Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜಣ್ಣ ಅವರು ಜನತಾ ದಳದಲ್ಲಿದ್ದರು. ನಾನು ಕಾಂಗ್ರೆಸ್ ನವನು. ಅಂದು ಎಸ್.ಎಂ. ಕೃಷ್ಣ ಅವರ ಅವಧಿಯಲ್ಲಿ ರಾಜಣ್ಣ ಅವರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷನನ್ನಾಗಿ ಮಾಡಿದ್ದು ನಾನು. ಹೋಗಿ ಬೇಕಾದರೆ ಅವರನ್ನೇ ಕೇಳಿ. ಸಿಎಂಗೂ ಇದಕ್ಕೂ ಸಂಬಂಧವೇ ಇಲ್ಲ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಇಂದು ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳ ಜೊತೆಗೆ ಮಾತನಾಡಿದಂತ ಅವರು, ರಾಜಕೀಯ ಬೆಂಬಲಕ್ಕೆ ಕೆ.ಎನ್. ರಾಜಣ್ಣ ಹಾಗೂ ನೀವು ಭೇಟಿ ಮಾಡಿದ್ದೀರಿ ಎಂದಾಗ, ನಾವು ಸಹೋದ್ಯೋಗಿಗಳು. ಅವರು ನಮ್ಮ ಜತೆ ಕೆಲಸ ಮಾಡಿರುವವರು. ನನಗೆ ಯಾರ ಜತೆಯೂ ಭಿನ್ನಾಭಿಪ್ರಾಯಗಳಿಲ್ಲ. ಕಳೆದ 16 ವರ್ಷಗಳಿಂದ, ಅವರು ನಮ್ಮ ಪಕ್ಷಕ್ಕೆ ಬಂದ ದಿನದಿಂದ ನನಗೂ ಮುಖ್ಯಮಂತ್ರಿಯವರಿಗೂ ಬಿನ್ನಾಭಿಪ್ರಾಯಗಳು ಏನಾದರೂ ಇದೆಯಾ? ಭಿನ್ನಾಭಿಪ್ರಾಯಗಳನ್ನು ಮಾಧ್ಯಮಗಳು, ವಿರೋಧ ಪಕ್ಷಗಳು ಸೃಷ್ಟಿ ಮಾಡುತ್ತಿವೆ. ತಮಗೆ ಬೇಕಾದ ಆಹಾರ ಸೃಷ್ಟಿಸುತ್ತಿದ್ದಾರೆ. ಕೆಲವು ಸಂದರ್ಭಗಳಲ್ಲಿ ರಾಜಕೀಯವಾಗಿ ಹೇಳಿಕೆ ಕೊಟ್ಟಿರುತ್ತಾರೆ. ಇದಕ್ಕೆ ಬೇಸರ ಮಾಡಿಕೊಳ್ಳಲು ಆಗುತ್ತದೆಯೇ? ಅಣ್ಣ ತಮ್ಮಂದಿರೇ ಜಗಳ ಮಾಡುತ್ತಾರಂತೆ, ಇನ್ನು ನಮ್ಮದು…
ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಖೋಡೇಸ್ ಗ್ಲಾಸ್ ಪ್ಯಾಕ್ಟರಿ, ಇಸ್ಕಾನ್ ಮತ್ತು ಅರೆಹಳ್ಳಿ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 23.12.2025 (ಮಂಗಳವಾರ) ರಂದು ಬೆಳಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 04:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಕೋಣನಕುಂಟೆ, ತಲಘಟ್ಟಪುರ, ದೊಡ್ಡಕಲ್ಲಸಂದ್ರ, ಶ್ರೀನಿಧಿ ಲೇಔಟ್, ಆವಲಹಳ್ಳಿ, ಮಂತ್ರಿ ಅಪರ್ಟ್ಮೆಂಟ್, ತಲಘಟ್ಟಪುರ, ರಘುವನಹಳ್ಳಿ, ಗುಬ್ಬಲಾಳ, ಕುವೆಂಪುನಗರ, ವಿ.