Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ಧರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದರು. ಇದನ್ನು ಖಂಡಿಸುವಂತ ನಿರ್ಧಾರವನ್ನು ಈಗಾಗಲೇ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ. ಈ ಬೆನ್ನಲ್ಲೇ ಆಗಸ್ಟ್.22ರಂದು ಮಹತ್ವದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಸಿಎಂ ಸಿದ್ಧರಾಮಯ್ಯ ಕರೆದಿದ್ದಾರೆ. ಈ ಕುರಿತಂತೆ ಸಿಎಂ ಕಚೇರಿಯಿಂದ ಮಾಹಿತಿ ನೀಡಲಾಗಿದ್ದು, ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಆಗಸ್ಟ್.22ರ ಗುರುವಾರ ಸಂಜೆ.4 ಗಂಟೆಗೆ ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ತಿಳಿಸಿದೆ. ಇನ್ನೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಆಗಸ್ಟ್.22ರಂದು ನಡೆಸಿದ ಬಳಿಕ, ಶಾಸಕರ ಅಭಿಪ್ರಾಯವನ್ನು ಪಡೆದು, ಆಗಸ್ಟ್.23ರಂದು ದೆಹಲಿಗೆ ಸಿಎಂ ಸಿದ್ಧರಾಮಯ್ಯ ತೆರಳಲಿದ್ದಾರೆ. ದೆಹಲಿಯಲ್ಲಿ ಕಾಂಗ್ರೆಸ್ ನಾಯಕರನ್ನು ಭೇಟಿಯಾಗಲಿರುವಂತ ಅವರು, ರಾಜ್ಯದ ಪ್ರಸ್ತುತ ರಾಜಕೀಯ ವಿದ್ಯಾಮಾನಗಳ ಬಗ್ಗೆ ಮಾಹಿತಿಯನ್ನು ನೀಡಲಿದ್ದಾರೆ. https://kannadanewsnow.com/kannada/raksha-bandhan-sister-ties-rakhi-to-younger-brother-at-hospital-dies/ https://kannadanewsnow.com/kannada/congress-worker-dies-of-cardiac-arrest-during-press-conference-in-bengaluru/
ತೆಲಂಗಾಣ: ಇಂದು ರಕ್ಷಾ ಬಂಧನದ ದಿನ. ಸಹೋದರಿಯರು ಸಹೋದರನಿಗೆ ರಾಖಿಯನ್ನು ಕಟ್ಟುವಂತ ದಿನ. ಈ ದಿನದಂದೇ ಆಸ್ಪತ್ರೆಯಲ್ಲಿ ತಮ್ಮನಿಗೆ ರಾಖಿ ಕಟ್ಟಿ ಕೊನೆಯುಸಿರನ್ನು ಅಕ್ಕ ಎಳೆದಿರುವಂತ ಘಟನೆ ತೆಲಂಗಾಣದ ಮಹಬೂಬಾಬಾದ್ ನಲ್ಲಿ ನಡೆದಿದೆ. ತೆಲಂಗಾಣದ ಮಹಬೂಬಾಬಾದ್ ಮೂಲದ ಬಾಲಕಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಆಕೆಯನ್ನು ಕೂಡಲೇ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಹೀಗೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆಯುವ ಕೆಲವೇ ಕ್ಷಣಗಳ ಮೊದಲು ಬಾಲಕಿಯೊಬ್ಬಳು ತನ್ನ ಸಹೋದರನ ಮಣಿಕಟ್ಟಿಗೆ ರಾಖಿ ಕಟ್ಟುವ ಮೂಲಕ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ವಾಳೆ. https://twitter.com/TeluguScribe/status/1825418108968071592 ಅವಳು ಕೋಡಾಡ್ನಲ್ಲಿ ಡಿಪ್ಲೊಮಾ ಓದುತ್ತಿದ್ದಳು. ಅಲ್ಲಿ ಒಬ್ಬ ವ್ಯಕ್ತಿ ಅವಳನ್ನು ಮದುವೆಯಾಗಲು ಕೇಳಿದನು. ಅವಳು ಪ್ರಸ್ತಾಪವನ್ನು ನಿರಾಕರಿಸಿದಳು, ನಂತರ ಆ ವ್ಯಕ್ತಿ ತನ್ನ ಕೆಲವು ಸ್ನೇಹಿತರೊಂದಿಗೆ ಅವಳಿಗೆ ಕಿರುಕುಳ ನೀಡಲು ಪ್ರಾರಂಭಿಸಿದನು. ಪುರುಷರ ಗುಂಪಿನ ಕಿರುಕುಳವನ್ನು ಸಹಿಸಲಾಗದೆ, ಆಗಸ್ಟ್.15 ರಂದು ತನ್ನ ಜೀವನವನ್ನು ಕೊನೆಗೊಳಿಸುವ ಪ್ರಯತ್ನದಲ್ಲಿ ಅವಳು ವಿಷ ಸೇವಿಸಿದಳು. ಆಕೆಯನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಚಿಕಿತ್ಸೆ ಪಡೆದರೂ, ಅವರ ಸ್ಥಿತಿ ವೇಗವಾಗಿ ಹದಗೆಟ್ಟಿತು ಮತ್ತು ಅವರು ಆಗಸ್ಟ್ 17 ರಂದು…
ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸ್ಥಾನಕ್ಕೆ ಸಿದ್ಧರಾಮಯ್ಯ ರಾಜೀನಾಮೆ ನೀಡಿ, ಬೇರೆಯವರಿಗೆ ಅವಕಾಶ ಕೊಡಲಿ ಎಂಬುದಾಗಿ ಸ್ಯಾಂಡಲ್ ವುಡ್ ನಟ ಚೇತನ್ ಅಹಿಂದ ಆಗ್ರಹಿಸಿದ್ದಾರೆ. ಈ ಕುರಿತಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಕಳೆದ ಒಂದು ವರ್ಷದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕದ ಜನರನ್ನು ವಿಫಲಗೊಳಿಸಿದ್ದಾರೆ ಎಂದಿದ್ದಾರೆ. ಬಡವರು, ದಲಿತರು, ಆದಿವಾಸಿಗಳು, ರೈತರು, ಕನ್ನಡ ಹಕ್ಕುಗಳು, ಭ್ರಷ್ಟಾಚಾರ ವಿರೋಧಿ ಮತ್ತು ಇನ್ನೂ ಹೆಚ್ಚಿನವರಿಗೆ ನೋವುಂಟು ಮಾಡುವ ನೀತಿಗಳನ್ನು ಸಕ್ರಿಯವಾಗಿ ತರುವ ಮೂಲಕ ಅವರು ಈಗಾಗಲೇ ಅನ್ಯಾಯದ ವ್ಯವಸ್ಥೆಯನ್ನು ಹೆಚ್ಚು ಅನ್ಯಾಯದಂತೆ ಮಾಡಿದ್ದಾರೆ ಎಂದು ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ 6 + ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಆಡಳಿತ ಮಾಡಿದ್ದಾರೆ— ಅವರು ರಾಜೀನಾಮೆ ನೀಡಲಿ ಮತ್ತು ಬೇರೆಯವರಿಗೆ ಅವಕಾಶ ನೀಡಲಿ ಎಂಬುದಾಗಿ ನಟ ಚೇತನ್ ಆಗ್ರಹಿಸಿದ್ದಾರೆ. https://twitter.com/ChetanAhimsa/status/1825465740322869696 https://kannadanewsnow.com/kannada/manu-singhvi-tells-hc-that-no-order-can-be-passed-rejecting-cabinets-suggestion/ https://kannadanewsnow.com/kannada/breaking-siddaramaiahs-fan-caught-fire-during-protest-hospitalised/
ಬೆಂಗಳೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ಧರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಇದು ಕ್ಯಾಬಿನೆಟ್ ಸಲಹೆ ತಿರಸ್ಕರಿಸಿ ನೀಡಿರುವಂತ ಆದೇಶವಾಗಿದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಪರವಾಗಿ ಮನು ಸಿಂಘ್ವಿ ವಾದಿಸಿದರು. ಇಂದು ಹೈಕೋರ್ಟ್ ಗೆ ಸಿಎಂ ಸಿದ್ಧರಾಮಯ್ಯ ಅವರು ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದಂತ ಅರ್ಜಿಯ ವಿಚಾರಣೆ ನಡೆಸಲಾಗುತ್ತಿದೆ. ಈ ವೇಳೆ ಸಿಎಂ ಸಿದ್ಧರಾಮಯ್ಯ ಪರವಾಗಿ ವಾದ ಆರಂಭಿಸಿದಂತ ಹಿರಿಯ ವಕೀಲ ಮನು ಸಿಂಘ್ವಿ ಅವರು, ಕ್ಯಾಬಿನೆಟ್ ಸಲಹೆಯನ್ನು ತಿರಸ್ಕರಿಸಿ ಆದೇಶವನ್ನು ನೀಡುವಂತಿಲ್ಲ ಎಂಬುದಾಗಿ ಹೇಳಿದರು. ಅಲ್ಲದೇ ಇದಕ್ಕೆ ಸಂಬಂಧಿಸಿದಂತ ಮಧ್ಯಪ್ರದೇಶದ ತೀರ್ಪುಗಳನ್ನು ಉಲ್ಲೇಖಿಸಿದರು. ರಾಜ್ಯಪಾಲರಿಗೆ ಸಲಹೆ ನೀಡುವ ಸಂಬಂಧದ ಕ್ಯಾಬಿನೆಟ್ ಸಭೆಯಲ್ಲೂ ಸಿದ್ಧರಾಮಯ್ಯ ಭಾಗಿಯಾಗಿಲ್ಲ. ರಾಜ್ಯ ಸಚಿವ ಸಂಪುಟ ಸಭೆಯಿಂದ ಹೊರಗೆ ಉಳಿದಿದ್ದಾರೆ. ಇಂತಹ ಸಚಿವ ಸಂಪುಟ ಸಭೆಯಲ್ಲಿ ರಾಜ್ಯಪಾಲರಿಗೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡದಂತೆ ಸಲಹೆ ಮಾಡಿದ್ದಾರೆ. ಹೀಗಿದ್ದರೂ ಕ್ಯಾಬಿನೆಟ್ ಸಲಹೆಯನ್ನು ತಿರಸ್ಕರಿಸಿ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ…
