Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಸರ್ಕಾರಿ ಪ್ರೌಢಶಾಲಾ ಶಿಕ್ಷಕರಿಗೆ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡುವ ಬಗ್ಗೆ ಸರ್ಕಾರಿ ಪ್ರೌಢಶಾಲಾ ಶಿಕ್ಷಕರ ತಾತ್ಕಾಲಿಕ ಜೇಷ್ಟತಾ ಪಟ್ಟಿಯನ್ನು ಇಲಾಖಾ ವೆಬ್ಸೈಟ್ https://schooleducation.karnataka.gov.in/86/teachers/kn ನ ಶಿಕ್ಷಕರ ಸೇವಾ ವಿವರಗಳಲ್ಲಿನ ಕ್ರ.ಸಂ 04 ರಲ್ಲಿ ಮತ್ತು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿ(ಆಡಳಿತ) ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಪ್ರಕಟಿಸಲಾಗಿದ್ದು, ಈ ಪಟ್ಟಿಗೆ ಸಂಬಂಧಿಸಿದಂತೆ ಯಾವುದೇ ಆಕ್ಷೆಗಳು ಇದ್ದಲ್ಲಿ ಸಲ್ಲಿಸಬಹುದು. ಕರಡು ತಾತ್ಕಾಲಿಕಾ ಜೇಷ್ಟತಾ ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳೇನಾದರೂ ಇದ್ದಲ್ಲಿ ಸಂಬಂಧಿಸಿದ ಶಿಕ್ಷಕರು ಸಮರ್ಥನೀಯ ಪೂರಕ ದಾಖಲೆಗಳೊಂದಿಗೆ ನಿಗದಿತ ನಮೂನೆಯಲ್ಲಿ ಮೇ 8 ರೊಳಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ನೇರವಾಗಿ ಸಲ್ಲಿಸಬಹುದೆಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು(ಆಡಳಿತ) ತಿಳಿಸಿದ್ದಾರೆ.
ಬೆಂಗಳೂರು: ದಕ್ಷಿಣ ಭಾರತ ಕುಸ್ತಿ ಸಂಘ [ಸೌತ್ ಇಂಡಿಯಾ ರ್ವೆಸಲ್ಲಿಂಗ್ ಅಸೋಸಿಯೇಷನ್]ಗೆ ಚುನಾವಣೆ ನಡೆದಿದ್ದು, 2025 – 29 ರ ಸಾಲಿಗೆ ಉಪಾಧ್ಯಕ್ಷರಾಗಿ ಕರ್ನಾಟಕ ರಾಜ್ಯದ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಈ ಮೂಲಕ ಕುಸ್ತಿ ಸಂಘಕ್ಕೆ ದಕ್ಷಿಣ ಭಾರತಕ್ಕೆ ಮೊದಲ ಬಾರಿಗೆ ಪ್ರಮುಖ ಪ್ರಾತಿನಿಧ್ಯೆ ದೊರೆತಿದೆ. ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿ ಅವರು ಭಾರತ ಕುಸ್ತಿ ಸಂಘದ ಜಂಟಿ ಕಾರ್ಯದರ್ಶಿ ಹಾಗೂ ರಾಜ್ಯ ಕುಸ್ತಿ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಂಘದ ಪೋಷಕರಾಗಿ ಆರ್.ಕೆ. ಪುರುಷೋತ್ತಮ್, ಅಧ್ಯಕ್ಷರಾಗಿ ಕೇರಳದ ವಿ.ಎನ್ ಪ್ರಸೂದ್ ,ತಮಿಳುನಾಡಿನ ಎಂ. ಲೋಗನಾಥನ್ ಪ್ರಧಾನ ಕಾರ್ಯದರ್ಶಿ, ಜಂಟಿ ಕಾರ್ಯದರ್ಶಿಗಳಾಗಿ ಕರ್ನಾಟಕ ರಾಜ್ಯದ ಜೆ. ಶ್ರೀನಿವಾಸ, ತೆಲಂಗಾಣದ ಅಹಮ್ಮದ್, ಖಜಾಂಚಿಯಾಗಿ ಪುದುಚೇರಿಯ ವಿನೋಥ್.ಕೆ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ತಮಿಳುನಾಡಿನ ಐ.ಸಿ. ಕೊಂಡೇಶ್ವರನ್, ಕೇರಳದ ಬಿ. ರಾಜಶೇಖರನ್ ನಾಯರ್ ಮತ್ತು ಆಂಧ್ರಪ್ರದೇಶದ ಭೂಷಣ್ ಆಯ್ಕೆಯಾಗಿದ್ದಾರೆ. ನೂತನ ಉಪಾಧ್ಯಕ್ಷ ಗುಣರಂಜನ್ ಶೆಟ್ಟಿ ಪ್ರತಿಕ್ರಿಯೆ ನೀಡಿ, ನಾಲ್ಕು ವರ್ಷದ ನಂತರ ಚುನಾವಣೆ ನಡೆಸಿದ್ದು, ಕರ್ನಾಟಕ ಎಲ್ಲಾ…
ಬೆಂಗಳೂರು: ನಗರದಲ್ಲಿ ಐಪಿಎಲ್ ಟಿಕೆಟ್ ಅಕ್ರಮವಾಗಿ ಮಾರಾಟ ಮಾಡುತ್ತಿದ್ದಂತ ನಾಲ್ವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಯಶವಂತಪುರ ರೈಲ್ವೆ ನಿಲ್ದಾಣದ ಬಳಿಯಲ್ಲಿ ಐಪಿಎಲ್ ಟಿಕೆಟ್ ಅಕ್ರಮವಾಗಿ ಮಾರಾಟ ಮಾಡುತ್ತಿದ್ದಂತ ನಾಲ್ವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಚರಣ್ ರಾಜ್, ಹರ್ಷವರ್ಧನ್ ಸಕ್ಲೇಚ, ವಿನಯ್, ವೆಂಕಟಸಾಯಿ ಎಂಬುದಾಗಿ ಗುರುತಿಸಲಾಗಿದೆ. ನಿನ್ನೆ ಬಂಧಿಸಿ 32 ಟಿಕೆಟ್, 1 ಲಕ್ಷ ನಗದು ಜಪ್ತಿ ಮಾಡಲಾಗಿತ್ತು. 1,200 ಬೆಲೆಯ ಟಿಕೆಟ್ 12 ಸಾವಿರ ರೂಪಾಯಿಗೆ ಚರಣ್ ಗೆ ಮಾರಾಟ ಮಾಡಲಾಗಿತ್ತು. 10,500 ರೂಪಾಯಿ ನೀಡಿ ಹರ್ಷವರ್ಧನ್ ನಿಂದ ಐಪಿಎಲ್ ಟಿಕೆಟ್ ಅನ್ನು ಚರಣ್ ಖರೀದಿಸಿದ್ದರು. ಈ ಕುರಿತಂತೆ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಳಿಕ ವಿನಯ್ ಹಾಗೂ ವೆಂಕಟಸಾಯಿ ಬಂಧಿಲಾಗಿತ್ತು. ಆರ್ ಸಿ ಬಿ, ಸಿ ಎಸ್ ಕೆ ಪಂದ್ಯದ ಟಿಕೆಟ್ ದುಪ್ಪಟ್ಟು ಬೆಲೆಗೆ ಮಾರಾಟ ಮಾಡುತ್ತಿದ್ದರು. ಈ ಮಾಹಿತಿ ಆಧರಿಸಿ ಇಂದು ದಾಳಿ ನಡೆಸಿ ನಾಲ್ವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. https://kannadanewsnow.com/kannada/blood-is-the-answer-to-blood-12-firs-lodged-after-suhass-murder/ https://kannadanewsnow.com/kannada/have-you-passed-2nd-puc-apply-for-this-fashion-design-degree-course/
ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಬಳಿಕ ಸೋಷಿಯಲ್ ಮೀಡಿಯಾದಲ್ಲಿ ತರಾವರಿ ಪ್ರಚೋದನಕಾರಿ ಪೋಸ್ಟ್ ಗಳು ವೈರಲ್ ಆಗಿದ್ದವು. ಹೀಗೆ ಸೋಷಿಯಲ್ ಮೀಡಿಯಾದಲ್ಲಿ ರಕ್ತಕ್ಕೆ ರಕ್ತವೇ ಉತ್ತರ ಎಂಬುದಾಗಿ ಪೋಸ್ಟ್ ಹಾಕಿದಂತ 12 ಮಂದಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಬಳಿಕ ಸೋಷಿಲ್ ಮೀಡಿಯಾಗಳ ಮೇಲೆ ಪೊಲೀಸರು ಹತ್ತಿನ ಕಣ್ಣಿಟ್ಟಿದ್ದರು. ಇನ್ಸ್ಟಾ ಗ್ರಾಂ, ಫೇಸ್ ಬುಕ್, ವಾಟ್ಸ್ ಆಪ್ ಗಳಲ್ಲಿನ ಸಂದೇಶ, ಪೋಸ್ಟ್ ಗಳ ಬಗ್ಗೆ ಗಮನ ಇರಿಸಲಾಗಿತ್ತು. ಈ ಸಾಮಾಜಿಕ ಮಾಧ್ಯಮಗಳಲ್ಲಿ ಮುಲ್ಕಿ ಉರ್ವಾ, ಮಂಗಳೂರು ಉತ್ತರ, ಬರ್ಕೆ, ಮಂಗಳೂರು ದಕ್ಷಿಣ, ಮೂಡಬಿದ್ರೆ, ಕಾವೂರು ಠಾಣೆ ವ್ಯಾಪ್ತಿಯಲ್ಲಿ ಶತ್ರು ಸಂಹಾರ ಶುರುವಾಗಿದೆ, ಪ್ರತಿರೋಧ ಅಪರಾಧವಲ್ಲ, ಸುಹಾಸ್ ಬಲಿದಾದ ವ್ಯರ್ಥವಾಗಲು ಬಿಡುವುದಿಲ್ಲ. ನಮ್ಮನ್ನು ಬೆಂಬಲಿಸಿ ಅಂತೆಲ್ಲ ಪೋಸ್ಟ್ ಮಾಡಿದವರ ವಿರುದ್ಧ 12 ಎಫ್ಐಆರ್ ದಾಖಲಾಗಿದೆ. https://kannadanewsnow.com/kannada/another-gruesome-murder-in-the-state-man-brutally-killed-while-walking-on-the-road/ https://kannadanewsnow.com/kannada/minister-ishwar-khandre-instructs-officials-to-protect-sheebi-forest-land-from-land-grabbers/
