Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಕಾಂಗ್ರೆಸ್ ಕಾರ್ಯಕರ್ತರು ಗನ್ ಇಟ್ಟುಕೊಂಡು ಓಡಾಡುವ ಮೂಲಕ ತಮ್ಮದು ಗೂಂಡಾ ರಾಜ್ಯ ಎಂದು ತೋರಿಸಿಕೊಂಡಿದ್ದಾರೆ. ಇಂತಹ ಘಟನೆಯಿಂದ ಪೊಲೀಸ್ ಇಲಾಖೆ ಬದುಕಿದ್ದೂ ಸತ್ತಂತಾಗಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಯ ಸಂದರ್ಭದಲ್ಲಿ ಒಂದು ತಿಂಗಳು ಮುಂಚಿತವಾಗಿ ಗನ್ ವಾಪಸ್ ಕೊಡಬೇಕಾಗಿತ್ತು. ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆ ಎಂಬ ಕಾರಣಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರ ಮೇಲೆ ಒತ್ತಡ ಹಾಕಿ ಗನ್ ಅನ್ನು ಜೇಬಿನಲ್ಲಿ ಇಟ್ಟುಕೊಂಡು ಓಡಾಡುತ್ತಿದ್ದಾರೆ. ಇದು ಕಾಂಗ್ರೆಸ್ ಕಾರ್ಯಕರ್ತರೇ ಮಾಡುತ್ತಿರುವ ರೌಡಿಸಂ. ಅಂತಹವರು ಮುಖ್ಯಮಂತ್ರಿಗಳಿಗೆ ಹಾರ ಹಾಕುವ ಮೂಲಕ ನಾವು ಕಾನೂನು ಪಾಲನೆ ಮಾಡಲ್ಲ ಎಂಬ ಸಂದೇಶ ರವಾನಿಸಿದ್ದಾರೆ. ಇದೇ ಕಾಂಗ್ರೆಸ್ಸಿನ ಗೂಂಡಾ ರಾಜ್ಯ ಎಂದರು. ಇದು ಅತಿ ದೊಡ್ಡ ಭದ್ರತಾ ವೈಫಲ್ಯವಾಗಿದೆ. ಇನ್ನು ನಾಳೆಯ ದಿನಗಳಲ್ಲಿ ಯಾರಾದರೂ ಬಾಂಬ್ ಇಟ್ಟುಕೊಂಡು ಓಡಾಡಬಹುದು. ಇಂತಹ ಘಟನೆಯಿಂದ ಪೊಲೀಸ್ ಇಲಾಖೆ ಬದುಕಿದ್ದೂ ಸತ್ತಂತಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದು ನಾನು ಸದನದಲ್ಲೇ ಹೇಳಿದ್ದೆ. ಇದು ಕೂಡ…
ಸಂಸಾರದಲ್ಲಿನ ಕಣ್ಣಿನ ಆಯಾಸ ದೂರವಾಗಬೇಕಾದರೆ ಪ್ರತಿ ತಿಂಗಳು ಬರುವ ಅಮಾವಾಸ್ಯೆಯಂದು ನಮ್ಮ ಮನೆಯಲ್ಲಿದ್ದವರಿಗೆ ದೃಷ್ಠಿ ನಿವಾಳಿಸುವ ತಂತ್ರ ಮಾಡಬೇಕು. ಅಮಾವಾಸಿ ತಿಥಿಯಂದು ದೃಷ್ಟಿ ಸುತ್ತಿದರೆ ನಮ್ಮ ಕುಟುಂಬದಲ್ಲಿ ಜನರ ಕಣ್ಣಿನ ದೃಷ್ಟಿ ದೂರವಾಗುತ್ತದೆ ಮತ್ತು ಕುಟುಂಬದ ಸದಸ್ಯರಿಗೆ ಯಾವುದೇ ಹಾನಿಯಾಗುವುದಿಲ್ಲ ಎಂಬುದು ನಮ್ಮ ಪೂರ್ವಜರ ನಂಬಿಕೆಯಾಗಿದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ…
