Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ನ್ಯಾಯಾಲಯಕ್ಕೆ ಸಲ್ಲಿಸಲಾಗಿದ್ದಂತ ಪಿಸಿಆರ್ ಆಧರಿಸಿ, ವಿಕ್ರಾಂತ್ ರೋಣಾ, ಡೆಡ್ಲಿ ಸೋಮ ಸಿನಿಮಾ ನಿರ್ಮಾಪಕ ಜಾಕ್ ಮಂಜು ವಿರುದ್ಧ ಎಫ್ಐಆರ್ ದಾಖಲಾಗಿದೆ. ಸ್ಯಾಂಡಲ್ ವುಡ್ ನಿರ್ಮಾಪಕ ಶಿವಶಂಕರ್ ಎಂಬುವರು ಕೋರ್ಟ್ ಗೆ ನಿರ್ಮಾಪಕ ಜಾಕ್ ಮಂಜು ಮೋಸ ಮಾಡಿದ್ದಾರೆ ಎಂಬುದಾಗಿ ಪಿಸಿಆರ್ ದಾಖಲಿಸಿದ್ದರು. ಈ ಅರ್ಜಿಯ ಆಧಾರದ ಮೇಲೆ ಕೋರ್ಟ್ ನಿರ್ಮಾಪಕ ಜಾಕ್ ಮಂಜು ಸೇರಿದಂತೆ ಸಿದ್ದೇಶ್, ಮುರುಳಿ ಎಂಬುವರ ವಿರುದ್ಧ ಎಫ್ಐಆರ್ ದಾಖಲಿಸಲು ಸೂಚಿಸಿತ್ತು. ಹೀಗಾಗಿ ಕೋರ್ಟ್ ಸೂಚನೆಯ ಹಿನ್ನಲೆಯಲ್ಲಿ ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಮಾಯಾನಗರಿ ಚಿತ್ರದ ಸಂಬಂಧ ನಿರ್ಮಾಪಕ ಶಿವಶಂಕರ್ ಕೋರ್ಟ್ ಗೆ ಪಿಸಿಆರ್ ದಾಖಲಿಸಿದ್ದರು. ಈ ಚಿತ್ರಕ್ಕೆ ಹೂಡಿಕೆ ಮಾಡಿದ್ದಂತ ಹಣವನ್ನು ನೀಡಿರಲಿಲ್ಲ. ಸಿದ್ದೇಶ್ ಎಂಬುವರು ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಆಗಿದ್ದರೇ, ಮುರುಳಿ ಎಂಬುವರು ಶಾಲಿನಿ ಆರ್ಟ್ಸ್ ಮೇಲ್ವಿಚಾರಕ ಆಗಿದ್ದರು. ಇವರಿಬ್ಬರು ಶಿವಶಂಕರ್ ಭೇಟಿ ಮಾಡಿ, ಹಣ ಹೂಡುವುದಕ್ಕೆ ಕೋರಿದ್ದರು. ಜಾಕ್ ಮಂಜು ಕೂಡ ಶಿವಶಂಕರ್ ಅವರಿಗೆ ಪರಿಚಯ ಮಾಡಲಾಗಿತ್ತು. ಮಾಯಾನಗರಿ ಚಿತ್ರಕ್ಕೆ ಹೂಡಿಕೆ…
ಭುವನೇಶ್ವರ: ಕೇಂದ್ರ ಸಚಿವ ಜುವಾಲ್ ಓರಮ್ ಅವರ ಪತ್ನಿ ಜಿಂಗಿಯಾ ಓರಮ್ ಡೆಂಗ್ಯೂ ಜ್ವರದಿಂದ ಭುವನೇಶ್ವರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ನಿಧನರಾದರು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಅವರು ಶನಿವಾರ ರಾತ್ರಿ 10.50ರ ಸುಮಾರಿಗೆ ನಿಧನರಾದರು. 58 ವರ್ಷದ ಜಿಂಗಿಯಾ ಓರಮ್ ಅವರು ಪತಿ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಜುವಾಲ್ ಓರಮ್ ಕೂಡ ಡೆಂಗ್ಯೂನಿಂದ ಬಳಲುತ್ತಿದ್ದು, ಅದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. https://twitter.com/MohanMOdisha/status/1824980524349415729 ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಅವರು ಜಿಂಗಿಯಾ ಓರಮ್ ಅವರ ನಿಧನಕ್ಕೆ ದುಃಖ ವ್ಯಕ್ತಪಡಿಸಿದ್ದಾರೆ ಮತ್ತು ಶನಿವಾರ ತಡರಾತ್ರಿ ಆಸ್ಪತ್ರೆಗೆ ಭೇಟಿ ನೀಡಿದರು. ಒಡಿಶಾ ಕಾನೂನು ಸಚಿವ ಪೃಥ್ವಿರಾಜ್ ಹರಿಚಂದನ್, ಆರೋಗ್ಯ ಸಚಿವ ಮುಖೇಶ್ ಮಹಾಲಿಂಗ್, ಸ್ಪೀಕರ್ ಸುರಮಾ ಪಾಧಿ ಮತ್ತು ಹಲವಾರು ಬಿಜೆಪಿ ಮುಖಂಡರು ಅಂತಿಮ ನಮನ ಸಲ್ಲಿಸಿದರು. ಮಾಝಿ ಸಂತಾಪ ಸೂಚಿಸಿ, “ಜಿಂಗಿಯಾ ಅವರು ಧರ್ಮನಿಷ್ಠ, ಮೃದು ಮಾತನಾಡುವ ವ್ಯಕ್ತಿಯಾಗಿದ್ದು, ಸಾಮಾಜಿಕ ಮತ್ತು ದತ್ತಿ…
