Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಅಭಿಯಾನದ ಅಡಿಯಲ್ಲಿ ಎಲ್ಲಾ ಸರ್ಕಾರಿ ನೌಕರರು ಕೆಂಪು-ಹಳದಿ ಬಣ್ಣದ ಗುರುತಿನ ಚೀಟಿಯ ಕೊರಳುದಾರವನ್ನು ಅಂದರೆ ಟ್ಯಾಗ್ ಹಾಕಿಕೊಳ್ಳುವುದು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದಾರೆ. ಅದರಲ್ಲಿ ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಳಿಸಿ 50 ವರ್ಷಗಳು ಪೂರೈಸಿರುವ ಸುಸಂದರ್ಭದಲ್ಲಿ “ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ” ಅಭಿಯಾನದಡಿ ಎಲ್ಲಾ ರಾಜ್ಯ ಸರ್ಕಾರಿ ನೌಕರರು ಕೆಂಪು-ಹಳದಿ ಬಣ್ಣಗಳನ್ನು ಒಳಗೊಂಡಿರುವ ಕೊರಳುದಾರ (ಟ್ಯಾಗ್) ಹೊಂದಿದ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಧರಿಸಬೇಕೆಂದು ಸರ್ಕಾರವು ನಿರ್ಣಯಿಸಿದೆ ಎಂದಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳು, ನಿಗಮ, ಮಂಡಳಿ, ನಿರ್ದೇಶನಾಲಯ, ಆಯುಕ್ತಾಲಯ ಇತ್ಯಾದಿ ಸರ್ಕಾರಿ ಮತ್ತು ಸರ್ಕಾರಿ ಸ್ವಾಮ್ಯದ ಕಛೇರಿಗಳಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲಾ ಅಧಿಕಾರಿ/ ಸಿಬ್ಬಂದಿಗಳು ತಮ್ಮ ಇಲಾಖೆ/ಸಂಸ್ಥೆಯ ಗುರುತಿನ ಚೀಟಿಯನ್ನು ಧರಿಸಲು ಅನುವಾಗುವಂತೆ ಹಳದಿ ಮತ್ತು ಕೆಂಪು ಬಣ್ಣದ ಕೊರಳುದಾರವನ್ನು ಒದಗಿಸಲು ತಮ್ಮ…
ನವದೆಹಲಿ: ಜಮ್ಮು-ಕಾಶ್ಮೀರ ಹಾಗೂ ಹರಿಯಾಣ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆಗೆ ದಿನಾಂಕ ಪ್ರಕಟಿಸಲಾಗಿದೆ. ಜಮ್ಮು-ಕಾಶ್ಮೀರದ 90 ಕ್ಷೇತ್ರಗಳಿಗೆ ಮೂರು ಹಂತದಲ್ಲಿ, ಹರಿಯಾಣ ವಿಧಾನಸಭಾ 90 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಿಗದಿ ಮಾಡಲಾಗಿದೆ. ಈ ಕುರಿತಂತೆ ಇಂದು ಸುದ್ದಿಗೋಷ್ಠಿಯಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮಾತನಾಡಿ, ವಿಧಾನಸಭಾ ಚುನಾವಣೆ ಮೂರು ಹಂತಗಳಲ್ಲಿ ನಡೆಯಲಿದೆ. ಸೆಪ್ಟೆಂಬರ್ 18, ಸೆಪ್ಟೆಂಬರ್ 25 ಮತ್ತು ಅಕ್ಟೋಬರ್ 1 ರಂದು ಮತದಾನ ನಡೆಯಲಿದೆ. ಅಕ್ಟೋಬರ್ 4ರಂದು ಮತ ಎಣಿಕೆ ನಡೆಯಲಿದೆ ಎಂದರು. https://twitter.com/ANI/status/1824386363975929880 ಇನ್ನೂ ಹರಿಯಾಣ ವಿಧಾನಸಭಾ ಚುನಾವಣೆಗೆ ಅಕ್ಟೋಬರ್ 1ರಂದು ಮತದಾನ ನಡೆಯಲಿದೆ. ಅಕ್ಟೋಬರ್ 4ರಂದು ಮತ ಎಣಿಕೆ ಕಾರ್ಯ ನಡೆದು, ಫಲಿತಾಂಶ ಪ್ರಕಟವಾಗಲಿದೆ. https://twitter.com/ANI/status/1824385877591949658 ನವದೆಹಲಿ: ಹರಿಯಾಣದಲ್ಲಿ ವಿಧಾನಸಭಾ ಚುನಾವಣೆ ಒಂದೇ ಹಂತದಲ್ಲಿ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ. ಅಕ್ಟೋಬರ್ 1ರಂದು ಮತದಾನ ನಡೆಯಲಿದೆ. ಅಕ್ಟೋಬರ್ 4ರಂದು ಮತ ಎಣಿಕೆ ನಡೆಯಲಿದೆ. https://twitter.com/ANI/status/1824387007092531471 https://kannadanewsnow.com/kannada/jammu-and-kashmir-assembly-elections-2024-90-constituencies-to-go-to-polls-in-3-phases/ https://kannadanewsnow.com/kannada/malayalam-movie-aattam-wins-national-award-for-best-feature-film/
ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದೆ. ಜಮ್ಮು ಕಾಶ್ಮೀರದ 90 ವಿಧಾನಸಭಾ ಕ್ಷೇತ್ರಗಳಿಗೆ ಮೂರು ಹಂತಗಳಲ್ಲಿ ಮತದಾನ ನಡೆಯಲಿದೆ. ಅಂತಿಮವಾಗಿ ಅಕ್ಟೋಬರ್.4ರಂದು ಮತಏಣಿಕೆಯ ನಂತ್ರ, ಫಲಿತಾಂಶ ಪ್ರಕಟವಾಗಲಿದೆ. ಈ ಕುರಿತಂತೆ ಇಂದು ಸುದ್ದಿಗೋಷ್ಠಿಯಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮಾತನಾಡಿ, ವಿಧಾನಸಭಾ ಚುನಾವಣೆ ಮೂರು ಹಂತಗಳಲ್ಲಿ ನಡೆಯಲಿದೆ. ಸೆಪ್ಟೆಂಬರ್ 18, ಸೆಪ್ಟೆಂಬರ್ 25 ಮತ್ತು ಅಕ್ಟೋಬರ್ 1 ರಂದು ಮತದಾನ ನಡೆಯಲಿದೆ. ಅಕ್ಟೋಬರ್ 4ರಂದು ಮತ ಎಣಿಕೆ ನಡೆಯಲಿದೆ ಎಂದರು. https://twitter.com/ANI/status/1824386363975929880 ಇನ್ನೂ ಹರಿಯಾಣ ವಿಧಾನಸಭಾ ಚುನಾವಣೆಗೆ ಅಕ್ಟೋಬರ್ 1ರಂದು ಮತದಾನ ನಡೆಯಲಿದೆ. ಅಕ್ಟೋಬರ್ 4ರಂದು ಮತ ಎಣಿಕೆ ಕಾರ್ಯ ನಡೆದು, ಫಲಿತಾಂಶ ಪ್ರಕಟವಾಗಲಿದೆ. https://twitter.com/ANI/status/1824385877591949658 ನವದೆಹಲಿ: ಹರಿಯಾಣದಲ್ಲಿ ವಿಧಾನಸಭಾ ಚುನಾವಣೆ ಒಂದೇ ಹಂತದಲ್ಲಿ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ. ಅಕ್ಟೋಬರ್ 