Author: kannadanewsnow09

ಬೆಂಗಳೂರು: ನಗರದಲ್ಲಿ ಬಿಲ್ಡರ್ ಗಳಿಂದ ಫ್ಲಾಟ್ ಖರೀದಿಸುವವರಿಗೆ ಮೋಸ ಮಾಡೋದು ಅಲ್ಲಲ್ಲಿ ನಡೆಯುತ್ತಿದೆ. ಬರೋಬ್ಬರಿ 1.2 ಕೋಟಿ ಮೌಲ್ಯದ ಒಂದೇ ಫ್ಲಾಟ್ ಅನ್ನು ಹಲವರಿಗೆ ಬಿಲ್ಡರ್ ಮಾರಾಟ ಮಾಡಿದ್ದಾರೆ. ಈ ಕಾರಣದಿಂದ ಎಫ್ಐಆರ್ ಕೂಡ ದಾಖಲಾಗಿದೆ. ಬೆಂಗಳೂರಿನ ಬನಶಂಕರಿಯಲ್ಲಿನ 1.2 ಕೋಟಿ ಮೌಲ್ಯದ ಫ್ಲಾಟ್ ಅನ್ನು ವಿದ್ಯಾಸಾಗರ್ ಎಂಬುವರು ಖರೀದಿಸಿದ್ದರು. ಇವರಿಗಷ್ಟೇ ಅಲ್ಲದೇ ಅದೇ ಫ್ಲಾಟ್ ಅನ್ನು ಬಿಲ್ಡರ್ ಐವರಿಗೆ ಮಾರಾಟ ಮಾಡಿದ್ದಾರೆ. ವಿದ್ಯಾಸಾಗರ್ ಅವರು ಬ್ಯಾಂಕ್ ಗೆ ತೆರಳಿ ತಾನು ಖರೀದಿಸಿ ಫ್ಲಾಟ್ ಮೇಲೆ ಲೋನ್ ಪಡೆಯೋದಕ್ಕೆ ಹೋದಾಗ ಇತರರಿಗೂ ಅದೇ ಫ್ಲಾಟ್ ಅನ್ನು ಬಿಲ್ಡರ್ ಮಾರಾಟ ಮಾಡಿರೋದು ಬೆಳಕಿಗೆ ಬಂದಿದೆ. ಈ ಹಿನ್ನಲೆಯಲ್ಲಿ ವಿದ್ಯಾಸಾಗರ್ ಅವರು ಬನಶಂಕರಿ ಪೊಲೀಸ್ ಠಾಣೆಗೆ ತೆರಳಿ ರಾಜರಾಜೇಶ್ವರಿ ಬಿಲ್ಡ್ ಕಾನ್ ಪ್ರೈ.ಲಿ, ನೆಟ್ಕಲಪ್ಪ ಸರ್ಕಲ್ ಬಸವನಗುಡಿಯ ಬಿಲ್ಡರ್ ಗಳಾಗಿರುವ ರಂಜಿತ್ ಶಾ, ಮಿತೇಶ್ ಶಾ ಹಾಗೂ ಹರೀಶ್ ಮೇಲೆ ದೂರು ನೀಡಿದ್ದಾರೆ. ಈ ದೂರು ಆಧರಿಸಿ ಎಫ್ಐಆರ್ ದಾಖಲಾಗಿದೆ. ಅಂದಹಾಗೇ 2023ರಿಂದ ಬನಶಂಕರಿಯ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಮಾನಸಿಕ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಟೆಲಿ ಮನಸ್ ಎನ್ನುವಂತ ಸಹಾಯವಾಣಿಯನ್ನು ಆರಂಭಿಸಿದೆ. ಈ ಸಹಾಯವಾಣಿಗೆ ಕರೆ ಮಾಡಿದರೇ ನಿಮ್ಮ ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಈ ಬಗ್ಗೆ ಕಾರ್ಮಿಕ ಇಲಾಖೆಯಿಂದ ಮಾಹಿತಿ ಹಂಚಿಕೊಂಡಿದ್ದು, ಟೆಲಿ ಮನಸ್ ಸಹಾಯವಾಣಿಗೆ ಕರೆ ಮಾಡುವ ಮೂಲಕ ನಿಮ್ಮ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳಬಹುದು. ಈ ಸಹಾಯವಾಣಿಯು ದಿನದ 24/7 ಗಂಟೆಗಳ ಕಾಲ ಕಾರ್ಯನಿರ್ವಹಿಸುತ್ತದೆ ಎಂದಿದೆ. ನೆರವು ಪಡೆಯಲು ಇಚ್ಛಿಸುವವರು ಟೆಲಿ ಮನಸ್ ಸಹಾಯವಾಣಿ 14416 ಅಥವಾ 1800-89-14416 ಕ್ಕೆ ಕರೆ ಮಾಡಿ ಎಂಬುದಾಗಿ ತಿಳಿಸಿದೆ. ಯಾವೆಲ್ಲ ಸಮಸ್ಯೆಗೆ ಪರಿಹಾರ? ಪರೀಕ್ಷೆಯ ಒತ್ತಡ ಕೌಟುಂಬಿಕ ಸಮಸ್ಯೆ ಮಾದಕವಸ್ತುಗಳ ವ್ಯಸನ ಜ್ಞಾಪಕ ಶಕ್ತಿ ಸಮಸ್ಯೆ ಮಾನಸಿಕ ಒತ್ತಡ https://kannadanewsnow.com/kannada/bpl-apl-cardholders-note-january-31-is-the-last-date-for-e-kyc-otherwise-the-ration-will-not-come/ https://kannadanewsnow.com/kannada/state-ii-puc-students-notice-provision-for-correction-of-wrong-in-mark-sheet/

