Author: kannadanewsnow09

ಶಿವಮೊಗ್ಗ: ರಸ್ತೆ ಅಗಲೀಕರಣ ಕಾಮಗಾರಿಯ ಹಿನ್ನಲೆಯಲ್ಲಿ ಸಾಗರ ನಗರದಲ್ಲಿ ದಿನಾಂಕ 19-04-2025ರ ನಾಳೆ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಈ ಕುರಿತಂತೆ ಮೆಸ್ಕಾಂನಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ 19-04-2025ರ ಶನಿವಾರದ ನಾಳೆ, ಸಾಗರದ ಕೆಳದಿ ರಸ್ತೆ ಅಗಲೀಕರಣ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ನಾಳೆ ಸಾಗರ ನಗರದ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದಿದೆ. ನಾಳೆ ಸಾಗರ ನಗರದ ಈ ಪ್ರದೇಶಗಳಲ್ಲಿ ಪವರ್ ಕಟ್ ದಿನಾಂಕ 19-04-2025ರಂದು ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಸಾಗರ ನಗರದ ಅಣಲೆಕೊಪ್ಪ, ಟೀಚರ್ಸ್ ಲೇಔಟ್, ಶ್ರೀಧರ ನಗರ, ಜೆಪಿ ನಗರ, ಸುಭಾಷ ನಗರ, ಅರಮನೆ ಕೇರಿ, ಸೊರಬ ರಸ್ತೆ, ಗಡದಯ್ಯ ಲೇಔಟ್, ಈಳಿ ರಸ್ತೆ, ಕೆಳದಿ ರಸ್ತೆ ಮತ್ತು ಬಸವೇಶ್ವರ ನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಮನವಿ ಮಾಡಿದೆ. ವರದಿ: ವಸಂತ ಬಿ ಈಶ್ವರಗೆರೆ https://kannadanewsnow.com/kannada/siddaramaiahs-gang-sat-somewhere-and-prepared-caste-census-report-r-ashoka/ https://kannadanewsnow.com/kannada/good-news-cm-great-good-news-for-the-students-of-the-state-vidyasiri-yojana-money-increased-to-rs-2000/

Read More

ಬೆಂಗಳೂರು: ಸಿಎಂ ಸಿದ್ದರಾಮಯ್ಯನವರ ಗ್ಯಾಂಗ್‌ ಎಲ್ಲೋ ಕುಳಿತು ಸಿದ್ಧಪಡಿಸಿದ ಜಾತಿ ಗಣತಿ ವರದಿಯನ್ನು ಯಾರೂ ಒಪ್ಪಬೇಕಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರದಿಯಲ್ಲಿ ಸಹಿ ಹಾಕದೆ ಕಾಂತರಾಜು ಓಡಿಹೋಗಿದ್ದಾರೆ. ಜಯಪ್ರಕಾಶ್‌ ಹೆಗ್ಡೆ ವರದಿಯನ್ನು ತೆಗೆದು ನೋಡಿದಾಗ ಅದು ಅಸಲಿ ಅಲ್ಲ, ಕೇವಲ ಒಂದು ಪ್ರತಿ ಎಂದು ತಿಳಿದುಬಂದಿದೆ. ಈ ಬಗ್ಗೆ ಹೆಗ್ಡೆ ಪತ್ರ ಬರೆದಿದ್ದಾರೆ. ಸಿದ್ದರಾಮಯ್ಯನವರ ಗ್ಯಾಂಗ್‌ ಎಲ್ಲೋ ಕುಳಿತು ಸಿದ್ಧಪಡಿಸಿದ ವರದಿಯನ್ನು ಯಾರೂ ಒಪ್ಪಬೇಕಿಲ್ಲ. 10 ವರ್ಷದಲ್ಲಿ ಒಂದು ಕೋಟಿ ಮಕ್ಕಳು ಹುಟ್ಟಿದ್ದಾರೆ ಎಂದುಕೊಂಡರೆ, ಇವರನ್ನು ಯಾವ ವರ್ಗಕ್ಕೆ ಸೇರಿಸುತ್ತಾರೆ? ಹೊಸ ಪೀಳಿಗೆಯ ಭವಿಷ್ಯವೇನು? ಮೀಸಲಾತಿಯ ಮಾನದಂಡವೇನು? ಎಂದು ಪ್ರಶ್ನಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ವ್ಯರ್ಥವಾಗಿದೆ. ಸಚಿವರು ಅಭಿಪ್ರಾಯ ನೀಡುವಂತೆ ಸೂಚಿಸಲಾಗಿದೆ. ಸಂಪುಟದ ಸಚಿವರನ್ನೇ ಜಾತಿಯ ಬಲೆಯಲ್ಲಿ ಸಿಕ್ಕಿ ಹಾಕಿಸಿ ಅಪಮಾನ ಮಾಡಲಾಗುತ್ತಿದೆ. ನವೆಂಬರ್‌ನಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕಾಗಿದ್ದು, ಆ ಸಮಯದಲ್ಲಿ ಇದನ್ನು ಬಳಸಿಕೊಳ್ಳಲಾಗುತ್ತದೆ. ಜೆಡಿಎಸ್-ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರವಿದ್ದಾಗ ಸಿಎಂ…

