Author: kannadanewsnow09

ಬೆಂಗಳೂರು: ಮಹಿಳೆಯರು ತುರ್ತು ಸಂದರ್ಭದಲ್ಲಿ ಪೊಲೀಸ್ ಸಹಾಯವಾಣಿ ಸಂಖ್ಯೆ 112ಗೆ ಕರೆ ಮಾಡಿ, ಮಾಹಿತಿ ನೀಡಲು ಮನವಿ ಮಾಡಲಾಗಿದೆ. ಮಹಿಳೆಯರ ತುರ್ತು ಸ್ಪಂದನೆಗಾಗಿ ʼಸೇಫ್‌ ಸಿಟಿʼ ಯೋಜನೆಯಡಿ ಸುರಕ್ಷತಾ ಕೇಂದ್ರ ಸ್ಥಾಪಿಸಲಾಗಿದೆ. 250 ಹೊಯ್ಸಳ ವಾಹನಗಳು 24×7 ತಾಸು ಗಸ್ತು ತಿರುಗುತ್ತಿವೆ. ಅಪಾಯಕ್ಕೆ ಸಿಲುಕಿದವರು ಪೊಲೀಸ್‌ ಸಹಾಯವಾಣಿ 112ಕ್ಕೆ ಕರೆ ಮಾಡಿ ಮಾಹಿತಿ ನೀಡಬಹುದು ಎಂದು ಬೆಂಗಳೂರು ನಗರ ಪೊಲೀಸ್‌ ಕಮಿಷನರ್‌ ಬಿ. ದಯಾನಂದ ಅವರು ತಿಳಿಸಿದ್ದಾರೆ. https://twitter.com/KarnatakaVarthe/status/1914313212125987048

Read More

ಬೆಂಗಳೂರು: ರಾಜ್ಯ ಸರ್ಕಾರದ ತರಬೇತಿ ನೀತಿ 1997 ರಂತೆ, ಆಡಳಿತ ತರಬೇತಿ ಸಂಸ್ಥೆ, ಮೈಸೂರು, ಜಿಲ್ಲಾ ತರಬೇತಿ ಕೇಂದ್ರಗಳು ಮತ್ತು ಸಚಿವಾಲಯ ತರಬೇತಿ ಸಂಸ್ಥೆಯ ಮೂಲಕ ಸಿಬ್ಬಂದಿಗೆ ಸಾಮಥ್ರ್ಯಾಭಿವೃದ್ಧಿ ತರಬೇತಿಯನ್ನು ನೀಡುವ ಮಹತ್ವದ ಹೆಜ್ಜೆ ಕೈಗೊಳ್ಳಲಾಗಿದೆ. ಇನ್ನು ಮುಂದೆ ತರಬೇತಿ ಕೇವಲ ಭೌತಿಕವμÉ್ಟೀ ಅಲ್ಲದೆ, I-GoT ವೇದಿಕೆಯ ಸಹಭಾಗಿತ್ವದಲ್ಲಿ https://atimysore.karnataka.gov.in ಪೆÇೀರ್ಟಲ್ ಮೂಲಕ ಆನ್‍ಲೈನ್‍ನಲ್ಲಿಯೂ ಇದನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲಾಗಿದೆ. ಪ್ರಸ್ತುತ 4,55,746 ಸರ್ಕಾರಿ ನೌಕರರು ಈ ವೇದಿಕೆಯಲ್ಲಿ ನೋಂದಣಿ ಮಾಡಿರುತ್ತಾರೆ. ಸರ್ಕಾರಿ ನೌಕರರು ಅವರ ಎಚ್‍ಆರ್‍ಎಮ್‍ಎಸ್ (HRMS) ಮೊಬೈಲ್ ಸಂಖ್ಯೆಯ ಮೂಲಕ I-GoT ವೇದಿಕೆಯಲ್ಲಿ ಲಾಗಿನ್ ಆಗಿ ತರಬೇತಿ ಪಡೆಯಬಹುದಾಗಿದೆ. ಆದುದರಿಂದ, ಕೆಲಸದ ಹೊರೆ ಅಥವಾ ಸಿಬ್ಬಂದಿ ಕೊರತೆಯಿಂದಾಗಿ ವೈಯಕ್ತಿಕವಾಗಿ ತರಬೇತಿಗಳಿಗೆ ಹಾಜರಾಗಲು ಸಾಧ್ಯವಾಗದ ಸರ್ಕಾರಿ ನೌಕರರು ಈ ಸೌಲಭ್ಯವನ್ನು ಪಡೆಯಬಹುದು. ಸುಮಾರು ಹತ್ತು ತರಬೇತಿ ಮಾಡ್ಯೂಲ್‍ಗಳನ್ನು ಈಗಾಗಲೇ ಅಪ್‍ಲೋಡ್ ಮಾಡಲಾಗಿದೆ ಮತ್ತು ಇನ್ನೂ ಹಲವು ಮಾಡ್ಯೂಲ್‍ಗಳು ತಯಾರಿಕಾ ಪ್ರಕ್ರಿಯೆಯಲ್ಲಿವೆ. ಇದು ಕೇವಲ ಸಾಮಥ್ರ್ಯವರ್ಧನೆಯμÉ್ಟೀ ಅಲ್ಲ, ಸರ್ಕಾರದ ಕಾರ್ಯವೈಖರಿ ಹಾಗೂ…

