಈಡೇರಿಸಿದ್ದೇವೆ. ಮುಂದೆ ಹೆಚ್ಚಿನ ರೀತಿಯಲ್ಲಿ ಹಣಕಾಸಿನ ವಿಚಾರದಲ್ಲಿ ಅನವಶ್ಯಕ ಖರ್ಚುಗಳನ್ನು ಸರಿಪಡಿಸುವ ಪ್ರಯತ್ನ ಮಾಡಬೇಕು ಎಂದರು. ಕೇಂದ್ರ ಸರ್ಕಾರ ನಮಗೆ ಕೊಡಬೇಕಾದ ಹಣ ಕಡಿಮೆ ಕೊಟ್ಟಿದೆ. ಜಿಎಸ್‌ಟಿ ಪಾಲಿನಲ್ಲಿ ಕಡಿಮೆ ನೀಡಿದೆ‌. ಕೇಂದ್ರ ಸರ್ಕಾರದ ಸಹಯೋಗದಲ್ಲಿ ಆಗುವ ಯೋಜನೆಗಳಲ್ಲಿ ಸರಿಯಾದ ಸಮಯದಲ್ಲಿ ಅನುದಾನ ಬಿಡುಗಡೆ ಮಾಡುವುದಿಲ್ಲ. ಜಲ ಜೀವನ್ ಮಿಷನ್ ಯೋಜನೆಯ ಸಾಕಷ್ಟು ಅನುದಾನ ಬಾಕಿ ಇದೆ. ಇಡೀ ದೇಶದಲ್ಲಿ ಮನೆಮನೆಗೆ ಗಂಗೆ, ನೀರು ತಲುಪಿಸುತ್ತೇವೆ ಎಂದು ಹೇಳುತ್ತಾರೆ. ಅದರ ಹಣವನ್ನು ರಾಜ್ಯ ಸರ್ಕಾರವೇ ಭರಿಸುತ್ತಿದೆ. ಮುಖ್ಯಮಂತ್ರಿಗಳು ಅನುಭವಿ ಹಣಕಾಸು ಸಚಿವರು. 17ನೇ ಬಾರಿ ಬಜೆಟ್ ಮಂಡಿಸುವವರಿದ್ದಾರೆ. ಇದನ್ನೆಲ್ಲ ಚರ್ಚೆ ಮಾಡಿ, ಹಣಕಾಸಿನ ವಿಚಾರದಲ್ಲಿ ಒಂದಷ್ಟು ತೀರ್ಮಾನ…

Read More

ಚಾಮರಾಜನಗರ: ಚಾಮರಾಜನಗರಕ್ಕೆ ಬಂದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬುದು ಮೂಢನಂಬಿಕೆ. ಐದು ವರ್ಷಗಳಲ್ಲಿ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಚಾಮರಾಜನಗರ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮೂಢನಂಬಿಕೆ ಮತ್ತು ಕಂದಾಚಾರಗಳಲ್ಲಿ ನಂಬುವುದಿಲ್ಲವಾದ್ದರಿಂದ ಚಾಮರಾಜನಗರಕ್ಕೆ ಭೇಟಿ ನೀಡುತ್ತಿರುತ್ತೇನೆ. ರಾಜ್ಯದ ಎಲ್ಲ ಜಿಲ್ಲೆಗಳನ್ನೂ ಸಮಾನವಾಗಿ ಕಂಡು, ಎಲ್ಲ ಜಿಲ್ಲೆಗಳಿಗೆ ಭೇಟಿ ನೀಡುತ್ತೇನೆ. ಚಾಮರಾಜನಗರಕ್ಕೆ ಬಂದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬುದು ಮೂಢನಂಬಿಕೆ. ಆ ಮೌಢ್ಯವನ್ನು ಹೋಗಲಾಡಿಸಲು ಇಲ್ಲಿಗೆ ಭೇಟಿ ನೀಡಿದ್ದು, ಅಧಿಕಾರ ಈಗಲೂ ಮತ್ತು ಭವಿಷ್ಯದಲ್ಲಿಯೂ ಭದ್ರವಾಗಿರುತ್ತದೆ ಎಂದು ತಿಳಿಸಿದರು. 2028 ರಲ್ಲಿ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರಲಿದೆ ಮಾಜಿ ಸಂಸದ ಡಿ.ಕೆ.ಸುರೇಶ್ ಅವರು ಡಿ.ಕೆ.ಶಿವಕುಮಾರ್ ಅವರು ಸಿಎಂ ಆಗುವ ಬಗ್ಗೆ ಮಾಡಿದ ಹೇಳಿಕೆಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಇಂತಹ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಐದು ವರ್ಷ ಆಡಳಿತ ನಡೆದು ಜನಾದೇಶ ಇದೆ. ನಮ್ಮ ಪ್ರಣಾಳಿಕೆಯಲ್ಲಿ ನೀಡಲಾಗಿದ್ದ ಭರವಸೆಯನ್ನು ಈಡೇರಿಸಲು…

