Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಶಿವಮೊಗ್ಗ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಶಿವಮೊಗ್ಗ ಜಿಲ್ಲಾ ಘಟಕದ ಕಾರ್ಯದರ್ಶಿಯಾಗಿ ದೀಪಕ್ ಸಾಗರ್ ಅವರನ್ನು ನೇಮಕ ಮಾಡಲಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರದ ವಿಜಯವಾಣಿ ಪತ್ರಿಕೆಯ ಹಿರಿಯ ವರದಿಗಾರ, ಮಾಧ್ಯಮ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ದೀಪಕ್ ಸಾಗರ್ ಅವರನ್ನು ಶಿವಮೊಗ್ಗ ಜಿಲ್ಲಾ ಘಟಕದ ಕೆಯುಡಬ್ಲ್ಯೂಜೆ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಈ ಬಗ್ಗೆ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪರ್ತಕರ್ತರ ಸಂಘದ ಜಿಲ್ಲಾಧ್ಯಕ್ಷರಾದಂತ ಹೆಚ್.ಯು ವೈದ್ಯನಾಥನ್, ಪ್ರಧಾನ ಕಾರ್ಯದರ್ಶಿ ಆರ್.ಎಸ್ ಹಾಲಸ್ವಾಮಿ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಅಂದಹಾಗೇ ದೀಪಕ್ ಸಾಗರ್, ಡಿಡಿ ನ್ಯೂಸ್ ಶಿವಮೊಗ್ಗ ಜಿಲ್ಲಾ ಕರೆಸ್ಪಾಂಡೆಂಟ್ ಆಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ಇದಕ್ಕೂ ಮೊದಲು ಪ್ರಜಾವಾಣಿ, ವಿದ್ಯುನ್ಮಾನ ಮಾಧ್ಯಮಗಳಲ್ಲೂ ಕೆಲಸ ಮಾಡಿದ ಅನುಭವ ಅವರಿಗಿದೆ. ಪ್ರಸ್ತುತ ಸಾಗರ ತಾಲ್ಲೂಕು ವಿಜಯವಾಣಿ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವಂತ ದೀಪಕ್ ಸಾಗರ್ ಅವರನ್ನು ಶಿವಮೊಗ್ಗ ಜಿಲ್ಲಾ ಘಟಕದ ಕೆಯುಡಬ್ಲ್ಯೂಜೆ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಅವರಿಗೆ ಕೆಎನ್ಎನ್ ಸಂಸ್ಥೆಯೂ ಹೃತ್ಪೂರ್ವಕವಾಗಿ ಅಭಿನಂದನೆ, ಶುಭಾಶಯವನ್ನು ಕೋರುತ್ತಿದೆ. ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು https://kannadanewsnow.com/kannada/nda-wins-by-a-landslide-in-bihar-bjp-bursts-crackers-and-distributes-sweets-in-sagar-to-celebrate/…