ವಿ.ನಗರ, ವಿ.ವಿ. ಲೇಔಟ್, ಬಾಲಾಜಿ ಲೇಔಟ್, ರಾಯಲ್ ಫಾರಂ ಮತ್ತು ಅರೇಹಳ್ಳಿ, ಇಟ್ಟಮಡು, ಏಜಿಎಸ್ ಲೇಔಟ್, ಚಿಕ್ಕಲಸಂದ್ರ, ಟಿ.ಜಿ. ಲೇಔಟ್ ವ್ಯಾಪ್ತಿಯಲ್ಲಿ ಕರೆಂಟ್ ಇರೋದಿಲ್ಲ. ಇನ್ನೂ ಭುವನೇಶ್ವರಿನಗರ ಇಸ್ರೋ ಲೇಔಟ್, ಇಸ್ರೋ ಲೇಔಟ್ ಇಂಡಸ್ರ್ಟಿಯಲ್ ಏರಿಯಾ, ಕುಮಾರಸ್ವಾಮಿ ಬಡಾವಣೆ, ವಿಠ್ಠಲ ನಗರ, ವಿಕ್ರಮ್ ನಗರ, ಯೆಲಚೇನಹಳ್ಳಿ, ಸುತ್ತಮುತ್ತಲ ಪ್ರದೇಶ, ಚಿಕ್ಕಲಸಂದ್ರ ವಿಲೇಜ್, ಕದಿರೇನಹಳ್ಳಿ, ಅಬ್ಬಯ್ಯ ನಾಯ್ಡು ಸ್ಟುಡಿಯೋ, ನಾಯ್ಡು ಲೇಔಟ್, ಎಜಿಎಸ್ ಲೇಔಟ್ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. https://kannadanewsnow.com/kannada/grant-for-construction-of-ksrtc-bus-stand-hospital-quatras-at-ulavi-in-sorabad-minister-madhu-bangarappa-promises/ https://kannadanewsnow.com/kannada/i-cm-siddaramaiah-work-like-brothers-dcm-d-k-shivakumar/
ಬೆಂಗಳೂರು : “ನನಗೆ ಕಾಂಗ್ರೆಸ್ನ ಯಾವುದೇ ನಾಯಕರ ಜತೆ ಭಿನ್ನಾಭಿಪ್ರಾಯಗಳಿಲ್ಲ. ನಾನು, ಸಿಎಂ ಒಟ್ಟಿಗೆ ಸಹೋದರರಂತೆ ಕೆಲಸ ಮಾಡುತ್ತಿಲ್ಲವೇ?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದರು. ಮುಖ್ಯಮಂತ್ರಿಯವರ ಆಪ್ತ ಬಳಗದವರನ್ನು ಭೇಟಿ ಮಾಡಿದ್ದೀರಿ ಎಂದು ಕೇಳಿದಾಗ, “ಅವರಿಗೆ ಸಿಎಂ ಆಪ್ತರೇನು? ಅವರು ನನಗೂ ಆಪ್ತರೇ. ಅವರು ಯಾರಿಗೆ ಆಪ್ತರಿಲ್ಲ ಹೇಳಿ. ನಾನು ಸಿಎಂ ಆಪ್ತರಲ್ಲವೇ? ರಾಜಣ್ಣ ಅವರು ಜನತಾ ದಳದಲ್ಲಿದ್ದರು. ನಾನು ಕಾಂಗ್ರೆಸ್ ನವನು. ಅಂದು ಎಸ್.ಎಂ. ಕೃಷ್ಣ ಅವರ ಅವಧಿಯಲ್ಲಿ ರಾಜಣ್ಣ ಅವರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷನನ್ನಾಗಿ ಮಾಡಿದ್ದು ನಾನು. ಹೋಗಿ ಬೇಕಾದರೆ ಅವರನ್ನೇ ಕೇಳಿ. ಸಿಎಂಗೂ ಇದಕ್ಕೂ ಸಂಬಂಧವೇ ಇಲ್ಲ” ಎಂದರು. ರಾಜಕೀಯ ಬೆಂಬಲಕ್ಕೆ ಕೆ.ಎನ್. ರಾಜಣ್ಣ ಹಾಗೂ ನೀವು ಭೇಟಿ ಮಾಡಿದ್ದೀರಿ ಎಂದಾಗ, “ನಾವು ಸಹೋದ್ಯೋಗಿಗಳು. ಅವರು ನಮ್ಮ ಜತೆ ಕೆಲಸ ಮಾಡಿರುವವರು. ನನಗೆ ಯಾರ ಜತೆಯೂ ಭಿನ್ನಾಭಿಪ್ರಾಯಗಳಿಲ್ಲ. ಕಳೆದ 16 ವರ್ಷಗಳಿಂದ, ಅವರು ನಮ್ಮ…