Read More

ಬೆಂಗಳೂರು: ಸಿಇಟಿ ಪರೀಕ್ಷೆ ವೇಳೆ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳ ಜನಿವಾರ ತೆಗೆಯಲು ನಿರಾಕರಿಸಿದ ವಿದ್ಯಾರ್ಥಿಗೆ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಿದ ನಿಲುವು ಖಂಡನೀಯ ಎಂಬುದಾಗಿ ಮಾಜಿ ಡಿಸಿಎಂ ಡಾ.ಸಿಎನ್ ಅಶ್ವತ್ಥನಾರಾಯಣ್ ಕಿಡಿಕಾರಿದ್ದಾರೆ. ಇಂಥಾ ಘಟನೆಗಳು ಧಾರ್ಮಿಕ ಸ್ವಾತಂತ್ರ್ಯಕ್ಕೆ ಆಘಾತ ತರುವಂತಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಹಕ್ಕುಗಳನ್ನು ನಿರ್ಲಕ್ಷ್ಯ ಮಾಡಲಾಗಿದೆ ಎಂಬುದಾಗಿ ವಾಗ್ಧಾಳಿ ನಡೆಸಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು ಎಂಬುದಾಗಿ ಒತ್ತಾಯಿಸಿದ್ದಾರೆ. https://twitter.com/drashwathcn/status/1913190868548489333 https://kannadanewsnow.com/kannada/ksrtc-driver-attempts-suicide-by-consuming-poison-in-front-of-official/ https://kannadanewsnow.com/kannada/good-news-cm-great-good-news-for-the-students-of-the-state-vidyasiri-yojana-money-increased-to-rs-2000/

