Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಶಿವಮೊಗ್ಗ : ಜಿಲ್ಲೆಯ ಸಾಗರದ ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಠಾನದ ಚುನಾವಣೆಗೆ ನಮ್ಮ ಮಾರಿಕಾಂಬ ಹಿತರಕ್ಷಣಾ ಸಮಿತಿಯಿಂದ ಒಟ್ಟು 33 ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗಿದೆ ಎಂದು ಸಮಿತಿ ಸಂಚಾಲಕ ಎಂ.ಡಿ.ಆನoದ್ ತಿಳಿಸಿದ್ದಾರೆ. ಈ ಮೂಲಕ ಸಾಗರದ ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಠಾನದ ಚುನಾವಣಾ ಕಣಕ್ಕೆ ಹಿತರಕ್ಷಣಾ ಸಮಿತಿ ಧುಮುಕೋದನ್ನು ಖಚಿತ ಪಡಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪಾರದರ್ಶಕ ಹಾಗೂ ದೇವಸ್ಥಾನವನ್ನು ಉತ್ತಮ ರೀತಿಯಲ್ಲಿ ನಡೆಸಿಕೊಂಡು ಹೋಗಲು ಆಸಕ್ತಿ ಇರುವ ನಮ್ಮ ತಂಡಕ್ಕೆ ಮತದಾರರು ಬೆಂಬಲ ನೀಡಬೇಕು. ಹಾಲಿ ಸಮಿತಿ 13 ವರ್ಷಗಳಿಂದ ಅನಧಿಕೃತವಾಗಿ ಆಡಳಿತ ನಡೆಸಿಕೊಂಡು ಬರುತ್ತಿದೆ. ಲೆಕ್ಕಪತ್ರವನ್ನು ಪಾರದರ್ಶಕವಾಗಿ ಇರಿಸಿರಲಿಲ್ಲ. ಇದೀಗ ಮತ್ತೆ ಚುನಾವಣೆ ನಿಲ್ಲಲು ಹಾಲಿ ಅಧ್ಯಕ್ಷ ನಾಗೇಂದ್ರ ಕೆ.ಎನ್. ಮತದಾರರಿಗೆ ಫೋನ್ ಮೂಲಕ ಬೆಂಬಲ ಯಾಚನೆ ಮಾಡುತ್ತಿದ್ದಾರೆ ಎಂಬುದಾಗಿ ಹೇಳಿದರು. 13 ವರ್ಷ ಆಡಳಿತ ನಡೆಸಿ, ನಾಲ್ಕು ಜಾತ್ರೆ ಮಾಡಿದರೂ ಮತ್ತೆ ನಾಗೇಂದ್ರ ಮತ್ತವರ ತಂಡ…

Read More

ತುಮಕೂರು: ಮಧುಗಿರಿಯಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿಯ ನೂತನ ಕಟ್ಟಡ ಹಾಗೂ ಸ್ವಯಂ ಚಾಲಿತ ವಾಹನ ಚಾಲನಾ ಪರೀಕ್ಷಾ ಪಥದ ಶಂಕು ಸ್ಥಾಪನೆಯನ್ನು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ನೆರವೇರಿಸಿದರು. ಈ ಬಳಿಕ ಮಾತನಾಡಿದ ಅವರು, ದೇಶದಲ್ಲಿಯೇ ಅತೀ ಹೆಚ್ಚು ಸ್ವಯಂ ಚಾಲಿತ ಚಾಲನಾ ಪಥವನ್ನು‌ ಹೊಂದಿರುವ ರಾಜ್ಯವೆಂಬ ಹೆಗ್ಗಳಿಕೆಗೆ ಕರ್ನಾಟಕ ರಾಜ್ಯ ಪಾತ್ರವಾಗಿದೆ. ನಮ್ಮ ರಾಜ್ಯದಲ್ಲಿ ಈಗಾಗಲೇ 7 ಟ್ರ್ಯಾಕ್‌ ಚಾಲನೆಯಲ್ಲಿವೆ. ಈ ವರ್ಷ 10 ಟ್ರ್ಯಾಕ್ ಪ್ರಾರಂಭವಾಗಿದೆ. 28 ಟ್ರ್ಯಾಕ್ ಗಳ ಕಾರ್ಯ ಮುಗಿಯುವ ಹಂತದಲ್ಲಿದೆ. ಒಟ್ಟು 45 ಟ್ರ್ಯಾಕ್ ಗಳು ರಾಜ್ಯದಲ್ಲಿ ಕಾರ್ಯ ನಿರ್ವಹಿಸಲಿವೆ ಎಂದರು. ಮಧುಗಿರಿಯಲ್ಲಿ 3.14 ಎಕರೆ ವಿಸ್ತೀರ್ಣ ದಲ್ಲಿ ರೂ.11.50 ಕೋಟಿ ವೆಚ್ಚದಲ್ಲಿ ಸ್ವಯಂ ಚಾಲಿತ ವಾಹನ ಚಾಲನಾ ಪರೀಕ್ಷಾ ಪಥ ಮತ್ತು ಸಾರಿಗೆ ಅಧಿಕಾರಿಗಳ ಕಛೇರಿ ಕಟ್ಟಡದ ಶಂಕು ಸ್ಥಾಪನೆ ನೆರವೇರಿಸಲಾಗಿದೆ. ಸಾರಿಗೆ ಬಸ್ ನಿಲ್ದಾಣ ನವೀಕರಣಕ್ಕೆ ಆದ್ಯತೆ ಹಾಗೂ ತಾಲ್ಲೂಕಿಗೆ ಮತ್ತಷ್ಟು ಬಸ್ ವ್ಯವಸ್ಥೆ ಮಾಡಲಾಗುವುದು ಎಂದು…