ಬೆಂಗಳೂರು: ಇಂದಿನಿಂದ ರಾಜ್ಯಾಧ್ಯಂತ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ನಡೆಯುತ್ತಿದೆ. ಪೋಷಕರು ತಮ್ಮ 5 ವರ್ಷದ ಒಳಗಿನ ಎಲ್ಲಾ ಮಕ್ಕಳಿಗೆ ತಪ್ಪದೇ ಪೊಲಿಯೋ ಹನಿ ಹಾಕಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದರು. ಇಂದು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ಜೊತೆ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಭಾರತಾದ್ಯಂತ ಪೋಲಿಯೋ ಲಸಿಕೆ ಹಾಕುವುದು ಮತ್ತು ಅದರ ಕುರಿತು ಅಭಿಯಾನ ನಡೆಯುತ್ತಿದೆ. ಸತತ ಜಾಗೃತಿಯಿಂದಾಗಿ ಪೋಲಿಯೋ ರೋಗವನ್ನು ನಿಯಂತ್ರಿಸಲಾಗಿದೆ. 1978 ರಿಂದ ಈ ಅಭಿಯಾನವನ್ನು ಪ್ರಾರಂಭಿಸಲಾಗಿದ್ದು ಕಳೆದ 14 ವರ್ಷಗಳಿಂದ ಪೋಲಿಯೋ ಮುಕ್ತ ರಾಷ್ಟ್ರವಾಗಿದೆ. ಆದರೂ ಕೂಡ ಜಾಗೃತಿಯಿಂದ ಇರಬೇಕಾಗುತ್ತದೆ. ಯಾಕೆಂದರೆ ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ, ಅಪಘಾನಿಸ್ತಾನದಲ್ಲಿ ಈಗಲೂ ಕೂಡ ಪೋಲಿಯೋ ಕಾಣಿಸಿಕೊಳ್ಳುತ್ತಿದೆ. ಈ ಎರಡು ಹನಿ ಬಹಳ ಮುಖ್ಯ. ತಪ್ಪದೇ ಎಲ್ಲ ಮಕ್ಕಳಿಗೂ ಹಾಕಿಸಬೇಕು ಎಂದರು. ನಾಳೆಯಿಂದ 2-3 ದಿನ ಮನೆಮನೆಗೆ ತೆರಳಿ 0-5 ವರ್ಷದ ಮಕ್ಕಳಿಗೆ ಲಸಿಕೆ ಹಾಕಲಾಗುವುದು. 62,40,114 ಮಕ್ಕಳ ಗುರಿ…
ಶಿವಮೊಗ್ಗ: ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿಯಲ್ಲಿ ನೂತನ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣ ನಿರ್ಮಾಣಕ್ಕೆ ಅನುದಾನ ಒದಗಿಸಲಾಗುತ್ತದೆ. ಮೂತನ ಕ್ವಾಟ್ರಾಸ್ ನಿರ್ಮಾಣಕ್ಕೂ ಅನುದಾನ ನೀಡಲಾಗುತ್ತದೆ. ಯಾವುದೇ ಸಮಸ್ಯೆ ಇದ್ದರೇ ಅದನ್ನು ಬಗೆ ಹರಿಸುವ ನಿಟ್ಟಿನಲ್ಲಿ ಎಲ್ಲಾ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ. ತಮ್ಮ ಕ್ಷೇತ್ರದ ಸಮಸ್ಯೆಗಳ ಕುರಿತಂತೆ ಕರೆದಿದ್ದಂತ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸಭೆಯನ್ನು ನಡೆಸಿದರು. ಈ ಸಭೆಯಲ್ಲಿ ಪಾಲ್ಗೊಂಡಿದ್ದಂತ ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ದೂಗೂರಿನ ಗ್ರಾಮ ಪಂಚಾಯ್ತಿ ಅಧ್ಯಕ್ಷ ಫಯಾಸ್ ಅಹಮದ್ ಅವರು, ಉಳವಿಯಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣಕ್ಕಾಗಿ ಸರ್ವೆ ಎಲ್ಲ ಮಾಡಿಸಲಾಗಿದೆ. ಸಾರಿಗೆ ಬಸ್ ನಿಲ್ದಾಣ ನಿರ್ಮಾಣದ ವಿಚಾರದಲ್ಲಿ ಸೊರಬ ತಹಶೀಲ್ದಾರ್ ಮಂಜುಳಾ ಅವರು ತುಂಬಾನೇ ಒಲವು ತೋರಿದ್ದಾರೆ. ಇದಕ್ಕಾಗಿ ಅನುದಾನ ಒದಗಿಸುವಂತೆ ಮನವಿ ಮಾಡಿದರು. ಈ ಮನವಿಗೆ ಸಕಾರಾತ್ಮಕವಾಗಿಯೇ…
ಉಡುಪಿ: ಜಿಲ್ಲೆಯ ಪ್ರಸಿದ್ಧ ದೇವಸ್ಥಾನಗಳಲ್ಲಿ ಒಂದು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ. ಈ ದೇವಾಲಯದ ಹೆಸರಿನಲ್ಲಿ ನಕಲಿ ವೆಬ್ ಸೈಟ್ ತೆರೆಯಲಾಗಿತ್ತು. ಆ ಮೂಲಕ ಹಲವು ಭಕ್ತರಿಂದ ಹಣ ಪಡೆದು ವಂಚಿಸಲಾಗಿತ್ತು. ಇಂತಹ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಉಡುಪಿ ಜಿಲ್ಲೆಯ ಬೈಂದೂರು ತಾಲ್ಲೂಕಿನ ಕೊಲ್ಲೂರು ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್ ಸೈಟ್ ತೆರೆದು ವಂಚನೆ ಆರೋಪ ಕೇಳಿ ಬಂದಿತ್ತು. ಈ ಹಿನ್ನಲೆಯಲ್ಲಿ ಕೊಲ್ಲೂರು ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ರಾಜಸ್ಥಾನದ ತಿಜಾರಿ ಜಿಲ್ಲೆಯ ನಾಸಿರ್ ಹುಸೇನ್ ಬಂಧಿತ ಆರೋಪಿಯಾಗಿದ್ದಾನೆ. ಈತ ಕೊಲ್ಲೂರು ಮೂಕಾಂಬಿಕಾ ದೇವಿ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್ ಸೈಟ್ ತೆರೆದು ಆ ಮೂಲಕ ಭಕ್ತರಿಗೆ ವಂಚಿಸುತ್ತಿದ್ದನು. ಅಧಿಕೃತ ವೆಬ್ ಸೈಟ್ ಹೋಲುವ ರೀತಿಯಲ್ಲಿ ನಕಲಿ ಸೈಟ್ ಕ್ರಿಯೇಟ್ ಮಾಡಿದ್ದನು. ಭಕ್ತರಿಂದ ಮುಂಗಡವಾಗಿ ರೂಮ್ ಬುಕ್ಕಿಂಗ್ ಮಾಡಿಸಿಕೊಳ್ಳುತ್ತಿದ್ದನು. ಸ್ಕ್ಯಾನರ್ ಮೂಲಕ ಹಣವನ್ನು ಪಡೆದು ನಕಲಿ ರಶೀದಿ ನೀಡಿ ವಂಚನೆ ಮಾಡುತ್ತಿದ್ದನು. ಈ ಹಿನ್ನಲೆಯಲ್ಲಿ ಮೂಕಾಂಬಿಕಾ ದೇವಸ್ಥಾನದ…
