Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಬೆಂಗಳೂರು ನಗರ ಜಿಲ್ಲೆಯ ಅಲೆಮಾರಿ/ಅರೆಅಲೆಮಾರಿ ಜನಾಂಗದವರ ಸಲಹಾ ಸಮಿತಿ/ಪ್ರಗತಿ ಪರಿಶೀಲನಾ ಸಮಿತಿಗೆ ಜಿಲ್ಲಾ ಮಟ್ಟದಲ್ಲಿ ಒಬ್ಬರು ಅಲೆಮಾರಿ/ಅರೆಅಲೆಮಾರಿ ಅಭಿವೃದ್ಧಿ ಸಂಸ್ಥೆಯ ಪ್ರತಿನಿಧಿಯನ್ನು ನಾಮ ನಿರ್ದೇಶಿತ ಸದಸ್ಯರನ್ನಾಗಿ ನೇಮಕ ಮಾಡಲು ಜಿಲ್ಲಾ ಮಟ್ಟದ ಅಲೆಮಾರಿ ಜನಾಂಗದ ಪ್ರತಿನಿಧಿಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಜಾತಿ ಪ್ರಮಾಣ ಪತ್ರ, ಅಲೆಮಾರಿ/ಅರೆಅಲೆಮಾರಿ ಅಭಿವೃದ್ಧಿ ಸಂಸ್ಥೆಯಲ್ಲಿ ಸದಸ್ಯರಾಗಿರುವ ದಾಖಲೆ, ಸಮುದಾಯದ ಪ್ರಗತಿಗಾಗಿ ಅವರು ಮಾಡಿರುವ ಸಾಧನೆಗಳ ವಿವರ ಹಾಗೂ ವೈಯಕ್ತಿಕ ಮಾಹಿತಿಯನ್ನು ಜಿಲ್ಲಾ ಅಧಿಕಾರಿಗಳ ಕಚೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ನಗರ ಜಿಲ್ಲೆ, 1ನೇ ಮಹಡಿ, ಪೋಡಿಯಂ ಬ್ಲಾಕ್, ವಿ ವಿ ಗೋಪುರ, ಡಾ. ಬಿ.ಆರ್. ಅಂಬೇಡ್ಕರ್ ವಿಧಿ, ಬೆಂಗಳೂರು-01 ಇಲ್ಲಿಗೆ ಜನವರಿ 31 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ 080-22867628 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ: ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿರುವಂತ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಸಿಎಂ ಸಿದ್ಧರಾಮಯ್ಯ ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿಯ ವಿಜಯ ಆಸ್ಪತ್ರೆಗೆ ಭೇಟಿ ನೀಡಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಆರೋಗ್ಯ ವಿಚಾರಿಸಿದರು. ಸಚಿವರಾದ ಹೆಚ್.ಸಿ.ಮಹದೇವಪ್ಪ, ಜಿ.