Author: kannadanewsnow09

ನವದೆಹಲಿ: 611 ಕೋಟಿ ರೂ.ಗಳ ಹೂಡಿಕೆ ವಹಿವಾಟಿನಲ್ಲಿ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ) ಉಲ್ಲಂಘಿಸಿದ ಆರೋಪದ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಪೇಟಿಎಂನ ಮಾತೃ ಕಂಪನಿ ಒನ್ 97 ಕಮ್ಯುನಿಕೇಷನ್ಸ್ಗೆ ಶೋಕಾಸ್ ನೋಟಿಸ್ ನೀಡಿದೆ. ಫೆಬ್ರವರಿ 27 ರಂದು ನೋಟಿಸ್ ನೀಡಲಾಗಿದ್ದು, 2015 ಮತ್ತು 2019 ರ ನಡುವಿನ ಹಣಕಾಸು ವ್ಯವಹಾರಗಳಿಗೆ ಸಂಬಂಧಿಸಿದೆ, ಮುಖ್ಯವಾಗಿ ಪೇಟಿಎಂ ತನ್ನ ಅಂಗಸಂಸ್ಥೆಗಳಾದ ಲಿಟಲ್ ಇಂಟರ್ನೆಟ್ ಮತ್ತು ನಿಯರ್ಬೈ ಇಂಡಿಯಾವನ್ನು ಸ್ವಾಧೀನಪಡಿಸಿಕೊಳ್ಳುವುದಕ್ಕೆ ಸಂಬಂಧಿಸಿದೆ. ಪೇಟಿಎಂ ಶನಿವಾರ ನಿಯಂತ್ರಕ ಫೈಲಿಂಗ್ನಲ್ಲಿ ಈ ಬೆಳವಣಿಗೆಯನ್ನು ದೃಢಪಡಿಸಿದ್ದು, “ನಾವು ಪ್ರಸ್ತುತ ಕಾನೂನು ಸಲಹೆಯನ್ನು ಪಡೆಯುತ್ತಿದ್ದೇವೆ ಮತ್ತು ನಮ್ಮ ಆಯ್ಕೆಗಳನ್ನು ಮೌಲ್ಯಮಾಪನ ಮಾಡುತ್ತಿದ್ದೇವೆ” ಎಂದು ಹೇಳಿದೆ. 2017 ರ ಡಿಸೆಂಬರ್ನಲ್ಲಿ ಒನ್ 97 ಕಮ್ಯುನಿಕೇಷನ್ಸ್ ಸ್ವಾಧೀನಪಡಿಸಿಕೊಳ್ಳುವ ಮೊದಲು ಕೆಲವು ಉಲ್ಲಂಘನೆಗಳು ನಡೆದಿರಬಹುದು ಎಂದು ಸೂಚಿಸುವ ಕೆಲವು ಫ್ಲ್ಯಾಗ್ ಮಾಡಿದ ವಹಿವಾಟುಗಳು ಈ ಅಂಗಸಂಸ್ಥೆಗಳ ಮಾಲೀಕತ್ವಕ್ಕೆ ಮುಂಚಿತವಾಗಿವೆ ಎಂದು ಕಂಪನಿ ಸಮರ್ಥಿಸಿಕೊಂಡಿದೆ. ಈ ಸ್ವಾಧೀನಗಳು ಡಿಜಿಟಲ್ ಪಾವತಿಗಳನ್ನು ಮೀರಿ ವಿಸ್ತರಿಸುವ ಆಫ್ಲೈನ್…

Read More

ಯಾದಗಿರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಭವಿಷ್ಯ, ಸಿಎಂ ಬದಲಾವಣೆ ಹಾಗೂ ವರ್ಷದ ಆಗುಹೋಗುಗಳ ಬಗ್ಗೆ ಕೋಡಿಮಠ ಶ್ರೀಗಳು ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ಈ ಕುರಿತಂತೆ ಕೋಡಿಮಠದ ಡಾ.ಶಿವಯೋಗಿ ಶಿವಾನಂದ ಸ್ವಾಮೀಜಿಯ ಅವರು ಸುದ್ದಿಗಾರರೊಂದಿಗೆ ಮಾತನಾಡಿದ್ದು, ಸಿಎಂ ಸ್ಥಾನದಿಂದ ಸಿದ್ಧರಾಮಯ್ಯ ಕೆಳಗೆ ಇಳಿಯೋದು ಕಷ್ಟ. ಸ್ವತಃ ಸಿದ್ಧರಾಮಯ್ಯ ಅವರೇ ಅಧಿಕಾರ ತ್ಯಜಿಸಬೇಕಾಗುತ್ತದೆ ಎಂದಿದ್ದಾರೆ. ಮುಂದಿನ ಸಿಎಂ ಯಾರಾಗ್ತಾರೆ, ಡಿಕೆ ಶಿವಕುಮಾರ್ ಜೊತೆ ಅಧಿಕಾರ ಹಂಚಿಕೆ ಯಾವಾಗ ಎಂಬ ಚರ್ಚೆಯ ನಡುವೆ, ಈ ಭವಿಷ್ಯವಾಣಿ ಹೊರಬಿದ್ದಿದೆ. ಅಲ್ಲದೇ ಕೋಡಿಮಠ ಶ್ರೀ ಭವಿಷ್ಯವಾಣಿಯಲ್ಲಿ ಸಿಎಂ ಸಿದ್ಧರಾಮಯ್ಯ ಅವರ ಮುಖ್ಯಮಂತ್ರಿ ಸ್ಥಾನ ಭದ್ರ ಎಂಬುದಾಗಿಯೇ ತಿಳಿಸಿದ್ದಾರೆ. ಹಾಲು ಮತ ಸಮಾಜವು ಪ್ರಾಚೀನ ಕಾಲದಿಂದ ದೈವಾರಾಧನೆ ಮಾಡುವ ಸಮಾಜವಾಗಿದೆ. ಹಾಲು ಕೆಟ್ಟರೂ ಹಾಲು ಸಮಾಜ ಕೆಡದು. ಹಕ್ಕ ಬುಕ್ಕರು ವಿಜಯನಗರ ಸಾಮ್ರಾಜ್ಯ ಕಟ್ಟಿದರು. ಹಾಲು ಮತ ಸಮಾಜದವರಲ್ಲಿ ರಾಜ್ಯದ ಅಧಿಕಾರವಿದೆ. ಸಿಎಂ ಕುರ್ಚಿಯಿಂದ ಬಿಡಿಸುವುದು ಕಷ್ಟ. ಅದು ಸುಲಭವೂ ಅಲ್ಲ. ಸಿಎಂ ಸಿದ್ಧರಾಮಯ್ಯ ಅವರು ಅವರಾಗೇ ಸಿಎಂ…

Read More

ಯಾದಗಿರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರ ರಾಜಕೀಯ ಭವಿಷ್ಯದ ಬಗ್ಗೆ, ಈ ವರ್ಷದ ಆಗುಹೋಗುಗಳ ಬಗ್ಗೆ ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಕೋಡಿಮಠದ ಡಾ.ಶಿವಯೋಗಿ ಶಿವಾನಂದ ಸ್ವಾಮೀಜಿ ಅವರು, ಸಿದ್ಧರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿಯೋದು ಕಷ್ಟ. ಸ್ವತಃ ಸಿದ್ಧರಾಮಯ್ಯನವರೇ ಅಧಿಕಾರ ತ್ಯಜಿಸಬೇಕಾಗುತ್ತದೆ ಎಂಬುದಾಗಿ ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ಮುಂದಿನ ಸಿಎಂ ಡಿ.ಕೆ ಶಿವಕುಮಾರ್ ಎನ್ನುವ ಚರ್ಚೆಯ ನಡುವೆ, ಸಿಎಂ ಸ್ಥಾನ ಸಿದ್ಧರಾಮಯ್ಯ ಅವರಿಗೆ ಭದ್ರ ಎಂಬುದಾಗಿಯೂ ಕೋಡಿ ಮಠ ಶ್ರೀ ಭವಿಷ್ಯವಾಣಿಯಾಗಿದೆ. ಇನ್ನೂ ರಾಜ್ಯದಲ್ಲಿ ಉತ್ತಮ ಮಳೆ, ಬೆಳೆ ಮತ್ತು ಸುಭೀಕ್ಷೆ ಇರುತ್ತದೆ. ಆದರೇ ಜಾಗತಿಕವಾಗಿ ತೊಂದರೆ ಹೆಚ್ಚಾಗಲಿದೆ. ಭೂಕಂಪ, ಸುನಾಮಿಗಳು ಹೆಚ್ಚಾಗುವ ಸಾಧ್ಯತೆ ಇದೆ. ಯುಗಾದಿ ನಂತ್ರ ವಿವರವಾದ ಭವಿಷ್ಯ ನುಡಿಯುವುದಾಗಿ ಹೇಳಿದ್ದಾರೆ. https://kannadanewsnow.com/kannada/state-govt-to-launch-campaign-to-detect-bpl-cards-of-ineligible-people-at-panchayat-level-to-be-cancelled-soon/ https://kannadanewsnow.com/kannada/navarasa-nayaka-jaggesh-suggests-this-to-dcm-dk-shivakumar/

