Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಕೆಲವರು ವ್ಯವಸ್ಥಿತವಾಗಿ ಅಪಪ್ರಚಾರ ಮಾಡುತ್ತಿದ್ದಾರೆ. ಈ ಅಪಪ್ರಚಾರದಲ್ಲಿ ಅವರು ಯಾರೂ ಗೆಲುವು ಕಂಡಿಲ್ಲ, ಕಾಣುವುದೂ ಇಲ್ಲ ಎಂದು ಮಾಜಿ ಪ್ರಧಾನಿಗಳು, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ. ದೇವೇಗೌಡರು ಗುಡುಗಿದರು. ಜನರೊಂದಿಗೆ ಜನತಾದಳ ಎಂಬ ಹೆಸರಿನಲ್ಲಿ ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಪಕ್ಷ ಸಂಘಟನೆಗಾಗಿ ಹಮ್ಮಿಕೊಳ್ಳಲಾಗಿರುವ ರಾಜ್ಯ ಪ್ರವಾಸ ಹಾಗೂ ʼಮಿಸ್ ಕಾಲ್ʼ ಸದಸ್ಯತ್ವದ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಈ ಕಾರ್ಯಕ್ರಮ ಬೆಂಗಳೂರಿನ ಜೆಡಿಎಸ್ ರಾಜ್ಯ ಕಚೇರಿ ಜೆ.ಪಿ.ಭವನದಲ್ಲಿ ಭಾನುವಾರ ನಡೆಯಿತು. ಕುಮಾರಸ್ವಾಮಿ ಅವರಿಗೆ ಕೆಲವರು ಬಹಳ ಯಾತನೆ ಕೊಡುತ್ತಿದ್ದಾರೆ. ಅವರ ವಿರುದ್ಧ ವಿನಾಕಾರಣ ಆರೋಪ ಮಾಡುತ್ತಿದ್ದಾರೆ. ಸುಖಾ ಸುಮ್ಮನೆ ಭ್ರಷ್ಟಾಚಾರ ಆರೋಪಗಳನ್ನು ಮಾಡುತ್ತಿದ್ದಾರೆ. ಯಾವುದೇ ಆರೋಪಗಳನ್ನು ಸಾಬೀತು ಮಾಡಲು ಅವರಿಂದ ಆಗಿಲ್ಲ, ಆಗುವುದೂ ಇಲ್ಲ. ಕೇವಲ ಆರೋಪ ಮಾಡಿಕೊಂಡೇ ಅವರೆಲ್ಲ ಸೋಲುತ್ತಿದ್ದಾರೆ ಎಂದು ಅವರು ಹೇಳಿದರು. ಕುಮಾರಸ್ವಾಮಿ ಅವರನ್ನು ಕೆಲವರಿಗೆ ಸಹಿಸಿಕೊಳ್ಳೋಕೆ ಆಗುತ್ತಿಲ್ಲ. ಅವರ…
ಪೂರ್ವ ಜನ್ಮದ ಕರ್ಮ ಫಲ ಈ ಜನ್ಮದಲ್ಲಿ ಪಡೆದಿರುವ ಪ್ರತಿಫಲ ನಮಗೆ ನಮ್ಮ ಪೂರ್ವ ಜನ್ಮದ ಕರ್ಮಗಳಿಂದಲೇ… ಈ ಜನ್ಮದಲ್ಲಿ… ತಂದೆ, ತಾಯಿ, ಅಣ್ಣ, ಅಕ್ಕ, ಹೆಂಡತಿ, ಗಂಡ, ಪ್ರೇಯಸಿ, ಪ್ರಿಯಕರ, ಮಿತ್ರರು, ಶತ್ರುಗಳು ಎನ್ನುವ ಅನೇಕ ಸಂಬಂಧಗಳು ನಮಗೆ ಈ ಪ್ರಪಂಚದಲ್ಲಿ ಲಭಿಸುತ್ತದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ…