ಬೆಳಗಾವಿ: ಮಂಗಳೂರು ಬಳಿಕ ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಭೀಕರ ಮರ್ಡರ್ ನಡೆದಿದೆ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಂತ ವ್ಯಕ್ತಿಯನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಹಿಲ್ ಗಾರ್ಡ್ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಂತ ಗೋಕಾಕ್ ಗೊಂದಳಿ ಗಲ್ಲಿ ನಿವಾಸಿ ಪರಶುರಾಮ್(26) ಎಂಬಾತನನ್ನು ಕಾರಿನಲ್ಲಿ ಹಿಂಬಾಲಿಸಿ ಬಂದಂತ ದುಷ್ಕರ್ಮಿಗಳು ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಹಳೇ ವೈಷಮ್ಯದ ಹಿನ್ನಲೆಯಲ್ಲಿ ಪರಶುರಾಮ್ ಹತ್ಯೆ ಮಾಡಿರುವಂತ ಶಂಕೆ ವ್ಯಕ್ತವಾಗಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಗೋಕಾಕ್ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. https://kannadanewsnow.com/kannada/minister-ishwar-khandre-instructs-officials-to-protect-sheebi-forest-land-from-land-grabbers/ https://kannadanewsnow.com/kannada/have-you-passed-2nd-puc-apply-for-this-fashion-design-degree-course/
ನವದೆಹಲಿ: ಬಿಎಸ್ಎಫ್ ಕಾನ್ಸ್ಟೇಬಲ್ ಒಂದು ವಾರಕ್ಕೂ ಹೆಚ್ಚು ಕಾಲ ಪಾಕಿಸ್ತಾನದ ವಶದಲ್ಲಿರುವುದರಿಂದ ಪಾಕಿಸ್ತಾನಿ ರೇಂಜರ್ ಒಬ್ಬರನ್ನು ರಾಜಸ್ಥಾನದಲ್ಲಿ ಬಂಧಿಸಲಾಗಿದೆ ಮತ್ತು ಅವರ ಭವಿಷ್ಯವು ಅನಿಶ್ಚಿತವಾಗಿ ಮುಂದುವರೆದಿದೆ ಎಂದು ಮೂಲಗಳು ಶನಿವಾರ ತಿಳಿಸಿವೆ. ಕಳೆದ ವಾರ, ಆಕಸ್ಮಿಕವಾಗಿ ಗಡಿ ದಾಟಿ ಪಾಕಿಸ್ತಾನಕ್ಕೆ ಪ್ರವೇಶಿಸಿದ ಬಿಎಸ್ಎಫ್ ಕಾನ್ಸ್ಟೇಬಲ್ ಪಿ.ಕೆ.ಸಾಹು ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿತ್ತು. ಅವರ ಸುರಕ್ಷಿತ ಬಿಡುಗಡೆಗೆ ಸಂಬಂಧಿಸಿದಂತೆ ಎಂಟು ದಿನಗಳಿಂದ ಹಲವಾರು ಸುತ್ತಿನ ಮಾತುಕತೆಗಳು ನಡೆದಿವೆ. ಆದಾಗ್ಯೂ, ಅವು ಇಲ್ಲಿಯವರೆಗೆ ಯಾವುದೇ ಫಲಿತಾಂಶಗಳನ್ನು ನೀಡಿಲ್ಲ. ಬಿಎಸ್ಎಫ್ ಅಧಿಕಾರಿಗಳಿಗೆ ಪಾಕಿಸ್ತಾನದಿಂದ ಪದೇ ಪದೇ ಅದೇ ಉತ್ತರವನ್ನು