Author: kannadanewsnow09

ಬೆಂಗಳೂರು: ರಾಜಧಾನಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ 60 ಕಿ.ಮೀ. ಆಸುಪಾಸಿನಲ್ಲಿ ತಮ್ಮ ಉದ್ಯಮ ಘಟಕ ಸ್ಥಾಪಿಸಲು 25 ಎಕರೆ ಭೂಮಿ ಅಗತ್ಯವಿದೆ ಎಂದು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದ ಲೆನ್ಸ್ ಕಾರ್ಟ್ ಸಮೂಹದ ಮನವಿಗೆ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು ಕೇವಲ ಐದು ನಿಮಿಷಗಳಲ್ಲಿ ಸ್ಪಂದಿಸಿ, ಗಮನ ಸೆಳೆದಿದ್ದಾರೆ. ಲೆನ್ಸ್ ಕಾರ್ಟ್ ಉನ್ನತಾಧಿಕಾರಿ ಪೀಯೂಷ್ ಬನ್ಸಾಲ್ ಅವರು ‘ಎಕ್ಸ್’ನಲ್ಲಿ ತಮ್ಮ ಅಗತ್ಯದ ಬಗ್ಗೆ ಒಂದು ಪೋಸ್ಟ್ ಹಾಕಿದ್ದರು. ಅದರಲ್ಲಿ ಅವರು, ಯಾವುದಾದರೂ ಉದ್ಯಮ ಸಂಸ್ಥೆಗೆ ಜಮೀನು ಮಾರಾಟ ಮಾಡಲು ಆಸಕ್ತಿ ಇದ್ದರೆ ತಮಗೆ ಇ-ಮೇಲ್ ಕಳಿಸುವಂತೆ ಕೋರಿದ್ದರು. https://twitter.com/MBPatil/status/1777581857871433764?t=MVnmY8LQFF282w1t2Pp5dg&s=08 ಇದನ್ನು ಗಮನಿಸಿದ ಸಚಿವರು ಕೂಡಲೇ ಕಾರ್ಯಪ್ರವೃತ್ತರಾಗಿ, ‘ಕೈಗಾರಿಕಾ ಇಲಾಖೆಯು ನಿಮ್ಮ ಬೆಂಬಲಕ್ಕಿದ್ದು, ನಿಮ್ಮ ಅಗತ್ಯಗಳನ್ನೆಲ್ಲ ಪೂರೈಸಲಿದೆ. ನಮ್ಮ ಅಧಿಕಾರಿಗಳು ತಕ್ಷಣವೇ ನಿಮ್ಮನ್ನು ಸಂಪರ್ಕಿಸಲಿದ್ದಾರೆ. ನೀವು ಇರಬೇಕಾದ ಜಾಗ ಕರ್ನಾಟಕ!’ ಎಂದು ಮರುಪೋಸ್ಟ್ ಮಾಡಿ, ಭರವಸೆ ನೀಡಿದ್ದಾರೆ. ಜೊತೆಗೆ ಅಧಿಕಾರಿಗಳಿಗೆ ಅವರು ಅಗತ್ಯ ಸೂಚನೆಗಳನ್ನು ಸಹ ಕೊಟ್ಟಿದ್ದಾರೆ. ಸಚಿವರ ಈ…

Read More

ಮೈಸೂರು: ಬಾಲಿವುಡ್ ನಟ ಅಜಯ್ ದೇವಗನ್ ನಟನೆಯ ಮೈದಾನ್ ಸಿನಿಮಾ ಬಿಡುಗಡೆ ಸಂಕಷ್ಟ ಎದುರಾಗಿದೆ. ಏಪ್ರಿಲ್.11ರಂದು ತೆರೆ ಕಾಣಬೇಕಿದ್ದಂತ ಮೈದಾನ್ ಚಿತ್ರವು ಕಥೆ ಕದ್ದಂತ ಚಿತ್ರವಾಗಿದೆ ಎಂಬ ಕಾರಣಕ್ಕೆ ಕೋರ್ಟ್ ತಡೆಯಾಜ್ಞೆ ನೀಡಿದೆ. ಬೋನಿ ಕಪೂರ್ ನಿರ್ಮಾಣದ, ಅಜಯ್ ದೇವಗನ್ ನಟನೆಯ ಮೈದಾನ್ ಚಿತ್ರ ಏಪ್ರಿಲ್ 11ರಂದು ದೇಶಾದ್ಯಂತ ರಿಲೀಸ್ ಆಗಬೇಕಿತ್ತು. ಆದ್ರೇ ತಮ್ಮ ಸಿನಿಮಾದ ಮೂಲ ಕತೆಯನ್ನು ಕದ್ದಿದ್ದಾರೆ ಎಂಬುದಾಗಿ ಮೈಸೂರಿನ ಸ್ಟೋರಿ ರೈಟರ್ ಅನಿಲ್ ಕುಮಾರ್ ಕೋರ್ಟ್ ಮೆಟ್ಟಿಲೇರಿದ್ದರು. ಮೈಸೂರು ನ್ಯಾಯಾಲಯದ ಮುಂದೆ ದೂರು ದಾರ ಅನಿಲ್ ಕುಮಾರ್, 2018ರ ಚಿತ್ರದ ಕತೆ ಬಗ್ಗೆ ಲಿಂಕ್ಡಿನ್ ನಲ್ಲಿ ಹಾಕಿದ್ದೆ. ಕಥೆ ಗಮನಿಸಿ ಸುಕ್ ದಾಸ್ ಸೂರ್ಯವಂಶಿ ಎಂಬುವರು ಚರ್ಚಿಸಿದ್ದರು. 2019ರ ಫೆಬ್ರವರಿಯಲ್ಲಿ ಹೆಸರು ಕೂಡ ನೋಂದಾಯಿಸಲಾಗಿತ್ತು. ನನ್ನ ಮೂಲ ಕತೆ ಕದ್ದು ಮೈದಾನ್ ಎಂದು ಹೆಸರಿಟ್ಟಿದ್ದಾರೆ. ಈ ಚಿತ್ರ ಬಿಡುಗಡೆ ತಡೆ ನೀಡುವಂತೆ ಮನವಿ ಮಾಡಿದ್ದರು. ದೂರುದಾರರ ಮನವಿ ಪುರಸ್ಕರಿಸಿರುವಂತ ಮೈಸೂರು ನ್ಯಾಯಾಲಯವು, ಅಮಿತ್ ಶರ್ಮಾ ನಿರ್ದೇಶನದ ಮೈದಾನ್…