Read More

ನವದೆಹಲಿ: ಚಾಂಪಿಯನ್ಸ್ ಟ್ರೋಫಿಗೆ ಭಾರತದ ಬಲಿಷ್ಠ ತಂಡವನ್ನು ಪ್ರಕಟಿಸಲಾಗಿದೆ. ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡದಲ್ಲಿ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ ಸ್ಥಾನ ಪಡೆದಿದ್ದಾರೆ. ಹೀಗಿದೆ ಚಾಂಪಿಯನ್ಸ್ ಟ್ರೋಫಿಯ ಭಾರತದ ಆಟಗಾರರ ಬಲಿಷ್ಠ ತಂಡದ ಪಟ್ಟಿ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಅರ್ಷ್ದೀಪ್ ಸಿಂಗ್, ಯಶಸ್ವಿ ಜೈಸ್ವಾಲ್, ರಿಷಭ್ ಪಂತ್ ಮತ್ತು ರವೀಂದ್ರ ಜಡೇಜಾ. https://twitter.com/ANI/status/1880547917813133727

Read More

ಬೆಂಗಳೂರು: ನಗರದಲ್ಲಿ ಫೆಬ್ರವರಿ.1ರಿಂದ 17ರವರೆಗೆ ಏರೋ ಇಂಡಿಯಾ -2025ರ ಪ್ರದರ್ಶನ ನಡೆಯಲಿದೆ. ಈ ಹಿನ್ನಲೆಯಲ್ಲಿ ಯಲಹಂಕ ಸುತ್ತಾಮುತ್ತಲಿನ ಪ್ರದೇಶದಲ್ಲಿ ಮಾಂಸ ಮಾರಾಟವನ್ನು ನಿಷೇಧ ಮಾಡಿ ಬಿಬಿಎಂಪಿ ಆದೇಶಿಸಿದೆ. ಈ ಸಂಬಂಧ ಬಿಬಿಎಂಪಿಯ ಯಲಹಂಕದ ಜಂಟಿ ವಲಯ ಆಯುಕ್ತ ಮೊಹದ್ ನಯೀಮ್ ಮೊಯಿನ್ ಅವರು ಆದೇಶ ಹೊರಡಿಸಿದ್ದಾರೆ. ಅದರಲ್ಲಿ ಜನವರಿ 23ರಿಂದ ಫೆಬ್ರವರಿ.17ರವರೆಗೆ ಯಲಹಂಕದ ವಾಯುನೆಲೆಯಿಂದ 13 ಕಿಲೋಮೀಟರ್ ವ್ಯಾಪ್ತಿಯಲ್ಲಿ ಮಾಂಸ ಮಾರಾಟವನ್ನು ಮಾಡದಂತೆ ಸೂಚಿಸಿದ್ದಾರೆ. ಎಲ್ಲಾ ಮಾಂಸ ಮಾರಾಟದ ಉದ್ದಿಮೆಗಳನ್ನು ಮುಚ್ಚುವಂತೆಯೂ ಸೂಚಿಸಿರುವಂತ ಅವರು, ಹೋಟೆಲ್ ಮತ್ತು ಡಾಬಾಗಳಲ್ಲಿ ಮಾಂಸಹಾರ ತಯಾರಿಕೆ, ಮಾರಾಟವನ್ನು ನಿಷೇಧಿಸಿದ್ದಾರೆ. ಒಂದು ವೇಳೆ ಈ ನಿಯಮ ಮೀರಿದ್ರೇ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. https://kannadanewsnow.com/kannada/aero-show-from-jan-23-to-feb-17-crane-height-to-be-reduced-in-and-around-yelahanka/ https://kannadanewsnow.com/kannada/bpl-apl-cardholders-note-january-31-is-the-last-date-for-e-kyc-otherwise-the-ration-will-not-come/

Read More

ಕೋಲ್ಕತ್ತಾ: ಕಳೆದ ವರ್ಷ ಕೋಲ್ಕತಾದ ಆರ್ ಜಿ ಕಾರ್ ಆಸ್ಪತ್ರೆಯಲ್ಲಿ 31 ವರ್ಷದ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಆರೋಪಿ ಸಂಜೋಯ್ ರಾಯ್ ದೋಷಿ ಎಂದು ಸಾಬೀತಾಗಿದೆ. ಕಳೆದ ವರ್ಷ ಕೋಲ್ಕತ್ತಾದ ಆರ್ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ತರಬೇತಿ ವೈದ್ಯರ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ ನಾಗರಿಕ ಸ್ವಯಂಸೇವಕನನ್ನು ಸಿಬಿಐ ನ್ಯಾಯಾಲಯ ಶನಿವಾರ ದೋಷಿ ಎಂದು ಘೋಷಿಸಿದೆ. ಕೋಲ್ಕತಾ ಪೊಲೀಸರ ನಾಗರಿಕ ಸ್ವಯಂಸೇವಕ ಸಂಜಯ್ ರಾಯ್ ಅವರನ್ನು ಆಗಸ್ಟ್ 9 ರಂದು ಭೀಕರ ಘಟನೆ ನಡೆದ ಒಂದು ದಿನದ ನಂತರ ಬಂಧಿಸಲಾಯಿತು ಮತ್ತು ಅತ್ಯಾಚಾರ ಮತ್ತು ಕೊಲೆ ಆರೋಪವನ್ನು ಹೊರಿಸಲಾಯಿತು. “ನಿಮಗೆ ಶಿಕ್ಷೆಯಾಗಬೇಕು” ಎಂದು ನ್ಯಾಯಾಧೀಶರು ಹೇಳಿದರು. ಶಿಕ್ಷೆಯ ಪ್ರಮಾಣವನ್ನು ನ್ಯಾಯಾಲಯ ಸೋಮವಾರ ಪ್ರಕಟಿಸಲಿದೆ. https://kannadanewsnow.com/kannada/aero-show-from-jan-23-to-feb-17-crane-height-to-be-reduced-in-and-around-yelahanka/ https://kannadanewsnow.com/kannada/bpl-apl-cardholders-note-january-31-is-the-last-date-for-e-kyc-otherwise-the-ration-will-not-come/