ಬೆಂಗಳೂರು : ರಾಜ್ಯವು 2024-25ನೇ ಸಾಲಿನಲ್ಲಿ ಪವನ ವಿದ್ಯುತ್ ಕ್ಷೇತ್ರಕ್ಕೆ 1331.48 ಮೆ.ವ್ಯಾ. ಸೇರ್ಪಡೆಗೊಳಿಸುವ ಮೂಲಕ ದೇಶದಲ್ಲೇ ಪ್ರಥಮ ಸ್ಥಾನದಲ್ಲಿದ್ದು, ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಬೆಂಗಳೂರಿನಲ್ಲಿ ಭಾನುವಾರ ಆಯೋಜಿಸಿದ್ದ ‘ಗ್ಲೋಬಲ್ ವಿಂಡ್ ಡೇ’ 2025 “ಪವನ್-ಉರ್ಜಾ: ಪವರಿಂಗ್ ದಿ ಫ್ಯೂಚರ್ ಆಫ್ ಇಂಡಿಯಾ” ಸಮಾರಂಭದಲ್ಲಿ ಕೇಂದ್ರ ನವ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್ ಜೋಶಿ ಅವರಿಂದ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಪ್ರಶಸ್ತಿ ಸ್ವೀಕರಿಸಿದರು. 2024-25ನೇ ಸಾಲಿನಲ್ಲಿ ಪವನ ವಿದ್ಯುತ್ ವಲಯಕ್ಕೆ 1331.48 ಮೆ.ವ್ಯಾ. ಸಾಮರ್ಥ್ಯ ಸೇಪರ್ಡೆಗೊಳಿಸಿರುವ ರಾಜ್ಯ ಪ್ರಥಮ ಸ್ಥಾನದಲ್ಲಿದ್ದರೆ, 1136.37 ಮೆ.ವ್ಯಾ. ಸಾಮರ್ಥ್ಯವನ್ನು ಸೇರ್ಪಡೆಗೊಳಿಸಿರುವ ತಮಿಳುನಾಡು ಎರಡನೇ ಸ್ಥಾನದಲ್ಲಿದೆ. 954.74 ಮೆ.ವ್ಯಾ ಸೇರ್ಪಡೆಗೊಳಿಸಿರುವ ಗುಜರಾತ್ ಮೂರನೇ ಸ್ಥಾನದಲ್ಲಿದೆ. ಕಳೆದ ಸಾಲಿನಲ್ಲಿ ಗುಜರಾತ್ ಮೊದಲ ಸ್ಥಾನ, ಕರ್ನಾಟಕ ಎರಡನೇ ಸ್ಥಾನ ಹಾಗೂ ತಮಿಳುನಾಡು ಮೂರನೇ ಸ್ಥಾನದಲ್ಲಿತ್ತು. ಪ್ರಸಕ್ತ ಸಾಲಿನಲ್ಲಿ ಈ ಎರಡೂ ರಾಜ್ಯಗಳನ್ನು ಹಿಂದಿಕ್ಕಿ ಕರ್ನಾಟಕ ಅಗ್ರ ಸ್ಥಾನಕ್ಕೇರಿದೆ. ವಿಶ್ವ ಪವನ ದಿನದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಇಂಧನ ಸಚಿವ…
ಮಂಡ್ಯ: ಹೋರಾಟಗಾರರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿ ಕೆಂಗಣ್ಣಿಗೆ ಗುರಿಯಾಗಿದ್ದಂತ ಕಾಂಗ್ರೆಸ್ ಶಾಸಕ ಕದಲೂರು ಉದಯ್ ಯೂಟರ್ನ್ ಹೊಡೆದಿದ್ದಾರೆ. ನಾನು ಒಬ್ಬ ವ್ಯಕ್ತಿಗೆ ಬಗ್ಗೆ ಮಾತ್ರವೇ ಹೇಳಿಕೆ ನೀಡಿದ್ದೇನೆ. ಅದರ ಹೊರತಾಗಿ ಯಾವ ಸಂಘಟನೆ, ರೈತರ ವಿರುದ್ಧ ಮಾತನಾಡಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ. ಇಂದು ಮಂಡ್ಯ ಜಿಲ್ಲೆಯ ಮದ್ಧೂರಿನಲ್ಲಿ ಸುದ್ದಿಗಾರರೊಂದಿಗೆ ಹೋರಾಟಗಾರರ ವಿರುದ್ದ ವಿವಾದಾತ್ಮಕ ಹೇಳಿಕೆ ವಿಚಾರವಾಗಿ ಮಾತನಾಡಿದಂತ ಅವರು, ಯಾವ ಸಂಘಟನೆ, ರೈತರ ವಿರುದ್ಧ ನಾನು ಮಾತನಾಡಿಲ್ಲ. ಒಬ್ಬ ವ್ಯಕ್ತಿಗೆ ಸೀಮಿತವಾಗಿ ಮಾತ್ರ ನನ್ನ ಹೇಳಿಕೆ ಸೀಮಿತವಾಗಿದೆ ಎಂಬುದಾಗಿ ಸ್ಪಷ್ಟ ಪಡಿಸಿದರು. ನನ್ನ ಹೇಳಿಕೆ ಬಗ್ಗೆ ತಪ್ಪು ಗ್ರಹಿಕೆ ಆಗಿದೆ. ಕೆಲವರು ಅದಕ್ಕೆ ಉಪ್ಪು,ಕಾರ ಹಾಕ್ತಿದ್ದಾರೆ. ಒಬ್ಬ ಪ್ರತ್ಯೇಕ ವ್ಯಕ್ತಿಗೆ ಸೀಮಿವಾಗಿ ಹೇಳಿರುವ ಹೇಳಿಕೆಯಾಗಿದೆ. ಯಾವುದೇ ಸಂಘಟನೆ, ರೈತರು, ಸಾರ್ವಜನಿಕರ ವಿರುದ್ದ ಹೇಳಿಕೆ ಕೊಟ್ಟಿಲ್ಲ. ನಾವು ಜನರ ಪರ ಕೆಲಸ ಮಾಡೋದಕ್ಕೆ ಬಂದಿರೋದು. ಇದರ ಮಧ್ಯೆ ಕೆಲವು ಕಳ್ಳರು, ಕಾಕರು ಇರ್ತಾರೆ. ನಾನು ಸುಳ್ಳು ಮಾತನಾಡಲ್ಲ. ನಾವು ಒಬ್ಬ ವ್ಯಕ್ತಿಗೆ…
ತುಮಕೂರು: ಇಲ್ಲಿನ ಸಿದ್ದಗಂಗಾ ಮಠಕ್ಕೆ ಎಕ್ಕ ಚಿತ್ರತಂಡ ಭೇಟಿ ನೀಡಿದ್ದ ವೇಳೆಯಲ್ಲಿ ಮಹಾ ಯಡವಟ್ಟು ಉಂಟಾಗಿದೆ. ಬೌನ್ಸರ್ ಕಾರು ಮಹಿಳೆಯೊಬ್ಬರಿಗೆ ಡಿಕ್ಕಿಯಾದ ಪರಿಣಾಮ ಆಕೆಯ ಕಾಲಿಗೆ ಗಂಭೀರವಾಗಿ ಗಾಯವಾಗಿದೆ. ಹೀಗಿದ್ದರೂ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸದೇ ಅಮಾನುಷರಂತೆ ತೆರಳಿರೋ ಆರೋಪ ಕೇಳಿ ಬಂದಿದೆ. ನಟ ಯುವರಾಜ್ ಕುಮಾರ್ ಅವರ ಎಕ್ಕ ಚಿತ್ರತಂಡವು ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದೆ. ಈ ವೇಳೆಯಲ್ಲಿ ಬೌನ್ಸರ್ ಕಾರು ಅಲ್ಲಿಯೇ ಇದ್ದಂತ ದಾರಿಯಲ್ಲಿನ ಮಹಿಳೆಯೊಬ್ಬರಿಗೆ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಮಹಿಳೆಯ ಕಾಲಿಗೆ ಗಂಭೀರ ಪೆಟ್ಟಾಗಿದೆ. ಆ ಮಳಿಗೆ ಗಾಯವಾಗಿ ನರಳಾಡುತ್ತ ತಮ್ಮನ್ನು ಆಸ್ಪತ್ರೆಗೆ ಸೇರಿಸುವಂತೆ ಕೋರಿಕೊಂಡರೂ ಗಮನಸಿದೇ ಎಕ್ಕ ಚಿತ್ರತಂಡ ಸ್ಥಳದಿಂದ ತೆರಳಿದ್ದಾಗಿ ಹೇಳಲಾಗುತ್ತಿದೆ. ಅಂದಹಾಗೇ ಸಿದ್ದಗಂಗಾ ಮಠಕ್ಕೆ ಶಾಲೆಗೆ ಬಿಟ್ಟು ಹೋಗೋದಕ್ಕೆ ಮಹಿಳೆ ಬಂದಿದ್ದರು. ತಮ್ಮ ಮಗುವನ್ನು ಶಾಲೆಗೆ ಬಿಟ್ಟು ವಾಪಾಸ್ ಆಗುತ್ತಿದಂತ ವೇಳೆಯಲ್ಲಿ ಎಕ್ಕ ಚಿತ್ರತಂಡ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿತ್ತು. ಈ ಸಂದರ್ಭದಲ್ಲೇ ಬೌನ್ಸರ್ ಕಾರು ಮಹಿಳೆಗೆ ಡಿಕ್ಕಿಯಾಗಿದೆ. ಈ ಡಿಕ್ಕಿಯಲ್ಲಿ ಬಳ್ಳಾರಿ…
ಮುಂಬೈ: ಇಲ್ಲಿನ ಅಮೇರಿಕಾ ರಾಯಭಾರ ಕಚೇರಿಗೆ ಬಾಂಬ್ ಬೆದರಿಕೆ ಕರೆ ಬಂದಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ. ಮುಂಬೈನಲ್ಲಿರುವಂತ ಅಮೇರಿಕಾ ರಾಯಭಾರ ಕಚೇರಿಗೆ ಕಚೇರಿಯನ್ನು ಸ್ಪೋಟಿಸುವುದಾಗಿ ಬಾಂಬ್ ಬೆದರಿಕೆ ಕರೆ ಮಾಡಲಾಗಿದೆ. ಈ ಕೂಡಲೇ ಪೊಲೀಸರು ಅಲರ್ಟ್ ಆಗಿದ್ದು, ಬಾಂಬ್ ನಿಷ್ಕ್ರೀಯ ದಳ, ಪತ್ತೆಯ ಶ್ವಾನ ದಳದಿಂದ ಸ್ಥಳದಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ಬಾಂಬ್ ಬೆದರಿಕೆ ಕರೆ ಬಗ್ಗೆ ಮುಂಬೈನ ಬಿಕೆಸಿ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿದೆ. ಸ್ಥಳಕ್ಕೆ ಪೊಲೀಸರು, ಶ್ವಾನದಳದಿಂದ ಭೇಟಿ ನೀಡಿ, ಬಾಂಬ್ ಪತ್ತೆ ಕಾರ್ಯದಲ್ಲಿ ತೊಡಗಿದ್ದಾರೆ. https://kannadanewsnow.com/kannada/invitation-to-apply-for-admission-to-6th-grade-in-jawahar-navodaya-vidyalayas-july-29-is-the-last-date/ https://kannadanewsnow.com/kannada/breaking-mobile-attendance-is-mandatory-for-doctors-and-staff-at-all-health-centers-in-the-state-dinesh-gundu-rao/
