Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಬೆಳಗಾವಿಯಲ್ಲಿ ನಡೆದಿರುವುದು 60 ಪರ್ಸೆಂಟ್ ವಸೂಲಿ ಮಾಡಿದ ನೆನಪಿನ ಜಾತ್ರೆಯೇ ಹೊರತು ಕಾಂಗ್ರೆಸ್ ಸಮಾವೇಶವಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಟೀಕಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಮಹಾತ್ಮ ಗಾಂಧೀಜಿ ಹೆಸರಲ್ಲಿ ಕಾಂಗ್ರೆಸ್ ಸಮಾವೇಶ ಮಾಡಲಾಗಿದೆ. ಗಾಂಧೀಜಿ ಬಗ್ಗೆ ಅಷ್ಟೊಂದು ಪ್ರೀತಿ ಇದ್ದರೆ, ಕಾಂಗ್ರೆಸ್ ಭವನಕ್ಕೆ ಗಾಂಧೀಜಿ ಅಥವಾ ಸರ್ದಾರ್ ವಲ್ಲಭಭಾಯಿ ಪಟೇಲ್ ಹೆಸರಿಡಬೇಕಿತ್ತು. ಸೋನಿಯಾ ಗಾಂಧಿಯಾಗಲೀ, ರಾಹುಲ್ ಗಾಂಧಿಯಾಗಲೀ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಲಿಲ್ಲ. ಇವರಿಗೆ ಗಾಂಧೀಜಿಯ ಹೆಸರು ಹೇಳುವ ನೈತಿಕತೆ ಇಲ್ಲ. ಇದು 60 ಪರ್ಸೆಂಟ್ ವಸೂಲಿ ಮಾಡುವ ನೆನಪಿನ ಜಾತ್ರೆಯೇ ಹೊರತು ಸಮಾವೇಶವಲ್ಲ ಎಂದರು. ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿದೆ. ಹಸುವಿನ ಕೆಚ್ಚಲು ಕತ್ತರಿಸಿದ್ದು, ಬ್ಯಾಂಕ್ ದರೋಡೆ, ಮಹಿಳೆ ಮೇಲೆ ಅತ್ಯಾಚಾರ ಮೊದಲಾದ ಘಟನೆಗಳನ್ನು ಕಡೆಗಣಿಸಿ ಸರ್ಕಾರ ಸಮಾವೇಶ ಮಾಡಿದೆ. ಅಭಿವೃದ್ಧಿ ಬಗ್ಗೆ ಕೇಳಿದರೆ ಬಿಜೆಪಿ ಸರ್ಕಾರದ ಅವಧಿಗೆ ಹೋಲಿಸುತ್ತಾರೆ ಎಂದರೆ ಕಾಂಗ್ರೆಸ್ *ಹೇಗೆ ಭಿನ್ನವಾಗುತ್ತದೆ?* ಕಾಂಗ್ರೆಸ್ ಶಾಸಕರು ಕೂಡ ಅನುದಾನ ಸಿಕ್ಕಿಲ್ಲ ಎಂದು ಹೇಳುತ್ತಿದ್ದಾರೆ. ಗಾಂಧೀಜಿಯಂತೆ…
ಇಂಡೋನೇಷ್ಯಾದ ಮಧ್ಯ ಜಾವಾ ಪ್ರಾಂತ್ಯದಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಕನಿಷ್ಠ 16 ಜನರು ಸಾವನ್ನಪ್ಪಿದ್ದಾರೆ ಮತ್ತು 10 ಜನರು ಗಾಯಗೊಂಡಿದ್ದಾರೆ ಎಂದು ಸರ್ಕಾರಿ ಅಧಿಕಾರಿಗಳು ತಿಳಿಸಿದ್ದಾರೆ. ಪೆಕಲೋಂಗನ್ ನಗರದಲ್ಲಿ ಭೂಕುಸಿತವು ಭಾರಿ ಮಳೆಯಿಂದಾಗಿ ಪ್ರಚೋದಿಸಲ್ಪಟ್ಟಿದೆ ಎಂದು ದೇಶದ ವಿಪತ್ತು ತಗ್ಗಿಸುವ ಏಜೆನ್ಸಿಯ ವಕ್ತಾರರು ಮಂಗಳವಾರ ತಿಳಿಸಿದ್ದಾರೆ. ಮಳೆ ಹಲವಾರು ದಿನಗಳವರೆಗೆ ಮುಂದುವರಿಯುವ ನಿರೀಕ್ಷೆಯಿದೆ ಎಂದು ಎಚ್ಚರಿಕೆ ನೀಡಿದ್ದರಿಂದ ಕಾಣೆಯಾದ ಇನ್ನೂ ಮೂವರಿಗಾಗಿ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ. ಭೂಕುಸಿತದಿಂದ ಮನೆಗಳು ತೀವ್ರವಾಗಿ ಹಾನಿಗೊಳಗಾಗಿವೆ ಮತ್ತು ಭಾಗಶಃ ಹೂತುಹೋಗಿವೆ ಎಂದು ಸ್ಥಳೀಯ ಸುದ್ದಿ ಸಂಸ್ಥೆ ಕೊಂಪಾಸ್ ಟಿವಿ ತೋರಿಸಿದೆ. ಹಲವಾರು ಕಾರುಗಳು ಸಹ ಮಣ್ಣಿನಲ್ಲಿ ಮುಳುಗಿರುವುದು ಕಂಡುಬಂದಿದೆ. ರಸ್ತೆಗಳು ಹಾನಿಗೊಳಗಾಗಿದ್ದು, ಅವುಗಳ ಮೇಲೆ ಕಲ್ಲುಗಳು ಹರಡಿವೆ. ಎರಡು ಸೇತುವೆಗಳಿಗೂ ಹಾನಿಯಾಗಿದೆ ಎಂದು ವಕ್ತಾರರು ತಿಳಿಸಿದ್ದಾರೆ. https://kannadanewsnow.com/kannada/breaking-saif-ali-khan-discharged-from-mumbais-lilavati-hospital-photo-goes-viral-saif-ali-khan/ https://kannadanewsnow.com/kannada/who-defeated-babasaheb-ambedkar-in-the-elections/
ಬೆಳಗಾವಿ: ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದು ಯಾರು..? ಎರಡು ಬಾರಿ ಅಂಬೇಡ್ಕರ್ ಅವರನ್ನು ಸರ್ವಾನುಮತದಿಂದ ಆರಿಸಿ ತಂದಿದ್ದು ನಾವು ಎಂಬುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಐತಿಹಾಸಿಕ ಜೈ ಬಾಪು-ಜೈ ಭೀಮ್- ಜೈ ಸಂವಿಧಾನ ಅಭಿಯಾನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದಂತ ಅವರು, ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದು ಯಾರು..? ಎರಡು ಬಾರಿ ಅಂಬೇಡ್ಕರ್ ಅವರನ್ನು ಸರ್ವಾನುಮತದಿಂದ ಆರಿಸಿ ತಂದಿದ್ದು ನಾವು. ರಾಜ್ಯಸಭಾ ಸದಸ್ಯರಾಗಿದ್ದ ಎಂ.ಆರ್ ಜೈಕರ್ ಅವರ ರಾಜೀನಾಮೆ ಕೊಡಿಸಿ, ಆ ಜಾಗದಲ್ಲಿ ಅಂಬೇಡ್ಕರ್ ಅವರನ್ನು ಆರಿಸಿ ತಂದಿದ್ದು ಕಾಂಗ್ರೆಸ್ ಎಂಬುದಾಗಿ ಹೇಳಿದರು. ಪಂಡಿತ್ ಜವಾಹರ್ ಲಾಲ್ ನೆಹರು ಅವರು, ಮಹಾತ್ಮ ಗಾಂಧೀಜಿಯವರು, ನಮ್ಮ ಮೇಲೆ ಆಪಾದನೆ ಮಾಡುತ್ತೀರಿ, ನೀವು ಏನು ಮಾಡಿದಿರಿ ಅವರಿಗೆ? ಎಂಬುದಾಗಿ ಪ್ರಶ್ನಿಸಿದರು. https://twitter.com/INCKarnataka/status/1881661660362133654 