ಪರಮೇಶ್ವರ್ ಸೇರಿ ಹಲವರು ಉಪಸ್ಥಿತರಿದ್ದರು. ಅಂದಹಾಗೇ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತದಲ್ಲಿ ಗಾಯಗೊಂಡಿದ್ದರು. ಅವರ ಬೆನ್ನಿನ ಎರಡು ಮೂಳೆಗಳು ಮುರಿತವಾಗಿದ್ದವು. ಹೀಗಾಗಿ ಬೆಳಗಾವಿಯ ವಿಜಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. https://kannadanewsnow.com/kannada/fake-gandhis-brought-freedom-to-the-country-opposition-leader-r-ashoka/ https://kannadanewsnow.com/kannada/important-information-for-those-who-have-taken-admission-in-bachelors-and-masters-degrees-in-ksou/
ಬೆಂಗಳೂರು: ದೇಶಕ್ಕೆ ಸ್ವಾತ್ರಂತ್ಯ ತಂದುಕೊಟ್ಟವರು ಮಹಾತ್ಮ ಗಾಂಧಿ. ಅವರೇ ನಿಜವಾದ ಗಾಂಧಿ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಇವರೆಲ್ಲಾ ನಕಲಿ ಗಾಂಧಿಗಳು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಲೇವಡಿ ಮಾಡಿದರು. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದ ಘಟನೆ ಮಾಸುವ ಮುನ್ನವೇ, ಹೊನ್ನಾವರದಲ್ಲಿ ಕೂಡ ಗರ್ಭಿಣಿ ಹಸುವನ್ನು ಭೀಕರವಾಗಿ ಕೊಲ್ಲಲಾಗಿದೆ. ಕರ್ನಾಟಕದಲ್ಲಿ ಗೋವುಗಳಿಗೆ ರಕ್ಷಣೆ ಇಲ್ಲ ಎಂಬುದು ಇದರಿಂದ ಸಾಬೀತಾಗಿದೆ. ಇದು ಕಿವುಡು ಸರ್ಕಾರ. ರಾಜ್ಯದ ಕಾನೂನು ವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದ್ದರೂ, ಸರ್ಕಾರ ಸಮಾವೇಶ ಮಾಡುತ್ತಿದೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಇವರೆಲ್ಲಾ ಸ್ವಾತಂತ್ರ್ಯ ಹೋರಾಟ ಮಾಡಿದ್ದಾರಾ? ಇವರೆಲ್ಲಾ ಡೂಪ್ಲಿಕೇಟ್ ಗಾಂಧಿಗಳು ಎಂದರು. ಕಾರ್ಮಿಕರಿಗೆ ಥಳಿತ ರಾಜ್ಯದಲ್ಲಿ ಗೃಹ ಸಚಿವರು ಯಾರು ಎನ್ನುವುದೇ ಗೊತ್ತಾಗುತ್ತಿಲ್ಲ. ಎಲ್ಲ ಸಚಿವರು ಗೃಹ ಇಲಾಖೆಯಲ್ಲಿ ಕೈಯಾಡಿಸುತ್ತಿದ್ದಾರೆ. ಭ್ರಷ್ಟಾಚಾರ ಹಾಗೂ ಲಂಚಾವತಾರ ಮಿತಿ ಮೀರಿದೆ. ಶೇ.60 ರಷ್ಟು ಕಮಿಷನ್ ಕೊಟ್ಟರೆ ಮಾತ್ರ ಈ ಸರ್ಕಾರದಲ್ಲಿ ಫೈಲ್ ಮೂವ್…