Read More

ಕಠ್ಮಂಡು: ನೇಪಾಳದಲ್ಲಿ ಪ್ರತಿಭಟನೆಗಳು ಮತ್ತೆ ಭುಗಿಲೆದ್ದಿದ್ದು, ಅಧಿಕಾರಿಗಳು ಹಲವಾರು ಪ್ರದೇಶಗಳಲ್ಲಿ ಕರ್ಫ್ಯೂ ವಿಧಿಸಿದ್ದಾರೆ. ಗುರುವಾರ ಬೆಳಿಗ್ಗೆ 11 ಗಂಟೆ ಸುಮಾರಿಗೆ ಸಿಮಾರಾ ಚೌಕ್‌ನಲ್ಲಿ ಪ್ರತಿಭಟನಾಕಾರರು ಜಮಾಯಿಸಿದರು, ನಂತರ ಪೊಲೀಸರು ಅವರನ್ನು ಚದುರಿಸಲು ಲಾಠಿ ಪ್ರಹಾರದಂತ ಬಲಪ್ರಯೋಗ ಮಾಡಿದರು ಮತ್ತು ಅಧಿಕಾರಿಗಳು ನಂತರ ಕರ್ಫ್ಯೂ ವಿಧಿಸಿದರು ಎಂದು ದಿ ಕಠ್ಮಂಡು ಪೋಸ್ಟ್ ವರದಿ ಮಾಡಿದೆ. ಸಿಮಾರಾದಲ್ಲಿ ಕರ್ಫ್ಯೂ ಮಧ್ಯಾಹ್ನ 12.45 ರ ಸುಮಾರಿಗೆ ವಿಧಿಸಲಾಯಿತು ಮತ್ತು ರಾತ್ರಿ 8 ಗಂಟೆಯವರೆಗೆ ಇರುತ್ತದೆ ಎಂದು ವರದಿ ತಿಳಿಸಿದೆ. ಬುಧವಾರ ಭುಗಿಲೆದ್ದ ಘರ್ಷಣೆಗಳ ಕುರಿತು ತಮ್ಮ ದೂರುಗಳಲ್ಲಿ ಹೆಸರಿಸಲಾದ ವ್ಯಕ್ತಿಗಳನ್ನು ಬಂಧಿಸಲು ಪೊಲೀಸರು ವಿಫಲರಾಗಿದ್ದಾರೆ ಎಂದು ಜನರಲ್ ಝಡ್ ಪ್ರತಿಭಟನಾಕಾರರು ಆರೋಪಿಸಿದರು. ನವೆಂಬರ್ 19 ರಂದು, ಆರು ಜನರಲ್ ಝಡ್ ಬೆಂಬಲಿಗರು ಗಾಯಗೊಂಡರು. ಸಿಮಾರಾ ವಿಮಾನ ನಿಲ್ದಾಣದ ಬಳಿಯ ಸಿಮಾರಾ ಚೌಕ್‌ನಲ್ಲಿ ನಡೆದ ಘರ್ಷಣೆಯ ಕುರಿತು ಗುಂಪು ಆರು ಯುಎಂಎಲ್ ಕಾರ್ಯಕರ್ತರ ವಿರುದ್ಧ ದೂರು ದಾಖಲಿಸಿತು. https://kannadanewsnow.com/kannada/breaking-no-cabinet-reshuffle-in-the-state-for-now-cm-siddaramaiah-clarifies/ https://kannadanewsnow.com/kannada/radiologist-who-sexually-harassed-woman-during-scan-finally-arrested/

Read More

ಬೆಂಗಳೂರು: ನಗರದ ಆನೇಕಲ್ ನಲ್ಲಿ ಮಹಿಳೆಯೊಬ್ಬರು ಸ್ಕ್ಯಾನಿಂಗ್ ಗೆ ತೆರಳಿದ್ದಂತ ಸಂದರ್ಭದಲ್ಲಿ ಸ್ಕ್ಯಾನಿಂಗ್ ಮಾಡುವ ನೆಪದಲ್ಲಿ ರೇಡಿಯಾಲಜಿಸ್ಟ್ ಜಯಕುಮಾರ್ ಖಾಸಗಿ ಅಂಗಾಂಗ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದರು. ಈ ವೀಡಿಯೋ ವೈರಲ್ ಕೂಡ ಆಗಿತ್ತು. ಮಹಿಳೆ ನಾಲ್ಕೈದು ದಿನಗಳ ಹಿಂದೆಯೇ ದೂರು ನೀಡಿದ್ದರೂ ಬಂಧಿಸಿರಲಿಲ್ಲ. ಆದರೇ ಠಾಣೆಯ ಮುಂದೆ ಸಾರ್ವಜನಿಕರು ಪ್ರತಿಭಟನೆ ನಡೆಸಿ ಬಂಧನಕ್ಕೆ ಒತ್ತಾಯಿಸಿದ್ದರು. ಹೀಗಾಗಿ ಕೊನೆಗೂ ಸ್ಕ್ಯಾನಿಂಗ್ ವೇಳೆ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದಂತ ರೇಡಿಯಾಲಜಿಸ್ಟ್ ಜಯಕುಮಾರ್ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಸಮೀಪದ ಆನೇಕಲ್ ಪಟ್ಟಣದಲ್ಲಿ ಸ್ಕ್ಯಾನಿಂಗ್ ಸೆಂಟರ್ ವೊಂದರಲ್ಲಿ ರೆಡಿಯಾಲಜಿಸ್ಟ್ ಆಗಿ ಕೆಲಸ ಮಾಡುತ್ತಿದ್ದಂತ ಜಯಕುಮಾರ್ ಎಂಬುವರೇ ಹೀಗೆ ಲೈಂಗಿಕ ಕಿರುಕುಳ ನೀಡಿದಂತ ಆರೋಪಿಯಾಗಿದ್ದಾರೆ. ಅವರ ವಿರುದ್ಧ ಮಹಿಳೆಯೊಬ್ಬರು ನೀಡಿದಂತ ದೂರಿನ ಹಿನ್ನಲೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಕೆಲ ದಿನಗಳ ಹಿಂದೆ ಸ್ಕ್ಯಾನಿಂಗ್ ಮಾಡಿಸೋದಕ್ಕೆ ಮಹಿಳೆಯೊಬ್ಬರು ತೆರಳಿದ್ದರು. ಈ ವೇಳೆಯಲ್ಲಿ ಸ್ಕ್ಯಾನಿಂಗ್ ಮಾಡುವ ನೆಪದಲ್ಲಿ ಮಹಿಳೆಯ ಖಾಸಗಿ ಅಂಗಾಂಗವನ್ನು ರೆಡಿಯಾಲಜಿಸ್ಟ್ ಜಯಕುಮಾರ್ ಮುಟ್ಟಿದ್ದರು.. ಇದಕ್ಕೆ ಮಹಿಳೆ ವಿರೋಧ ವ್ಯಕ್ತ…