ನೀಡಲಾಗಿದೆ. ನಾವು ಉನ್ನತ ಅಧಿಕಾರಿಗಳ ನಿರ್ದೇಶನಗಳಿಗಾಗಿ ಕಾಯುತ್ತಿದ್ದೇವೆ ಎಂಬುದಾಗಿತ್ತು. ಏಪ್ರಿಲ್ 22 ರಂದು ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನ ಗಡಿಯಲ್ಲಿ ಉದ್ವಿಗ್ನತೆ ಹೆಚ್ಚಾದ ಹಿನ್ನೆಲೆಯಲ್ಲಿ ಈ ಬೆಳವಣಿಗೆ ಸಂಭವಿಸಿದೆ. ಸೈನಿಕರು ಅಥವಾ ನಾಗರಿಕರು ಆಕಸ್ಮಿಕವಾಗಿ ಗಡಿ ದಾಟುವುದು ಅಸಾಮಾನ್ಯವೇನಲ್ಲ, ಮತ್ತು ಅವುಗಳನ್ನು ಸಾಮಾನ್ಯವಾಗಿ ಒಪ್ಪಿತ ಮಿಲಿಟರಿ ಕಾರ್ಯವಿಧಾನಗಳ ಮೂಲಕ ಪರಿಹರಿಸಲಾಗುತ್ತದೆ. ಅಧಿಕಾರಿಗಳ…
ಬೆಂಗಳೂರು: ಕನ್ನಡಿಗರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಕೆಂಗಣ್ಣಿಗೆ ಗುರಿಯಾಗಿದ್ದಂತ ಖ್ಯಾತ ಗಾಯಕ ಸೋನು ನಿಗಮ್ ಅವರು ಇಷ್ಟಾದ್ರೂ ಕನ್ನಡಿಗರ ಕ್ಷಮೆಯನ್ನು ಮಾತ್ರ ಕೇಳಿಲ್ಲ. ಬದಲಾಗಿ ತನ್ನ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಈ ಬಗ್ಗೆ ವೀಡಿಯೋ ರಿಲೀಸ್ ಮಾಡಿರುವಂತ ಅವರು, ಕನ್ನಡ ಹಾಡು ಅನ್ನೋದಕ್ಕೂ ಬೆದರಿಕೆ ಹಾಕೋದಕ್ಕೂ ವ್ಯತ್ಯಾಸವಿದೆ. ಅವರು ನನಗೆ ಬೆದರಿಕೆ ಒಡ್ಡಿದ್ದರು ಎಂಬುದಾಗಿ ಹೇಳಿದ್ದಾರೆ. ಎಲ್ಲಾ ಕಡೆಯೂ ಇಂಥ ನಾಲ್ಕು ಐದು ಕೆಟ್ಟ ಮಂದಿ ಇದ್ದೇ ಇರ್ತಾರೆ. ಅವರು ಬೆದರಿಕೆ ಒಡ್ಡುವ ರೀತಿಯಲ್ಲಿ ಹಾಡುವಂತೆ ಕೇಳಿದರು. ಕಾಶ್ಮೀರದಲ್ಲಿ ಉಗ್ರರು ಭಾಷೆ ಕೇಳಲಿಲ್ಲ, ಜಾತಿ ಕೇಳಿ ಕೊಂದರು. ಹಾಗಾಗಿ ನಾನು ಪಹಲ್ಗಾಮ್ ಘಟನೆಯನ್ನು ಉದಾಹರಿಸಿದೆ ಎಂಬುದಾಗಿ ವೀಡಿಯೋ ಮೂಲಕ ಸ್ಪಷ್ಟನೆಯನ್ನು ಗಾಯಕ ಸೋನು ನಿಗಮ್ ತಿಳಿಸಿದ್ದಾರೆ. https://kannadanewsnow.com/kannada/minister-ishwar-khandre-instructs-officials-to-protect-sheebi-forest-land-from-land-grabbers/ https://kannadanewsnow.com/kannada/have-you-passed-2nd-puc-apply-for-this-fashion-design-degree-course/