Read More

ಹಾಸನ: ರಾಜ್ಯ ಸರ್ಕಾರಿ ನೌಕರರು ರಾಜಕೀಯ ಪಕ್ಷಗಳ ಪರವಾಗಿ ಸಂದೇಶಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುವುದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಲಿದೆ. ಒಂದು ವೇಳೆ ಯಾವುದೇ ಪಕ್ಷದ ಪರವಾಗಿ ಸಂದೇಶವನ್ನು ಫಾರ್ವರ್ಡ್ ಮಾಡಿದ್ರೂ, ಅಂಥವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಇದಕ್ಕೆ ಸಾಕ್ಷಿ ಎನ್ನುವಂತೆ ಮುಂದೆ ಸುದ್ದಿ ಓದಿ. ಹಾಸನದ ಡಿಡಿಪಿಐ ಕಚೇರಿಯಲ್ಲಿ ಎಫ್ ಡಿಎ ಆಗಿ ಕಾರ್ಯ ನಿರ್ವಹಿಸುತ್ತಿದ್ದಂತ ಬಿ.ಹೆಚ್ ಮಂಜುನಾಥ್ ಎಂಬುವರು ಬಿಜೆಪಿ ಪರವಿದ್ದಂತ ಸಂದೇಶವೊಂದನ್ನು ಪ್ರೀತಂ ಜೆ ಗೌಡ ಹಾಸನ ಎಂಎಲ್ಎ ಎಂಬ ವಾಟ್ಸ್ ಆಪ್ ಗ್ರೂಪ್ ನಲ್ಲಿ ಶೇರ್ ಮಾಡಿದ್ದಾರೆ. ಹೀಗೆ ಸರ್ಕಾರಿ ಅಧಿಕಾರಿಯಾಗಿದ್ದೂ, ಬಿಜೆಪಿ ಪರವಾಗಿದ್ದಂತ ಸಂದೇಶ ಫಾರ್ವರ್ಡ್ ಮಾಡಿದ್ದಕ್ಕೆ ಮಂಜುನಾಥ್ ವಿರುದ್ಧ ನಾಗೇಂದ್ರ ಎಂಬುವರು ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದರು. ಈ ದೂರು ಆಧರಿಸಿ ಹಾಸನ ಜಿಲ್ಲಾಧಿಕಾರಿ ಸಿ.ಸತ್ಯಭಾಮ ಅವರು ಬಿಹೆಚ್ ಮಂಜುನಾಥ್ ಅಮಾನತುಗೊಳಿಸಿ ಆದೇಶಿಸಿದ್ದಾರೆ. ಅಂದಹಾಗೇ 24 ಗಂಟೆಯೊಳಗೆ ಡಿಸಿಪಿಐಗೆ ಮಾಹಿತಿ ಒದಗಿಸಿ ಎಂದು ಎಡಿಸಿ ಶಾಂತಲಾ ಅವರು ಮಂಜುನಾಥ್ ಗೆ ನೋಟಿಸ್ ನೀಡಿದ್ದರು.…

Read More

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರ ವಿರುದ್ಧ ಸಂಭಾವ್ಯ ಭದ್ರತಾ ಬೆದರಿಕೆಗಳನ್ನು ಗಮನದಲ್ಲಿಟ್ಟುಕೊಂಡು ಕೇಂದ್ರವು ದೇಶಾದ್ಯಂತ ‘ಝಡ್’ ವರ್ಗದ ಸಿಆರ್ಪಿಎಫ್ ಭದ್ರತೆಯನ್ನು ಒದಗಿಸಿದೆ ಎಂದು ಮೂಲಗಳು ಮಂಗಳವಾರ ತಿಳಿಸಿವೆ. https://twitter.com/ANI/status/1777597414523744423 ಮುಖ್ಯ ಚುನಾವಣಾ ಆಯುಕ್ತರು ಚುನಾವಣಾ ಸಮಯದಲ್ಲಿ ಪ್ರಮುಖ ವ್ಯಕ್ತಿಯಾಗಿದ್ದು, ಅವರು ನಾಲ್ಕು ರಾಜ್ಯಗಳಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ಲೋಕಸಭಾ ಚುನಾವಣೆಗಳು ಮತ್ತು ವಿಧಾನಸಭಾ ಚುನಾವಣೆಗಳನ್ನು ಖಚಿತಪಡಿಸಿಕೊಳ್ಳಲು ಪ್ರಯಾಣಿಸುತ್ತಿದ್ದಾರೆ.  ಹಲವಾರು ಸಭೆಗಳನ್ನು ನಡೆಸುತ್ತಿದ್ದಾರೆ. ಚುನಾವಣೆಗಳ ಸಮಯದಲ್ಲಿ, ಹಲವಾರು ಭಾರತ ವಿರೋಧಿ ಶಕ್ತಿಗಳು ಭಾರತೀಯ ಚುನಾವಣೆಗಳ ಮೇಲೆ ಪರಿಣಾಮ ಬೀರಲು ಪ್ರಯತ್ನಿಸುತ್ತವೆ. ಅಧಿಕಾರದಲ್ಲಿರುವ ವ್ಯಕ್ತಿಯ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು, ಕೇಂದ್ರ ಸರ್ಕಾರವು ತನ್ನ ಭದ್ರತೆಯನ್ನು ಹೆಚ್ಚಿಸಿತು. ಮತ್ತೊಂದು ಬೆಳವಣಿಗೆಯಲ್ಲಿ, ಹೈದರಾಬಾದ್ನ ಬಿಜೆಪಿ ಲೋಕಸಭಾ ಚುನಾವಣಾ ಅಭ್ಯರ್ಥಿ ಮಾಧವಿ ಲತಾ ಅವರ ವಿರುದ್ಧ ಸಂಭಾವ್ಯ ಭದ್ರತಾ ಬೆದರಿಕೆಗಳನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಅವರಿಗೆ ಸಶಸ್ತ್ರ ಕಮಾಂಡೋಗಳ ವಿಐಪಿ ಭದ್ರತೆಯನ್ನು ಒದಗಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. 49 ವರ್ಷದ ರಾಜಕಾರಣಿಗೆ ತೆಲಂಗಾಣದಲ್ಲಿ ವಾಸ್ತವ್ಯ…

