Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಶಿವಮೊಗ್ಗ: ಡಿ.17ರಂದು ಬುಧವಾರದಂದು ಸಾಗರವನ್ನು ಜಿಲ್ಲೆಯಾಗಿ ಮಾಡಬೇಕು ಎಂಬುದಾಗಿ ಒತ್ತಾಯಿಸಿ ಸಾಗರ ಬಂದ್ ಮಾಡುವುದಾಗಿ ಸಾಗರ ಜಿಲ್ಲೆ ಹೋರಾಟ ಸಮಿತಿಯ ತಿ.ನಾ ಶ್ರೀನಿವಾಸ್ ಘೋಷಿಸಿದ್ದಾರೆ. ಈ ಕುರಿತು ಸಾಗರ ನಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯನ್ನು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಗರ ಜಿಲ್ಲೆ ಮಾಡಬೇಕು ಎಂಬ ಒತ್ತಾಯಕ್ಕೆ ಸರ್ಕಾರ ಸರಿಯಾಗಿ ಸ್ಪಂದಿಸುತ್ತಿಲ್ಲ. ಈ ಹಿನ್ನಲೆಯಲ್ಲಿ ಡಿಸೆಂಬರ್.17ರಂದು ಸಾಗರ ಬಂದ್ ಮಾಡುವುದಾಗಿ ತಿಳಿಸಿದರು. ಸಾಗರ ತಾಲ್ಲೂಕು ಅಭಿವೃದ್ಧಿ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಲಾಗಿದೆ. ಶಿಕಾರಿಪುರ, ತೀರ್ಥಹಳ್ಳಿಯಲ್ಲಿ ರಸ್ತೆ ಅಗಲೀಕರಣ ಆದಷ್ಟು ಸಾಗರದಲ್ಲಿ ಆಗಿಲ್ಲ. ಸೊರಬ ರಸ್ತೆ ಅಗಲೀಕರಣ ನೆನೆಗುದಿಗೆ ಬಿದ್ದಿದೆ. ಯುಜಿಡಿ ಕಾಮಗಾರಿ 16 ವರ್ಷದಿಂದ ಸರಿಯಾಗಿ ನಡೆಯುತ್ತಿಲ್ಲ. ಜೋಗ ಕಾಮಗಾರಿ ಕುಂಟುತ್ತಾ ಸಾಗಿದೆ. ಸಾಗರ ತಾಲ್ಲೂಕಿನ ಅಭಿವೃದ್ಧಿಗೆ ಕಾಣದ ಕೈಗಳಿಂದ ತಡೆಯಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಶಾಸಕರು ನಮ್ಮ ಮನವಿಗೆ ಸ್ಪಂದಿಸಿ ಮುಖ್ಯಮಂತ್ರಿಗೆ ಪತ್ರ ಬರೆದಿದ್ದರು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಗೆ ಸಾಗರ ಜಿಲ್ಲಾ ಹೋರಾಟ ಸಮಿತಿಯ ನಿಯೋಗ ಕರೆದೊಯ್ಯಲು ಹಿಂದೇಟು…

Read More

ಮಂಡ್ಯ: ಜಿಲ್ಲೆಯಲ್ಲಿ ರೈತರ ಮಕ್ಕಳಿಗೆ ಹೆಣ್ಣು ಕೊಡಲು ಮುಂದಾಗದ ಪರಿಸ್ಥಿತಿ ಇದೆ. ಈ ಸಂದರ್ಭದಲ್ಲಿ ರೈತರ ಮಕ್ಕಳಿಗೆ ಹೆಣ್ಣು ಕೊಡೋದಕ್ಕೆ ಪ್ರೋತ್ಸಾಹಿಸೋದಕ್ಕೆ ಸರ್ಕಾರದ ಮುಂದೆ ಈ ಬೇಡಿಕೆಯನ್ನು ಇರಿಸಿ, ಬಿಜೆಪಿ, ರೈತ ಸಂಘಟನೆಗಳು ವಿನೂತನ ಪ್ರತಿಭಟನೆಯನ್ನು ಮಾಡಿದರು. ಅಲ್ಲದೇ ಡಿಸಿ ಮೂಲಕ ತಮ್ಮ ಬೇಡಿಕೆ ಈಡೇರಿಕೆಗಾಗಿ ಮನವಿಯನ್ನು ಸರ್ಕಾರಕ್ಕೆ ಸಲ್ಲಿಸಲಾಯಿತು. ಮಂಡ್ಯ ಬಿಜೆಪಿಯಿಂದ ವಿನೂತನ ಹೋರಾಟವನ್ನು ನಡೆಸಲಾಯಿತು. ಅವಿವಾಹಿತ ರೈತ ಯುವಕರ ಪರ ಮಂಡ್ಯ ಬಿಜೆಪಿ ಟೀಂ ನಿಂತಿತು. ಮಂಡ್ಯ ಡಿಸಿ ಕಚೇರಿ ಬಳಿ ಬಿಜೆಪಿ ಕಾರ್ಯಕರ್ತರಿಂದ ವಿಭಿನ್ನ ಪ್ರತಿಭಟನೆ ನಡೆಸಲಾಯಿತು. ಹೆಣ್ಣು ಸಿಗದ ಯುವಕರಿಂದ ಮಠಕ್ಕೆ ಬೇಡಿಕೆ ಇಟ್ಟ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವ್ಯಂಗ್ಯ ಮಾಡಿತು. ರೈತ ಮಕ್ಕಳ ಪರ ಬಿಜೆಪಿಯಿಂದ ರಾಜ್ಯ ಸರ್ಕಾರಕ್ಕೆ ವಿಶೇಷ ಮನವಿ ಮಾಡಲಾಯಿತು. ಕೈಯಲ್ಲಿ ತಾಂಬೂಲ ಹಿಡಿದು, ವಧುವಿನಂತೆ ಬಟ್ಟೆ ತೊಟ್ಟು, ಹಣೆಗೆ ಬಾಸಿಂಗ ಕಟ್ಟಿ ಡಿಸಿ ಕಚೇರಿಗೆ ಬಂದು ಅಣಕು ಪ್ರದರ್ಶನ ನೀಡಲಾಯಿತು. ಮಂಡ್ಯದ ಡಿಸಿ ಕಚೇರಿ ಬಳಿ ಬಿಜೆಪಿ…

Read More

ಬೆಂಗಳೂರು: ರಾಜ್ಯದ ನಗರಸಭೆ, ಪುರಸಭೆ ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಪೌರಕಾರ್ಮಿಕರಿಗೆ ಸರ್ಕಾರದಿಂದಲೇ ವೇತನ ಪಾವತಿಸುವ ಕುರಿತಂತೆ ಆರ್ಥಿಕ ಇಲಾಖೆಯೊಂದಿಗೆ ಚರ್ಚಿಸಿ, ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂಬುದಾಗಿ ಪೌರಾಡಳಿತ ಸಚಿವ ರಹೀಂ ಖಾನ್ ತಿಳಿಸಿದ್ದಾರೆ. ಈ ಮೂಲಕ ರಾಜ್ಯದ ಪೌರ ಕಾರ್ಮಿಕರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಶಾಸಕ ಸಿದ್ದು ಸವದಿ ಅವರ ಪ್ರಶ್ನೆಗೆ ಪೌರಾಡಳಿತ ಸಚಿವರಾದ ರಹೀಂ ಖಾನ್‌ ಅವರ ಉತ್ತರಿಸಿದರು. ಕಳೆದ 2022ಕ್ಕೂ ಮುನ್ನ ನಗರ ಸ್ಥಳೀಯ ಸಂಸ್ಥೆಗಳ ಪೌರಕಾರ್ಮಿಕರಿಗೆ ಎಸ್‍ಎಫ್‍ಸಿ ಅನುದಾನದಡಿ ವೇತನ ಪಾವತಿಸಲಾಗುತ್ತಿತ್ತು. ಆದರೆ ಸ್ಥಳೀಯ ಸಂಸ್ಥೆಗಳು ಉತ್ತಮವಾಗಿ ತೆರಿಗೆ ಸಂಗ್ರಹಿಸಿ, ಆತ್ಮ ನಿರ್ಭರವಾಗಬೇಕು. ಆರ್ಥಿಕವಾಗಿ ಸಬಲತೆಯನ್ನು ಸಾಧಿಸಬೇಕು ಎಂಬ ಉದ್ದೇಶದಿಂದ ಶೇ. 40 ರಷ್ಟು ಸರ್ಕಾರದಿಂದ ಹಾಗೂ ಶೇ. 60 ರಷ್ಟು ನಗರ ಸ್ಥಳೀಯ ಸಂಸ್ಥೆಗಳೇ ತಮ್ಮ ಆದಾಯದ ಅನುದಾನದಿಂದ ಪಾವತಿಸುವಂತೆ ಸೂಚನೆ ನೀಡಲಾಗಿರುತ್ತದೆ ಎಂದರು. https://twitter.com/KarnatakaVarthe/status/1999410679032480069