ಬುಲಂದ್ಶಹರ್: ಉತ್ತರ ಪ್ರದೇಶದ ಬುಲಂದ್ಶಹರ್ ಜಿಲ್ಲೆಯಲ್ಲಿ ಶನಿವಾರ ಸಂಭವಿಸಿದ ಭೀಕರ ಅಪಘಾತದಲ್ಲಿ 10 ಜನರು ಸಾವನ್ನಪ್ಪಿದ್ದಾರೆ ಮತ್ತು 27 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಸೇಲಂಪುರ ಪೊಲೀಸ್ ಠಾಣೆಯ ಬಳಿ ಈ ಘಟನೆ ನಡೆದಿದ್ದು, ಪ್ರಯಾಣಿಕರಿಂದ ತುಂಬಿದ ಬಸ್ ಮ್ಯಾಕ್ಸ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ಸುದ್ದಿ ತಿಳಿದ ಕೂಡಲೇ ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ), ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್ಎಸ್ಪಿ) ಮತ್ತು ಇತರ ಆಡಳಿತ ಅಧಿಕಾರಿಗಳು ಸ್ಥಳಕ್ಕೆ ತಲುಪಿದರು. ಗಾಯಗೊಂಡವರನ್ನು ಪ್ರಾದೇಶಿಕ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವರನ್ನು ಮೀರತ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮ್ಯಾಕ್ಸ್ ವಾಹನದಲ್ಲಿದ್ದವರು ಗಾಜಿಯಾಬಾದ್ ಕಂಪನಿಯ ಉದ್ಯೋಗಿಗಳಾಗಿದ್ದು, ರಕ್ಷಾ ಬಂಧನ ಹಬ್ಬವನ್ನು ಆಚರಿಸಲು ಅಲಿಗಢಕ್ಕೆ ಮರಳುತ್ತಿದ್ದರು ಎಂದು ವರದಿಗಳು ಸೂಚಿಸುತ್ತವೆ. ದುರದೃಷ್ಟವಶಾತ್, ಅವರ ವಾಹನವು ರಸ್ತೆ ಸಾರಿಗೆ ಬಸ್ಗೆ ಡಿಕ್ಕಿ ಹೊಡೆದಿದ್ದರಿಂದ ಅವರ ಪ್ರಯಾಣವನ್ನು ಮೊಟಕುಗೊಳಿಸಲಾಯಿತು, ಇದರ ಪರಿಣಾಮವಾಗಿ ಹತ್ತು ಸಾವುನೋವುಗಳು ದೃಢಪಟ್ಟವು. ಸೇಲಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ವೇಗವಾಗಿ ಚಲಿಸುತ್ತಿದ್ದ ಖಾಸಗಿ ಬಸ್ ಮತ್ತೊಂದು ವಾಹನವನ್ನು…
ನವದೆಹಲಿ: ಕೆಲ ದಿನಗಳ ಹಿಂದೆ ಸುಪ್ರೀಂ ಕೋರ್ಟ್ ನಿಂದ ಎಸ್ಸಿ, ಎಸ್ಟಿ ಮೀಸಲಾತಿಗೆ ಸಂಬಂಧಿಸಿದಂತೆ ಮಹತ್ವದ ತೀರ್ಪು ನೀಡಲಾಗಿತ್ತು. ಆದರೇ ಈ ತೀರ್ಪು ವಿರೋಧಿಸಿ ಆಗಸ್ಟ್.21ರಂದು ಭಾರತ್ ಬಂದ್ ಗೆ ಕರೆ ನೀಡಲಾಗಿದೆ. ಈ ಕುರಿತಂತೆ ವಿವಿಧ ದಲಿತ ಸಂಘಟನೆಗಳು ಭಾರತ್ ಬಂದ್ ಗೆ ಕರೆ ನೀಡಿದ್ದು, ಪತ್ರದ ಮೂಲಕ ಆಗಸ್ಟ್.21ರಂದು ಭಾರತ್ ಬಂದ್ ನಡೆಸಲಾಗುವುದು ಎಂಬುದಾಗಿ ಅಧಿಕೃತ ಮಾಹಿತಿಯನ್ನು ತಿಳಿಸಿವೆ. ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಮೀಸಲಾತಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವಂತ ತೀರ್ಪು ವಿರೋಧಿಸಿ ಆಗಸ್ಟ್.21ರಂದು ಬೆಳಿಗ್ಗೆ 5 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಭಾರತ್ ಬಂದ್ ನಡೆಸಲಾಗುತ್ತಿದೆ. ಇದರಲ್ಲಿ ವಿವಿಧ ಸಂಘಟನೆಗಳು ಭಾಗಿಯಾಗಲಿದ್ದಾವೆ ಎಂಬುದಾಗಿ ಸರ್ವ ಆದಿವಾಸಿ ಸಮಾಜದ ವಿಭಾಗೀಯ ಅಧ್ಯಕ್ಷ ಪ್ರಕಾಶ್ ಠಾಕೋರ್ ತಿಳಿಸಿದ್ದಾರೆ. https://kannadanewsnow.com/kannada/congress-workers-attempt-to-gherao-bsys-house-in-shikaripura-several-detained/ https://kannadanewsnow.com/kannada/breaking-fir-registered-against-accused-for-raping-woman-in-bengaluru-police-launch-massive-search/ https://kannadanewsnow.com/kannada/another-good-news-for-women-govt-to-provide-interest-free-loans-up-to-rs-5-lakh/
ಶಿವಮೊಗ್ಗ : ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದಂತ ರಾಜ್ಯಪಾಲರ ನಡೆಯನ್ನು ಖಂಡಿಸಿ, ಇಂದು ಶಿಕಾರಿಪುರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ತೀವ್ರವಾಗಿ ಪ್ರತಿಭಟನೆ ನಡೆಸಿದರು. ಇದೇ ಸಂದರ್ಭದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ನಿವಾಸಕ್ಕೆ ಮುತ್ತಿಗೆಗೂ ಯತ್ನಿಸಿದರು. ಇಂತಹ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ಮುಡಾ ನಿವೇಶನ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ಧರಾಮಯ್ಯ ವಿರುದ್ಧ ಹೈಕೋರ್ಟ್ ನಲ್ಲಿ ಸಲ್ಲಿಸಲಾಗಿದ್ದಂತ ಖಾಸಗಿ ದೂರಿನ ಸಂಬಂಧ ಅರ್ಜಿಯನ್ನು ಪರಿಶೀಲಿಸಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಾಸಿಕ್ಯೂಷನ್ ತನಿಖೆಗೆ ಅನುಮತಿ ನೀಡಿದ್ದರು. ಇದು ಸಂವಿಧಾನ ಬಾಹಿರವಾದಂತ ನಡೆಯಾಗಿದೆ. ಕಾನೂನು ವಿರೋಧಿ ನಿರ್ಧಾರವಾಗಿದೆ ಎಂಬುದಾಗಿ ಕಾಂಗ್ರೆಸ್ ನಾಯಕರು ಖಂಡಿಸಿದ್ದಾರೆ. ರಾಜ್ಯ ರಾಜಕಾರಣದಲ್ಲೇ ಸಂಚಲ ಸೃಷ್ಠಿಸಿದ್ದಂತ ರಾಜ್ಯಪಾಲರ ನಡೆಯನ್ನು ಖಂಡಿಸಿ, ಇಂದು ಶಿಕಾರಿಪುರದಲ್ಲಿ ಬೀದಿಗಿಳಿದು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಅಲ್ಲದೇ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ನಿವಾಸಕ್ಕೂ ಮುತ್ತಿಗೆ ಹಾಕಲು ಯತ್ನಿಸಿದರು. ಇಂತಹ ಕಾಂಗ್ರೆಸ್ ಕಾರ್ಯಕರ್ತರ…