Read More

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (Reserve Bank of India -RBI)  ಸೋಮವಾರ 10 ವರ್ಷಕ್ಕಿಂತ ಮೇಲ್ಪಟ್ಟ ಅಪ್ರಾಪ್ತ ವಯಸ್ಕರು ಉಳಿತಾಯ/ಅವಧಿ ಠೇವಣಿ ಖಾತೆಗಳನ್ನು ಸ್ವತಂತ್ರವಾಗಿ ತೆರೆಯಲು ಮತ್ತು ನಿರ್ವಹಿಸಲು ಬ್ಯಾಂಕುಗಳಿಗೆ ಅನುಮತಿ ನೀಡಿದೆ. ಅಪ್ರಾಪ್ತ ವಯಸ್ಕರ ಠೇವಣಿ ಖಾತೆಗಳನ್ನು ತೆರೆಯುವ ಮತ್ತು ನಿರ್ವಹಿಸುವ ಕುರಿತು ಆರ್‌ಬಿಐ ಪರಿಷ್ಕೃತ ಸೂಚನೆಗಳನ್ನು ನೀಡಿದೆ. ಯಾವುದೇ ವಯಸ್ಸಿನ ಅಪ್ರಾಪ್ತ ವಯಸ್ಕರು ತಮ್ಮ ನೈಸರ್ಗಿಕ ಅಥವಾ ಕಾನೂನುಬದ್ಧ ಪೋಷಕರ ಮೂಲಕ ಉಳಿತಾಯ ಮತ್ತು ಅವಧಿ ಠೇವಣಿ ಖಾತೆಗಳನ್ನು ತೆರೆಯಲು ಮತ್ತು ನಿರ್ವಹಿಸಲು ಅನುಮತಿಸಬಹುದು ಎಂದು ವಾಣಿಜ್ಯ ಬ್ಯಾಂಕುಗಳು ಮತ್ತು ಸಹಕಾರಿ ಬ್ಯಾಂಕುಗಳನ್ನು ಉದ್ದೇಶಿಸಿ ಸುತ್ತೋಲೆಯಲ್ಲಿ ತಿಳಿಸಿದೆ. ಅವರ ತಾಯಿಯನ್ನು ಪೋಷಕರನ್ನಾಗಿಟ್ಟುಕೊಂಡು ಅಂತಹ ಖಾತೆಗಳನ್ನು ತೆರೆಯಲು ಸಹ ಅವರಿಗೆ ಅವಕಾಶ ನೀಡಬಹುದು. 10 ವರ್ಷಕ್ಕಿಂತ ಕಡಿಮೆಯಿಲ್ಲದ ಮತ್ತು ಅಂತಹ ಮೊತ್ತ ಮತ್ತು ಅಂತಹ ನಿಯಮಗಳವರೆಗೆ ಅಪ್ರಾಪ್ತ ವಯಸ್ಕರು ತಮ್ಮ ಅಪಾಯ ನಿರ್ವಹಣಾ ನೀತಿಯನ್ನು ಗಮನದಲ್ಲಿಟ್ಟುಕೊಂಡು ಬ್ಯಾಂಕುಗಳು ನಿಗದಿಪಡಿಸಬಹುದಾದ ನಿಯಮಗಳವರೆಗೆ, ಅವರು ಬಯಸಿದರೆ, ಸ್ವತಂತ್ರವಾಗಿ ಉಳಿತಾಯ/ಅವಧಿ ಠೇವಣಿ ಖಾತೆಗಳನ್ನು…