Read More

ಬೆಳಗಾವಿ ಸುವರ್ಣಸೌಧ : ಕಾನೂನು ಉಲ್ಲಂಘಿಸಿ ಬಗರ್ ಹುಕುಂ ಭೂಮಿಯನ್ನು ಭೂ ಕಬಳಿಕೆದಾರರು ಹಾಗೂ ಅಕ್ರಮಗಾರರಿಗೆ ಮಂಜೂರು ಮಾಡಿದ ಅಧಿಕಾರಿಗಳ ವಿರುದ್ಧ ಇಲಾಖೆ ಶಿಸ್ತುಕ್ರಮದ ಜೊತೆಗೆ ಕ್ರಿಮಿನಲ್ ಮೊಕದ್ದಮೆಯನ್ನೂ ದಾಖಲಿಸಲಾಗುವುದು ಎಂದು ವಿಧಾನ ಪರಿಷತ್ ನಲ್ಲಿ ಸಚಿವ ಕೃಷ್ಣ ಬೈರೇಗೌಡ ಅವರು ಹೇಳಿದರು. ವಿಧಾನ ಪರಿಷತ್ನಲ್ಲಿ ಶುಕ್ರವಾರ ಶೂನ್ಯವೇಳೆ ಚರ್ಚೆಯ ಸಂದರ್ಭ ಶಾಸಕರಾದ ರಮೇಶ್ ಬಾಬು ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವ ಕೃಷ್ಣ ಬೈರೇಗೌಡ ಅವರು, “ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಭೂ ಕಬಳಿಕೆದಾರರಿಗೆ ನೀಡುವ ಪ್ರವೃತ್ತಿಯನ್ನು ಸಹಿಸಲು ಸಾಧ್ಯವಿಲ್ಲ. ಈ ಅಕ್ರಮದಲ್ಲಿ ಕೆಲ ಅಧಿಕಾರಿಗಳು ಭಾಗಿರುವುದು ವಿಷಾದನೀಯ. ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಸುಮಾರು 98 ಜನರಿಗೆ ರೈತರ ಹೆಸರಿನಲ್ಲಿ ಸಾಗುವಳಿ ಚೀಟಿ ನೀಡಿರುವ ಪ್ರಕರಣ ಇಲಾಖೆ ಗಮನದಲ್ಲಿದೆ. ಈ ನಕಲಿ ಸಾಗುವಳಿ ಚೀಟಿ ಮೇಲೆ ಖಾತೆಗೆ ಅರ್ಜಿ ಸಲ್ಲಿಸಿದ ಭೂ ಕಬಳಿಕೆದಾರರ ವಿರುದ್ಧ ಈಗಾಗಲೇ ಎಫ್ಐಆರ್ ದಾಖಲು ಮಾಡಲಾಗಿದೆ” ಎಂದು ಸದನಕ್ಕೆ ಮಾಹಿತಿ ನೀಡಿದರು. “ರೈತರ ಹೆಸರಲ್ಲಿ ನಕಲಿ ಭೂ ಸಾಗುವಳಿ ಚೀಟಿ…

