Author: kannadanewsnow09

ಬೆಂಗಳೂರು: ರಾಜ್ಯದಲ್ಲಿ ಪ್ರತಿಯೊಂದು ಗ್ರಾಮದಲ್ಲಿ ಜಾನುವಾರುಗಳ ಮೇವಿಗಾಗಿ ಗೋಮಾಳ ಮೀಸಲಿಡುವುದು ಕಡ್ಡಾಯ. ಹಾಗಾದ್ರೇ ರಾಜ್ಯ ಸರ್ಕಾರದ ನಿಯಮಗಳಂತೆ ಉಚಿತ ಗೋಮಾಳವನ್ನು ಒದಗಿಸುವ ರೀತಿ ಹೇಗೆ ಎನ್ನುವ ಮಹತ್ವದ ಮಾಹಿತಿಯನ್ನು ಮುಂದೆ ಓದಿ. ಈ ಕುರಿತಂತೆ ಕರ್ನಾಟಕ ಭೂ ಕಂದಾಯ ನಿಯಮಗಳು 19666, 1974ರ ಮಾರ್ಚ್ 7ರ ವರೆಗೆ ತಿದ್ದುಪಾಟಾದ ರೀತ್ಯಾ ನಿಯಮಗಳ ಅಳವಡಿಕೆ ಅನುಸಾರ ಪ್ರತಿ ನೂರು ಜಾನುವಾರಗಳಿಗೆ ಹನ್ನೆರಡು ಹೆಕ್ಟೇರುಗಳಂತೆ ಪ್ರತಿಯೊಂದು ಗ್ರಾಮದ ಜಾನುವಾರಿಗೂ ಸರ್ಕಾರಿ ಭೂಮಿಯನ್ನು ಉಚಿತ ಗೋಮಾಳವಾಗಿ ಪ್ರತ್ಯೇಕವಾಗಿ ಇಡತಕ್ಕದ್ದು ಎಂದಿದೆ. ಜಾನುವಾರುಗಳನ್ನು ಲೆಕ್ಕ ಹಾಕುವಾಗ ಆಡು, ಕುರಿ ಅಥವಾ ಕರು ಅಥವಾ ಹಸು ಅಥವಾ ಎಮ್ಮೆ ಇವುಗಳೊಂದನ್ನೂ ಒಂದೊಂದು ಜಾನುವಾರೆಂದು ಪರಿಗಣಿಸಬೇಕು ಎಂಬುದಾಗಿ ತಿಳಿಸಿದೆ. ಸಂಬಂಧ ಪಟ್ಟ ಗ್ರಾಮದಲ್ಲಿ ಅಥವಾ ಪಕ್ಷದ ಗ್ರಾಮದಲ್ಲಿ ಗ್ರಾಮದ ಜಾನುವಾರು ಮೇಯುವುದಕ್ಕೆ ಅನುಕೂಲವಾಗುವಂತೆ ಸಾಕಷ್ಟು ಅರಣ್ಯ ಪ್ರದೇಶವಿದ್ದರೇ, ಅದರ ವಿಸ್ತೀರ್ಣಕ್ಕನುಗುಣವಾಗಿ ಉಚಿತ ಗೋಮಾಳವಾಗಿ ಪ್ರತ್ಯೇಕವಾಗಿ ಇದೆಯೆಂದು ಪ್ರದೇಶದ ವಿಸ್ತೀರಣವನ್ನು ಕಡಿಮೆ ಮಾಡಬಹುದಾಗಿದೆ. ಗ್ರಾಮದಲ್ಲಿ ಯಾವ ಗೋಮಾಳವೂ ಇಲ್ಲದಿದ್ದರೇ ಅಥವಾ ಇರುವ ಭೂಮಿಯನ್ನು (1)ನೇ…

Read More

ಬೆಂಗಳೂರು: ಪಡಿತರ ಚೀಟಿಯಲ್ಲಿನ ತಿದ್ದುಪಡಿಗೆ ಜನವರಿ 31, 2025 ಕೊನೆಯ ದಿನವಾಗಿದೆ. ತಿದ್ದುಪಡಿ ಮಾಡದೇ ಇದ್ದರೇ ರೇಷನ್ ಕೊಡೋದು ನಿಲ್ಲಿಸಲಾಗುತ್ತದೆ. ಹಾಗೇ ಹೀಗೆ ಅಂತ ವದಂತಿಯೊಂದು ಹರಿದಾಡಿತ್ತು. ಈ ಕಾರಣದಿಂದಾಗಿ ಬೆಂಗಳೂರು ಒನ್ ಕೇಂದ್ರದ ಮುಂದೆ ಜನರು ಕಿಲೋಮೀಟರ್ ಗಟ್ಟಲೇ ಕ್ಯೂ ನಿಂತಿರುವುದು ಕಂಡು ಬಂದಿದೆ. ಬೆಂಗಳೂರಿನ ರಾಜಾಜೀನಗರದ ಬೆಂಗಳೂರು ಓನ್ ಕೇಂದ್ರದ ಮುಂದೆ ರೇಷನ್ ಕಾರ್ಡ್ ತಿದ್ದುಪಡಿಗಾಗಿ ಜನವೋ ಜನ. ಕಿಲೋಮೀಟರ್ ಗಟ್ಟಲೇ ಕ್ಯೂ ನಿಂತ ಜನರಲ್ಲಿ ಒಂದೇ ವಿಚಾರ ಜನವರಿ.31 ಪಡಿತರ ಚೀಟಿ ತಿದ್ದುಪಡಿಗೆ ಕೊನೆಯ ದಿನವಾಗಿದೆ. ಇವತ್ತೇ ಜ.29ರ ಟೋಕನ್ ವಿತರಣೆ ಮಾಡ್ತಾರೆ. ಅದಕ್ಕಾಗಿ ಬೆಳಿಗ್ಗೆ 5 ಗಂಟೆಯಿಂದ ಸರದಿ ಸಾಲಿನಲ್ಲಿ ನಿಂತಿರುವುದಾಗಿ ಹೇಳುತ್ತಿದ್ದಾರೆ. ಈ ಬಗ್ಗೆ ಆಹಾರ ಇಲಾಖೆಯಿಂದ ಮಾಹಿತಿ ನೀಡಿದ್ದು, ಸಾರ್ವಜನಿಕರು ರೇಷನ್ ಕಾರ್ಡ್ ತಿದ್ದುಪಡಿ ಮಾಡೋದಕ್ಕೆ ಯಾವುದೇ ಕೊನೆಯ ದಿನಾಂಕವನ್ನು ನಿಗದಿಪಡಿಸಿಲ್ಲ. ಬೆಂಗಳೂರಿನ ಎಲ್ಲಾ ಸೆಂಟರ್ ಗಳಲ್ಲಿಯೂ ತಿದ್ದುಪಡಿಗೆ ಅವಕಾಶ ನೀಡಲಾಗಿದೆ. ಬೆಂಗಳೂರು ಒನ್, ಗ್ರಾಮ ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿಯೂ ತಿದ್ದುಪಡಿ…