Read More

ಶಿವಮೊಗ್ಗ: ಬಿಹಾರ ವಿಧಾನಸಭೆಯಲ್ಲಿ ಎನ್ ಡಿ ಎ ಭರ್ಜರಿ ಗೆಲುವು ಸಾಧಿಸಿತ್ತು. ಈ ಹಿನ್ನಲೆಯಲ್ಲಿ ಶುಕ್ರವಾರದಂದು ಸಾಗರದಲ್ಲಿ ಬಿಜೆಪಿಯಿಂದ ಸಾಗರ ಹೋಟೆಲ್ ವೃತ್ತದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಲಾಯಿತು. ಈ ವೇಳೆ ಮಾತನಾಡಿದಂತ ಬಿಜೆಪಿ ಜಿಲ್ಲಾ ನಿಕಟಪೂರ್ವ ಅಧ್ಯಕ್ಷ ಟಿ.ಡಿ.ಮೇಘರಾಜ್, ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಮಹಾಘಟಬಂಧನ್ ಮತದಾರರ ಸೆಳೆಯಲು ಅನೇಕ ಗಿಮಿಕ್ ಮಾಡಿಯೂ ವಿಫಲವಾಗಿದೆ. ಬಿಹಾರದ ಪ್ರಜ್ಞಾವಂತ ಮತದಾರ ನರೇಂದ್ರ ಮೋದಿ ಅವರು ರಾಷ್ಟçಕ್ಕೆ ನೀಡಿರುವ ಸಮರ್ಥ ನಾಯಕತ್ವ ಹಾಗೂ ಬಿಹಾರದಲ್ಲಿನ ಎನ್.ಡಿ.ಎ. ಮೈತ್ರಿಕೂಟದ ಕಾರ್ಯವೈಖರಿಗೆ ಮನಸೋತು ತಮ್ಮ ಮತ ನೀಡಿದ್ದಾರೆ ಎಂದರು. ರಾಹುಲ್ ಗಾಂಧಿ ಮೀನು ಹಿಡಿಯುವ ನಾಟಕ ಮಾಡಿದ್ದು ಜನರಿಗೆ ಅರ್ಥವಾಗಿದೆ. ಸರ್ಕಾರಿ ಉದ್ಯೋಗ, ಮಹಿಳೆಯರ ಖಾತೆಗೆ ಹಣ ಸೇರಿ ಅನೇಕ ಆಮೀಷಗಳನ್ನು ಮತದಾರರಿಗೆ ಒಡ್ಡಲಾಗಿತ್ತು. ಆದರೆ ಇದೆಲ್ಲಾ ಸುಳ್ಳು ಭರವಸೆ ಎನ್ನುವುದನ್ನು ಮನಗಂಡ ಮತದಾರ ಮಹಾಘಟಬಂಧನ್‌ಗೆ ಬೆಂಬಲ ನೀಡಿದೆ ಅತ್ಯಂತ ಕೆಳಹಂತಕ್ಕೆ ತಲುಪುವಂತೆ ಮಾಡಿದ್ದಾರೆ. ಮುಂದಿನ ಚುನಾವಣೆಯಲ್ಲಿ ಪಶ್ಚಿಮ ಬಂಗಾಲ, ಕರ್ನಾಟಕದಲ್ಲೂ ಬಿಜೆಪಿ ನೇತೃತ್ವದ NDA ಅದ್ವಿತೀಯ…

Read More

ಆರೋಗ್ಯವಾಗಿರಲು ಸಾಕಷ್ಟು ನೀರು ಸೇವನೆ ಅತ್ಯಗತ್ಯ. ದೇಹವು ಹೈಡ್ರೇಟೆಡ್ ಆಗಿರುವುದನ್ನು ಖಚಿತಪಡಿಸಿಕೊಳ್ಳಲು ದಿನವಿಡೀ ಸಾಕಷ್ಟು ನೀರು ಕುಡಿಯಲು ವೈದ್ಯರು ಹೆಚ್ಚಾಗಿ ಶಿಫಾರಸು ಮಾಡುತ್ತಾರೆ. ಸಾಕಷ್ಟು ನೀರು ಸೇವನೆ ಮಾಡದಿರುವುದು ನಿರ್ಜಲೀಕರಣ, ಆಯಾಸ, ತಲೆನೋವು, ತಲೆತಿರುಗುವಿಕೆ ಮತ್ತು ಮಲಬದ್ಧತೆಯಂತಹ ಸಮಸ್ಯೆಗಳಿಗೆ ಕಾರಣವಾಗಬಹುದು. ಈಗ ಪ್ರಶ್ನೆ ಉದ್ಭವಿಸೋದು ಹಾಲು, ಜ್ಯೂಸ್ ಮತ್ತು ಇತರ ಪಾನೀಯಗಳಿಗೆ ಮುಕ್ತಾಯ ದಿನಾಂಕ ಇರುವಂತೆಯೇ, ನೀರಿಗೂ ಮುಕ್ತಾಯ ದಿನಾಂಕವಿದೆಯೇ? ಇದನ್ನು ವಿವರವಾಗಿ ಮುಂದಿ ಓದಿ ತಿಳಿಯಿರಿ. ನೀರು ಕೆಟ್ಟು ಹೋಗುತ್ತದೆಯೇ? ಶುದ್ಧ ನೀರು ಬ್ಯಾಕ್ಟೀರಿಯಾ ಅಥವಾ ಕಲ್ಮಶಗಳಿಂದ ಮುಕ್ತವಾಗಿರುವುದರಿಂದ ಅದು ತಾನಾಗಿಯೇ ಕೆಟ್ಟು ಹೋಗುವುದಿಲ್ಲ. ನೀರನ್ನು ಕೊಳಕು ಪಾತ್ರೆಯಲ್ಲಿ ಅಥವಾ ಕಲುಷಿತ ವಾತಾವರಣದಲ್ಲಿ ಸಂಗ್ರಹಿಸದ ಹೊರತು, ಅದರಲ್ಲಿ ಬ್ಯಾಕ್ಟೀರಿಯಾಗಳು ಬೆಳೆಯುವ ಸಾಧ್ಯತೆಗಳು ಬಹಳ ಕಡಿಮೆ. ಆದಾಗ್ಯೂ, ನೀರನ್ನು ಸರಿಯಾಗಿ ಸಂಗ್ರಹಿಸದಿದ್ದರೆ, ಅದು ಕುಡಿಯಲು ಅಸುರಕ್ಷಿತವಾಗಬಹುದು. ವಾಸ್ತವವಾಗಿ, ನೀರಿನ ಸುರಕ್ಷತೆಯು ಸಂಪೂರ್ಣವಾಗಿ ಪಾತ್ರೆ ಮತ್ತು ಅದನ್ನು ಸಂಗ್ರಹಿಸುವ ಪರಿಸ್ಥಿತಿಗಳ ಮೇಲೆ ಅವಲಂಬಿತವಾಗಿರುತ್ತದೆ. ಬಾಟಲ್ ನೀರಿನ ಶೆಲ್ಫ್ ಜೀವಿತಾವಧಿ ಹೆಚ್ಚಿನ ಪ್ಯಾಕ್ ಮಾಡಲಾದ…