ಮಂಡ್ಯ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಮೂರನೇ ಬಾರಿಗೆ ಪ್ರಧಾನಿಮಂತ್ರಿಯನ್ನಾಗಿ ಮಾಡಲು ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಈ ಬಾರಿ ಸಂಸದರನ್ನಾಗಿ ಮಾಡಬೇಕೆಂಬ ಉದ್ದೇಶದಿಂದ ತಾಲೂಕಿನಾದ್ಯಂತ ಅನ್ಯ ಪಕ್ಷದ ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಮತ್ತು ಮುಖಂಡರು ಜೆಡಿಎಸ್ಗೆ ಸೇರ್ಪಡೆಗೊಳ್ಳುತ್ತಿದ್ದಾರೆಂದು ಮಾಜಿ ಸಚಿವ ಡಿ.ಸಿ.ತಮ್ಮಣ್ಣ ತಿಳಿಸಿದರು. ಮದ್ದೂರು ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ಕೆಸ್ತೂರು ಭಾಗದ ತಾಪಂ ಮಾಜಿ ಸದಸ್ಯ ಕೆ.ಟಿ.ರಾಜಣ್ಣ, ಎಪಿಎಂಸಿ ಮಾಜಿ ಉಪಾಧ್ಯಕ್ಷ ಬಿಳಿಯಪ್ಪ ಸೇರಿದಂತೆ ಹಲವಾರು ಮುಖಂಡರನ್ನು ಜೆಡಿಎಸ್ ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದರು. ಈ ಇಬ್ಬರು ಮುಖಂಡರು ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿರುವುದರಿಂದ ಆತಗೂರು ಹೋಬಳಿಯಲ್ಲಿ ಜೆಡಿಎಸ್ ಪಕ್ಷಕ್ಕೆ ಆನೆ ಬಲ ಬಂದಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅನ್ಯ ಪಕ್ಷಗಳ ಮುಖಂಡರು ಮತ್ತು ಕಾರ್ಯಕರ್ತರು ಜೆಡಿಎಸ್ ಪಕ್ಷಕ್ಕೆ ಬರಲಿದ್ದಾರೆಂದು ವಿಶ್ವಾಸ ವ್ಯಕ್ತಪಡಿಸಿದರು. ಕುಮಾರಸ್ವಾಮಿ ಅವರು 2 ಬಾರಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ರೈತರ ಸಾಲ ಮನ್ನಾ ಮಾಡಿ ಅನುಕೂಲ ಕಲ್ಪಿಸುವ ಜತೆಗೆ ಎಲ್ಲಾ ವರ್ಗದವರಿಗೆ ಅನುಕೂಲವಾಗುವ ಯೋಜನೆಗಳನ್ನು ಜಾರಿಗೆ…
ಶಿವಮೊಗ್ಗ: ಇಂದು ಸಾಗರದಲ್ಲಿ ಖಾಸಗಿ ಬಸ್ ಒಂದು ಬ್ರೇಕ್ ಫೇಲ್ ಆಗಿ ಸರಣಿ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ 9ಕ್ಕೂ ಹೆಚ್ಚು ಬೈಕ್ ಗಳು ನಜ್ಜುಗುಜ್ಜಾಗಿರೋ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿ ಹಳೆಬಸ್ ನಿಲ್ದಾಣದ ಹತ್ತಿರ ಗಜಾನನ ಸಾರಿಗೆ ಸಂಸ್ಥೆಗೆ ಸೆರಿದ KA 15 2944 ಬಸ್ ಪ್ರಯಾಣಿಕರನ್ನು ಇಳಿಸಿದ ನಂತರದಲ್ಲಿ ಬ್ರೇಕ್ ಪೇಲ್ ಆಗಿ, ಚಾಲಕನ ನಿಯಂತ್ರಣ ತಪ್ಪಿದೆ. ಬಸ್ ಬ್ರೇಕ್ ಫೇಲ್ ಆದ ಪರಿಣಾಮ ಬಸ್ ನಿಲ್ದಾಮದ ಬಳಿಯಲ್ಲಿ ನಿಲ್ಲಿಸಿದ್ದಂತ ಬೈಕ್ ಗಳಿಗೆ ಡಿಕ್ಕಿ ಹೊಡೆದ ಪರಿಣಾಮ 10ಕ್ಕೂ ಹೆಚ್ಚು ಬೈಕ್ ಗಳು ನಜ್ಜುಗುಜ್ಜಾಗಿದ್ದಾವೆ. ಇಂದು 5.50ರ ಸುಮಾರಿಗೆ ಈ ಘಟನೆ ನಡೆದಿದೆ. ಈ ಸರಣಿ ಅಪಘಾತದಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ. ಈ ಸಂಬಂಧ ಸಾಗರ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/railway-passengers-note-special-train-service-between-mysuru-and-bhubaneswar/ https://kannadanewsnow.com/kannada/how-is-pm-modis-horoscope-from-ugadi-here-is-the-prediction-made-by-famous-astrologers/
ಬಂಗಳೂರು: ಬೇಸಿಗೆಯಲ್ಲಿ ಹೆಚ್ಚುವರಿ ಪ್ರಯಾಣಿಕರನ್ನು ತೆರವುಗೊಳಿಸಲು ಬೇಡಿಕೆಯ ಮೇರೆಗೆ ಮೈಸೂರು-ಭುವನೇಶ್ವರ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ರೈಲು ಓಡಿಸಲಾಗುವುದು. ಅವುಗಳ ಮಾಹಿತಿ ಈ ಕೆಳಗಿನಂತಿವೆ: 1. ಏಪ್ರಿಲ್ 9 ರಂದು ರೈಲು ಸಂಖ್ಯೆ 06215 ಮೈಸೂರು-ಭುವನೇಶ್ವರ ವಿಶೇಷ ಎಕ್ಸ್ ಪ್ರೆಸ್ ರೈಲು ಮೈಸೂರಿನಿಂದ ಬೆಳಿಗ್ಗೆ 4:15 ಗಂಟೆಗೆ ಹೊರಟು ಮರುದಿನ ಬೆಳಿಗ್ಗೆ 10:40 ಗಂಟೆಗೆ ಭುವನೇಶ್ವರವನ್ನು ತಲುಪಲಿದೆ. 2. ಏಪ್ರಿಲ್ 10 ರಂದು ರೈಲು ಸಂಖ್ಯೆ 06216 ಭುವನೇಶ್ವರ-ಮೈಸೂರು ವಿಶೇಷ ಎಕ್ಸ್ ಪ್ರೆಸ್ ರೈಲು ಭುವನೇಶ್ವರದಿಂದ ಮಧ್ಯಾಹ್ನ 1 ಗಂಟೆಗೆ ಹೊರಟು ಮರುದಿನ ಸಂಜೆ 07:15 ಗಂಟೆಗೆ ಮೈಸೂರು ನಿಲ್ದಾಣಕ್ಕೆ ಆಗಮಿಸಲಿದೆ. ವಿಶೇಷ ರೈಲು ಮಂಡ್ಯ, ಕೆಎಸ್ಆರ್ ಬೆಂಗಳೂರು, ಬೆಂಗಳೂರು ಕಂಟೋನ್ಮೆಂಟ್, ಕೃಷ್ಣರಾಜಪುರಂ, ವೈಟ್ ಫೀಲ್ಡ್, ಬಂಗಾರಪೇಟೆ, ಜೋಲಾರಪೆಟ್ಟೈ , ಕಟಪಾಡಿ, ರೇಣಿಗುಂಟ, ಗುಡೂರು, ನೆಲ್ಲೂರು, ಒಂಗೋಲ್, ತೆನಾಲಿ, ವಿಜಯವಾಡ, ಎಲೂರು, ರಾಜಮಂಡ್ರಿ, ಸಾಮಲಕೋಟೆ, ದುವ್ವಾಡ, ಕೊಟ್ಟವಲಸಾ, ವಿಜಯನಗರಂ, ಶ್ರೀಕಾಕುಳಂ ರೋಡ, ಪಾಲಸಾ, ಬ್ರಹ್ಮಪುರ ಮತ್ತು ಖುರ್ದಾ ರೋಡ ನಿಲ್ದಾಣಗಳಲ್ಲಿ ನಿಲುಗಡೆ…
ಬೆಂಗಳೂರು: ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್ ಗೆ ಕೂಡಾ ತಪ್ಪು ಮಾಹಿತಿ ನೀಡಿ ನ್ಯಾಯಾಲಯದ ಹಾದಿ ತಪ್ಪಿಸುವ ಪ್ರಯತ್ನ ಮಾಡುತ್ತಿದೆ. ಬರ ಪರಿಹಾರದ ವಿಷಯದಲ್ಲಿ ರಾಜ್ಯಕ್ಕಾದ ಅನ್ಯಾಯದ ವಿರುದ್ಧ ಬೀದಿಗಳಲ್ಲಿ ಮಾತ್ರವಲ್ಲ ನ್ಯಾಯಾಲಯದಲ್ಲೂ ಹೋರಾಟ ಮುಂದುವರೆಯಲಿದೆ ಎಂಬುದಾಗಿ ಸಿಎಂ ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಕರ್ನಾಟಕಕ್ಕೆ ನ್ಯಾಯಬದ್ಧವಾಗಿ ನೀಡಬೇಕಾಗಿರುವ ಬರಪರಿಹಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್ ಗೆ ಕೂಡಾ ತಪ್ಪು ಮಾಹಿತಿ ನೀಡಿ ನ್ಯಾಯಾಲಯದ ಹಾದಿ ತಪ್ಪಿಸುವ ಪ್ರಯತ್ನ ಮಾಡಿರುವುದು ವಿಷಾದನೀಯ ಎಂದಿದ್ದಾರೆ. ನ್ಯಾಯಬದ್ಧವಾಗಿ ಕರ್ನಾಟಕಕ್ಕೆ ನೀಡಬೇಕಾಗಿರುವ ಬರಪರಿಹಾರವನ್ನು ನೀಡದೆ ಕೇಂದ್ರ ಸರ್ಕಾರ ಕಳೆದ ಐದಾರು ತಿಂಗಳುಗಳಿಂದ ಸತಾಯಿಸುತ್ತಿರುವುದನ್ನು ಕಂಡು ಬೇರೆ ದಾರಿ ಕಾಣದೆ ನ್ಯಾಯ ಕೋರಿ ನಮ್ಮ ಸರ್ಕಾರ ಸುಪ್ರೀಂ ಕೋರ್ಟ್ ಗೆ ಮೊರೆ ಹೋಗಿತ್ತು. ಇಂದು ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ಕೇಂದ್ರ ಸರ್ಕಾರದ ಅಡ್ವೋಕೇಟ್ ಜನರಲ್ ತುಷಾರ್ ಮೆಹ್ತಾ ಅವರು ಬರಪರಿಹಾರ ವಿಳಂಬಕ್ಕೆ ಕರ್ನಾಟಕ ಸರ್ಕಾರವೇ ಕಾರಣ. ಇದರ ಹಿಂದೆ ರಾಜಕೀಯ ಉದ್ದೇಶ…
ಬೆಂಗಳೂರು: BJP ನಾಯಕರೇ, ನಮ್ಮ ಸರ್ಕಾರ ಸುಭದ್ರವಾಗಿದೆ, ದಿವಾಳಿಯಾಗಿರುವುದು ನಿಮ್ಮ ಬುದ್ದಿಯೇ ಹೊರತು ನಮ್ಮ ರಾಜ್ಯ ಅಲ್ಲ. ದಿನಕ್ಕೊಂದು ಸುಳ್ಳು ಹೇಳುತ್ತಾ, ಆ ಸುಳ್ಳು ಬಯಲಾದಾಗ ಮತ್ತೆ ಅದನ್ನು ಸಮರ್ಥಿಸಲು ಇನ್ನೊಂದಿಷ್ಟು ಸುಳ್ಳುಗಳನ್ನು ಸೃಷ್ಟಿಸುತ್ತಾ ನಿಮ್ಮನ್ನು ನೀವೇ ಬತ್ತಲೆ ಮಾಡಿಕೊಳ್ಳಬೇಡಿ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಕಿಡಿಕಾರಿದ್ದಾರೆ. ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಕಳೆದ ವರ್ಷದ ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ರೂ.10,000 ಕೋಟಿ ಸಾಲ ಮಾಡಿದ್ದ ಕಾರಣಕ್ಕಾಗಿ ರಾಜ್ಯ ದಿವಾಳಿಯಾಗುತ್ತಿದೆ ಎಂದು ಬೊಬ್ಬಿಡುತ್ತಿರುವ ನೀವು, ನಿಮ್ಮ ಸರ್ಕಾರದ ಕಾಲದಲ್ಲಿನ ಸಾಲದ ಲೆಕ್ಕವನ್ನು ಪರಿಶೀಲಿಸುವ ಕಷ್ಟ ತೆಗೆದುಕೊಂಡಿದ್ದರೆ ಈ ರೀತಿ ನಮ್ಮ ಕೈಗೆ ಬಡಿಗೆ ಕೊಟ್ಟು ಹೊಡೆಸಿಕೊಳ್ಳುತ್ತಿರಲಿಲ್ಲ ಎಂದಿದ್ದಾರೆ. ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದ 2020-21ರ ಹಣಕಾಸು ವರ್ಷದಲ್ಲಿ ಮಾಡಿದ್ದ ಸಾಲ ರೂ.84,528 ಕೋಟಿ, ಅವರು 2021-22ರಲ್ಲಿ ರೂ.67,332 ಕೋಟಿ ಮತ್ತು 2022-23ರ ಅವಧಿಯಲ್ಲಿ ರೂ.72,000 ಕೋಟಿ ಸಾಲ ಮಾಡಿದ್ದರು. ಆ ಸಾಲ ತೀರಿಸಲು ಅವರು 2022-23ರಲ್ಲಿ ರೂ.43,580 ಕೋಟಿ ಬಳಕೆ ಮಾಡಿದ್ದರು. ಈಗ…