Read More

ಬೆಂಗಳೂರು: ಹಾಸನ ಜಿಲ್ಲೆ, ಯಸಳೂರು ಅರಣ್ಯದಲ್ಲಿ 2023ರ ಡಿ.4ರಂದು ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಹುತಾತ್ಮನಾದ ದಸರಾ ಅಂಬಾರಿ ಹೊರುತ್ತಿದ್ದ ಗಜಶ್ರೇಷ್ಠ ಅರ್ಜುನನ ಸ್ಮಾರಕವನ್ನು ಫೆಬ್ರವರಿ ಮೊದಲ ವಾರ ಉದ್ಘಾಟಿಸುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ವಿಧಾನಸೌಧದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಮುಖಾಮುಖಿರಹಿತ ಪ್ರಮಾಣಪತ್ರ ನೀಡಿಕೆ ವ್ಯವಸ್ಥೆಗೆ ಚಾಲನೆ ನೀಡಿ ಮಾತನಾಡಿದ ಅವರು, ಹುತಾತ್ಮ ಅರ್ಜುನನ ಸ್ಮಾರಕ ಸಂಪೂರ್ಣ ಸಿದ್ಧವಾಗಿದ್ದು ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಸಮಾಲೋಚಿಸಿ ಫೆಬ್ರವರಿ ಮೊದಲ ವಾರದಲ್ಲಿ ಉದ್ಘಾಟಿಸಲಾಗುವುದು ಎಂದರು. ಹುತಾತ್ಮ ಅರ್ಜುನನ ಸ್ಮಾರಕವನ್ನು ಡಿ.4ರ ಪ್ರಥಮ ಪುಣ್ಯ ತಿಥಿಯೊಳಗಾಗಿ ನೆರವೇರಿಸುವ ಉದ್ದೇಶ ಇತ್ತು. ಆದರೆ, ತಾಂತ್ರಿಕ ಕಾರಣಗಳಿಂದ ತಡವಾಗಿದೆ. ಸ್ಮಾರಕ ಅರಣ್ಯ ಪ್ರದೇಶದಲ್ಲಿದ್ದು, ಸಾರ್ವಜನಿಕರು ಸ್ಮಾರಕ ದರ್ಶನಕ್ಕೆ ಬರಲು ತೊಡಕಾಗದ ರೀತಿಯಲ್ಲಿ ಕ್ರಮ ವಹಿಸಲಾಗುವುದು ಎಂದರು. ಬಳ್ಳೆಯಲ್ಲೂ ಸ್ಮಾರಕ: ಕಾಕನಕೋಟೆಯಲ್ಲಿ 1968ರಲ್ಲಿ ನಡೆದ ಖೆಡ್ಡ ಕಾರ್ಯಾಚರಣೆಯಲ್ಲಿ ಸೆರೆಹಿಡಿಯಲಾಗಿದ್ದ ಅರ್ಜುನ ನಾಗರಹೊಳೆ ಅರಣ್ಯ ವ್ಯಾಪ್ತಿಯಲ್ಲಿರುವ ಬಳ್ಳೆ ಆನೆ ಶಿಬಿರದಲ್ಲಿದ್ದ…

Read More

ಶಿವಮೊಗ್ಗ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಪರಿಶಿಷ್ಟ ಜಾತಿ ಉಪಯೋಜನೆಯಡಿಯಲ್ಲಿ ಪ. ಜಾ. ಯುವಜನರ ಸ್ವಾವಲಂಬನೆಗೆ ಉತ್ತೇಜಿಸುವ ತರಬೇತಿಗಾಗಿ ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುವ ಜ.27 ರಿಂದ ಫೆ. 10ರವರೆಗೆ 15 ದಿನಗಳ ಜಿಮ್ ತರಬೇತಿ ಶಿಬಿರಕ್ಕಾಗಿ ದ್ವಿತೀಯ ಪಿಯುಸಿ (ಪಾಸ್/ಫೇಲ್) ವಿದ್ಯಾರ್ಹತೆಯುಳ್ಳ 18 ರಿಂದ 40 ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಯುವನಿಕ ಸಭಾಂಗಣದಲ್ಲಿ ನಡೆಯುವ ಫೆ.11 ರಿಂದ 18ರವರೆಗೆ 8 ದಿನಗಳ ನಿರುಪಣಾ ಮತ್ತು ವಾರ್ತಾ ವಾಚಕ ತರಬೇತಿ ಶಿಬಿರಕ್ಕೆ ದ್ವಿತೀಯ ಪಿಯುಸಿ ವಿದ್ಯಾರ್ಹತೆಯುಳ್ಳ 18 ರಿಂದ 40 ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರೂ ಕ್ರೀಡಾಂಗಣ, ಶಿವಮೊಗ್ಗ ಇಲ್ಲಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಜ. 24ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಈ ತರಬೇತಿಯಲ್ಲಿ ಹಾಜರಾಗುವ ಅಭ್ಯರ್ಥಿಗಳಿಗೆ ಲಘು…

