Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆದಿದೆ ಎನ್ನಲಾಗಿರುವಂತ ಅವ್ಯವಹಾರದ ಬಗ್ಗೆ ವಿಚಾರಣಾಧಿಕಾರಿಯನ್ನು ನೇಮಿಸಿ ತನಿಖೆಗೆ ಸಹಕಾರ ಇಲಾಖೆ ಆದೇಶಿಸಿದೆ. ಈ ಕುರಿತಂತೆ ಸಂಘಗಳ ಜಿಲ್ಲಾ ನೋಂದಣಾಧಿಕಾರಿಗಳು ಹಾಗೂ ಸಹಕಾರ ಸಂಘಗಳ ಉಪ ನಿಬಂಧಕರು ಆದೇಶ ಹೊರಡಿಸಿದ್ದು, ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು ಈ ಸಂಸ್ಥೆಯು ಕರ್ನಾಟಕ ಸಂಘಗಳ ನೋಂದಣಿ ಅಧಿನಿಯಮ 1960ರಡಿ ನೋಂದಣಿಗೊಂಡು ಕಾರ್ಯನಿರ್ವಹಿಸುತ್ತಿದೆ. ಈ ಸಂಸ್ಥೆಯ ವಿರುದ್ದ ಈ ಕಛೇರಿಗೆ ವಿವಿಧ ದಿನಾಂಕಗಳಂದು ದೂರು ಅರ್ಜಿಗಳು ಸಲ್ಲಿಕೆಯಾಗಿರುತ್ತವೆ. ಸದರಿ ದೂರು ಅರ್ಜಿಗಳ ಕುರಿತು ಸತ್ಯಾಸತ್ಯತೆಯನ್ನು ಅರಿಯಲು ಕರ್ನಾಟಕ ಸಂಘಗಳ ನೋಂದಣಿ ಅಧಿನಿಯಮ 1960 ರ ಪ್ರಕರಣ 25ರಡಿ ವಿಚಾರಣೆ ನಡೆಸುವುದು ಸೂಕ್ತವೆಂದು ಮನಗಂಡು ಸ್ವಪ್ರೇರಣೆಯಿಂದ ವಿಚಾರಣೆ ನಡೆಸಲು ನಿರ್ಧರಿಸಿ ಕೆಳಕಂಡ ಆದೇಶ ಹೊರಡಿಸಿರುವುದಾಗಿ ತಿಳಿದ್ದಾರೆ. ಪ್ರಸ್ತಾವನೆಯಲ್ಲಿ ತಿಳಿಸಿರುವ ಅಂಶಗಳ ಹಿನ್ನೆಲೆಯಲ್ಲಿ ಕರ್ನಾಟಕ ಸಂಘಗಳ ನೋಂದಣಿ ಅಧಿನಿಯಮ 1960ರ ಪ್ರಕರಣ 25 ರಡಿಯಲ್ಲಿ ದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ ಸಹಕಾರ ಸಂಘಗಳ ಉಪ ನಿಬಂಧಕರು, 2ನೇ ವಲಯ, ಬೆಂಗಳೂರು ನಗರ ಜಿಲ್ಲೆ ಆದ…
ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (National Testing Agency – NTA) ಜುಲೈ 4 ರಂದು CUET UG 2025 ಫಲಿತಾಂಶಗಳನ್ನು ಪ್ರಕಟಿಸಲಿದೆ ಎಂದು ಸಂಸ್ಥೆ ಮಂಗಳವಾರ ದೃಢಪಡಿಸಿದೆ. ಪದವಿಪೂರ್ವ ಕಾರ್ಯಕ್ರಮಗಳಿಗೆ ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆ (Common University Entrance Test for Undergraduate programmes -CUET UG) ಭಾರತದಾದ್ಯಂತ ಕೇಂದ್ರೀಯ ಮತ್ತು ಇತರ ಹಲವಾರು ಭಾಗವಹಿಸುವ ವಿಶ್ವವಿದ್ಯಾಲಯಗಳಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಪ್ರಮುಖ ಪರೀಕ್ಷೆಯಾಗಿದೆ. ಫಲಿತಾಂಶಗಳು ಅಧಿಕೃತ ವೆಬ್ಸೈಟ್ – exams.nta.ac.in/CUET-UG ನಲ್ಲಿ ಲಭ್ಯವಿರುತ್ತವೆ. ವಿದ್ಯಾರ್ಥಿಗಳು ತಮ್ಮ ಅರ್ಜಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ಬಳಸಿಕೊಂಡು ತಮ್ಮ ಅಂಕಗಳನ್ನು ಪರಿಶೀಲಿಸಲು ಸಾಧ್ಯವಾಗುತ್ತದೆ. https://twitter.com/NTA_Exams/status/1940411679780778084 ಈ ವರ್ಷ, CUET UG ಪರೀಕ್ಷೆಯನ್ನು ಮೇ 15 ಮತ್ತು ಮೇ 24, 2025 ರ ನಡುವೆ ಹೈಬ್ರಿಡ್ ಸ್ವರೂಪದಲ್ಲಿ ನಡೆಸಲಾಯಿತು – ಕೆಲವು ಪತ್ರಿಕೆಗಳನ್ನು CBT (ಕಂಪ್ಯೂಟರ್ ಆಧಾರಿತ ಪರೀಕ್ಷೆ) ಮೋಡ್ನಲ್ಲಿ ಮತ್ತು ಇತರವುಗಳನ್ನು ಪೆನ್-ಅಂಡ್-ಪೇಪರ್ ಸ್ವರೂಪದಲ್ಲಿ ನಡೆಸಲಾಯಿತು. ಪರೀಕ್ಷೆಯನ್ನು ಭಾರತ ಮತ್ತು…
ಶಿವಮೊಗ್ಗ: ಜಿಲ್ಲೆಯ ಸಾಗರ ನಗರದ ಉಪ ವಿಭಾಗೀಯ ಆಸ್ಪತ್ರೆಯ ಸಿವಿಲ್ ಸರ್ಜನ್ ಡಾ.ಪರಪ್ಪ.ಕೆ ಜನಾನುರಾಗಿಯಾಗಿದ್ದವರು. ಎಷ್ಟೇ ಹೊತ್ತಿನಲ್ಲಿ ರೋಗಿಗಳು ಕರೆ ಮಾಡಿ ಸೇವೆಗೆ ಕೋರಿದ್ರೆ ಸಾಕು, ಕ್ಷಣಾರ್ಧ ಚಿಕಿತ್ಸೆಗೆ ಹಾಜರ್. ಇಂತಹ ಸಹೃದಯಿ ವೈದ್ಯ ಡಾ.ಪರಪ್ಪ ಇಂದು ನಿವೃತ್ತರಾಗಿದ್ದಾರೆ. ಅವರಿಗೆ ಇಡೀ ತಾಲ್ಲೂಕಿನ ಜನತೆ, ಆರೋಗ್ಯ ಇಲಾಖೆಯ ನೌಕರರು ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಡುಗೆ ನೀಡಿದರು. ಇಂದು ವಯೋನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ನೌಕರರ ಒಕ್ಕೂಟ, ಆರೋಗ್ಯ ರಕ್ಷಾ ಸಮಿತಿ ವತಿಯಿಂದ ನೀಡಲಾದ ಅಭಿನಂದನೆ ಸ್ವೀಕರಿಸಿ ಮಾತನಾಡಿದಂತ ಅವರು, ಆರೋಗ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸುವುದು ಸವಾಲಿನ ಕೆಲಸ. ಆಸ್ಪತ್ರೆಯೊಳಗಿನ ವೈದ್ಯಸಿಬ್ಬಂದಿಗಳ ಜೊತೆ ಜನಪ್ರತಿನಿಧಿಗಳು, ಸಾರ್ವಜನಿಕರ ಸಹಕಾರ ಉತ್ತಮ ಕೆಲಸ ಮಾಡಲು ಅತ್ಯಗತ್ಯ ಎಂದರು. ಹಣದ ಹಿಂದೆ ಹೋದರೆ ನೆಮ್ಮದಿ ಸಿಗುವುದಿಲ್ಲ. ನಾವು ಸರ್ಕಾರಿ ಸೇವಕರಾಗಿ ಸೇರಿದ ನಂತರ ಒಂದಷ್ಟು ಸಾಮಾಜಿಕ ಸೇವೆಯನ್ನು ಮೈಗೂಡಿಸಿಕೊಳ್ಳಬೇಕು. ಅದರಲ್ಲೂ ಸರ್ಕಾರಿ ಆಸ್ಪತ್ರೆಯ ವೈದ್ಯರಾದವರ ಮೇಲೆ ಅತಿಹೆಚ್ಚು ಹೊಣೆ ಇರುತ್ತದೆ. ರೋಗಿಗಳಿಗೆ ಉತ್ತಮ ಸೇವೆ ನೀಡುವ ಮೂಲಕ…