Read More

ಬೆಂಗಳೂರು: 2023-24ನೇ ಸಾಲಿಗೆ ರಾಜ್ಯದ ಪ್ರಾಥಮಿಕ, ಪ್ರೌಢಶಾಲಾ ಸಹ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರು ತತ್ಸಮಾನ ವೃಂದದ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮೂಲಕ ಭರ್ತಿ ಮಾಡಿಕೊಳ್ಳೋದಕ್ಕೆ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, 2023-24ನೇ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಸಹ ಶಿಕ್ಷಕರು ಮತ್ತು ಪ್ರೌಢಶಾಲಾ ಮುಖ್ಯ ಶಿಕ್ಷಕರು, ತತ್ಸಮಾನ ವೃಂದದ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ ಲಿಖಿತ ಪರೀಕ್ಷೆ ನಡೆಸುವ ಮೂಲಕ ಭರ್ತಿ ಮಾಡುವ ಸಂಬಂಧ ದಿನಾಂಕ 15-04-2024ರಿಂದ 17-04-2024ರವರೆಗೆ ಪರೀಕ್ಷೆ ನಡೆಸಲು ಅಧಿಸೂಚನೆಯನ್ನು ಹೊರಡಿಸಲಾಗಿತ್ತು ಎಂದಿದೆ. ಆದ್ರೇ ಎಸ್ ಎಸ್ ಎಲ್ ಸಿ ಪರೀಕ್ಷಾ ಮೌಲ್ಯಮಾಪನ ಕಾರ್ಯ ನಡೆಯುವುದರಿಂದ ಹಾಗೂ ಶಿಕ್ಷಕರು, ಅಧಿಕಾರಿಗಳನ್ನು ಲೋಕಸಭಾ ಚುನಾವಣಾ ಕಾರ್ಯಕ್ಕೆ ನಿಯೋಜಿಸಲಾಗುತ್ತಿರುವುದರಿಂದ ಆಡಳಿತಾತ್ಮಕ ಹಿತದೃಷ್ಟಿಯಿಂದ ಲಿಖಿತ ಪರೀಕ್ಷಾ ದಿನಾಂಕಗಳನ್ನು ಮುಂದೂಡಿದೆ. ಇದೀಗ ದಿನಾಂಕ 14-05-2024ರಿಂದ 16-05-2024ರವರೆಗೆ ನಡೆಸಲು ತೀರ್ಮಾನಿಸಿ, ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. https://kannadanewsnow.com/kannada/hc-dismisses-plea-seeking-quashing-of-murder-case-against-mla-vinay-kulkarni/ https://kannadanewsnow.com/kannada/breaking-sc-stays-hc-order-for-class-5-8-9-11-board-exams/