https://kannadanewsnow.com/kannada/cm-siddaramaiah-warns-of-serious-action-against-anti-social-elements/ https://kannadanewsnow.com/kannada/breaking-bengaluru-fir-filed-against-it-officer-for-assaulting-sexually-assaulting-lawyer/
ಬೆಳಗಾವಿ : ಮಹಿಳೆಯರಿಗೆ ರಕ್ಷಣೆ ದೊರಕಬೇಕು. ಬಲಾತ್ಕಾರದಂತಹ ಹೀನ ಕೃತ್ಯಗಳು ನಡೆಯಬಾರದು. ಸಮಾಜದಲ್ಲಿ ಸಮಾಜಘಾತಕ ಶಕ್ತಿಗಳು ಇಂಥ ಕೆಲಸ ಮಾಡುತ್ತವೆ. ಅವರ ವಿರುದ್ಧ ಗಂಭೀರ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಕೆ ನೀಡಿದರು. ಅವರು ಇಂದು ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಇಡೀ ವರ್ಷ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಅಭಿಯಾನವನ್ನು ಮಾಡುತ್ತಿದ್ದೇವೆ. ಗಾಂಧೀಜಿಯವರ ತತ್ವಾದರ್ಶಗಳನ್ನು ಮತ್ತೆ ಪುನಸ್ಥಾಪಿಸಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಗಾಂಧೀಜಿ ಹಾಗು ಅವರ ವಿಚಾರಧಾರೆಗಳು ಇಡೀ ವಿಶ್ವಕ್ಕೆ ಇಂದಿಗೂ ಪ್ರಸ್ತುತ ಎಂದರು. ಗಾಂಧೀಜಿ ಸೌಹಾರ್ದತೆ, ಸಮಾನತೆ ಬರಬೇಕು, ಅಸ್ಪೃಶ್ಯತೆ ಹೋಗಲಾಡಿಸಲು, ಮಹಿಳೆಯರಿಗೆ ಸ್ವಾತಂತ್ರ್ಯ ಅವರ ಹಕ್ಕುಗಳ ರಕ್ಷಣೆಯಾಗಬೇಕೆಂದು ಪ್ರತಿಪಾದಿಸಿದ್ದರು. ಗಾಂಧೀಜಿ, ಬಸವಣ್ಣ, ಕನಕದಾಸರ ವಿಚಾರಗಳು ಸಂವಿಧಾನದಲ್ಲಿ ಅಡಕವಾಗಿವೆ ಎಂದರು. ಕಾಂಗ್ರೆಸ್ ಸಂವಿಧಾನದ ಪರವಾಗಿದೆ ಗಾಂಧೀಜಿ, ಅಂಬೇಡ್ಕರ್ ಮತ್ತು ಸಂವಿಧಾನವನ್ನು ವಿರೋಧಿಸುವ ಅನಾಹುತಕಾರಿ ರಾಜಕಾರಣ ನಡೆಯುತ್ತಿದೆ. ಅದ್ದರಿಂದ ಇವುಗಳ ರಕ್ಷಣೆ ಮಾಡುವುದು ಕಾಂಗ್ರೆಸ್ ನ ಜವಾಬ್ದಾರಿ. ನಾವು ಸಂವಿಧಾನದ ಪರವಾಗಿದ್ದೇವೆ. ಅವರು ಮನುವಾದದ ಪರವಾಗಿದ್ದಾರೆ ಎಂದು…
