Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಬೆಂಗಳೂರು: ತುಮಕೂರು ಮತ್ತು ಮಲ್ಲಸಂದ್ರ ನಿಲ್ದಾಣಗಳ ನಡುವೆ ಅಗತ್ಯ ಎಂಜಿನಿಯರಿಂಗ್ ಕಾಮಗಾರಿಗಳಾದ ಭೀಮಸಂದ್ರ ಲಿಮಿಟೆಡ್ ಹೈಟ್ ಸಬ್’ವೇನಲ್ಲಿ ಗರ್ಡರ್ ಬದಲಾವಣೆ, ಭೀಮಸಂದ್ರ ಮತ್ತು ಮುದ್ದಲಿಂಗನಹಳ್ಳಿ ಹಾಲ್ಟ್ ನಿಲ್ದಾಣಗಳಲ್ಲಿ ಪಾದಚಾರಿ ಮೇಲ್ಸೇತುವೆ ನಿರ್ಮಾಣ, ಹಾಗೂ ನಿಡವಂದ ಮತ್ತು ಹಿರೇಹಳ್ಳಿ ನಡುವಿನ ಲೆವೆಲ್ ಕ್ರಾಸಿಂಗ್–28 ರಲ್ಲಿನ ಕಾಮಗಾರಿಗಳಿಂದಾಗಿ, ಈ ಕೆಳಗೆ ವಿವರಿಸಿದಂತೆ ಕೆಲವು ರೈಲು ಸೇವೆಗಳನ್ನು ರದ್ದುಗೊಳಿಸಲಾಗಿದೆ, ಭಾಗಶಃ ರದ್ದುಗೊಳಿಸಲಾಗಿದೆ, ಮಾರ್ಗ ಬದಲಾಯಿಸಲಾಗಿದೆ, ನಿಯಂತ್ರಿಸಲಾಗಿದೆ ಮತ್ತು ಮರು-ವೇಳಾಪಟ್ಟಿ ಮಾಡಲಾಗಿದೆ. I. ರೈಲುಗಳ ರದ್ದತಿ: ದಿನಾಂಕ 17.12.2025 ಮತ್ತು 24.12.2025 ರಂದು ರೈಲು ಸಂಖ್ಯೆ 16239 ಚಿಕ್ಕಮಗಳೂರು – ಯಶವಂತಪುರ ದೈನಂದಿನ ಎಕ್ಸ್ ಪ್ರೆಸ್, ರೈಲು ಸಂಖ್ಯೆ 16240 ಯಶವಂತಪುರ – ಚಿಕ್ಕಮಗಳೂರು ದೈನಂದಿನ ಎಕ್ಸ್ ಪ್ರೆಸ್ & ರೈಲು ಸಂಖ್ಯೆ 12614 ಕೆಎಸ್ಆರ್ ಬೆಂಗಳೂರು – ಮೈಸೂರು ದೈನಂದಿನ ಎಕ್ಸ್ ಪ್ರೆಸ್ ರೈಲುಗಳನ್ನು ರದ್ದುಗೊಳಿಸಲಾಗಿದೆ. II. ರೈಲುಗಳ ಭಾಗಶಃ ರದ್ದತಿ: 1. ದಿನಾಂಕ 17.12.2025, 20.12.2025, 21.12.2025 ಮತ್ತು 24.12.2025 ರಂದು, ರೈಲು ಸಂಖ್ಯೆ 66567…
ಬೆಂಗಳೂರು: ಶ್ರೀ ಧರ್ಮಸ್ಥಳ ಷಡ್ಯಂತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಬುರುಡೆ ಗ್ಯಾಂಗ್ ರಾಜ್ಯದ ಪ್ರಭಾವಿ ಸ್ವಾಮೀಜಿಯನ್ನು ಭೇಟಿಯಾಗಿದ್ದು ಬೆಳಕಿಗೆ ಬಂದಿದೆ. ಹೌದು ಧರ್ಮಸ್ಥಳ ಷಡ್ಯಂತ್ರಕ್ಕೆ ಸಂಬಂಧಿಸಿದಂತೆ ಬುರುಡೆ ಗ್ಯಾಂಗ್ ರಾಜ್ಯದ ಪ್ರಭಾವಿ ಸ್ವಾಮೀಜಿಯಾಗಿರುವಂತ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಭೇಟಿಯಾಗಿದ್ದು ತಿಳಿದು ಬಂದಿದೆ. ಅವರನ್ನು ಬುರುಡೆ ಗ್ಯಾಂಗ್ ಭೇಟಿಯಾಗಿದ್ದಂತ ಪೋಟೋಗಳು ವೈರಲ್ ಕೂಡ ಆಗಿದ್ದಾವೆ. ನಿರ್ಮಲಾನಂದನಾಥ ಶ್ರೀಗಳನ್ನು ಧರ್ಮಸ್ಥಳ ಬುರುಡೆ ಗ್ಯಾಂಗ್ ನ ಆರೋಪಿ ಚಿನ್ನಯ್ಯ, ಮಹೇಶ್ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ವಿಠ್ಠಲ ಗೌಡ ಭೇಟಿಯಾಗಿದ್ದನ್ನು ಪೋಟೋದಲ್ಲಿ ಕಾಣಬಹುದಾಗಿದೆ. ನಿರ್ಮಲಾನಂದ ಶ್ರೀ ಭೇಟಿಯ ವೇಳೆಯಲ್ಲಿ ಧರ್ಮಸ್ಥಳ ಕೇಸ್ ಗೆ ಸಂಬಂಧಿಸಿದಂತೆ ಸ್ವಾಮೀಜಿ ಬಳಿಯಲ್ಲಿ ಬುರುಡೆ ಕಥೆಯನ್ನು ಗ್ಯಾಂಗ್ ಹೇಳಿತ್ತಂತೆ. ಜೊತೆಗೆ ಸರ್ಕಾರದ ಮೇಲೆ ಒತ್ತಡ ಹಾಕಿ ತನಿಖೆ ನಡೆಸೋದಕ್ಕೆ ಮನವಿ ಮಾಡಿದ್ದಾಗಿ ಹೇಳಲಾಗುತ್ತಿದೆ. https://kannadanewsnow.com/kannada/high-court-lifts-stay-on-election-of-sagars-marikamba-devi-trust/ https://kannadanewsnow.com/kannada/here-is-the-list-of-bills-passed-in-the-belgaum-legislative-assembly-today/
ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಸಾಗರದ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾದನದ ಚುನಾವಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಈ ತಡೆಯಾಜ್ಞೆ ತೆರವುಕೋರಿ ಮಾರಿಕಾಂಬ ಹಿತರಕ್ಷಣಾ ಸಮಿತಿಯಿಂದ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್, ತಡೆಯಾಜ್ಞೆ ತೆರವುಗೊಳಿಸಿದ್ದು, ಚುನಾವಣೆಗೆ ಗ್ರೀನ್ ಸಿಗ್ನಲ್ ನೀಡಿದೆ. ಸಾಗರದ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನಕ್ಕೆ ಚುನಾವಣೆ ಘೋಷಣೆಯಾಗಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಕೂಡ ಆರಂಭಗೊಂಡಿತ್ತು. ಆ ಸಂದರ್ಭದಲ್ಲೇ ಹೈಕೋರ್ಟ್ ಗೆ ಕೊರಚ-ಕೊರಮ ಸಮುದಾಯಕ್ಕೆ ದೇವಸ್ಥಾನದ ಬೈಲಾದಲ್ಲಿ ಪ್ರಾತಿನಿಧ್ಯ ನೀಡಿಲ್ಲ. ಹೀಗಾಗಿ ಚುನಾವಣೆಗೆ ತಡೆ ನೀಡುವಂತೆ ಕೋರಲಾಗಿತ್ತು. ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ಹೈಕೋರ್ಟ್ ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದ ಚುನಾವಣೆಗೆ ತಡೆಯಾಜ್ಞೆ ನೀಡಲಾಗಿತ್ತು. ಈ ಬಳಿಕ ಚುನಾವಣಾಧಿಕಾರಿ ಹೈಕೋರ್ಟ್ ಆದೇಶದಂತೆ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದ ಚುನಾವಣೆಯನ್ನು ತಾತ್ಕಾಲಿಕವಾಗಿ ಮುಂದೂಡಿದ್ದರು. ಆದರೇ ಹೈಕೋರ್ಟ್ ಆದೇಶ ಪ್ರಶ್ನಿಸಿ ಮಾರಿಕಾಂಬ ಹಿತರಕ್ಷಣಾ ಸಮಿತಿಯಿಂದ ತಡೆಯಾಜ್ಞೆ ತೆರವುಗೊಳಿಸುವಂತೆ ಅರ್ಜಿಯನ್ನು ಸಲ್ಲಿಸಲಾಗಿತ್ತು. ಹೈಕೋರ್ಟ್ ನಲ್ಲಿ ಚುನಾವಣೆಗೆ ನೀಡಿದ್ದ ತಡೆಯಾಜ್ಞೆ ತೆರವಿಗೆ…
ಬೆಳಗಾವಿ ಸುವರ್ಣ ವಿಧಾನ ಸೌಧ : ಗ್ಯಾರಂಟಿ ಯೋಜನೆಗಳ ಮೂಲಕ ನಾಗರಿಕರಿಗೆ ನೇರವಾಗಿ ಹಣ ವರ್ಗಾವಣೆಯಿಂದ ಅವರ ಆರ್ಥಿಕ ಬದುಕು ಬಹಳಷ್ಟು ಚೇತರಿಕೆ ಕಂಡಿದ್ದು ಕೆಲವರು ಸ್ವಾವಲಂಬಿ ಬದುಕನ್ನು ಕಟ್ಟಿಕೊಂಡಿದ್ದಾರೆ. 5 ಗ್ಯಾರಂಟಿ ಯೋಜನೆಗಳ ಮೂಲಕ ಒಟ್ಟು 1.08 ಲಕ್ಷ ಕೋಟಿ ರೂ. ಮೊತ್ತವು ನೇರವಾಗಿ ಜನರ ಖಾತೆಗಳಿಗೆ ತಲುಪಿದೆ. ಈ ಸಂಬಂಧ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಅವರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಶಾಸಕರಾದ ದಿನೇಶ್ ಗೂಳಿಗೌಡ ಅವರು ತಿರುಗೇಟು ನೀಡಿದ್ದಾರೆ. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ರಾಜ್ಯದ ಆರ್ಥಿಕತೆಯನ್ನು ಹಾಳು ಮಾಡುತ್ತಿವೆ ಮತ್ತು ಅಭಿವೃದ್ಧಿಗೆ ಅಡ್ಡಿಯಾಗುತ್ತಿವೆ ಎಂಬ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಟೀಕೆಗೆ, ಕಾಂಗ್ರೆಸ್ ಶಾಸಕರಾದ ದಿನೇಶ್ ಗೂಳಿಗೌಡ ಅವರು ಅಂಕಿ-ಅಂಶಗಳ ಸಮೇತ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಅಲ್ಲದೆ, ಗ್ಯಾರಂಟಿ ಯೋಜನೆಗಳ ಯಶಸ್ಸು ಮತ್ತು ಅವುಗಳಿಂದ ಕೋಟ್ಯಂತರ ಜನರ ಬದುಕಿನಲ್ಲಿ ಆದ ಬದಲಾವಣೆಯನ್ನು ಅವರು ಒತ್ತಿ ಹೇಳಿದ್ದಾರೆ.…
