Subscribe to Updates
Get the latest creative news from FooBar about art, design and business.
Author: kannadanewsnow09
ಮೈಸೂರು: ಹಾಸನ ಮತ್ತು ಮಾವಿನಕೆರೆ ನಡುವೆ ಟ್ರ್ಯಾಕ್ ನವೀಕರಣ ಕಾಮಗಾರಿ ನಡೆಯುವುದರಿಂದ ಕೆಳಗಿನ ರೈಲುಗಳ ಸೇವೆಯನ್ನು 18 ದಿನಗಳ ಕಾಲ ಮಾರ್ಗ ಮಧ್ಯದಲ್ಲಿ ನಿಯಂತ್ರಿಸಲಾಗುತ್ತದೆ. 1. ರೈಲು ಸಂಖ್ಯೆ 16221 ತಾಳಗುಪ್ಪ – ಮೈಸೂರು ಎಕ್ಸ್ಪ್ರೆಸ್, ಜೂನ್ 18ರಿಂದ 20, ಜೂನ್ 23ರಿಂದ 27, ಜೂನ್ 30ರಿಂದ ಜುಲೈ 04 ಮತ್ತು ಜುಲೈ 07ರಿಂದ 11 ರವರೆಗೆ ಪ್ರಯಾಣ ಆರಂಭಿಸುವ ರೈಲುಗಳು ಮಾರ್ಗಮಧ್ಯದಲ್ಲಿ 15 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ. 2. ರೈಲು ಸಂಖ್ಯೆ 16225 ಮೈಸೂರು – ಶಿವಮೊಗ್ಗ ಟೌನ್ ಎಕ್ಸ್ಪ್ರೆಸ್, ಜೂನ್ 18ರಿಂದ 20, ಜೂನ್ 23ರಿಂದ 27, ಜೂನ್ 30ರಿಂದ ಜುಲೈ 04 ಮತ್ತು ಜುಲೈ 07ರಿಂದ 11 ರವರೆಗೆ ಪ್ರಯಾಣ ಆರಂಭಿಸುವ ರೈಲುಗಳು ಮಾರ್ಗಮಧ್ಯದಲ್ಲಿ 80 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ. 3. ರೈಲು ಸಂಖ್ಯೆ 06583 ಕೆಎಸ್ಆರ್ ಬೆಂಗಳೂರು – ಹಾಸನ ಡೆಮು, ಜೂನ್ 18ರಿಂದ 20, ಜೂನ್ 23ರಿಂದ 27, ಜೂನ್ 30ರಿಂದ ಜುಲೈ 04 ಮತ್ತು…
ಬೆಂಗಳೂರು: ರಾಜ್ಯ ಸರ್ಕಾರದಿಂದ ಆಶಾ ಮೆಂಟರ್ ಗಳನ್ನ ಕರ್ತವ್ಯದಿಂದ ಬಿಡುಗಡೆ ಮಾಡಿದ್ದು ಖಂಡನೀಯವೇ ಸರಿ. ಈ ಆದೇಶ ಹಿಪಡೆಯದಿದ್ದರೆ ಕಾನೂನು ಹೋರಾಟ ಮಾಡುವುದಾಗಿ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ( KSHCOEA BMS ) ಸಂಘದ ಅಧ್ಯಕ್ಷ ಶ್ರೀಕಾಂತ್ ಸ್ವಾಮಿ ಎಚ್ಚರಿಸಿದ್ದಾರೆ. ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ ಜಿಲ್ಲೆ ಹಾಗೂ ತಾಲುಕು ಮಟ್ಟದಲ್ಲಿ ಆಶಾ ಕಾರ್ಯಕ್ರಮ ಅನುಷ್ಠಾನ ಮಾಡಲು 2007-2008 ರಿಂದ ನೇಮಕಾತಿ ಮಾಡಿಕೊಂಡಿದ್ದು, ಈಗ ದಿಢೀರನೆ ಈ ಎಲ್ಲಾ 195 ಆಶಾ ಮೆಂಟರ್ ಗಳನ್ನು ಕರ್ತವ್ಯದಿಂದ ಬಿಡುಗಡೆ ಮಾಡಿ ಆದೇಶ ಹೊರಡಿಸಿದ್ದು ಈ ಆದೇಶದಲ್ಲಿ ಬಿಡುಗಡೆ ಹೊಂದಿದ ಸದರಿ ಸಿಬ್ಬಂದಿಗಳನ್ನು ಅರ್ಹರಿದ್ದಲ್ಲಿ ಜಿಲ್ಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆದ್ಯತೆ ಮೇಲೆ ನೇಮಿಸಲು ಪರಿಗಣಿಸಬಹುದು ಎಂದು ಆದೇಶದಲ್ಲಿ ತಿಳಿಸಿರುತ್ತಾರೆ, ಅಂದರೆ ಹೊಸ ನೇಮಕಾತಿ ಮಾಡಿಕೊಳ್ಳಲು ತಿಳಿಸಿರುತ್ತಾರೆ ಎಂದಿದ್ದಾರೆ. ಕಳೆದ 15-18 ವರ್ಷಗಳಿಂದ ಸೇವೆ…
ನವದೆಹಲಿ: ಏರ್ ಇಂಡಿಯಾ 171 ಅಪಘಾತದ ತನಿಖೆ ಆರಂಭವಾಗುತ್ತಿದ್ದಂತೆ, ನಾಗರಿಕ ವಿಮಾನಯಾನ ಸಚಿವಾಲಯವು ಶನಿವಾರ ಗುರುವಾರ ಮಧ್ಯಾಹ್ನ ಘಟನೆ ಹೇಗೆ ನಡೆಯಿತು ಎಂಬುದನ್ನು ವಿವರಿಸಿದೆ. ನಿನ್ನೆ ಸಂಜೆ ಮರುಪಡೆಯಲಾದ ಕಪ್ಪು ಪೆಟ್ಟಿಗೆಯ ಡೇಟಾವನ್ನು ಡಿಕೋಡ್ ಮಾಡಿದ ನಂತರ ಅಪಘಾತದ ಕಾರಣವನ್ನು ಕಂಡುಹಿಡಿಯುವ ಭರವಸೆಯನ್ನು ವ್ಯಕ್ತಪಡಿಸಿದೆ. ನಾಗರಿಕ ವಿಮಾನಯಾನ ಸಚಿವಾಲಯದ ಕಾರ್ಯದರ್ಶಿ ಸಮೀರ್ ಕುಮಾರ್ ಸಿನ್ಹಾ, ಲಂಡನ್ಗೆ ಹೊರಟಿದ್ದ ವಿಮಾನವು ಮಧ್ಯಾಹ್ನ 1.39 ಕ್ಕೆ ಹೊರಟು ವಿಮಾನ ನಿಲ್ದಾಣದಿಂದ 2 ಕಿ.ಮೀ ದೂರದಲ್ಲಿ ಪತನಗೊಂಡಿತು ಎಂದು ಹೇಳಿದರು. ಪೈಲಟ್ ವಾಯು ಸಂಚಾರ ನಿಯಂತ್ರಕಕ್ಕೆ ಮೇಡೇ ಕರೆ ಕಳುಹಿಸಿದ್ದಾರೆ ಎಂದು ಅವರು ದೃಢಪಡಿಸಿದರು. ಆದಾಗ್ಯೂ, ATC ವಿಮಾನವನ್ನು ಸಂಪರ್ಕಿಸಲು ಪ್ರಯತ್ನಿಸಿದಾಗ, ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಜೂನ್ 12 ರಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ, ಅಹಮದಾಬಾದ್ನಿಂದ ಲಂಡನ್ನ ಗ್ಯಾಟ್ವಿಕ್ಗೆ ಹೋಗುತ್ತಿದ್ದ ವಿಮಾನ ಅಪಘಾತಕ್ಕೀಡಾಗಿದೆ ಎಂಬ ಮಾಹಿತಿ ನಮಗೆ ಸಿಕ್ಕಿತು. ಅಹಮದಾಬಾದ್ನ ATC ಮೂಲಕ ನಮಗೆ ಇದರ ಬಗ್ಗೆ ವಿವರವಾದ ಮಾಹಿತಿ ತಕ್ಷಣ ಸಿಕ್ಕಿತು. ಇದು…
