Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ.ಕೃಷ್ಣ ಅವರ ನಿಧನಕ್ಕೆ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಒಬ್ಬ ಸಮರ್ಥ ರಾಜಕಾರಣಿ, ಸಂಸದೀಯ ಪಟುವಾಗಿ ಈ ರಾಜ್ಯದ ಪ್ರಗತಿಗೆ ಅಪಾರ ಕೊಡುಗೆ ನೀಡಿದ ಕೃಷ್ಣ ಅವರು ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ಗೃಹ ಸಚಿವರಾಗಿ ತಾವು ತೆಗೆದುಕೊಳ್ಳುತ್ತಿದ್ದ ನಿರ್ಧಾರಗಳನ್ನು ಒಮ್ಮತದಿಂದ ಸ್ವೀಕರಿಸುತ್ತಿದ್ದರು ಎಂದಿರುವ ಮಲ್ಲಿಕಾರ್ಜುನ ಖರ್ಗೆ ಅವರು ಅವರೊಂದಿಗೆ ಗೃಹ ಸಚಿವರಾಗಿದ್ದ ದಿನಗಳನ್ನು ನೆನೆಪು ಮಾಡಿಕೊಂಡಿದ್ದಾರೆ, ಡಾ.ರಾಜಕುಮಾರ್ ಅಪರಣವಾದ ಸಂದರ್ಭದಲ್ಲಿ ಅವರು ತಮ್ಮ ಜೊತೆ ಜೊತೆಯಲ್ಲಿ ಸಂಯಮದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದರು ಎಂದು ಬಣ್ಣಿಸಿದ್ದಾರೆ. ತಮ್ಮ ಸಹೋದ್ಯೋಗಿಯಾಗಿ ರಾಜಕೀಯ ಜೀವನದುದ್ದಕ್ಕೂ ಸ್ನೇಹಮಯಿಯಾಗಿದ್ದರು, ರಾಜ್ಯದ ಬೆಳವಣಿಗೆಯ ದೃಷ್ಟಿಯಿಂದ ಇಬ್ಬರೂ ಒಟ್ಟಿಗೆ ಕಾರ್ಯನಿರ್ವಹಿಸುವಸುವ ಹಲವಾರು ಅವಕಾಶಗಳು ಒದಗಿ ಬಂದಿದ್ದವು ಎಂದು ತಿಳಿಸಿದ್ದಾರೆ, ಬೆಂಗಳೂರು ನಗರವನ್ನು ವಿಶ್ವಮಾನ್ಯ ನಗರವನ್ನಾಗಿ ನಿರ್ಮಿಸಲು ಎಸ್.ಎಂ.ಕೃಷ್ಣ ಅವರು ಅಡಿಪಾಯ ಹಾಕಿದರು, ಬೆಂಗಳೂರು ನಗರವನ್ನು ಸಿಂಗಪುರವಾಗಿ ನೋಡಲು ಇಚ್ಛಿಸಿ, ನಗರವನ್ನು ಸೌಂದರ್ಯೀಕರಣ ಮಾಡಲು ಆರಂಭಿಸಿದರು. ಬೆಂಗಳೂರನ್ನು ಸಿಲಿಕಾನ್ ವ್ಯಾಲಿಯನ್ನಾಗಿ ರೂಪಿಸುವ…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಅರಣ್ಯ ಇಲಾಖೆಯ ಎಸಿಎಫ್ ಸುರೇಶ್ ನಿವಾಸ, ಕಚೇರಿಯ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದರು. ಈ ದಾಳಿಯ ವೇಳೆಯಲ್ಲಿ ಸಿಕ್ಕಂತ ಚಿನ್ನಾಭರಣ, ಆಸ್ತಿಯನ್ನು ಕಂಡಂತ ಅಧಿಕಾರಿಗಳೇ ಶಾಕ್ ಆಗಿದ್ದಾರೆ. ಹಾಗಾದ್ರೇ ಸಿಕ್ಕಿದ್ದು ಏನೇನು ಅನ್ನೋ ಬಗ್ಗೆ ಮುಂದೆ ಓದಿ. ಇಂದು ಬೆಳ್ಳಂಬೆಳಿಗ್ಗೆ ಭ್ರಷ್ಟ ಸರ್ಕಾರಿ ಅಧಿಕಾರಿಗಳ ಭೇಟೆಗೆ ಲೋಕಾಯುಕ್ತ ಪೊಲೀಸರು ಇಳಿದಿದ್ದರು. ಬೆಂಗಳೂರಿನ ಐದು ಕಡೆ, ಬೆಂಗಳೂರು ಗ್ರಾಮಾಂತರದ ಓರ್ವ ಅಧಿಕಾರಿಯ ಮೇಲೆ, ಗದಗ, ಕಲಬುರ್ಗಿ, ರಾಯಚೂರು, ಚಿತ್ರದುರ್ಗದಲ್ಲಿ ವಿವಿಧ ಅಧಿಕಾರಿಗಳ ಮೇಲೆ ದಾಳಿ ನಡೆಸಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಎಸಿಸ್ಟೆಂಟ್ ಕನ್ವೆರ್ಟರ್ ಆಫ್ ಫಾರೆಸ್ಟ್ ಅಧಿಕಾರಿ ಸುರೇಶ್ ನಿವಾಸದ, ಕಚೇರಿಯ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು. ಲೋಕಾಯುಕ್ತ ಅಧಿಕಾರಿಗಳ ದಾಳಿಯ ಸಂದರ್ಭದಲ್ಲಿ ಅಕ್ರಮ ಆಸ್ತಿ, ಪಾಸ್ತಿ ಪರಿಶೀಲನೆ ವೇಳೆಯಲ್ಲಿ ಸಿಕ್ಕಂತ ಚಿನ್ನಾಭರಣ, ಆಸ್ತಿಯನ್ನು ಕಂಡು ದಂಗಾಗಿದ್ದಾರೆ. ಹಿರಿಯೂರು ತಾಲ್ಲೂಕು ಎಸಿಎಫ್ ಸುರೇಶ್ ಮನೆಯಲ್ಲಿ ತನಿಖೆ ವೇಳೆ 1 ಕೆಜಿ ಚಿನ್ನಾಭರಣ, 3 ನಿವೇಶನಗಳು, 9 ಎಕರೆ…
ಬೆಳಗಾವಿ : ಜಿಲ್ಲೆಯಲ್ಲಿ ವಿಧಾನಮಂಡಲದ ಅಧಿವೇಶನ ನಡೆಯುತ್ತಿದ್ದಂತ ಸಂದರ್ಭದಲ್ಲಿಯೇ ಪಂಚಮಸಾಲಿ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ ತೀವ್ರಗೊಂಡಿದೆ. ಇಂದು ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಪ್ರತಿಭಟನಾಕಾರರು ಯತ್ನಿಸಿದರು. ಈ ವೇಳೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಇಂದು ಬೆಳಗಾವಿಯ ಸುವರ್ಣಸೌಧದ ಮುಂದೆ ಪಂಚಮಸಾಲಿ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆಯನ್ನು ನಡೆಸಲಾಗುತ್ತಿತ್ತು. ಪ್ರತಿಭಟನೆ ವಿಕೋಪಕ್ಕೆ ತಿರುಗಿ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕೋದಕ್ಕೆ ಯತ್ನಿಸಲಾಯಿತು. ಈ ವೇಳೆ ಪ್ರತಿಭಟನಾಕಾರರನ್ನು ತಡೆಯೋದಕ್ಕೆ ಪೊಲೀಸರು ಎಷ್ಟೇ ಹರಸಾಹಸ ಪಟ್ಟರು ಸಾಧ್ಯವಾಗಲಿಲ್ಲ. ಈ ಹಿನ್ನಲೆಯಲ್ಲಿ ಪ್ರತಿಭಟನಾಕಾರರ ಮೇಲೆ ಎಡಿಜಿಪಿ ಹಿತೇಂದ್ರರಿಂದಲೇ ಲಾಠಿಚಾರ್ಜ್ ನಡೆಸಲಾಯಿತು. ಲಾಠಿ ಏಟು ತಿಂದರು ತಮ್ಮ ಹಠವನ್ನು ಬಿಡದಂತ ಅನೇಕರು ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕೋದಕ್ಕೆ ಮುಂದಾದರು. ಪೊಲೀಸರ ಲಾಠಿ ಏಟಿನಿಂದಾಗಿ 20ಕ್ಕೂ ಹೆಚ್ಚು ಪ್ರತಿಭಟನಾಕಾರರಿಗೆ ಗಾಯವಾಗಿದೆ ಎಂಬುದಾಗಿ ತಿಳಿದು ಬಂದಿದೆ. https://kannadanewsnow.com/kannada/chief-minister-siddaramaiah-condoles-the-death-of-former-mla-s-jayanna/ https://kannadanewsnow.com/kannada/karnatakas-suit-boot-cm-sm-krishna-its-a-journey-of-ups-and-downs/
ಗುರುಗ್ರಾಮ್: ಗುರುಗ್ರಾಮದ ಸೆಕ್ಟರ್ 29 ರ ಪಬ್ ಗಳ ಹೊರಗೆ ಇಂದು ಬಾಂಬ್ ಸ್ಫೋಟ ಸಂಭವಿಸಿದೆ. ಗುರುಗ್ರಾಮ್ ಪೊಲೀಸರ ಪ್ರಕಾರ, ಎರಡು ಹತ್ತಿ ಬಾಂಬ್ಗಳನ್ನು ಎಸೆಯಲಾಗಿದ್ದು, ಅದರಲ್ಲಿ ಒಂದು ಸ್ಫೋಟಗೊಂಡಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಮತ್ತು ತನಿಖೆ ಆರಂಭಿಸಲಾಗಿದೆ. ಗುರುಗ್ರಾಮದ ಪಂಚತಾರಾ ಹೋಟೆಲ್ ಗಳಿಗೆ ಬಾಂಬ್ ಬೆದರಿಕೆ ಇಮೇಲ್ ಗಳು ಬಂದ ಒಂದು ದಿನದ ನಂತರ ಈ ಸ್ಫೋಟ ಸಂಭವಿಸಿದೆ. ಗುರುಗ್ರಾಮದ ಸೆಕ್ಟರ್ 29ರಲ್ಲಿ ಬಾಂಬ್ ಸ್ಫೋಟ, ಆರೋಪಿ ಬಂಧನ ಗುರುಗ್ರಾಮದ ಸೆಕ್ಟರ್ -29 ರಲ್ಲಿರುವ ಕ್ಲಬ್ ಗಳ ಹೊರಗೆ ಇಂದು ಮುಂಜಾನೆ ಎರಡು ಹತ್ತಿ ಬಾಂಬ್ ಗಳನ್ನು ಎಸೆಯಲಾಗಿದೆ ಎಂದು ಗುರುಗ್ರಾಮ್ ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು ಸಚಿನ್ ಎಂದು ಗುರುತಿಸಲಾಗಿದ್ದು, ಆತ ಬಾಂಬ್ ಎಸೆಯುತ್ತಿದ್ದಾಗ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗುರುಗ್ರಾಮ್ ಪೊಲೀಸರ ಪ್ರಕಾರ, ಪ್ರಾಥಮಿಕ ತನಿಖೆಯಲ್ಲಿ, ಘಟನೆಯ ಸಮಯದಲ್ಲಿ, ಆರೋಪಿಯು ಅಮಲಿನಲ್ಲಿದ್ದನು ಮತ್ತು ಅವನು ಈಗಾಗಲೇ 2 ಹತ್ತಿ ಬಾಂಬ್ಗಳನ್ನು ಎಸೆದಿದ್ದನು ಮತ್ತು ಇನ್ನೂ 2 ಬಾಂಬ್ಗಳನ್ನು…
