Author: kannadanewsnow09

ಬೆಂಗಳೂರು, ಜು3: ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳ ಅಸಹಜ ಸಾವಿನ ಪ್ರಕರಣದಲ್ಲಿ ಕರ್ತವ್ಯ ಲೋಪ ಮತ್ತು ನಿರ್ಲಕ್ಷ್ಯ ತೋರಿದ ಡಿಸಿಎಫ್ ಚಕ್ರಪಾಣಿ ಮತ್ತು ಮೂವರು ಅಧಿಕಾರಿಗಳನ್ನು ಅಮಾನತು ಮಾಡಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಶಿಫಾರಸು ಮಾಡಿದ್ದಾರೆ. ಉನ್ನತ ಮಟ್ಟದ ವಿಚಾರಣಾ ಸಮಿತಿಯ ಪ್ರಾಥಮಿಕ ವರದಿ ಸ್ವೀಕರಿಸಿ, ಪರಾಮರ್ಶಿಸಿದ ಸಚಿವರು, ಹುಲಿಗಳ ಅಸಹಜ ಸಾವಿನ ಪ್ರಕರಣದಲ್ಲಿ ಮೇಲ್ನೋಟಕ್ಕೆ ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಕರ್ತವ್ಯಲೋಪ ಕಂಡುಬಂದಿರುವ ಹಿನ್ನೆಲೆಯಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ಈ ಶಿಫಾರಸು ಮಾಡಿದ್ದಾರೆ. ವೇತನ ಪಾವತಿಸದಿರುವುದೂ ಕರ್ತವ್ಯಲೋಪ: ಹೊರಗುತ್ತಿಗೆ ಸಿಬ್ಬಂದಿಗೆ ವೇತನ ಪಾವತಿ ಮಾಡಲು ಏಪ್ರಿಲ್ ತಿಂಗಳಾಂತ್ಯಕ್ಕೇ ಹಣ ಬಿಡುಗಡೆಯಾಗಿದ್ದರೂ, ಜೂನ್ ತಿಂಗಳವರೆಗೆ ವೇತನ ಪಾವತಿಸದಿರುವುದು ಡಿಸಿಎಫ್ ಚಕ್ರಪಾಣಿ ಅವರ ಮೂಲಭೂತ ಕರ್ತವ್ಯ ಲೋಪವಾಗಿದ್ದು, ಇದು ಗಸ್ತು ಕಾರ್ಯಕ್ಕೆ ಹಿನ್ನಡೆ ಉಂಟು ಮಾಡಿದೆ ಈ ಸಂಬಂಧ ಡಿಸಿಎಫ್ ಚಕ್ರಪಾಣಿ ಅಮಾನತಿಗೆ ಶಿಫಾರಸು ಮಾಡಿ, ಇಲಾಖಾ ವಿಚಾರಣೆ ಮಾಡಲು ಶಿಫಾರಸು ಮಾಡಿದ್ದಾರೆ.…