Read More

ಬೆಳಗಾವಿ ಸುವರ್ಣಸೌಧ: ರಾಜ್ಯದ ಗ್ರಾಮ ಪಂಚಾಯ್ತಿ ಗ್ರಂಥಾಲಯ, ಮಾಹಿತಿ ಕೇಂದ್ರದ ಮೇಲ್ವಿಚಾರಕರಿಗೆ ನಿಗದಿತ ಸಮಯಕ್ಕೆ ವೇತನ ಪಾವತಿ ಮಾಡುವುದಾಗಿ ಹೇಳಿ ಸಚಿವ ಪ್ರಿಯಾಂಕ್ ಖರ್ಗೆ ಗುಡ್ ನ್ಯೂಸ್ ನೀಡಿದ್ದಾರೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಅವರ ಪ್ರಶ್ನೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರಾದ ಪ್ರಿಯಾಂಕ್‌ ಖರ್ಗೆ ಅವರ ಲಿಖಿತ ಉತ್ತರ ನೀಡಿದರು. ರಾಜ್ಯದ ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದ ಮೇಲ್ವಿಚಾರಕರಿಗೆ ನಿಗದಿತ ಸಮಯಕ್ಕೆ ವೇತನ ಪಾವತಿಸಲು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಕಳೆದ ನವೆಂಬರ್ ಮಾಹೆಯಲ್ಲಿ ನಿರ್ದೇಶನ ನೀಡಲಾಗಿದೆ. ಅದರಂತೆ ವೇತನ ಪಾವತಿಸಲು ಕ್ರಮವಹಿಸಲಾಗುತ್ತಿದೆ. ಕೆಲವು ಜಿಲ್ಲೆಗಳಲ್ಲಿ ಗ್ರಾಮ ಪಂಚಾಯತಿ ತೆರಿಗೆ ಬೇಡಿಕೆ ಕಡಿಮೆ ಇರುವುದರಿಂದ ಗ್ರಂಥಾಲಯ ಮೇಲ್ವಿಚಾರಕರಿಗೆ ವೇತನ ವ್ಯತ್ಯಾಸದ ಮೊತ್ತವನ್ನು ಪಾವತಿಸಲು ಕೊರತೆ ಇರುವುದರಿಂದ ಅಂತಹ ಜಿಲ್ಲೆಗಳಲ್ಲಿ ಬಾಕಿ ವೇತನವನ್ನು ಪಾವತಿಸುವ ಪ್ರಸ್ತಾವನೆ ಸರ್ಕಾರದ ಹಂತದಲ್ಲಿ ಪರಿಶೀಲನೆಯಲ್ಲಿರುತ್ತದೆ. ಗ್ರಾಮ ಪಂಚಾಯಿತಿಗಳಲ್ಲಿ ವೇತನ ಪಾವತಿಗೆ ಸಂಬಂಧಿಸಿದಂತೆ 2025-26…

Read More

ಬೆಂಗಳೂರು: ರಾಜ್ಯ ಸರ್ಕಾರವು 2025-26ನೇ ಸಾಲಿನಲ್ಲಿ ಹೊಸ ಶಆಲಾ ಕೊಠಡಿಗಳ ನಿರ್ಮಾಣ ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶ ಹೊರಡಿಸಿದೆ. ಈ ಮೂಲಕ ರಾಜ್ಯಾಧ್ಯಂತ 2,200 ಸರ್ಕಾರಿ ಶಾಲೆಗಳಿಗೆ ತರಗತಿ ಕೊಠಡಿಗಳನ್ನು ನಿರ್ಮಾಣಕ್ಕೆ ಸರ್ಕಾರ ಅನುದಾನ ಮಂಜೂರು ಮಾಡಿ ಆದೇಶಿಸಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ನಡವಳಿಯನ್ನು ಹೊರಡಿಸಿದ್ದು,  ಮುಖ್ಯಮಂತ್ರಿಗಳು ವಿಧಾನ ಮಂಡಲದಲ್ಲಿ ಮಂಡಿಸಿದ 2025-26ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಗೆ ಸಂಬಂಧಿಸಿದಂತೆ ಕಂಡಿಕೆ-116 ರಲ್ಲಿ ಈ ಕೆಳಕಂಡಂತೆ ಘೋಷಿಸಿರುತ್ತಾರೆ ಎಂದಿದ್ದಾರೆ. 2025-26ನೇ ಸಾಲಿನ ಬಜೆಟ್ ಸಂಖ್ಯೆ 116 ರ ಅಡಿಯಲ್ಲಿ ಘೋಷಣೆಯ ಪುಕಾರ, “ರಾಜ್ಯದ ಸರ್ಕಾರಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಹೆಚ್ಚುವರಿ ಕೊಠಡಿಗಳು, ಶೌಚಾಲಯಗಳ ನಿರ್ಮಾಣ ಮತ್ತು ದುರಸ್ತಿಗಾಗಿ ರೂ. 125.00 ಕೋಟಿ ಮತ್ತು ಅಗತ್ಯ ಪೀಠೋಪಕರಣಗಳನ್ನು ಒದಗಿಸಲು ರೂ.50.00 ಕೋಟಿಗಳನ್ನು ನಿಗದಿಪಡಿಸಲಾಗಿದೆ. ಮೇಲೆ ಓದಲಾದ ಕ್ರಮಾಂಕ (2)ರ ಸರ್ಕಾರದ ಆದೇಶದಲ್ಲಿ 2025-26ನೇ ಸಾಲಿನ…