Read More

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಗೌರವಧನವನ್ನು ಇನ್ನೂ ₹1 ಸಾವಿರ ಹೆಚ್ಚಿಸಲಾಗುವುದು. ಈ ಮೊದಲು 2017ರಲ್ಲಿ ₹2 ಸಾವಿರ ಗೌರವಧನ ಏರಿಸಲಾಗಿತ್ತು. ಈ ಬಾರಿಯೂ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ₹1 ಸಾವಿರ ಹೆಚ್ಚಿಸಿದ್ದೇವೆ. ಮುಂದಿನ ದಿನಗಳಲ್ಲಿ ಇನ್ನೂ ₹1 ಸಾವಿರ ಜಾಸ್ತಿ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್‌ ತಿಳಿಸಿದ್ದಾರೆ. https://twitter.com/KarnatakaVarthe/status/1991145354797133858 ಪಂಚ ಗ್ಯಾರಂಟಿ ಯೋಜನೆ ಗಳನ್ನು ನೀಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಾರಥ್ಯದ ನಮ್ಮ ಸರ್ಕಾರ ಗ್ಯಾರಂಟಿ ಸರ್ಕಾರ ಆಗಿದ್ದು, 2028ಕ್ಕೂ ನಮ್ಮದೆ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದರು. ನಮ್ಮ ಪಕ್ಷದ ಯೋಜನೆಗಳನ್ನು ಬಿಜೆಪಿ ಬೇರೆ ರಾಜ್ಯಗಳಲ್ಲಿ ನಕಲು ಮಾಡುತ್ತಿದೆ. ಮಹಾರಾಷ್ಟ್ರದಲ್ಲಿ ನಮ್ಮ ಗೃಹಲಕ್ಷ್ಮಿ ಯೋಜನೆ ಮಾದರಿಯಲ್ಲಿ ಲಾಡ್ಲಿಬೆಹನ್ ಯೋಜನೆಯನ್ನು ಜಾರಿಗೊಳಿಸಲಾಗಿತ್ತು. ಚುನಾವಣೆ ವೇಳೆ ತಿಂಗಳಿಗೆ 2,500 ರೂಪಾಯಿಯಂತೆ ಮೂರು ತಿಂಗಳ ಹಣ ಹಾಕಲಾಗಿತ್ತು. ಆದರೆ, ಚುನಾವಣೆಯಲ್ಲಿ ಗೆದ್ದ ಬಳಿಕ ಯೋಜನೆಯನ್ನೆ ಪರಿಷ್ಕರಿಸಲಾಗಿದೆ. 2,500…

Read More

ಚಿಕ್ಕಮಗಳೂರು: ಕಾರ್ತಿಕ ಮಾಸಕ್ಕೂ ಮುನ್ನ ಶಬರಿ ಮಾಲೆ ಹಾಕೋದು ಹಲವರ ರೂಢಿಯಾಗಿದೆ. ಅದರಂತೆ ವಿದ್ಯಾರ್ಥಿಯೊಬ್ಬ ಶಬರಿ ಮಾಲೆ ಹಾಕಿ ಕಾಲೇಜಿಗೆ ತೆರಳಿದ್ದಕ್ಕೆ ಕಾಲೇಜಿನಿಂದ ಹೊರ ಹಾಕಿದಂತ ಘಟನೆ ಚಿಕ್ಕಮಗಳೂರಿನ ಎನ್ ಆರ್ ಪುರದ ಬಾಳೆಹೊನ್ನೂರಿನ ಕಡ್ಲೆಮಕ್ಕಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಎನ್ ಆರ್ ಪುರ ತಾಲ್ಲೂಕಿನ ಬಾಳೆಹೊನ್ನೂರಿನಲ್ಲಿರುವಂತ ಕಡ್ಲೆಮಕ್ಕಿ ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದಂತ ವಿದ್ಯಾರ್ಥಿಯೊಬ್ಬ ಶಬರಿ ಮಾಲೆ ಹಾಕಿ ಕಾಲೇಜಿಗೆ ತೆರಳಿದ್ದನು. ಈ ವೇಳೆ ಕಾಲೇಜು ಆಡಳಿತ ಮಂಡಳಿಯು ಮಾಲೆ ತೆಗೆದು ಒಳಗೆ ಬಾ. ಇಲ್ಲವೇ ಹೊರ ಹೋಗುವಂತೆ ತಿಳಿಸಿದ್ದಾರೆ. ಇದಷ್ಟೇ ಅಲ್ಲದೇ ಮಾಲೆ ಧರಿಸಿ ಬರುವುದರಿಂದ ಕಾಲೇಜಿನಲ್ಲಿ ಜಾತಿ ಬೇಧ ಮಾಡ್ತೀರ ಎಂಬುದಾಗಿಯೂ ತರಾಟೆಗೆ ತೆಗೆದುಕೊಳ್ಳಲಾಗಿದೆ. ಕಾಲೇಜಿಗೆ ಬರುವುದಾದರೇ ಮಾಲೆ ತೆಗೆದು ಬರುವಂತೆ ತಾಕೀತ ಮಾಡಲಾಗಿದೆ. ಆದರೇ ಮಾಲಾಧಾರಿ ವಿದ್ಯಾರ್ಥಿ ನಾನು ತೆಗೆಯುವುದಿಲ್ಲ ಎಂಬುದಾಗಿ ಹೇಳಿ, ವಾಗ್ವಾದಕ್ಕೆ ಇಳಿದಿದ್ದಾನೆ. ಈ ವಿಷಯ ತಿಳಿದು ಸ್ಥಳಕ್ಕೆ ಹೋದಂತ ಹಿರಿಯ…