Read More

ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭಾರಿ ಗೆಲುವು ಸಾಧಿಸಿದ ಕೆಲವೇ ಗಂಟೆಗಳ ನಂತರ, ಪಕ್ಷವು ಮಾಜಿ ಕೇಂದ್ರ ಸಚಿವ ಆರ್‌ಕೆ ಸಿಂಗ್ ವಿರುದ್ಧ ಕಠಿಣ ಕ್ರಮ ಕೈಗೊಂಡು ಅವರನ್ನು ಆರು ವರ್ಷಗಳ ಅವಧಿಗೆ ಅಮಾನತುಗೊಳಿಸಿತು. ಮೂಲಗಳ ಪ್ರಕಾರ, ಮಾಜಿ ಕೇಂದ್ರ ಸಚಿವರ ವಿರುದ್ಧ ಅವರ ಪಕ್ಷ ವಿರೋಧಿ ಚಟುವಟಿಕೆಗಳು ಮತ್ತು ಹೇಳಿಕೆಗಳ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ. ಹಿರಿಯ ನಾಯಕರು ಎನ್‌ಡಿಎ ನಾಯಕತ್ವವನ್ನು ಪ್ರಶ್ನಿಸಿ ಬಿಹಾರ ಸರ್ಕಾರದ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ ಕೆಲವು ದಿನಗಳ ನಂತರ ಈ ಬೆಳವಣಿಗೆ ಸಂಭವಿಸಿದೆ. ಬಿಹಾರದ ಅರ್ರಾಹ್‌ನ ಮಾಜಿ ಸಂಸದ ಸಿಂಗ್ ಪಕ್ಷದ ಚಟುವಟಿಕೆಗಳಿಗೆ ವಿರುದ್ಧವಾಗಿ ಪರಿಗಣಿಸಲಾದ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆಂದು ಆರೋಪಿಸಲಾಗಿದೆ. “ನೀವು ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದೀರಿ. ಇದು ಶಿಸ್ತಿನ ವ್ಯಾಪ್ತಿಗೆ ಬರುತ್ತದೆ. ಪಕ್ಷವು ಇದನ್ನು ಗಂಭೀರವಾಗಿ ಪರಿಗಣಿಸಿದೆ. ಇದು ಪಕ್ಷಕ್ಕೆ ಹಾನಿಯನ್ನುಂಟುಮಾಡಿದೆ. ಆದ್ದರಿಂದ, ನಿರ್ದೇಶನದಂತೆ, ನಿಮ್ಮನ್ನು ಪಕ್ಷದಿಂದ ಅಮಾನತುಗೊಳಿಸಲಾಗುತ್ತಿದೆ ಮತ್ತು ನಿಮ್ಮನ್ನು ಪಕ್ಷದಿಂದ ಏಕೆ ಹೊರಹಾಕಬಾರದು ಎಂಬುದನ್ನು ವಿವರಿಸಲು…