Read More

ಚಿಕ್ಕಮಗಳೂರು: ಅಧಿಕಾರಿ ನೀಡುತ್ತಿದ್ದಂತ ಕಿರುಕುಳಕ್ಕೆ ಬೇಸತ್ತು, ತನಗೆ ಕಿರುಕುಳ ನೀಡುತ್ತಿದ್ದಂತ ಅಧಿಕಾರಿಯ ಎದುರೇ ಕೆ ಎಸ್ ಆರ್ ಟಿ ಸಿ ಚಾಲಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದಂತ ಘಟನೆ ಕಡೂರು ಡಿಪೋದಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ಕೆಎಸ್ ಆರ್ ಟಿಸಿ ಡಿಪೋದಲ್ಲಿ ಚಾಲಕರಾಗಿ ಮಧು ಎಂಬುವರು ಕಾರ್ಯನಿರ್ವಹಿಸುತ್ತಿದ್ದರು. ಇವರಿಗೆ ಸಹಾಯಕ ಸಂಚಾರ ನಿರೀಕ್ಷಕ ಪುಟ್ಟಸ್ವಾಮಿ ಎಂಬುವರು ಕಿರುಕುಳ ನೀಡುತ್ತಿದ್ದರಂತೆ. ಈ ಕಾರಣಕ್ಕೆ ಬೇಸತ್ತ ಅವರು, ಇಂದು ಅವರ ಮುಂದೆಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ವಿಷ ಸೇವಿಸಿ ಆತ್ಮಹತ್ಯೆಗೆ ಮುನ್ನ ಕೆ ಎಸ್ ಆರ್ ಟಿ ಸಿ ಚಾಲಕ ಮಧು ಎಟಿಎಸ್ ಪುಟ್ಟಸ್ವಾಮಿ ನೀಡುತ್ತಿದ್ದಂತ ಕಿರುಕುಳವನ್ನು ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದಾರೆ. ಇದಲ್ಲದೇ ಎಟಿಎಸ್ ಅಧಿಕಾರಿ ಪುಟ್ಟಸ್ವಾಮಿ ನೀಡುತ್ತಿದ್ದಂತ ಕಿರುಕುಳದ ವೀಡಿಯೋ, ಆಡಿಯೋ ಕೂಡ ರೆಕಾರ್ಡ್ ಮಾಡಿದ್ದನ್ನು ತಿಳಿಸಿದ್ದಾರೆ. ಕಡೂರು ಡಿಪೋದ ಕೆ ಎಸ್ ಆರ್ ಟಿಸಿ ಚಾಲಕ ಮಧು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕಾರಣ, ಅವರ…

Read More

ನವದೆಹಲಿ: ಹಿರಿಯ ಅಧಿಕಾರಿ ಅರವಿಂದ್ ಶ್ರೀವಾಸ್ತವ ಅವರನ್ನು ಹೊಸ ಕಂದಾಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. 1994ರ ಬ್ಯಾಚ್ ನ ಕರ್ನಾಟಕ ಕೇಡರ್ ನ ಐಎಎಸ್ ಅಧಿಕಾರಿಯಾಗಿರುವ ಶ್ರೀವಾಸ್ತವ ಅವರು ಪ್ರಸ್ತುತ ಪ್ರಧಾನ ಮಂತ್ರಿ ಕಚೇರಿಯಲ್ಲಿ ಹೆಚ್ಚುವರಿ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಶ್ರೀವಾಸ್ತವ ಅವರನ್ನು ಹಣಕಾಸು ಸಚಿವಾಲಯದ ಕಂದಾಯ ಇಲಾಖೆಯ ಕಾರ್ಯದರ್ಶಿಯಾಗಿ ನೇಮಕ ಮಾಡಲು ಸಂಪುಟದ ನೇಮಕಾತಿ ಸಮಿತಿ (ಎಸಿಸಿ) ಅನುಮೋದನೆ ನೀಡಿದೆ ಎಂದು ಸಿಬ್ಬಂದಿ ಸಚಿವಾಲಯದ ಆದೇಶದಲ್ಲಿ ತಿಳಿಸಲಾಗಿದೆ. https://twitter.com/ANI/status/1913186450465583107 ನಾಗರಿಕ ವಿಮಾನಯಾನ ಕಾರ್ಯದರ್ಶಿ ವುಮ್ಲುನ್ಮಾಂಗ್ ವುಲ್ನಾಮ್ ಅವರನ್ನು ವೆಚ್ಚ ಇಲಾಖೆಯ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಮನೋಜ್ ಗೋವಿಲ್ ಅವರನ್ನು ಕ್ಯಾಬಿನೆಟ್ ಸೆಕ್ರೆಟರಿಯೇಟ್ನ ಕಾರ್ಯದರ್ಶಿ (ಸಮನ್ವಯ) ಆಗಿ ನೇಮಿಸಲಾಗಿದೆ. ಮಧ್ಯಪ್ರದೇಶ ಕೇಡರ್ನ 1994ರ ಬ್ಯಾಚ್ನ ಐಎಎಸ್ ಅಧಿಕಾರಿ ವಿವೇಕ್ ಅಗರ್ವಾಲ್ ಅವರನ್ನು ಸಂಸ್ಕೃತಿ ಸಚಿವಾಲಯದ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಅಗರ್ವಾಲ್ ಪ್ರಸ್ತುತ ಕಂದಾಯ ಇಲಾಖೆಯಲ್ಲಿ ಹೆಚ್ಚುವರಿ ಕಾರ್ಯದರ್ಶಿಯಾಗಿದ್ದಾರೆ. ಅವರು ಫೈನಾನ್ಷಿಯಲ್ ಇಂಟೆಲಿಜೆನ್ಸ್ ಯುನಿಟ್-ಇಂಡಿಯಾ (ಎಫ್ಐಯು-ಐಎನ್ಡಿ) ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ಅಧಿಕಾರಶಾಹಿ ಪುನರ್ರಚನೆಯ ಭಾಗವಾಗಿ ಇತರ ಹಿರಿಯ…