ಮಂಡ್ಯ: ಮದ್ದೂರು ಪಟ್ಟಣದ ರೈಲ್ವೆ ನಿಲ್ದಾಣದ ಸಮೀಪ ಚಿರತೆಗಳು ಓಡಾಟ ನಡೆಸಿರುವ ಘಟನೆ ಭಾನುವಾರ ಸಂಜೆ ಜರುಗಿದ್ದು, ಸಾರ್ವಜನಿಕರು ಭಯಭೀತರಾಗಿದ್ದಾರೆ. ಮದ್ದೂರು ಪಟ್ಟಣದ ಶಿವಪುರದ ರೈಲು ನಿಲ್ದಾಣ ಹಾಗೂ ಆಶ್ರಯ ಬಡಾವಣೆಯ ನಡುವೆ ಇರುವ ಹರಳೀಮರದ ಬಳಿ ಚಿರತೆ ಮತ್ತು ಎರಡು ಮರಿಗಳು ಭಾನುವಾರ ಸಂಚಾರ ಮಾಡುತ್ತಿರುವುದನ್ನು ವ್ಯಕ್ತಿಯೊಬ್ಬರು ಗಮನಿಸಿದ್ದಾರೆ. ತಕ್ಷಣವೇ ಅಲ್ಲಿಂದ ಪರಾರಿಯಾಗಿದ್ದು, ಆಶ್ರಯ ಬಡಾವಣೆಯ ಸಾರ್ವಜನಿಕರಿಗೆ ಮತ್ತು ರೈಲು ನಿಲ್ದಾಣದ ಪ್ರಯಾಣಿಕರಿಗೆ ಸುದ್ದಿ ತಿಳಿಸಿದ್ದಾರೆ. ಸಾರ್ವಜನಿಕರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಚಿರತೆ ಸಂಚಾರದ ಬಗ್ಗೆ ಸುದ್ದಿ ತಿಳಿಸಿದ್ದಾರೆ. ತಕ್ಷಣವೇ ಎಚ್ಚೆತ್ತುಕೊಂಡ ಅಧಿಕಾರಿಗಳು ರಾತ್ರಿಯೇ ಅಲ್ಲಿ ಬೋನನ್ನು ಇರಿಸಿದ್ದಾರೆ. ಜನನಿಬಿಡ ಪ್ರದೇಶದಲ್ಲಿ ಚಿರತೆ ಮತ್ತು ಎರಡು ಮರಿಗಳು ಸಂಚಾರ ಮಾಡುತ್ತಿರುವುದನ್ನು ವ್ಯಕ್ತಿಯೊಬ್ಬರು ಗಮನಿಸಿದ್ದಾರೆ. ಹೀಗಾಗಿ ಚಿರತೆ ಸೆರೆಗಾಗಿ ಬೋನನ್ನು ಇರಿಸಲಾಗಿದೆ. ಚಿರತೆ ಸೆರೆಗೆ ಅಗತ್ಯ ಕ್ರಮ ಕೈಗೊಂಡಿದ್ದು, ಜನರು ರಾತ್ರಿ ಹೊತ್ತು ಒಬ್ಬರೇ ಓಡಾಟ ಮಾಡುವುದು ಹಾಗೂ ರೈತರು ಜಮೀನುಗಳ ತೆರಳುವಾಗ ಎಚ್ಚರಿಕೆಯಿಂದ ಇರುವಂತೆ ವಲಯ ಅರಣ್ಯಾಧಿಕಾರಿ ಗವಿಯಪ್ಪ ಸಾರ್ವಜನಿಕರಲ್ಲಿ…
ಮಂಡ್ಯ : ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರ ಆಯ್ಕೆ ಪ್ರಶ್ನಿಸಿ ನಡೆಯುತ್ತಿದ್ದ ಪ್ರತಿಭಟನೆ ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತಾಲೂಕಿನ ಹುಲ್ಲುಕೆರೆ ಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಗ್ರಾಮದ ದೇವರಾಜು ಅವರ ಪತ್ನಿ ಮಂಜುಳಾ (48) ಎಂಬಾಕೆಯೇ ಆತ್ಮಹತ್ಯೆಗೆ ಯತ್ನಿಸಿರುವ ಮಹಿಳೆಯಾಗಿದ್ದಾರೆ. ಗ್ರಾಮದ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಆಡಳಿತ ಮಂಡಳಿಗೆ ಮೊದಲ 15 ತಿಂಗಳಿಗೆ ಶೃತಿ ಅವರನ್ನು ಅಧ್ಯಕ್ಷರನ್ನಾಗಿ ಒಪ್ಪಂದದ ಮೇರೆಗೆ ಆಯ್ಕೆ ಮಾಡಲಾಗಿತ್ತು. ಅದರಂತೆ ಅವರ ಅವಽ ಮುಗಿದ ಬಳಿಕ ರಾಜೀನಾಮೆ ನೀಡಿದ್ದರು. ನಂತರ ಅಧ್ಯಕ್ಷರಾಗಿ ವೀಣಾ ಅವರನ್ನು ಆಯ್ಕೆ ಮಾಡಬೇಕಿತ್ತು. ಆದರೆ ಇವರನ್ನು ಬಿಟ್ಟು ಬೇರೆಯವರು ಅಧ್ಯಕ್ಷರನ್ನಾಗಿ ಕೆಲವರು ಮಾಡಿಕೊಂಡರು. ಇದನ್ನು ಪ್ರಶ್ನಿಸಿ ಐವರು ನಿರ್ದೇಶಕರು ರಾಜೀನಾಮೆ ನೀಡಿದ್ದರು. ಬಳಿಕ ಅಧ್ಯಕ್ಷರಾಗಿದ್ದವರು ರಾಜೀನಾಮೆ ನೀಡಿದ್ದ ಓರ್ವ ನಿರ್ದೇಶಕರನ್ನು ತಮ್ಮ ಪರ ಸೆಳೆದುಕೊಂಡು ಬಲವಂತವಾಗಿ ರಾಜೀನಾಮೆ ಕೊಡಿಸಿದ್ದಾರೆಂಬಂತೆ ಹೇಳಿಕೆ ಕೊಡಿಸಿದ್ದರು. ವಿವಾದದ ಹಿನ್ನೆಲೆಯಲ್ಲಿ ಸಭೆ ನಡೆಸಲು ಅವಕಾಶ ನೀಡಿರಲಿಲ್ಲ. ಇಂದು ಏಕಾಏಕಿ ಸಭೆ ನಡೆಸಲು…
ಹರಿಯಾಣ: ಬೆಂಗಳೂರು ನಗರದಲ್ಲಿ ಅಂತಾರಾಷ್ಟ್ರೀಯ ಆಟೋಮೋಟಿವ್ ಟೆಕ್ನಾಲಜಿ ಕೇಂದ್ರ -ಐಕ್ಯಾಟ್ ನ ಮೂರನೇ ಕೇಂದ್ರ ಸ್ಥಾಪನೆಯಾಗಲಿದೆ. ಹರಿಯಾಣದ ಗುರುಗ್ರಾಮದಲ್ಲಿರುವ ಐಕ್ಯಾಟ್ (ICAT- The International Centre for Automotive Technology) ನ ಎರಡು ಕೇಂದ್ರಗಳಿಗೆ ಭೇಟಿ ನೀಡಿದ ಸಚಿವರು; ಮಾಹಿತಿ ಹಾಗೂ ಜೈವಿಕ ತಂತ್ರಜ್ಞಾನದ ನೆಲೆವೀಡಾದ ಬೆಂಗಳೂರಿನಲ್ಲಿ ಇದರ ಮೂರನೇ ಕೇಂದ್ರ ಸ್ಥಾಪನೆ ಮಾಡುವ ಬಗ್ಗೆ ಐಕ್ಯಾಟ್ ನ ಉನ್ನತ ಅಧಿಕಾರಿಗಳ ಜತೆ ಚರ್ಚೆ ನಡೆಸಿದರು. ಅಲ್ಲದೆ; ದಕ್ಷಿಣದಲ್ಲಿಯೇ ಅತ್ಯಂತ ಆಯಕಟ್ಟಿನ ಹಾಗೂ ವ್ಯೂಹಾತ್ಮಕ ನಗರವೂ ಆಗಿರುವ ಬೆಂಗಳೂರಿನಲ್ಲಿ ಐಕ್ಯಾಟ್ ನ ಹೊಸ ಕೇಂದ್ರ ಬರುವುದು ಅತ್ಯಗತ್ಯವಾಗಿದೆ. ನಾವೀನ್ಯತೆ, ಆವಿಷ್ಕಾರ ಹಾಗೂ ಉದ್ಯಮಶೀಲತೆಯಲ್ಲಿ ಬೆಂಗಳೂರು ಮುಂಚೂಣಿಯಲ್ಲಿದೆ. ಅಟೋಮೊಬೈಲ್ ಕ್ಷೇತ್ರದ ಹಬ್ ಆಗಿಯೂ ಬೆಳೆಯುತ್ತಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಐಕ್ಯಾಟ್ ಕೇಂದ್ರ ಸ್ಥಾಪನೆ ಬಗ್ಗೆ ಕೇಂದ್ರದ ನಿರ್ದೇಶಕ ಸೌರಭ್ ದಲೇಲ ಅವರೊಂದಿಗೆ ಚರ್ಚಿಸಿದರು. ಬೆಂಗಳೂರಿನಲ್ಲಿ ಆದಷ್ಟು ಬೇಗ ಐಕ್ಯಾಟ್ ಕೇಂದ್ರ ಆರಂಭ ಮಾಡುವ ಬಗ್ಗೆ ಪ್ರಕ್ರಿಯೆಗಳನ್ನು ಆರಂಭ ಮಾಡುವುದಾಗಿ ಅಧಿಕಾರಿಗಳು ಸಚಿವರಿಗೆ ಸ್ಪಷ್ಟ…