Read More

ಬೆಂಗಳೂರು: ಮೇಕೆದಾಟು ಯೋಜನೆಯನ್ನು ಅನುಷ್ಠಾನಗೊಳಿಸುವ ಸಂಬಂಧ ಹೊಸದಾಗಿ ಮುಖ; ಇಂಜಿನಿಯರ್ ಹಾಗೂ ಅಧೀಕ್ಷಕ ಇಂಜಿನಿಯರ್ ಕಛೇರಿಗಳನ್ನು ಸೃಜಿಸಿ ಸರ್ಕಾರ ಆದೇಶಿಸಿದೆ. ಈ ಮೂಲಕ ಮೇಕೆದಾಟು ಯೋಜನೆ ತ್ವರಿತ ಅನುಷ್ಠಾನಕ್ಕೆ ತಂಡ ರಚನೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಉಪ ಮಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ಜರುಗಿದ ದಿನಾಂಕ: 18.11.2025 ರಂದು ಜರುಗಿದ ಸಭೆಯಲ್ಲಿ ನೀಡಿದ ನಿರ್ದೇಶನದಂತೆ ಮೇಕೆದಾಟು ಯೋಜನೆಯನ್ನು ಯಾವುದೇ ಅಡೆತಡೆ ಇಲ್ಲದೇ ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರವನ್ನು ಕೇಂದ್ರಸ್ಥಾನವನ್ನಾಗಿಸಿ, ಅಲ್ಲಿ ಒಂದು ಪ್ರತ್ಯೇಕ ಮುಖ್ಯ ಇಂಜಿನಿಯರ್ ಹಾಗೂ ಸಿಬ್ಬಂದಿಗಳನ್ನು ಒಳಗೊಂಡಂತೆ ಹೊಸದಾಗಿ ಒಂದು ವಲಯ ಕಛೇರಿಯನ್ನು ಮತ್ತು ಅಧೀಕ್ಷಕ ಇಂಜಿನಿಯರ್ ಹಾಗೂ ಸಿಬ್ಬಂದಿಗಳನ್ನು ಒಳಗೊಂಡಂತೆ ಹೊಸದಾಗಿ ಒಂದು ವೃತ್ತ ಕಛೇರಿಯನ್ನು ಸೃಜಿಸಿ ಕಾರ್ಯನಿರ್ವಹಿಸಲು ಸೂಕ್ತ ಕ್ರಮವಹಿಸುವಂತೆ ನಿರ್ಣಯಿಸಲಾಗಿರುತ್ತದೆ. ದಿನಾಂಕ: 10.12.2025 ರ ಪತ್ರದಲ್ಲಿ ವ್ಯವಸ್ಥಾಪಕ ನಿರ್ದೇಶಕರು ಕಾವೇರಿ ನೀರಾವರಿ ನಿಗಮ ನಿಯಮಿತ ಇವರು ಸರ್ಕಾರಕ್ಕೆ ಪುಸ್ತಾವನೆ ಸಲ್ಲಿಸಿ, ಮಾನ್ಯ ಉಪ ಮಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ಜರುಗಿದ ದಿನಾಂಕ: 18.11.2025ರ ಸಭೆಯ ನಿರ್ಣಯದಂತೆ…