Read More

ಬೆಂಗಳೂರು: ಕೆ ಎಸ್ ಆರ್ ಟಿ ಸಿ ಬಸ್ಸುಗಳಲ್ಲಿ ಸಂಚರಿಸುವಂತ ಪ್ರಯಾಣಿಕರಿಗೆ ಕೆಲವೊಂದು ಬಸ್ಸುಗಳಲ್ಲಿ ಟಿಕೆಟ್ ದರದಲ್ಲಿ ರೌಂಡಪ್ ಎನ್ನುವ ಹೆಚ್ಚುವರಿ ಹಣವನ್ನು ವಸೂಲಿ ಮಾಡುತ್ತಿರುವಂತ ಆರೋಪ ಕೇಳಿ ಬಂದಿತ್ತು. ಈ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವಂತ ಸಾರಿಗೆ ನಿಗಮವು ರೌಂಡಪ್ ವ್ಯವಸ್ಥೆಯನ್ನು ರದ್ದುಗೊಳಿಸುವಂತ ಮಹತ್ವದ ನಿರ್ಧಾರವನ್ನು ಪ್ರಕಟಿಸಿದೆ. ಈ ಕುರಿತಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಆದೇಶ ಹೊರಡಿಸಿದ್ದು,  ಸಾಮಾನ್ಯ ಸ್ಥಾಯಿ ಆದೇಶ ಸಂಖ್ಯೆ 774/2016 ದಿನಾಂಕ 03-03-2016 ರಲ್ಲಿ ಪ್ರತಿಷ್ಠಿತ ಸಾರಿಗೆಗೆ ಅವತಾರ್ ಕೌಂಟರ್‌ಗಳಲ್ಲಿ ಮತ್ತು ಇಟಿಎಂ ಯಂತ್ರಗಳಲ್ಲಿ ಚಿಲ್ಲರೆ ಸಮಸ್ಯೆಯಿಂದ ಪ್ರಯಾಣದರವನ್ನು ರೌಂಡ್ ಆಫ್ (Round-off) ಮಾಡಲು ಆದೇಶಿಸಲಾಗಿದೆ ಎಂದಿದೆ. ಪ್ರಸ್ತುತ, ಸಾರ್ವಜನಿಕ ಪ್ರಯಾಣಿಕರು ಟಿಕೇಟ್ ಕಾಯ್ದಿರಿಸಲು ಕೌಂಟರ್‌ಗಳಲ್ಲಿ POS ಯಂತ್ರಗಳನ್ನು ಹಾಗೂ ಇಟಿಎಂ ಯಂತ್ರಗಳಲ್ಲಿ UPI ವ್ಯವಸ್ಥೆ ಒದಗಿಸಿರುವುದರಿಂದ ಪ್ರಯಾಣದರವನ್ನು ರೌಂಡ್ ಆಫ್ (Round-off) ಮಾಡುವ ಅವಶ್ಯಕತೆಯಿಲ್ಲದಿರುವುದರಿಂದ, ಸಾಮಾನ್ಯ ಸ್ಥಾಯಿ ಆದೇಶ ಸಂಖ್ಯೆ 774/2016 ದಿನಾಂಕ 03-03-2016 ನ್ನು ಹಿಂಪಡೆಯಲಾಗಿದೆ ಎಂಬುದಾಗಿ ತಿಳಿಸಿದೆ. ಉಲ್ಲೇಖ-01 ರಲ್ಲಿನ ಸಾಮಾನ್ಯ…

Read More

ಬೆಂಗಳೂರು: ರಾಜ್ಯದ ಸಾರಿಗೆ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಟಿಕೆಟ್ ದರದಲ್ಲಿನ ರೌಂಡಪ್ ವ್ಯವಸ್ಥೆಯನ್ನು ಶೀಘ್ರವೇ ರದ್ದುಪಡಿಸಲಾಗುತ್ತಿದೆ. ಹೀಗಾಗಿ ಹೆಚ್ಚುವರಿ ರೌಂಡಪ್ ಹಣ ಪ್ರಯಾಣಿಕರಿಗೆ ಉಳಿದಂತೆ ಆಗಲಿದೆ. ಈ ಕುರಿತಂತೆ ಕೆ ಎಸ್ ಆರ್ ಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ರೌಂಡಪ್ ವ್ಯವಸ್ಥೆಯು ಪ್ರತಿಷ್ಟಿತ ಸಾರಿಗೆಗಳಲ್ಲಿ ( Premium Service buses 400 ಬಸ್ಸುಗಳಲ್ಲಿ ಮಾತ್ರ) ಜಾರಿಯಲ್ಲಿದ್ದು, ಅದರಲ್ಲೂ ETM ಮತ್ತು ಅವತಾರ್ ಕೌಂಟರ್ ಗಳಲ್ಲಿ ಪಡೆಯುವ ಟಿಕೇಟ್ ಗೆ ಮಾತ್ರ ಈ ವ್ಯವಸ್ಥೆ ಜಾರಿಯಲ್ಲಿತ್ತು. ಅಂದರೆ ಉದಾ: ಪ್ರಯಾಣ ದರ ರೂ.101 ರಿಂದ 105 ರವರೆಗೂ ಇದ್ದಲ್ಲಿ ರೂ.100 ಪ್ರಯಾಣಿಕರಿಂದ ಪಡೆಯಲಾಗುತ್ತದೆ ಅದೇ ರೀತಿ ರೂ.106 ರಿಂದ ರೂ.109 ಇದ್ದಲ್ಲಿ ಪ್ರಯಾಣಿಕರಿಂದ ರೂ.110 ಪಡೆಯಲಾಗುತ್ತಿತ್ತು ಎಂದಿದೆ. ಈಗ ನಿಗಮದಲ್ಲಿ UPI ಯಶಸ್ವಿ ಅನುಷ್ಟಾನವಾಗಿರುವುದರಿಂದ ರೌಡಂಪ್ ವ್ಯವಸ್ಥೆಯನ್ನು ಸ್ಥಗಿತಗೊಳಿಸಲು ಈಗಾಗಲೇ ತೀರ್ಮಾನ ಕೈಗೊಳ್ಳಲಾಗಿದ್ದು, ತಂತ್ರಾಂಶದಲ್ಲಿ ಈ ಸಂಬಂಧ ಬದಲಾವಣೆ ಮಾಡುವ ಕ್ರಮ ಪ್ರಗತಿಯಲ್ಲಿರುತ್ತದೆ ಎಂದು ತಿಳಿಸಿದೆ. ಹೀಗಾಗಿ ಶೀಘ್ರವೇ…