ಮೈಸೂರು: ನೈರುತ್ಯ ರೈಲ್ವೆಯ ಮೈಸೂರು ವಿಭಾಗದಿಂದ ಸಂಚರಿಸುತ್ತಿದ್ದಂತ ಎರಡು ದಿನ ರೈಲುಗಳ ರದ್ದತಿ ಮತ್ತು ಭಾಗಶಃ ರದ್ದತಿ ಮಾಡಿರುವುದಾಗಿ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕರು ಮತ್ತು ಸಾರ್ವಜನಿಕ ಸಂಪರ್ಕ ಅಧಿಕಾರಿ ಗಿರೀಶ ಧರ್ಮರಾಜ ಕಾಲಗೊಂಡ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಕೋರವಂಗಲ ಯಾರ್ಡ್ನಲ್ಲಿ ನಡೆಯುವ ಸುರಕ್ಷಾ ಮತ್ತು ಟ್ರ್ಯಾಕ್ ನಿರ್ವಹಣಾ ಕೆಲಸದ ಹಿನ್ನೆಲೆಯಲ್ಲಿ ಕೆಳಕಂಡ ರೈಲು ಸೇವೆಗಳನ್ನು ಸಂಪೂರ್ಣವಾಗಿ ಮತ್ತು ಭಾಗಶಃ ರದ್ದುಗೊಳಿಸಲಾಗಿದೆ ಎಂದಿದ್ದಾರೆ. ಸಂಪೂರ್ಣ ರದ್ದತಿ ರೈಲು ಸಂಖ್ಯೆ 56267 ಅರಸೀಕೆರೆ – ಮೈಸೂರು ಪ್ಯಾಸೆಂಜರ್ ರೈಲು ಜೂನ್ 20 ಮತ್ತು 22, 2025 ರಂದು ರದ್ದುಗೊಳಿಸಲಾಗುತ್ತದೆ. ಭಾಗಶಃ ರದ್ದತಿ ರೈಲು ಸಂಖ್ಯೆ 16225 ಮೈಸೂರು – ಶಿವಮೊಗ್ಗ ಟೌನ್ ಎಕ್ಸ್ಪ್ರೆಸ್ ರೈಲು ಮೈಸೂರು ಮತ್ತು ಅರಸೀಕೆರೆ ನಡುವಿನ ಮಾರ್ಗದಲ್ಲಿ ಭಾಗಶಃ ರದ್ದುಗೊಳಿಸಲಾಗುತ್ತದೆ. ಜೂನ್ 20 ಮತ್ತು 22, 2025 ರಂದು ಈ ರೈಲು ಅರಸೀಕೆರೆಯಿಂದ ಶಿವಮೊಗ್ಗ ಟೌನ್ವರೆಗೆ ಮಾತ್ರ ಓಡಿಸಲಾಗುತ್ತದೆ ಮತ್ತು ಅರಸೀಕೆರೆಯಿಂದ ನಿಗದಿತ ವೇಳೆಯಲ್ಲಿ…
ಮಗ ಮಾತ್ರ ಮಾತು ಕೇಳುವುದಿಲ್ಲವೇ? ಮಾತು ಕೇಳದ ಹೆಣ್ಣು ಮಕ್ಕಳೂ ಇದ್ದಾರೆ. ಏನ್ ಮಾಡೋದು. ಈಗಿನ ಕಾಲದಲ್ಲಿ ಮಕ್ಕಳಿರುವವರ ವಿರುದ್ಧ ಮಾತನಾಡುವುದು ಫ್ಯಾಶನ್ ಆಗಿಬಿಟ್ಟಿದೆ. ನಿಮ್ಮ ಮನೆಯಲ್ಲಿ ನಿಮ್ಮ ಮಗ ಅಥವಾ ಮಗಳು ಯಾರೇ ಇರಲಿ, ನೀವು ಈ ಪರಿಹಾರವನ್ನು ಮಾಡಬಹುದು. ನೀವು ಈ ದೇವಾಲಯಕ್ಕೆ ಭೇಟಿ ನೀಡಬಹುದು. ಇದೇ ವೇಳೆ ನನ್ನ ಮಗು ದಾರಿ ತಪ್ಪುತ್ತದೆ. ಅಡ್ಮಿಷನ್ ಚೆನ್ನಾಗಿಲ್ಲ, ಅಭ್ಯಾಸ ಚೆನ್ನಾಗಿಲ್ಲ, ಓದುವುದರಲ್ಲಿ ಆಸಕ್ತಿ ಇಲ್ಲ, ಅಪ್ಪ-ಅಮ್ಮ ಹೇಳುವ ಒಳ್ಳೆ ಮಾತು ಕೇಳೋಕೆ ಮನಸ್ಸಿಲ್ಲ, ಈ ಎಲ್ಲಾ ಸಮಸ್ಯೆಗಳಿಂದ ಮುಕ್ತಿ ಹೊಂದಲು ಇಲ್ಲಿದೆ ಸರಳ ಆಧ್ಯಾತ್ಮಿಕ ಉಪಾಸನೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ…
ಬೆಂಗಳೂರು: ರಾಜ್ಯದಲ್ಲಿ 108 ಅಂಬ್ಯುಲೆನ್ಸ್ ಗಳನ್ನು ಖಾಸಗಿ ಹಿಡಿತದಿಂದ ಮುಕ್ತಗೊಳಿಸಿ, ಆರೋಗ್ಯ ಇಲಾಖೆಯಿಂದ ನಿರ್ವಹಣೆ ಮಾಡುವ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಅನುಮೋದಿಸಿದೆ. ಈ ಕ್ರಮದಿಂದಾಗಿ 108 ಆರೋಗ್ಯ ಕವಚ ಸೇವೆಯಲ್ಲಿ ಸಾಕಷ್ಟು ಸುಧಾರಣೆಯಾಗುವ ವಿಶ್ವಾಸವಿದ್ದು, ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಸುಮಾರು 250 ಕೋಟಿಯಷ್ಟು ಉಳಿತಾಯವಾಗಲಿದೆ. 108 ಅಧೀನದಲ್ಲಿರುವ ಒಟ್ಟು 715 ಅಂಬ್ಯುಲೆನ್ಸ್ ನಿರ್ವಹಣೆಗಾಗಿ ರಾಜ್ಯ ಮಟ್ಟದಲ್ಲಿ ಕಮಾಂಡ್ ಕಂಟ್ರೋಲ್ ಸೆಂಟರ್ ತೆರೆಯಲಾಗುವುದು. ಇದಕ್ಕಾಗಿ 112 NG -ERSS ತಂತ್ರಾಂಶ ಬಳಿಸಿಕೊಳ್ಳಲು ಯೋಜನೆ ರೂಪಿಸಲಾಗಿದೆ. ಪ್ರತಿ ಜಿಲ್ಲೆಗಳಲ್ಲಿಯೂ 108 ಕಂಟ್ರೋಲ್ ಸೆಂಟರ್ ಗಳು ಕಾರ್ಯನಿರ್ವಹಿಸಲಿದ್ದು, ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ನಿರ್ವಹಣೆಯ ಜವಾಬ್ದಾರಿ ವಹಿಸಲಾಗಿದೆ. ಅಂಬ್ಯುಲೆನ್ಸ್ ಗಳಿಗೆ ಚಾಲಕರು ಹಾಗೂ ನರ್ಸ್ ಸಿಬ್ಬಂದಿಗಳನ್ನು ಜಿಲ್ಲಾ ಮಟ್ಟದಲ್ಲಿಯೇ ಹೊರಗುತ್ತಿಗೆಯಲ್ಲಿ ನೇಮಕಾತಿ ಮಾಡಿಕೊಳ್ಳಲಾಗುವುದು. ಆರಂಭದಲ್ಲಿ ಚಾಮರಾಜ ನಗರ ಜಿಲ್ಲೆಯಲ್ಲಿ ನಿರ್ವಹಣೆ ಪ್ರಾರಂಭಿಸಲಾಗುತ್ತಿದೆ. ನಂತರದಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ನಿರ್ವಹಣೆ ಕಾರ್ಯ ಆರಂಭವಾಗಲಿದೆ. ಅಲ್ಲದೇ 108 ಹೊರತಾಗಿ ರಾಜ್ಯದಲ್ಲಿರುವ 1000 ಕ್ಕೂ ಹೆಚ್ಚು ಸ್ಟೇಟ್ ಅಂಬ್ಯುಲೆನ್ಸ್ ಗಳನ್ನು ಕೂಡಾ…