Read More

ಬೆಂಗಳೂರು: ಸಣ್ಣ ನೀರಾವರಿ ಹಾಗೂ ಅಂತರ್ಜಲ ಅಭಿವೃದ್ದಿ ಇಲಾಖೆಯಲ್ಲಿನ ಕಾಮಾಗಾರಿಗಳಿಗೆ ಹಾಗೂ ಗುತ್ತಿಗೆದಾರರರಿಗೆ ಪಾರದರ್ಶಕವಾಗಿ ಹಣ ಬಿಡುಗಡೆ ಮಾಡಲಾಗಿದೆ. ಅನುದಾನ ಬಿಡುಗಡೆಗೆ ಮೊದಲ ಬಾರಿಗೆ ಹೊಸ ಪ್ರಯತ್ನ ಮಾಡಲಾಗಿದ್ದು, ಕಳೆದ ಎರಡು ಆರ್ಥಿಕ ವರ್ಷದಲ್ಲಿ 1566 ಕಾಮಗಾರಿಗಳಿಗೆ ಸಂಪೂರ್ಣ ಬಾಕಿ ಹಣವನ್ನು ಬಿಡುಗಡೆ ಮಾಡಲಾಗಿದೆ. ಇಲಾಖೆ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಎಲ್ಲಾ ಕಾಮಗಾರಿ/ಗುತ್ತಿಗೆದಾರರಿಗೂ ಹಣ ಬಿಡುಗಡೆ ಮಾಡಲಾಗಿದ್ದು, ಇದರಲ್ಲಿ ತಾರತಮ್ಯ ಹಾಗೂ ಹಸ್ತಕ್ಷೇಪ ಹೇಗೆ ಸಾಧ್ಯ? ಈ ನಿಟ್ಟಿನಲ್ಲಿ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರು ಆಧಾರ ರಹಿತ ಆರೋಪ ಮಾಡಿದ್ದಾರೆ. ನಿನ್ನೆ ನಡೆದ ಸಭೆಯಲ್ಲಿ, ರಾಜ್ಯ ಗುತ್ತಿಗೆದಾರರಲ್ಲಿ ಉಂಟಾಗಿದ್ದ ಗೊಂದಲಗಳನ್ನು ಪರಿಹರಿಸಲಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ತಿಳಿಸಿದರು. ಗುರುವಾರ ರಾಜ್ಯ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದರ ಬಗ್ಗೆ ಇಂದು ಪತ್ರಿಕಾಗೋಷ್ಠಿಯಲ್ಲಿ ವಿವರ ನೀಡಿದರು. 2023 – 24 ನೇ ಆರ್ಥಿಕ ವರ್ಷದಲ್ಲಿ ಬಿಡುಗಡೆಯಾದ ಅನುದಾನದ ವಿವರ: 2023-24 ನೇ ಆರ್ಥಿಕ ವರ್ಷದಲ್ಲಿ…