Read More

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಇಂದು ಜುಲೈ 4, 2025 ರಂದು ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆಯ ಪದವಿಪೂರ್ವ (CUET UG) ಫಲಿತಾಂಶಗಳನ್ನು ಪ್ರಕಟಿಸಿದೆ. ಪ್ರವೇಶ ಪರೀಕ್ಷೆಯಲ್ಲಿ ಭಾಗವಹಿಸಿದ ಅಭ್ಯರ್ಥಿಗಳು ತಮ್ಮ ಫಲಿತಾಂಶಗಳನ್ನು ಪರಿಶೀಲಿಸಬಹುದು ಮತ್ತು ಲಾಗಿನ್ ರುಜುವಾತುಗಳನ್ನು ಬಳಸಿಕೊಂಡು ಅಧಿಕೃತ ವೆಬ್‌ಸೈಟ್: cuet.nta.nic.in ನಲ್ಲಿ ಅಂಕಪಟ್ಟಿಗಳನ್ನು ಡೌನ್‌ಲೋಡ್ ಮಾಡಬಹುದು. CUET UG ಫಲಿತಾಂಶ 2025 ಜೊತೆಗೆ, ಸಂಸ್ಥೆಯು ನೋಂದಾಯಿತ ವಿದ್ಯಾರ್ಥಿಗಳ ಸಂಖ್ಯೆ, ಹಾಜರಾದವರು, ಉತ್ತೀರ್ಣರು, ಒಟ್ಟಾರೆ ಉತ್ತೀರ್ಣ ದರ ಮತ್ತು ಟಾಪರ್‌ಗಳ ಪಟ್ಟಿಯಂತಹ ಪ್ರಮುಖ ಅಂಕಿಅಂಶಗಳನ್ನು ಬಿಡುಗಡೆ ಮಾಡುತ್ತದೆ. CUET ಫಲಿತಾಂಶ 2025  ಅನ್ನು ಈ ರೀತಿ ಚೆಕ್ ಮಾಡಿ ಅಭ್ಯರ್ಥಿಗಳು ಅಂಕಪಟ್ಟಿಯನ್ನು ಪ್ರವೇಶಿಸಲು ನೀಡಿರುವ ಸೂಚನೆಗಳನ್ನು ಅನುಸರಿಸಬಹುದು: ಹಂತ 1: ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ: cuet.nta.nic.in ಹಂತ 2: ಮುಖಪುಟದಲ್ಲಿ, CUET UG 2025 ಅಂಕಪಟ್ಟಿ ಲಿಂಕ್ ಅನ್ನು ನೋಡಿ ಮತ್ತು ಅದರ ಮೇಲೆ ಕ್ಲಿಕ್ ಮಾಡಿ ಹಂತ 3: ಅರ್ಜಿ ಸಂಖ್ಯೆ ಮತ್ತು ಪಾಸ್‌ವರ್ಡ್…

Read More

ಶಿವಮೊಗ್ಗ: ಹಸಿರುಮಕ್ಕಿ ಸೇತುವೆ ನಿರ್ಮಾಣದಿಂದಾಗಿ ಈ ಭಾಗದ ಜನರ ಕನಸು ನನಸಾಗುತ್ತಿದೆ. ಶೇ.80ರಷ್ಟು ಕೆಲಸ ಆಗಿದ್ದು ಮೇ ತಿಂಗಳ ವೇಳೆಗೆ ಸೇತುವೆ ಲೋಕಾರ್ಪಣೆಗೊಳ್ಳಲಿದೆ ಎಂದು ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ತಿಳಿಸಿದರು. ಶುಕ್ರವಾರ ಸಾಗರ ತಾಲ್ಲೂಕಿನ ಹಸುರುಮಕ್ಕಿ ಸೇತುವೆ ನಿರ್ಮಾಣ ಕಾಮಗಾರಿಯನ್ನು ವೀಕ್ಷಣೆ ಮಾಡಿ ಅವರು ಮಾತನಾಡಿದರು. ಸಾಗರ ತಾಲ್ಲೂಕಿನ ಹಸಿರುಮಕ್ಕಿಯಲ್ಲಿ ರಾಜ್ಯ ಸರ್ಕಾರದಿಂದ ರೂ. 125.67 ಕೋಟಿ ಮೊತ್ತದಲ್ಲಿ‌ ಹಸಿರುಮಕ್ಕಿ‌ ಸೇತುವೆ ಕಾಮಗಾರಿ ಕೈಗೊಳ್ಳಲಾಗಿದೆ. 1.115 ಕಿ ಲೋ ಮೀಟರ್ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ. ಹಸಿರುಮಕ್ಕಿ ಕಡೆ 345 ಮೀ ,ಕೊಲ್ಲೂರು ಕಡೆ 165 ಮೀ ಕಾಮಗಾರಿ ನಡೆಯುತ್ತಿದೆ. ಸೇತುವೆ ಅಗಲ ೮.೫೦ ಮೀ(ದ್ವಿಪಥ ಸಂಚಾರ), 34 ತಳಪಾಯಗಳಿವೆ. ಈಗ ಶೇ. 80 ಕಾಮಗಾರಿ ಪೂರ್ಣಗೊಂಡಿದೆ. ರೂ. 25 ಕೋಟಿ ಹಣ ಬಿಡುಗಡೆ ಬಾಕಿ ಇದೆ ಎಂದರು. ನಮ್ಮ ಸರ್ಕಾರ ಬಂದ ಮೇಲೆ ಕ್ಷಿಪ್ರಗತಿಯಲ್ಲಿ, ಗುಣಮಟ್ಟದ ಕಾಮಗಾರಿ ನಡೆಯುತ್ತಿದ್ದು, ಹಣದ ಕೊರತೆ ಇಲ್ಲ.…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಸಾರಿಗೆ ಬಸ್ ಪಾಸ್ ವಿತರಣೆಗೆ ಚಾಲನೆ ನೀಡಲಾಗಿದೆ. ಈ ಬಸ್ ಪಾಸ್ ಅನ್ನು ಈಗ ಅರೆಕಾಲಿಕ, ಸಂಪಾದಕರಿಗೂ ಮುಖ್ಯಸ್ಥರ ಶಿಫಾರಸ್ಸು ಪತ್ರ ನೀಡಿದ್ರೆ ವಿತರಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಈ ಕುರಿತಂತೆ ತಿದ್ದುಪಡಿ ಆದೇಶವನ್ನು ಕನ್ನಡ, ಸಂಸ್ಕೃತಿ ಮತ್ತು ವಾರ್ತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಹೊರಡಿಸಿದ್ದಾರೆ. ಅದರಲ್ಲಿ ಪೂರ್ಣಾವಧಿ, ಅರೆಕಾಲಿಕ ವರದಿಗಾರರಾಗಿ ನೇಮಕವಾಗಿದ್ದಲ್ಲಿ ನೇಮಕಾತಿ ಪತ್ರ, ಸಂಪಾದಕರ, ಮುಖ್ಯಸ್ಥರ ಶಿಫಾರಸ್ಸು ಪತ್ರ, ಸಂಸ್ಥೆಯಿಂದ ಪಡೆಯುತ್ತಿರುವ ಲೈನೇಜ್, ಸಂಭಾವನೆ ಪಡೆಯುತ್ತಿರುವ ಬಗ್ಗೆ ಕಳೆದ 11 ತಿಂಗಳ ಅವಧಿಯ ಬ್ಯಾಂಕ್ ಖಾತೆಯ ವಿವರಗಳು, ಸಂಬಂಧಿತ ದಾಖಲೆಗಳನ್ನು ಒದಗಿಸಲು ಅವಕಾಶ ನೀಡಿದೆ‌. ಅಂದಹಾಗೆ ಈ ಮೊದಲು ಗ್ರಾಮೀಣ ಪತ್ರಕರ್ತರಿಗೆ ಉಚಿತ ಸಾರಿಗೆ ಬಸ್ ಪಾಸ್ ಪಡೆಯಲು ಅರ್ಜಿ ಸಲ್ಲಿಸಲು ಪೂರ್ಣಾವಧಿಯ ಪತ್ರಕರ್ತರು ಆಗಿರಬೇಕು ಎಂಬುದಾಗಿ ಷರತ್ತು ವಿಧಿಸಲಾಗಿತ್ತು. ಈ ನಿಯಮದ ಕಾರಣ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಕೈತಪ್ಪುವ ಆತಂಕ ಎದುರಾಗಿತ್ತು. ಏಕೆಂದರೆ…