Read More

ಬೆಂಗಳೂರು: ಲೋಕಸಭಾ ಚುನಾವಣೆಗೆ ಇಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿತ್ತು. ಈ ಹಿನ್ನಲೆಯಲ್ಲಿ ರಾಜ್ಯದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆಯ ಕಣದಿಂದ 53 ಅಭ್ಯರ್ಥಿಗಳು ನಾಮಪತ್ರ ಹಿಂಪಡೆದ್ರೆ, ಕಣದಲ್ಲಿ ಬರೋಬ್ಬರಿ 247 ಅಭ್ಯರ್ಥಿಗಳಿದ್ದಾರೆ. ಈ ಕುರಿತಂತೆ ಚುನಾವಣಾ ಆಯೋಗದಿಂದ ಮಾಹಿತಿ ನೀಡಲಾಗಿದ್ದು, ಇಂದು ಮೊದಲ ಹಂತದ ಲೋಕಸಭಾ ಚುನಾವಣೆಗೆ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿತ್ತು. ಏಪ್ರಿಲ್.6ರಂದು ಒಬ್ಬರು ಹಾಗೂ ಇಂದು 52 ಸೇರಿದಂತೆ 53 ಅಭ್ಯರ್ಥಿಗಳು ನಾಮಪತ್ರವನ್ನು ಹಿಂಪಡೆದಿದ್ದಾರೆ ಎಂದು ತಿಳಿಸಿದೆ. ರಾಜ್ಯದ ಮೊದಲ ಹಂತದ ಲೋಕಸಭಾ ಚುನಾವಣೆ ಕಣದಲ್ಲಿ ಒಟ್ಟು 247 ಅಭ್ಯರ್ಥಿಗಳಿದ್ದಾರೆ. ಇವರಲ್ಲಿ 226 ಪುರುಷ ಅಭ್ಯರ್ಥಿಗಳು ಹಾಗೂ 21 ಮಹಿಳಾ ಅಭ್ಯರ್ಥಿಗಳು ಆಗಿದ್ದಾರೆ ಎಂದು ಹೇಳಿದೆ. ಮೊದಲ ಹಂತದ ಲೋಕಸಭಾ ಯಾವ ಕ್ಷೇತ್ರದಲ್ಲಿ ಎಷ್ಟು ಅಭ್ಯರ್ಥಿಗಳು ಕಣದಲ್ಲಿದ್ದಾರೆ.? ಉಡುಪಿ-ಚಿಕ್ಕಮಗಳೂರು: 10 ಹಾಸನ: 15 ದಕ್ಷಿಣ ಕನ್ನಡ: 9 ಚಿತ್ರದುರ್ಗ: 20 ತುಮಕೂರು: 18 ಮಂಡ್ಯ: 14 ಮೈಸೂರು: 18 ಚಾಮರಾಜನಗರ: 14 ಬೆಂಗಳೂರು ಗ್ರಾಮೀಣ: 15 ಬೆಂಗಳೂರು…

