Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ಏಪ್ರಿಲ್ 1, 2024 ರಿಂದ ಅಗತ್ಯ ಔಷಧಿಗಳ ಬೆಲೆಗಳು ಶೇಕಡಾ 12 ರಷ್ಟು ಏರಿಕೆಯಾಗುವ ನಿರೀಕ್ಷೆಯಿದೆ. ಅಗತ್ಯ ಔಷಧಿಗಳ 1,000 ಕ್ಕೂ ಹೆಚ್ಚು ಸೂತ್ರೀಕರಣಗಳು ಮತ್ತು 384 ಔಷಧಿಗಳ ಬೆಲೆಯಲ್ಲಿ ಹೆಚ್ಚಳವಾಗಲಿದೆ. ಜನವರಿ 2023 ಮತ್ತು ಈ ವರ್ಷದ ನಡುವೆ ಸಗಟು ಬೆಲೆ ಸೂಚ್ಯಂಕದಲ್ಲಿ (ಡಬ್ಲ್ಯುಪಿಐ) ಶೇಕಡಾ 12.12 ಕ್ಕೆ ತಲುಪಿದ ಗಮನಾರ್ಹ ಏರಿಕೆಯೇ ಈ ಏರಿಕೆಗೆ ಕಾರಣವಾಗಿದೆ. ಅಗತ್ಯ ಔಷಧಿಗಳು ಎಂದೂ ಕರೆಯಲ್ಪಡುವ ಈ ಅಗತ್ಯ ಔಷಧಿಗಳು ವಿವಿಧ ಸರ್ಕಾರಿ ಆರೋಗ್ಯ ಕಾರ್ಯಕ್ರಮಗಳಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತವೆ ಮತ್ತು ಚಿಲ್ಲರೆ ಗ್ರಾಹಕರಿಗೆ ನೇರವಾಗಿ ಮಾರಾಟ ಮಾಡಲಾಗುತ್ತದೆ. ಡಬ್ಲ್ಯುಪಿಐನಲ್ಲಿ ತೀವ್ರ ಹೆಚ್ಚಳ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಆರ್ಥಿಕ ಸಲಹೆಗಾರರ ಕಚೇರಿಯ ಅಂಕಿಅಂಶಗಳನ್ನು ಉಲ್ಲೇಖಿಸಿ ರಾಷ್ಟ್ರೀಯ ಔಷಧೀಯ ಬೆಲೆ ಪ್ರಾಧಿಕಾರದ ಅಧಿಕಾರಿಗಳು ಡಬ್ಲ್ಯುಪಿಐನಲ್ಲಿ ತೀವ್ರ ಹೆಚ್ಚಳವನ್ನು ದೃಢಪಡಿಸಿದ್ದಾರೆ. ಸತತ ಎರಡನೇ ವರ್ಷ, ಅಗತ್ಯ ಔಷಧಿಗಳ ಬೆಲೆಗಳು ಶೇಕಡಾ 10 ಕ್ಕಿಂತ ಹೆಚ್ಚಾಗಲಿವೆ. ಕಳೆದ ವರ್ಷ ಈ ಔಷಧಿಗಳ ಬೆಲೆಯಲ್ಲಿ ಸುಮಾರು 11…
ನವದೆಹಲಿ: ಯಾವುದೇ ರಾಜಕೀಯ ಪಕ್ಷಕ್ಕೆ ಯಾವುದೇ ತೊಂದರೆಯಾಗದಂತೆ 2024 ರ ಲೋಕಸಭಾ ಚುನಾವಣೆಯ ನಂತರ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ನಿಂದ ಸುಮಾರು 3,500 ಕೋಟಿ ರೂ.ಗಳನ್ನು ವಸೂಲಿ ಮಾಡಲು ಆದಾಯ ತೆರಿಗೆ ಇಲಾಖೆ ಯಾವುದೇ ಬಲವಂತದ ಕ್ರಮಗಳನ್ನು ತೆಗೆದುಕೊಳ್ಳುವುದಿಲ್ಲ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಸೋಮವಾರ ಸುಪ್ರೀಂ ಕೋರ್ಟ್ಗೆ ಭರವಸೆ ನೀಡಿದರು. ಈ ವಿಷಯದ ಮುಂದಿನ ವಿಚಾರಣೆಯನ್ನು ಜುಲೈ 24, 2024 ರಂದು ನಿಗದಿಪಡಿಸಲಾಗಿದೆ. 2024 ರ ಲೋಕಸಭಾ ಚುನಾವಣೆಯ ಮೊದಲ ಹಂತ ಪ್ರಾರಂಭವಾಗಲು ಕೆಲವೇ ವಾರಗಳು ಬಾಕಿ ಇರುವಾಗ, ಕಾಂಗ್ರೆಸ್ ಪಕ್ಷವು ಆದಾಯ ತೆರಿಗೆ ಇಲಾಖೆಯಿಂದ ಐದು ವರ್ಷಗಳವರೆಗೆ (1994-95 ಮತ್ತು 2017- 2018 ರಿಂದ 2020-21) 1,823 ಕೋಟಿ ರೂ.