Read More

ಬೆಂಗಳೂರು: ಪ್ರಸಕ್ತ ಸಾಲಿನ ಯುಜಿನೀಟ್ ಅರ್ಜಿಯಲ್ಲಿ ಕರ್ನಾಟಕ ಎಂದು ನಮೂದಿಸಿ, ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ಅರ್ಹತೆ ಪಡೆದ 87,909 ಅಭ್ಯರ್ಥಿಗಳ NEET Rank ಮತ್ತು ಪಡೆದ ಅಂಕಗಳ ವಿವರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತನ್ನ ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ. ಅತಿ ಹೆಚ್ಚು 670 ಅಂಕ ಪಡೆದ ಅಭ್ಯರ್ಥಿ ರಾಜ್ಯದಲ್ಲಿ ಮೊದಲ ಸ್ಥಾನದಲ್ಲಿ ಇದ್ದಾರೆ. 113 ಅಂಕ ಪಡೆದ ಅಭ್ಯರ್ಥಿ ಕೊನೆಯಲ್ಲಿ ಇದ್ದು, ಅವರು ಕೂಡ ಅರ್ಹತೆ ಪಡೆದಿದ್ದಾರೆ. ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ ಕೊಟ್ಟ ಪಟ್ಟಿಯನ್ನು ವೆಬ್ ಸೈಟ್ ನಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ನೀಟ್ ರೋಲ್ ನಂಬರ್ ನಮೂದಿಸಿ, ನೀಟ್ ಕೌನ್ಸೆಲಿಂಗ್ ಗೆ ನೋಂದಣಿ ಮಾಡಿಕೊಳ್ಳುವುದಕ್ಕೆ ಒಂದೆರಡು ದಿನಗಳಲ್ಲಿ ಲಿಂಕ್ ಬಿಡುಗಡೆ ಮಾಡಲಾಗುವುದು. ಹಾಗೆಯೇ ನೀಟ್ ನಲ್ಲಿ ಅರ್ಹತೆ ಪಡೆದು, ಇದುವರೆಗೂ ಅರ್ಜಿಯನ್ನೇ ಸಲ್ಲಿಸದಿರುವವರಿಗೂ ನೋಂದಣಿಗೆ ಅವಕಾಶ ನೀಡಲಾಗುವುದು ಎಂದು ಅವರು ಹೇಳಿದ್ದಾರೆ. https://twitter.com/KEA_karnataka/status/1940777638660132987?t=8h9BePZN9XHlZN0pc-1FIg&s=08