ಬೆಂಗಳೂರು: ಸಿಎಂ ಸಿದ್ಧರಾಮಯ್ಯ ಅವರು ಬೆಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ಅವರ ಪರವಾಗಿ ಮತಯಾಚನೆ ಮಾಡಿದಂತ ವೇಳೆಯಲ್ಲಿ ಭದ್ರತಾ ವೈಫಲ್ಯಕ್ಕೆ ಕಾರಣವಾಗಿದೆ. ಗನ್ ಇಟ್ಕೊಂಡು ಬಂದಂತ ವ್ಯಕ್ತಿಯೊಬ್ಬ ಸಿಎಂ ಸಿದ್ಧರಾಮಯ್ಯ ಅವರಿಗೆ ಹಾರ ಹಾಕಿ ತೆರಳಿರೋ ಘಟನೆ ನಡೆದಿದೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸೌಮ್ಯ ರೆಡ್ಡಿ ಪರವಾಗಿ ಇಂದು ಸಿಎಂ ಸಿದ್ಧರಾಮಯ್ಯ ಪ್ರಚಾರ ನಡೆಸಿದರು. ಬೆಂಗಳೂರಿನ ಭೈರಸಂದ್ರದಲ್ಲಿ ಇಂದು ಲೋಕಸಭಾ ಚುನಾವಣಾ ಪ್ರಚಾರದ ವೇಳೆಯಲ್ಲಿ ಭದ್ರತಾ ವೈಫಲ್ಯವೇ ನಡೆದಿದೆ. ಸಿಎಂ ಸಿದ್ಧರಾಮಯ್ಯ ಕ್ಯಾಂಟರ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಪರವಾಗಿ ಪ್ರಚಾರದಲ್ಲಿ ತೊಡಗಿದ್ದಂತ ಸಂದರ್ಭದಲ್ಲಿ ಕ್ಯಾಂಟರ್ ಏರಿ ಬಂದಂತ ವ್ಯಕ್ತಿಯೊಬ್ಬನ ಸೊಂಟದಲ್ಲಿ ಗನ್ ಇತ್ತು ಎಂಬುದಾಗಿ ತಿಳಿದು ಬಂದಿದೆ. ಹೀಗೆ ಗನ್ ಇಟ್ಕೊಂಡು ಬಂದಂತ ವ್ಯಕ್ತಿಯೊಬ್ಬ ಸಿಎಂ ಸಿದ್ಧರಾಮಯ್ಯಗೆ ಹಾರ ಹಾಕಿ ತೆರಳಿರೋದಾಗಿ ಹೇಳಲಾಗುತ್ತಿದೆ. ಹೀಗೆ ಚುನಾವಣಾ ಪ್ರಚಾರದಲ್ಲಿ ಸಿಎಂ ಸಿದ್ಧರಾಮಯ್ಯ ಅವರಿಗೆ ಗನ್ ಇಟ್ಕೊಂಡು ಬಂದು ಹಾರ ಹಾಕಿದ ವ್ಯಕ್ತಿ ಯಾರು.?…
ಬೆಂಗಳೂರು: ಕೆಪಿಸಿಸಿ ರಾಜ್ಯ ಮಟ್ಟದ ಇಂಡಿಯಾ ಬ್ಲಾಕ್ ಸಮನ್ವಯ ಸಮಿತಿಯ ಅಧ್ಯಕ್ಷರಾಗಿ ರಾಜ್ಯಸಭಾ ಸದಸ್ಯ ಜಿ.ಸಿ ಚಂದ್ರಶೇಖರ್ ಹಾಗೂ ಸಂಚಾಲಕರಾಗಿ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ಹಾಗೂ ಮಾಜಿ ಪರಿಷತ್ ಸದಸ್ಯ ರಮೇಶ್ ಬಾಬು ಅವರನ್ನು ನೇಮಕ ಮಾಡಲಾಗಿದೆ. ಈ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಎಲ್ಲಾ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಆದೇಶ ಮಾಡಿದ್ದಾರೆ. ಅದರಲ್ಲಿ ದೇಶದ ಸಂವಿಧಾನವನ್ನು ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ 2024ರ ಲೋಕಸಭಾ ಚುನಾವಣೆ ಅತ್ಯಂತ ಮಹತ್ತರ ಚುನಾವಣೆಯಾಗಿರುತ್ತದೆ ಎಂದಿದ್ದಾರೆ. ರಾಷ್ಟ್ರಮಟ್ಟದಲ್ಲಿ ಇಂಡಿಯಾ ಬ್ಲಾಕ್ ಪಕ್ಷಗಳು ಪರಸ್ಪರ ಸಹಕಾರ ಮತ್ತು ಸಮನ್ವಯತೆಯೊಂದಿಗೆ ಚುನಾವಣೆಯನ್ನು ಎದುರಿಸುತ್ತಿವೆ. ಈ ನಿಟ್ಟಿನಲ್ಲಿ ಕರ್ನಾಟಕದ ಎರಡು ಹಂತದ ಲೋಕಸಭಾ ಚುನಾವಣೆಯಲ್ಲಿ ಪರಸ್ಪರ ಹೊಂದಾಣಿಕೆ ಮತ್ತು ಒಟ್ಟಾಗಿ ನಡೆಸುವ ದೃಷ್ಟಿಯಿಂದ ಕೆಳ ಹಂತದಲ್ಲಿ ಡಿಸಿಸಿ ಅಧ್ಯಕ್ಷರು ಮತ್ತು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಮಿತ್ರ ಪಕ್ಷಗಳೊಂದಿಗೆ ಸಮನ್ವಯ ಸಮಿತಿಗಳನ್ನು ರಚಿಸಿಕೊಂಡು, ಲೋಕಸಭಾ ಚುನಾವಣೆಯಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಕೆಪಿಸಿಸಿ ನಿರ್ಧರಿಸಿದೆ…
ಬೆಂಗಳೂರು: ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ನ್ಯೂನತೆಗಳನ್ನು ಮುಚ್ಚಿಡಲು, ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ಆಗದೆ ಇರುವುದನ್ನು ಮುಚ್ಚಿಟ್ಟುಕೊಳ್ಳಲು ಹಾಗೂ ಆಡಳಿತ ಪಕ್ಷದ ಶಾಸಕರಿಗೆ ಅನುದಾನ ಕೊಡಲು ಆಗದೆ ಇರುವುದನ್ನು ಮುಚ್ಚಿಡಲು ಕೇಂದ್ರ ಸರಕಾರದ ವಿರುದ್ಧ ಅನುದಾನ ಕೊಡುತ್ತಿಲ್ಲ ಎಂದು ಟೀಕಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ ಅವರು ಆರೋಪಿಸಿದರು. ಮಂಗಳೂರಿನ ಬಿಜೆಪಿ ಚುನಾವಣಾ ಕಚೇರಿಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ನಮ್ಮ ತೆರಿಗೆ ನಮ್ಮ ಹಕ್ಕು ಎಂದು ಇವರು ಸರಕಾರದ ದುಡ್ಡಿನಲ್ಲಿ ದೆಹಲಿಯಲ್ಲಿ ಸತ್ಯಾಗ್ರಹ ಮಾಡಿದ್ದರು. ಕರ್ನಾಟಕಕ್ಕೆ ಬರಬೇಕಾದ ತೆರಿಗೆ ಪಾಲಿನ ಕುರಿತು ಕಾಂಗ್ರೆಸ್ ಪಕ್ಷದ ರಾಜ್ಯಸಭಾ ವಿಪಕ್ಷ ನಾಯಕ ಅಧೀರ್ ರಂಜನ್ ಚೌಧರಿ ಅವರು ಪ್ರಶ್ನೆ ಮಾಡಿದ್ದರು. ಅಂಕಿಅಂಶಗಳ ಸಹಿತ ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಉತ್ತರ ಕೊಟ್ಟಿದ್ದರ ಕುರಿತು ಗಮನ ಸೆಳೆದರು. 2004ರಿಂದ 2014ರ ನಡುವಿನ ಯುಪಿಎ ಅವಧಿಯಲ್ಲಿ 83 ಸಾವಿರ ಕೋಟಿ ಹಾಗೂ 2014ರಿಂದ ಕಳೆದ…