ಬೆಂಗಳೂರು: ನಮ್ಮ ಮೆಟ್ರೋ ಕಬ್ಬನ್ ಪಾರ್ಕ್ ಬಳಿಯ ಆದಾಯ ತೆರಿಗೆ ಇಲಾಖೆ ಕಚೇರಿಯ ಪ್ರವೇಶ ದ್ವಾರವನ್ನು ಪ್ರಯಾಣಿಕರ ಸೇವೆಗೆ ತೆರೆದಿರಲಿಲ್ಲ. ಇದೀಗ ಪ್ರಯಾಣಿಕರ ಪ್ರವೇಶಕ್ಕೆ ಮುಕ್ತಗೊಳಿಸಲಾಗಿದೆ. ಈ ಕುರಿತಂತೆ ಬಿಎಂಆರ್ ಸಿಎಲ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ 13-01-2025ರಿಂದ ಕಬ್ಬನ್ ಪಾರ್ಕ್ ನ ಮೆಟ್ರೋ ಎಸ್ಟಿಎನ್ ಜಿ ಪ್ರವೇಶದ್ವಾರ ಅಂದರೆ ಆದಾಯ ತೆರಿಗೆ ಕಚೇರಿಯ ಬಳಿಯ ಪ್ರವೇಶದ್ವಾರವನ್ನು ಸಾರ್ವಜನಿಕರಿಗೆ ತೆರೆಯಲಾಗಿತ್ತು. ಆ ಬಳಿಕವೂ ಕೆಲ ನಿರ್ವಹಣಾ ಕಾಮಗಾರಿ ಮುಂದುವರೆದಿತ್ತು ಎಂದಿದೆ. ಇಂದಿನಿಂದ ಕಬ್ಬನ್ ಪಾರ್ಕ್ ಮೆಟ್ರೋ ಎಸ್ಟಿಎನ್ ಜಿ ಪ್ರವೇಶದ್ವಾರ (ಆದಾಯ ತೆರಿಗೆ) ಭಾಗವನ್ನು ಸಾರ್ವಜನಿಕರ ಅನುಕೂಲಕ್ಕಾಗಿ ತೆರೆಯಲಾಗಿದೆ. ಮೆಟ್ರೋ ಪ್ರಯಾಣಿಕರು ಈ ಪ್ರವೇಶ ಮಾರ್ಗದ ಅನುಕೂಲವನ್ನು ಪಡೆಯುವಂತೆ ಮನವಿ ಮಾಡಿದೆ. https://kannadanewsnow.com/kannada/big-shock-to-village-administrators-in-the-state-govt-orders-them-to-perform-duties-in-basic-posts/ https://kannadanewsnow.com/kannada/breaking-saif-ali-khan-discharged-from-mumbais-lilavati-hospital-photo-goes-viral-saif-ali-khan/ https://kannadanewsnow.com/kannada/breaking-bengaluru-fir-filed-against-it-officer-for-assaulting-sexually-assaulting-lawyer/
ಬೆಂಗಳೂರು: ಕಾಂಗ್ರೆಸ್ಸಿಗರು ಇಂದಿನ ಸಮಾವೇಶಕ್ಕೆ ಬಳಸಿದ ಹಣ ಯಾವುದು? ಅದರ ಲೆಕ್ಕ ಕೊಡಬೇಕು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಗ್ರಹಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅದು ಕಾಂಗ್ರೆಸ್ಸಿನ ಖಾತೆಯಿಂದ ಖರ್ಚಾದ ಹಣವೇ? ಅಥವಾ ನೀವು ಸರಕಾರದ ಬೊಕ್ಕಸದಿಂದ ಖರ್ಚು ಮಾಡಿದ್ದೀರಾ ಎಂಬುದನ್ನು ಜನರಿಗೆ ತಿಳಿಸಬೇಕು ಎಂದು ಒತ್ತಾಯಿಸಿದರು. ಸುವರ್ಣಸೌಧದ ಮುಂದೆ ಗಾಂಧಿ ಪ್ರತಿಮೆಯನ್ನು ಇವತ್ತು ಪ್ರತಿಷ್ಠಾಪನೆ ಮಾಡಿದ್ದಾರೆ. ಸರಕಾರಿ ಬೊಕ್ಕಸದಿಂದ ಗಾಂಧಿ ಪ್ರತಿಮೆ ಪ್ರತಿಷ್ಠಾಪನೆಗೆ ನಮ್ಮ ವಿರೋಧವಿಲ್ಲ ಎಂದು ತಿಳಿಸಿದರು. ಇದು ಮಹಾತ್ಮ ಗಾಂಧಿಯವರ ಕಾಲದ ಕಾಂಗ್ರೆಸ್ ಪಕ್ಷ ಅಲ್ಲ; ಮಹಾತ್ಮ ಗಾಂಧಿ ಸಿದ್ಧಾಂತಕ್ಕೂ ಇವತ್ತಿನ ಗಾಂಧಿಗಳ ಕಾಂಗ್ರೆಸ್ಸಿನ ಸಿದ್ಧಾಂತಕ್ಕೂ ಅಜಗಜಾಂತರವಿದೆ. ಅವತ್ತಿನ ಗಾಂಧಿ ಕಾಂಗ್ರೆಸ್ ಪಕ್ಷಕ್ಕೆ ಯಾರು ಮದ್ಯಪಾನ ಮಾಡುತ್ತಿದ್ದರೋ ಅವರು ಸದಸ್ಯರಾಗುವ ಹಾಗಿರಲಿಲ್ಲ; ಇವತ್ತಿನ ಕಾಂಗ್ರೆಸ್ಸಿನವರು ರಾತ್ರಿಯಿಡೀ ಕುಡಿದು ಮಲಗಿದ್ದು, ಬೆಳಿಗ್ಗೆ ಸಮಾವೇಶ ಮಾಡುತ್ತಾರೆ ಎಂದು ಟೀಕಿಸಿದರು. ಎಲ್ಲರೂ ಖಾದಿಧಾರಿಗಳಾಗಿ ಇರಬೇಕು ಎಂಬುದು ಹಳೆ ಕಾಂಗ್ರೆಸ್ಸಿನ ಸಿದ್ಧಾಂತ. ಇವತ್ತು ಶೇ 5-…
ಬೆಳಗಾವಿ : “ಗಾಂಧೀಜಿ ಹಾಗೂ ಕಾಂಗ್ರೆಸ್ ಕೊಟ್ಟ ಅಹಿಂಸೆಯ ಆದರ್ಶವನ್ನು ವಿಶ್ವ ಒಪ್ಪಿದೆ. ಇದನ್ನು ಉಳಿಸಿಕೊಂಡು, ಮುಂದಿನ ಪೀಳಿಗೆಗೆ ತಿಳಿಸಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬೆಳಗಾವಿಯ ಸರ್ಕಿಟ್ ಹೌಸ್ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದರು. ಮಂಗಳವಾರದ ಕಾರ್ಯಕ್ರಮಗಳ ಬಗ್ಗೆ ಮಾಧ್ಯಮಗಳು ಕೇಳಿದಾಗ, “ಗಾಂಧೀಜಿ ಅವರ ತತ್ವ ಆದರ್ಶಗಳು, ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನ ಉಳಿಸಬೇಕು. ಇದು ಕೇವಲ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮ ಅಲ್ಲ, ದೇಶದ ಕಾರ್ಯಕ್ರಮ. ಗಾಂಧೀಜಿ ಅವರು ನಮ್ಮೊಂದಿಗೆ ಇಲ್ಲದಿದ್ದರೂ, ತತ್ವ ಸಿದ್ಧಾಂತಗಳ ಮೂಲಕ ಸದಾ ಜೀವಂತವಾಗಿರುತ್ತಾರೆ. ಗಾಂಧೀಜಿ ಅವರ ಪರಂಪರೆಯನ್ನು ನಾವು ಮುಂದುವರಿಸಿಕೊಂಡು ಹೋಗಬೇಕು” ಎಂದು ತಿಳಿಸಿದರು. “ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮಗಳನ್ನು ಮುಂದೂಡಲಾಗಿತ್ತು. ಹೀಗಾಗಿ ಇಂದು ಜೈ, ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ನಡೆಸುತ್ತಿದ್ದೇವೆ. ಈ ಕಾರ್ಯಕ್ರಮದ ಮೂಲಕ…