ಬೆಂಗಳೂರು: ನಗರದಲ್ಲಿನ ನಮ್ಮ ಮೆಟ್ರೋ ಸೇವೆಯಲ್ಲಿ ನಾಳೆಯಿಂದ ಹಸಿರು ಮಾರ್ಗದಲ್ಲಿ ಸಂಚಾರ ವ್ಯತ್ಯಯ ಉಂಟಾಗಲಿದೆ. ನಾಳೆ ಸೇರಿದಂತೆ ವಿವಿಧ ದಿನಾಂಕಗಳಂದು ಐದು ದಿನಗಳ ಕಾಲ ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ ಸಂಚಾರವನ್ನು ಸ್ಥಗಿತಗೊಳಿಸಲಾಗುತ್ತಿದೆ. ಈ ಕುರಿತಂತೆ ಬಿಎಂಆರ್ ಸಿಎಲ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ವಿಸ್ತರಿಸಿದ ಹಸಿರು ಮಾರ್ಗದ ನಾಗಸಂದ್ರದಿಂದ ಮಾದವರ ನಡುವೆ ಸಿಗ್ನಲಿಂಗ್ ಸಂಬಂಧಿತ ಪರೀಕ್ಷೆಯನ್ನು ಮುಂದುವರಿಸಲು, ಕೆಲವು ದಿನಗಳಂದು ರೈಲು ಸೇವೆಯ ಸಮಯ ಮತ್ತು ಕಾರ್ಯಾಚರಣೆಗಳಲ್ಲಿ ಬದಲಾವಣೆಯಾಗಲಿದೆ ಎಂದಿದೆ. ಈ ಕೆಳಗಿನ ವಿವರಗಳಂತೆ, ಪೀಣ್ಯ ಇಂಡಸ್ಟ್ರಿ ಮತ್ತು ನಾಗಸಂದ್ರ ಮೆಟ್ರೋ ನಿಲ್ದಾಣಗಳ ನಡುವೆ ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗುತ್ತದೆ. ದಿನಾಂಕ 20, 23, 30ನೇ ಆಗಸ್ಟ್ 2024 ಹಾಗೂ 6 ಮತ್ತು 11ನೇ ಸೆಪ್ಟೆಂಬರ್ 2024 ರಂದು ಪೂರ್ಣ ದಿನ ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗುತ್ತದೆ. ನಾಗಸಂದ್ರ ಮೆಟ್ರೋ ನಿಲ್ದಾಣದಿಂದ ಪೀಣ್ಯ ಇಂಡಸ್ಟ್ರಿ ಕಡೆಗೆ: ದಿನಾಂಕ 24ನೇ ಆಗಸ್ಟ್ 2024 ರಂದು ಕೊನೆಯ ರೈಲು ಸೇವೆಯು ರಾತ್ರಿ 11.05 ಕ್ಕೆ ಬದಲಾಗಿ…
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಮ್ಮ ವಿರುದ್ಧದ ಮುಡಾ ಹಗರಣದ ಬಗ್ಗೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದಂತ ರಾಜ್ಯಪಾಲರ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ಆರಂಭಗೊಂಡಿದೆ. ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ ಅವರನ್ನೊಳಗೊಂಡ ನ್ಯಾಯಪೀಠದಲ್ಲಿ ಇಂದು 2.30ಕ್ಕೆ ಅರ್ಜಿಯ ವಿಚಾರಣೆ ಆರಂಭಗೊಂಡಿದೆ. ಸಿಎಂ ಸಿದ್ಧರಾಮ್ಯ ಪರವಾಗಿ ಹೈಕೋರ್ಟ್ ನಲ್ಲಿ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಸೇರಿದಂತೆ ವಿವಿಧ ಸುಪ್ರೀಂ ಕೋರ್ಟ್ ವಕೀಲರು ವಾದವನ್ನು ಮಂಡಿಸುತ್ತಿದ್ದಾರೆ. ಈಗಾಗಲೇ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದಂತ ವಿಚಾರವನ್ನು ಸಂಪೂರ್ಣವಾಗಿ ವಕೀಲರರೊಂದಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಚರ್ಚಿಸಿದ್ದಾರೆ. ತುರ್ತು ಅರ್ಜಿಯ ವಿಚಾರಣೆಯನ್ನು ಕೋರಿದ್ದರಿಂದ ಇಂದೇ ಹೈಕೋರ್ಟ್ ಗೆ ಸಿದ್ದರಾಮಯ್ಯ ಪ್ರಾಸಿಕ್ಯೂಷನ್ ಪ್ರಶ್ನಿಸಿ ಸಲ್ಲಿಸಿದ್ದಂತ ರಿಟ್ ಅರ್ಜಿಯ ವಿಚಾರಣೆಯನ್ನು ನಡೆಸಲಾಗುತ್ತಿದೆ. ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ ಅವರು ಸಿಎಂ ಸಿದ್ಧರಾಮಯ್ಯ ವಿರುದ್ಧದ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ರಿಟ್ ಅರ್ಜಿಯ ವಿಚಾರಣೆ ನಂತ್ರ ಯಾವ ತೀರ್ಪು ನೀಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.…
ಬೆಂಗಳೂರು: ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ನೀಡಿದಂತ ಅನುಮತಿ ಖಂಡಿಸಿ, ರಾಜ್ಯಾಧ್ಯಂತ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ರಾಜ್ಯದಲ್ಲಿ ಗದ್ದಲ, ದಾಂಧಲೆ ಹಾಗೂ ಹಲ್ಲೆಗಳಾದರೇ ರಾಜ್ಯಪಾಲರೇ ಹೊಣೆ ಎಂಬುದಾಗಿ ಸಚಿವ ಜಮೀರ್ ಅಹ್ಮದ್ ಖಾನ್ ಎಚ್ಚರಿಕೆ ನೀಡಿದ್ದಾರೆ. ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕಾಂಗ್ರೆಸ್ ನಾಯಕರು ನಡೆಸುತ್ತಿರುವಂತ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದಂತ ಅವರು, ಮುಖ್ಯಮಂತ್ರಿ ಸ್ಥಾನದಿಂದ ಸಿದ್ಧರಾಮಯ್ಯ ಇಳಿಸುವ ಪ್ರಶ್ನೆಯೇ ಇಲ್ಲ. ಬಿಜೆಪಿ-ಜೆಡಿಎಸ್ ನಾಯಕರು ಏನೇ ಮಾಡಿದ್ರೂ ಸಿದ್ಧರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಆಗಲ್ಲ ಎಂದರು. ಸಿಎಂ ಸಿದ್ಧರಾಮಯ್ಯ ಪರವಾಗಿ ಕಾಂಗ್ರೆಸ್ ವರಿಷ್ಠರು, ರಾಜ್ಯದ 7 ಕೋಟಿ ಕನ್ನಡಿಗರು ಇದ್ದಾರೆ. ಕರ್ನಾಟಕದಲ್ಲಿ ಏನಾದ್ರೂ ಗಲಾಟೆ, ಹಲ್ಲೆ, ದಾಂಧಲೆ ಆದರೇ ಅದಕ್ಕೆ ರಾಜ್ಯಪಾಲರೇ ನೇರ ಹೊಣೆಯಾಗಲಿದ್ದಾರೆ. ಯಾವತ್ತೂ ಕರ್ನಾಟಕದ ಜನರು ಇಂತಹ ಸಂದರ್ಭದಲ್ಲಿ ಸುಮ್ಮನೇ ಕೂರುವುದಿಲ್ಲ ಅಂತ ಹೇಳಿದರು. https://kannadanewsnow.com/kannada/hc-to-hear-siddaramaiahs-writ-petition-challenging-governors-prosecution-sanction-at-2-30-pm/ https://kannadanewsnow.com/kannada/breaking-siddaramaiahs-fan-caught-fire-during-protest-hospitalised/