Read More

ಅಮೇರಿಕಾ: ಡೊನಾಲ್ಡ್ ಟ್ರಂಪ್ ಅವರು ಅಮೇರಿಕಾದ ವಾಷಿಂಗ್ಟನ್ ನಲ್ಲಿ ಮಧ್ಯಾಹ್ನ 12 ಗಂಟೆಗೆ ಅಂದರೆ ಭಾರತೀಯ ಕಾಲಮಾನ ರಾತ್ರಿ 10.30ಕ್ಕೆ ಎರಡನೇ ಬಾರಿಗೆ ಅಮೆರಿಕದ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಡೊನಾಲ್ಡ್ ಟ್ರಂಪ್ ಅಮೆರಿಕದ 47ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸೇಂಟ್ ಜಾನ್ಸ್ ಎಪಿಸ್ಕೋಪಲ್ ಚರ್ಚ್ನಲ್ಲಿ ಪ್ರಾರ್ಥನೆಯ ನಂತರ ಯುಎಸ್ ಅಧ್ಯಕ್ಷ ಜೋ ಬೈಡನ್ ಮತ್ತು ಪ್ರಥಮ ಮಹಿಳೆ ಜಿಲ್ ಬೈಡನ್ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಮೆಲಾನಿಯಾ ಟ್ರಂಪ್ ಅವರನ್ನು ಶ್ವೇತಭವನಕ್ಕೆ ಸ್ವಾಗತಿಸಿದರು. ಅಮೆರಿಕದ ಮುಖ್ಯ ನ್ಯಾಯಮೂರ್ತಿ ಜಾನ್ ರಾಬರ್ಟ್ಸ್ ಅವರು ಮಧ್ಯಾಹ್ನ 12 ಗಂಟೆಗೆ (ಭಾರತೀಯ ಕಾಲಮಾನ ರಾತ್ರಿ 10:30) ಪ್ರಮಾಣ ವಚನ ಸ್ವೀಕರಿಸಿದರು. ಟ್ರಂಪ್ ಅಧಿಕಾರ ವಹಿಸಿಕೊಂಡ ನಂತರ ವೈವಿಧ್ಯತೆ, ಸಮಾನತೆ ಮತ್ತು ಒಳಗೊಳ್ಳುವಿಕೆ ಕಾರ್ಯಕ್ರಮಗಳನ್ನು ಕಡಿತಗೊಳಿಸಿ ಮತ್ತು ಯುಎಸ್ ಫೆಡರಲ್ ಸರ್ಕಾರವು ಗಂಡು ಮತ್ತು ಹೆಣ್ಣು ಎಂಬ ಎರಡು ಲಿಂಗಗಳನ್ನು ಮಾತ್ರ ಗುರುತಿಸುತ್ತದೆ ಎಂದು ಘೋಷಿಸುವ ಕಾರ್ಯನಿರ್ವಾಹಕ ಆದೇಶಗಳನ್ನು ಹೊರಡಿಸಲಿದ್ದಾರೆ ಎಂದು ಶ್ವೇತಭವನದ…