ಬೆಂಗಳೂರು: ಶಿಕ್ಷಣ ಸಚಿವಾಲಯದ ಅಧೀನ ಸ್ವಾಯತ್ತ ಸಂಸ್ಥೆ, ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ವಿಭಾಗದ ವತಿಯಿಂದ ಜವಾಹರ ನವೋದಯ ವಿದ್ಯಾಲಯಗಳಲ್ಲಿ 2026-27ನೇ ಸಾಲಿಗೆ ಆಯ್ಕೆ ಪರೀಕ್ಷೆಯ ಮೂಲಕ 6ನೇ ತರಗತಿಗೆ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈಸನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 2025 ನೇ ಜುಲೈ 29 ಕೊನೆಯ ದಿನಾಂಕವಾಗಿದೆ. ಅರ್ಜಿ ಸಲ್ಲಿಸಬಯಸುವ ವಿದ್ಯಾರ್ಥಿಗಳು ಕಾರ್ಯನಿರ್ವಹಿಸುತ್ತಿರುವ ಸಂಬಂಧಿಸಿದ ಜವಾಹರ ನವೋದಯ ವಿದ್ಯಾಲಯಗಳ ಆಯಾ ಜಿಲ್ಲೆಯ ನಿವಾಸಿಗಳು ಆಗಿರಬೇಕು ಮತ್ತು 2025-26 ನೇ ಶೈಕ್ಷಣಿಕ ವರ್ಷದಲ್ಲಿ ಅದೇ ಜಿಲ್ಲೆಯ ಸರ್ಕಾರಿ/ ಸರ್ಕಾರದಿಂದ ಮಾನ್ಯತೆ ಪಡೆದಿರುವ ಶಾಲೆಯಲ್ಲಿ 5ನೇ ತರಗತಿಯಲ್ಲಿ ಓದುತ್ತಿರಬೇಕು. ವಿದ್ಯಾರ್ಥಿಯು 3 ಮತ್ತು 4 ನೇ ತರಗತಿಯ ಪೂರ್ಣ ಶೈಕ್ಷಣಿಕ ವರ್ಷವನ್ನು ಸರ್ಕಾರಿ/ಸರ್ಕಾರದಿಂದ ಮಾನ್ಯತೆ ಪಡೆದಿರುವ ಶಾಲೆಯಲ್ಲಿ ಪೂರ್ಣಾವಧಿ ಶಾಲಾ ಶಿಕ್ಷಣ ಪಡೆದು ತೇರ್ಗಡ ಹೊಂದಿರಬೇಕು. ದಿನಾಂಕ:01-05-2014 ರಿಂದ ದಿನಾಂಕ: 31-07-2016 ಮಧ್ಯೆ ಜನಿಸಿದವರಾಗಿರಬೇಕು. ಪ್ರತಿ ಜಿಲ್ಲೆಯಲ್ಲಿ ಸಹ ಶಿಕ್ಷಣ ವಸತಿ ಶಾಲೆಗಳು, ಬಾಲಕ ಮತ್ತು ಬಾಲಕಿಯರಿಗೆ…
ಉತ್ತರ ಕನ್ನಡ: ಜಿಲ್ಲೆಯಲ್ಲಿ ರಾಜ್ಯದಲ್ಲೇ ಶಿಕ್ಷಣಕ್ಕಾಗಿ ಕೆಸರಲ್ಲಿ ನಡಿಗೆಯ ಮನಕಲಕುವಂತ ಮಕ್ಕಳ ಕತೆಯೊಂದಿದೆ. ದಿನಂಪ್ರತಿ ಆ ಶಾಲಾ ಮಕ್ಕಳು ತೆರಳೋದಕನ್ನು ಕಂಡರೇ ಎಂತವರಿಗೂ ಇದೇನಪ್ಪ ಈ ಕಾಲದಲ್ಲೂ ಹೀಗೊಂದು ರಸ್ತೆ ಇದ್ಯಾ ಅನ್ನಿಸುತ್ತದೆ. ಅದು ಎಲ್ಲಿ? ಏನು ಎನ್ನುವ ಬಗ್ಗೆ ಕೇಬಲ್ ನಾಗೇಶ್ ಎನ್ನುವವರ ವರದಿಯನ್ನು ಒಳಗೊಂಡ ಪತ್ರಿಕೆಯ ಸುದ್ದಿಯನ್ನು ಈ ಕೆಳಗೆ ಯಥಾವತ್ತಾಗಿ ಪ್ರಕಟಿಸಲಾಗಿದೆ ಓದಿ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲ್ಲೂಕಿನ ಕಿರವತ್ತಿ ಗ್ರಾಮ ಪಂಚಾಯತ್ ವ್ಯಾಪ್ತಿಯ ದೊಡ್ಡ ಯಲವಳ್ಳಿ ಶಾಲೆಗೆ ಸಣ್ಣ ಯಲವಳ್ಳಿ ಗ್ರಾಮದ ಮಕ್ಕಳು ವಿದ್ಯೆ ಕಲಿಯಲು ಹೋಗಬೇಕೆಂದರೆ ಕೆಸರಿನಲ್ಲಿ ಹೆಜ್ಜೆ ಹಾಕಲೇಬೇಕು, ಸಮವಸ್ತ್ರ ರಾಡಿಯಾಗಲೇಬೇಕು ಎಂಬ ನಿಯಮ ಇನ್ನೂ ಮುಂದುವರೆದಿದೆ. ಈ ಶೋಷಣೆಗೆ ಸಮಾದ ಮತ್ತು ಸರ್ಕಾರ ತಲೆ ತಗ್ಗಿಸಬೇಕು ಸಣ್ಣ ಯಲವಳ್ಳಿಯಲ್ಲಿ ಸುಮಾರು 35 ಕುಟುಂಬಗಳು ವಾಸಿಸುತ್ತಿದ್ದು ಕೃಷಿ ಹೈನುಗಾರಿಕೆ ನಂಬಿ ಜೀವನ ಸಾಗಿಸುತ್ತಿದ್ದಾರೆ. ನಮ್ಮ ಪಾಡು ಹೀಗಾಗಿದೆ ಮಕ್ಕಳಾದರು ವಿದ್ಯೆ ಕಲಿಯಲಿ ಎಂಬ ಮಹದಾಸೆಯಿಂದ ಕೂಲಿನಾಲಿ ಮಾಡಿ ಮಕ್ಕಳನ್ನು ಶಾಲೆಗೆ ಕಳಿಸಲಾಗುತ್ತಿದೆ.…
ಬೆಂಗಳೂರು: DCET-25 ಕ್ಕೆ ಆನ್ ಲೈನ್ ಅರ್ಜಿ ಸಲ್ಲಿಕೆ ವೇಳೆ ತಪ್ಪು ಮಾಹಿತಿ ನಮೂದಿಸಿದ್ದರೆ ಅದನ್ನು ಸರಿಪಡಿಸಿಕೊಳ್ಳಲು KEA ಕಚೇರಿಗೆ ಜೂನ್ 18 ಅಥವಾ 19ರಂದು ಖುದ್ದು ಹಾಜರಾಗಬೇಕು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಸೂಚಿಸಿದ್ದಾರೆ. ಅಭ್ಯರ್ಥಿಗಳು ಡಿಸಿಇಟಿ-2025ಕ್ಕೆ ಸಲ್ಲಿಸಿದ ಅರ್ಜಿ ಪ್ರತಿ, ಪ್ರವೇಶ ಪತ್ರ, ಪರಿಶೀಲನಾ ಪತ್ರ ಮತ್ತು ಅಗತ್ಯವಾದ ಎಲ್ಲಾ ಮೂಲ ದಾಖಲೆಗಳು ಮತ್ತು ಎಲ್ಲಾ ಪ್ರಮಾಣ ಪತ್ರಗಳ ಎರಡು ಸೆಟ್ ಜೆರಾಕ್ಸ್ ಪ್ರತಿಗಳೊಂದಿಗೆ ಹಾಜರಾಗಬೇಕು. ಪರಿಶೀಲನೆಗೆ ಹಾಜರಾಗುವ ಮೊದಲು 16-06-2025 ರಂದು ಸ್ಲಾಟ್ ಬುಕಿಂಗ್ ಮಾಡಿರಬೇಕು. ನಿಗದಿತ ಸಮಯದಲ್ಲಿ ದಾಖಲೆಗಳನ್ನು ಸಲ್ಲಿಸದೇ ಇರುವವರು, ದಾಖಲೆಗಳು / ಕ್ಷೇಮುಗಳು / ಡಿಪ್ಲೊಮಾ ಪರೀಕ್ಷೆಯ ಅಂಕಗಳು / ವೃತ್ತಿನಿರತ ಕ್ಷೇಮುಗಳನ್ನು ಸರಿಯಾಗಿ ನಮೂದಿಸದವರು ಈ ಅಂತಿಮ ಅವಕಾಶವನ್ನು ಬಳಸಿಕೊಳ್ಳಬಹುದು. ಎಲ್ಲಾ ಮಾಹಿತಿ ಸರಿ ಇರುವವರು ಕೆಇಎ ಕಚೇರಿಗೆ ಬರುವ ಅಗತ್ಯವಿಲ್ಲ. https://twitter.com/KEA_karnataka/status/1934207937477558753 ದಾಖಲೆಗಳ ಪರಿಶೀಲನೆಗೆ ಹಾಜರಾದ ನಂತರ ಅನೇಕರಿಗೆ ತಮ್ಮ ತಪ್ಪುಗಳು ಅರಿವಿಗೆ ಬಂದಿದ್ದು ಅಂತಹವರು ಕೂಡ ಬರಬಹುದು.…
ಮಹಾರಾಷ್ಟ್ರ: ರಾಜ್ಯದಲ್ಲಿ ನಿರಂತವಾಗಿ ಮಳೆಯಾಗುತ್ತಿದೆ. ಈ ಮಳೆಯ ಪರಿಣಾಮವಾಗಿ ಇಂದ್ರಯಾಣಿ ನದಿಗೆ ನಿರ್ಮಿಸಲಾದ ಸೇತುವೆ ಕುಸಿತಗೊಂಡಿದೆ. ಈ ಕಾರಣದಿಂದಾಗಿ ಆರು ಮಂದಿ ಸಾವನ್ನಪ್ಪಿದ್ದರೇ, 25 ರಿಂದ 30 ಪ್ರವಾಸಿಗರು ನೀರಲ್ಲಿ ಕೊಚ್ಚಿ ಹೋಗಿದ್ದಾರೆ. ಭಾನುವಾರದ ಇಂದು ಭಾರೀ ಸಂಖ್ಯೆಯ ಪ್ರವಾಸಿಗರು ಇಂದ್ರಯಾಣಿ ಸೇತುವೆ ಬಳಿ ಜಮಾಯಿಸಿದ್ದರು. ಈ ವೇಳೆ ಸೇತುವೆ ಕುಸಿತಗೊಂಡು ಭಾರಿ ದುರಂತ ಸಂಭವಿಸಿದೆ. ಇಂದುವರೆಗೆ 6 ಪ್ರವಾಸಿಗರ ಮೃತದೇಹ ಪತ್ತೆಯಾಗಿದ್ದು, ಉಳಿದವರ ಪತ್ತೆಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. https://twitter.com/ians_india/status/1934203511404998791 ಮಹಾರಾಷ್ಟ್ರದ ಪುಣೆಯ ಮಾವಲ್ ತಾಲ್ಲೂಕಿನ ಕುಂದಮಾಲದಲ್ಲಿ ಇಂದ್ರಯಾಣಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಸೇತುವೆ ಕುಸಿದು 25–30 ಪ್ರವಾಸಿಗರು ನದಿಗೆ ಬಿದ್ದ ಘಟನೆ ನಡೆದಿದೆ. ಭಾರೀ ಮಳೆಯಿಂದಾಗಿ ನೀರಿನ ಮಟ್ಟ ಏರಿದೆ. ಸ್ಥಳೀಯ ಪೊಲೀಸರು, ಅಗ್ನಿಶಾಮಕ ದಳ ಮತ್ತು ಎನ್ಡಿಆರ್ಎಫ್ ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿವೆ. https://kannadanewsnow.com/kannada/tomorrow-is-the-funeral-of-former-gujarat-chief-minister-vijay-rupani/ https://kannadanewsnow.com/kannada/breaking-mobile-attendance-is-mandatory-for-doctors-and-staff-at-all-health-centers-in-the-state-dinesh-gundu-rao/