ಬೆಂಗಳೂರು: ಮುಡಾ ಹಗರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದಂತ ಅನುಮತಿ ಪ್ರಶ್ನಿಸಿ ಹೈಕೋರ್ಟ್ ಗೆ ಸಿಎಂ ಸಿದ್ಧರಾಮಯ್ಯ ಅವರು ಸಲ್ಲಿಸಿರುವಂತ ರಿಟ್ ಅರ್ಜಿಯ ವಿಚಾರಣೆ, ಇಂದು 2.30ಕ್ಕೆ ನಡೆಯಲಿದೆ. ಸಿಎಂ ಸಿದ್ಧರಾಮಯ್ಯ ವಿರುದ್ಧದ ಪ್ರಾಸಿಕ್ಯೂಷನ್ ಅನುಮತಿ ಪ್ರಶ್ನಿಸಿ ಸಿಎಂ ಪರವಾಗಿ ರಿಟ್ ಸಲ್ಲಿಸಿದ ಮಾಜಿ ಅಡ್ವೊಕೇಟ್ ಜನರಲ್ ಪ್ರೊ.ರವಿವರ್ಮ ಕುಮಾರ್ ಸಲ್ಲಿಸಿದರು. ಈ ಅರ್ಜಿಯನ್ನು ಇಂದು ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ ಅವರನ್ನೊಳಗೊಂಡ ನ್ಯಾಯಪೀಠದಲ್ಲಿ ವಿಚಾರಣೆ ನಡೆಯಲಿದೆ ಎಂಬುದಾಗಿ ತಿಳಿದು ಬಂದಿದೆ. ಸಿಎಂ ಸಿದ್ಧರಾಮಯ್ಯ ಪರವಾಗಿ ಮಾಜಿ ಅಡ್ವೊಕೇಟ್ ಜನರಲ್ ಪ್ರೊ.ರವಿವರ್ಮ ಕುಮಾರ್ ಅವರು ವಾದಿಸಲಿದ್ದಾರೆ ಎನ್ನಲಾಗುತ್ತಿದೆ. ಇದೇ ಸಂದರ್ಭದಲ್ಲಿ ರಾಜ್ಯಾಧ್ಯಂತ ರಾಜ್ಯಪಾಲರು ಸಿಎಂ ಸಿದ್ಧರಾಮಯ್ಯ ಅವರ ವಿರುದ್ಧದ ಮುಡಾ ಹಗರಣದ ಬಗ್ಗೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ಖಂಡಿಸಿ, ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ಹಲವೆಡೆ ಹಿಂಸಾಚಾರಕ್ಕೆ ತಿರುಗಿದ್ದರೇ, ಮತ್ತೆ ಕೆಲವೆಡೆ ಟೈಯರ್ ಗೆ ಬೆಂಕಿ ಹಚ್ಚಿ ಆಕ್ರೋಶವನ್ನು ಹೊರ ಹಾಕಲಾಗಿದೆ. https://kannadanewsnow.com/kannada/in-yet-another-heinous-act-in-the-country-a-young-woman-was-gang-raped-at-a-bus-stand/ https://kannadanewsnow.com/kannada/breaking-siddaramaiahs-fan-caught-fire-during-protest-hospitalised/
ಡೆಹ್ರಾಡೂನ್: ಈ ತಿಂಗಳ ಆರಂಭದಲ್ಲಿ ಭಾರತದ ಡೆಹ್ರಾಡೂನ್ ನಗರದ ಬಸ್ ನಿಲ್ದಾಣದಲ್ಲಿ ಹದಿಹರೆಯದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಅಪರಾಧಕ್ಕೆ ಸಂಬಂಧಿಸಿದಂತೆ ಪೊಲೀಸರು ಭಾನುವಾರ (ಆಗಸ್ಟ್ 18) ಐವರನ್ನು ಬಂಧಿಸಿದ್ದಾರೆ. ಆಗಸ್ಟ್ 12 ರಂದು ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ಸೋಮವಾರ ವರದಿ ಮಾಡಿದೆ. ದೆಹಲಿಯಿಂದ ಡೆಹ್ರಾಡೂನ್ನ ಬಸ್ ನಿಲ್ದಾಣಕ್ಕೆ ಬಂದ ಉತ್ತರಾಖಂಡದ ಸರ್ಕಾರಿ ಬಸ್ನಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಲಾಗಿದೆ. ಈ ಘಟನೆ ಆಗಸ್ಟ್ 12 ರಂದು ನಡೆದಿದ್ದರೂ, ಐದು ದಿನಗಳ ನಂತರವೇ ಪೊಲೀಸರಿಗೆ ಈ ಬಗ್ಗೆ ತಿಳಿದಿದೆ. ಬಂಧಿತರಲ್ಲಿ ಬಸ್ಸಿನ ಚಾಲಕ ಮತ್ತು ನಿರ್ವಾಹಕ ಸೇರಿದ್ದಾರೆ ಎಂದು ಡೆಹ್ರಾಡೂನ್ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್ಎಸ್ಪಿ) ಅಜಯ್ ಸಿಂಗ್ ಪಿಟಿಐಗೆ ತಿಳಿಸಿದ್ದಾರೆ. ಆರೋಪಿಗಳನ್ನು ಉತ್ತರಾಖಂಡದ ಹರಿದ್ವಾರದ ಬುಗ್ಗವಾಲಾ ನಿವಾಸಿಗಳಾದ ಧರ್ಮೇಂದ್ರ ಕುಮಾರ್ (32) ಮತ್ತು ರಾಜ್ಪಾಲ್ (57) ಎಂದು ಗುರುತಿಸಲಾಗಿದೆ. ಹರಿದ್ವಾರದ ಭಗವಾನ್ಪುರ ನಿವಾಸಿ ದೇವೇಂದ್ರ (52) ಮೃತ ದುರ್ದೈವಿ.…
ಬೆಂಗಳೂರು: ಸರ್ಕಾರಿ ಮತ್ತು ಖಾಸಗಿ ವೈದ್ಯಕೀಯ ಕಾಲೇಜುಗಳ ಆಡಳಿತ ಮಂಡಳಿಗಳ ನಡುವಿನ ಒಪ್ಪಂದದ ನಂತರ ಖಾಸಗಿ ಕಾಲೇಜುಗಳಲ್ಲಿ ಪದವಿಪೂರ್ವ ವೈದ್ಯಕೀಯ ಕೋರ್ಸ್ ಗಳ ಶುಲ್ಕವನ್ನು ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 10% ಹೆಚ್ಚಿಸಲಾಗುವುದು. ಈ ಮೂಲಕ ಎಂಬಿಬಿಎಸ್ ವ್ಯಾಸಂಗದ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್ ನೀಡಲಾಗಿದೆ. ಶನಿವಾರ ನಡೆದ ಸಭೆಯಲ್ಲಿ ಈ ನಿರ್ಧಾರವನ್ನು ಅಂತಿಮಗೊಳಿಸಲಾಯಿತು. ಅಲ್ಲಿ ಎರಡೂ ಪಕ್ಷಗಳು ಒಪ್ಪಂದಕ್ಕೆ ಸಹಿ ಹಾಕಿದವು. ಅಧಿಕೃತವಾಗಿ ಹೊಸ ಶುಲ್ಕವನ್ನು ನಿಗದಿಪಡಿಸಿದವು. ಹೊಸ ಶುಲ್ಕ ರಚನೆಯ ಅಡಿಯಲ್ಲಿ, ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿನ ಸರ್ಕಾರಿ ಕೋಟಾ ಸೀಟುಗಳಿಗೆ ಈಗ 1,40,621 ರೂ., ಈ ಕಾಲೇಜುಗಳಲ್ಲಿ ಖಾಸಗಿ ಸೀಟುಗಳಿಗೆ 11,88,167 ರೂ ಆಗಲಿದೆ. ಇದು ಕಳೆದ ವರ್ಷದ ಶುಲ್ಕಕ್ಕಿಂತ ಗಮನಾರ್ಹ ಏರಿಕೆಯನ್ನು ಸೂಚಿಸುತ್ತದೆ. ಅಲ್ಲಿ ಸರ್ಕಾರಿ ಕೋಟಾದ ಸೀಟುಗಳ ಬೆಲೆ 1,28,746 ರೂ ಮತ್ತು ಖಾಸಗಿ ಸೀಟುಗಳಿಗೆ 9,94,906 ರೂ ಆಗಿತ್ತು. ಹೆಚ್ಚಿದ ನಿರ್ವಹಣಾ ವೆಚ್ಚ, ಸಿಬ್ಬಂದಿ ವೇತನ ಹೆಚ್ಚಳ ಮತ್ತು ಇತರ ವೆಚ್ಚಗಳನ್ನು ಉಲ್ಲೇಖಿಸಿ ಖಾಸಗಿ ವೈದ್ಯಕೀಯ ಕಾಲೇಜು…