Read More

ಬೆಂಗಳೂರು: ಡಿಸೇಲ್ ಟ್ಯಾಂಕರ್ ಹಾಗೂ ಬಸ್ಸಿನ ನಡುವೆ ನಡೆದಂತ ಭೀಕರ ಅಪಘಾತದಲ್ಲಿ ಸೌದಿ ಅರೇಬಿಯಾದಲ್ಲಿ ಕನ್ನಡಿಗ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಡೀಸೆಲ್ ಟ್ಯಾಂಕರ್ ಹಾಗೂ ಬಸ್ಸಿನ ನಡುವೆ ಸೌದಿ ಅರೇಬಿಯಾದಲ್ಲಿ ಭೀಕರ ಅಪಘಾತ ಸಂಭವಿಸಿತ್ತು. ಈ ಅಪಘಾತದಲ್ಲಿ ಧಗಧಗಿಸಿ ಹೊತ್ತಿ ಬಸ್ ಉರಿದಿತ್ತು. ಈ ಅಪಘಾತದಲ್ಲಿ 45 ಭಾರತೀಯರು ಸಜೀವ ದಹನವಾಗಿದ್ದರು. ಡೀಸೆಲ್ ಟ್ಯಾಂಕರ್, ಬಸ್ ನಡುವಿನ ಭೀಕರ ಅಪಘಾತದಲ್ಲಿ ಕರ್ನಾಟಕ ಮೂಲದ ವ್ಯಕ್ತಿ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಪಾಸ್ ಪೋರ್ಟ್ ನಲ್ಲಿ ಕರ್ನಾಟಕದ ಹುಬ್ಬಳ್ಳಿಯ ವಿಳಾಸವಿರುವುದಾಗಿ ಹೇಳಲಾಗುತ್ತಿದೆ. ಸೌದಿ ಅರೇಬಿಯಾ ಅಪಘಾತದಲ್ಲಿ ಹುಬ್ಬಳ್ಳಿ ಮೂಲದ ವ್ಯಕ್ತಿ ಸಾವನ್ನಪ್ಪಿರಬಹುದು ಎನ್ನಲಾಗುತ್ತಿದೆ. ವ್ಯಕ್ತಿಯ ಮೂಲ ಪತ್ತೆಗೆ ಹೈದರಾಬಾದ್ ಪೊಲೀಸರು ಮುಂದಾಗಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/power-outages-in-these-areas-of-sagar-nagar-tomorrow-due-to-road-widening-work/ https://kannadanewsnow.com/kannada/high-court-quashes-deportation-order-against-mahesh-shetty-timarodi/