Read More

ಬೆಂಗಳೂರು: ಇಂದು ಸಿಎಂ ಸಿದ್ಧರಾಮಯ್ಯ ಅವರು ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಪರವಾಗಿ ಪ್ರಚಾರ ಮಾಡುತ್ತಿದ್ದವೇಳೆಯಲ್ಲಿ ಭದ್ರತಾ ವೈಫಲ್ಯ ಉಂಟಾಗಿತ್ತು. ರಿಯಾಜ್ ಎಂಬಾತ ಗನ್ ಇಟ್ಟುಕೊಂಡು ಸಿಎಂ ಸಿದ್ಧರಾಮಯ್ಯ ಅವರಿಗೆ ಹಾರ ಹಾಕಿದ್ದನು. ಈ ಸಂಬಂಧ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಬೆಂಗಳೂರಿನ ಸಿದ್ಧಾಪುರ ಪೊಲೀಸ್ ಠಾಣೆಯಲ್ಲಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರ ಸೂಚನೆ ಮೇರೆಗೆ ಸಿಎಂ ಸಿದ್ಧರಾಮಯ್ಯ ಅವರಿಗೆ ಗನ್ ಇಟ್ಟುಕೊಂಡು ಹಾರ ಹಾಕಿದಂತ ರಿಯಾಜ್ ಎಂಬಾತನನ್ನು ವಿಚಾರಣೆ ನಡೆಸಲಾಗುತ್ತಿದೆ. ಹೆಚ್ಚುವರಿ ಪೊಲೀಸ್ ಆಯುಕ್ತ ಸತೀಶ್ ಅವರು ಸಿಎಂ ಸಿದ್ಧರಾಮಯ್ಯಗೆ ಗನ್ ಇಟ್ಟುಕೊಂಡು ಹಾರ ಹಾಕಿದಂತ ರಿಯಾಜ್ ನನ್ನು ತೀವ್ರವಾಗಿ ವಿಚಾರಣೆ ಮಾಡುತ್ತಿದ್ದಾರೆ. ಅಂದಹಾಗೆ ಲೋಕಸಭಾ ಚುನಾವಣೆ ಘೋಷಣೆಯ ನಂತ್ರ ಗನ್ ಲೈಸೆನ್ಸ್ ಹೊಂದಿದ್ದಂತವರು ವಾಪಾಸು ಸರೆಂಡರ್ ಮಾಡೋದಕ್ಕೆ ಸೂಚಿಸಲಾಗಿತ್ತು. ಆದ್ರೇ ಜೀವ ಭಯವಿದೆ ಎಂಬುದಾಗಿ ಹೇಳಿದ್ದಂತ ರಿಯಾಜ್ ಗನ್ ಇಟ್ಟುಕೊಳ್ಳೋದಕ್ಕೆ ಅನುಮತಿಯನ್ನು ಪಡೆದಿದ್ದನು. ಝಡ್ ಪ್ಲಸ್ ಭದ್ರತೆಯನ್ನು ಹೊಂದಿರುವಂತ ಸಿಎಂ ಸಿದ್ಧರಾಮಯ್ಯ…

Read More

ಬೆಂಗಳೂರು: ಸಂಜ್ಞೆ ಭಾಷಾ ವ್ಯಾಖ್ಯಾನಕಾರನ ಸಹಾಯದಿಂದ ಪ್ರಕರಣವೊಂದರಲ್ಲಿ ವಾದ ಮಂಡಿಸಿದ ಶ್ರವಣದೋಷವುಳ್ಳ ವಕೀಲೆ ಸಾರಾ ಸನ್ನಿ ಅವರನ್ನು ಕರ್ನಾಟಕ ಹೈಕೋರ್ಟ್ ಸೋಮವಾರ ಶ್ಲಾಘಿಸಿದೆ. ವಾಕ್ ಮತ್ತು ಶ್ರವಣದೋಷವುಳ್ಳ ವಕೀಲೆ ಸಾರಾ ಸನ್ನಿ ಅವರು ಪ್ರಮಾಣೀಕೃತ ಸಂಕೇತ ಭಾಷಾ ವ್ಯಾಖ್ಯಾನಕಾರರ ಮೂಲಕ ಸಲ್ಲಿಸಿದ ಸಲ್ಲಿಕೆಗಳನ್ನು ಆಲಿಸುವ ಮೂಲಕ ಕರ್ನಾಟಕ ಹೈಕೋರ್ಟ್ ಸೋಮವಾರ ಇತಿಹಾಸ ನಿರ್ಮಿಸಿದೆ. ವಾಸ್ತವವಾಗಿ, ಸಾರಾ ಸನ್ನಿ ಶ್ರವಣದೋಷ ಹೊಂದಿರುವ ವಕೀಲರಾಗಿ ನೋಂದಾಯಿಸಿಕೊಂಡ ಭಾರತದ ಮೊದಲ ವಕೀಲರಾಗಿದ್ದಾರೆ. ಕರ್ನಾಟಕ ಹೈಕೋರ್ಟ್ ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ವಾದವನ್ನು ಉಲ್ಲೇಖಿಸಿದ ಬಾರ್ ಅಂಡ್ ಬೆಂಚ್, “ಪ್ರತಿವಾದಿ-ಪತ್ನಿ ಸಾರಾ ಸನ್ನಿ ಅವರು ಸಂಜ್ಞೆ ಭಾಷೆಯ ವ್ಯಾಖ್ಯಾನಕಾರರ ಮೂಲಕ ಶ್ರವಣ ಮತ್ತು ವಾಕ್ ದೌರ್ಬಲ್ಯದ ಅಂಗವೈಕಲ್ಯವನ್ನು ಸೋಲಿಸುವ ಮೂಲಕ ವಿಸ್ತಾರವಾದ ಸಲ್ಲಿಕೆಗಳನ್ನು ಮಾಡಿದ್ದಾರೆ. ಸಾರಾ ಸನ್ನಿ ಸಲ್ಲಿಸಿದ ಸಲ್ಲಿಕೆಗಳನ್ನು ಶ್ಲಾಘಿಸಬೇಕಾಗಿದೆ ಮತ್ತು ಮೆಚ್ಚುಗೆಯನ್ನು ದಾಖಲೆಯಲ್ಲಿ ಇಡಬೇಕಾಗಿದೆ. ಆದರೆ ಸಲ್ಲಿಕೆಗಳು ಸಂಕೇತ ಭಾಷೆಯ ವ್ಯಾಖ್ಯಾನಕಾರರ ಮೂಲಕವಾಗಿದೆ ಎಂದು ಹೇಳಿದ್ದಾರೆ ಎಂದಿದೆ. ಭಾಷಾಂತರಕಾರರ ಮೂಲಕ ವಿಚಾರಣೆ ಮತ್ತು ಭಾಷಣ…