ಬೆಂಗಳೂರು: ಕ್ರೀಡಾ ಮೀಸಲಾತಿಯಡಿ ಸರ್ಕಾರಿ ಉದ್ಯೋಗ ನಿರೀಕ್ಷೆಯಲ್ಲಿದ್ದಂತ ಕ್ರೀಡಾಪಟುಗಳಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಗುಡ್ ನ್ಯೂಸ್ ನೀಡಿದ್ದಾರೆ. ಅದೇ ಜನವರಿ 2026 ರಲ್ಲಿ ನೇಮಕಾತಿ ಆದೇಶ ಪತ್ರ ನೀಡುವುದಾಗಿ ತಿಳಿಸಿದ್ದಾರೆ. ಅವರು ಇಂದು ಕರ್ನಾಟಕ ಒಲಂಪಿಕ್ಸ್ ಸಂಸ್ಥೆ ಬೆಂಗಳೂರು ಇವರ ವತಿಯಿಂದ ಕರ್ನಾಟಕ ಒಲಂಪಿಕ್ 2025 ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕರ್ನಾಟಕ ಒಲಂಪಿಕ್ಸ್ ಸಂಸ್ಥೆ ವತಿಯಿಂದ ನೀಡಲಾಗುತ್ತಿರುವ ಕರ್ನಾಟಕ ಒಲಂಪಿಕ್ 2025 ಪ್ರಶಸ್ತಿಗೆ ಭಾಜನರಾಗಿರುವ ಕ್ರೀಡಾ ಸಾಧಕರಿಗೆ ಅಭಿನಂದಿಸಿದ ಮುಖ್ಯಮಂತ್ರಿಗಳು, 1958 ರಲ್ಲಿ ಪ್ರಾರಂಭವಾದ ಒಲಂಪಿಕ್ಸ್ ಸಂಸ್ಥೆ ಇಲ್ಲಿಯವರೆಗೆ ಕ್ರೀಡಾ ಕ್ಷೇತ್ರದ ಅಭಿವೃದ್ಧಿಗೆ ಕೊಡುಗೆ ನೀಡುತ್ತಾ ಬಂದಿದೆ. ವಿಧಾನ ಪರಿಷತ್ ಸದಸ್ಯರಾದ ಗೋವಿಂದರಾಜ್ ಅವರು ಸಂಸ್ಥೆಯ ಅಧ್ಯಕ್ಷತೆ ವಹಿಸಿಕೊಂಡ ನಂತರ ಸಂಸ್ಥೆಯು ಹೆಚ್ಚು ಕ್ರಿಯಾಶೀಲವಾಗಿದೆ. ನನ್ನ ಅವಧಿಯಲ್ಲಿಯೇ ಕರ್ನಾಟಕ ಒಲಂಪಿಕ್ಸ್ ಸಂಸ್ಥೆಯ ಕಟ್ಟಡಕ್ಕೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನೂ ನಾನೇ ನೆರವೇರಿಸಿದ್ದೇನೆ. ಇಡೀ ದೇಶದಲ್ಲಿಯೇ ಆಂಧ್ರ ಮತ್ತು ಕೇರಳ ರಾಜ್ಯದಂತೆ ಕರ್ನಾಟಕದಲ್ಲಿಯೂ ಸಂಸ್ಥೆಯು ಸ್ವಂತ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದೆ. ಕರ್ನಾಟಕ ಒಲಂಪಿಕ್ಸ್ ಸಂಸ್ಥೆಯು…