Read More

ಬೆಂಗಳೂರು: ನಗರದಲ್ಲಿ ಮಹಿಳೆಯ ಜೊತೆಗೆ ಅಸಭ್ಯವಾಗಿ ವರ್ತಿಸಿದಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಜ್ಞಾನಭಾರತಿ ಠಾಣೆಯ ಪೊಲೀಸರು ಆರೋಪಿ ವಿಘ್ನೇಶ್ ಎಂಬಾತನನ್ನು ಬಂಧಿಸಿದ್ದಾರೆ. ನವೆಂಬರ್.7ರಂದು ರಾತ್ರಿ 10.30ರ ವೇಳೆಗೆ ಸಾಕು ನಾಯಿ ಜೊತೆ ಮಹಿಳೆ ವಾಕಿಂಗ್ ತೆರಳಿದ್ದರು. ಈ ವೇಳೆ ನಾಯಿ ಮುದ್ದು ಮಾಡೋ ನೆಪದಲ್ಲಿ ಮಹಿಳೆಯ ಜೊತೆಗೆ ಅಸಭ್ಯವಾಗಿ ಆರೋಪಿ ವಿಘ್ನೇಶ್ ವರ್ತಿಸಿದ್ದಾನೆ. ಈ ವೇಳೆ ಗಾಬರಿಗೊಂಡು ಮೊಬೈಲ್ ಅನ್ನು ಮಹಿಳೆ ಕೆಳಗೆ ಬೀಳಿಸಿಕೊಂಡಿದ್ದಾರೆ. ಕೆಳಗೆ ಬಿದ್ದಂತ ಮಹಿಳೆಯ ಮೊಬೈಲ್ ಕೂಡ ಆರೋಪಿ ವಿಘ್ನೇಶ್ ಕದ್ದು ಪರಾರಿಯಾಗಿದ್ದನು. ಈ ಸಂಬಂಧ ಜ್ಞಾನಭಾರತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಆರೋಪಿ ವಿಘ್ನೇಶ್ ಬಂಧಿಸಿ, ಮೊಬೈಲ್ ವಶಕ್ಕೆ ಪೊಲೀಸರು ಪಡೆದಿದ್ದಾರೆ. https://kannadanewsnow.com/kannada/cm-siddaramaiah-releases-rs-94000-for-senior-journalist-nadigs-treatment-kuwj-president-tagadur-thanks-him/ https://kannadanewsnow.com/kannada/breaking-no-cabinet-reshuffle-in-the-state-for-now-cm-siddaramaiah-clarifies/