Read More

ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ನೆಟ್ಟು, ಬೋಲ್ಟ್ ಟೈಟ್ ಮಾಡುವುದಾಗಿ ನಟರಿಗೆ ನೇರವಾಗಿಯೇ ಎಚ್ಚರಿಕೆಯನ್ನು ಕೊಟ್ಟಿದ್ದರು. ಈ ಬೆನ್ನಲ್ಲೇ ನವರಸ ನಾಯಕ ಜಗ್ಗೇಶ್ ಕೆಲ ಸಲಹೆ ನೀಡಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಕಲಾವಿದರು ಒಟ್ಟುಗೂಡಲೆಂದೆ ಡಾ:ರಾಜಕುಮಾರ ರವರು ಕಲಾವಿದರ ಸಂಘ ಮಾಡಿದ್ದರು ದೌರ್ಭಾಗ್ಯ ಅದು ಇಂದು ನಿಷ್ಕ್ರಿಯಗೊಂಡಿದೆ ಕೂಡಲೆ ನಿಮ್ಮ ಅಧಿಕಾರಿಗಳಿಗೆ ಸೂಚಿಸಿ ಎಲೆಕ್ಷನ್ ಮಾಡಿಸಿ ಎಂದಿದ್ದಾರೆ. ಇನ್ನೂ ಕಲಾವಿದರು ಒಂದೆಡೆ ಕೂರುವಂತೆ ಮಾಡಿ..ಒಗ್ಗಟ್ಟು ಇರುವ ಮನೆ ಹಾಳಾದ ನಿದರ್ಶನವಿಲ್ಲ. ಚಿತ್ರರಂಗದ ಸಮಸ್ಯೆ ಅನೇಕ.ನಿಮ್ಮ ಗಮನಕ್ಕಾಗಿ ತಂದಿರುವೆ ಅಂತ ಡಿಸಿಎಂ ಡಿ.ಕೆ ಶಿವಕುಮಾರ್ ಸಲಹೆ ಮಾಡಿದ್ದಾರೆ. https://twitter.com/Jaggesh2/status/1896065831442022519 https://kannadanewsnow.com/kannada/state-govt-to-launch-campaign-to-detect-bpl-cards-of-ineligible-people-at-panchayat-level-to-be-cancelled-soon/ https://kannadanewsnow.com/kannada/breaking-congress-gets-more-commission-than-bjp-alleges-contractors-association/