Read More

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಯಲಹಂಕ ವಲಯ ವ್ಯಾಪ್ತಿಯ ವಾಯುಸೇನಾ ನೆಲೆ(Air Force Station)ಯಲ್ಲಿ ದಿನಾಂಕ: 01.02.2025 ರಿಂದ 14.02.2025 ರವರೆಗೆ ಅಂತರಾಷ್ಟ್ರೀಯ ಮಟ್ಟದ ‘ಏರ್ ಇಂಡಿಯಾ-2025(AERO INDIA) ನಡೆಯಲಿದೆ. ಏರ್ ಶೋ-2025 ನಡೆಯುತ್ತಿರುವ ಪ್ರಯುಕ್ತ ಯಲಹಂಕ ವಾಯುಸೇನಾ ನೆಲೆಯಿಂದ 10.00 ಕಿ.ಮೀ ಅಂತರದಲ್ಲಿ ನಿರ್ಮಾಣ ಹಂತದಲ್ಲಿರುವ ಬೃಹತ್ ಕಟ್ಟಡಗಳಲ್ಲಿ ಉಪಯೋಗಿಸುವ ಕ್ರೇನ್‌ಗಳ ಎತ್ತರವನ್ನು ದಿನಾಂಕ: 01.02.2025 ರಿಂದ 14.02.2025 ರವರೆಗೆ ತಗ್ಗಿಸಲು ಹಾಗೂ ಕ್ರೇನ್ ಚಟುವಟಿಕೆಯನ್ನು ಸ್ಥಗಿತಗೊಳಿಸಲು ಬಹುಮಹಡಿ ಕಟ್ಟಡಗಳ ಸಂಸ್ಥೆಗಳು/ಅಭಿವೃದ್ಧಿದಾರರಿಗೆ ಈ ಮೂಲಕ ತಿಳಿಯಪಡಿಸಿದೆ. ಮುಂದುವರಿದು, ವಾಯುಸೇನಾ ನೆಲೆಯಿಂದ 10.00 ಕಿ.ಮೀ ಅಂತರದಲ್ಲಿ ನಿರ್ಮಾಣ ಹಂತದಲ್ಲಿರುವ ಎಲ್ಲಾ ಬೃಹತ್ ಕಟ್ಟಡಗಳು, ಮೇಲಿನ ನಿಯಮಗಳನ್ನು ಉಲ್ಲಂಘಿಸಿದಲ್ಲಿ ಬಿಬಿಎಂಪಿ ಕಾಯ್ದೆ 2020 ಮತ್ತು ಭಾರತೀಯ ಏರ್‌ಕ್ರಾಪ್ಟ್ 1937ರ ರೂಲ್ 91 ರೀತ್ಯಾ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ನಗರ ಯೋಜನೆ-ಉತ್ತರ ವಿಭಾಗದ ಜಂಟಿ ನಿರ್ದೇಶಕರು ತಿಳಿಸಿರುತ್ತಾರೆ. https://kannadanewsnow.com/kannada/law-and-order-situation-in-the-state-has-deteriorated-there-is-no-one-to-protect-them-r-ashoka/ https://kannadanewsnow.com/kannada/bpl-apl-cardholders-note-january-31-is-the-last-date-for-e-kyc-otherwise-the-ration-will-not-come/

