Subscribe to Updates
Get the latest creative news from FooBar about art, design and business.
Author: kannadanewsnow09
ಕಲಬುರಗಿ ; ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಆನ್ಲೈನ್ ಗೇಮಿಂಗ್ ಮಸೂದೆಗೆ ಅನುಮೋದನೆ ನೀಡಲಾಯಿತು. ಇದರ ನಂತರ, ಆನ್ಲೈನ್ ಬೆಟ್ಟಿಂಗ್ ಶಿಕ್ಷಾರ್ಹ ಅಪರಾಧವಾಗಿದೆ. ಈ ಮಸೂದೆಯನ್ನ ಬುಧವಾರ ಲೋಕಸಭೆಯಲ್ಲಿ ಮಂಡಿಸಬಹುದು. ಆನ್ಲೈನ್ ಗೇಮಿಂಗ್ ಮಸೂದೆಯ ಮೂಲಕ ಆನ್ಲೈನ್ ಗೇಮಿಂಗ್ ನಿಯಂತ್ರಿಸಲಾಗುವುದು. ಈ ನಿರ್ಧಾರ ಸ್ವಾಗತಾರ್ಹ ಎಂದು ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ತಿಳಿಸಿದ್ದರು. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಈ ಕ್ರಮವು ಎಲ್ಲಾ ಪಟ್ಟಿ ಮಾಡಲಾದ ಮತ್ತು ಪಟ್ಟಿ ಮಾಡದ ಕಂಪನಿಗಳ ಮೇಲೆ ಕೇಂದ್ರೀಕರಿಸುವ ಮೂಲಕ ಗೇಮಿಂಗ್ ಉದ್ಯಮದಲ್ಲಿ ಪಾರದರ್ಶಕತೆ ಮತ್ತು ನಿಯಂತ್ರಣವನ್ನು ಹೆಚ್ಚಿಸುತ್ತದೆ ಎಂದು ಕೇಂದ್ರ ಸರ್ಕಾರ ಹೇಳುತ್ತದೆ. ಹೊಸ ಮಸೂದೆಯು ಕೆಲವು ಆನ್ಲೈನ್ ಆಟಗಳನ್ನು ನಿಷೇಧಿಸುವ ನಿಬಂಧನೆಗಳನ್ನು ಸಹ ಒಳಗೊಂಡಿದೆ. ಅಂದರೆ, ವ್ಯಸನ, ಆರ್ಥಿಕ ನಷ್ಟ ಅಥವಾ ಸಾಮಾಜಿಕ ಪರಿಣಾಮವನ್ನು ಉತ್ತೇಜಿಸುವ ಆಟಗಳನ್ನು ನಿಷೇಧಿಸಬಹುದು. ಅಲ್ಲದೆ, ನಿಯಂತ್ರಿಸಲ್ಪಡುವ ಆಟಗಳು ಚೆಸ್, ರಸಪ್ರಶ್ನೆ ಮತ್ತು ಇ-ಸ್ಪೋರ್ಟ್ಗಳಂತಹ ಕೌಶಲ್ಯ ಆಧಾರಿತ ಆಟಗಳಾಗಿವೆ,…
ಬೆಂಗಳೂರು: ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿಲ್ಲ. ಹಾಗಾಗಿ ಜನರು ಆತಂಕಪಡುವ ಅಗತ್ಯವಿಲ್ಲ. ಬದಲಾದ ಜೀವನಶೈಲಿ ಹಾಗೂ ಆಹಾರ ಕ್ರಮ ಹೃದಯ ಸಂಬಂಧಿ ಸಮಸ್ಯೆಗಳಿಗೆ ಕಾರಣವಾಗಿದ್ದು, ಜನರಲ್ಲಿ ಜಾಗೃತಿ ಅಗತ್ಯವಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ್ ಪಾಟೀಲ್ ಅವರು ವಿಧಾನ ಮಂಡಲದ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು. https://twitter.com/KarnatakaVarthe/status/1957742336945086664 ವಿಧಾನ ಪರಿಷದ್ ನಲ್ಲಿ ಸೋಮವಾರ ಕಾಂಗ್ರೆಸ್ ಸದಸ್ಯ ದಿನೇಶ್ ಗೂಳಿಗೌಡ ಅವರ ಪ್ರಶ್ನೆ ಉತ್ತರಿಸಿದ ಅವರು, ಇತ್ತೀಚೆಗೆ ಹೃದಯಾಘಾತ, ಪ್ರಕರಣಗಳ ಸಂಖ್ಯೆ ಹೆಚ್ಚಳದ ಆತಂಕ ಎಲ್ಲರಲ್ಲೂ ಮನೆ ಮಾಡಿದೆ. ಜಯದೇವ ಆಸ್ಪತ್ರೆಯಲ್ಲಿ ಜನರು ಪ್ರತಿನಿತ್ಯ ಬಂದು ಹೃದಯ ತಪಾಸಣೆ ಮಾಡಿಸಿಕೊಳ್ಳುತ್ತಿದ್ದಾರೆ. ಇದರ ಪ್ರಮಾಣ ಶೇ.25ರಷ್ಟು ಏರಿಕೆಯಾಗಿದೆ ಎಂದು ಪಾಟೀಲ್ ಮಾಹಿತಿ ನೀಡಿದರು. ವಿಶೇಷವಾಗಿ ಹಾಸನ ಜಿಲ್ಲೆಯಲ್ಲಿ ಹೃದಯಘಾತಗಳ ಸಂಖ್ಯೆ ಹೆಚ್ಚಳವಾಗಿದೆ ಎಂಬ ಆತಂಕ ಜನರಲ್ಲಿ ಮೂಡಿದೆ. ಇದು ತಪ್ಪು ಗ್ರಹಿಕೆ. ವಾಸ್ತವವಾಗಿ ಹಿಂದಿನ ವರ್ಷಗಳಿಗೆ ಹೋಲಿಸಿದರೆ ಸರಾಸರಿ ಪ್ರಮಾಣದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಶೇ.5ರಿಂದ 6ರಷ್ಟು ಪ್ರಕರಣಗಳು ಹೃದಯಾಘಾತಕ್ಕೆ…
ವಿಧಾನಪರಿಷತ್ತು: ಮಂಗಳೂರು ನಗರದಲ್ಲಿ 675.51 ಕೋಟಿ ರೂಪಾಯಿ ವೆಚ್ಚದ ಕುಡಿಯುವ ನೀರು ಸರಬರಾಜು ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ ತಿಳಿಸಿದ್ದಾರೆ. ವಿಧಾನಪರಿಷತ್ತಿನಲ್ಲಿ ಮಂಗಳವಾರ ಸದಸ್ಯ ಐವಾನ್ ಡಿಸೋಜಾ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, 675.51 ಕೋಟಿ ರೂಪಾಯಿ ವೆಚ್ಚದಲ್ಲಿ ಮೂರು ಕುಡಿಯುವ ನೀರು ಸರಬರಾಜು ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಪೈಕಿ ಒಂದು ಯೋಜನೆ ಪೂರ್ಣಗೊಂಡಿದೆ. 2026 ರ ಡಿಸೆಂಬರ್ ವೇಳೆಗೆ ಇನ್ನೆರಡು ಯೋಜನೆಗಳ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಏಷ್ಯನ್ ಅಭಿವೃದ್ಧಿ ಬ್ಯಾಂಕ್ ಮತ್ತು ಅಮೃತ್ ನೆರವಿನ ಕರ್ನಾಟಕ ಸಮಗ್ರ ನಗರ ನೀರು ನಿರ್ವಹಣೆ ಮತ್ತು ಹೂಡಿಕೆ ಕಾರ್ಯಕ್ರಮವಾದ ಜಲಸಿರಿ ಅಡಿ 316.51 ಕೋಟಿ ರೂಪಾಯಿ ವೆಚ್ಚದಲ್ಲಿ 8 ಒಳಚರಂಡಿ ಕಾಮಗಾರಿಗಳನ್ನು ಆರಂಭಿಸಲಾಗಿದೆ. ಈಗಾಗಲೇ 5 ಕಾಮಗಾರಿಗಳು ಪೂರ್ಣಗೊಂಡಿದ್ದು, ಉಳಿದ 3 ಕಾಮಗಾರಿಗಳು ಈ ವರ್ಷದ ಅಂತ್ಯದ ವೇಳೆಗೆ ಪೂರ್ಣಗೊಳ್ಳಲಿವೆ ಎಂದು ಸಚಿವರು ಹೇಳಿದರು. ಮುದಗಲ್ ಪಟ್ಟಣಕ್ಕೆ ನೀರು…
ಹುಬ್ಬಳ್ಳಿ: ರೈಲ್ವೆ ಮಂಡಳಿಯು ವಿಜಯಪುರ–ಮಂಗಳೂರು ಸೆಂಟ್ರಲ್–ವಿಜಯಪುರ ವಿಶೇಷ ಎಕ್ಸ್ ಪ್ರೆಸ್ ರೈಲನ್ನು (ರೈಲು ಸಂಖ್ಯೆ 07377/07378) ನಿಯಮಿತ ಎಕ್ಸ್ ಪ್ರೆಸ್ ಸೇವೆಗೆ ಉನ್ನತೀಕರಿಸಲು ಅನುಮೋದನೆ ನೀಡಿದೆ. ಈ ರೈಲುಗಳು ಇನ್ನು ಮುಂದೆ ರೈಲು ಸಂಖ್ಯೆ 17377/17378 ವಿಜಯಪುರ–ಮಂಗಳೂರು ಸೆಂಟ್ರಲ್–ವಿಜಯಪುರ ಎಕ್ಸ್ ಪ್ರೆಸ್ ಎಂದು ಸಂಚರಿಸಲಿವೆ. ರೈಲು ಸಂಖ್ಯೆ 17377 ವಿಜಯಪುರ–ಮಂಗಳೂರು ಸೆಂಟ್ರಲ್ ಎಕ್ಸ್ ಪ್ರೆಸ್ ತನ್ನ ನಿಯಮಿತ ಸೇವೆಯನ್ನು ಸೆಪ್ಟೆಂಬರ್ 1, 2025 ರಿಂದ ಪ್ರಾರಂಭಿಸಲಿದೆ. ಅದೇ ರೀತಿ, ರೈಲು ಸಂಖ್ಯೆ 17378 ಮಂಗಳೂರು ಸೆಂಟ್ರಲ್–ವಿಜಯಪುರ ಎಕ್ಸ್ ಪ್ರೆಸ್ ಸೆಪ್ಟೆಂಬರ್ 2, 2025 ರಿಂದ ತನ್ನ ಸಂಚಾರ ಆರಂಭಿಸಲಿದೆ. ಈ ಎರಡೂ ರೈಲುಗಳು ಈಗಿರುವ ವೇಳಾಪಟ್ಟಿ, ನಿಲುಗಡೆ, ಬೋಗಿಗಳ ಸಂಯೋಜನೆ ಮತ್ತು ನಿರ್ವಹಣಾ ಮಾದರಿಯೊಂದಿಗೆ ಸಂಚರಿಸಲಿವೆ. https://kannadanewsnow.com/kannada/approval-of-the-karnataka-lake-conservation-and-development-authority-amendment-bill-2025-in-the-legislative-assembly/ https://kannadanewsnow.com/kannada/the-special-state-cabinet-meeting-scheduled-for-today-at-5-pm-has-been-postponed-to-730-pm/