Read More

ಬೆಂಗಳೂರು: ಸಂಯುಕ್ತ ಕರ್ನಾಟಕ, ಕನ್ನಡಪ್ರಭ ಸೇರಿದಂತೆ ಹಲವು ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿದ್ದ 93 ವಸಂತ ತುಂಬಿದ ಹಿರಿಯ ಪತ್ರಕರ್ತರಾದ ಸತ್ಯನಾರಾಯಣ ನಾಡಿಗ್ ಅವರ ಆಸ್ಪತ್ರೆ ಚಿಕಿತ್ಸೆ ಭಾಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 94 ಸಾವಿರ ರೂ ಪರಿಹಾರ ಬಿಡುಗಡೆ ಮಾಡಿದ್ದಾರೆ. ಸತ್ಯನಾರಾಯಣ ನಾಡಿಗ್ ಅವರು ಕ್ಯಾನ್ಸರ್ ಕಾರಣದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಗ್ಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಸರ್ಕಾರದ ಗಮನಕ್ಕೆ ತಂದಿದ್ದು ಚಿಕಿತ್ಸೆಗೆ ನೆರವು ಕೋರಿದ್ದರು. ಕೆಯುಡಬ್ಲ್ಯೂಜೆ ಮನವಿ ಮೇರೆಗೆ ಪರಿಹಾರ ಮಂಜೂರು ಮಾಡಿದ ಸಿಎಂ‌ ಸಿದ್ದರಾಮಯ್ಯ‌ಅವರಿಗೆ, ಈ ನಿಟ್ಟಿನಲ್ಲಿ ಸಹಕಾರ ನೀಡಿದ ಸಿಎಂ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಧನ್ಯವಾದ ಸಲ್ಲಿಸಿದೆ. https://kannadanewsnow.com/kannada/alert-using-these-passwords-could-lead-to-your-data-leak-be-careful/ https://kannadanewsnow.com/kannada/breaking-no-cabinet-reshuffle-in-the-state-for-now-cm-siddaramaiah-clarifies/

Read More

ಮೈಸೂರು: ಸಾಂಸ್ಕೃತಿಕ ನಗರಿ ಎಂದೆನಿಸಿಕೊಂಡಿರುವ ಮೈಸೂರನಲ್ಲಿ ಕಳೆದ ಇಪ್ಪತ್ತೊಂಭತ್ತು ವರ್ಷಗಳಿಂದ ಒಡಿಸ್ಸಿ ನೃತ್ಯ ಕಲೆಯನ್ನು ಪರಿಚಯಿಸುತ್ತಾ, ನೃತ್ಯ ಕ್ಷೇತ್ರದಲ್ಲಿ ತಮ್ಮದೇ ಛಾಪು ಮೂಡಿಸಿರುವ ರುದ್ರ ನೃತ್ಯಯೋಗ ಶಾಲೆಯ ನೃತ್ಯಗುರು ಸಿಂಧು ಕಿರಣ್‌ರವರು, ಈಗ ನಾಲ್ಕನೇ ಆವೃತ್ತಿಯ ಮೈಸೂರು ಒಡಿಸ್ಸಿ ಉತ್ಸವವನ್ನು ಸಂಘಟಿಸಿದ್ದಾರೆ ಎಂದು ಗುರು ಸಿಂಧು ಕಿರಣ್‌ರವರ ಶಿಷ್ಯೆ-ನೃತ್ಯ ಕಲಾವಿದೆ ಪೃಥೆ ಹವಾಲ್ದಾರ್ ಹೇಳಿದರು. ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ನ.23, 2025 ರಂದು ಮೈಸೂರು ವಿಜಯ ನಗರದಲ್ಲಿನ ಪ್ರತಿಷ್ಟಿತ ಜಗನ್ನಾಥ್ ಸೆಂಟರ್ -ಫಾರ್ ಆರ್ಟ್ ಅಂಡ್ ಕಲ್ಚರ್ (ಜೆಸಿಎಸಿ), ವೇದಿಕೆಯಲ್ಲಿ ಸಂಜೆ 05.30ಕ್ಕೆ ಈ ಮೈಸೂರು ಒಡಿಸ್ಸಿ ಉತ್ಸವವನ್ನು ಆಯೋಜಿಸಲಾಗಿದ್ದು, ಈ ಉತ್ಸವದಲ್ಲಿ ನಾಡಿನ ಹೆಸರಾಂತ ಒಡಿಸ್ಸಿ ನೃತ್ಯ ಕಲಾವಿದರು ಪಾಲ್ಗೊಳ್ಳುತ್ತಿದ್ದಾರೆ ಎಂದರು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ, ಮೈಸೂರಿನ ಶ್ರೀ ಕೃಷ್ಣ ಗಾನ ಸಭಾದ ಅಧ್ಯಕ್ಷರಾದ ಶ್ರೀಧರ ರಾಜ್ ಅರಸ್, ಮೈಸೂರಿನ ಪುರಿ ಜಗನ್ನಾಥ ಸಾಂಸ್ಕೃತಿಕ ಮತ್ತು ಕಲ್ಯಾಣ ಸಮಿತಿಯ ಅಧ್ಯಕ್ಷರಾದ ಘನಶ್ಯಾಮ್, ಮೈಸೂರು ಯೋಗ ಒಕ್ಕೂಟದ ಕಾರ್ಯಾಧ್ಯಕ್ಷ ಡಾ. ಬಿ. ಪಿ.…