ಬೆಂಗಳೂರು: ರಾಜ್ಯದ ಯಜಮಾನಿ ಮಹಿಳೆಯರಿಗೆ ಕಾಂಗ್ರೆಸ್ ಸರ್ಕಾರವು ಗೃಹಲಕ್ಷ್ಮಿ ಯೋಜನೆಯನ್ನು ( Gruhalakshmi Scheme ) ಜಾರಿಗೊಳಿಸಿದೆ. ಈ ಯೋಜನೆಯ ಅಡಿಯಲ್ಲಿ ಪ್ರತಿ ತಿಂಗಳು 2000 ಹಣವನ್ನು ಡಿಬಿಟಿ ಮೂಲಕ ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತಿದೆ. ಒಂದು ವೇಳೆ ನಿಮಗೆ ಗೃಹಲಕ್ಷ್ಮಿ ಯೋಜನೆಯ ಹಣ ಬಂದಿಲ್ಲವೆಂದರೇ ಇದೇ ಕಾರಣವಂತೆ. ಅದಕ್ಕಾಗಿ ನೀವು ಈ ಕೆಲಸ ಮಾಡಿ, ತಪ್ಪದೇ ಬರುತ್ತೆ ಎಂಬುದು ಇಲಾಖೆಯ ಮಾಹಿತಿಯಾಗಿದೆ. ಈ ಕುರಿತಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಗೃಹಲಕ್ಷ್ಮಿ ಯೋಜನೆಯು ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾಗಿದ್ದು ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರದಿಂದ ಸಹಾಯಧನ ನೀಡಲಾಗುತ್ತಿದೆ. ಈ ಯೋಜನೆಯಡಿ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ.2 ಸಾವಿರ ಗಳನ್ನು ಅವರ ಆಧಾರ್ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ನೇರ ನಗದು ಜಮೆ ಮಾಡಲಾಗುತ್ತಿದೆ ಎಂದು ತಿಳಿಸಿದೆ. ರಾಜ್ಯದ ಕೆಲ ಜಿಲ್ಲೆಯ ಯಜಮಾನಿ ಮಹಿಳೆಯರಿಗೆ NPCI Failure/ E-KYC Failure ಕಾರಣದಿಂದ…
ಬೆಂಗಳೂರು: ರಾಜ್ಯದ ಆರೋಗ್ಯ ಇಲಾಖೆಯಲ್ಲಿ NHM ಅಡಿಯಲ್ಲಿ ನೇಮಕಗೊಂಡ ಆಶಾ ಮೆಂಟರ್ಸ್ ಗಳಿಗೆ ಸರ್ಕಾರ ಬಿಗ್ ಶಾಕ್ ನೀಡಿದೆ. 2007-08ನೇ ಸಾಲಿನಲ್ಲಿ ಆಶಾ ಕಾರ್ಯಕರ್ತೆಯರಿಗೆ ತರಬೇತಿಗಾಗಿ ನೇಮಕಗೊಂಡಂತ ಆಶಾ ಮೆಂಟರ್ಸ್ ಗಳನ್ನು ಕರ್ತವ್ಯದಿಂದ ಮುಕ್ತಗೊಳಿಸಿ ಆದೇಶಿಸಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಅಭಿಯಾನ ನಿರ್ದೇಶಕರು, ರಾಷ್ಟ್ರೀಯ ಆರೋಗ್ಯ ಅಭಿಯಾನರವರ ಕಡತದಲ್ಲಿ 2007-08ನೇ ಸಾಲಿನಲ್ಲಿ NHM ಅಡಿಯಲ್ಲಿ ನೇಮಕಗೊಂಡ ಗುತ್ತಿಗೆ ನರ್ಸಿಂಗ್ ಸಿಬ್ಬಂದಿಯನ್ನು ಹೊಸದಾಗಿ ಸೇರ್ಪಡೆಗೊಂಡ ಆಶಾಕಾರ್ಯಕರ್ತೆಯರಿಗೆ ತರಬೇತಿ ನೀಡಲು TOT ಆಗಿ ನಿಯೋಜನೆ ಮಾಡಲಾಗಿದ್ದು, ಅನಂತರದಲ್ಲಿ ಅವರುಗಳನ್ನು District Community Mobilizer / Block Community Mobilizer (ASHA Mentor) ಎಂದು ಮರುನಾಮಕರಣ ಮಾಡಲಾಗಿರುತ್ತದೆ. ಸದರಿಯವರು ಆಶಾ ಕಾರ್ಯಕರ್ತೆಯರಿಗೆ ತರಬೇತಿ ನೀಡುವುದು, ಅವರುಗಳ ಮೇಲ್ವಿಚಾರಣೆ ಮಾಡುವುದು, ಆಶಾ ನಿಧಿ ಪೋರ್ಟಲ್ ಅನ್ನು ನಿರ್ವಹಿಸುವುದು ಹಾಗೂ ಪ್ರೋತ್ಸಾಹಧನದ ಪಾವತಿ ಪ್ರಕ್ರಿಯೆಯಂತಹ ಸಕಾಲಿಕ ನಿರ್ವಹಣೆ ಕಾರ್ಯಗಳನ್ನು ನಿರ್ವಹಿಸುತ್ತಿರುತ್ತಾರೆ ಎಂದಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ 195…
ಬಳ್ಳಾರಿ: ಜಿಲ್ಲೆಯಲ್ಲಿ ಮುಂಗಾರು ಮತ್ತು ಹಿಂಗಾರು ಋತುವಿನಲ್ಲಿ ಬೆಳೆದ ಜೋಳವನ್ನು ಖರೀದಿ ಮಾಡಲು ಖರೀದಿ ಕೇಂದ್ರಗಳನ್ನು ಪ್ರಾರಂಭ ಮಾಡಲಾಗಿದ್ದು, ಖರೀದಿ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಈಗಾಗಲೇ ನೋಂದಣಿ ಮಾಡಿದ ರೈತರು ನೋಂದಾಯಿತ ಖರೀದಿ ಕೇಂದ್ರಗಳಿಗೆ ಭೇಟಿ ನೀಡಿ ಜೂ.30 ರೊಳಗಾಗಿ ಜೋಳ ಮಾರಾಟ ಮಾಡಬೇಕು. ಜೋಳದ ಖರೀದಿ ಅವಧಿಯು ಜೂ.30 ಕ್ಕೆ ಕೊನೆ ದಿನವಾಗಿದ್ದು, ಮುಂಗಾರು ಮತ್ತು ಹಿಂಗಾರು ಋತುವಿನಲ್ಲಿ ಜೋಳ ಮಾರಾಟ ಮಾಡಲು ನೋಂದಣಿ ಮಾಡಿದ ರೈತರು ಸಂಬAಧಪಟ್ಟ ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡಿ ಗ್ರೇನ್ ವೋಚರ್ ಪಡೆದುಕೊಳ್ಳಬೇಕು. ಖರೀದಿಯಾದ ಜೋಳವನ್ನು ಜೋಳ ಉಪಯೋಗಿಸುವ ಜಿಲ್ಲೆಗಳಿಗೆ ಪಡಿತರ ವಿತರಣೆಗೆ ಹಂಚಿಕೆ ನೀಡಲಾಗುವುದು. ಈ ನಿಟ್ಟಿನಲ್ಲಿ ಶೀಘ್ರವಾಗಿ ನೋಂದಾಯಿತ ರೈತರು ಜೋಳವನ್ನು ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡಿ ಸರ್ಕಾರದ ಈ ಯೋಜನೆಯ ಪ್ರಯೋಜನ ಪಡೆಯಬಹುದಾಗಿದೆ. ನಂತರ ಖರೀದಿ ಅವಧಿಗೆ ಅವಕಾಶವಿರುವುದಿಲ್ಲ. ಬೆಂಬಲ ಬೆಲೆ ಯೋಜನೆ ಬಗ್ಗೆ ರೈತರಿಗೆ ಯಾವುದೇ ಸಮಸ್ಯೆಗಳಿದ್ದರೆ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ ನಿಯಮಿತ ಬಳ್ಳಾರಿಯ ಶಾಖಾ…
ಬೆಂಗಳೂರು: ಪ್ರಸಕ್ತ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯಡಿ ಮುಂಗಾರು ಹಂಗಾಮಿನ ಬೆಳೆಗಳ ಬೆಳೆ ವಿಮೆಗೆ ನೋಂದಾಯಿಸಲು ಬೆಳೆ ಸಾಲ ಪಡೆದ ಹಾಗೂ ಬೆಳೆ ಸಾಲ ಪಡೆಯದ ರೈತರು ತಮ್ಮ ಬೆಳೆಗಳಿಗೆ ಬ್ಯಾಂಕುಗಳಲ್ಲಿ ವಿಮೆಗೆ ನೋಂದಾಯಿಸಿಕೊಳ್ಳಬೇಕು ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ. ಮುಂಗಾರು ಹಂಗಾಮಿನ ಗ್ರಾಮ ಪಂಚಾಯಿತಿ ಮಟ್ಟದ ಬೆಳೆಗಳಾದ ಭತ್ತ, ಮುಸುಕಿನ ಜೋಳ ಹಾಗೂ ಹೋಬಳಿ ಮಟ್ಟದ ಮುಂಗಾರು ಹಂಗಾಮಿನ ಬೆಳೆಗಳಾದ ಜೋಳ, ರಾಗಿ, ಸಜ್ಜೆ, ನವಣೆ, ತೊಗರಿ, ಹುರುಳಿ, ಸೂರ್ಯಕಾಂತಿ, ಎಳ್ಳು, ಹತ್ತಿ, ನೆಲಗಡಲೆ, ಈರುಳ್ಳಿ, ಭತ್ತ, ಕೆಂಪು ಮೆಣಸಿನಕಾಯಿ ಜಿಲ್ಲೆಯ ಬೆಳೆಗಳಾಗಿವೆ. ವಿವಿಧ ಬೆಳೆಗಳ ಬೆಳೆ ವಿಮೆಗೆ ಕೊನೆಯ ದಿನ: ಎಳ್ಳು-ಜುಲೈ 15 ಕೊನೆಯ ದಿನ. ಮುಸುಕಿನ ಜೋಳ, ಜೋಳ, ಸೂರ್ಯಕಾಂತಿ, ತೊಗರಿ, ಹತ್ತಿ, ಕೆಂಪು ಮೆಣಸಿನಕಾಯಿ, ಈರುಳ್ಳಿ ಬೆಳೆಗಳಿಗೆ ಜುಲೈ 31 ಕೊನೆಯ ದಿನ. ಭತ್ತ, ತೊಗರಿ, ರಾಗಿ, ನವಣೆ, ಹುರುಳಿ, ನೆಲಗಡಲೆ, ಸಜ್ಜೆ ಬೆಳೆಗಳಿಗೆ ಆಗಸ್ಟ್ 16…