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕು ಕರ್ನಾಟಕ ರಕ್ಷಣಾ ವೇಕರದಿಕೆಯ ಟಿ.ಎ ನಾರಾಯಣಗೌಡ ಬಣದ ತಾಲ್ಲೂಕು ಅಧ್ಯಕ್ಷರಾಗಿ ಮನೋಜ್ ಕುಗ್ವೆ ಅವರು ಇಂದು ಪಗ್ರಹಣ ಮಾಡಿದರು. ಅವರೊಂದಿಗೆ ಇತರೆ ಪದಾಧಿಕಾರಿಗಳಿಗೂ ಶಿವಮೊಗ್ಗ ಜಿಲ್ಲಾಧ್ಯಕ್ಷ ಆರ್.ಮಂಜು ಕೇಬಲ್ ನೇಮಕಾತಿ ಪತ್ರವನ್ನು ವಿತರಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಸರ್ಕಾರಿ ನೌಕರರ ಸಂಘದ ಸಭಾಭವನದಲ್ಲಿ ಕರ್ನಾಟಕ ರಾಜ್ಯ ರಕ್ಷಣಾ ವೇದಿಕೆ, ಟಿಎ ನಾರಾಯಣಗೌಡ ಬಣದಿಂದ ಪಗ್ರಹಣ ಕಾರ್ಯಕ್ರಮ ನಡೆಯಿತು. ಪ್ರಾಸ್ತಾವಿಕವಾಗಿ ಮಾತನಾಡಿದಂತ ಶಣ್ಮುಖ ಕೆಂಚಾಳಸರ ಅವರು, ಕರವೆಯಿಂದ ಕನ್ನಡ ಭಾಷಣೆ ಉಳಿಸಲು ಹೋರಾಟ ನಡೆಸುವಂತ ಕೆಲಸ ಮಾಡಲಾಗುತ್ತಿದೆ. ಸಾಗರ ತಾಲ್ಲೂಕು ಸಮಿತಿ ರಚನೆಯಾಗಿದೆ. ಜೋಗ ವ್ಯಾಪ್ತಿಯಲ್ಲೂ ಸಂಘಟನೆ ಕಟ್ಟಲಾಗುತ್ತದೆ. ಸಾಗರ ತಾಲ್ಲೂಕಿನ ಹೋಬಳಿ ಮಟ್ಟದಲ್ಲೂ ಕರ್ನಾಟಕ ರಕ್ಷಣಾ ವೇದಿಕೆಯನ್ನು ಕಟ್ಟುವ ಕೆಲಸ ಮಾಡಲಾಗುವುದು. ಕನ್ನಡ ಭಾಷೆಗೆ ಕುತ್ತು ಬಂದಾಗ ಗ್ರಾಮ ಪಂಚಾಯ್ತಿ ಮಟ್ಟದಿಂದಲೂ ಹೋರಾಟಕ್ಕೆ ತಾಲ್ಲೂಕು ಅಧ್ಯಕ್ಷ ಮನೋಜ್ ಕುಗ್ವೆ ನೇತೃತ್ವದಲ್ಲಿ ಹೋರಾಟಕ್ಕೆ ಸಜ್ಜುಗೊಳಿಸುವುದಾಗಿ ತಿಳಿಸಿದರು. ಶಿವಮೊಗ್ಗ ಜಿಲ್ಲೆಯ ಕರವೇ ಮಹಿಳಾ ಅಧ್ಯಕ್ಷೆ ಜ್ಯೋತಿ…
ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಡಾ.ವೀರೇಂದ್ರ ಹೆಗಡೆ ಅವರು ಮೊದಲ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಅದು ಏನು ಅಂತ ಮುಂದೆ ಓದಿ. ಇಂದು ಸುದ್ದಿಗಾರರೊಂದಿಗೆ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿರುವಂತ ಅವರು, ಧರ್ಮಸ್ಥಳದ ಬಗ್ಗೆ ಅನಗತ್ಯವಾಗಿ ಗೊಂದಲ ಮೂಡಿಸಲಾಗುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ತರಾವರಿಯಾಗಿ ಸುದ್ದಿ ಪ್ರಕಟಿಸಲಾಗುತ್ತಿದೆ ಎಂದರು. ಎಸ್ಐಟಿ ಬಗ್ಗೆ ನನಗೆ ನಂಬಿಕೆಯಿದೆ. ಉತ್ತಮ ರೀತಿಯಲ್ಲಿ ಕೆಲಸ ಮಾಡಿ, ಸತ್ಯವನ್ನು ಹೊರ ತರಲಿದೆ. ಸಿಬಿಐ ತನಿಖೆಗೆ ನಾವು ಸಂಪೂರ್ಣ ಸಹಕಾರ ನೀಡುತ್ತೇವೆ. ಸೋಷಿಯಲ್ ಮೀಡಿಯಾದಲ್ಲಿ ಅಪಪ್ರಚಾರ ಮಾಡಲಾಗುತ್ತಿದೆ ಎಂದರು. https://twitter.com/PTI_News/status/1957750961692139638 ಅಂದಹಾಗೇ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆ ನಡೆಸಲಾಗುತ್ತಿದೆ. ಮಾಸ್ಕ್ ಮ್ಯಾನ್ ತೋರಿಸಿದಂತ ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿತ್ತು. ಉತ್ಖನನಗ ವೇಳೆಯಲ್ಲಿ ಎರಡು ಸ್ಥಳಗಳಲ್ಲಿ ಮಾತ್ರವೇ ಅಸ್ಥಿ ಪಂಜರಗಳು ದೊರೆತಿವೆ. ಸದ್ಯ ತಾತ್ಕಾಲಿಕವಾಗಿ ಶೋಧ ಕಾರ್ಯಾಚರಣೆಗೆ ಬ್ರೇಕ್ ಹಾಕಲಾಗಿದೆ. ಎಸ್ಐಟಿಯು ಮಾಸ್ಕ್ ಮ್ಯಾನ್ ಅನ್ನು ಈ ವಿಚಾರವಾಗಿ ವಿಚಾರಣೆ ನಡೆಸುತ್ತಿದೆ. ನಿನ್ನೆ ಇದೇ ವಿಚಾರ ಕೂಡ ವಿಧಾನಸಭೆಯಲ್ಲಿ ಚರ್ಚೆಯಾಗಿತ್ತು. ಗೃಹ ಸಚಿವ…
ಬೆಂಗಳೂರು: ಇಂದು ಬಿಜೆಪಿ ಸಭಾತ್ಯಾಗದ ನಡುವೆಯೂ ವಿಧಾನಸಭೆಯಲ್ಲಿ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ ತಿದ್ದುಪಡಿ ವಿಧೇಯಕ-2025 ಅಂಗೀಕಾರಗೊಂಡಿದೆ. ವಿಧಾನಸಭೆಯಲ್ಲಿ ರಾಜ್ಯ ಸರ್ಕಾರದಿಂದ 2025ನೇ ಸಾಲಿನ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ ತಿದ್ದುಪಡಿ ವಿಧೇಯಕವನ್ನು ಮಂಡಿಸಲಾಯಿತು. ಇದಕ್ಕೆ ಬಿಜೆಪಿಯಿಂದ ತೀವ್ರ ವಿರೋಧವನ್ನು ವ್ಯಕ್ತ ಪಡಿಸಿ, ಸಭಾತ್ಯಾಗ ಕೂಡ ನಡೆಸಲಾಯಿತು. ಇದಕ್ಕೂ ಮುನ್ನಾ ಸುದೀರ್ಘ ಚರ್ಚೆಯನ್ನು ಬಿಜೆಪಿ ಸದಸ್ಯರು ನಡೆಸಿದರು. ಇದು ರಿಯಲ್ ಎಸ್ಟೇಟ್ ಪರವಾಗಿದೆ ಎಂಬುದಾಗಿ ಆರಂಭದಿಂದಲೂ ವಿರೋಧ ವ್ಯಕ್ತ ಪಡಿಸಿದರು. ಆ ಬಳಿಕ ವಿಧೇಯಕಕ್ಕೆ ತೀವ್ರ ವಿರೋಧವನ್ನು ವ್ಯಕ್ತಪಡಿಸಲಾಯಿತು. ಬಿಜೆಪಿ ಸದಸ್ಯರ ಸಭಾತ್ಯಾಗದ ನಡುವೆಯೂ 2025ನೇ ಸಾಲಿನ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ ತಿದ್ದುಪಡಿ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ ದೊರೆಯಿತು.