Read More

ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿಗೆ ಬಿಗ್ ರಿಲೀಫ್ ಎನ್ನುವಂತೆ ಹೈಕೋರ್ಟ್, ಅವರ ವಿರುದ್ಧ ವಿಧಿಸಲಾಗಿದ್ದಂತ ಗಡಿಪಾರು ಆದೇಶವನ್ನು ರದ್ದುಗೊಳಿಸಿ ಆದೇಶಿಸಿದೆ. ಧರ್ಮಸ್ಥಳ ಗ್ರಾಮದಲ್ಲಿನ ಬುರುಡೆ ಕೇಸ್ ಹಾಗೂ ಮನೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಸಂಗ್ರಹದ ಪ್ರಕರಣದಲ್ಲಿ ಆರೋಪಿ ಮಹೇಶ್ ಶೆಟ್ಟಿ ತಿಮರೋಡಿಗೆ ವಿಧಿಸಿದ್ದಂತ ಗಡಿಪಾರು ಶಿಕ್ಷೆಯನ್ನು ಹೈಕೋರ್ಟ್ ರದ್ದುಗೊಳಿಸಿದೆ. ಹೈಕೋರ್ಟ್ ನ್ಯಾಯಮೂರ್ತಿ ಸೂರಜ್ ಗೋವಿಂದ್ ಅವರಿದ್ದಂತ ನ್ಯಾಯಪೀಠವು ಈ ಅರ್ಜಿಯ ವಿಚಾರಣೆ ನಡೆಸಿತು. ಅಲ್ಲದೇ ಪುತ್ತೂರು ಉಪ ವಿಭಾಗಾಧಿಕಾರಿಗೆ ಸೂಕ್ತ ಕಾರಣ, ಸೆಕ್ಷನ್ ಗಳೊಂದಿಗೆ ಆದೇಶ ಹೊರಡಿಸಲು ಹೈಕೋರ್ಟ್ ಸೂಚಿಸಿದೆ. https://kannadanewsnow.com/kannada/power-outages-in-these-areas-of-sagar-nagar-tomorrow-due-to-road-widening-work/ https://kannadanewsnow.com/kannada/rare-pre-hospital-kidney-transplant-performed-by-doctors-at-sparsh-hospital-in-bengaluru-14-year-old-yemeni-boy-revived/

Read More

ಬೆಂಗಳೂರು : ತೀವ್ರ ಆಯಾಸ, ಕುಂಠಿತ ಬೆಳವಣಿಗೆ ಮತ್ತು ಪುನರಾವರ್ತಿತ ಮೂತ್ರದ ಸೋಂಕಿನ ಲಕ್ಷಣಗಳನ್ನು ಹೊಂದಿದ್ದ ಯೆಮೆನ್‌ನ 14 ವರ್ಷದ ಬಾಲಕನೊಬ್ಬನಿಗೆ ಅತ್ಯಂತ ಸಂಕೀರ್ಣವಾಗಿದ್ದ ಆರೋಗ್ಯ ಸ್ಥಿತಿ ನಡುವೆಯೂ ಸ್ಪರ್ಶ್‌ ಯಶವಂತಪುರ ಆಸ್ಪತ್ರೆ ವೈದ್ಯರು ಯಶಸ್ವಿ ಕಿಡ್ನಿ ಕಸಿ ಮಾಡುವ ಮೂಲಕ ಆತನಿಗೆ ಮರು ಜೀವ ಮತ್ತು ಜೀವನವನ್ನು ನೀಡಿದ್ದಾರೆ. ಬಾಲಕನ ಪರಿಸ್ಥಿತಿಯನ್ನು ಕಂಡು ತೀವ್ರ ಆತಂಕಗೊಳಗಾಗಿದ್ದ ಯೆಮೆನ್‌ ದೇಶದ ಪೋಷಕರು ಕುಟುಂಬದ ಸ್ನೇಹಿತರೊಬ್ಬರ ಸಲಹೆಯ ಮೇರೆಗೆ ಸ್ಪರ್ಶ್‌ ಯಶವಂತಪುರ ಆಸ್ಪತ್ರೆಯನ್ನು ಸಂಪರ್ಕಿಸಿದ್ದರು. ವೈದ್ಯಕೀಯ ತನಿಖೆಗಳು ಗಂಭೀರವಾದ ಮೂತ್ರ ಕೋಶ ಸಮಸ್ಯೆ ಇರುವುದನ್ನು ದೃಢಪಡಿಸಿದವು – ವೆಸಿಕೌರೆಟೆರಲ್ ರಿಫ್ಲಕ್ಸ್ (VUR), ಮೂತ್ರವು ಮೂತ್ರಕೋಶದಿಂದ ಮೂತ್ರಪಿಂಡಗಳಿಗೆ ಹಿಮ್ಮುಖವಾಗಿ ಹರಿಯುವ ಸ್ಥಿತಿ, ಇದಾಗಿದ್ದು ಸುಧಾರಿಸಲಾಗದ ಮೂತ್ರಪಿಂಡದ ಹಾನಿಗೆ ಕಾರಣವಾಗುತ್ತದೆ. ಸ್ಪರ್ಶ್‌ ಆಸ್ಪತ್ರೆಗೆ ಬಾಲಕನನ್ನು ಚಿಕಿತ್ಸೆಗೆಂದು ಕರೆ ತಂದ ಸಂದರ್ಭದಲ್ಲಿ ಆತನ ಪರಿಸ್ಥಿತಿ ಅತ್ಯಂತ ಕ್ಲಿಷ್ಟಕರವಾಗಿತ್ತು. ವೈದ್ಯರಿಗೆ ಈತನಿಗೆ ಚಿಕಿತ್ಸೆ ನೀಡುವುದೇ ಬಹುದೊಡ್ಡ ಸವಾಲಾಗಿತ್ತು. ಮೂತ್ರ ಪಿಂಡ ಕಸಿ ಹೊರತಾಗಿ ಅನ್ಯ ಮಾರ್ಗಗಳಿರಲಿಲ್ಲ. ಇಂಗ್ಲಿಷ್‌ ಭಾಷೆಯನ್ನೂ…