Read More

ಚಿತ್ರದುರ್ಗ: 2024-25ನೇ ಸಾಲಿನಲ್ಲಿ ಹೊಸದಾಗಿ, ನವೀಕರಣದ ವಿಕಲಚೇತನರ ರಿಯಾಯಿತಿ ಬಸ್‍ಪಾಸ್‍ಗಾಗಿ ಆನ್‍ಲೈನ್‍ನಲ್ಲಿ ಸರ್ಕಾರ ನಿಗಧಿಪಡಿಸಿರುವ ಸೇವಾಸಿಂಧು ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ರಾಜ್ಯ ರಸ್ತೆ ಸಾರಿಗೆ ನಿಗಮಗಳು ಸರ್ಕಾರದ ನಿರ್ದೇಶನದಂತೆ ಅರ್ಜಿ ಸಲ್ಲಿಸುವ ವಿಕಲಚೇತನ ಫಲಾನುಭವಿಗಳಿಗೆ ರಿಯಾಯಿತಿ ಬಸ್‍ಪಾಸ್‍ಗಳನ್ನು ವಿತರಿಸುತ್ತಿವೆ. ನೂತನ ಬಸ್ ಪಾಸ್ ಪಡೆಯಲು ಹಾಗೂ ಹಾಲಿ ಪಾಸುಗಳ ನವೀಕರಣಕ್ಕಾಗಿ 2025ರ ಫೆ.28 ರವರೆಗೆ ಅವಕಾಶ ನೀಡಿದೆ. ವಿಕಲಚೇತನರು ಖಾಸಗಿ ಕಂಪ್ಯೂಟರ್ ಸೆಂಟರ್‍ಗಳಲ್ಲಿ ಹೆಚ್ಚಿನ ಸೇವಾಶುಲ್ಕ ಪಾವತಿಸಿ, ಅರ್ಜಿ ಸಲ್ಲಿಸುತ್ತಿರುವುದು. ಇದರಿಂದ ವಿಕಲಚೇತನರಿಗೆ ಆರ್ಥಿಕ ತೊಂದರೆಯಾಗುತ್ತಿರುವುದು ಕಂಡು ಬಂದಿರುತ್ತದೆ. ಆದ್ದರಿಂದ ಜಿಲ್ಲೆಯ ವಿಕಲಚೇತನರು ಹೊಸದಾಗಿ, ನವೀಕರಣದ ಬಸ್‍ಪಾಸ್‍ಗಾಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಗ್ರಾಮ ಒನ್ ಕೇಂದ್ರಗಳು ಹಾಗೂ ನಗರ ವ್ಯಾಪ್ತಿಯಲ್ಲಿರುವ ಕರ್ನಾಟಕ ಒನ್ ಕೇಂದ್ರಗಳಲ್ಲಿ ರೂ.25 ಸೇವಾ ಶುಲ್ಕ ಪಾವತಿಸಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ತಿಳಿಸಿದ್ದಾರೆ. https://kannadanewsnow.com/kannada/shimoga-government-employees-association-supports-infrastructure-in-government-schools/ https://kannadanewsnow.com/kannada/are-you-suffering-from-stuttering-participate-in-this-free-workshop-tondre-clear/

Read More

ಶಿವಮೊಗ್ಗ : ರಾಜ್ಯ ಸರ್ಕಾರಿ ನೌಕರರ ಸಂಘದ ನೂತನ ಜಿಲ್ಲಾಧ್ಯಕ್ಷ ಆರ್.ಮೋಹನ್‌ಕುಮಾರ್ ಅವರ ನೇತೃತ್ವದಲ್ಲಿ ನಿನ್ನೆ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್.ಬಂಗಾರಪ್ಪ ಅವರನ್ನು ಸಚಿವರ ನಿವಾಸದಲ್ಲಿ ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಆ‌ರ್. ಮೋಹನ್‌ಕುಮಾರ್ ಅವರು, ಸರ್ಕಾರಿ ಶಾಲೆಗಳಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯಗಳು ಹಾಗೂ ಅಭಿವೃದ್ಧಿಗೆ ತುರ್ತು ಅಗತ್ಯವಾಗಿರುವ ಶಾಲಾ ಕಟ್ಟಡಗಳ ದುರಸ್ತಿ, ಗ್ರಂಥಾಲಯ, ಕ್ರೀಡಾ ಸಾಮಗ್ರಿಗಳು ಹಾಗೂ ಪಠ್ಯ ವಸ್ತುಗಳನ್ನು ಒದಗಿಸುವ ಮೂಲಕ ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ನೌಕರರ ಸಂಘದ ಜಿಲ್ಲಾ ಘಟಕ ವಿಶೇಷ ಗಮನಹರಿಸಲಿದೆ ಎಂದು ಸಚಿವರ ಗಮನಕ್ಕೆ ತಂದರು. ಅಲ್ಲದೇ ಸರ್ಕಾರಿ ಶಾಲೆಗಳ ಸಬಲೀಕರಣಗೊಳಿಸುವುದು ಮತ್ತು ಶಿಕ್ಷಣದ ಗುಣಾತ್ಮಕ ಬದಲಾವಣೆಯಲ್ಲಿ ಸಂಘವು ಪ್ರಮುಖ ಪಾತ್ರ ವಹಿಸಲಿದೆ. ಈ ಮಹತ್ವದ ಸಂದರ್ಭದಲ್ಲಿ ಮಾನ್ಯ ಸಚಿವರು ಅಗತ್ಯ ಸಹಕಾರ ನೀಡುವಂತೆ ಅವರಲ್ಲಿ ಮನವಿ ಮಾಡಿದರು. ಸಚಿವ ಮಧು ಬಂಗಾರಪ್ಪ ಅವರು ಮಾತನಾಡಿ, ಇಂತಹ ಮಹತ್ವದ ಕಾರ್ಯಕ್ಕೆ…