Read More

ನವದೆಹಲಿ: ಅಥಿಯಾ ಶೆಟ್ಟಿ ಮತ್ತು ಕೆಎಲ್ ರಾಹುಲ್ ತಮ್ಮ ನವಜಾತ ಮಗಳನ್ನು ಅಧಿಕೃತವಾಗಿ ಜಗತ್ತಿಗೆ ಪರಿಚಯಿಸಿದ್ದಾರೆ, ಅವಳ ಹೆಸರನ್ನು ಎವಾರಾ ಎಂದು ಬಹಿರಂಗಪಡಿಸಿದ್ದಾರೆ. ಮಗಳ ಹೆಸರು ಬಹಿರಂಗಪಡಿಸಿದ ಕೆಎಲ್ ರಾಹುಲ್ ಮತ್ತು ಅಥಿಯಾ ಶೆಟ್ಟಿ ಹೃದಯಸ್ಪರ್ಶಿ ಜಂಟಿ ಇನ್ಸ್ಟಾಗ್ರಾಮ್ ಪೋಸ್ಟ್ನಲ್ಲಿ, ದಂಪತಿಗಳು ಹೃದಯಸ್ಪರ್ಶಿ ಕಪ್ಪು-ಬಿಳುಪು ಫೋಟೋವನ್ನು ಹಂಚಿಕೊಂಡಿದ್ದಾರೆ. ಕೆಎಲ್ ರಾಹುಲ್ ತಮ್ಮ ಹೆಣ್ಣು ಮಗುವನ್ನು ಮೃದುವಾಗಿ ಹಿಡಿದಿದ್ದರೆ, ಅಥಿಯಾ ಪ್ರೀತಿಯಿಂದ ತುಂಬಿದ ನಗುವಿನೊಂದಿಗೆ ನೋಡುತ್ತಿದ್ದಾರೆ. ಶೀರ್ಷಿಕೆ ಸರಳವಾಗಿ ಹೀಗಿತ್ತು: “ನಮ್ಮ ಹೆಣ್ಣು ಮಗು, ನಮ್ಮ ಎಲ್ಲವೂ. ಎವಾರಾ ~ ದೇವರ ಉಡುಗೊರೆ ಎಂದಿದ್ದಾರೆ. ಅವರು ಇನ್ಸ್ಟಾಗ್ರಾಮ್ ಸ್ಟೋರೀಸ್ನಲ್ಲಿ ಅವರ ಪೂರ್ಣ ಹೆಸರನ್ನು ಹಂಚಿಕೊಂಡಿದ್ದಾರೆ. ಎವಾರಾ ವಿ.ಆರ್ (ಎವಾರಾ ವಿಪುಲಾ ರಾಹುಲ್) ಮತ್ತು ಅದರ ಅರ್ಥವನ್ನು ವಿವರಿಸುತ್ತಾರೆ. “ಇವಾರಾಹ್, ಅಂದರೆ ದೇವರ ಉಡುಗೊರೆ. ವಿಪುಲಾ, ತನ್ನ ಮಹಾನ್ ನಾನಿ ಮತ್ತು ರಕ್ಷಕನ ಗೌರವಾರ್ಥವಾಗಿ. ರಾಹುಲ್, ಅವಳ ತಂದೆ.” ಎಂದಿದ್ದಾರೆ. ಮಾರ್ಚ್ 24, 2025 ರಂದು ಜನಿಸಿದ ಎವಾರಾ ದಂಪತಿಗಳ ಮೊದಲ ಮಗು. ಅವರ…