Read More

ಬೆಂಗಳೂರು: “ನಾಡು, ನುಡಿ, ನೆಲ, ಜಲದ ಹೋರಾಟಕ್ಕೆ ಚಿತ್ರರಂಗದ ಸಹಕಾರ, ಬೆಂಬಲ, ಬದ್ಧತೆ ಇರಬೇಕು. ಆದರೆ ಮೇಕೆದಾಟು ಹೋರಾಟಕ್ಕೆ ಚಿತ್ರರಂಗದಿಂದ ಸರಿಯಾದ ಸಹಕಾರ ಸಿಗದೇ ಹೋದದ್ದರ ಬಗ್ಗೆ ನೋವು ಮತ್ತು ಸಿಟ್ಟು ಇದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ನೇರವಾಗಿ ಹೇಳಿದರು. ವಿಧಾನಸೌಧದ ಮುಂಭಾಗದಲ್ಲಿ ನಡೆದ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಶನಿವಾರ ಮಾತನಾಡಿದರು. “ನನಗೆ ಸಿನಿಮಾರಂಗದವರ ಮೇಲೆ ಕೋಪ ಇದೆ. ಚಲನಚಿತ್ರ ವಾಣಿಜ್ಯ ಮಂಡಳಿ, ನಟರ ಮೇಲೆ ಸಿಟ್ಟಿದೆ. ನಾವು ಕಷ್ಟ ಕಾಲದಲ್ಲಿ ಬೆಂಗಳೂರಿಗೆ ಕುಡಿಯುವ ನೀರು ದೊರಕಿಸಲು “ನಮ್ಮ ನೀರು, ನಮ್ಮ ಹಕ್ಕು ಎಂದು ಮೇಕೆದಾಟು ಪಾದಯಾತ್ರೆ ಮಾಡಿದೆವು. ಕೋವಿಡ್ ಸಮಯದಲ್ಲಿ ನಾನು, ಸಿದ್ದರಾಮಯ್ಯ ಅವರು ಸುಮಾರು 150 ಕಿ.ಮೀ ಪಾದಯಾತ್ರೆ ಮಾಡಿದೆವು. ನಾವು ನಮ್ಮ ಸ್ವಂತಕ್ಕಾಗಿ ಈ ಹೋರಾಟ ಮಾಡಲಿಲ್ಲ. ರಾಜ್ಯದ ಹಿತಕ್ಕಾಗಿ ನಡೆದೆವು. ಆದರೆ ಖುದ್ದು ಆಹ್ವಾನ ಕೊಟ್ಟರೂ ಒಂದಿಬ್ಬರನ್ನು ಹೊರತುಪಡಿಸಿ ಚಿತ್ರರಂಗದವರು ತಿರುಗಿ ನೋಡಲಿಲ್ಲ” ಎಂದು ಬೇಸರ…

Read More

ದಾವಣಗೆರೆ: ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಅನಧಿಕೃತ ಸ್ವತ್ತುಗಳಿಗೆ ಇ-ಖಾತಾ ನೀಡುವ ಸಂಬಂಧ ಕಾಯ್ದೆ ಮತ್ತು ನಿಯಮಗಳನ್ನು ತಿದ್ದುಪಡಿ ಮಾಡಲಾಗಿರುತ್ತದೆ. ಅಸ್ತಿ ಮಾಲೀಕರು ತಮ್ಮ ಅಸ್ತಿಗಳಿಗೆ ಈ ಕೆಳಕಂಡ ದಾಖಲೆಗಳನ್ನು ನೀಡಿ ಇ-ಖಾತಾ ಪಡೆದುಕೊಳ್ಳಬಹುದು. ಇದರಿಂದ ಅನಧಿಕೃತ ಸ್ವತ್ತುಗಳ ಮಾಲೀಕರು ತಮ್ಮ ಸ್ವತ್ತಿನ ಕಂದಾಯವನ್ನು ಪಾವತಿಸಿ, ಇ-ಖಾತಾ ಪಡೆಯಬಹುದು. ಸ್ವತ್ತಿನ ಮಾಲೀಕರು ತಮ್ಮ ನಗರ ಸ್ಥಳೀಯ ಸಂಸ್ಥೆಗೆ ಭೇಟಿ ನೀಡಿ ಅಧಿಕೃತ ಆಸ್ತಿಗಳಿಗೆ ಇ-ಖಾತಾ ಪಡೆಯಲು ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು. ಸ್ವತ್ತಿನ ಮಾಲೀಕತ್ವದ ದಾಖಲೆಗಳಾದ ನೋಂದಾಯಿತ ಪತ್ರಗಳು, ಸಕ್ಷಮ ಪ್ರಾಧಿಕಾರದಿಂದ ಅನುಮೋದನೆಯಾದ ದೃಢೀಕೃತ ಪ್ರತಿ ಮತ್ತು ನಿವೇಶನಗಳ ಬಿಡುಗಡೆ ಪತ್ರ, ಚಾಲ್ತಿ ಸಾಲಿನವರೆಗೆ ಕಂದಾಯ ಪಾವತಿ ರಶೀದಿ, ಋಣಭಾರ ಪ್ರಮಾಣ ಪತ್ರ ಹಾಗೂ ಮಾಲೀಕರ ಫೆÇೀಟೋ, ಆಸ್ತಿ ಇರುವ ಸ್ಥಳದ ಪೆÇೀಟೋ, ಮಾಲೀಕರ ಗುರುತಿನ ದಾಖಲೆ ಪ್ರತಿಯನ್ನು ಸಲ್ಲಿಸಬೇಕು. ಅರ್ಜಿಯನ್ನು ಸಲ್ಲಿಸಿದ 7 ದಿನಗಳ ಒಳಾಗಾಗಿ ಇ-ಖಾತಾ ಪಡೆಯಬಹುದು. ಅನಧೀಕೃತ ಸ್ವತ್ತುಗಳಿಗೆ ಇ-ಖಾತಾ ಪಡೆಯಲು ಸಲ್ಲಿಸಬೇಕಾದ ದಾಖಲೆಗಳು: ಆಸ್ತಿಗೆ ಸಂಬಂಧಿಸಿದಂತೆ…