ಗಳನ್ನು ಪಾವತಿಸುವಂತೆ ಹೊಸ ನೋಟಿಸ್ಗಳನ್ನು ಸ್ವೀಕರಿಸಿದೆ. ಇದಲ್ಲದೆ, 2014-15 ರಿಂದ 2016-17 ರವರೆಗಿನ ಮೌಲ್ಯಮಾಪನ ವರ್ಷಗಳಿಗೆ 1,745 ಕೋಟಿ ರೂ.ಗಳ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪಕ್ಷಕ್ಕೆ ಆದಾಯ ತೆರಿಗೆ ಇಲಾಖೆಯಿಂದ ಶನಿವಾರ ನೋಟಿಸ್ ಬಂದಿದೆ. https://twitter.com/axidentaljourno/status/1774679979458273327 2019 ರ ಲೋಕಸಭಾ…
ನವದೆಹಲಿ: ಅಬಕಾರಿ ನೀತಿ ಪರಿಷ್ಕರಣೆಯಲ್ಲಿ ಅವ್ಯವಹಾರ ಪ್ರಕರಣದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಏಪ್ರಿಲ್.15ರವರೆಗೆ ನ್ಯಾಯಾಂಗ ಬಂಧನ ನೀಡಿ ಕೋರ್ಟ್ ಆದೇಶಿಸಿದೆ. ಅಬಕಾರಿ ನೀತಿ ಪರಿಷ್ಕರಣೆ ಅವ್ಯವಹಾರ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದಂತ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಇಡಿ ವಶಕ್ಕೆ ನೀಡಿ ಕೋರ್ಟ್ ಆದೇಶಿಸಿತ್ತು. ಇಡಿ ಕಸ್ಟಡಿ ಅವಧಿ ಇಂದು ಅಂತ್ಯಗೊಂಡಿತ್ತು. ಈ ಹಿನ್ನಲೆಯಲ್ಲಿ ಈ ಪ್ರಕರಣದ ವಿಚಾರಣೆ ನಡೆಸಿದಂತ ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿತ್ತು. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲು ನಿರ್ದೇಶನ ನೀಡುವಂತೆ ಕೋರಿ ಜಾರಿ ನಿರ್ದೇಶನಾಲಯವು ರೂಸ್ ಅವೆನ್ಯೂ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿತ್ತು. ಈ ಸಮಯದಲ್ಲಿ ಹೆಚ್ಚಿನ ಕಸ್ಟಡಿ ವಿಚಾರಣೆ ಅಗತ್ಯವಿಲ್ಲ ಎಂದು ಹೇಳಿ, ಏಪ್ರಿಲ್.15ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶಿಸಿದೆ. ಈ ಹಿನ್ನಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಅಬಕಾರಿ ನೀತಿ ಪರಿಷ್ಕರಣೆ ಅವ್ಯವಹಾರ ಪ್ರಕರಣದಲ್ಲಿ ತಿಹಾರ್ ಜೈಲಿಗೆ ಶಿಫ್ಟ್ ಆಗಲಿದ್ದಾರೆ.…
ಬೆಂಗಳೂರು: ರಾಜಾಜಿನಗರದ ಜೆಟ್ ಲ್ಯಾಬ್ ಪಬ್ ನಲ್ಲಿ ತಡರಾತಿ ಕಟೇರಾ ಸಕ್ಸರ್ ಪಾರ್ಟಿ ಮಾಡಿದಂತ ಪ್ರಕರಣದಲ್ಲಿ ನಟ ದರ್ಶನ್ ಗೆ ಪೊಲೀಸರು ಬಿಗ್ ರಿಲೀಫ್ ನೀಡಿದ್ದಾರೆ. ನಟ ದರ್ಶನ್ ಅಭಿನಯದ ಕಟೇರಾ ಸಿನಿಮಾದ ಸಕ್ಸಸ್ ಪಾರ್ಟಿ ಸಂದರ್ಭದಲ್ಲಿ, ತಡರಾತ್ರಿ ಅವಧಿ ಮೀರಿ ಪಾರ್ಟಿ ಮಾಡಿದಕ್ಕೆ ಪೊಲೀಸರು ಕೇಸ್ ದಾಖಲಿಸಿದ್ದರು. ಈ ಪ್ರಕರಣದಲ್ಲಿ ನಟ ದರ್ಶನ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಸೇರಿ 8 ಮಂದಿಗೆ ಬಿಗ್ ರಿಲೀಫ್ ನೀಡಲಾಗಿದೆ. ಪ್ರಕರಣದ ತನಿಖೆಯನ್ನು ನಡೆಸುತ್ತಿರುವಂತ ಸುಬ್ರಹ್ಮಣ್ಯನಗರ ಠಾಣೆಯ ಪೊಲೀಸರು, ನ್ಯಾಯಾಲಯಕ್ಕೆ ಸಲ್ಲಿಸಿರುವಂತ ಚಾರ್ಜ್ ಶೀಟ್ ನಲ್ಲಿ, ನಟ ದರ್ಶನ್ ಸೇರಿದಂತೆ 8 ಮಂದಿ ಯಾವುದೇ ಪಾರ್ಟಿಯನ್ನು ತಡರಾತ್ರಿ ಮಾಡಿಲ್ಲ. ಊಟ ಮಾಡಿದ್ದಾರೆ ಅಷ್ಟೇ ಎಂಬುದಾಗಿ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಒಟ್ಟಾರೆಯಾಗಿ ಅವಧಿ ಮೀರಿ ಪಬ್ ನಲ್ಲಿ ಪಾರ್ಟಿ ಮಾಡಿದ್ದಾರೆ ಎಂಬುದಾಗಿ ಆರೋಪಿಸಲಾಗಿದ್ದಂತ ಪ್ರಕರಣದಲ್ಲಿ ನಟ ದರ್ಶನ್ ಗೆ ಪೊಲೀಸರು ಬಿಗ್ ರಿಲೀಫ್ ನೀಡಿದ್ದಾರೆ. https://kannadanewsnow.com/kannada/state-govt-orders-reduction-in-power-tariff-new-tariff-to-come-into-effect-from-today/ https://kannadanewsnow.com/kannada/notice-to-the-public-these-rules-that-have-changed-from-today-will-have-a-direct-impact-on-your-pocket/
ಬೆಂಗಳೂರು: ಲೋಕಸಭಾ ಚುನಾವಣೆ ಹೊತ್ತಿನಲ್ಲೇ ರಾಜ್ಯದ ಜನತೆಗೆ ಸರ್ಕಾರದಿಂದ ಗುಡ್ ನ್ಯೂಸ್ ಹೊರ ಬಿದ್ದಿದೆ. ಇಂದಿನಿಂದ ಜಾರಿಗೆ ಬರುವಂತೆ ವಿದ್ಯುತ್ ದರವನ್ನು ಇಳಿಕೆ ಮಾಡಿ, 15 ವರ್ಷಗಳ ಬಳಿಕ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಕರ್ನಾಟಕ ವಿದ್ಯುತ್ ಶಕ್ತಿ ನಿಯಂತ್ರಣ ಆಯೋಗ ( KERC ) ಅಧಿಕೃತ ಆದೇಶ ಹೊರಡಿಸಿದೆ. ಅದರಲ್ಲಿ ಎಲ್ ಟಿ ಗೃಹ ಬಳಕೆಯಲ ವಿದ್ಯುತ್ ದೀಪದ 100 ಯೂನಿಟ್ ಗಳಿಗಿಂತ ಹೆಚ್ಚಿನ ಬಳಕೆಗೆ ಪ್ರತಿ ಯೂನಿಟ್ ಗೆ 110 ಪೈಸೆ ಇಳಿಕೆ ಮಾಡಲಾಗಿದೆ. ಅಲ್ಲದೇ ಹೆಚ್.ಟಿ ವಾಣಿಜ್ಯ ಬಳಕೆಯ ಇಂಧನ ಶುಲ್ಕ ಪ್ರತಿ ಯೂನಿಟ್ ಗೆ 125ಪೈಸೆ ನಿಗದಿ ಮಾಡಿದ್ದರೇ, ಡಿಮಾಂಡ್ ಶುಲ್ಕ ಪ್ರತಿ ಕೆವಿಎಗೆ ರೂ.10 ಇಳಿಕೆ ಮಾಡಲಾಗಿದೆ ಎಂದಿದೆ. ಇನ್ನೂ ಹೆಚ್.ಟಿ ಕೈಗಾರಿ ಇಂಧನ ಬಳಕೆ ಶುಲ್ಕ ಪ್ರತಿ ಯೂನಿಟ್ ಗೆ 50 ಪೈಸೆ ಮಾಡಿದ್ದರೇ, ಡಿಮಾಂಡ್ ಶುಲ್ಕ ಪರ್ತಿ ಕೆವಿಎಗೆ ರೂ.10 ಇಳಿಕೆ ಮಾಡಲಾಗಿದೆ. ಹೆಚ್ ಟಿ ಖಾಸಗಿ ಏತ ನೀರಾವರಿ ಇಂಧನ…