1ರಂದು ಮತದಾನ ನಡೆಯಲಿದೆ. ಅಕ್ಟೋಬರ್ 4ರಂದು ಮತ ಎಣಿಕೆ ನಡೆಯಲಿದೆ. https://twitter.com/ANI/status/1824387007092531471 https://kannadanewsnow.com/kannada/jammu-and-kashmir-assembly-elections-2024-90-constituencies-to-go-to-polls-in-3-phases/ https://kannadanewsnow.com/kannada/malayalam-movie-aattam-wins-national-award-for-best-feature-film/
ನವದೆಹಲಿ; ಜಮ್ಮು-ಕಾಶ್ಮೀರದ ವಿಧಾನಸಭಾ ಚುನಾವಣೆ ದಿನಾಂಕವನ್ನು ಘೋಷಣೆ ಮಾಡಲಾಗಿದೆ. 90 ಕ್ಷೇತ್ರಗಳಿಗೆ 3 ಹಂತಗಳಲ್ಲಿ ಮತದಾನವನ್ನು ನಡೆಸುತ್ತಿರುವುದಾಗಿ ಚುನಾವಣೆಯನ್ನು ಕೇಂದ್ರ ಚುನಾವಣಾ ಆಯೋಗದಿಂದ ಘೋಷಣೆ ಮಾಡಲಾಗಿದೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮಾತನಾಡಿ, ಜಮ್ಮು ಮತ್ತು ಕಾಶ್ಮೀರದಲ್ಲಿ ಒಟ್ಟು 90 ವಿಧಾನಸಭಾ ಕ್ಷೇತ್ರಗಳಿವೆ. ಅದರಲ್ಲಿ 74 ಸಾಮಾನ್ಯ, ಎಸ್ಸಿ -7 ಮತ್ತು ಎಸ್ಟಿ -9 ಆಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಒಟ್ಟು 87.09 ಲಕ್ಷ ಮತದಾರರಿದ್ದು, ಅವರಲ್ಲಿ 44.46 ಲಕ್ಷ ಪುರುಷರು, 42.62 ಲಕ್ಷ ಮಹಿಳೆಯರು, 3.71 ಲಕ್ಷ ಮೊದಲ ಬಾರಿಗೆ ಮತದಾರರು ಮತ್ತು 20.7 ಲಕ್ಷ ಯುವ ಮತದಾರರು ಇದ್ದಾರೆ. ಅಮರನಾಥ ಯಾತ್ರೆ ಆಗಸ್ಟ್ 19 ರಂದು ಕೊನೆಗೊಳ್ಳಲಿದ್ದು, ಅಂತಿಮ ಮತದಾರರ ಪಟ್ಟಿಯನ್ನು ಆಗಸ್ಟ್ 20 ರಂದು ಪ್ರಕಟಿಸಲಾಗುವುದು ಎಂದರು. https://twitter.com/ANI/status/1824382882166739088 ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮಾತನಾಡಿ, “ಜಮ್ಮು ಮತ್ತು ಕಾಶ್ಮೀರದಲ್ಲಿ ಲೋಕಸಭಾ ಚುನಾವಣೆಯ ಸಮಯದಲ್ಲಿ, ಚುನಾವಣೆಯಲ್ಲಿ ಭಾಗವಹಿಸಲು ಜನರು ಇದ್ದರು. ಉದ್ದನೆಯ ಸರತಿ ಸಾಲುಗಳು…
ಟ್ರಿಪಲ್ ವೆಸೆಲ್ ಕೊರೊನರಿ ಕಾಯಿಲೆಗೆ ತುತ್ತಾಗಿದ್ದ 64 ವರ್ಷದ ವ್ಯಕ್ತಿಗೆ ಬೆಂಗಳೂರಿನಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ
ಬೆಂಗಳೂರು: ಹೃದಯದ ಟ್ರಿಪಲ್ ವೆಸೆಲ್ ಕೊರೊನರಿ (ಮೂರು ಪ್ರಮುಖ ಅಪಧಮನಿಗಳ ಬ್ಲಾಕೇಜ್) ಕಾಯಿಲೆಗೆ ಒಳಗಾಗಿದ್ದ ಈಸ್ಟ್ ಆಫ್ರಿಕಾ ಮಡಗಾಸ್ಕರ್ ದ್ವೀಪ ದೇಶದ 64 ವರ್ಷದ ವ್ಯಕ್ತಿಗೆ ಬೆಂಗಳೂರು ಫೋರ್ಟಿಸ್ ಆಸ್ಪತ್ರೆಯ ವೈದ್ಯರ ತಂಡ ಯಶಸ್ವಿಯಾಗಿ ಹೈಬ್ರಿಡ್ ಶಸ್ತ್ರಚಿಕಿತ್ಸೆಯನ್ನು ನಡೆಸಿದೆ. ಫೋರ್ಟಿಸ್ ಆಸ್ಪತ್ರೆಯ ಕಾರ್ಡಿಯೋ ಥೋರಾಸಿಕ್ ವಾಸ್ಕಲರ್ ಸರ್ಜರಿ ಹಿರಿಯ ಸಮಾಲೋಚಕ ಡಾ. ಸುದರ್ಶನ್ ಜಿ.ಟಿ., ಇಂಟರ್ವೆನ್ಷನಲ್ ಕಾರ್ಡಿಯಾಲಜಿಸ್ಟ್ ಡಾ. ಶ್ರೀನಿವಾಸ್ ಪ್ರಸಾದ್, ಯೂರೋ ಆಂಕಾಲಜಿ ಯುರೋ-ಗೈನಕಾಲಜಿ, ಆಂಡ್ರಾಲಜಿ, ಕಸಿ ಮತ್ತು ರೋಬೋಟಿಕ್ ಸರ್ಜರಿಯ ಹಿರಿಯ ನಿರ್ದೇಶಕ ಡಾ. ಮೋಹನ್ ಕೇಶವ್ಮೂರ್ತಿ ಅವರ ತಂಡ ಈ ಶಸ್ತ್ರಚಿಕಿತ್ಸೆ ನಡೆಸಿದೆ. ಈ ಕುರಿತು ಮಾತನಾಡಿದ ಡಾ. ಸುದರ್ಶನ್ ಜಿ.ಟಿ. ಮಡಗಾಸ್ಕರ್ ದ್ವೀಪ ದೇಶದ 64 ವರ್ಷದ ವ್ಯಕ್ತಿಯ ಆರೋಗ್ಯದ ಹಿನ್ನೆಲೆ ಅತ್ಯಂತ ಕೆಟ್ಟ ಪರಿಸ್ಥಿತಿಯಲ್ಲಿತ್ತು. ಮಧುಮೇಹ, ಮೂತ್ರಪಿಂಡ ವೈಫಲ್ಯ, ಪ್ರಾಸ್ಟೆಟ್ ಗ್ರಂಥಿಯ ಸಮಸ್ಯೆ, ಟ್ರಿಪಲ್ ವೆಸೆಲ್ ಕೊರೊನರಿ ಕಾಯಿಲೆ ಸೇರಿದಂತೆ ಸಾಕಷ್ಟು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಇವರ ಮಧುಮೇಹದ ಕಾರಣದಿಂದ ಕೆಲವು ವರ್ಷಗಳ ಹಿಂದೆಯೇ…
ನವದೆಹಲಿ: 70 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ವಿಜೇತರನ್ನು ಶುಕ್ರವಾರ (ಆಗಸ್ಟ್ 16) ಘೋಷಿಸಲಾಗುತ್ತಿದೆ. ಈ ವರ್ಷ ಆಡುಜೀವಿತಂ, 12ನೇ ಫೇಲ್, ಒಎಂಜಿ 2, ಥ್ರೀ ಆಫ್ ಉಸಾತಲ್ – ದಿ ಕೋರ್, ಆಟಂ, ನನ್ಪಕಲ್ ನೆರತು ಮಾಯಕ್ಕಂ ಮುಂತಾದ ಚಿತ್ರಗಳು ಪ್ರಶಸ್ತಿಗಾಗಿ ಸ್ಪರ್ಧೆಯಲ್ಲಿವೆ. ಇವುಗಳಲ್ಲಿ ಅನೇಕ ಚಿತ್ರಗಳು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಗೆದ್ದುಕೊಂಡಿವೆ. ಹಾಗಾದ್ರೇ ಆ ಸಂಪೂರ್ಣ ಪಟ್ಟಿ ಮುಂದಿದೆ ಓದಿ. 2023 ರಲ್ಲಿ, ಪುಷ್ಪಾ ದಿ ರೈಸ್ ಚಿತ್ರಕ್ಕಾಗಿ ಅಲ್ಲು ಅರ್ಜುನ್ ಅತ್ಯುತ್ತಮ ನಟ ಪ್ರಶಸ್ತಿಯನ್ನು ಗೆದ್ದರೆ, ಗಂಗೂಬಾಯಿ ಕಾಥಿಯಾವಾಡಿ ಮತ್ತು ಮಿಮಿಗಾಗಿ ಕೃತಿ ಸನೋನ್ ಕ್ರಮವಾಗಿ ಆಲಿಯಾ ಭಟ್ ಮತ್ತು ಕೃತಿ ಸನೋನ್ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಪಡೆದರು. ಮಾಧವನ್ ಅವರ ರಾಕೆಟ್ರಿ: ದಿ ನಂಬಿ ಎಫೆಕ್ಟ್ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿಯನ್ನು ಗೆದ್ದುಕೊಂಡಿತು. ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ದೇಶಾದ್ಯಂತದ ಅತ್ಯುತ್ತಮ ಚಲನಚಿತ್ರ ನಿರ್ಮಾಣ ಪ್ರತಿಭೆಗಳ ಸಿನಿಮೀಯ ಪ್ರತಿಭೆಯನ್ನು ಗೌರವಿಸಲು ವಾರ್ಷಿಕವಾಗಿ ಘೋಷಿಸಲಾಗುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದಾಗಿದೆ.…
ನವದೆಹಲಿ: 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಆಗಸ್ಟ್ 16, ಶುಕ್ರವಾರ ಘೋಷಿಸಲಾಯಿತು ಮತ್ತು 2023 ರ ಮಲಯಾಳಂ ಚಿತ್ರ ಆಟಂ ಅನ್ನು ಪ್ರತಿಷ್ಠಿತ ಪ್ರಶಸ್ತಿ ಸಮಾರಂಭದಲ್ಲಿ ಅತ್ಯುತ್ತಮ ಚಲನಚಿತ್ರವೆಂದು ಘೋಷಿಸಲಾಯಿತು. ಆನಂದ್ ಏಕರ್ಶಿ ಬರೆದು ನಿರ್ದೇಶಿಸಿರುವ ಆಟಂ ಸಸ್ಪೆನ್ಸ್ ಚೇಂಬರ್ ಡ್ರಾಮಾ ಆಗಿದ್ದು, ವಿನಯ್ ಫೋರ್ಟ್, ಕಲಾಭವನ್ ಶಾಜಾನ್, ಜರೀನ್ ಶಿಹಾಬ್ ಮತ್ತು ಇತರರು ಮುಖ್ಯ ಪಾತ್ರಗಳಲ್ಲಿದ್ದಾರೆ. ವರದಿಗಳ ಪ್ರಕಾರ, ಆಟಮ್ ಪ್ರಸಿದ್ಧ ಅಮೇರಿಕನ್ ಕೋರ್ಟ್ ರೂಮ್ ಡ್ರಾಮಾ, ಟ್ವೆಲ್ವ್ ಆಂಗ್ರಿ ಮೆನ್ ಅನ್ನು ಸಡಿಲವಾಗಿ ಆಧರಿಸಿದೆ. 2023 ರಲ್ಲಿ ಗೋವಾದಲ್ಲಿ ನಡೆದ 54ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಆಟಂ ಆರಂಭಿಕ ಚಲನಚಿತ್ರವಾಗಿ ಆಯ್ಕೆಯಾಗಿದೆ. https://www.youtube.com/watch?v=kpEAS7zBl7g ಆಟಂನ ಕಥೆಯು ರಂಗಭೂಮಿ ಗುಂಪಿನ ಏಕೈಕ ಮಹಿಳಾ ಸದಸ್ಯೆಯ ಲೈಂಗಿಕ ಕಿರುಕುಳದ ಆರೋಪದ ಸುತ್ತ ಸುತ್ತುತ್ತದೆ. ಜನಪ್ರಿಯ ತಾರೆಯೊಬ್ಬರು ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಅವಳು ಆರೋಪಿಸುತ್ತಾಳೆ, ಮತ್ತು ಅವಳ ತಂಡದ ಸದಸ್ಯರು ಆರಂಭದಲ್ಲಿ ಅವಳನ್ನು ಬೆಂಬಲಿಸಿದರೂ, ಸೂಪರ್ಸ್ಟಾರ್ ಯುರೋಪ್ನಲ್ಲಿ ಪ್ರದರ್ಶನ ನೀಡಲು ಸಂಭಾವ್ಯ…