Read More

ಬೆಳಗಾವಿ : ಜನರಲ್ಲಿ ಮಹಾತ್ಮಾ ಗಾಂಧೀಜಿ,ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರಸ್ತುತತೆ ಬಗ್ಗೆ ಅರಿವು ಮೂಡಬೇಕು. ಸಂವಿಧಾನ ರಕ್ಷಣೆ ಮಾಡುವುದು ಎಲ್ಲರ ಜವಾಬ್ದಾರಿ ಎನ್ನುವುದು ತಿಳಿಯಬೇಕು. ಸಂವಿಧಾನದವನ್ನು ನಾವು ರಕ್ಷಿಸಿದರೆ, ಸಂವಿಧಾನ ಭಾರತೀಯರನ್ನು ರಕ್ಷಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. 1924 ರ ಇಸವಿಯಲ್ಲಿ ಬೆಳಗಾವಿಯಲ್ಲಿ ಡಿಸೆಂಬರ್ ನಲ್ಲಿ ಕಾಂಗ್ರೆಸ್ ಅಧಿವೇಶನ ಮಹಾತ್ಮಾ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ ನಡೆದಿತ್ತು. ಗಾಂಧೀಜಿಯವರು ಡಿಸೆಂಬರ್ 26, 1924 ರಲ್ಲಿ ಕಾಂಗ್ರೆಸ್ ಬೆಳಗಾವಿಯಲ್ಲಿಯೇ ಕಾಂಗ್ರೆಸ್ ಅಧ್ಯಕ್ಷರಾದರು. ಅಧಿವೇಶ ನಡೆದು ಒಂದು ಶತಮಾನವಾಗಿರುವ ಹಿನ್ನೆಲೆಯಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಈ ಸಂಬಂಧ ಎಲ್ಲಾ ಸಿದ್ಧತೆಗಳು ನಡೆದಿದ್ದು, ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜೀವಾಲ ಅವರೊಂದಿಗೆ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಕಳೆದ ನಾಲ್ಕೈದು ದಿನಗಳಿಂದ ಇಲ್ಲೇ ಇದ್ದು ಅಚ್ಚುಕಟ್ಟಾಗಿ ಸಿದ್ಧತೆಗಳನ್ನು ಕೈಗೊಂಡಿದ್ದಾರೆ. ನಾಳೆಯೂ ಸಮಾವೇಶ ಯಶಸ್ವಿಯಾಗಿ ನಡೆಯಲಿದೆ ಎಂದು ಭರವಸೆ ವ್ಯಕ್ತಪಡಿಸಿದರು. ಸುಮಾರು ಎರಡು ಲಕ್ಷಕ್ಕೂ ಹೆಚ್ಚು ಜನ ಇಲ್ಲಿ ಸೇರಲಿದ್ದಾರೆ. ಬೆಳಗಾವಿಯಲ್ಲಿ…