ಉತ್ತರ ಪ್ರದೇಶ: ಉತ್ತರ ಪ್ರದೇಶದ ಬುಲಂದ್ಶಹರ್ನಲ್ಲಿ ಪಿಕಪ್ ವ್ಯಾನ್ ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ 10 ಮಂದಿ ಸಾವು, 27 ಮಂದಿಗೆ ಗಾಯಗೊಂಡಿರುವಂತ ಘಟನೆ ನಡೆದಿದೆ. ಉತ್ತರ ಪ್ರದೇಶದ ಬುಲಂದ್ಶಹರ್ ಜಿಲ್ಲೆಯಲ್ಲಿ ಪಿಕಪ್ ವ್ಯಾನ್ ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ 10 ಜನರು ಸಾವನ್ನಪ್ಪಿದ್ದಾರೆ ಮತ್ತು 27 ಜನರು ಗಾಯಗೊಂಡಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ಭಾನುವಾರ ವರದಿ ಮಾಡಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಅವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿರುವುದಾಗಿ ತಿಳಿದು ಬಂದಿದೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಆ ಬಗ್ಗೆ ಕಾದು ನೋಡಬೇಕಿದೆ. https://kannadanewsnow.com/kannada/important-information-for-school-teachers-revised-schedule-for-state-level-best-teacher-award-announced/ https://kannadanewsnow.com/kannada/breaking-fir-registered-against-accused-for-raping-woman-in-bengaluru-police-launch-massive-search/ https://kannadanewsnow.com/kannada/another-good-news-for-women-govt-to-provide-interest-free-loans-up-to-rs-5-lakh/
ಬೆಂಗಳೂರು: ರಾಜ್ಯದ ಶಾಲಾ ಶಿಕ್ಷಕರಿಗೆ ಮಹತ್ವದ ಮಾಹಿತಿ ಎನ್ನುವಂತೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಕ್ರಿಯೆ ಕುರಿತಾದ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಜೊತೆ ಜೊತೆಗೆ ಆಯ್ಕೆ ಸಮಿತಿಗಳಿಗೆ ಸೂಚನೆಗಳನ್ನು ನೀಡಲಾಗಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆಯನ್ನು ಹೊರಡಿಸಿದ್ದಾರೆ. ಅದರಲ್ಲಿ 2024-25 ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ” ಪ್ರಶಸ್ತಿಗೆ ಅರ್ಹ ಶಿಕ್ಷಕರು, ವಿಶೇಷ ಶಿಕ್ಷಕರು ಹಾಗೂ ಮುಖ್ಯ ಶಿಕ್ಷಕರು ಶಾಲಾ ಶಿಕ್ಷಣ ಇಲಾಖೆಯ ಆನ್-ಲೈನ್ ಪೋರ್ಟಲ್ https://schooleducation.karnataka.gov.in/en ರ ಮೂಲಕ ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಲು ವಹಿಸಬೇಕಾದ ಕ್ರಮಗಳ ಕುರಿತು, ಸದರಿ ಪ್ರಕ್ರಿಯೆಗೆ ಸಂಬಂಧಿಸಿದ ವೇಳಾಪಟ್ಟಿಯ ಬಗ್ಗೆ ಹಾಗೂ ಈ ಪ್ರಶಸ್ತಿಗೆ ಹೆಚ್ಚಿನ ಸಂಖ್ಯೆಯಲ್ಲಿ ಅರ್ಹರು ಮೇಲ್ಕಂಡಂತೆ ಅರ್ಜಿಗಳನ್ನು ಸಲ್ಲಿಸುವುದನ್ನು ಪ್ರೋತ್ಸಾಹಿಸಲು ಇಲಾಖಾಧಿಕಾರಿಗಳು ಜರುಗಿಸಬೇಕಾದ ಕ್ರಮಗಳ ಕುರಿತು ಈಗಾಗಲೇ ವಿಸೃತವಾಗಿ ತಿಳಿಸಲಾಗಿರುತ್ತದೆ ಎಂದಿದ್ದಾರೆ. ಈ ಪ್ರಶಸ್ತಿಗೆ ಆಯ್ಕೆ ಪ್ರಕ್ರಿಯೆಯನ್ನು ತಾಲ್ಲೂಕು, ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಕೈಗೊಳ್ಳಲು ಸರ್ಕಾರದ ಪತ್ರಗಳಂತೆ ತಾಲ್ಲೂಕು, ಜಿಲ್ಲಾ…
ಬೆಂಗಳೂರು : “ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲ ನಡೆಯ ವಿರುದ್ಧ ಸೋಮವಾರ (ಆ. 19) ರಾಜ್ಯ ವ್ಯಾಪಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು “ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಮುಖಂಡರು ಹಾಗೂ ಕಾರ್ಯಕರ್ತರು ರಾಷ್ಟ್ರಪತಿಗಳಿಗೆ ಪ್ರತಿಭಟನೆಯನ್ನು ದಾಖಲಿಸಲಿದ್ದಾರೆ” ಎಂದರು. “ಪ್ರಕರಣ ಅಲ್ಲದಿದ್ದರೂ ಸಹ ಇದನ್ನು ಬೇಕಂತಲೇ ಎತ್ತಿ ಕಟ್ಟಲಾಗುತ್ತಿದೆ. ರಾಜ್ಯಪಾಲರಿಂದ ಪ್ರಜಾಪ್ರಭುತ್ವದ ಕಗ್ಗೊಲೆ ನಡೆದಿದೆ. ಇದರ ವಿರುದ್ಧ ಶಾಂತಿಯುತವಾಗಿ ಪ್ರತಿಭಟನೆ ನಡೆಸಿ ಎಂದು ಮುಖಂಡರಿಗೆ ತಿಳಿಸಿದ್ದೇವೆ. ಕಿಡಿಗೇಡಿಗಳು ಒಳನುಸುಳಿ ಗಲಭೆ ಎಬ್ಬಿಸಿ ಕಲ್ಲು ಎಸೆಯುವ ಕೆಲಸ ಮಾಡಬಹುದು ಇದರ ಬಗ್ಗೆಯೂ ಎಚ್ಚರದಿಂದ ಇರಿ ಎಂದು ಸೂಚನೆ ನೀಡಿದ್ದೇವೆ. ನಮ್ಮದು ಗಾಂಧಿ ಮಾರ್ಗದ ಶಾಂತಿಯುತ ಪ್ರತಿಭಟನೆ” ಎಂದು ಹೇಳಿದರು. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ ಅವರ ಭೇಟಿಯ ಬಗ್ಗೆ ಪ್ರಶ್ನಿಸಿದಾಗ “ಪ್ರಸ್ತುತ ರಾಜ್ಯದಲ್ಲಿ ಆಗುತ್ತಿರುವ ಬೆಳವಣಿಗೆಗಳು ಹಾಗೂ ಸಂದರ್ಭದ ಬಗ್ಗೆ ಅವರಿಗೆ ವಿವರಣೆ ನೀಡಿದ್ದೇವೆ” ಎಂದು ತಿಳಿಸಿದರು.…