ಮಂಡ್ಯ : ವೀಲಿಂಗ್ ಮಾಡಲು ಹೋಗಿ ಮೂವರು ಪೈಕಿ ಇಬ್ಬರಿಗೆ ಕೈ, ಕಾಲು ಹಾಗೂ ಒಬ್ಬನಿಗೆ ತಲೆಗೆ ಗಾಯಗೊಂಡಿರುವ ಘಟನೆ ಮದ್ದೂರು ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ಬೆಳಿಗ್ಗೆ ಜರುಗಿದೆ. ಮದ್ದೂರು ಪಟ್ಟಣದ ಶಿವಪುರ ನಿವಾಸಿಗಳಾದ ಪ್ರಜ್ವಲ್, ಶಿವರಾಜ್ ಹಾಗೂ ಕುಮಾರ್ ಮೂವರು ಯುವಕರು ಶಿವಪುರದ ಹಳೇ ಬೆಂಗಳೂರು – ಮೈಸೂರು ರಾಷ್ಟ್ರಿಯ ಹೆದ್ದಾರಿ ಮೂಲಕ ಸೋಮನಹಳ್ಳಿಗೆ ತೆರಳುತ್ತಿದ್ದಾಗ ವೀಲಿಂಗ್ ಮಾಡಲು ಹೋಗಿ ಪಲ್ಸರ್ ಬೈಕ್ ನಿಯಂತ್ರಣ ಕಳೆದುಕೊಂಡು ಪದ್ಮಾವತಿ ಕಲ್ಯಾಣ ಮಂಟಪದ ಮುಂಭಾಗ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಬಿದ್ದಿದ್ದಾರೆ. ಡಿಕ್ಕಿಯ ರಭಸಕ್ಕೆ ಪ್ರಜ್ವಲ್ ನ ಕೈ, ಕುಮಾರ ನ ಕಾಲು ಹಾಗೂ ಶಿವರಾಜ್ ತಲೆಗೆ ಗಂಭೀರ ಗಾಯವಾಗಿದೆ. ತಕ್ಷಣವೇ ಮೂವರನ್ನು ಸಾರ್ವಜನಿಕರು ಹಾಗೂ ವಾಹನ ಸವಾರರು ಮದ್ದೂರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ಮದ್ದೂರು ಸಂಚಾರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ…
ಮಂಗಳೂರು: ನಗರದ ಕೋಟೆಕಾರ್ ಬ್ಯಾಂಕ್ ನಲ್ಲಿ ನಡೆದಿದ್ದಂತ ದರೋಡೆ ಸಂಬಂಧ ಮೂವರು ದರೋಡೆಕೋರರನ್ನು ಪೊಲೀಸರು ಬಂದಿಸಿದ್ದಾರೆ. ಅಲ್ಲದೇ ಚೀಲದಲ್ಲಿ ಅವರು ದರೋಡೆ ಮಾಡಿದ್ದಂತ ಹಣವನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಮಾಹಿತಿ ನೀಡಿದಂತ ಮಂಗಳೂರು ನಗರ ಆಯುಕ್ತ ಅನುಪಮ್ ಅಗರ್ವಾಲ್ ಅವರು, ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಕೆಸಿ ರೋಡ್ ನಲ್ಲಿದ್ದಂತ ಕೋಟೆಕಾರ್ ಬಳಿಯ ಬ್ಯಾಂಕ್ ನಿಂದ ಜನವರಿ.17ರಂದು ದರೋಡೆ ನಡೆಸಲಾಗಿತ್ತು. ಈ ಪ್ರಕರಣ ಸಂಬಂಧ ಪೊಲೀಸರ ವಿಶೇಷ ತಂಡ ರಚಿಸಲಾಗಿತ್ತು ಎಂದರು. ದರೋಡೆಕೋರರು ಬಾಂಬೆಯಿಂದ ಕಾರು ಖರೀದಿ ತಂದಿದ್ದರು. ಅವರನ್ನು ಪತ್ತೆ ಹಚ್ಚಿ ಅವರ ಬಳಿಯಿದ್ದಂತ ಹಣ, ಚಿನ್ನಾಭರಣ ವಶ ಪಡಿಸಿಕೊಳ್ಳಲಾಗಿದೆ. ಚೀಲದಲ್ಲಿ ಅವರು ದರೋಡೆ ಮಾಡಿದ್ದಂತ ಹಣ ಇರಿಸಿದ್ದರು. ಅದನ್ನು ಜಪ್ತಿ ಮಾಡಲಾಗಿದೆ. ಈ ಸಂಬಂಧ ಮೂವರು ದರೋಡೆಕೋರರನ್ನು ಬಂಧಿಸಿ ವಿಚಾರಣೆ ನಡೆಸುತ್ತಿರುವುದಾಗಿ ತಿಳಿಸಿದರು. ಆರೋಪಿಗಳು ತಮಿಳುನಾಡಿನ ತಿರುವೆನೆಲ್ವಿಯವರು ಆಗಿದ್ದಾರೆ ಎಂಬುದಾಗಿ ಮಾಹಿತಿ ನೀಡಿದ್ದಾರೆ. ಅವರನ್ನು ತಮಿಳುನಾಡಿನಲ್ಲೇ ಬಂಧಿಸಿರುವುದಾಗಿ ಹೇಳಿದರು. https://kannadanewsnow.com/kannada/important-information-for-those-who-have-taken-admission-in-bachelors-and-masters-degrees-in-ksou/ https://kannadanewsnow.com/kannada/are-you-suffering-from-stuttering-participate-in-this-free-workshop-tondre-clear/
ಮಡಿಕೇರಿ : ಕೆ ಎಸ್ ಓ ಯು ಮೂಲಕ ಪದವಿ, ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ದಾಖಲಾಗಿರುವಂತ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿಯನ್ನು ವಿವಿ ನೀಡಿದೆ. ಕರ್ನಾಟಕ ರಾಜ್ಯ ಮುಕ್ತ ವಿವಿಯಲ್ಲಿ 2021-22ನೇ ಸಾಲಿನಿಂದ (ಜುಲೈ/ಜನವರಿ ಆವೃತ್ತಿಯ) 2024-25 ನೇ ಸಾಲಿನವರೆಗೆ (ಜುಲೈ ಆವೃತ್ತಿ) ಪ್ರವೇಶಾತಿ ಪಡೆದಿರುವ ಸ್ನಾತಕ ಪದವಿಗಳಾದ ಬಿ.ಎ, ಬಿ.ಕಾಂ, ಎಲ್ಲಾ ಬಿ.ಎಸ್ಸಿ, ಬಿ.ಬಿ.ಎ, ಬಿ.ಸಿ.ಎ, ಬಿ.ಎಸ್.ಡಬ್ಲ್ಯು ಹಾಗೂ ಸ್ನಾತಕೋತ್ತರ ಪದವಿಗಳಾದ ಎಂ.ಎ, ಎಂ.ಕಾಂ, ಎಂ.ಬಿ.ಎ, ಎಂ.ಸಿ.ಎ, ಎಂ.ಎಸ್.ಡಬ್ಲ್ಯು ಮತ್ತು ಎಲ್ಲಾ ಎಂ.ಎಸ್ಸಿ ಪದವಿಗಳು ಮತ್ತು ಡಿಪ್ಲೋಮಾ, ಪಿಜಿ ಡಿಪ್ಲೋಮಾ, ಸರ್ಟಿಫಿಕೇಟ್ ಕೋರ್ಸ್ಗಳ ವಿದ್ಯಾರ್ಥಿಗಳ ಸಿ.ಬಿ.ಸಿ.ಎಸ್ ಸೆಮಿಸ್ಟರ್ ಪರೀಕ್ಷಾ ಶುಲ್ಕ ಪಾವತಿಸಲು ದಂಡ ಶುಲ್ಕವಿಲ್ಲದೇ ಫೆ. 