Read More

ಬೆಂಗಳೂರು: 2025ರ ಬೇಸಿಗೆ ಋತುಮಾನ ಮಾರ್ಚ್ – ಮೇವರೆಗೆ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನ ಇರುವುದಾಗಿ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಈ ಕೆಳಕಂಡಂತೆ ಮಾಹಿತಿಯನ್ನು ಹವಾಮಾನ ಇಲಾಖೆ ನೀಡಿದೆ. ಗರಿಷ್ಟ ತಾಪಮಾನ : 2025 ರ ಬಿಸಿ ವಾತಾವರಣದ ಅವಧಿಯಲ್ಲಿ (ಮಾರ್ಚ್ ನಿಂದ ಮೇ (MAM)), ಉತ್ತರ ಒಲೆನಾಡು ಜಿಲ್ಲೆಗಳಿಗೆ ಹೆಚ್ಚಿನ ಭಾಗಗಳಲ್ಲಿ ಮತ್ತು ಕರಾವಳಿ ಕೆಲವು ಜಿಲ್ಲೆಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನದ ಸಾಧ್ಯತೆಗಳಿದೆ. ಆದರೆ, ದಕ್ಷಿಣ ಒಲೆನಾಡು ಜಿಲ್ಲೆಗಳಿಗೆ ಬಹುತೇಕ ಭಾಗಗಳಲ್ಲಿ ಮತ್ತು ಮಲೆನಾಡು ಕೆಲವು ಜಿಲ್ಲೆಗಳಲ್ಲಿ ಸಾಧಾರಣ ತಾಪಮಾನ ನಿಂದ ಗರಿಷ್ಠ ತಾಪಮಾನದ ಸಾಧ್ಯತೆಗಳಿದೆ. ಕನಿಷ್ಟ ತಾಪಮಾನ : 2025ರ ಬೇಸಿಗೆ (ಮಾರ್ಚ್ ಮೇ) ಅವಧಿಗೆ ರಾಜ್ಯದಾದ್ಯಂತ ಸಾಮಾನ್ಯಕ್ಕಿಂತ ಹೆಚ್ಚಿನ ಕನಿಷ್ಠ ತಾಪಮಾನದ ಸಾಧ್ಯತೆಗಳಿದೆ. ಬಿಸಿಗಾಳಿ ದಿನಗಳು : 2025ರ ಬೇಸಿಗೆ (ಮಾರ್ಚ್ – ಮೇ) ಅವಧಿಗೆ ರಾಜ್ಯದ ಹಲವೆಡೆ 2 ರಿಂದ 14 ದಿನಗಳು ಬಿಸಿಗಾಳಿ ದಿನಗಳು ಕಾಣಬರುವ ಸಾಧ್ಯತೆಗಳಿದ್ದು,…