ಬೆಂಗಳೂರು : ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ.ನಗದು ಬಹುಮಾನ ಘೋಷಿಸಲಾಗಿದ್ದು, ಕರ್ನಾಟಕದ ಕ್ರೀಡಾಪಟುಗಳು ಚಿನ್ನದ ಪದಕ ಗೆಲ್ಲುವರೆಂಬ ವಿಶ್ವಾಸವಿದೆ ಎಂದು ತಿಳಿಸಿದರು. ಅವರು ಇಂದು ಕರ್ನಾಟಕ ಒಲಂಪಿಕ್ಸ್ ಸಂಸ್ಥೆ ಬೆಂಗಳೂರು ಇವರ ವತಿಯಿಂದ ಕರ್ನಾಟಕ ಒಲಂಪಿಕ್ 2025 ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕರ್ನಾಟಕ ಒಲಂಪಿಕ್ಸ್ ಸಂಸ್ಥೆ ವತಿಯಿಂದ ನೀಡಲಾಗುತ್ತಿರುವ ಕರ್ನಾಟಕ ಒಲಂಪಿಕ್ 2025 ಪ್ರಶಸ್ತಿಗೆ ಭಾಜನರಾಗಿರುವ ಕ್ರೀಡಾ ಸಾಧಕರಿಗೆ ಅಭಿನಂದಿಸಿದ ಮುಖ್ಯಮಂತ್ರಿಗಳು, 1958 ರಲ್ಲಿ ಪ್ರಾರಂಭವಾದ ಒಲಂಪಿಕ್ಸ್ ಸಂಸ್ಥೆ ಇಲ್ಲಿಯವರೆಗೆ ಕ್ರೀಡಾ ಕ್ಷೇತ್ರದ ಅಭಿವೃದ್ಧಿಗೆ ಕೊಡುಗೆ ನೀಡುತ್ತಾ ಬಂದಿದೆ. ವಿಧಾನ ಪರಿಷತ್ ಸದಸ್ಯರಾದ ಗೋವಿಂದರಾಜ್ ಅವರು ಸಂಸ್ಥೆಯ ಅಧ್ಯಕ್ಷತೆ ವಹಿಸಿಕೊಂಡ ನಂತರ ಸಂಸ್ಥೆಯು ಹೆಚ್ಚು ಕ್ರಿಯಾಶೀಲವಾಗಿದೆ. ನನ್ನ ಅವಧಿಯಲ್ಲಿಯೇ ಕರ್ನಾಟಕ ಒಲಂಪಿಕ್ಸ್ ಸಂಸ್ಥೆಯ ಕಟ್ಟಡಕ್ಕೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನೂ ನಾನೇ ನೆರವೇರಿಸಿದ್ದೇನೆ. ಇಡೀ ದೇಶದಲ್ಲಿಯೇ ಆಂಧ್ರ ಮತ್ತು ಕೇರಳ ರಾಜ್ಯದಂತೆ ಕರ್ನಾಟಕದಲ್ಲಿಯೂ ಸಂಸ್ಥೆಯು ಸ್ವಂತ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದೆ. ಕರ್ನಾಟಕ ಒಲಂಪಿಕ್ಸ್ ಸಂಸ್ಥೆಯು ಎಲ್ಲಾ…
ಬೆಳಗಾವಿ: ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ ನಿರ್ವಹಣೆಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಭೂಮಿ ಜೀವದ ತೊಟ್ಟಿಲು, ಇಂತಹ ಜೀವದ ತೊಟ್ಟಿಲನ್ನು ಬಂಜೆ ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು. ಬೆಳಗಾವಿ ತಾಲೂಕಿನ ಹುದಲಿ ಗ್ರಾಮದಲ್ಲಿನ ಬೆಳಗಾಂ ಶುಗರ್ಸ ಹತ್ತಿರ ಖಾಸಗಿ ಜಮೀನಿನಲ್ಲಿ ಜಿಲ್ಲಾಡಳಿತ, ಜಿಲ್ಲಾಪಂಚಾಯತ್ ಬೆಳಗಾವಿ, ಕೃಷಿ ಇಲಾಖೆ ಹಾಗೂ ಸಕ್ಕರೆ ಕಾರ್ಖಾನೆಗಳ ಸಂಯುಕ್ತ ಆಶ್ರಯದಲ್ಲಿ ಶನಿವಾರ ಜರುಗಿದ ಬೆಳಗಾವಿ, ಬಾಗಲಕೋಟ, ವಿಜಯಪುರ, ಕಲಬುರಗಿ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ ನಿರ್ವಹಣೆ ಯೋಜನೆಗೆ ಚಾಲನೆ ನೀಡಿ ಅವರು ಮಾತನಾಡಿದರು. ರೈತರು ರಸಗೊಬ್ಬರ ಬಳಕೆಯನ್ನು ಕಡಿಮೆ ಮಾಡಬೇಕಾಗಿದೆ. ರಸಗೊಬ್ಬರ ಬಳಕೆಯಿಂದ ಹೆಚ್ವಿನ ಇಳುವರಿ ಬರುತ್ತದೆ ಎಂಬ ತಪ್ಪು ಕಲ್ಪನೆಯಿಂದ ಹೊರಬರಬೇಕಾಗಿದೆ. ಭಾರತ ಕೃಷಿ ಪ್ರಧಾನ ರಾಷ್ಟ್ರವಾಗಿದ್ದು ಪ್ರತಿಶತ 90 ಕೃಷಿ ಮೇಲೆಯೇ ಅವಲಂಬಿತವಾಗಿದೆ. ರೈತರಿಗೆ ಬೇಕಾದ ಸಹಾಯ ಮಾಡುವುದು ಸರಕಾರಗಳ…
ಕಾಶಿಗೆ ಹೋದರೇ , ತರಕಾರಿ ಅಥವಾ ಹಣ್ಣನ್ನು ತ್ಯಾಗ ಮಾಡಬೇಕು ಎಂದು ಅನಾದಿ ಕಾಲದಿಂದಲೂ ಹೇಳುತ್ತಾ ಬಂದಿದ್ದಾರೆ. ಅದರ ನಿಜಾರ್ಥವು ಇಂತಿದೆ: ಕಾಶಿಗೆ ಹೋದಾಗ,ಕಾಯನ್ನೋ,ಫಲವನ್ನೋ ಬಿಡಬೇಕು ಎಂದು ನಮ್ಮ ಹಿರಿಯರು ಏಕೆ ಹೇಳುತ್ತಾರೆ? ಅದರ ಮರ್ಮವೇನು,ಅಂದರೆ,ರಹಸ್ಯವೇನು? ಹಾಗೆ,ಅಧ್ಯಯನ ಮಾಡಿದರೆ, ನಮ್ಮ ಶಾಸ್ತ್ರಗಳಲ್ಲಿ,ಅಂದರೆ,ವೇದ,ಉಪನಿಷತ್ತು,ಪುರಾಣ,ಸ್ಮೃತಿಗಳಲ್ಲಿ ಎಲ್ಲೂ ಈ ಸಂಗತಿ(ಅಂದರೆ,ಒಂದು ಕಾಯನ್ನು ಮತ್ತು ಒಂದು ಹಣ್ಣನ್ನು ಬಿಡಬೇಕು,ಎಂಬುದನ್ನು) ಹೇಳಿಲ್ಲವಲ್ಲ ಎಂಬುದನ್ನು ಕಂಡುಕೊಂಡೆವು ನಾವು. ಶಾಸ್ತ್ರವು ಹೇಳಿದ ವಿಷಯವನ್ನು,ಆಡುಭಾಷೆಯಲ್ಲಿ,ತಿರುಚಿ ಆದ ಪ್ರಮಾದ ನೋಡಿ ಹೀಗಿದೆ: ಕಾಶೀ ಕ್ಷೇತ್ರದ ವಿಷಯದಲ್ಲಿ ಶಾಸ್ತ್ರಗಳು ಹೇಳುತ್ತಿರುವುದು – ಕಾಶೀ ಕ್ಷೇತ್ರಕ್ಕೆ ಹೋಗಿ,ಗಂಗಾ ಸ್ನಾನ ಮಾಡಿ,ಅಲ್ಲಿ,ಅಂದರೆ,ಆ ಗಂಗೆಯಲ್ಲಿ,ಕಾಯಾಪೇಕ್ಷೆ ಮತ್ತು ಫಲಾಪೇಕ್ಷೆಯನ್ನು ತ್ಯಾಗ ಮಾಡಿ,ಅಂದರೆ,ತೊರೆದು,ನಂತರ,ಭಕ್ತಿಯಿಂದ ವಿಶ್ವನಾಥನ ದರುಶನ ಮಾಡಬೇಕು ಎಂದು. ಇಲ್ಲಿ ಕಾಯಾಪೇಕ್ಷೆ ಅಂತರ ತನ್ನ ಅಥವ ಇತರರ ದೇಹದ ಮೇಲಿನ ಅಪೇಕ್ಷೆ ಹಾಗು ಫಲಾಪೇಕ್ಷೆ ಅಂದರೆ,ಮಾಡಿದ ಕರ್ಮಂಗಳಿಂದ ಉಂಟಾಗುವ ಫಲಗಳ ಅಪೇಕ್ಷೆ ಬಿಡಬೇಕು ಎಂಬುದು ಶಾಸ್ತ್ರವಚನಾರ್ಥವು. ಇವೆರಡನ್ನೂ ಮಾಡಿದ ಕ್ಷಣವೇ,ಜೀವನ್ಮುಕ್ತಿಯು ದೊರೆಯುವುದು ನಿಶ್ಚಿತವಾಗುವುದು,ಆಗ ಕಾಶಿಯ ವಿಶ್ವನಾಥನ ದರುಶನದಿಂದ, ನಿಜಫಲವು (ಅಂದರೆ,ಮುಕ್ತಿಯೇ) ಸಿಗುವುದು ಎಂದರ್ಥವು.…