Read More

ಮಹಾರಾಷ್ಟ್ರ: ಪುಣೆಯ ಪಿಂಪ್ರಿ-ಚಿಂಚ್ವಾಡ್ನ ಪ್ರತಿಷ್ಠಿತ ಕಂಪನಿಯ ಕ್ಯಾಂಟೀನ್ನಲ್ಲಿ ನೀಡಲಾಗುವ ಸಮೋಸಾಗಳಲ್ಲಿ ಕಾಂಡೋಮ್ಗಳು, ಕಲ್ಲುಗಳು, ತಂಬಾಕು, ಗುಟ್ಕಾ ಮತ್ತು ಇತರ ಹಲವಾರು ವಸ್ತುಗಳು ಪತ್ತೆಯಾಗಿವೆ ಎಂದು ಸ್ಥಳೀಯ ದಿನಪತ್ರಿಕೆಯೊಂದು ವರದಿ ಮಾಡಿದೆ. ವರದಿಯ ಪ್ರಕಾರ, ಮಾರ್ಚ್ 27 ರಂದು ಬೆಳಕಿಗೆ ಬಂದ ಈ ಘಟನೆಯು ಪೊಲೀಸರು ಐದು ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಲು ಕಾರಣವಾಯಿತು. ಇಲ್ಲಿಯವರೆಗೆ ಒಬ್ಬರನ್ನು ಬಂಧಿಸಲಾಗಿದೆ. ಕಂಪನಿಯೊಂದಿಗಿನ ತನ್ನ ಸ್ವಂತ ಒಪ್ಪಂದವನ್ನು ಕೊನೆಗೊಳಿಸಿದ ನಂತರ ಹೊಸ ಗುತ್ತಿಗೆದಾರರಿಂದ ಕ್ಯಾಟರಿಂಗ್ ಒಪ್ಪಂದವನ್ನು ಪಡೆಯುವ ಪ್ರಯತ್ನದಲ್ಲಿ ಉದ್ಯಮಿಯೊಬ್ಬರು ಈ ಕೃತ್ಯವನ್ನು ಎಸಗಿರೋದಾಗಿ ತನಿಖೆಯಿಂದ ತಿಳಿದುಬಂದಿದೆ ಎಂದು ವರದಿ ತಿಳಿಸಿದೆ. ಈ ವರ್ಷದ ಆರಂಭದಲ್ಲಿ ಉತ್ತರ ಪ್ರದೇಶದ ಡಂಕೌರ್ನ ದ್ರೋಣಾಚಾರ್ಯ ಪದವಿ ಕಾಲೇಜಿನ ಸುಮಾರು 20 ಶಿಕ್ಷಕರು ಹೊಸ ವರ್ಷದ ಆಚರಣೆಯ ಸಂದರ್ಭದಲ್ಲಿ ಸ್ಥಳೀಯ ಸಿಹಿತಿಂಡಿ ಅಂಗಡಿಯಿಂದ ಸಮೋಸಾ ಸೇವಿಸಿದ ನಂತರ ಆಸ್ಪತ್ರೆಗೆ ದಾಖಲಾದ ಇದೇ ರೀತಿಯ ಆತಂಕಕಾರಿ ಘಟನೆಯನ್ನು ವರದಿಯಾಗಿದೆ. https://kannadanewsnow.com/kannada/20-mlc-ta-saravana-appointed-as-jds-spokespersons/ https://kannadanewsnow.com/kannada/how-is-pm-modis-horoscope-from-ugadi-here-is-the-prediction-made-by-famous-astrologers/