Read More

ಹಾವೇರಿ : ಶಿಗ್ಗಾಂವ ಪಟ್ಟಣದ ಸಮಗ್ರ ಅಭಿವೃದ್ಧಿಗಾಗಿ ನಾನು ಕಂಡ ಕನಸು ಇಂದು ಬಹುತೇಕ ಸಾಕಾರಗೊಂಡಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಕುರಿತು ಎಕ್ಸ್ ಮಾಡಿರುವ ಅವರು, ಶಿಗ್ಗಾಂವಿ ತಾಲೂಕಿಗೊಂದು ಸಾರಿಗೆ ಇಲಾಖೆಯ ನೂತನ ಬಸ್ ಘಟಕ ಹಾಗೂ ವಾಹನ ಚಾಲನಾ ಮತ್ತು ತಾಂತ್ರಿಕ ತರಬೇತಿ ಕೇಂದ್ರ ಅತ್ಯಂತ ಅಗತ್ಯ ಎಂದು ಭಾವಿಸಿ, ನಾನು ಸಿಎಂ ಆಗಿದ್ದ ಅವಧಿಯಲ್ಲಿ 28 ಕೋಟಿ ರೂ. ಬಿಡುಗಡೆಗೊಳಿಸಿದ ಕಾರಣ, ಇದೀಗ ಆ ಘಟಕ ಲೋಕಾರ್ಪಣೆಯಾಗಿದೆ. ಈ ಘಟಕ ಲೋಕಾರ್ಪಣೆಯಾದ ಕಾರಣದಿಂದ, ಕ್ಷೇತ್ರದ ಜನಸಾಮಾನ್ಯರು ಮತ್ತು ವಿದ್ಯಾರ್ಥಿಗಳಿಗೆ ಸುಗಮ ಬಸ್ ಸಂಚಾರದ ಅನುಕೂಲವನ್ನು ಒದಗಿಸಲಿದೆ. ವಾಹನ ಚಾಲನಾ ತರಬೇತಿ ಕೇಂದ್ರದ ಮೂಲಕ ಸ್ಥಳೀಯವಾಗಿ ಉದ್ಯೋಗ ಸೃಷ್ಟಿಗೆ ದೊಡ್ಡ ಮಟ್ಟದ ನೆರವು ನೀಡಲಿದೆ. ಶಿಗ್ಗಾಂವಿ ಕ್ಷೇತ್ರದ ಪ್ರಗತಿಯಲ್ಲಿ ಇದೊಂದು ಮಹತ್ವದ ಹೆಜ್ಜೆ. ಈ ಅಭಿವೃದ್ಧಿ ಕಾರ್ಯ ಜನರಿಗೆ ತಲುಪಿದಾಗ ಮಾತ್ರ ನನ್ನ ಶ್ರಮ ಸಾರ್ಥಕ ಎಂದು ತಿಳಿಸಿದ್ದಾರೆ. https://kannadanewsnow.com/kannada/development-of-spice-park-on-ppp-model-in-chikkamagalur-minister-ramalingareddy/ https://kannadanewsnow.com/kannada/big-news-attention-state-government-employees-just-apply-for-the-arogya-sanjeevini-yojana-like-this/

Read More

ಬೆಳಗಾವಿ ಸುವರ್ಣ ವಿಧಾನಸೌಧ: ಚಿಕ್ಕಮಗಳೂರು ಜಿಲ್ಲೆಯಲ್ಲಿ ಪಿ.ಪಿ.ಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿಪಡಿಸಲು ಏಕಗವಾಕ್ಷಿ ಏಜೆನ್ಸಿ ವತಿಯಿಂದ ಅನುಮೋದನೆ ಪಡೆದು ಬೆಂಗಳೂರಿನ ಐಡೆಕ್ ಸಂಸ್ಥೆಯನ್ನು ವ್ಯವಹರಣಾ ಸಮಾಲೋಚಕರನ್ನಾಗಿ ನೇಮಿಸಲಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕ ಸಚಿವರ ಪರವಾಗಿ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ತಿಳಿಸಿದರು. ಶೃಂಗೇರಿ ಕ್ಷೇತ್ರದ ಶಾಸಕ ರಾಜೇಗೌಡ ಟಿ.ಡಿ ಇವರು ಸಾಂಬಾರು ಪದಾರ್ಥಗಳ ರಫ್ತು ಅಭಿವೃದ್ಧಿ ಮತ್ತು ಬೆಳವಣಿಗೆಗೆ ಸೂಕ್ತವಾದ ಮೂಲ ಸೌಕರ್ಯಕ್ಕೆ ಸ್ಪೈಸ್ ಪಾರ್ಕ್ ಅಗತ್ಯವಾಗಿದ್ದು, ಆದಷ್ಟು ಬೇಗ ಸ್ಪೈಸ್ ಪಾರ್ಕ್ ಅಭಿವೃದ್ಧಿಪಡಿಸಬೇಕೆಂದು ವಿಧಾನಸಭೆಯಲ್ಲಿ ಮನವಿ ಮಾಡಿದರು. ಸ್ಪೈಸ್ ಪಾರ್ಕ್ ಅಭಿವೃದ್ಧಿಗೆ ಗುರುತಿಸಲಾಗಿದ್ದ ಜಾಗದ ಭೌತಿಕ ಪರಿಶೀಲನೆಯನ್ನು ಸಾಂಬಾರು ಮಂಡಳಿ, ತೋಟಗಾರಿಕೆ ಇಲಾಖೆ, ಕಂದಾಯ ಇಲಾಖೆ ಹಾಗೂ ಕೈಗಾರಿಕೆ ಇಲಾಖೆಯ ಅಧಿಕಾರಿಗಳು ಕೈಗೊಂಡಾಗ, ಸದರಿ ಜಾಗವು ಸ್ಪೈಸ್ ಪಾರ್ಕ್ ನಿರ್ಮಾಣ ಮಾಡಲು ಸೂಕ್ತವಾಗದೇ ಇರುವ ಹಿನ್ನೆಲೆಯಲ್ಲಿ ಸೂಕ್ತವಾದ ಪರ್ಯಾಯ ಜಾಗವನ್ನು ನೀಡಲು ಕೋರಲಾಗಿತ್ತು. ಅದರಂತೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕು ಗೋಣಿಬೀಡು ಹೋಬಳಿ…