ನವದೆಹಲಿ: ದಿನೇ ದಿನೇ ಚಿನ್ನದ ಬೆಲೆಯು ಏರಿಕೆಯ ಹಾದಿಯಲ್ಲಿ ಸಾಗುತ್ತಿದೆ. ಇಂದು ಚಿನ್ನದ ಬೆಲೆ ಬರೋಬ್ಬರಿ ರೂ.69,487 ದಾಖಲೆಯ ಗರಿಷ್ಠ ಮಟ್ಟ ತಲುಪಿದೆ. ಸಾಗರೋತ್ತರ ಮಾರುಕಟ್ಟೆಗಳಲ್ಲಿನ ಲಾಭ ಮತ್ತು ವಿಶ್ವದ ಎರಡನೇ ಅತಿದೊಡ್ಡ ಅಮೂಲ್ಯ ಲೋಹದ ಗ್ರಾಹಕರಲ್ಲಿ ಬೇಡಿಕೆಯನ್ನು ಹಿಂಡುವ ಮೂಲಕ ಭಾರತೀಯ ಚಿನ್ನದ ಭವಿಷ್ಯವು ಸೋಮವಾರ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪಿದೆ ಎಂದು ಡೀಲರ್ ಗಳು ತಿಳಿಸಿದ್ದಾರೆ. ದೇಶೀಯ ಚಿನ್ನದ ಭವಿಷ್ಯವು 10 ಗ್ರಾಂಗೆ 69,487 ಭಾರತೀಯ ರೂಪಾಯಿಗಳಿಗೆ (834.07 ಡಾಲರ್) ಏರಿದೆ, ಇದು 2024 ರಲ್ಲಿ ಇಲ್ಲಿಯವರೆಗೆ ಸುಮಾರು 10% ಹೆಚ್ಚಾಗಿದೆ. ಭಾರತದ ಚಿನ್ನದ ಆಮದು ಹಿಂದಿನ ತಿಂಗಳಿಗೆ ಹೋಲಿಸಿದರೆ ಮಾರ್ಚ್ನಲ್ಲಿ 90% ಕ್ಕಿಂತ ಹೆಚ್ಚು ಕುಸಿಯಲಿದ್ದು, ಕೋವಿಡ್ ಸಾಂಕ್ರಾಮಿಕ ರೋಗದ ನಂತರದ ಕನಿಷ್ಠ ಮಟ್ಟವನ್ನು ತಲುಪಿದೆ ಎಂದು ಸರ್ಕಾರಿ ಅಧಿಕಾರಿಯೊಬ್ಬರು ಮತ್ತು ಇಬ್ಬರು ಬ್ಯಾಂಕ್ ವಿತರಕರು ಕಳೆದ ವಾರ ರಾಯಿಟರ್ಸ್ಗೆ ತಿಳಿಸಿದ್ದಾರೆ. https://kannadanewsnow.com/kannada/no-new-change-in-tax-rules-from-today-finance-ministry/ https://kannadanewsnow.com/kannada/our-aim-is-to-defeat-joshi-dingaleshwar-sri-vighna-to-union-ministers-dream-of-winning-for-5th-time/
ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ದಿಂಗಾಲೇಶ್ವರ ಶ್ರೀ ಸಿಡಿದೆದ್ದಿದ್ದಾರೆ. ಬಿಜೆಪಿಯ ಭದ್ರಕೋಟೆಯಾದಂತ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಪ್ರಹ್ಲಾದ್ ಜೋಶಿ ಅವರನ್ನು ಸೋಲಿಸುವುದೇ ನಮ್ಮ ಗುರಿಯಾಗಿದೆ ಎಂಬುದಾಗಿ ಗುಡುಗಿದ್ದಾರೆ. ಈ ಮೂಲಕ 5ನೇ ಬಾರಿ ಸಂಸದರಾಗೋ ಕೇಂದ್ರ ಸಚಿವ ಜೋಶಿ ಕನಸಿಗೆ ವಿಘ್ನ ಎದುರಾದಂತೆ ಆಗಿದೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವಂತ ಅವರು, ನಮ್ಮ ಮುಂದಿನ ಗುರಿ ಬೇರೇನೂ ಇಲ್ಲ. ಧಮನಕಾರಿ ಆಡಳಿತ ನಡೆಸುತ್ತಿರುವಂತ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಸೋಲಿಸುವುದೇ ಆಗಿದೆ ಎಂದು ಹೇಳಿದರು. ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಈ ಬಾರಿಯ ಚುನಾವಣೆಯಲ್ಲಿ ಸೋಲಿಸಲು ಲಿಂಗಾಯತ ಸಮುದಾಯವನ್ನು ಒಟ್ಟು ಮಾಡಲಾಗುತ್ತಿದೆ. ಜೋಶಿ ಬಿಜೆಪಿಗೆ ಅನಿವಾರ್ಯವಾದ್ರೇ, ನನಗೆ ಹೋರಾಟ ಅನಿವಾರ್ಯವಾಗಿದೆ ಎಂಬುದಾಗಿ ಗುಡುಗಿದರು. https://kannadanewsnow.com/kannada/no-new-change-in-tax-rules-from-today-finance-ministry/ https://kannadanewsnow.com/kannada/bengaluru-rural-candidate-to-file-nomination-on-april-4-dr-cn-manjunath/
ತುಮಕೂರು: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಏಪ್ರಿಲ್.4ರಂದು ನಾಮಪತ್ರ ಸಲ್ಲಿಸುವುದಾಗಿ ಡಾ.ಸಿಎನ್ ಮಂಜುನಾಥ್ ಘೋಷಿಸಿದ್ದಾರೆ. ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ, ಸಿದ್ಧಗಂಗಾ ಶ್ರೀ ಗದ್ದುಗೆಗೆ ಪೂಜೆ ಸಲ್ಲಿಸಿ, ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಏಪ್ರಿಲ್.4ರಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದೇನೆ. ಬೃಹತ್ ರ್ಯಾಲಿಯ ಮೂಲಕ ಚುನಾವಣಾಧಿಕಾರಿಗಳ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸೋದಾಗಿ ತಿಳಿಸಿದರು. ಬೆಂಗಳೂರು ಗ್ರಾಮಾಂತರದಲ್ಲಿ ಕುಕ್ಕರ್ ಹಂಚಿಕೆ ಆರೋಪದ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದಂತ ಅವರು, ಚುನಾವಣಾ ಆಯೋಗ ಈ ಬಗ್ಗೆ ಕ್ರಮ ಕೈಗೊಳ್ಳುತ್ತದೆ. ಈಗಾಗಲೇ ಕುಕ್ಕರ್ ಹಂಚಿಕೆ ಆರೋಪ ಸಂಬಂಧ ಎಫ್ಐಆರ್ ದಾಖಲಾಗಿದೆ ಎಂದರು. https://kannadanewsnow.com/kannada/no-new-change-in-tax-rules-from-today-finance-ministry/ https://kannadanewsnow.com/kannada/notice-to-the-public-these-rules-that-have-changed-from-today-will-have-a-direct-impact-on-your-pocket/