Read More

ಶಿವಮೊಗ್ಗ: ಸಾಗರದ ಬಿಹೆಚ್ ರಸ್ತೆ ಅಗಲೀಕರಣ ಕಾಮಗಾರಿಯ ಹಿನ್ನಲೆಯಲ್ಲಿ ನಾಳೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ಮೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಸಾಗರ ತಾಲ್ಲೂಕು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್, ದಿನಾಂಕ 18-11-2025ರ ಮಂಗಳವಾರದಂದು ಸಾಗರದ ಬಿಹೆಚ್ ರಸ್ತೆ ಅಗಲೀಕರಣ ಕಾಮಗಾರಿಯ ಹಿನ್ನಲೆಯಲ್ಲಿ ವಿದ್ಯುತ್ ಕಂಬ ಸ್ಥಳಾಂತರಿಸುವಂತ ಕಾರ್ಯವನ್ನು ಕೈಗೊಳ್ಳಲಾಗುತ್ತಿದೆ ಎಂದಿದ್ದಾರೆ. ರಸ್ತೆ ಅಗಲೀಕರಣ ಕಾಮಗಾರಿಯ ಕಾರಣ ವಿದ್ಯುತ್ ಕಂಬ ಸ್ಥಳಾಂತರದಿಂದಾಗಿ ನಾಳೆ ಬೆಳಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ವಿನೋಬನಗರ, ಮಂಕಳೆ, ನೆಹರುನಗರ, ಅರಳೀಕೊಪ್ಪ, ಜನ್ನತ್ ಗಲ್ಲಿ, ಸಿಗಂದೂರು ಮಾರ್ಕೆಟ್ ರಸ್ತೆ, ಜೋಸೆಫ್ ನಗರ, ಬಿಹೆಚ್ ರಸ್ತೆಗಳಲ್ಲಿ ಕರೆಂಟ್ ಇರೋದಿಲ್ಲ ಎಂದಿದೆ. ಇದಲ್ಲದೇ ಅಶೋಕ ರಸ್ತೆ, ಕೃಷ್ಣ ಗ್ಯಾರೇಜ್, ಎಲ್ಐಸಿ ಆಫೀಸ್ ಹತ್ತಿರ, ಸೊರಬ ಮಾರ್ಕೆಟ್ ರಸ್ತೆ, ತಿಲಕ್ ರಸ್ತೆ, ಶ್ರೀ ಟಾಕೀಸ್ ರೋಡ್, ಜೆಸಿ ರಸ್ತೆ, ಗಾಂಧಿನಗರ, ವಿಜಯನಗರ, ಬಿಕೆ ರಸ್ತೆ, ರಾಮನಗರ, ಹೆಗಡೆ ಫಾರಂ, ಎಸ್ ಎನ್…