Read More

ಬೆಂಗಳೂರು: ನಾಳೆಯಿಂದ ಅಧಿಸೂಚನೆ ಹೊರಬೀಳಬೇಕಿದ್ದಂತ 222 ಗ್ರಾಮ ಪಂಚಾಯ್ತಿ ಉಪ ಚುನಾವಣೆಯ ದಿನಾಂಕವನ್ನು ಮುಂದೂಡಿಕೆ ಮಾಡಲಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಗ್ರಾಮ ಪಂಚಾಯ್ತಿ ಉಪ ಚುನಾವಣೆ ಮುಂದೂಡಿಕೆ ಮಾಡುವಂತೆ ಮನವಿ ಮಾಡಿದ್ದರು. ಅಲ್ಲದೇ ಸಿಎಸ್ ಕೂಡ ಹೆಚ್ಚಿನ ಸಮಯಾವಕಾಶ ಕೋರಿದ್ದರು. ಇನ್ನೂ ನಾಳೆಯಿಂದ ಗ್ರಾಮ ಪಂಚಾಯ್ತಿ ಉಪ ಚುನಾವಣೆಗೆ ಅಧಿಸೂಚನೆ ಹೊರ ಬಿದ್ದರೇ ಮಲೆಮಹದೇಶ್ವರ ಬೆಟ್ಟದಲ್ಲಿ ನಿಗದಿಯಾಗಿದ್ದಂತ ಸಚಿವ ಸಂಪುಟ ಸಭೆಗೂ ನೀತಿಸಂಹಿತೆ ಅಡ್ಡಿಯಾಗುತ್ತಿತ್ತು. ಏಪ್ರಿಲ್.24ರಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ನಿಗದಿಯಾಗಿರುವಂತ ರಾಜ್ಯ ಸಚಿವ ಸಂಪುಟ ಸಭೆಗೆ ಗ್ರಾಮ ಪಂಚಾಯ್ತಿ ಉಪ ಚುನಾವಣೆಯ ನೀತಿಸಂಹಿತೆ ಅಡ್ಡಿಯಾಗುವ ಕಾರಣ, ಉಪ ಚುನಾವಣೆಯ ದಿನಾಂಕವನ್ನು ಮುಂದೂಡಿಕೆ ಮಾಡಲಾಗಿದೆ. ಅಂದಹಾಗೇ ನಾಳೆಯಿಂದ 222 ಗ್ರಾಮ ಪಂಚಾಯ್ತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿದ್ದಂತ ಸ್ಥಾನಗಳಿಗೆ ಉಪ ಚುನಾವಣೆಗೆ ಅಧಿಸೂಚನೆ ಹೊರ ಬೀಳಬೇಕಿತ್ತು. ಆದರೇ ಇಂದು ದಿಢೀರ್ ದಿನಾಂಕವನ್ನು ಮುಂದೂಡಿಕೆ ಮಾಡಲಾಗಿದೆ.