Read More

ಬೆಂಗಳೂರು: ಕರ್ನಾಟಕ ದರೋಡೆ ರಾಜ್ಯವಾಗಿ ಬದಲಾಗಿದ್ದು, ಜನರು ಆತಂಕದಲ್ಲಿ ಬದುಕುತ್ತಿದ್ದಾರೆ. ಜನರ ರಕ್ಷಣೆಯನ್ನು ಮಾಡುವವರೇ ಇಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೀದರ್‌ನಲ್ಲಿ ಬ್ಯಾಂಕ್‌ನ ಹಣದ ದರೋಡೆ ಹಾಗೂ ಸಿಬ್ಬಂದಿ ಕೊಲೆ ನಡೆದಿದೆ. ಮಂಗಳೂರಿನಲ್ಲಿ ಹಾಲಿವುಡ್‌ ಸಿನಿಮಾ ಶೈಲಿಯಲ್ಲಿ 15 ಕೋಟಿ ರೂ. ಬ್ಯಾಂಕ್‌ ಹಣ ಲೂಟಿಯಾಗಿದೆ. ರಾಜ್ಯದ ಪೊಲೀಸರ ಬಗ್ಗೆ ಯಾರಿಗೂ ಭಯವಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪೊಲೀಸ್‌ ಅಧಿಕಾರಿಗಳ ಮೇಲೆ ಎಷ್ಟು ಹಿಡಿತ ಇದೆ ಎಂದು ಇದರಿಂದ ತಿಳಿಯುತ್ತದೆ. ರಾಜ್ಯದ ಕಾನೂನು ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎಂದು ಗೊತ್ತಾಗಿದೆ ಎಂದರು. ಬೇರೆ ರಾಜ್ಯಗಳಿಂದ ಕಳ್ಳರು ಬಂದು ದರೋಡೆ ಮಾಡಿಕೊಂಡು ಬಸ್ಸು, ರೈಲಿನಲ್ಲಿ ಹೋಗುತ್ತಿದ್ದಾರೆ. ಜನರು ಅವರ ರಕ್ಷಣೆಯನ್ನು ಅವರೇ ಮಾಡಿಕೊಳ್ಳುವ ಪರಿಸ್ಥಿತಿ ಬಂದಿದೆ. ಪೊಲೀಸರ ಕೈಯಲ್ಲಿ ಪಿಸ್ತೂಲ್‌ ಇಲ್ಲ. ಆದರೆ ದರೋಡೆ ಮಾಡುವವರ ಕೈಯಲ್ಲಿ ಆಧುನಿಕ ಶಸ್ತ್ರಾಸ್ತ್ರಗಳಿವೆ ಎಂದರು. ಲವ್‌ ಜಿಹಾದ್‌, ಕೋಮುಗಲಭೆ, ಹಸುಗಳ ಕೆಚ್ಚಲು ಕತ್ತರಿಸಿದ್ದು ಮೊದಲಾದ ಘಟನೆಗಳ ವಿರುದ್ಧ ಕಠಿಣ…

Read More

ಬಳ್ಳಾರಿ: ಜಿಲ್ಲೆಯ ಎಲ್ಲಾ ಪಡಿತರ ಚೀಟಿದಾರರು ತಮ್ಮ ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಫಲಾನುಭವಿಗಳು ಮ್ಯಾಪಿಂಗ್ ಮಾಡಿಸಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರಾದ ಸಕೀನ ಅವರು ತಿಳಿಸಿದ್ದಾರೆ. ಆರ್ಥಿಕವಾಗಿ ದುರ್ಬಲರಿರುವ ಕುಟುಂಬಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ನೀಡುತ್ತಿರುವ ಬಿಪಿಎಲ್ ಪಡಿತರವನ್ನು ಆಹಾರ ಭದ್ರತಾ ಕಾಯ್ದೆ ನಿಯಮಗಳನ್ನು ಪಾಲಿಸುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಪಡಿತರ ಚೀಟಿದಾರರು ಕಡ್ಡಾಯವಾಗಿ ತಮ್ಮ ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಫಲಾನುಭವಿಗಳ ಮ್ಯಾಪಿಂಗ್ ಕಾರ್ಯ ಚಾಲ್ತಿಯಲ್ಲಿದ್ದು, ಜಾತಿವಾರು ಮ್ಯಾಪಿಂಗ್ ಮಾಡಿಸಬೇಕು. ಜಿಲ್ಲೆಯಲ್ಲಿ ಬಿಪಿಎಲ್ ಹಾಗೂ ಎಪಿಎಲ್ ಪಡಿತರ ಚೀಟಿದಾರರು ಈಗಾಗಲೇ ಕುಟುಂಬ ಪಡಿತರ ಚೀಟಿಯಲ್ಲಿನ ಎಲ್ಲಾ ಸದಸ್ಯರು ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿ ಮಟ್ಟದಲ್ಲಿಯೇ ಕುಟುಂಬದ ಎಲ್ಲಾ ಸದಸ್ಯರು ಕಡ್ಡಾಯವಾಗಿ ತಮ್ಮ ಬೆರಳಚ್ಚು ನೀಡಿ (ಇ-ಕೆವೈಸಿ) ನವೀಕರಿಸಿಕೊಳ್ಳಬೇಕು. ಇ-ಕೈವೈಸಿ ಆಗದ ಮತ್ತು ಪರಿಶಿಷ್ಠ ಜಾತಿ, ಪರಿಶಿಷ್ಠ…

Read More

ಬೆಂಗಳೂರು: ರಾಜ್ಯದ ಕೆಲ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಅಂಕಪಟ್ಟಿಯಲ್ಲಿ ತಪ್ಪುಗಳಾಗಿರುತ್ತವೆ. ಆ ತಪ್ಪುಗಳನ್ನು ಸರಿ ಪಡಿಸೋದು ಹೇಗೆ ಎಂಬುದು ಅನೇಕ ವಿದ್ಯಾರ್ಥಿಗಳಿಗೆ ತಿಳಿದಿರೋದಿಲ್ಲ. ಅಂತವರಿಗೆ ಇಲಾಖೆಯಿಂದಲೇ ತಿದ್ದುಪಡಿಗೆ ಆದೇಶ ಮಾಡಿದೆ. ಜಸ್ಟ್ ನೀವು ಈ ಕೆಳಕಂಡ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಿದರೇ ತಪ್ಪು ತಿದ್ದುಪಡಿಯಾಗಿ, ಹೊಸ ಅಂಕಪಟ್ಟಿ ಲಭ್ಯವಾಗಲಿದೆ. ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯಿಂದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ದ್ವಿತೀಯ ಪಿಯುಸಿ ಅಂಕಪಟ್ಟಿಯಲ್ಲಿನ ತಪ್ಪುಗಳನ್ನು ತಿದ್ದುಪಡಿ ಮಾಡಿಕೊಳ್ಳಲು ಅವಕಾಶ ನೀಡಿದೆ. ಈ ಮೂಲಕ ದ್ವಿತೀಯ ಪಿಯುಸಿ ಅಂಕಪಟ್ಟಿಯಲ್ಲಿನ ತಪ್ಪು ತಿದ್ದುಪಡಿ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ನೀಡಿದೆ. ಈ ಸಂಬಂಧ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಜ್ಞಾಪನ ಪತ್ರವನ್ನು ಹೊರಡಿಸಲಾಗಿದೆ. ಅದರಲ್ಲಿ ಪ್ರಸ್ತುತ ಮತ್ತು ಹಿಂದಿನ ಸಾಲಿನ ಅಂಕಪಟ್ಟಿಯಲ್ಲಿ ಅಭ್ಯರ್ಥಿಯ ಹೆಸರು, ತಂದೆಯ ಹೆಸರು, ತಾಯಿಯ ಹೆಸರು, ಭಾವಚಿತ್ರ, ಲಿಂಗ, ಮಾಧ್ಯಮ ಮತ್ತು ಜನ್ಮ ದಿನಾಂಕ ತಿದ್ದುಪಡಿಗಳಿಗೆ ಸಂಬಂಧಿಸಿದಂತೆ ರಾಜ್ಯದ ವಿವಿಧ ಕಾಲೇಜುಗಳ ಪ್ರಾಂಶುಪಾಲರುಗಳಿಂದ ಪ್ರಸ್ತಾವನೆಗಳು ಪಿ.ಯು. ಅಂಕಪಟ್ಟಿ ಶಾಖೆಗೆ ಮೂಲ…