Read More

ದಾವಣಗೆರೆ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮತ್ತು ಜಿಲ್ಲಾ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಹಯೋಗದಲ್ಲಿ ಮಾರ್ಚ್ 15 ರಂದು ನಗರದ ಸರ್ಕಾರಿ ಐಟಿಐ ಕಾಲೇಜ್‍ನ ಆವರಣದಲ್ಲಿ ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ. ಉದ್ಯೋಗದಾತ 40 ಕ್ಕೂ ಹೆಚ್ಚು ಬೃಹತ್ ಬಹುರಾಷ್ಟ್ರೀಯ ಕಂಪನಿಗಳು, ಕೈಗಾರಿಕೆಗಳು ಭಾಗವಹಿಸುತ್ತಿದ್ದು ವಿವಿಧ ಕ್ಷೇತ್ರಗಳಲ್ಲಿ ಸುಮಾರು ಅವಶ್ಯಕವಿರುವ 3000 ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಹ ಯುವಕ, ಯುವತಿಯರನ್ನು ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಆಸಕ್ತ ಯುವಕ ಯುವತಿಯರು ತಮ್ಮ ವಿದ್ಯಾರ್ಹತೆಯ ದಾಖಲಾತಿಗಳೊಂದಿಗೆ ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ ಪಡೆದವರು ಉದ್ಯೋಗಮೇಳದಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕ್ಯೂ.ಆರ್ ಕೋಡ್ ಲಿಂಕ್, Google Form Link: https://tinyurl.com/mnm8vykz , ಇಮೇಲ್ dsmodvg@gmail.com ದೂ.ಸಂ: 08192-259447, 7892956667 ಸಂಪರ್ಕಿಸಲು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಹಾಗೂ ಜಿ.ಪಂ ಸಿಇಓ ಸುರೇಶ್.ಬಿ.ಇಟ್ನಾಳ್ ತಿಳಿಸಿದ್ದಾರೆ. https://kannadanewsnow.com/kannada/state-govt-restores-medicines-worth-rs-17-lakh-in-a-major-step-to-curb-poor-quality-of-medicine/ https://kannadanewsnow.com/kannada/steps-will-be-taken-to-supply-water-to-the-last-part-of-bhadra-dam-dam-davanagere-dc-gangadhara-swamy/