Read More

ಶಿವಮೊಗ್ಗ: ಇಂದು ಸರ್ಕಾರಿ ನೌಕರರ ದಿನಾಚರಣೆ. ಈ ಸುಸಂದರ್ಭದಲ್ಲಿ ಸಾಗರ ತಾಲ್ಲೂಕು ಸರ್ಕಾರಿ ನೌಕರರಿಗೆ ಸರ್ಕಾರಿ ನೌಕರರ ದಿನಾಚರಣೆಯ ಶುಭಾಷಯವನ್ನು ಅಧ್ಯಕ್ಷ ಸಂತೋಷ್ ಕುಮಾರ್ ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು /ಪದಾಧಿಕಾರಿಗಳಿಂದ ಸಾಗರ ತಾಲೂಕಿನ ಸಮಸ್ತ ಎಲ್ಲಾ ಇಲಾಖೆ ನೌಕರರ ಭಾಂದವರಿಗೆ ಸರ್ಕಾರಿ ನೌಕರರ ದಿನಾಚಾರಣೆ ಶುಭಾಶಯಗಳು ಅಂತ ಹೇಳಿದ್ದಾರೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಹಾಗೂ ಅವರ ಕುಟುಂಬದ ಸದಸ್ಯರಿಗೆ ಉಚಿತ ಆರೋಗ್ಯ ಚಿಕಿತ್ಸೆಯನ್ನು ನೀಡುವ “ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯ ನೋಂದಣಿಗೆ” ಚಾಲನೆ ನೀಡಿದ್ದಾರೆ ಎಂಬುದಾಗಿ ಮಾಹಿತಿ ಹಂಚಿಕೊಂಡಿದ್ದಾರೆ. ರಾಜ್ಯ ಸರ್ಕಾರಿ ನೌಕರರು ಸೇರಿದಂತೆ ಸುಮಾರು 22 ಲಕ್ಷ ಕುಟುಂಬದ ಸದಸ್ಯರಿಗೆ ಉಚಿತ ಆರೋಗ್ಯ ಚಿಕಿತ್ಸೆ ನೀಡುವ ಯೋಜನೆ ಇದಾಗಿದೆ. ಸುಮಾರು 2000 ಚಿಕಿತ್ಸಾ ವಿಧಾನಗಳಿಗೆ ಸರ್ಕಾರಿ ನೌಕರಿಗೆ ಈ ಉಚಿತ ಸೌಲಭ್ಯ ಸಿಗಲಿದೆ. ಎಲ್ಲಾ ರೀತಿಯ ರೋಗಗಳಿಗೆ…

Read More

ಧಾರವಾಡ: ಗಿಗ್ ಆರ್ಥಿಕತೆಯಲ್ಲಿ ಪ್ರಮುಖ ಪಾತ್ರವಹಿಸುವ ಕಾರ್ಮಿಕರ ಆರೋಗ್ಯವನ್ನು ಗಮನದಲ್ಲಿ ಇಟ್ಟುಕೊಂಡು ಅಗ್ರಿಗೇಟರ್ ಸಂಸ್ಥೆಗಳಿಂದ ಸುಂಕ ಸಂಗ್ರಹವನ್ನು ಮಾಡಲಾಗುವುದು ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಹೇಳಿದರು. ಧಾರವಾಡದಲ್ಲಿ ವಾರ್ತಾ ಇಲಾಖೆಯ ಗಾಂಧಿ ಭವನ ಉದ್ಘಾಟನಾ ಸಮಾರಂಭದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶೇ 5 ರಷ್ಟು ಸುಂಕ ಸಂಗ್ರಹಿಸಲಾಗುವುದು ಎಂಬ ವರದಿಗಳಿಗೆ ಆಕ್ಷೇಪ ವ್ಯಕ್ತವಾಗಿರುವುದರ ಬಗ್ಗೆ ಪ್ರತಿಕ್ರಿಯಿಸಿದರು. ಗಿಗ್ ಕಾರ್ಮಿಕರು ತಮ್ಮ ಆರೋಗ್ಯವನ್ನು ಲೆಕ್ಕಿಸದೆ ಕೆಲಸ ಮಾಡುತ್ತಾರೆ. ಅವರು ಸಾಮಾನ್ಯವಾಗಿ ಸೈಕಲ್ ಹಾಗೂ ಮೋಟಾರ್ ಬೈಕ್‍ಗಳಲ್ಲಿ ಡೆಲಿವರಿ ಕೆಲಸ ಮಾಡುತ್ತಾರೆ. ಹೀಗೆ ಅವರು ರಸ್ತೆಯಲ್ಲಿ ಸಾಗುವಾಗ ಅವರು ಸೇವಿಸುವ ಇಂಗಾಲದ ಪ್ರಮಾಣವೂ ಅಧಿಕವಾಗಿರುತ್ತದೆ. ತಮ್ಮ ಆರೋಗ್ಯವನ್ನೂ ಲೆಕ್ಕಿಸದೇ ಕುಟುಂಬಕ್ಕಾಗಿ ಅವರು ದುಡಿಯುತ್ತಾರೆ. ಇದನ್ನು ಗಮನದಲ್ಲಿಟ್ಟುಕೊಂಡು ಸೆಸ್ ಸಂಗ್ರಹ ಮಾಡಲಾಗುವುದು ಎಂದು ವಿವರಿಸಿದರು. ಒಬ್ಬ ಗಿಗ್ ಕಾರ್ಮಿಕ ಸರಾಸರಿ ಇಪ್ಪತ್ತು ವರ್ಷ ಕೆಲಸ ಅವನು ಸೇವಿಸುವ ಕಾರ್ಬನ್ ಡೈ ಆಕ್ಸೆಡ್ ಪ್ರಮಾಣವೂ ಸಾಕಷ್ಟು ಇರುತ್ತದೆ.…

Read More

ಬೆಂಗಳೂರು: ರಾಜ್ಯದ 222 ಗ್ರಾಮ ಪಂಚಾಯ್ತಿಗಳಿಗೆ ಉಪ ಚುನಾವಣೆ ಘೋಷಣೆ ಮಾಡಲಾಗಿತ್ತು. ಆದರೇ ದಿಢೀರ್ 15 ದಿನಗಳ ಮಟ್ಟಿಗೆ ಗ್ರಾಮ ಪಂಚಾಯ್ತಿ ಉಪ ಚುನಾವಣೆ ಮುಂದೂಡಿಕೆ ಮಾಡಲಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳ ವಿವಿಧ ಕಾರಣಗಳಿಂದ ತೆರವಾಗಿರುವ, ಖಾಲಿಯಿರುವ ಗ್ರಾಮ ಪಂಚಾಯತ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆಯನ್ನು ಜರುಗಿಸಲು ರಾಜ್ಯ ಚುನಾವಣೆ ಆಯೋಗವು ಆದೇಶಿಸಿ ವೇಳಾಪಟ್ಟಿಯೊಂದಿಗೆ ಸೂಚಿಸಿತ್ತು. ಆದರೆ ರಾಜ್ಯ ಚುನಾವಣೆ ಆಯೋಗವು ಸದರಿ ಗ್ರಾಮ ಪಂಚಾಯತ ಉಪ ಚುನಾವಣೆಗಳನ್ನು 15 ದಿನಗಳ ಮಟ್ಟಿಗೆ ಮುಂದೂಡಿ ಇಂದು ಆದೇಶಿಸಿದೆ. ಕಾರಣ ಈ ಕುರಿತು ಉಪ ಚುನಾವಣೆಯನ್ನು ಜರುಗಿಸುವ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಪ್ರಚುರ ಪಡಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸರ್ಕಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. https://kannadanewsnow.com/kannada/hdk-thanks-pm-modi-for-imposing-12-safety-duty-on-steel-imports/ https://kannadanewsnow.com/kannada/cm-launches-state-governments-online-training-portal-karnataka-arogya-sanjeevini-scheme/