Read More

ನಮ್ಮ ಮನೆಗಳಲ್ಲಿ ಅಥವಾ ನಮ್ಮ ಸುತ್ತಮುತ್ತಲಿನ ಜನರಿಂದ ನಾವು ಇಂತಹ ಅನೇಕ ವಿಷಯಗಳನ್ನು ಕೇಳುತ್ತೇವೆ, ಅದರಲ್ಲಿ ನಿಂತು ನೀರು ಕುಡಿಯುವುದರಿಂದ ಮೊಣಕಾಲು ಸಮಸ್ಯೆಗಳು ಉಂಟಾಗುತ್ತವೆ ಎಂಬ ಅಂಶವೂ ಸೇರಿದೆ. ಇದು ಎಷ್ಟು ನಿಜ? ವಿಜ್ಞಾನ ಹೇಳೋದೇನು ಅಂತ ಮುಂದೆ ಓದಿ. ನಿಂತು ನೀರು ಕುಡಿಯುವುದರಿಂದ ಮೊಣಕಾಲುಗಳ ಮೇಲೆ ಪರಿಣಾಮ ಬೀರುತ್ತದೆ ಮತ್ತು ಈ ಅಭ್ಯಾಸವು ಆರೋಗ್ಯಕ್ಕೆ ಹಾನಿಕಾರಕವಾಗಿದೆ ಎಂದು ಹಿರಿಯರು ಹೇಳುವುದನ್ನು ನೀವು ಆಗಾಗ್ಗೆ ಕೇಳಿರಬೇಕು. ಇದರಲ್ಲಿ ಎಷ್ಟು ಸತ್ಯವಿದೆ ಮತ್ತು ಎಷ್ಟು ಸುಳ್ಳು ಎಂದು ತಿಳಿಸಿ. 1 /7 ಈ ಹೇಳಿಕೆಯನ್ನು ವೈಜ್ಞಾನಿಕ ದೃಷ್ಟಿಕೋನದಿಂದ ನೋಡಿದರೆ, ನಿಂತು ನೀರು ಕುಡಿಯುವುದರಿಂದ ಮೊಣಕಾಲುಗಳ ಮೇಲೆ ಯಾವುದೇ ನೇರ ನಕಾರಾತ್ಮಕ ಪರಿಣಾಮ ಬೀರುವುದಿಲ್ಲ ಎಂಬುದು ಸ್ಪಷ್ಟವಾಗುತ್ತದೆ. 2 /7 ವಾಸ್ತವವಾಗಿ, ಮೊಣಕಾಲು ಹಾನಿಗೆ ಕಾರಣ ನೀರು ಕುಡಿಯುವುದಲ್ಲ, ಬದಲಾಗಿ ದೇಹದ ತೂಕ ಹೆಚ್ಚಾಗುವುದು, ದೇಹದಲ್ಲಿ ಜೀವಸತ್ವಗಳ ಕೊರತೆ ಮತ್ತು ಮೂಳೆ ಬಲಕ್ಕೆ ಸಂಬಂಧಿಸಿದ ಸಮಸ್ಯೆಗಳು. 3 /7 ನಿಂತು ನೀರು ಕುಡಿಯುವುದರಲ್ಲಿನ ಒಂದೇ…