Read More

ದಾವಣಗೆರೆ : ಭದ್ರಾ ಜಲಾಶಯದ ಕಾಲುವೆ ಮೂಲಕ ಬಿಡುವ ನೀರು ಕೊನೆ ಭಾಗದ ಅಚ್ಚುಕಟ್ಟು ದಾರರಿಗೂ ತಲುಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದೆಂದು ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ ಜಿ.ಎಂ ತಿಳಿಸಿದರು. ಶನಿವಾರ(ಮಾ.01) ರಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಭದ್ರಾಅಚ್ಚುಕಟ್ಟು ಪ್ರದೇಶದ ರೈತರೊಂದಿಗೆ ನಡೆಸಿದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಭದ್ರಾ ಜಲಾಶಯದಿಂದ ಅಚ್ಚುಕಟ್ಟು ದಾರರಿಗೆ ನೀರು ಹರಿಸಿ ಒಂದೆರಡು ದಿನಗಳಲ್ಲಿ ನಿಮ್ಮ ಸಮಸ್ಯೆಯನ್ನು ಬಗೆಹರಿಸುತ್ತೇನೆ ಎಂದು ರೈತರಿಗೆ ಭರವಸೆ ನೀಡಿದರು, ಕಾಲುವೆಗಳಿಗೆ ಅನಧಿಕೃತವಾಗಿ ಪಂಪ್ ಅಳವಡಿಸಿ ನೀರೆತ್ತಲಾಗುತ್ತಿದೆ, ಇದರಿಂದ ಕೊನೆ ಭಾಗದ ರೈತರಿಗೆ ನೀರು ಸಿಗುತ್ತಿಲ್ಲ. ಅನಧಿಕೃತ ಪಂಪ್ ಗಳನ್ನು ತೆರವು ಮಾಡಿ ವಿದ್ಯುತ್ ಸಂಪರ್ಕವನ್ನು ಕಡಿತ ಮಾಡಲಾಗುತ್ತದೆ ಎಂದರು. ಬೇಸಿಗೆಯಾಗಿರುವುದರಿಂದ ಗೇಟ್ ಗಳಲ್ಲಿ ನೀರಿನ ಸೋರಿಕೆ ಮತ್ತು ಕಾಲುವೆ ದುರಸ್ಥಿಗೆ ಅಗತ್ಯ ಅನುದಾನ ಬಿಡುಗಡೆಗೆ ಸರ್ಕಾರಕ್ಕೆ ಕಳುಹಿಸಲಾಗುತ್ತದೆ ಎಂದು ರೈತರಿಗೆ ತಿಳಿಸಿದರು. ಕಾಲುವೆಗಳ ನೀರು ನಿರ್ವಹಣೆಗೆ ಸಿಬ್ಬಂದಿಗಳ ಕೊರತೆ ಇದ್ದು ಈ ಸಮಸ್ಯೆಯನ್ನು ಬಗೆಹರಿಸಲು ಅಧೀಕ್ಷಕ ಇಂಜಿನಿಯರ್ ಗೆ ಸೂಚಿಸಿದರು. ಶಾಸಕರಾದ…

Read More

ಬೆಂಗಳೂರು: ಜನರ ಆರೋಗ್ಯದ ದೃಷ್ಠಿಯಿಂದ ಅಗತ್ಯ ಕ್ರಮ ಎನ್ನುವಂತೆ 17 ಲಕ್ಷ ಮೌಲ್ಯದ ಕಳಪೆ ಗುಣಮಟ್ಟದ ಔಷಧಗಳನ್ನು ಮಾರುಕಟ್ಟೆಯಿಂದ ವಾಪಾಸ್ ಕಳುಹಿಸಲಾಗಿದೆ ಅಂತ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಮಾದಕ ಔಷಧಿಗಳ ದುರ್ಬಳಕೆ ತಡೆಯುವ ನಿಟ್ಟಿನಲ್ಲಿ ₹17 ಲಕ್ಷ ಮೌಲ್ಯದ ಕಳಪೆ ಗುಣಮಟ್ಟದ ಔಷಧಿಗಳನ್ನು ಮಾರುಕಟ್ಟೆಯಿಂದ ಹಿಂಪಡೆಯಲಾಗಿದೆ. ನಿಯಮ ಉಲ್ಲಂಘನೆ ಕಂಡು ಬಂದ 75 ಸಂಸ್ಥೆಗಳ ವಿರುದ್ಧ ಮೊಕದ್ದಮೆಗೆ ಸೂಚಿಸಲಾಗಿದೆ. 400 ಔಷಧ ಮಳಿಗೆಗಳಿಗೆ ಕಾರಣ ಕೇಳಿ ನೋಟಿಸ್‌ ಜಾರಿ ಮಾಡಲಾಗಿದೆ. 213 ಸಂಸ್ಥೆಗಳ ಪರವಾನಗಿ ಅಮಾನತು ಪಡಿಸಿ, 3 ಔಷಧ ಮಳಿಗೆಗಳ ಪರವಾನಗಿ ರದ್ದುಪಡಿಸಲಾಗಿದೆ ಎಂದು ಹೇಳಿದ್ದಾರೆ. https://twitter.com/KarnatakaVarthe/status/1895827242560917524 https://kannadanewsnow.com/kannada/use-of-kannada-mandatory-on-products-manufactured-and-sold-in-karnataka-govt/ https://kannadanewsnow.com/kannada/fema-violation-crime-fighting-agency-issues-showcause-notice-to-paytm/

Read More