ಬೆಳಗಾವಿ: ಸದನದಲ್ಲಿ ವಿಪಕ್ಷ ನಾಯಕರು ಮಾತನಾಡುವಾಗ ಅದನ್ನು ಕೇಳುವ ವ್ಯವಧಾನವೂ ಆಡಳಿತ ಪಕ್ಷದವರಿಗೆ ಇಲ್ಲವೆಂದಾದರೆ, ಇದು ಖಂಡಿತ ಸರಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು ಪ್ರಶ್ನೆಗೆ ಉತ್ತರಿಸಿದರು. 9-10 ದಿನಗಳ ಕಾಲ ಸದನ ನಡೆಯುತ್ತದೆ. ಎರಡು ದಿನ ಕಳೆದಿದೆ. ಸದನದ ಸಮಯ ವ್ಯರ್ಥ ಆಗಬಾರದು. ನಾಡಿನ ರೈತರ, ನಿರುದ್ಯೋಗಿಗಳ, ನೀರಾವರಿ ವಿಚಾರದಲ್ಲಿ ಸಮರ್ಪಕ ಉತ್ತರ ಪಡೆಯುವುದೇ ನಮ್ಮ ಉದ್ದೇಶ ಎಂದು ಸ್ಪಷ್ಟಪಡಿಸಿದರು. ಸದನದಲ್ಲಿ ರಾಜ್ಯದ ರೈತರ ಮತ್ತು ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ರಾಜ್ಯ ಸರಕಾರ ಸ್ಪಂದಿಸುತ್ತಿದ್ದರೆ ಅದು ನಮಗೆ ಮಾಡುವ ಉಪಕಾರವಲ್ಲ; ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಮೊನ್ನೆಯಿಂದ ಆರಂಭವಾಗಿದೆ. ನಾಡಿನ ಜ್ವಲಂತ ಸಮಸ್ಯೆ, ರೈತರ ಸಂಕಷ್ಟ, ಅಪೂರ್ಣ ನೀರಾವರಿ ಯೋಜನೆಗಳ ಬಗ್ಗೆ ಚರ್ಚಿಸಲು ಅಧಿವೇಶನ ಕರೆದಿದ್ದಾರೆ. ಇವರೇನೂ ನಮಗೆ ಉಪಕಾರ ಮಾಡುತ್ತಿಲ್ಲ ಎಂದು ತಿಳಿಸಿದರು. ಕಾಂಗ್ರೆಸ್ ಸರಕಾರ ಸತ್ಯ ಮರೆಮಾಚುವ ಕೆಲಸ ಮಾಡುತ್ತಿದೆ. ನಿನ್ನೆಯೂ ಬಿಜೆಪಿ ರೈತ…
ಬೆಳಗಾವಿ: ಬುರುಡೆ ಗ್ಯಾಂಗ್ ನವರು ಎಷ್ಟು ತಪ್ಪಿತಸ್ಥರೋ, ಅವರಿಗೆ ಹಣಕಾಸು ವ್ಯವಸ್ಥೆ ಮಾಡಿದವರು, ಈ ಷಡ್ಯಂತ್ರದ ರೂವಾರಿಗಳು, ಸೂತ್ರಧಾರಿಗಳ ಕುರಿತು ಬೆಳಕು ಚೆಲ್ಲಬೇಕು. ಈ ಸಂಬಂಧ ಎಸ್ಐಟಿ ತನಿಖಾ ವರದಿ ನೀಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ. ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು ಪ್ರಶ್ನೆಗೆ ಉತ್ತರಿಸಿದರು. ಬುರುಡೆ ಗ್ಯಾಂಗಿನಿಂದ ನಾಡಿನ ಧಾರ್ಮಿಕ ಶ್ರದ್ಧೆ ಕುರಿತು ಅನುಮಾನ ಹುಟ್ಟಿಸುವ ಕಾರ್ಯ ಆಗಿದೆ. ಇದೆಲ್ಲದರ ಬಗ್ಗೆ ರಾಜ್ಯ ಸರಕಾರವು ಎಸ್ಐಟಿ ತನಿಖೆ ನಡೆಯುತ್ತಿದೆ ಎಂದು ಕೈಕಟ್ಟಿ ಕೂತರೆ ಆಗುವುದಿಲ್ಲ ಎಂದು ಆಕ್ಷೇಪಿಸಿದರು. ಧರ್ಮಸ್ಥಳದ ವಿಚಾರದಲ್ಲಿ ಪಾತ್ರಧಾರಿಗಳಷ್ಟೇ ಬಹಿರಂಗವಾಗಿದ್ದಾರೆ. ಆದರೆ, ಸೂತ್ರಧಾರಿಗಳ ಬಗ್ಗೆ ಏನು ಎಂಬುದಾಗಿ ರಾಜ್ಯದ ಜನರು ಕೇಳುತ್ತಿದ್ದಾರೆ. ಸೂತ್ರಧಾರಿಗಳು ಮುಖ್ಯಮಂತ್ರಿಗಳ ಸುತ್ತ ಇದ್ದಾರೆಂದು ರಾಜ್ಯದ ಜನರು ಮಾತನಾಡುತ್ತಿದ್ದಾರೆ ಎಂದು ಗಮನ ಸೆಳೆದರು. ಇದರ ಬಗ್ಗೆ ಎಸ್ಐಟಿ ತನಿಖಾ ವರದಿಯನ್ನು ತಕ್ಷಣ ನೀಡಬೇಕೆಂದು ಒತ್ತಾಯಿಸಿದರು. ಖುಷಿ ಬಂದಂತೆ ನಿಧಾನಗತಿಯ ತನಿಖೆ ಸರಿಯಲ್ಲ ಎಂದು ಟೀಕಿಸಿದರು. ಆ ಮುಖಗಳನ್ನು…
ಮಂಡ್ಯ : ಶನಿವಾರ ಬಂದ್ರೆ ಸಾಕು ನಾಗಮಂಗಲ ಮತ್ತು ಮಂಡ್ಯದ ಕಲೆಕ್ಷನ್ ಪಾಯಿಂಟ್ ಹೋಗಿ ಕಲೆಕ್ಷನ್ ಮಾಡೋದೆ ಸಚಿವ ಚಲುವರಾಯಸ್ವಾಮಿ ಕೆಲಸವಾಗಿದೆ ಎಂದು ಮಾಜಿ ಶಾಸಕ ಸುರೇಶ್ ಗೌಡ ಗಂಭೀರ ಆರೋಪ ಮಾಡಿದರು. ಕೊಪ್ಪ ಗ್ರಾಮದ ಖಾಸಗಿ ಸಮುದಾಯ ಭವನದಲ್ಲಿ ಬುಧವಾರ ಕೊಪ್ಪ ಹೋಬಳಿಯ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಸಚಿವ ಚಲುವರಾಯಸ್ವಾಮಿ ಅಂತಹ ಮಹಾನ್ ಸುಳ್ಳುಗಾರ ಮತ್ತೋಬ್ಬ ಇಲ್ಲ. ನಾಗಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ಯಾವುದೇ ಕೆಲಸಗಳು ನಡೆಯುತ್ತಿಲ್ಲ. ಬರೀ ಬೊಗಳೆ ಬಿಟ್ಟುಕೊಂಡು ಜನರನ್ನು ಚಲುವರಾಯಸ್ವಾಮಿ ಯಾಮಾರಿಸುತ್ತಿದ್ದಾರೆ. ನನ್ನ ಅವಧಿಯಲ್ಲಿ ತಂದಿರುವ ಅನುದಾನಗಳಿಗೆ ಗುದ್ದಲಿ ಪೂಜೆ ಮಾಡಿಕೊಂಡು ಶನಿವಾರ ಬಂದ್ರೆ ಸಾಕು ನಾಗಮಂಗಲ ಮತ್ತು ಮಂಡ್ಯದಲ್ಲಿರುವ ಕಲೆಕ್ಷನ್ ಪಾಯಿಂಟ್ ಹೋಗಿ ಕಲೆಕ್ಷನ್ ಮಾಡೋದೆ ಸಚಿವ ಚಲುವರಾಯಸ್ವಾಮಿ ಕೆಲಸವಾಗಿದೆ ಎಂದು ಕಿಡಿಕಾರಿದರು. ಈ ಸರ್ಕಾರದಲ್ಲಿ ಅಭಿವೃದ್ಧಿಗೆ ಹಣವಿಲ್ಲ. ಕಾಮಗಾರಿಗೆ ಗುದ್ದಲಿ ಪೂಜೆ ಮಾಡಿದ್ರು ಗುತ್ತಿಗೆದಾರರು ಕೆಲಸ ಮಾಡುತ್ತಿಲ್ಲ. ನಾನು ಎರಡು ಬಾರಿ ವಿರೋಧ ಪಕ್ಷದ ಶಾಸಕನಾಗಿದ್ದಾಗಲೂ…