7 ಆಗಿದೆ. ರೂ.200 ದಂಡ ಶುಲ್ಕದೊಂದಿಗೆ ಪರೀಕ್ಷಾ ಶುಲ್ಕ ಪಾವತಿಸಲು ಫೆಬ್ರವರಿ 17 ಕೊನೆಯ ದಿನವಾಗಿದೆ ಪ್ರಾದೇಶಿಕ ನಿರ್ದೇಶಕಿ ಸ್ಮಿತಾ ಸುಬ್ಬಯ್ಯ ಅವರು ತಿಳಿಸಿದ್ದಾರೆ. https://kannadanewsnow.com/kannada/good-news-for-minority-communities-in-the-state-applications-invited-for-loan-facility/ https://kannadanewsnow.com/kannada/are-you-suffering-from-stuttering-participate-in-this-free-workshop-tondre-clear/
ಮಡಿಕೇರಿ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ(ನಿ) ಕೊಡಗು ಇವರ ವತಿಯಿಂದ 2024-25ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ಜನಾಂಗದವರಿಗೆ ಅರಿವು (ರಿನಿವಲ್) ಯೋಜನೆಯಡಿಯಲ್ಲಿ ನಿಗಮದಿಂದ ಸಾಲ ಸೌಲಭ್ಯಗಳನ್ನು ನೀಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಅರಿವು (ರಿನಿವಲ್) ವಿಧ್ಯಾಭ್ಯಾಸ ಯೋಜನೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಕೆಇಎ-ಸಿಇಟಿ/ನೀಟ್ ಮುಖಾಂತರ) ಎಂಬಿ, ಎಂಎಸ್ಎಂಡಿ, ಎಂಎಸ್, ಬಿಡಿಎಸ್, ಎಂಡಿಎಸ್, ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್, ಇಂಜಿನಿಯರಿಂಗ್, ಟೆಕ್ನಾಲಜಿ(ಬಿ.ಇ/ಬಿಟೆಕ್), ಎಂ ಟೆಕ್,ಎಂಇಬಿ ಆರ್ಕ್, ಎಂಆರ್ಕ್, ಎಂ.ಬಿ.ಎ, ಎಂ.ಸಿ.ಎ, ಎಲ್.ಎಲ್.ಬಿ, ಬಿಎಸ್ಸಿ ಆರ್ಟಿಕಲ್ಚರ್, ಅಗ್ರಿಕಲ್ಚರ್, ಡೈರಿ ಟೆಕ್ನಾಲಜಿ, ಪಾರೆಸ್ಟ್ರೀ, ವೆಟರ್ನರಿ, ಎನಿಮಲ್ ಸೈನ್ಸ್, ಫುಡ್ ಟೆಕ್ನಾಲಜಿ, ಬಯೋ ಟೆಕ್ನಾಲಜಿ, ಮೀನುಗಾರಿಕೆ, ಸೆರಿಕಲ್ಚರ್, ಹೋಮ್/ಕಮ್ಯುನಿಟಿ ಸೈನ್ಸ್, ಫುಡ್ ನ್ಯೂಟ್ರೀಷನ್ ಅಂಡ್ ಡಯಾಟಿಕ್ಸ್ ವ್ಯಾಸಂಗಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸಾಲವನ್ನು ನೀಡಲಾಗುತ್ತದೆ. ವಿದ್ಯಾರ್ಥಿಗಳಿಗೆ ಅರಿವು(ರಿನಿವಲ್) ಯೋಜನೆಯಡಿ ಶೈಕ್ಷಣಿಕ ಸಾಲವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ನಿಗಮದ ವೆಬ್ಸೈಟ್ https://kmdconline.karnataka.gov.in/…