Read More

ದಕ್ಷಿಣಕನ್ನಡ : ಜಿಲ್ಲೆಯ ಬಂಟ್ವಾಳದಲ್ಲಿ ಫುಟ್ ಪಾತ್ ಒಂದಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದು, ಆರು ಜನರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ನಡೆದಿತ್ತು. ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಹೌದು ದಕ್ಷಿಣ ಕನ್ನಡ ಜಿಲ್ಲೆಯ ಪಣಂಬೂರು ಸಿಗ್ನಲ್ ಬಳಿ ಸರಣಿ ಅಪಘಾತ ಸಂಭವಿಸಿ, ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಎರಡು ಟ್ಯಾಂಕರ್ ಹಾಗೂ ಆಟೋರಿಕ್ಷಾ ಕಾರಿನ ಮಧ್ಯ ಸರಣಿ ಅಪಘಾತ ಸಂಭವಿಸಿದೆ. ಸಿಗ್ನಲ್ ನಲ್ಲಿ ಟ್ಯಾಂಕರ್ ಹಿಂದೆ ಕಾರು ಹಾಗು ಆಟೋರಿಕ್ಷಾ ನಿಂತಿದ್ದವು. ಈ ವೇಳೆ ಹಿಂದಿನಿಂದ ಬಂದು ಮತ್ತೊಂದು ಟ್ಯಾಂಕರ್ ಆಟೋಗೆ ಡಿಕ್ಕಿ ಹೊಡೆದಿದೆ. ಆಟೋ ರಿಕ್ಷಾಗೆ ಡಿಕ್ಕಿ ಹೊಡೆದು ಎದುರಿಗೆ ನಿಂತಿದ್ದ ಕಾರಿಗೆ ಗುದ್ದಿದೆ. ಬಳಿಕ ಅದರ ಮುಂದೆ ನಿಂತಿದ್ದ ಮತ್ತೊಂದು ಟ್ಯಾಂಕರ್ ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಎರಡು ಟ್ಯಾಂಕರ್ ಗಳ ಮಧ್ಯೆ ಸಿಲುಕಿ ಆಟೋ ರಿಕ್ಷಾ ಅಪ್ಪಚ್ಚಿಯಾಗಿದೆ. ಆಟೋರಿಕ್ಷಾ ಚಾಲಕ ಹಾಗೂ ಇಬ್ಬರು…

Read More

ಮಂಡ್ಯ : ಒಂದು ಊರಿಗೆ ಅಥವಾ ಒಬ್ಬರಿಗೆ ಅಧಿಕಾರ ಸಿಗುವುದು ಅಪರೂಪ. ಆದರೆ, ತೈಲೂರು ಗ್ರಾಮಕ್ಕೆ ನಾಲ್ಕೈದು ಅಧಿಕಾರ ಸಿಕ್ಕಿರುವುದು ನಿಮ್ಮಗಳ ಆಶೀರ್ವಾದ ಎಂದು ಶಾಸಕ ಉದಯ್ ಬಣ್ಣಿಸಿದರು. ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾದ ಸಿ.ಚಲುವರಾಜ್ ಹಾಗೂ ಮಂಡ್ಯ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ಟಿ.ಎಸ್.ಸತ್ಯಾನಂದ ಅವರುಗಳಿಗೆ ತೈಲೂರು ಗ್ರಾಮದಲ್ಲಿ ಶುಕ್ರವಾರ ರಾತ್ರಿ ಆಯೋಜಿಸಿದ್ದ ತವರಿನ ಸನ್ಮಾನ ನೀಡಿ ಗೌರವಿಸಿ ಅವರು ಮಾತನಾಡಿದರು. ತಾಲೂಕು ಪಂಚಾಯತಿ ಸದಸ್ಯರಾಗಿ ಅವಧಿ ಮುಗಿದ ಮೇಲೆ ಯಾವುದೇ ಅಧಿಕಾರವಿಲ್ಲದೆ ಇದ್ದ ಚಲುವರಾಜ್ ಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ನಂತರ ಪ್ರಸನ್ನ ಕುಮಾರ್ ಅವರನ್ನ ನಗರಸಭಾ ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ಬಳಿಕ ಚಲುವರಾಜ್ ಗೆ ಡಿಸಿಸಿ ಬ್ಯಾಂಕ್ ಚುನಾವಣೆಗೆ ಸ್ಪರ್ಧಿಸಿವಂತೆ ಹೇಳಿದಾಗ ನನಗೆ ಬೇಡ ಪಕ್ಷದ ಕಾರ್ಯಕರ್ತರಿಗೆ ನೀಡುವಂತೆ ಚಲುವರಾಜು ಹೇಳಿದ್ದರು. ಆದರೆ, ಎರಡು ಬಾರಿ ಗೆದ್ದಿರುವ ವಿಶ್ವನಾಥ್ ಅವರಿಗೆ ನೀವೇ ಪ್ರಬಲ ಪ್ರತಿ ಸ್ಪರ್ಧಿ ಎಂದು ಮನವೊಲಿಸಿ ಚಲುವರಾಜು…