ಬೆಂಗಳೂರು: ಹೃದಯಾಘಾತದಿಂದ ದಿಢೀರ್ ನಿಧನರಾದಂತ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲು, ಇಂದು ಸಂಜೆ 5.30ಕ್ಕೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸಭೆಯನ್ನು ನಿಗದಿ ಪಡಿಸಲಾಗಿದೆ. ಈ ಬಗ್ಗೆ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಮಾಹಿತಿ ಹಂಚಿಕೊಂಡಿದ್ದು, ಕರ್ನಾಟಕದ ಹಿರಿಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿ, ಕೇಂದ್ರ ಸರ್ಕಾರದ ಮಾಜಿ ವಿದೇಶಾಂಗ ಸಚಿವ, ಮಾಜಿ ರಾಜ್ಯಪಾಲ ಎಸ್ಎಂ ಕೃಷ್ಣ ಅವರಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ವತಿಯಿಂದ ಈ ದಿನ ಸಂಜೆ 5:30ಕ್ಕೆ ಕ್ವೀನ್ಸ್ ರಸ್ತೆಯ ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಭವನದಲ್ಲಿ ಶ್ರದ್ಧಾಂಜಲಿ ಸಭೆಯನ್ನು ಏರ್ಪಡಿಸಲಾಗಿದೆ ಎಂದಿದ್ದಾರೆ. ಕೆಪಿಸಿಸಿ ಅಧ್ಯಕ್ಷರು ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರು, ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಕರ್ನಾಟಕ ರಾಜ್ಯ ಸರ್ಕಾರದ ಸಂಪುಟ ಸಚಿವರು, ಕರ್ನಾಟಕ ಕಾಂಗ್ರೆಸ್ ಪಕ್ಷದ ಮುಖಂಡರು ಶಾಸಕರು ಸಂಸದರು ಶ್ರದ್ಧಾಂಜಲಿ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ. https://kannadanewsnow.com/kannada/sm-krishnas-funeral-to-be-attended-tomorrow-dk-shivakumar/ https://kannadanewsnow.com/kannada/karnatakas-suit-boot-cm-sm-krishna-its-a-journey-of-ups-and-downs/
ಮಂಡ್ಯ: ನಾಳೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಸಚಿವ ಸಂಪುಟದ ಎಲ್ಲರೂ ಬರಲಿದ್ದಾರೆ. ವಿಶೇಷ ವಾಹನದಲ್ಲಿ ಪಕ್ಷದ ಎಲ್ಲಾ ಶಾಸಕರು ಬರ್ತಾರೆ. ಕೇಂದ್ರ ನಾಯಕರು ಬರೋ ಬಗ್ಗೆ ನನಗೆ ಮಾಹಿತಿ ಇಲ್ಲ. ಯಾರ ಪೋನ್ ಕೂಡ ನಾನು ರಿಸೀವ್ ಮಾಡೋಕೆ ಆಗಿಲ್ಲ ಎಂಬುದಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಮಂಡ್ಯ ಜಿಲ್ಲೆ ಮದ್ದೂರಿನ ಸೋಮನಹಳ್ಳಿಯಲ್ಲಿ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಪಾರ್ಥಿವ ಶರೀರದ ಅಂತ್ಯ ಸಂಸ್ಕಾರ ನಡೆಯುವ ಸ್ಥಳವನ್ನು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಂಗಳವಾರ ಪರಿಶೀಲನೆ ನಡೆಸಿ, ಅಗತ್ಯ ಸೂಚನೆಗಳನ್ನು ನೀಡಿದರು. ಸಚಿವ ಚಲುವರಾಸ್ವಾಮಿ, ಶಾಸಕರಾದ ಉದಯ ಕದಲೂರು, ರವಿ ಗಣಿಗ, ರಮೇಶ್ ಬಂಡಿಸಿದ್ದೇಗೌಡ , ಜಿಲ್ಲಾಧಿಕಾರಿ ಕುಮಾರ್, ಎಂಎಲ್ಸಿ ದಿನೇಶ್ ಗೂಳಿಗೌಡ ಮತ್ತಿತರರು ಜತೆಗಿದ್ದರು. https://kannadanewsnow.com/kannada/karnatakas-suit-boot-cm-sm-krishna-its-a-journey-of-ups-and-downs/ https://kannadanewsnow.com/kannada/breaking-sm-krishna-funeral-at-4-pm-tomorrow-all-preparations-for-last-rites-in-somanahalli/
ಬೆಂಗಳೂರು: 2004ರ ಫೆಬ್ರವರಿಯಲ್ಲಿ ಅಂದಿನ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ಣ ಪ್ರಮಾಣದ ಸಚಿವ ಸಂಪುಟ ಸಭೆಯಲ್ಲಿ ಈ ಘಟನೆ ನಡೆದಿತ್ತು. ಆ ಬೇಸಿಗೆಯಲ್ಲಿ ರಾಜ್ಯವು ಮತ್ತೊಂದು ಬರಗಾಲವನ್ನು ಎದುರಿಸುವ ನಿರೀಕ್ಷೆಯಿರುವುದರಿಂದ ಏಪ್ರಿಲ್ ನಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯ ಜೊತೆಗೆ ಮುಂಚಿತವಾಗಿ ವಿಧಾನಸಭಾ ಚುನಾವಣೆಗೆ ಹೋಗಲು ನಿರ್ಧರಿಸಿದ್ದೇನೆ ಎಂದು ಕೃಷ್ಣ ಘೋಷಿಸಿದರು. ಅಕ್ಟೋಬರ್ ವರೆಗೆ (ವಿಧಾನಸಭೆಯ ಅವಧಿ ಮುಗಿಯುವವರೆಗೆ) ಕಾಯುತ್ತಿದ್ದರೆ ರೈತರ ಕೋಪವನ್ನು ವಿರೋಧ ಪಕ್ಷಗಳು ಚುನಾವಣಾ ವಿಷಯವನ್ನಾಗಿ ಮಾಡುತ್ತವೆ ಎಂದು ಅವರು ಅಭಿಪ್ರಾಯಪಟ್ಟರು. ಮತ್ತೊಂದು ಕಾರಣವೆಂದರೆ, ದಿವಂಗತ ಮಾಜಿ ಪ್ರಧಾನಿ ಎಬಿ ವಾಜಪೇಯಿ ಅವರ ‘ಇಂಡಿಯಾ ಶೈನಿಂಗ್’ ಘೋಷಣೆಯನ್ನು (2004 ರಲ್ಲಿ ಭಾರತದಲ್ಲಿ ಆರ್ಥಿಕ ಆಶಾವಾದದ ಒಟ್ಟಾರೆ ಭಾವನೆಯನ್ನು ಸೂಚಿಸಲು ರಚಿಸಲಾದ ಮಾರ್ಕೆಟಿಂಗ್ ಘೋಷಣೆ) ಎದುರಿಸುವುದು ಕಷ್ಟಕರವಾಗಿತ್ತು. ಹಿರಿಯ ಸಚಿವರಾದ ಮಲ್ಲಿಕಾರ್ಜುನ ಖರ್ಗೆ, ಎನ್.