ಬೆಂಗಳೂರು: ನಗರದ ತಲಘಟ್ಟಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಅಪರಿಚಿತ ಪುರಷನ ಗುರುತು ಪತ್ತೆಯಾದ್ರೇ, ತಿಳಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಪಿರ್ಯಾದುದಾರರಾದ ನಾರಾಯಣಪ್ಪ ರವರು ನೀಡಿದ ದೂರಿನ ಸಾರಾಂಶವೆನೆಂದರೆ ಎಂದಿನಂತೆ ಈ ದಿನ ದಿನಾಂಕ:-14/03/2024 ರಂದು ಬೆಳಿಗ್ಗೆ ಸುಮಾರು 7-00 ಗಂಟೆಗೆ ಕರ್ತವ್ಯಕ್ಕೆ ಹಾಜರಾಗಿದ್ದು, ಬೆಳಿಗ್ಗೆ ಸುಮಾರು 10-20 ಗಂಟೆಯ ಸಮಯದಲ್ಲಿ ಕರ್ತವ್ಯದಲ್ಲಿರುವಾಗ್ಗೆ ನೈಸ್ ಕಂಪನಿಯ ಕಂಟ್ರೋಲ್ ರೂಂನಿಂದ, ಹೊಸುರು ನೈಸ್ ರಸ್ತೆಯಿಂದ ಕನಕಪುರ ನೈಸ್ ರಸ್ತೆ ಮಾರ್ಗ ಮಧ್ಯೆ ಇರುವ ಅಂಜನಾಪುರ ಬ್ರಿಡ್ಜ್ ಹತ್ತಿರ ಮೋರಿಯಲ್ಲಿ ಸುಮಾರು 35-40 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೊಬ್ಬ ಮೃತಪಟ್ಟಿರುತ್ತಾರೆಂದು ಸಾರ್ವಜನಿಕರು ತಿಳಿಸಿರುವುದಾಗಿ ಪೋನ್ ಮೂಲಕ ತಿಳಿಸಿರುತ್ತಾರೆ ಎಂದಿದೆ. ನಾನು ಬೆಳಿಗ್ಗೆ 10-30 ಗಂಟೆಯ ಸಮಯಕ್ಕೆ ಹೋಗಿ ನೋಡಲಾಗಿ ಸುಮಾರು 35-40 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೊಬ್ಬ ಮೃತಪಟ್ಟಿರುವುದು, ಕಂಡುಬಂದಿರುತ್ತದೆ. ಈತನ ಮೈಮೇಲೆ ಬಲಗಾಲಿನ ಮಂಡಿಯ ಕೆಳಗೆ ತರಚಿದ ಗಾಯ, ಎಡಭಾಗದ…
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಮೇಷ ರಾಶಿ ಈ ದಿನ ನೀವಾಡುವ ಮತಿನ ಬಗ್ಗೆ ಜಾಗ್ರತೆವಹಿಸಬೇಕು, ನಿಮ್ಮ ಮಾತು ಬೇರೆಯವರ ಮನಸ್ಸಿಗೆ ನೋವುಂಟು ಮಾಡದಂತೆ, ನಿಮ್ಮ ಮಾತಿನಿಂದ ಜಗಳ ಉಂಟಾಗದಂತೆ ಜಾಗ್ರತೆವಹಿಸಬೇಕು. ಈ ದಿನ ಕೆಲಸದ ಹೊರೆ ಅಧಿಕವಿರಲಿದೆ. ಆದರೆ ನಿಮ್ಮ ಕಠಿಣ ಶ್ರಮಕ್ಕೆ ಶೀಘ್ರದಲ್ಲೇ ನೀವು ಸರಿಯಾದ ಫಲಿತಾಂಶಗಳನ್ನು ಪಡೆಯುತ್ತೀರಿ. ಉದ್ಯಮಿಗಳಿಗೆ ಉತ್ತಮ ಅವಕಾಶಗಳು ಸಿಗಲಿವೆ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ನೀವು ಯಾವುದೇ ದುಬಾರಿ ಐಷಾರಾಮಿ ವಸ್ತುಗಳನ್ನು ಖರೀದಿಸಲು ಬಯಸಿದರೆ ಇನ್ನೂ ಸ್ವಲ್ಪ ಸಮಯ ಕಾಯಲು ನಿಮಗೆ ಸಲಹೆ ನೀಡಲಾಗುವುದು. ಆರೋಗ್ಯದ ದೃಷ್ಟಿಯಿಂದ ಇಂದು ನಿಮಗೆ ಒಳ್ಳೆಯ ದಿನವಾಗಿರುತ್ತದೆ ವೃಷಭ ರಾಶಿ ನಿಮ್ಮ ಕುಟುಂಬದ ಸದಸ್ಯರ ಅಗತ್ಯಗಳನ್ನು ಸಂಪೂರ್ಣವಾಗಿ ನೋಡಿಕೊಳ್ಳಿ. ಅವರನ್ನು ನಿರ್ಲಕ್ಷಿಸುವುದನ್ನು ತಪ್ಪಿಸಿ. ಸಂಗಾತಿ ಹಾಗೂ ನಿಮ್ಮ ನಡುವೆ ಅಹಂ ಕಮ್ಮಿಯಾದರೆ ಎಲ್ಲವೂ ಸರಿಯಾಗಲಿದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ನೀವು ಸಾಲ…