Read More

ಬೆಂಗಳೂರು: ಜೆಡಿಎಸ್ ಪಕ್ಷದ 20 ಮುಖಂಡರನ್ನು ಬೆಂಗಳೂರು ನಗರ ಜೆಡಿಎಸ್ ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ. ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಅವರು ಪ್ರಕಟಣೆ ಹೊರಡಿಸಿದ್ದಾರೆ. ವಿಧಾನ ಪರಿಷತ್ ಸದಸ್ಯರಾದ ಟಿ.ಎ.ಶರವಣ, ಕೆ.ಟಿ.ಶ್ರೀಕಂಠೇಗೌಡ, ಆರ್.ಪ್ರಕಾಶ್, ಗಂಗಾಧರ ಮೂರ್ತಿ, ಹೆಚ್.ಎನ್.ದೇವರಾಜು, ಶೀಲಾ ನಾಯಕ್, ಪ್ರಶಾಂತಿ ಗಾವಂಕರ್, ತಾರಾ ಲೋಕೇಶ್, ಶ್ವೇತಾ ಯಾದವ್, ಛಾಯಾ, ಜಿ. ಟಿ.ರೇವಣ್ಣ, ಪ್ರವೀಣ್ ಕುಮಾರ್ ಎ.ಎಂ., ಪ್ರದೀಪ್ ಕುಮಾರ್, ಎ.ನಾಗೇಂದ್ರ ಪ್ರಸಾದ್ ಬಾಬು, ಎಸ್.ಜಿ.ವೀರಣ್ಣ, ಪಿ.ವಿ.ಎಸ್.ಪ್ರಸಾದ್, ಎನ್. ಚಂದ್ರಶೇಖರ್, ಶೈಲಾ ರಾವ್, ನರಸಿಂಹ ಮೂರ್ತಿ, ಎಂ.ಗೋಪಾಲ ಅವರನ್ನು ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ. ಇವರೆಲ್ಲರೂ ಸುದ್ದಿ ಮಾಧ್ಯಮಗಳಲ್ಲಿ ಜೆಡಿಎಸ್ ಪಕ್ಷದ ವಿಚಾರ, ನಿಲುವುಗಳನ್ನು ಮಂಡಿಸಬೇಕಾಗಿ ಸೂಚಿಸಲಾಗಿದೆ ಎಂದು ಹೆಚ್.ಎಂ.ರಮೇಶ್ ಗೌಡ ಅವರು ತಿಳಿಸಿದ್ದಾರೆ. https://kannadanewsnow.com/kannada/congress-is-a-goonda-state-police-department-is-dead-opposition-leader-r-ashoka/ https://kannadanewsnow.com/kannada/how-is-pm-modis-horoscope-from-ugadi-here-is-the-prediction-made-by-famous-astrologers/

Read More