Read More

ನವದೆಹಲಿ: ಬಾಲಿವುಡ್ ದಂಪತಿ ರಾಜ್‌ಕುಮಾರ್ ರಾವ್ ಮತ್ತು ಪತ್ರಲೇಖಾ ತಮ್ಮ ನಾಲ್ಕನೇ ವಿವಾಹ ವಾರ್ಷಿಕೋತ್ಸವದಂದು ತಮ್ಮ ಹೆಣ್ಣು ಮಗುವನ್ನು ಸ್ವಾಗತಿಸುವ ಮೂಲಕ ಪೋಷಕರಾಗಲು ಒಪ್ಪಿಕೊಂಡರು. ಶನಿವಾರ, ದಂಪತಿಗಳು ಜಂಟಿ ಪೋಸ್ಟ್‌ನಲ್ಲಿ ಸಂತೋಷದ ಸುದ್ದಿಯನ್ನು ಹಂಚಿಕೊಂಡರು, ಅದರಲ್ಲಿ “ನಾವು ಚಂದ್ರನ ಮೇಲಿದ್ದೇವೆ. ದೇವರು ನಮಗೆ ಹೆಣ್ಣು ಮಗುವನ್ನು ಆಶೀರ್ವದಿಸಿದ್ದಾನೆ. ಧನ್ಯ ಪೋಷಕರು, ಪತ್ರಲೇಖಾ ಮತ್ತು ರಾಜ್‌ಕುಮಾರ್.” ಅವರು ಪೋಸ್ಟ್‌ಗೆ “❤️ ನಮ್ಮ 4 ನೇ ವಿವಾಹ ವಾರ್ಷಿಕೋತ್ಸವದಂದು ದೇವರು ನಮಗೆ ನೀಡಿದ ಅತ್ಯಂತ ದೊಡ್ಡ ಆಶೀರ್ವಾದ” ಎಂದು ಶೀರ್ಷಿಕೆ ನೀಡಿದ್ದಾರೆ.

Read More

ನವದೆಹಲಿ: ಬಿಹಾರದ ಜನತೆ ಮತ್ತೆ ಜಂಗಲ್ ರಾಜ್ ಸರ್ಕಾರಕ್ಕೆ ಅವಕಾಶ ನೀಡಿಲ್ಲ. ಎನ್ ಡಿ ಎ ಬೆಂಬಲಿಸಿದ ಬಿಹಾರದ ಜನರಿಗೆ ಆಭಾರಿಯಾಗಿದ್ದೇನೆ. ಬಿಹಾರದ ಜನರಿಗೆ ಹೃದಯ ಪೂರ್ವಕ ಧನ್ಯವಾದಗಳು ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ದೆಹಲಿಯ ಬಿಜೆಪಿ ಕಚೇರಿಯಲ್ಲಿ ದೇಶದ ಜನತೆ ಉದ್ದೇಶಿಸಿ ಮಾತನಾಡಿದಂತ ಅವರು, ಬಿಹಾರದ ಅಭಿವೃದ್ಧಿಗೆ ಕೇಂದ್ರ, ರಾಜ್ಯ ಸರ್ಕಾರ ಬದ್ಧವಾಗಿರುತ್ತದೆ. ಬಿಹಾರದ ಮಹಿಳೆಯರಿಗೆ ವಿಶೇಷ ಅಭಿನಂದನೆಗಳು. ಎನ್ ಡಿ ಎ ಗೆಲುವಿಗೆ ಕಾರಣರಾದ ಎಲ್ಲಾ ನಾಯಕರಿಗೆ ಧನ್ಯವಾದಗಳು ಎಂದರು. ಕಾಂಗ್ರೆಸ್ ತನ್ನ ನಕಾರಾತ್ಮಕ ರಾಜಕೀಯದಲ್ಲಿ ಎಲ್ಲರನ್ನೂ ಮುಳುಗಿಸುತ್ತಿದೆ ಎಂದು ಕಾಂಗ್ರೆಸ್ ಮಿತ್ರಪಕ್ಷಗಳು ಸಹ ಅರ್ಥಮಾಡಿಕೊಳ್ಳಲು ಪ್ರಾರಂಭಿಸಿವೆ. ಅದಕ್ಕಾಗಿಯೇ, ಬಿಹಾರ ಚುನಾವಣೆಯ ಸಮಯದಲ್ಲಿ, ಕಾಂಗ್ರೆಸ್‌ನ ‘ನಾಮದಾರ’ ಕೊಳದಲ್ಲಿ ಸ್ನಾನ ಮಾಡುವ ಮೂಲಕ ಬಿಹಾರ ಚುನಾವಣೆಯಲ್ಲಿ ತನ್ನನ್ನು ಮತ್ತು ಇತರರನ್ನು ಮುಳುಗಿಸಲು ಅಭ್ಯಾಸ ಮಾಡುತ್ತಿದ್ದಾನೆ ಎಂದು ನಾನು ಹೇಳಿದ್ದೆ” ಎಂದು ಪ್ರಧಾನಿ ನರೇಂದ್ರ ಮೋದಿ ಹೇಳುತ್ತಾರೆ. ನಾನು ಈ ವೇದಿಕೆಯಿಂದಲೇ ಕಾಂಗ್ರೆಸ್ ಮಿತ್ರಪಕ್ಷಗಳಿಗೆ ಎಚ್ಚರಿಕೆ ನೀಡಿದ್ದೇನೆ. ಕಾಂಗ್ರೆಸ್ ಒಂದು…

Read More

ಬೆಂಗಳೂರು:  ಸಾಲು ಮರದ ತಿಮ್ಮಕ್ಕ ಅವರ ನಿಧನದ ಹಿನ್ನೆಲೆಯಲ್ಲಿ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎನ್ನುವುದು ಸುಳ್ಳು. ಸಾಮಾಜಿಕ‌ ಜಾಲ ತಾಣದಲ್ಲಿ ಈ ಬಗ್ಗೆ ಹರಿದಾಡುತ್ತಿರುವ ಪತ್ರ ನಕಲಿಯದ್ದಾಗಿದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಅವರ ಕಚೇರಿಯಿಂದ ಸ್ಪಷ್ಟನೆ ಬಿಡುಗಡೆ ಮಾಡಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ವ್ಯಾಟ್ಸಪ್ ಗ್ರೂಪ್ಗಳಲ್ಲಿ ಸರ್ಕಾರದ ಅಧಿಸೂಚನೆ ದಿನಾಂಕ: 14.11.2025 ರಂದು ” ಸಾಲುಮರದ ತಿಮ್ಮಕ್ಕರವರು ” ನಿಧನರಾದ ಹಿನ್ನೆಲೆಯಲ್ಲಿ ಇವರ ಅಂತ್ಯಕ್ರಿಯೆಯನ್ನು ಹುಟ್ಟು ಹುಟ್ಟೂರಾದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ಸ್ವಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ಎಂದು ತಿಳಿಸಿರುವ ಅಧಿಸೂಚನೆಯೂ ನೈಜ್ಯತೆಯಿಂದ ಕೂಡಿರುವುದಿಲ್ಲ ಹಾಗೂ ಇದು ನಕಲಿ ಆಗಿರುತ್ತದೆ ಎಂಬುದಾಗಿ ಹೇಳಿದೆ. ಸದರಿ ನಕಲಿ ಅಧಿಸೂಚನೆಯಲ್ಲಿ ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಹಾಗೂ ಶಾಲಾ-ಕಾಲೇಜುಗಳಿಗೆ ಸಾರ್ವಜನಿಕ ರಜೆ ಎಂದು ಘೋಷಿಸಿರುವುದು ಕೂಡ ನಕಲಿ ಆಗಿರುತ್ತದೆ ನೈಜತೆಯಿಂದ ಕೂಡಿರುವುದಿಲ್ಲವೆಂದು ಸಿಎಂ ಸಿದ್ಧರಾಮಯ್ಯ ಅವರ ಕಚೇರಿಯು ಸ್ಪಷ್ಟ ಪಡಿಸಿದೆ.

Read More