ಶಿವಮೊಗ್ಗ: 2023-24ನೇ ಸಾಲಿನ ಪ್ರಥಮ ಸೆಮಿಸ್ಟರ್ ಬಿಇಡಿ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನು ಬರೆಯುವುದಕ್ಕೆ ಕುವೆಂಪು ವಿಶ್ವವಿದ್ಯಾಲಯವು ಕರ್ನಾಟಕ ಹೈಕೋರ್ಟ್ ಆದೇಶದ ಮೇರೆಗೆ ಅವಕಾಶ ಮಾಡಿಕೊಟ್ಟಿರುವುದಾಗಿ ತಿಳಿದು ಬಂದಿದೆ. NCTEಯಿಂದ ಶಿವಮೊಗ್ಗ ಜಿಲ್ಲೆಯ ಸಾಗರದ ಉಳ್ಳೂರಿನಲ್ಲಿರುವಂತ ಸಾಗರ ಗಂಗೋತ್ರಿ ಶಿಕ್ಷಣ ಮಹಾವಿದ್ಯಾಲಯದ ಮಾನ್ಯತೆಯನ್ನು ರದ್ದುಗೊಳಿಸಲಾಗಿತ್ತು. ಹೀಗಾಗಿ ದಿನಾಂಕ 14-12-2023ರಲ್ಲಿ ಕುವೆಂಪು ವಿಶ್ವವಿದ್ಯಾಲಯದಿಂದ ಸಾಗರ ಗಂಗೋತ್ರಿ ಶಿಕ್ಷಣ ಮಹಾವಿದ್ಯಾಲಯದ ಸಂಯೋಜನೆಯನ್ನು ಮುಂದಿನ ಆದೇಶದವರೆಗೂ ರದ್ದುಪಡಿಸಲಾಗಿದೆ ಎಂಬುದಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿತ್ತು. ಇದಷ್ಟೇ ಅಲ್ಲದೇ 2023-24ನೇ ಸಾಲಿನಿಂದ ಬಿ.ಎಡ್ ಗೆ ಹೊಸ ದಾಖಲಾತಿಗಳನ್ನು ಮಾಡಿಕೊಳ್ಳಲು ಅವಕಾಶವಿಲ್ಲ. ಕುವೆಂಪು ವಿವಿಯ ಅಭಿವೃದ್ಧಿ ಪರಿಷತ್ ಕಾರ್ಯಾಲಯವು 2023-24ನೇ ಸಾಲಿನ ಸಂಯೋಜನೆಯನ್ನು ಹಿಂಪಡೆಯಲಾಗಿದೆ ಎಂಬುದಾಗಿಯೂ ಸ್ಪಷ್ಟವಾಗಿ ತಿಳಿಸಿತ್ತು. ಆದರೇ ಸಾಗರ ಗಂಗೋತ್ರಿ ಶಿಕ್ಷಣ ಮಹಾವಿದ್ಯಾಲಯದ ಆಡಳಿತ ಮಂಡಳಿಯು ಈ ವಿಷಯವನ್ನು ಹೈಕೋರ್ಟ್ ನಲ್ಲಿ ಪ್ರಶ್ನಿಸಿತ್ತು. ಹೈಕೋರ್ಟ್ ಸಾಗರ ಗಂಗೋತ್ರಿಯ ಮನವಿಯನ್ನು ಪುರಸ್ಕರಿಸಿ, ಎನ್ ಸಿ ಟಿ ಇಗೆ ಸೂಕ್ತ ದಾಖಲೆಗಳನ್ನು ಸಲ್ಲಿಸುವಂತೆ ದಿನಾಂಕ 06-02-2024ರಂದು ಸೂಚಿಸಿತ್ತು. NCTEಯ ಅಫೀಲ್ ಕಮಿಟಿ…
ಬೆಂಗಳೂರು: ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ಬಿಜೆಪಿಯ ಹಿರಿಯ ನಾಯಕ, ಮಾಜಿ ಶಾಸಕ ಎ.ಎಸ್ ಬಸವರಾಜು ಅವರು ಇಂದು ನಿಧನರಾಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಹಾಸನ ಜಿಲ್ಲೆಯ ಅರಸೀಕೆರೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾಗಿದ್ದಂತ ಅವರು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದ ಕಾರಣ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದರು. ಇಂತಹ ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಬಿಜೆಪಿಯ ಹಿರಿಯ ನಾಯಕರಾಗಿದ್ದಂತ ಎ.ಎಸ್ ಬಸವರಾಜು ಅವರು, ಅರಸೀಕೆರೆ ವಿಧಾನಸಭಾ ಕ್ಷೇತ್ರದಿಂದ 2004 ರಿಂದ 2007ರವರೆಗೆ ಶಾಸಕರಾಗಿದ್ದರು. ಬಿಎಸ್ ಯಡಿಯೂರಪ್ಪ ಅವರ ಆಪ್ತರಾಗಿಯೂ ಗುರ್ತಿಸಿಕೊಂಡಿದ್ದರು. ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದಂತ ಅವರು, ಇಂದು ಚಿಕಿತ್ಸೆ ಫಲಿಸದೇ ವಿಧಿವಶರಾಗಿರುವುದಾಗಿ ತಿಳಿದು ಬಂದಿದೆ. ಇಂದು ನಿಧನರಾದಂತ ಬಿಜೆಪಿ ಹಿರಿಯ ನಾಯಕ ಎಎಸ್ ಬಸವರಾಜು ಅವರನ್ನು ನಾಳೆ ಅರಸೀಕೆರೆಯ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ ಎನ್ನಲಾಗುತ್ತಿದೆ. https://kannadanewsnow.com/kannada/posting-for-coin-in-kptlc-226-je-transfer-pull-deal-maga-deal/ https://kannadanewsnow.com/kannada/good-news-home-minister-g-parameshwara-clarifies-that-appointment-orders-will-be-issued-to-545-psi-candidates-soon/
ಬೆಂಗಳೂರು: ರಾಜ್ಯ ಸರ್ಕಾರದಿಂದ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸೋದಕ್ಕೆ ಹೆಣಗಾಡುತ್ತಿದೆ. ಅಲ್ಲದೇ ಅನರ್ಹರು ಬಿಪಿಎಲ್ ಕಾರ್ಡ್ ಪಡೆದಿರುವುದು ಗ್ಯಾರಂಟಿ ಯೋಜನೆಯ ಹಣ ಹೆಚ್ಚು ಖರ್ಚಾಗುತ್ತಿರೋದಕ್ಕೂ ಕಾರಣವಾಗಿದೆ ಎನ್ನಲಾಗುತ್ತಿದೆ. ಹೀಗಾಗಿ ಶೀಘ್ರವೇ ಅಕ್ರಮ ಬಿಪಿಎಲ್ ಕಾರ್ಡ್ ರದ್ದುಗೊಳಿಸುವ ಸಂಬಂಧ ಆಪರೇಷನ್ ಕಾರ್ಯಾಚರಣೆ ಆರಂಭಿಸಲಾಗುತ್ತಿದೆ. ರಾಜ್ಯ ಸರ್ಕಾರದಿಂದ ಬಿಪಿಎಲ್ ಕಾರ್ಡ್ ಗೆ ಕೆಲವೊಂದು ಷರತ್ತು ವಿಧಿಸೋದಕ್ಕೆ ಪ್ಲಾನ್ ಮಾಡಿದೆಯಂತೆ. ಅದರಿಂದ 25,000 ಕೋಟಿ ರೂ ಉಳಿತಾಯಕ್ಕೆ ಮುಂದಾಗಿದೆ ಎನ್ನಲಾಗುತ್ತಿದೆ. ಈ ಕಾರಣದಿಂದಲೇ ಅಕ್ಟೋಬರ್ ವೇಳೆಗೆ ಆಪರೇಷನ್ ಬಿಪಿಎಲ್ ಕಾರ್ಡ್ ಚಾಲನೆಗೊಳಿಸುತ್ತಿದೆ. ಇದಕ್ಕೆ ಸಿಎಂ ಸಿದ್ಧರಾಮಯ್ಯ ಕೂಡ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಅನರ್ಹರು ಪಡೆದಿರುವಂತ ಬಿಪಿಎಲ್ ಕಾರ್ಡ್ ಗಳನ್ನು ಪತ್ತೆಗೆ ಇಳಿಯುವಂತ ಅಧಿಕಾರಿಗಳು, ಅಂತಹ ಕಾರ್ಡ್ ಗಳನ್ನು ರದ್ದುಗೊಳಿಸೋ ಪ್ರಕ್ರಿಯೆಯನ್ನು ಶುರು ಮಾಡಲಿದ್ದಾರೆ. ಈ ಮೂಲಕ ಸಹಜವಾಗಿಯೇ ಗ್ಯಾರಂಟಿ ಯೋಜನೆಗಳಿಂದ ಫಲಾನುಭವಿಗಳು ಹೊರಗುಳಿಸುವಂತ ಮಾಸ್ಟರ್ ಪ್ಲಾನ್ ನಡೆಯುತ್ತಿದೆ ಎನ್ನಲಾಗಿದೆ. ಅಂದಹಾಗೇ ರಾಜ್ಯಾಧ್ಯಂತ 14 ಲಕ್ಷಕ್ಕೂ ಹೆಚ್ಚು ಅಕ್ರಮ ಬಿಪಿಎಲ್ ಕಾರ್ಡ್ ಇದ್ದಾವೆ ಎನ್ನಲಾಗುತ್ತಿದೆ. ಅವುಗಳನ್ನು ಪತ್ತೆ…