ಬೆಂಗಳೂರು: ನಾನು ಯಾವ ತಪ್ಪು ಮಾಡಿದ್ದೇನೆ ಅಂತ ರಾಜೀನಾಮೆ ನೀಡಬೇಕು.? ನನ್ನ ವಿರುದ್ಧ ದೂರು ನೀಡಿದಂತ ನಂತ್ರ ತನಿಖೆಯಾಗಿಲ್ಲ, ಅಕ್ರಮದ ಬಗ್ಗೆ ವರದಿಯೂ ಇಲ್ಲ. ಹೀಗಿದ್ದೂ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಕಾನೂನು ಬಾಹಿರವಾಗಿದೆ. ನನ್ನ ಪ್ರಕಾರ ರಾಜ್ಯಪಾಲರೇ ರಾಜೀನಾಮೆ ನೀಡಬೇಕು ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಆಗ್ರಹಿಸಿದ್ದಾರೆ. ಇಂದು ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ನ್ಯಾಯ-ಸತ್ಯದ ಪರವಾಗಿ ನಿಂತು ಪ್ರಜಾಪ್ರಭುತ್ವ ಉಳಿವಿನ ಹೋರಾಟಕ್ಕೆ ಗಟ್ಟಿಯಾಗಿ ನಿಂತಿರುವ ಕ್ಯಾಬಿನೆಟ್, ಸಂಸದರು, ರಾಜ್ಯಸಭಾ ಸದಸ್ಯರುಗಳು, ಶಾಸಕರುಗಳು, ಇಡಿ ಪಕ್ಷ, ಹೈ ಕಮಾಂಡ್ ಮತ್ತು ಪಕ್ಷದ ಲಕ್ಷಾಂತರ ಕಾರ್ಯಕರ್ತರಿಗೆ ಧನ್ಯವಾದ ಹೇಳಿದರು. ರಾಜ್ಯಪಾಲರ ತೀರ್ಮಾನ ಅಸಂವಿಧಾನಿಕ, ಕಾನೂನುಬಾಹಿರ ಎಂದು ಸಚಿವ ಸಂಪುಟ ಖಂಡಿಸಿದೆ. ಸಂವಿಧಾನಬಾಹಿರ ಎಂದು ನಿರ್ಧರಿಸಿದೆ. ರಾಜ್ಯಪಾಲರು ರಾಷ್ಟ್ರಪತಿ, ಸಂವಿಧಾನದ ಪ್ರತಿನಿಧಿಯಾಗಿ ಕೆಲಸ ಮಾಡಬೇಕೇ ಹೊರತು, ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿ ಕೆಲಸ ಮಾಡಬಾರದು. ರಾಜ್ಯಪಾಲರ ಈ ಧೋರಣೆಯನ್ನು ಸಚಿವ ಸಂಪುಟ ತೀವ್ರವಾಗಿ ಖಂಡಿಸಿದೆ ಎಂದರು. *ಕೇಂದ್ರ ಸರ್ಕಾರ ರಾಜ್ಯಪಾಲರ ಮೂಲಕ ಚುನಾಯಿತ…
ಬೆಂಗಳೂರು: ತುಂಗಭದ್ರಾ ಡ್ಯಾಂ 19ನೇ ಕ್ರಸ್ಟ್ ಗೇಟ್ ದುರಸ್ಥಿ ಕಾರ್ಯ ಯಶಸ್ವಿಯಾಗಿದೆ. ಸಂಪೂರ್ಣ ಗೇಟ್ ದುರಸ್ಥಿ ಕಾರ್ಯ ನಡೆದು, ಮುಕ್ತಾಯಗೊಂಡಿದೆ. ಹೀಗಾಗಿ ತುಂಗಭದ್ರಾ ಡ್ಯಾಂನಿಂದ ಹೊರ ಹರಿಯುತ್ತಿದ್ದಂತ ನೀರು ಸಂಪೂರ್ಣ ಬಂದ್ ಆಗಿದೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು. ಇಂದು ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ತುಂಗಭದ್ರಾ ಡ್ಯಾಂ 19ನೇ ಕ್ರಸ್ಟ್ ಗೇಟ್ ಕೊಚ್ಚಿ ಹೋದಿದ್ದರಿಂದ ಈವರೆಗೆ 35 ಟಿಎಂಸಿ ನೀರು ತುಂಗಭದ್ರಾ ಡ್ಯಾಂನ 19ನೇ ಗೇಟ್ ಕೊಟ್ಟಿ ಹೋಗಿದ್ದರಿಂದ ಹೊರ ಹೋಗಿದೆ. ಆದರೂ 65 ಸಾವಿರ ಕ್ಯೂಸೆಕ್ಟ್ ಒಳ ಹರಿವು ಡ್ಯಾಂಗೆ ಇದೆ. ಹೀಗಾಗಿ ರೈತರ ಬೆಳೆಗಳಿಗೆ ಯಾವುದೇ ನೀರಿನ ಸಮಸ್ಯೆ ಉಂಟಾಗುವುದಿಲ್ಲ ಎಂದರು. ಇನ್ನೂ ಸತತ ಮೂರು ದಿನಗಳಿಂದ ತುಂಗಭದ್ರಾ ಡ್ಯಾಂನ 19ನೇ ಸಾಪ್ಟ್ ಗೇಟ್ ಅಳವಡಿಕೆ ಕಾರ್ಯದಲ್ಲಿ ತಂತ್ರಜ್ಞರು ತೊಡಗಿದ್ದರು. ಇಂದು ಐದು ಎಲಿಮೆಂಟ್ ಅಳವಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸ್ಟಾಪ್ ಲಾಗ್ ಗೇಟ್ ಐದು ಎಲಿಮೆಂಟ್ ಗಳನ್ನು ಯಶಸ್ವಿಯಾಗಿ ಅಳವಡಿಸಲಾಗಿದೆ. ತುಂಗಭದ್ರಾ ಡ್ಯಾಂನ…