Read More

ಬಾಂಗ್ಲಾದೇಶ: ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರಿಗೆ ನ್ಯಾಯಾಲಯ ಮರಣದಂಡನೆ ವಿಧಿಸಿದೆ. ಕಳೆದ ವರ್ಷ ವಿದ್ಯಾರ್ಥಿಗಳ ನೇತೃತ್ವದ ದಂಗೆಯ ಮೇಲೆ ಮಾರಕ ಕ್ರಮ ಕೈಗೊಳ್ಳಲು ಆದೇಶಿಸಿದ್ದಕ್ಕಾಗಿ ಅವರು ತಪ್ಪಿತಸ್ಥರೆಂದು ತಿಂಗಳುಗಳ ಕಾಲ ನಡೆದ ವಿಚಾರಣೆಯನ್ನು ಮುಕ್ತಾಯಗೊಳಿಸಿದೆ. ಬಾಂಗ್ಲಾದೇಶದ ಮಾಜಿ ಪ್ರಧಾನಿಯನ್ನು ಮಾನವೀಯತೆಯ ವಿರುದ್ಧದ ಅಪರಾಧಗಳಿಗೆ ತಪ್ಪಿತಸ್ಥರೆಂದು ನ್ಯಾಯಮಂಡಳಿ ತೀರ್ಪು ನೀಡಿದ ನಂತರ ಅವರಿಗೆ ಮರಣದಂಡನೆ ವಿಧಿಸಲಾಗಿದೆ, ಇದು ಐತಿಹಾಸಿಕ ಮತ್ತು ವಿವಾದಾತ್ಮಕ ತೀರ್ಪನ್ನು ಸೂಚಿಸುತ್ತದೆ. https://twitter.com/ANI/status/1990342591540527254 ಜುಲೈ 2024 ರ ದಂಗೆಯ ಸಂದರ್ಭದಲ್ಲಿ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಮತ್ತು ಇಬ್ಬರು ಹಿರಿಯ ಸಹಾಯಕರು ಮಾನವೀಯತೆಯ ವಿರುದ್ಧ ಅಪರಾಧಗಳನ್ನು ಎಸಗಿದ್ದಾರೆ ಎಂದು ಆರೋಪಿಸಿರುವ ಪ್ರಕರಣದಲ್ಲಿ ಅಂತರರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ ಇಂದು ತನ್ನ ತೀರ್ಪು ನೀಡಲಿದೆ. ಅಲ್ಲದೇ ಅವರಿಗೆ ಮರಣದಂಡನೆಯನ್ನು ವಿಧಿಸಿ ಮಹತ್ವದ ತೀರ್ಪು ನೀಡಿದೆ. ಏತನ್ಮಧ್ಯೆ, ಶೇಖ್ ಹಸೀನಾ ತನ್ನ ಬೆಂಬಲಿಗರನ್ನು ವರ್ಚುವಲ್ ಆಗಿ ಉದ್ದೇಶಿಸಿ ಮಾತನಾಡುತ್ತಾ, ತನ್ನ ವಿರುದ್ಧದ ವಿಚಾರಣೆಯನ್ನು “ಸಂಪೂರ್ಣವಾಗಿ ಕಾನೂನುಬಾಹಿರ” ಎಂದು ಖಂಡಿಸಿದರು. ಮಧ್ಯಂತರ ಪ್ರಧಾನಿ…

Read More

ಬಾಂಗ್ಲಾದೇಶ: ಬಾಗ್ಲಾದ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಗಲ್ಲು ಶಿಕ್ಷೆಯನ್ನು ವಿಧಿಸಲಾಗಿದೆ. 2024ರ ಹಿಂಸಾಚಾರದಲ್ಲಿ ಶೇಖ್ ಹಸೀನಾ ಅಪರಾಧಿ ಎಂಬುದಾಗಿ ಘೋಷಿಸಿದ್ದಂತ ಐಸಿಟಿಯು, ಇದೀಗ ಅವರಿಗೆ ಗಲ್ಲು ಶಿಕ್ಷೆಯನ್ನು ವಿಧಿಸಿದೆ. ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರನ್ನು ಸೋಮವಾರ ಮಾನವೀಯತೆಯ ವಿರುದ್ಧದ ಅಪರಾಧಗಳ ಆರೋಪದ ಮೇಲೆ ಶಿಕ್ಷೆ ವಿಧಿಸಲಾಯಿತು. ಆಗಸ್ಟ್ 2024 ರಲ್ಲಿ ಅವರ ಸರ್ಕಾರವನ್ನು ಉರುಳಿಸಿದ ವಿದ್ಯಾರ್ಥಿಗಳ ನೇತೃತ್ವದ ಪ್ರತಿಭಟನೆಗಳ ಮೇಲೆ ಮಾರಕ ಕ್ರಮ ಕೈಗೊಳ್ಳಲು ಆದೇಶಿಸುವಲ್ಲಿ ಅವರ ಪಾತ್ರಕ್ಕಾಗಿ ಆಗಿದೆ. ಗೈರುಹಾಜರಿಯಲ್ಲಿ ನೀಡಲಾದ ತೀರ್ಪು, ಫೆಬ್ರವರಿ 2026 ರಲ್ಲಿ ನಡೆಯಲಿರುವ ರಾಷ್ಟ್ರೀಯ ಚುನಾವಣೆಗಳಿಗೆ ಮುಂಚಿತವಾಗಿ ದೇಶದ ರಾಜಕೀಯ ಪ್ರಕ್ಷುಬ್ಧತೆಯಲ್ಲಿ ನಾಟಕೀಯ ಏರಿಕೆಯನ್ನು ಸೂಚಿಸುತ್ತದೆ. ದಂಗೆಯ ಸಮಯದಲ್ಲಿ ಢಾಕಾದಿಂದ ಪಲಾಯನ ಮಾಡಿದ ನಂತರ 78 ವರ್ಷದ ಹಸೀನಾ ಭಾರತದಲ್ಲಿ ವಾಸಿಸುತ್ತಿದ್ದಾರೆ. ವಿಚಾರಣೆಗೆ ಹಾಜರಾಗಲು ಸೂಚಿಸಿದ್ದರೂ ಮತ್ತೆ ಮತ್ತೆ ನ್ಯಾಯಾಲಯದ ಆದೇಶಗಳನ್ನು ಅವರು ಧಿಕ್ಕರಿಸಿದ್ದರು, ಇದನ್ನು ಅವರು “ನ್ಯಾಯಶಾಸ್ತ್ರೀಯ ತಮಾಷೆ” ಎಂದು ಕರೆದಿದ್ದಾರೆ. ಕೊಲೆಯನ್ನು ತಡೆಯುವಲ್ಲಿ ವಿಫಲತೆ ಸೇರಿದಂತೆ ಐದು…

Read More

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಹಿಳಾ ಅಭಿವೃದ್ಧಿ ನಿಗಮ ವತಿಯಿಂದ 2025-26ನೇ ಸಾಲಿಗೆ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿ.15 ಕೊನೆಯ ದಿನವಾಗಿದೆ. ಯೋಜನೆಗಳು: ಉದ್ಯೋಗಿನಿ ಯೋಜನೆ: ವಯೋಮಿತಿ 18 ರಿಂದ 55 ವರ್ಷಗಳೊಳಗಿರುವ ಮಹಿಳೆಯರು ಆದಾಯ ಉತ್ಪನ್ನಕರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸ್ವಯಂ ಉದ್ಯೋಗಿಗಳಾಗಲು ಬ್ಯಾಂಕ್ ಗಳ ಮೂಲಕ ಸಾಲ ಮತ್ತು ನಿಗಮದ ಮೂಲಕ ಸಹಾಯಧನ ನೀಡಲಾಗುತ್ತಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಆದಾಯ ಮಿತಿ ರೂ.02 ಲಕ್ಷ ಹೊಂದಿರಬೇಕು. ಘಟಕ ವೆಚ್ಚ ಕನಿಷ್ಠ ರೂ.01 ಲಕ್ಷದಿಂದ ಗರಿಷ್ಟ ರೂ.03 ಲಕ್ಷ, ಶೇ.50 ರಷ್ಟು ಸಹಾಯಧನ ನೀಡಲಾಗುವುದು. ಸಾಮಾನ್ಯ ವರ್ಗದವರಿಗೆ ಆದಾಯ ಮಿತಿ ರೂ.1.50 ಲಕ್ಷ ಹೊಂದಿರಬೇಕು. ಘಟಕ ವೆಚ್ಚ ಗರಿಷ್ಟ ರೂ.03 ಲಕ್ಷ, ಶೇ.30 ರಷ್ಟು ಸಹಾಯಧನ ನೀಡಲಾಗುವುದು. ಚೇತನ ಯೋಜನೆ: ದಮನಿತ ಮಹಿಳೆಯರಿಗೆ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ರೂ.30 ಸಾವಿರ ಪ್ರೋತ್ಸಾಹಧನ ನೀಡಲಾಗುತ್ತದೆ (ವಯೋಮಿತಿ 18 ವರ್ಷ ಮೇಲ್ಪಟ್ಟು). ಧನಶ್ರೀ…