Read More

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಭಾರೀ ಕಾಡ್ಗಿಚ್ಚು ಉಂಟಾಗಿದೆ. ಪರಿಸರ ಸೂಕ್ಷ್ಮ ವಲಯವಾಗಿರುವಂತ ಚಿಕ್ಕಮಗಳೂರಿನ ಪಶ್ಚಿಮಘಟ್ಟದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಪಾರ ಕಾಡು ಹೊತ್ತು ಉರಿಯುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟಿಯಲ್ಲಿ ಬಿದುರುತಳ ಪ್ರದೇಶದಲ್ಲಿ ಕಾಡ್ಗಿಚ್ಚು ಉಂಟಾಗಿದೆ. ಇಲ್ಲಿಂದ ಆರಂಭಗೊಂಡಂತ ಬೆಂಕಿ, ಕಾಡಿನ ಇತರೆ ಭಾಗಕ್ಕೂ ವ್ಯಾಪ್ಸಿದೆ. ನೂರಾರು ಎಕರೆ ಪಶ್ಚಿಮ ಘಟ್ಟದ ಅರಣ್ಯ ಪ್ರದೇಶಕ್ಕೆ ಕಾಡ್ಗಿಚ್ಚು ಹಬ್ಬಿದ್ದು, ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಕಾಡ್ಗಿಚ್ಚು ಕ್ಷಣ ಕ್ಷಣಕ್ಕೂ ಹೆಚ್ಚಾಗುತ್ತಿದ್ದು, ಅಗ್ನಿಶಾಮಕ ಸಿಬ್ಬಂದಿಗಳಿಗೆ ಬೆಂಕಿ ನಂದಿಸಲು ಹರಸಾಹಸ ಪಡುವಂತೆ ಆಗಿದೆ. ಇದೀಗ ಸ್ಥಳದಲ್ಲೇ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಮೊಕ್ಕಾಂ ಹೂಡಿದ್ದು, ಬೆಂಕಿ ನಂದಿಸಲು ನೆರವಾಗುತ್ತಿದ್ದಾರೆ. https://kannadanewsnow.com/kannada/vijayapura-brick-kiln-workers-assault-case-five-arrested/ https://kannadanewsnow.com/kannada/important-information-for-those-who-have-taken-admission-in-bachelors-and-masters-degrees-in-ksou/

Read More

ಬೆಂಗಳೂರು: ವಿಜಯಪುರದ ಎಪಿಎಂಸಿ ವ್ಯಾಪ್ತಿಯಲ್ಲಿ ಇರುವ ಇಟ್ಟಿಗೆ ಭಟ್ಟಿಯಲ್ಲಿ ಕಾರ್ಮಿಕರ ಮೇಲೆ ನಡೆದಿರುವ ಹಲ್ಲೆ ಅಮಾನವೀಯವಾಗಿದೆ. ತಪ್ಪಿತಸ್ಥರನ್ನು ಬಂಧಿಸಿದ್ದು, ಕಠಿಣ ಕಾನೂನು ಕ್ರಮವನ್ನೂ ಜರುಗಿಸಲಾಗುವುದು. ಈಗಾಗಲೇ ಆರೋಪಿಗಳನ್ನು ಬಂಧಿಸಿರುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ಈ ಘಟನೆಯ ಬಗ್ಗೆ ಅವರು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ವಿಧಾನಸೌಧದಲ್ಲಿ ಸೋಮವಾರ ಉತ್ತರಿಸಿದ್ದಾರೆ. ಇಟ್ಟಿಗೆ ಭಟ್ಟಿಯಲ್ಲಿ ನಡೆದಿರುವ ಘಟನೆ ಬಗ್ಗೆ ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠರ ಜತೆ ಮಾತನಾಡಿ, ಸೂಕ್ತ ಕ್ರಮ‌ ಜರುಗಿಸಲು ಸೂಚಿಸಿದ್ದೇನೆ. ಅಲ್ಲಿನ ಜಿಲ್ಲಾಧಿಕಾರಿಗಳು ಕರ್ತವ್ಯದ ಮೇಲೆ ಬೆಂಗಳೂರಿನಲ್ಲೇ ಇದ್ದಾರೆ. ಅವರೊಂದಿಗೂ ಈ ಬಗ್ಗೆ ಮಾತನಾಡಿರುವೆ. ತಪ್ಪಿತಸ್ಥರನ್ನು ಹಾಗೆಯೇ ಬಿಡುವ ಪ್ರಶ್ನೆ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಅಂದಹಾಗೇ ಇಟ್ಟಿಗೆ ಕಾರ್ಮಿಕರ ಮೇಲಿನ ಹಲ್ಲೆ ಪ್ರಕರಣದಡಿ ಇಟ್ಟಿಕೆ ಕಾರ್ಖಾನೆಯ ಮಾಲೀಕ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ. https://kannadanewsnow.com/kannada/applications-invited-for-selection-of-nomadic-semi-nomadic-nominated-members/ https://kannadanewsnow.com/kannada/important-information-for-those-who-have-taken-admission-in-bachelors-and-masters-degrees-in-ksou/

Read More