Read More

ನವದೆಹಲಿ: ಮೊಬೈಲ್ ಬಳಕೆದಾರರಿಗೆ ಬಿಗ್ ಶಾಕ್ ಎನ್ನುವಂತೆ ಶೀಘ್ರವೇ ಕರೆ, ಡೇಟಾ ಪ್ಯಾಕ್ ದರಗಳನ್ನು ಶೇ.10ರಿಂದ 20ರಷ್ಟು ಹೆಚ್ಚಳ ಮಾಡಲು ಟೆಲಿಕಾಂ ಆಪರೇಟರ್ ಗಳು ಸಜ್ಜಾಗಿದ್ದಾರೆ. ಭಾರತದ ಟೆಲಿಕಾಂ ವಲಯವು 2025 ರ ಅಂತ್ಯದ ವೇಳೆಗೆ ಮತ್ತೊಂದು ಗಮನಾರ್ಹ ಮೊಬೈಲ್ ಪ್ಯಾಕ್ ದರ ಹೆಚ್ಚಳಕ್ಕೆ ಸಜ್ಜಾಗುತ್ತಿದೆ. ಉದ್ಯಮ ವಿಶ್ಲೇಷಕರು ಪ್ರಿಪೇಯ್ಡ್ ಮತ್ತು ಪೋಸ್ಟ್ಪೇಯ್ಡ್ ಯೋಜನೆಗಳಲ್ಲಿ 10 ರಿಂದ 20 ಪ್ರತಿಶತದಷ್ಟು ಹೆಚ್ಚಳವನ್ನು ಊಹಿಸಿದ್ದಾರೆ. ನವೆಂಬರ್-ಡಿಸೆಂಬರ್ 2025 ರ ಸುಮಾರಿಗೆ ನಿರೀಕ್ಷಿಸಲಾದ ಈ ಮುಂಬರುವ ಬೆಲೆ ಪರಿಷ್ಕರಣೆಯು ಆರು ವರ್ಷಗಳಲ್ಲಿ ನಾಲ್ಕನೇ ಪ್ರಮುಖ ದರ ಹೆಚ್ಚಳವನ್ನು ಸೂಚಿಸುತ್ತದೆ ಮತ್ತು ಹೆಚ್ಚುತ್ತಿರುವ ವೆಚ್ಚಗಳು ಮತ್ತು 5 ಜಿ ಮೂಲಸೌಕರ್ಯವನ್ನು ವಿಸ್ತರಿಸುವ ನಡುವೆ ದರಗಳನ್ನು ಸರಿಪಡಿಸಲು ಮತ್ತು ಆದಾಯವನ್ನು ಸುಧಾರಿಸಲು ಟೆಲಿಕಾಂ ಕಂಪನಿಗಳು ನಡೆಸುತ್ತಿರುವ ಪ್ರಯತ್ನಗಳನ್ನು ಪ್ರತಿಬಿಂಬಿಸುತ್ತದೆ. ಪ್ರಮುಖ ಟೆಲಿಕಾಂ ಆಪರೇಟರ್ಗಳಾದ ಭಾರ್ತಿ ಏರ್ಟೆಲ್, ರಿಲಯನ್ಸ್ ಜಿಯೋ ಮತ್ತು ವೊಡಾಫೋನ್ ಐಡಿಯಾ (ವಿ) ನೆಟ್ವರ್ಕ್ ವಿಸ್ತರಣೆ, ಸ್ಪೆಕ್ಟ್ರಮ್ ಸ್ವಾಧೀನ ಮತ್ತು ನಿಯಂತ್ರಕ ಶುಲ್ಕಗಳಲ್ಲಿ ಭಾರಿ ಹೂಡಿಕೆಯಿಂದಾಗಿ…