Read More

ಬಾಂಗ್ಲಾದೇಶ: 2024ರ ಬಾಂಗ್ಲಾ ಹಿಂಸಾಚಾರದ ಪ್ರಕರಣದಲ್ಲಿ ಮಾಜಿ ಅಧ್ಯಕ್ಷೆ ಶೇಖ್ ಹಸೀನಾ ತಪ್ಪಿತಸ್ಥೆ ಎಂಬುದಾಗಿ ಅಂತಾರಾಷ್ಟ್ರೀಯ ಅಪರಾಧಿತ ನ್ಯಾಯಮಂಡಳಿ( ICT) ಘೋಷಣೆ ಮಾಡಿದೆ. ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರನ್ನು ಸೋಮವಾರ ಮಾನವೀಯತೆಯ ವಿರುದ್ಧದ ಅಪರಾಧಗಳ ಆರೋಪದ ಮೇಲೆ ಶಿಕ್ಷೆ ವಿಧಿಸಲಾಯಿತು. ಆಗಸ್ಟ್ 2024 ರಲ್ಲಿ ಅವರ ಸರ್ಕಾರವನ್ನು ಉರುಳಿಸಿದ ವಿದ್ಯಾರ್ಥಿಗಳ ನೇತೃತ್ವದ ಪ್ರತಿಭಟನೆಗಳ ಮೇಲೆ ಮಾರಕ ಕ್ರಮ ಕೈಗೊಳ್ಳಲು ಆದೇಶಿಸುವಲ್ಲಿ ಅವರ ಪಾತ್ರಕ್ಕಾಗಿ. ಗೈರುಹಾಜರಿಯಲ್ಲಿ ನೀಡಲಾದ ತೀರ್ಪು, ಫೆಬ್ರವರಿ 2026 ರಲ್ಲಿ ನಡೆಯಲಿರುವ ರಾಷ್ಟ್ರೀಯ ಚುನಾವಣೆಗಳಿಗೆ ಮುಂಚಿತವಾಗಿ ದೇಶದ ರಾಜಕೀಯ ಪ್ರಕ್ಷುಬ್ಧತೆಯಲ್ಲಿ ನಾಟಕೀಯ ಏರಿಕೆಯನ್ನು ಸೂಚಿಸುತ್ತದೆ. ದಂಗೆಯ ಸಮಯದಲ್ಲಿ ಢಾಕಾದಿಂದ ಪಲಾಯನ ಮಾಡಿದ ನಂತರ 78 ವರ್ಷದ ಹಸೀನಾ ಭಾರತದಲ್ಲಿ ವಾಸಿಸುತ್ತಿದ್ದಾರೆ. ವಿಚಾರಣೆಗೆ ಹಾಜರಾಗಲು ಮತ್ತೆ ಮತ್ತೆ ನ್ಯಾಯಾಲಯದ ಆದೇಶಗಳನ್ನು ಅವರು ಧಿಕ್ಕರಿಸಿದ್ದರು, ಇದನ್ನು ಅವರು “ನ್ಯಾಯಶಾಸ್ತ್ರೀಯ ತಮಾಷೆ” ಎಂದು ಕರೆದಿದ್ದಾರೆ. ಕೊಲೆಯನ್ನು ತಡೆಯುವಲ್ಲಿ ವಿಫಲತೆ ಸೇರಿದಂತೆ ಐದು ಆರೋಪಗಳನ್ನು ಪ್ರಾಸಿಕ್ಯೂಟರ್‌ಗಳು ಅವರ ವಿರುದ್ಧ ದಾಖಲಿಸಿದ್ದರು, ಪ್ರತಿಭಟನೆಗಳ ಸಮಯದಲ್ಲಿ…

Read More