Read More

ಚಿತ್ರದುರ್ಗ: ಆಧುನಿಕತೆಯ ಭರಾಟೆಯಲ್ಲಿ ಸಂಕ್ರಾಂತಿಯ ಸುಗ್ಗಿ ಸಂಭ್ರಮ‌ಮರೆಯಾಗುತ್ತಿದೆ ಎಂದು ಚಿತ್ರದುರ್ಗದ ಅಪರ ಜಿಲ್ಲಾಧಿಕಾರಿ ಬಿಟಿ ಕುಮಾರಸ್ವಾಮಿ ಹೇಳಿದರು. ನಗರದ ಐಯುಡಿಪಿ ಬಡಾವಣೆಯಲ್ಲಿ ಇತ್ತೀಚೆಗೆ ನಡೆದ ಸಂಕ್ರಾಂತಿ ಸಂಭ್ರಮ2025 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು,ಎಲ್ಲೆಡೆ ಸುಗ್ಗಿಯ ಸಂಭ್ರಮ ಮರೆಯಾಗುತ್ತಿದೆ.ಯುವಜನತೆ ಮೊಬೈಲ್ ನಲ್ಲಿ ಮುಳುಗಿದೆ.ಮಹಿಳೆಯರು,ಮಕ್ಕಳು ಟಿವಿಯ ಧಾರಾವಾಹಿ,ರಿಯಾಲಿಟಿ ಶೋನಂತಹ ಕಾರ್ಯಕ್ರಮಗಳಿಗೆ ಸೀಮಿತವಾಗಿದ್ದಾರೆಂದು ಅಸಮಧಾನ ವ್ಯಕ್ತಪಡಿಸಿದರು. ಈ ಹಿಂದೆ ಹಳ್ಳಿಗಳಲ್ಲಿ ಸುಗ್ಗಿ ಸಂಭ್ರಮ ನೋಡೋದೇ ನಮ್ಮ ಪುಣ್ಯ ಎನಿಸುತ್ತಿತ್ತು‌.ಆದರೆ ಈಗ ಹಳ್ಳಿಗಳು ನಗರಪ್ರದೇಶಗಳಾಗಿ ಮಾರ್ಪಾಡುತ್ತಿವೆ.ಹೀಗಾಗಿ ಸಂಕ್ರಮಣದ ಸಂಸ್ಕ್ರತಿ,ಸಂಪ್ರದಾಯ ತೆರೆಮರೆಗೆ ಸರಿಯುತ್ತಿವೆ.ಭಾರತೀಯರ ಮೊದಲ ಹಬ್ಬ ಎನಿಸಿರುವ ಸಂಕ್ರಾಂತಿ ಹಬ್ಬ ಕೇವಲ ಎಳ್ಳು ಬೆಲ್ಲ ಹಂಚುವ ಫ್ಯಾಷನ್ ಎನಿಸಿದೆ.ಈ ಸಂಭ್ರಮದ‌ ಹಿಂದೆ ರೈತರ ಶ್ರಮ ಇರುತ್ತಿತ್ತು‌.ವರ್ಷವಿಡಿ ಬೆಳೆದ ರಾಗಿ,ಭತ್ತ ಹಾಗು ವಿವಿಧ ಬೆಳೆಗಳ ರಾಶಿಹಾಕಿ ಪೂಜಿಸುವ ವಾಡಿಕೆ ಇತ್ತು‌.ಆ ಆಚರಣೆ ನಮ್ಮ ಸಂಸ್ಕೃತಿ,ಸಂಪ್ರದಾಯ ಮರೆಯಾಗುತ್ತಿವೆ. ಎಲ್ಲೆಡೆ ಅವಿಭಕ್ತ ಕುಟುಂಬಗಳು ಇಬ್ಬಾಗವಾಗಿ ಸ್ವಾರ್ಥದ ಬದುಕು ಸಾಗಿಸುತ್ತಿದ್ದು,ನಗರದಲ್ಲಿ ವಾಸಿಸುವ ಕುಟುಂಬ ಅಕ್ಕಪಕ್ಕದಲ್ಲಿರುವವರ ಬಾಂದವ್ಯತೆಯನ್ನು ದೂರವಿಡ್ತಿದ್ದಾರೆ.ಯಾವುದೇ ಕುಟುಂಬಕ್ಕೆ ಏನಾದ್ರು ಸಮಸ್ಯೆ ಎದುರಾದರೆ ಅದು…

Read More