Read More

ನವದೆಹಲಿ: ದೇಶೀಯ ಉಕ್ಕು ಉದ್ಯಮದ ಹಿತರಕ್ಷಣೆ ನಿಟ್ಟಿನಲ್ಲಿ ಕೇಂದ್ರದ ನರೇಂದ್ರ ಮೋದಿ ಅವರ ಸರಕಾರ ರಕ್ಷಣಾತ್ಮಕ ಕ್ರಮ ಕೈಗೊಂಡಿದ್ದು; ಉಕ್ಕು ಆಮದಿನ ಮೇಲೆ ಕೇಂದ್ರವು ಶೇ.12ರಷ್ಟು ಸುರಕ್ಷತಾ ಸುಂಕವನ್ನು ವಿಧಿಸಿದೆ. ಈ ನಿಟ್ಟಿನಲ್ಲಿ ಕೇಂದ್ರದ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೃತಜ್ಞತೆ ಸಲ್ಲಿಸಿದ್ದು, ಈ ಉಪಕ್ರಮವು ದೇಶೀಯ ಉಕ್ಕು ಉದ್ಯಮಕ್ಕೆ ಪ್ರೋತ್ಸಾಹದ ಜತೆಗೆ ಮತ್ತಷ್ಟು ಶಕ್ತಿ ತುಂಬಲಿದೆ ಎಂದು ಹೇಳಿದ್ದಾರೆ. ಮಿಶ್ರಲೋಹವಲ್ಲದ ಮತ್ತು ಮಿಶ್ರಲೋಹದ ಉಕ್ಕಿನಿಂದ ತಯಾರಿಸಿದ ಕೆಲವು ಉತ್ಪನ್ನಗಳ ಆಮದಿನ ಮೇಲೆ ಶೇ.12ರಷ್ಟು ಸುರಕ್ಷತಾ ಸುಂಕ ವಿಧಿಸುವ ನಿರ್ಧಾರವನ್ನು ಸೋಮವಾರ ಕೈಗೊಂಡಿದೆ. ಇದಕ್ಕೆ ಸಂಬಂಧಿಸಿ ಕೇಂದ್ರವು ಅಧಿಸೂಚನೆಯನ್ನು ಹೊರಡಿಸಿದೆ. ಈ ನಿರ್ಧಾರವನ್ನು ಸಚಿವ ಹೆಚ್.ಡಿ. ಕುಮಾರಸ್ವಾಮಿ ಸ್ವಾಗತಿಸಿದ್ದು, ಆಮದು ಹೆಚ್ಚಳದ ಪ್ರತಿಕೂಲಕರ ಪರಿಣಾಮಗಳಿಂದ ದೇಶೀಯ ಉಕ್ಕು ತಯಾರಕರನ್ನು ರಕ್ಷಿಸಲು ಮತ್ತು ಮಾರುಕಟ್ಟೆಯಲ್ಲಿ ನ್ಯಾಯಯುತ ಸ್ಪರ್ಧೆಯನ್ನು ಖಾತ್ರಿಪಡಿಸಿಕೊಳ್ಳಲು ಈ ಕ್ರಮವು ಸಕಾಲಿಕ ಮತ್ತು ಅಗತ್ಯ ಕ್ರಮವಾಗಿದೆ ಎಂದು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಕರ್ನಾಟಕ ಸಂಜೀವನಿ ಯೋಜನೆಗೆ ಕುಟುಂಬಸ್ಥರ ನೋಂದಣಿಗೆ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ. ಅದು ಹೇಗೆ ಎನ್ನುವ ಬಗ್ಗೆ ಮುಂದೆ ಓದಿ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ವಿಶೇಷ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ರಾಜ್ಯ ಆಯವ್ಯಯದಲ್ಲಿ ಘೋಷಿಸಿದಂತೆ ರಾಜ್ಯ ಸರ್ಕಾರವು ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ಕರ್ನಾಟಕ ಆರೋಗ್ಯ ಸಂಜೀವಿನಿ (KASS) ಯೋಜನೆಯ ಮೂಲಕ ನಗದು ರಹಿತ ಆರೋಗ್ಯ ಸೇವೆಗಳನ್ನು ಒದಗಿಸುವ ವಿನೂತನ ಯೋಜನೆಯನ್ನು ರೂಪಿಸಿದ್ದು, ಈ ಯೋಜನೆಯು ಶೀಘ್ರದಲ್ಲಿ ಅನುಷ್ಠಾನಗೊಳ್ಳಲಿದೆ. ಈ ಯೋಜನೆಯನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೂಲಕ ಅನುಷ್ಠಾನಗೊಳಿಸಲಾಗುತ್ತಿದೆ ಎಂದಿದ್ದಾರೆ. ಈ ಯೋಜನೆಯ ಕಾರ್ಯನೀತಿ ಸೂಚನೆಗಳನ್ನು ಸರ್ಕಾರದ ಆದೇಶ ಸಂಖ್ಯೆ:ಸಿಆಸುಇ 16 ಎಸ್ ಎಂಆರ್ 2020 ರ ದಿನಾಂಕ:17.08.2021, 05.09.2022, 09.03.2023 ಹಾಗೂ ದಿನಾಂಕ: 02.04.2025 ಗಳಲ್ಲಿ ನೀಡಲಾಗಿದೆ. KASS ಯೋಜನೆಯು ರಾಜ್ಯ ಸರ್ಕಾರದ ನೌಕರರಿಗೆ ಐಚ್ಛಿಕವಾಗಿದ್ದು, ಯೋಜನೆಯಡಿ ಸರ್ಕಾರಿ ನೌಕರರು ವೈದ್ಯಕೀಯ ಸೌಲಭ್ಯ ಪಡೆಯಲು…