Read More

ಚಿತ್ರದುರ್ಗ : ಜಿಲ್ಲೆಯ ಹಿರಿಯೂರು ತಾಲೂಕಿನಲ್ಲಿ ಪ್ರತಿ ದಿನ ಸುಮಾರು 45 ಸಾವಿರ ಗುಣಮಟ್ಟದ ಹಾಲು ಉತ್ಪಾದನೆಯಾಗುತ್ತಿದ್ದು, ಜಿಲ್ಲೆಯಲ್ಲಿ ಹೊಸದುರ್ಗ ಮೊದಲ ಸ್ಥಾನ ಪಡೆದರೆ, ಹಿರಿಯೂರು ಎರಡನೇ ಸ್ಥಾನ ಪಡೆದಿದೆ ಎಂದು ಶಿಮುಲ್ ನಿರ್ದೇಶಕ ಬಿಸಿ. ಸಂಜೀವಮೂರ್ತಿ ಮೆಚ್ಚುಗೆ ವ್ಯಕ್ತಪಡಿಸಿದರು. ನಗರದ ಖಾಸಗಿ ಅನ್ನಪೂರ್ಣೇಶ್ವರಿ ಹೋಟೆಲ್ ಸಭಾಂಗಣದಲ್ಲಿ ಗುರುವಾರ ನಡೆದ ಚಳ್ಳಕೆರೆ ವಿಭಾಗದ ಹಿರಿಯೂರು ತಾಲ್ಲೂಕಿನ ಹಾಲು ಉತ್ಪಾದಕ ಸಹಕಾರ ಸಂಘಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆ ಕಾರ್ಯಕ್ರಮ ಕುರಿತು ಮಾತನಾಡಿದರು. ಚಿತ್ರದುರ್ಗ, ಹಿರಿಯೂರು ಹಾಗೂ ಚಳ್ಳಕೆರೆ ಹಾಲು ಉತ್ಪಾದಕರ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳು, ಹಾಗೂ ರೈತರ ಹೈನುಗಾರಿಕೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಚಳ್ಳಕೆರೆಯಲ್ಲಿ ಶಿಮುಲ್ ವಿಭಾಗಿಯ ಕಛೇರಿಯನ್ನು ಪ್ರಾರಂಭಿಸಲಾಗಿದೆ. ನಾವು ಅಧಿಕಾರಕ್ಕೆ ಬಂದು ಹತ್ತು ತಿಂಗಳು ಕಳೆದಿದ್ದು, ಒಂದಿಷ್ಟು ಬದಲಾವಣೆ ತರಲಾಗಿದೆ. ಹಿರಿಯೂರು ವಿಭಾಗಕ್ಕೆ ಸಭೆ ನಡೆಸಲು ಆಡಳಿತ ಕಛೇರಿ ಅವಶ್ಯಕತೆ ಇದ್ದು ಮುಂದಿನ ವರ್ಷ 40 ಲಕ್ಷ ವೆಚ್ಚದಲ್ಲಿ ಆಡಳಿತ ಕಛೇರಿ ಕೇಂದ್ರ ನಿರ್ಮಾಣ ಮಾಡಲಾಗುವುದು ಎಂದು ಹೇಳಿದರು. ತಾಲೂಕಿನಲ್ಲಿ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿ ಕಾರ್ಗಲ್ ವಲಯ ಅರಣ್ಯ ಅಧಿಕಾರಿ ಸಂತೋಷ್ ಪವಾರ್ ಅವರನ್ನು ದಿಢೀರ್ ವರ್ಗಾವಣೆ ಮಾಡಲಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿ ಕಾರ್ಗಲ್ ವನ್ಯಜೀವಿ ವಲಯದ ಅಧಿಕಾರಿಗಳು, ಸಿಬ್ಬಂದಿಗಳು ಮಂಜುನಾಥ್ ಎಂಬುವರ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿತ್ತು. ಅಲ್ಲದೇ ಮಂಜುನಾಥ್ ನೀಡಿದ ದೂರಿನ ಆಧಾರದ ಮೇಲೆ ಅರಣ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ವಿರುದ್ಧ ಸಾಗರ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣ ಸಂಬಂಧ ವಿದೇಶದಿಂದ ಹಿಂದಿರುಗಿದ ಸಾಗರ ಶಾಸಕ ಗೋಪಾಲಕೃಷ್ಣ ಕೃಷ್ಣ ಬೇಳೂರು ಅವರು ಸಾಗರ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ಮಂಜುನಾಥ್ ಭೇಟಿ ಮಾಡಿ, ಆರೋಗ್ಯ ವಿಚಾರಿಸಿದ್ದರು. ಆ ಬಳಿಕ ಅರಣ್ಯ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿ, ಹಲ್ಲೆ ಆರೋಪದ ಸಂಬಂಧ ತರಾಟೆಗೆ ತೆಗೆದುಕೊಂಡಿದ್ದರು. ಜೊತೆಗೆ ಅರಣ್ಯಾಧಿಕಾರಿಗಳು, ಸಿಬ್ಬಂದಿಗಳ ವಿರುದ್ಧ ಕ್ರಮ ಕೈಗೊಳ್ಳಲು ಸೂಚಿಸಿದ್ದರು. ಈ ಬೆನ್ನಲ್ಲೇ ಕಾರ್ಗಲ್ ವನ್ಯಜೀವಿ ವಲಯದ ವಲಯ ಅರಣ್ಯ ಅಧಿಕಾರಿ…