ಬೆಳಗಾವಿ: ದೇಶದಲ್ಲಿ ಮಾದರಿಯಾದ, ಮಹಿಳೆಯರ ಸಬಲೀಕರಣ ಉದ್ದೇಶ ಹೊಂದಿರುವ ಗೃಹಲಕ್ಷ್ಮಿ ಯೋಜನೆಯನ್ನು ಒಂದೇ ಒಂದು ರೂಪಾಯಿ ಕೂಡ ಮಧ್ಯವರ್ತಿಗಳ ಪಾಲಾಗದಂತೆ ಜಾರಿಗೊಳಿಸಲಾಗುತ್ತಿದೆ. ಇನ್ಮುಂದೆ ಮೂರು ತಿಂಗಳಿಗೆ ಒಮ್ಮೆ ಗೃಹಲಕ್ಷ್ಮೀ ಹಣವನ್ನು ಜಮಾ ಮಾಡುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ವಿಧಾನಸಭೆಯಲ್ಲಿ ಬಿಜೆಪಿಯ ಮಹೇಶ್ ಟೆಂಗಿನಕಾಯಿ ಪ್ರಶ್ನೆಗೆ ಉತ್ತರಿಸಿದ ಸಚಿವರು, ಆಗಸ್ಟ್ ತಿಂಗಳವರೆಗೆ 1.24 ಕೋಟಿ ಮಹಿಳೆಯರ ಖಾತೆಗೆ ಪ್ರತಿ ತಿಂಗಳು ಹಣ ಜಮಾ ಮಾಡಲಾಗಿದೆ. ಮೊದಲು ಇಲಾಖೆಯಿಂದ ನೇರವಾಗಿ ಹಣ ಹಾಕಲಾಗುತ್ತಿತ್ತು. ನಂತರದಲ್ಲಿ ತಾಲೂಕು ಪಂಚಾಯತ್ ಮೂಲಕ ಹಣ ಹಾಕಲಾಗುತ್ತಿದೆ. ಹಾಗಾಗಿ ಮಧ್ಯದಲ್ಲಿ ಸ್ವಲ್ಪ ಮಟ್ಟಿಗೆ ವಿಳಂಬವಾಗಿದ್ದು ನಿಜ, ಆದರೆ ಒಂದೇ ಒಂದು ರೂಪಾಯಿ ಆಚೆ ಈಚೆ ಆಗದಂತೆ ಮಹಿಳೆಯರಿಗೆ ತಲುಪಿಸಲಾಗುತ್ತಿದೆ. ಸ್ಪಷ್ಟತೆ ಮತ್ತು ಬದ್ಧತೆಯಿಂದ ಯೋಜನೆ ಮುಂದುವರಿಸಲಾಗುತ್ತಿದೆ ಎಂದು ಸಚಿವರು ಸ್ಪಷ್ಟ ಪಡಿಸಿದರು. ಆರಂಭದಲ್ಲಿ ಯೋಜನೆಯನ್ನು ನಿಲ್ಲಿಸಲು ಹೇಳಿದವರು ನೀವು, ಯೋಜನೆ ಕುರಿತು ಹಾದಿ ಬೀದಿಯಲ್ಲಿ ಟೀಕೆ ಮಾಡುತ್ತಿದ್ದ ಬಿಜೆಪಿಯವರಿಗೆ ಈಗ ಏಕಾಏಕಿ…
ಬೆಳಗಾವಿ: ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ತಿದ್ದುಪಡಿಗೆ ಕಳೆದ ಅಕ್ಟೋಬರ್ ತಿಂಗಳಲ್ಲೇ ಕರಡು ರಚಿಸಲಾಗಿದ್ದು, ಮುಂದಿನ ಒಂದು ತಿಂಗಳೊಳಗೆ ಅಧಿಸೂಚನೆ ಹೊರಡಿಸಿ ಕಾರ್ಯರೂಪಕ್ಕೆ ತರಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ವಿಧಾನ ಪರಿಷತ್ ಗೆ ಮಾಹಿತಿ ನೀಡಿದ್ದಾರೆ. ಬುಧವಾರ ಪರಿಷತ್ನ ಪ್ರಶ್ನೋತ್ತರ ಅವಧಿಯ ವೇಳೆ ಶಾಸಕ ರಾಮೋಜಿ ಗೌಡ ಅವರು, “ಕರ್ನಾಟಕ ಭೂ ಕಂದಾಯ ಕಾಯ್ದೆ 1964 ಕಲಂ 95ರ ತಿದ್ದುಪಡಿ ಅಧಿಸೂಚನೆಯನ್ನು ಇದುವರೆವಿಗೂ ಜಾರಿಗೆ ತರದಿರಲು ಕಾರಣಗಳೇನು.? ಕಳೆದ ಅಧಿವೇಶನದಲ್ಲಿ ಈ ಅಧಿಸೂಚನೆಯನ್ನು