ಧರಂ ಸಿಂಗ್, ಕಾಗೋಡು ತಿಮ್ಮಪ್ಪ ಮತ್ತು ಇತರರು ಈ ಕಲ್ಪನೆಯನ್ನು ಬಲವಾಗಿ ವಿರೋಧಿಸಿದರು, ಉತ್ತಮ ಮಾನ್ಸೂನ್ ಮುನ್ಸೂಚನೆ ನೀಡಲಾಗಿದೆ ಮತ್ತು ಅಕ್ಟೋಬರ್ ವೇಳೆಗೆ ರಾಜ್ಯದ…
ಬೆಳಗಾವಿ ಸುವರ್ಣ ಸೌಧ: ಕೊಳ್ಳೇಗಾಲ ಮಾಜಿ ಶಾಸಕ, ಉಗ್ರಾಣ ನಿಗಮದ ಅಧ್ಯಕ್ಷ ಜಯಣ್ಣ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಎಸ್.ಎಂ.ಕೃಷ್ಣ ಅವರ ಸಾವಿನ ಆಘಾತದಿಂದ ಚೇತರಿಸಿಕೊಳ್ಳುವ ಮುನ್ನವೇ ಜಯಣ್ಣ ಅವರ ಸಾವಿನ ಸುದ್ದಿ ಆಘಾತ ತಂದಿದೆ. ಜಯಣ್ಣ ನನ್ನ ಆತ್ಮೀಯರು. ನಮ್ಮ ನಡುವೆ ದೀರ್ಘಕಾಲದ ಒಡನಾಟವಿತ್ತು. ಇವರು 1994 ರಲ್ಲಿ ಜೆಡಿಎಸ್ ನಿಂದ ಹಾಗೂ 2013ರಲ್ಲಿ ಕಾಂಗ್ರೆಸ್ ಪಕ್ಷದಿಂದ ವಿಧಾನಸಭಾ ಚುನಾವಣೆಯಲ್ಲಿ ಗೆದ್ದಿದ್ದರು. ಪಕ್ಷ ಹಾಗೂ ಕ್ಷೇತ್ರದ ಅಭಿವೃದ್ಧಿಗೆ ಶ್ರಮವಹಿಸಿ ಕೆಲಸ ಮಾಡಿದ ಜಯಣ್ಣ ಜನಾನುರಾಗಿ ಶಾಸಕರಾಗಿದ್ದರು. ಜನರ ಕಷ್ಟಗಳಿಗೆ ಸದಾ ಮಿಡಿಯುತ್ತಿದ್ದರು. ಡಿಸೆಂಬರ್ ಏಳರಂದು ಚಾಮರಾಜನಗರ ಜಿಲ್ಲೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಜೊತೆಗಿದ್ದರು. ಅವರ ಮನೆಯಲ್ಲಿಯೇ ಊಟ ಮಾಡಿ ಬಂದಿದ್ದನ್ನು ಸ್ಮರಿಸಿದರು ಮುಖ್ಯಮಂತ್ರಿಗಳು, ಜಯಣ್ಣ ಅವರ ಸಾವು ವೈಯಕ್ತಿಕವಾಗಿ ಆಘಾತ ತಂದಿದೆ. ಅವರ ನಿಧನದಿಂದ ಜನಪ್ರಿಯ ರಾಜಕಾರಣಿಯನ್ನು ಕಳೆದುಕೊಂಡಂತಾಗಿದೆ. ಭಗವಂತ ಮೃತರ ಆತ್ಮಕ್ಕೆ ಚಿರಶಾಂತಿ ನೀಡಲಿ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬದವರಿಗೆ…
ಶಿವಮೊಗ್ಗ: ಓರ್ವ ವ್ಯಕ್ತಿ ಅಪರಾಧ ಕೃತ್ಯವೆಸಗಿ, ತಪ್ಪಿತಸ್ಥ ಎಂದು ಸಾಬೀತಾಗಿ ಜೈಲು ಸೇರಿದ ನಂತರವೂ ಆತನನ್ನು ಮಾನವೀಯ ದೃಷ್ಟಿಯಿಂದ ನೋಡಿಕೊಳ್ಳುವ ವ್ಯವಸ್ಥೆ ನಮ್ಮ ದೇಶದಲ್ಲಿದ್ದು, ಇದು ಮಾನವ ಹಕ್ಕುಗಳ ಮೌಲ್ಯದ ಒಂದು ಉದಾಹರಣೆಯಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಂಜುನಾಥ ನಾಯಕ್ ತಿಳಿಸಿದರು. ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸ್ಥಳೀಯ ಸರ್ಕಾರೇತರ ಸಂಸ್ಥೆಗಳಾದ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಸಮಿತಿ ಹಾಗೂ ಇತರೆ ಸಂಸ್ಥೆಗಳ ಸಹಯೋಗದಲ್ಲಿ ಮಂಗಳವಾರ ಜಿ.ಪಂ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ವಿಶ್ವ ಮಾನವ ಹಕ್ಕುಗಳ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿಶ್ವ ಸಂಸ್ಥೆ 1948 ಡಿ.10 ರಂದು ಮಾನವ ಹಕ್ಕುಗಳನ್ನು ಸಾರ್ವತ್ರಿವಕಾಗಿ ಘೋಷಣೆ ಮಾಡಿದ ದಿನ. ಈ ದಿನವನ್ನು ಮಾನವ ಹಕ್ಕುಗಳ ದಿನಾಚರಣೆಯನ್ನಾಗಿ ಆಚರಿಸುವ ಮೂಲಕ ಅರಿವು…
ನವದೆಹಲಿ: ಐ.ಎನ್.ಡಿ.ಐ.ಎ. ಬಣಕ್ಕೆ ಸೇರಿದ ಎಲ್ಲಾ ಪಕ್ಷಗಳು ಮಂಗಳವಾರ ರಾಜ್ಯಸಭಾ ಅಧ್ಯಕ್ಷ ಮತ್ತು ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ವಿರುದ್ಧ ಅವಿಶ್ವಾಸ ನಿರ್ಣಯವನ್ನು ಸಲ್ಲಿಸಿವೆ. ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ ಸೇರಿದ ಸುಮಾರು 60 ಸಂಸದರು ನೋಟಿಸ್ಗೆ ಸಹಿ ಹಾಕಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಎಕ್ಸ್ನಲ್ಲಿ ಪೋಸ್ಟ್ ಮಾಡಿ, “ಭಾರತ ಗುಂಪಿಗೆ ಸೇರಿದ ಎಲ್ಲಾ ಪಕ್ಷಗಳಿಗೆ ರಾಜ್ಯಸಭೆಯ ಗೌರವಾನ್ವಿತ ಅಧ್ಯಕ್ಷರ ವಿರುದ್ಧ ಔಪಚಾರಿಕವಾಗಿ ಅವಿಶ್ವಾಸ ನಿರ್ಣಯವನ್ನು ಸಲ್ಲಿಸುವುದನ್ನು ಬಿಟ್ಟು ಬೇರೆ ಆಯ್ಕೆಯಿಲ್ಲ. ಇದು ಭಾರತೀಯ ಪಕ್ಷಗಳಿಗೆ ತೆಗೆದುಕೊಂಡ ಅತ್ಯಂತ ನೋವಿನ ನಿರ್ಧಾರವಾಗಿದೆ, ಆದರೆ ಸಂಸದೀಯ ಪ್ರಜಾಪ್ರಭುತ್ವದ ಹಿತದೃಷ್ಟಿಯಿಂದ ಅವರು ಈ ಕ್ರಮವನ್ನು ತೆಗೆದುಕೊಳ್ಳಬೇಕಾಯಿತು” ಎಂದು ಅವರು ಹೇಳಿದರು. ಈ ನಿರ್ಣಯವನ್ನು ರಾಜ್ಯಸಭೆಯ ಪ್ರಧಾನ ಕಾರ್ಯದರ್ಶಿಗೆ ಸಲ್ಲಿಸಲಾಯಿತು. https://kannadanewsnow.com/kannada/sm-krishna-statue-should-be-erected-in-vidhana-soudha-h-k-patil-to-cm-siddaramaiah/