Read More

ಬೆಂಗಳೂರು: ನಗರದಲ್ಲಿ ಲಾಲ್ ಬಾಗ್ ಫಲ ಪುಷ್ಪದ ಮಾದರಿಯಲ್ಲೇ ಕಬ್ಬನ್ ಪಾರ್ಕ್ ಪುಷ್ಪ ಪ್ರದರ್ಶನಕ್ಕೆ ತೋಟಗಾರಿಕಾ ಇಲಾಖೆ ಸಿದ್ಧವಾಗಿದೆ. ನವೆಂಬರ್.27ರಿಂದ ಡಿಸೆಂಬರ್.7ರವರೆಗೆ ಕಬ್ಬನ್ ಪಾರ್ಕ್ ಪುಷ್ಪ ಪ್ರದರ್ಶವನ್ನು ಆಯೋಜಿಸಲಾಗಿದೆ. ಈ ಕುರಿತಂತೆ ಕನ್ನಡ ನ್ಯೂಸ್ ನೌ ಜೊತೆಗೆ ಮಾತನಾಡಿ ಮಾಹಿತಿ ಹಂಚಿಕೊಂಡಂತ ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಡಾ.ಎಂ. ಜಗದೀಶ್ ಅವರು, ಕಬ್ಬನ್ ಪಾರ್ಕ್ ನಲ್ಲಿ ಕನ್ನಡ ರಾಜ್ಯೋತ್ಸವ ಹಾಗೂ ಮಕ್ಕಳ ದಿನಾಚರಣೆ ಅಂಗವಾಗಿ ಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿದೆ. ಬೆಳಗ್ಗೆ 9ರಿಂದ ಸಂಜೆ 8 ಗಂಟೆಯವರೆಗೆ ವೀಕ್ಷಣೆಗೆ ಲಭ್ಯವಿರಲಿದೆ ಎಂದರು. ಮಕ್ಕಳ ದಿನಾಚರಣೆಯ ಸಲುವಾಗಿ ಮಕ್ಕಳ ಹಬ್ಬದ ರೀತಿಯಲ್ಲಿ ಕಬ್ಬನ್ ಪಾರ್ಕ್ ನಲ್ಲಿ ಪುಷ್ಪ ಪ್ರದರ್ಶನ ನಡೆಯಲಿದೆ. ಪ್ರತಿ ದಿನವೂ ಸಾಂಸ್ಕೃತಿಕ ಕಾರ್ಯಕ್ರಮವಿರುತ್ತದೆ. ಹಾಡು, ಸಂಗೀತಗಳನ್ನು ಆಯೋಜಿಸಲಾಗಿದೆ. ಮಕ್ಕಳನ್ನು ಆಕರ್ಷಿಸಲು ಎಲ್ಲಾ ವ್ಯವಸ್ಥೆ ಮಾಡಲಾಗಿದೆ. 100 ಮಳಿಗೆಗಳು ಕಬ್ಬನ್ ಪಾರ್ಕ್ ಪುಷ್ಪ ಪ್ರದರ್ಶನದಲ್ಲಿ ಇರಲಿವೆ. ಬೀಜ, ಸಸಿಗಳು ದೊರೆಯಲಿವೆ ಎಂದು ಹೇಳಿದರು. ವಿವಿಧ ಬಗೆಯ ಹೂವುಗಳಿಂದ ಹಂಪಿ ರಥ ನಿರ್ಮಿಸಲಾಗುತ್ತಿದೆ. ಪುಷ್ಪ…

Read More