ಬೆಂಗಳೂರು: ಪರಿಶಿಷ್ಟ ಜಾತಿಗೆ ಸಂಬಂಧಿಸಿದಂತೆ ಒಳ ಮೀಸಲಾತಿ ಕಲ್ಪಿಸುವ ಕುರಿತು ಚರ್ಚಿಸಲು ವಿಧಾನಸೌಧದಲ್ಲಿ ವಿಶೇಷ ರಾಜ್ಯ ಸಚಿವ ಸಂಪುಟ ಸಭೆ ಇಂದು ಸಂಜೆ 7.30ಕ್ಕೆ ನಡೆಯಲಿದೆ. ಈ ಹಿನ್ನಲೆಯಲ್ಲಿ ವಿಧಾನಸೌಧದ ಸುತ್ತಮುತ್ತ ಹೈಅಲರ್ಟ್ ನೀಡಲಾಗಿದೆ. ಇಂದು ಸಂಜೆ 7.30ಕ್ಕೆ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿ ಕುರಿತಂತೆ ವಿಶೇಷ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ. ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿಯಾದ್ರೆ ಸಂಭ್ರಮಾಚಾರಣೆಗೂ ಸಮುದಾಯದವರು ಸಿದ್ಧರಾಗಿದ್ದಾರೆ. ಇನ್ನೊಂದು ಗುಂಪಿನಿಂದ ಪರಿಶಿಷ್ಟ ಜಾತಿ ಒಳ ಮೀಸಲಾತಿಯನ್ನು ವಿರೋಧಿಸಲಾಗಿದೆ. ಅಲ್ಲದೇ ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದಾಗಿ ದಲಿತ ಎಡಗೈ ಸಮಾಜದ ನಾಯಕ ಭಾಸ್ಕರ್ ಪ್ರಸಾದ್ ಎಚ್ಚರಿಕೆ ನೀಡಲಾಗಿದೆ. ಈ ಹಿನ್ನಲೆಯಲ್ಲಿ ವಿಧಾನಸೌಧದ ಸುತ್ತಮುತ್ತ ಹೆಚ್ಚಿನ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ವಿಧಾನಸೌಧದ ಸುತ್ತಮುತ್ತ ಹೆಚ್ಚಿನ ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. https://kannadanewsnow.com/kannada/greater-bangalore-administration-amendment-bill-2025-passed-in-the-legislative-assembly/ https://kannadanewsnow.com/kannada/the-special-state-cabinet-meeting-scheduled-for-today-at-5-pm-has-been-postponed-to-730-pm/
ಬೆಂಗಳೂರು: 2025ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಗಳವಾರ ಅಂಗೀಕರಿಸಲಾಯಿತು. ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸದನದಲ್ಲಿ ಈ ವಿಧೇಯಕವನ್ನು ಮಂಡಿಸಿದರು. ವಿರೋಧ ಪಕ್ಷದ ನಾಯಕರು, ಶಾಸಕರು ಚರ್ಚೆ ನಡೆಸಿದ ನಂತರ ಅನುಮೋದನೆ ನೀಡಲಾಯಿತು. ಸ್ಪಷ್ಟನೆಗಾಗಿ ತಿದ್ದುಪಡಿ ತರಲಾಗಿದೆ 2025ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕದ ಪ್ರಸ್ತಾವನೆ ವೇಳೆ ಮಾತನಾಡಿದ ಶಿವಕುಮಾರ್ ಅವರು, “ಇದರಲ್ಲಿ ಒಂದು ಸಣ್ಣ ಸ್ಪಷ್ಟನೆ ನೀಡುವುದಿದೆ. ಏಕೆಂದರೆ ಮಸೂದೆ ಅಂಗೀಕಾರಗೊಂಡಿದ್ದರೂ ಕೆಲವರು ನ್ಯಾಯಾಲಯದಲ್ಲಿ ಅರ್ಜಿ ಹಾಕಿದ್ದರು. ಹೀಗಾಗಿ ಈ ಮಸೂದೆಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಸಂವಿಧಾನದ 74ನೇ ತಿದ್ದುಪಡಿ ಅಡಿಯಲ್ಲಿ ಬರುವ ಪಾಲಿಕೆಗಳ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂಬ ಅಂಶವನ್ನು ಸ್ಪಷ್ಟಪಡಿಸಲಾಗಿದೆ” ಎಂದು ತಿಳಿಸಿದರು. ಈ ತಿದ್ದುಪಡಿಯ ಉದ್ದೇಶ ಹಾಗೂ ಇದರ ಪರಿಣಾಮವೇನು ಎಂಬ ಬಿಜೆಪಿ ಶಾಸಕ ಸುರೇಶ್ ಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್ ಅವರು, “ಈಗ ಜಾರಿಯಲ್ಲಿರುವ ಕಾಯ್ದೆ ಅನುಸಾರ ಜಿಬಿಎ ಅಡಿಯಲ್ಲಿ…
ಅರಿಶಿನ ಕೊಂಬಿನ ಮಾಲೆ ಎಂದರೆ ಅರಿಶಿನದ ಕೊಂಬುಗಳಿಂದ ಮಾಡಿದ ಒಂದು ರೀತಿಯ ಮಾಲೆ. ಇದನ್ನು ಸಾಮಾನ್ಯವಾಗಿ ಮಂಗಳ ಕಾರ್ಯಗಳಲ್ಲಿ ಅಥವಾ ಧಾರ್ಮಿಕ ಆಚರಣೆಗಳಲ್ಲಿ ಬಳಸುತ್ತಾರೆ. ಅರಿಶಿನವು ಶುದ್ಧಿ ಮತ್ತು ಮಂಗಳಕರ ಸಂಕೇತವಾಗಿದೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ಅರಿಶಿನ ಕೊಂಬಿನ ಮಾಲೆಯು ಅರಿಶಿನದ ಕೊಂಬುಗಳನ್ನು ಒಟ್ಟಿಗೆ ಸೇರಿಸಿ, ದಾರದಿಂದ ಕಟ್ಟಿ ತಯಾರಿಸಲಾಗುತ್ತದೆ. ಕೆಲವೊಮ್ಮೆ ಅರಿಶಿನದ ಕೊಂಬುಗಳ ಜೊತೆಗೆ ಇತರ ವಸ್ತುಗಳನ್ನು ಕೂಡ ಸೇರಿಸಲಾಗುತ್ತದೆ. ಇದು ಮದುವೆ, ಗೃಹಪ್ರವೇಶ, ಅಥವಾ ಇತರ ಶುಭ ಸಮಾರಂಭಗಳಲ್ಲಿ ಅಲಂಕಾರಕ್ಕಾಗಿ ಬಳಸಲಾಗುತ್ತದೆ. ಅಲ್ಲದೆ, ದೇವಸ್ಥಾನಗಳಲ್ಲಿ ಅಥವಾ ಪೂಜಾ ಸ್ಥಳಗಳಲ್ಲಿಯೂ ಇದನ್ನು ಕಾಣಬಹುದು. ಅರಿಶಿನದ ಮಾಲೆಯನ್ನು ಧರಿಸುವುದರಿಂದ ಮಂಗಳಕರ ಮತ್ತು ಶುಭ ಫಲಿತಾಂಶಗಳು ಸಿಗುತ್ತವೆ ಎಂಬ ನಂಬಿಕೆಯಿದೆ. ಅರಿಶಿನದ ಕೊಂಬುಗಳ ಜೊತೆಗೆ…