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೋರಮಂಗಲ ಕಣಿವೆ ವಿಭಾಗದ ಕಂಠೀರವ ಸ್ಟೇಡಿಯಂ ಹತ್ತಿರ ರಾಜಕಾಲುವೆಯ ವಾರ್ಷಿಕ ನಿರ್ವಹಣಾ ಕಾಮಗಾರಿಯನ್ನು ಸಮರ್ಪಕವಾಗಿ ನಿರ್ವಹಣೆ ಮಾಡದೇ ಇರುವ ಗುತ್ತಿಗೆದಾರರಾದ ವಿ.ವಾಸು ರವರಿಗೆ 50,000 ರೂ. ದಂಡ ವಿಧಿಸಲಾಗಿದೆ. ಕಾರ್ಯಪಾಲಕ ಅಭಿಯಂತರರು, ಬೃಹತ್ ನೀರುಗಾಲುವೆ-ಕೋರಮಂಗಲ ಕಣಿವೆ ವಿಭಾಗ ರವರ ಅಡಿಯಲ್ಲಿ ಗುತ್ತಿಗೆದಾರರಾದ ವಿ.ವಾಸು ಎಂಬುವವರು ಕಂಠೀರವ ಸ್ಟೇಡಿಯಂ ಹತ್ತಿರ ರಾಜಕಾಲುವೆಯ ವಾರ್ಷಿಕ ನಿರ್ವಹಣಾ ಕಾಮಗಾರಿಯನ್ನು ಸಮರ್ಪಕವಾಗಿ ನಿರ್ವಹಣೆ ಮಾಡಿರುವುದಿಲ್ಲ. ಮುಂದುವರಿದು, ಸಾರ್ವಜನಿಕರಿಗೆ ಅನಾನುಕೂಲ ಉಂಟು ಮಾಡಿರುವ ಹಿನ್ನಲೆಯಲ್ಲಿ ಗುತ್ತಿಗೆ ಕರಾರಿನಂತೆ ಪರಿಶೋಧ 41(1) ಮತ್ತು 41(2) ರಂತೆ ಮೊದಲ ಕಂತಾಗಿ ರೂ.50,000/-ಗಳ ದಂಡವನ್ನು ವಿಧಿಸಲಾಗಿರುತ್ತದೆ. https://kannadanewsnow.com/kannada/kerala-govt-always-ready-for-development-of-kannadigas-minister-chaluvarayaswamy/ https://kannadanewsnow.com/kannada/home-minister-g-parameshwara-to-set-up-task-force-to-prevent-communal-violence-in-dakshina-kannada-udupi-districts/
ಕಾಸರಗೋಡು : ಕಾಸರಗೋಡು ಜಿಲ್ಲೆ ಆಡಳಿತದ ದೃಷ್ಟಿಯಿಂದ ಕೇರಳ ರಾಜ್ಯಕ್ಕೆ ಒಳಪಟ್ಟರೂ ಸಹ ನಮ್ಮ ರಾಜ್ಯದ ಕನ್ನಡಿಗರ ಮನಸ್ಸು, ಹೃದಯದಲ್ಲಿ ಸ್ಥಾನ ಪಡೆದಿದೆ. ಈ ನಿಟ್ಟಿನಲ್ಲಿ ಕಾಸರಗೋಡಿನ ಕನ್ನಡಿಗರ ಹಾಗೂ ಕನ್ನಡ ಪತ್ರಕರ್ತರ ಕ್ಷೇಯೋಭಿವೃದ್ದಿಗೆ ಸದಾ ರಾಜ್ಯ ಸರ್ಕಾರ ಬದ್ಧವಾಗಿರುತ್ತದೆ ಎಂದು ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಹೇಳಿದರು. ಶನಿವಾರದಂದು ಇಲ್ಲಿನ ಸೀತಾಂಗೋಳಿಯಲ್ಲಿ ನಡೆದ ಕೆ.ಯು.