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಹಳೆ ಪಿಂಚಣಿ ವ್ಯವಸ್ಥೆಯನ್ನು ಜಾರಿಗೊಳಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರಲು ಪ್ರತಿಭಟನೆ ಮುಂದಾಗಿದ್ದಾರೆ. ಈಗಾಗಲೇ ಜನವರಿ 20ರಿಂದ 31ರವರೆಗೆ ಓಪಿಎಸ್ ಜಾರಿಗಾಗಿ ಅನುದಾನಿತ ಶಾಲಾ-ಕಾಲೇಜುಗಳ ನೌಕರರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಪತ್ರ ಚಳುವಳಿಯನ್ನು ಆರಂಭಿಸಿದ್ದಾರೆ. ಆನಂತ್ರ ಫೆಬ್ರವರಿ 7ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಧರಣಿ ಉಪವಾಸ ಸತ್ಯಾಗ್ರಹ ಮಾಡಲು ನಿರ್ಧರಿಸಿದ್ದಾರೆ. ಈ ಕುರಿತು ಕರ್ನಾಟಕ ರಾಜ್ಯ ಅನುದಾನಿತ ಶಾಲಾ-ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದ ರಾಜ್ಯಾಧ್ಯಕ್ಷ ಜಿ ಹನುಮಂತಪ್ಪ ಅವರು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ಅನುದಾನಿತ ಮತ್ತು ಸರ್ಕಾರಿ ನೌಕರರುಗಳಿಗೆ ಹಳೆಯ ನಿಶ್ಚಿತ ಪಿಂಚಣಿ ಸೌಲಭ್ಯವನ್ನು ದಿ:1.4.2006 ರಿಂದ ರದ್ದುಪಡಿಸಲಾಗಿದ್ದು, ಭವಿಷ್ಯದ ಬದುಕು ಅತಂತ್ರವಾಗಿದೆ. ಈ ಕುರಿತು ಕಳೆದ 15 ವರ್ಷಗಳಿಂದ ನಮ್ಮ ಸಂಘಟನೆ ಹಾಗೂ ರಾಜ್ಯ ಸರ್ಕಾರಿ NPS ನೌಕರರ ಸಂಘಟನೆ ಹೋರಾಟ ಮಾಡುತ್ತಾ ಬಂದಿದೆ. ಈ ಪರಿಣಾಮ ಪ್ರಸ್ತುತ ಆಡಳಿತ ರೂಢ ಸರ್ಕಾರ ತನ್ನ ಚುನಾವಣಾ ಪೂರ್ವದ ಪ್ರಣಾಳಿಕೆಯಲ್ಲಿ…
ಬೆಂಗಳೂರು: ಕರ್ನಾಟಕ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿರುವಂತ ಶಾಸಕ ಸುನೀಲ್ ಕುಮಾರ್ ಅವರು, ಈ ಹುದ್ದೆಯನ್ನು ತೊರೆಯುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ಆ ಮೂಲಕ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹುದ್ದೆ ತೊರೆಯುವ ಸುಳಿವನ್ನು ನೀಡಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ಬಿಜೆಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ತೊರೆಯಲು ನಿರ್ಧಾರ ಮಾಡಿದ್ದೇನೆ. ವೈಯಕ್ತಿಕ ಕಾರಣದಿಂದ ತೊರೆಯಲು ನಿರ್ಧಾರ ಕೈಗೊಳ್ಳಲಾಗಿದೆ ಎಂದಿದ್ದಾರೆ. ಬಹಿರಂಗವಾಗಿ ನಾನು ಈ ವಿಚಾರವನ್ನು ಎಲ್ಲಿಯೂ ಚರ್ಚೆ ಮಾಡಿಲ್ಲ. ಈ ವಿಚಾರ ಪಕ್ಷದ ರಾಜ್ಯಾಧ್ಯಕ್ಷರಿಗೂ ಗೊತ್ತಿಲ್ಲ. ಯಾವುದೇ ಬಣ ರಾಜಕೀಯದಿಂದ ನಾನು