ಗೊತ್ತುಪಡಿಸಿದ ದಿನಾಂಕದಿಂದ ಜಾರಿಗೆ ಬರುವುದು ಎಂದು ತಿಳಿಸಲಾಗಿತ್ತು. ಆದರೆ, ಇದುವರೆವಿಗೂ ಈ ಅಧಿಸೂಚನೆಯನ್ನು ಜಾರಿಗೆ ತರದಿರುವುದರಿಂದ ನಗರ ಪ್ರದೇಶದ ಜನತೆಗೆ ತೊಂದರೆಯಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ? ಎಂದು ಪ್ರಶ್ನೆ ಮಾಡಿದ್ದರು. ಈ ಪ್ರಶ್ನೆಗೆ ಉತ್ತರ ನೀಡಿದ ಸಚಿವ ಕೃಷ್ಣ ಬೈರೇಗೌಡ ಅವರು, “ಕರ್ನಾಟಕ ಭೂ ಕಂದಾಯ ಕಾಯ್ದೆ 1964 ರಲ್ಲಿ ಜಾರಿಯಾಗಿದ್ದರೂ ಈ ಹಿಂದೆ ಅಗತ್ಯ ತಿದ್ದುಪಡಿಗಳಾಗಿರಲಿಲ್ಲ. ಆದರೆ, ಪ್ರಸ್ತುತ ಅತ್ಯಧಿಕ ಹಾಗೂ ಅಗತ್ಯ…
ಬೆಳಗಾವಿ ಸುವರ್ಣಸೌಧ : ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ತಿದ್ದುಪಡಿಗೆ ಕಳೆದ ಅಕ್ಟೋಬರ್ ತಿಂಗಳಲ್ಲೇ ಕರಡು ರಚಿಸಲಾಗಿದ್ದು, ಮುಂದಿನ ಒಂದು ತಿಂಗಳೊಳಗೆ ಅಧಿಸೂಚನೆ ಹೊರಡಿಸಿ ಕಾರ್ಯರೂಪಕ್ಕೆ ತರಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ವಿಧಾನ ಪರಿಷತ್ ಗೆ ಮಾಹಿತಿ ನೀಡಿದ್ದಾರೆ. ಬುಧವಾರ ಪರಿಷತ್ನ ಪ್ರಶ್ನೋತ್ತರ ಅವಧಿಯ ವೇಳೆ ಶಾಸಕ ರಾಮೋಜಿ ಗೌಡ ಅವರು, “ಕರ್ನಾಟಕ ಭೂ ಕಂದಾಯ ಕಾಯ್ದೆ 1964 ಕಲಂ 95ರ ತಿದ್ದುಪಡಿ ಅಧಿಸೂಚನೆಯನ್ನು ಇದುವರೆವಿಗೂ ಜಾರಿಗೆ ತರದಿರಲು ಕಾರಣಗಳೇನು.? ಕಳೆದ ಅಧಿವೇಶನದಲ್ಲಿ ಈ ಅಧಿಸೂಚನೆಯನ್ನು ಗೊತ್ತುಪಡಿಸಿದ ದಿನಾಂಕದಿಂದ ಜಾರಿಗೆ ಬರುವುದು ಎಂದು ತಿಳಿಸಲಾಗಿತ್ತು. ಆದರೆ, ಇದುವರೆವಿಗೂ ಈ ಅಧಿಸೂಚನೆಯನ್ನು ಜಾರಿಗೆ ತರದಿರುವುದರಿಂದ ನಗರ ಪ್ರದೇಶದ ಜನತೆಗೆ ತೊಂದರೆಯಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ? ಎಂದು ಪ್ರಶ್ನೆ ಮಾಡಿದ್ದರು. ಈ ಪ್ರಶ್ನೆಗೆ ಉತ್ತರ ನೀಡಿದ ಸಚಿವ ಕೃಷ್ಣ ಬೈರೇಗೌಡ ಅವರು, “ಕರ್ನಾಟಕ ಭೂ ಕಂದಾಯ ಕಾಯ್ದೆ 1964 ರಲ್ಲಿ ಜಾರಿಯಾಗಿದ್ದರೂ ಈ ಹಿಂದೆ ಅಗತ್ಯ ತಿದ್ದುಪಡಿಗಳಾಗಿರಲಿಲ್ಲ. ಆದರೆ, ಪ್ರಸ್ತುತ ಅತ್ಯಧಿಕ…