Read More

ಬೆಳಗಾವಿ ಸುವರ್ಣ ವಿಧಾನಸೌಧ : ಧಾರವಾಡ ಜಿಲ್ಲೆಯ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ ಹೊಸದಾಗಿ ಧಾರವಾಡ ಮಹಾನಗರ ಪಾಲಿಕೆಯನ್ನು ರಚಿಸುವ ಪ್ರಸ್ತಾವನೆಯನ್ನು ರಾಜ್ಯಪಾಲರ ಅನುಮೋದನೆಗೆ ಸಲ್ಲಿಸಿದೆ, ಅನುಮೋದನೆ ದೊರೆತ ಬಳಿಕ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಬಿ.ಎಸ್. ಸುರೇಶ್ ಅವರು ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಹುಬ್ಬಳ್ಳಿ-ಧಾರವಾಡ ಪೂರ್ವ ಕ್ಷೇತ್ರದ ಅಬ್ಬಯ್ಯ ಪ್ರಸಾದ್ ಅವರು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ ಹೊಸದಾಗಿ ಧಾರವಾಡ ಮಹಾನಗರ ಪಾಲಿಕೆಯನ್ನು ರಚಿಸಲು ಮತ್ತು ಇನ್ನುಳಿದ ಪ್ರದೇಶವನ್ನು ಹುಬ್ಬಳ್ಳಿ ಮಹಾನಗರ ಪಾಲಿಕೆ ಎಂಬುದಾಗಿ ಮುಂದುವರೆಸಲು ದಿನಾಂಕ: 21-01-2025ರಂದು ಪ್ರಾಥಮಿಕ ಅಧಿಸೂಚನೆಯನ್ನು ರಾಜ್ಯಪತ್ರದಲ್ಲಿ ಪ್ರಕಟಿಲಾಗಿರುತ್ತದೆ. ಆದರೆ ಈ ಬಗ್ಗೆ ಯಾವುದೇ ಕ್ರಮ ಆಗಿರುವುದಿಲ್ಲ ಎಂದು ಸದನದಲ್ಲಿ ಪ್ರಸ್ತಾಪಿಸಿದರು. ಆಕ್ಷೇಪಣೆ/ಸಲಹೆಗಳ ಕುರಿತ ವರದಿಯನ್ನು ಪೌರಾಡಳಿತ ನಿರ್ದೇಶಕರಿಂದ ಧಾರವಾಡ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿ ವರದಿ ಸಿದ್ದಪಡಿಸಿ ರಾಜ್ಯಪಾಲರ ಅನುಮೋದನೆಗೆ ಸಲ್ಲಿಸಲಾಗಿದೆ. ಆದರೆ ಇದೂವರೆಗೂ ರಾಜ್ಯಪಾಲರಿಂದ ಅನುಮೋದನೆ ಬಂದಿರುವುದಿಲ್ಲ.…

Read More