ತೊರೆಯುತ್ತಿಲ್ಲ. ನಾನು ಯಾವುದೇ ಬಣ ರಾಜಕೀಯ ಟೀಂ ಜೊತೆಗೂ ಗುರ್ತಿಸಿಕೊಂಡಿಲ್ಲ ಎಂದರು. ಒತ್ತಡ, ವೈಯಕ್ತಿಕ ಸಮಸ್ಯೆಯಿಂದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ತೊರೆಯುವ ನಿರ್ಧಾರಕ್ಕೆ ಬಂದಿದ್ದೇನೆ ಎಂಬುದಾಗಿ ಶಾಸಕ ಸುನೀಲ್ ಕುಮಾರ್ ತಿಳಿಸಿದ್ದಾರೆ. https://kannadanewsnow.com/kannada/breaking-saif-ali-khan-discharged-from-mumbais-lilavati-hospital-photo-goes-viral-saif-ali-khan/ https://kannadanewsnow.com/kannada/breaking-bengaluru-fir-filed-against-it-officer-for-assaulting-sexually-assaulting-lawyer/
ಬೆಂಗಳೂರು: ರಾಜ್ಯದಲ್ಲಿ ನಿವೇಶನ ರಹಿತರಿಗೆ ಸರ್ಕಾರದಿಂದ ಸೈಟ್ ನೀಡೋದಕ್ಕೂ ಅವಕಾಶವಿದೆ. ಎಸ್ಸಿ, ಎಸ್ಟಿ ಹಾಗೂ ಇತರೆ ವರ್ಗದವರಿಗೆ ಸರ್ಕಾರಿ ದರದಲ್ಲಿ ನಿವೇಶನ ನೀಡಲು ಕಾನೂನಿನಡಿ ಅವಕಾಶವಿದೆ. ಆ ಬಗ್ಗೆ ಮಾಹಿತಿ ಮುಂದೆ ಓದಿ. ರಾಜ್ಯದಲ್ಲಿ ಆರ್ಥಿಕವಾಗಿ ಹಿಂದುಳಿದಂತ ನಿವೇಶನ ರಹಿತರು ಸ್ಥಳೀಯ ಆಡಳಿತಕ್ಕೆ ಅರ್ಜಿಯನ್ನು ಸಲ್ಲಿಸುವ ಮೂಲಕ ನಿವೇಶನ ಪಡೆಯಲು ಅವಕಾಶವಿದೆ. ಆದರೇ ಅದಕ್ಕೆ ಇಂತಿಷ್ಟೇ ಎನ್ನುವಂತ ಮಿತಿಯನ್ನು ಕೂಡ ವಿಧಿಸಲಾಗಿದೆ. ಸರ್ಕಾರಿ ಭೂಮಿಯನ್ನು ಅತಿಕ್ರಮಿಸಿ ವಾಸದ ಮನೆಯನ್ನು ದಿನಾಂಕ 14-04-1998 ರೊಳಗೆ ನಿರ್ಮಿಸಿದ್ದರೆ ಮಾತ್ರ ಕಟ್ಟಡ ನಿರ್ಮಿಸಿದ ವಿಸ್ತೀರ್ಣದ ಭೂಮಿಯನ್ನು ಸಕ್ರಮೀಕರಣಕ್ಕಾಗಿ ಕಾಲಂ 94 ಸಿ ಅಡಿಯಲ್ಲಿ ಅರ್ಜಿ ಸಲ್ಲಿಸುವುದಕ್ಕೆ ಅವಕಾಶ ಇದೆ. ತಹಶೀಲ್ದಾರ್ ಕೈಪಿಡಿಯಲ್ಲಿನ ಮಾಹಿತಿ ಪ್ರಕಾರ, ನಗರ ಪ್ರದೇಶದಲ್ಲಿ 20×30 ಅಡಿ ವಿಸ್ತೀರ್ಣದ ನಿವೇಶನ ಜಮೀನಿಗೆ ಮಾತ್ರ ಹಕ್ಕು ಪತ್ರ ನೀಡಲು ತಹಶೀಲ್ದಾರರಿಗೆ ಅಧಿಕಾರ ಇರುತ್ತದೆ. ಇನ್ನೂ ಗ್ರಾಮೀಣ ಪ್ರದೇಶದಲ್ಲಿ 30×40ರ ಅಳತೆಯ ನಿವೇಶನವನ್ನು ಮಂಜೂರು ಮಾಡಬಹುದಾಗಿದೆ. ತಹಶೀಲ್ದಾರರ ಕೈಪಿಡಿಯಲ್ಲಿ ಏನಿದೆ.? ಮಂಜೂರಾದ ನಿವೇಶನದ ಮೌಲ್ಯ ಷೆಡ್ಯೂಲ್ನಲ್ಲಿ ವಿಧಿಸಿರುವ ದರದಂತೆ…