Read More

ಬೆಂಗಳೂರು: ರಾಜ್ಯದ ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್ ಎನ್ನುವಂತೆ ಆನ್ ಲೈನ್ ಮೂಲಕ ಸರ್ಕಾರಿ ನೌಕರರಿಗೆ ತರಬೇತಿ ನೀಡುವಂತ ಪೋರ್ಟಲ್ ಗೆ ಇಂದು ಸಿಎಂ ಸಿದ್ಧರಾಮಯ್ಯ ಚಾಲನೆ ನೀಡಿದ್ದಾರೆ. ರಾಜ್ಯ ಸರ್ಕಾರದ  ತರಬೇತಿ ನೀತಿ 1997 ರಂತೆ, ಆಡಳಿತ ತರಬೇತಿ ಸಂಸ್ಥೆ, ಮೈಸೂರು, ಜಿಲ್ಲಾ ತರಬೇತಿ ಕೇಂದ್ರಗಳು ಮತ್ತು ಸಚಿವಾಲಯ ತರಬೇತಿ ಸಂಸ್ಥೆಯ ಮೂಲಕ ಸಿಬ್ಬಂದಿಗೆ ಸಾಮರ್ಥ್ಯಾಭಿವೃದ್ಧಿ ತರಬೇತಿಯನ್ನು ನೀಡುವ ಮಹತ್ವದ ಹೆಜ್ಜೆ ಕೈಗೊಳ್ಳಲಾಗಿದೆ. ಇನ್ನು ಮುಂದೆ ತರಬೇತಿ ಕೇವಲ ಭೌತಿಕವಷ್ಟೇ ಅಲ್ಲದೆ, I-GoT ವೇದಿಕೆಯ ಸಹಭಾಗಿತ್ವದಲ್ಲಿ https://atimysore.karnataka.gov.in ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿಯೂ ಇದನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲಾಗಿದೆ.  ಪ್ರಸ್ತುತ 4,55,746 ಸರ್ಕಾರಿ ನೌಕರರು ಈ ವೇದಿಕೆಯಲ್ಲಿ ನೋಂದಣಿ ಮಾಡಿರುತ್ತಾರೆ.    ಸರ್ಕಾರಿ ನೌಕರರು ಅವರ HRMS ಮೊಬೈಲ್‌ ಸಂಖ್ಯೆಯ ಮೂಲಕ I-GoT ವೇದಿಕೆಯಲ್ಲಿ ಲಾಗಿನ್‌ ಆಗಿ ತರಬೇತಿ ಪಡೆಯಬಹುದಾಗಿದೆ. ಆದುದರಿಂದ, ಕೆಲಸದ ಹೊರೆ ಅಥವಾ ಸಿಬ್ಬಂದಿ ಕೊರತೆಯಿಂದಾಗಿ ವೈಯಕ್ತಿಕವಾಗಿ ತರಬೇತಿಗಳಿಗೆ ಹಾಜರಾಗಲು ಸಾಧ್ಯವಾಗದ ಸರ್ಕಾರಿ ನೌಕರರು ಈ ಸೌಲಭ್ಯವನ್ನು…

Read More