Read More

ಬೆಂಗಳೂರು: ರಾಜ್ಯದಲ್ಲಿ ನಿರಂತರ ಕಣ್ಣಿನ ಆರೋಗ್ಯ ಒದಗಿಸುವ ಸಲುವಾಗಿ ಆಶಾಕಿರಣ ದೃಷ್ಟಿ ಕೇಂದ್ರಗಳನ್ನು ಆರಂಭಿಸಲಾಗುತ್ತಿದೆ. ಈ ಮೂಲಕ ಕಣ್ಣಿನ ದೃಷ್ಟಿ ದೋಷದಿಂದ ಬಳಲುತ್ತಿರುವವರಿಗೆ ರಾಜ್ಯ ಸ್ರಕಾರ ಗುಡ್ ನ್ಯೂಸ್ ನೀಡಿದೆ. ದೃಷ್ಟಿದೋಷ ನಿವಾರಣೆಗೆ ಜಾರಿಗೆ ತಂದಿದ್ದ ‘ಆಶಾಕಿರಣ’ ಯೋಜನೆಯನ್ನು ಮರುವಿನ್ಯಾಸಗೊಳಿಸಲಾಗಿದೆ. ಶಾಶ್ವತ ಪರಿಹಾರಕ್ಕಾಗಿ ನಿರಂತರ ಕಣ್ಣಿನ ಆರೋಗ್ಯ ಸೇವೆ ಒದಗಿಸುವ ಆಶಾಕಿರಣ ದೃಷ್ಟಿ ಕೇಂದ್ರಗಳನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರಾರಂಭಿಸಲಾಗುತ್ತಿದೆ. ಎಲ್ಲ ಜಿಲ್ಲಾಸ್ಪತ್ರೆಗಳು, ತಾಲೂಕು ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಈಗಾಗಲೇ 393 ಆಶಾಕಿರಣ ದೃಷ್ಟಿ ಕೇಂದ್ರಗಳು ಕಣ್ಣಿನ ಆರೋಗ್ಯ ಸೇವೆ ಒದಗಿಸಲು ಸಜ್ಜಾಗಿವೆ. ಸಾರ್ವಜನಿಕರು ಕೇಂದ್ರಗಳಿಗೆ ಭೇಟಿ ನೀಡಿ ಕಣ್ಣಿನ ತಪಾಸಣೆ ನಡೆಸಿಕೊಂಡು, ದೃಷ್ಟಿ ದೋಷ ಇರುವವರು ಉಚಿತ ಕನ್ನಡಕಗಳನ್ನು ಪಡೆಯಬಹುದು.‌ https://twitter.com/KarnatakaVarthe/status/1940377090500481427 https://kannadanewsnow.com/kannada/cabinet-meeting-led-by-cm-siddaramaiah-at-nandi-hills-today-here-are-the-complete-highlights/ https://kannadanewsnow.com/kannada/the-clarity-in-the-conditions-and-instructions-for-kptcl-is-not-in-the-order-je-transfer-confusion-this-year-too/

Read More