Read More

ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ನನಗೆ ಕೆಲ ಕ್ರಿಕೆಟಿಗರು ನಗ್ನ ಚಿತ್ರಗಳನ್ನು ಕಳಿಸುತ್ತಿದ್ದಾರೆ ಎಂಬುದಾಗಿ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗನ ಪುತ್ರಿ ಗಂಭೀರ ಆರೋಪವನ್ನು ಮಾಡಿದ್ದಾರೆ. ಈ ಬಗ್ಗೆ ಖಾಸಗಿ ವಾಹಿನಿಗೆ ನೀಡಿರುವಂತ ಸಂದರ್ಶನದಲ್ಲಿ ಮಾಜಿ ಕ್ರಿಕೆಟಿಗ ಸಂಜಯ್ ಬಂಗಾರ್ ಪುತ್ರಿ ಅನನ್ಯಾ ಬಂಗಾರ್ ಮಾತನಾಡಿರುವಂತ ಅವರು ನನಗೆ ಕೆಲ ಕ್ರಿಕೆಟಿಗರು ನಗ್ನ ಚಿತ್ರಗಳನ್ನು ಕಳಿಸಿದ್ರು. ಕ್ರಿಕೆಟ್ ಗೆ ಸಂಬಂಧಪಟ್ಟವರಿಂದಲೇ ಮಾನಸಿಕ ಕಿರುಕುಳ ಅನುಭವಿಸಿದ್ದೇನೆ ಎಂಬುದಾಗಿ ಗಂಭೀರ ಆರೋಪಿ ಮಾಡಿದ್ದಾರೆ. ಅಂದಹಾಗೇ ಮಾಜಿ ಕ್ರಿಕೆಟಿಗ ಸಂಜಯ್ ಬಂಗಾರ್ ಪುತ್ರಿ ಅನನ್ಯಾ ಬಂಗಾರ್ ಅವರು ಲಿಂಗ ಬದಲಾವಣೆ ಮೂಲಕ ಹೆಣ್ಣಾಗಿ ಬದಲಾಗಿದ್ದರು. ಇಂತಹ ಅವರಿಗೆ ಕೆಲ ಕ್ರಿಕೆಟಿಗರು ತಮ್ಮ ನಗ್ನ ಪೋಟೋಗಳನ್ನು ಕಳುಹಿಸುತ್ತಿರೋ ಆರೋಪ ಮಾಡಿದ್ದಾರೆ. https://kannadanewsnow.com/kannada/bjp-worker-praveen-commits-suicide-by-posting-video/ https://kannadanewsnow.com/kannada/good-news-cm-great-good-news-for-the-students-of-the-state-vidyasiri-yojana-money-increased-to-rs-2000/

Read More

ಬೆಂಗಳೂರು: ವೀಡಿಯೋ ಪೋಸ್ಟ್ ಮಾಡಿ ಮತ್ತೊಬ್ಬ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ಆನೇಕಲ್ ನಲ್ಲಿ ನಡೆದಿದೆ. ಬೆಂಗಳೂರಿನ ಆನೇಕಲ್ ನ ಎಸ್ ವಿ ಎಂ ಸ್ಕೂಲ್ ಬಳಿಯಲ್ಲಿ ವೀಡಿಯೋ ಪೋಸ್ಟ್ ಮಾಡಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ನಡೆದಿದೆ. ಈ ಹಿನ್ನಲೆಯಲ್ಲಿ ಘಟನಾ ಸ್ಥಳಕ್ಕೆ ಹೆಚ್ಚುವರಿ ಎಸ್ ಪಿ ನಾಗರಾಜ್ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ಪಟ್ಟಣದ ಎಸ್ ವಿ ಎಂ ಸ್ಕೂಲ್ ಗೆ ಭೇಟಿ ನೀಡಿ ಪರಿಶೀಲಿಸಿದರು. ಇದೇ ಸಂದರ್ಭದಲ್ಲಿ ಪ್ರವೀಣ್ ಸಾವಿಗೆ ಕಾರಣರಾದವರನ್ನು ಬಂಧಿಸಬೇಕೆಂದು ಮನವಿಯನ್ನು ಹೆಚ್ಚುವರಿ ಎಸ್ ಪಿ ನಾಗರಾಜ್ ಅವರಿಗೆ ಪ್ರವೀಣ್ ಸಹೋದರಿ ಮನವಿ ಮಾಡಿದರು. https://kannadanewsnow.com/kannada/mysore-railway-museum-celebrates-world-heritage-day/ https://kannadanewsnow.com/kannada/attention-parents-applications-invited-for-kendriya-vidyalaya-2nd-class-admission/

Read More