ಡಬ್ಲೂಜೆ ದತ್ತಿನಿಧಿ ಪ್ರಶಸ್ತಿ ಪ್ರದಾನ ಹಾಗೂ ಕನ್ನಡ ಸಂಸ್ಕೃತಿ ಉತ್ಸವ ಉದ್ಘಾಟಿಸಿ ಮಾತನಾಡಿದರು. ನಮ್ಮ ಸರ್ಕಾರ ಯಾವಾಗಲೂ ಗಡಿನಾಡು ಕನ್ನಡಿಗರ ಹಾಗೂ ಪತ್ರಕರ್ತರ ಹಿತ ಕಾಪಾಡಲು ಸಿದ್ದವಾಗಿದೆ. ಗಡಿ ಪ್ರದೇಶದ ಕನ್ನಡಿಗರ ರಕ್ಷಣೆ, ಅಭಿವೃದ್ಧಿ, ಶಿಕ್ಷಣಕ್ಕೆ ಹೆಚ್ಚು ಒತ್ತುಕೊಡಲು ಆದ್ಯತೆ ನೀಡಲಾಗುವುದು ಎಂದರು. ಕಾಸರಗೋಡಿನ ಪತ್ರಕರ್ತರು ಸೇರಿದಂತೆ ಕನ್ನಡಿಗರ ಯಾವುದೇ ನೆರವು ಬೇಕಾಗಿದ್ದಲ್ಲಿ ತಕ್ಷಣವೇ ಒದಗಿಸುವ ಕೆಲಸ ಸರ್ಕಾರ ಮಾಡ್ತಾ ಇದ್ದು, ಹಂತ ಹಂತವಾಗಿ ಅನುದಾನವನ್ನು ಸಹ ಸರ್ಕಾರದಿಂದ ನೀಡಲಾಗುವುದು ಎಂದರು. ನಮ್ಮ ರಾಜ್ಯ ಸೇರಿದಂತೆ ಬೇರೆ, ಬೇರೆ ರಾಜ್ಯಗಳ ಕನ್ನಡಿಗ ಪತ್ರಕರ್ತರನ್ನು ಒಗ್ಗೂಡಿಸುವ ಕೆಲಸವನ್ನು…
ಬೆಂಗಳೂರು: ಖ್ಯಾತ ಗಾಯಕ ಸೋನು ನಿಗಮ್ ಕನ್ನಡಿಗರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ಕಾನೂನಿನ ಕುಣಿಕೆಗೆ ಸಿಲುಕಿದ್ದಾರೆ. ಇದರ ನಡುವೆ ತಮ್ಮ ಮೊದಲ ಹೇಳಿಕೆಯಲ್ಲಿ ತಮ್ಮ ಕಾರ್ಯಕ್ರಮದ ವೇಳೆ ಕನ್ನಡ ಹಾಡು ಹಾಡುವಂತೆ ಒತ್ತಾಯಿಸಿದರು. ಅದಕ್ಕೆ ಪಹಲ್ಗಾಮ್ ಹೋಲಿಕೆ ಕೊಟ್ಟಿದ್ದಾಗಿ ತಿಳಿಸಿದ್ದಾರೆ. ಇಂತ ಹೇಳಿಕೆ ನೀಡಿದಂತ ಸೋನು ನಿಗಮ್ ವಿರುದ್ಧ ಕನ್ನಡದ ಖ್ಯಾತ ಚಿತ್ರ ಸಾಹಿತಿ ಕವಿರಾಜ್ ಕಿಡಿಕಾರಿದ್ದಾರೆ. ತಮ್ಮ ಫೇಸ್ ಬುಕ್ ಮುಖ ಪುಟದಲ್ಲಿ ಬರೆದುಕೊಂಡಿರುವಂತ ಚಿತ್ರಸಾಹಿತಿ ಕವಿರಾಜ್ ಅವರು, ಸೋನು ನಿಗಮ್ ಅವರ ವೀಡಿಯೊ ಕ್ಲಿಪ್ ಬಗ್ಗೆ ನನಗೆ ಸ್ವಲ್ಪ ಅನುಮಾನ ಇತ್ತು. ಅದು conclusive ಆಗಿರಲಿಲ್ಲ. ಹಾಗಾಗಿ ನಾನು ಯಾವತ್ತೂ ವಿಧಿಸಿಕೊಂಡಿರುವ ನಿಯಮದಂತೆ ಸರಿಯಾದ ಮಾಹಿತಿ ಬರೋವರೆಗೂ ಅವಸರಕ್ಕೆ ಬಿದ್ದು ಕಾಮೆಂಟ್ ಮಾಡಿರಲಿಲ್ಲ ಎಂದಿದ್ದಾರೆ. ಈಗಷ್ಟೇ ಸೋನುನಿಗಮ್ ಸ್ಪಷ್ಟೀಕರಣ ನೀಡಿದ ವೀಡಿಯೊ ನೋಡಿದೆ. ಅಲ್ಲಿಗೆ ಕನ್ನಡ ಹಾಡಿಗೆ ಬೇಡಿಕೆ ಇಟ್ಟಿದ್ದನ್ನು ಪೆಹಲ್ಗಾಮ್ ಉಗ್ರಗಾಮಿಗಳ ದಾಳಿಯೊಂದಿಗೆ ಸಮೀಕರಿಸಿದ್ದು ಅವರ ಮೂರ್ಖತನ ಮತ್ತು ದುರಹಂಕಾರವನ್ನು ಇನ್ನಷ್ಟು ಜಾಹೀರು ಮಾಡಿದೆ. ಹಿಂದಿ ಚಿತ್ರೋದ್ಯಮದಿಂದ ಅಘೋಷಿತ…