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಅಂಬಾರಗೋಡ್ಲು-ಕಳಸವಳ್ಳಿ ಸೇತುವೆಗೆ ಕೇಂದ್ರ ಸರ್ಕಾರದಿಂದ ಹಣ ಕೊಟ್ಟಿದ್ದಾರೆ. ನಮ್ಮ ರಾಜ್ಯದ ತೆರಿಗೆ ಹಣ ಕೊಟ್ಟಿದ್ದಾರೆಯೆ ವಿನಃ ಬಿ.ವೈ.ರಾಘವೇಂದ್ರ, ವಿಜಯೇಂದ್ರ ಮನೆಯಿಂದ ಹಣ ಕೊಟ್ಟು ಸೇತುವೆ ಮಾಡಿಲ್ಲ. ಆದರೆ ವಾರಕ್ಕೊಮ್ಮೆ ಬಂದು ನಾನೇ ಸೇತುವೆ ಮಾಡಿದ್ದು ಎಂದು ಬಿಂಬಿಸಿಕೊಳ್ಳುತ್ತಿರುವ ಸಂಸದ ರಾಘವೇಂದ್ರ ವರ್ತನೆ ಹಾಸ್ಯಾಸ್ಪದ ಎಂಬುದಾಗಿ ಸಂಸದ ಬಿವೈ ರಾಘವೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಶಾಸಕ ಗೋಪಾಲಕೃಷ್ಣ ಬೇಳೂರು ವಾಗ್ಧಾಳಿ ನಡೆಸಿದ್ದಾರೆ. ಇಂದು ಶಿವಮೊಗ್ಗದ ಸಾಗರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ತುಮರಿ ಸೇತುವೆ ಪಕ್ಕ ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಬಿ.ವೈ.ವಿಜಯೇಂದ್ರ ಟೆಂಟ್ ಹಾಕಿಕೊಂಡು ಕುಳಿತುಕೊಂಡು, ಸೇತುವೆ ಮಾಡಿದ್ದು ನಾವು ಎಂದು ಬಂದವರಿಗೆಲ್ಲಾ ಪ್ರಚಾರ ಮಾಡುವುದು ಒಳ್ಳೆಯದು ಎಂಬುದಾಗಿ ವ್ಯಂಗ್ಯವಾಡಿದರು. ಅಂಬಾರಗೋಡ್ಲು-ಕಳಸವಳ್ಳಿ ಸೇತುವೆಗೆ ಮೊದಲು ನಾನು ಮನವಿ ಮಾಡಿದ್ದೇ. ಯಡಿಯೂರಪ್ಪನವರು ಉಪ ಮುಖ್ಯಮಂತ್ರಿಯಾಗಿದ್ದಾಗ ಸಿಗಂದೂರು ಕ್ಷೇತ್ರದಲ್ಲಿ ಸೇತುವೆ ಮಾಡಿಸಿಕೊಡುವುದಾಗಿ ಮಾತು ಕೊಟ್ಟಿದ್ದರು. ನಂತರ ಸಂಸದರಾದ ಮೇಲೆ ನಿತಿನ್ ಗಡ್ಕರಿ ಮೇಲೆ ಒತ್ತಡ ತಂದು ಸೇತುವೆ…
ಶಿವಮೊಗ್ಗ: ಸಾಗರ ಕ್ಷೇತ್ರದ ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿಯಲ್ಲಿ ಸಂಸದರ ಹಸ್ತಕ್ಷೇಪ ಸಹಿಸುವುದಿಲ್ಲ. ನಿಯಮದಂತೆ ನಗರವ್ಯಾಪ್ತಿಯಲ್ಲಿ ರಸ್ತೆ, ಚರಂಡಿ ಕಾಮಗಾರಿಯನ್ನು ಅತಿಶೀಘ್ರವಾಗಿ ಮುಗಿಸಿ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಎಂಬುದಾಗಿ ಒತ್ತಾಯಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಉಪವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹೆದ್ದಾರಿ 206 ಅಗಲೀಕರಣಕ್ಕೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದಂತ ಅವರು, ಕೆಲವರು ಸಂಸದರ ಬಳಿ ಹೋಗಿ ತಮ್ಮ ಜಾಗ ಉಳಿಸಿಕೊಳ್ಳಲು ಮನವಿ ಮಾಡಿದ್ದು ನನ್ನ ಗಮನಕ್ಕೆ ಬಂದಿದೆ. ಇಂತಹ ಶಾಶ್ವತವಾದ ಯೋಜನೆ ಮಾಡುವಾಗ ಯಾರನ್ನೋ ಉಳಿಸಲು ಹೋಗಿ ಊರಿನ ಅಂದ ಹಾಳಾಗುವುದನ್ನು ನಾನು ಸಹಿಸುವುದಿಲ್ಲ ಎಂದರು. ಕಾಮಗಾರಿ ಪ್ರಾರಂಭವಾಗಿ ಮರ್ನಾಲ್ಕು ವರ್ಷ ಕಳೆದಿದೆ. ಜುಲೈ 10ರೊಳಗೆ ಕಾಮಗಾರಿ ಮುಗಿಸುವ ಆದೇಶವಿದ್ದರೂ ನೀವು ವಿಳಂಬ ಮಾಡುತ್ತಿದ್ದೀರಿ. ಅಗಲೀಕರಣ ಕಾಮಗಾರಿಯಲ್ಲಿ ರಸ್ತೆ, ಡ್ರೈನೇಜ್ ಬಗ್ಗೆ ಸಾಕಷ್ಟು ದೂರುಗಳಿವೆ. ನಿಮ್ಮ ಲೋಪದಿಂದ ನಾನು ಕೆಟ್ಟ ಹೆಸರು ತೆಗೆದುಕೊಳ್ಳಬೇಕಾ ಎಂದು ಪ್ರಶ್ನಿಸಿದ…
ಬೆಂಗಳೂರು: ಅಕ್ಟೋಬರ್ ಅಥವಾ ನವೆಂಬರ್ನಲ್ಲಿ ಖಚಿತವಾಗಿ ಸಿಎಂ ಬದಲಾವಣೆಯಾಗಲಿದೆ. ಕಾಂಗ್ರೆಸ್ ಪಕ್ಷ ಮನೆಯೊಂದು ಮೂರು ಬಾಗಿಲು ಆಗಿದ್ದು, ಎಲ್ಲರೂ ಸಿಎಂ ಆಗಲು ಮುಂದಾಗಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಟೀಕಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಕ್ಟೋಬರ್ ಅಥವಾ ನವೆಂಬರ್ನಲ್ಲಿ ಖಚಿತವಾಗಿ ಸಿಎಂ ಬದಲಾವಣೆಯಾಗಲಿದೆ. ಕಾಂಗ್ರೆಸ್ ಪಕ್ಷ ಮನೆಯೊಂದು ಮೂರು ಬಾಗಿಲು ಆಗಿದ್ದು, ಎಲ್ಲ ಶಾಸಕರು ಮುಖ್ಯಮಂತ್ರಿಯಾಗಲು ಹೊರಟಿದ್ದಾರೆ. ಸಿದ್ದರಾಮಯ್ಯನವರು ಸಿಎಂ ಆಗಿಯೇ ಇರುತ್ತಾರೆಂದು ಪಕ್ಷದ ವರಿಷ್ಠರು ಹೇಳಬೇಕು. ಆದರೆ ಭಯದಿಂದ ಸ್ವತಃ ಸಿದ್ದರಾಮಯ್ಯನವರೇ ಅದನ್ನು ಪದೇ ಪದೆ ಹೇಳುತ್ತಿದ್ದಾರೆ. ಅಧಿಕಾರವನ್ನು ಒದ್ದು ಕಿತ್ತುಕೊಳ್ಳುತ್ತೇನೆ ಎನ್ನುವ ಡಿ.ಕೆ.ಶಿವಕುಮಾರ್ ಅವರೇ ಈ ರೀತಿಯ ಸಂದೇಶ ನೀಡುತ್ತಿದ್ದಾರೆ. ಸರ್ಕಾರದಲ್ಲಿ ಹಣವಿಲ್ಲದೆ, ಅಭಿವೃದ್ಧಿ ಶೂನ್ಯವಾಗಿ ಶಾಸಕರು ಬೇಸರಗೊಂಡಿದ್ದಾರೆ. ಜನರಿಗೆ ವಿಶ್ವಾಸ ಹೊರಟುಹೋಗಿದೆ ಎಂದರು. 2028 ರವರೆಗೆ ಸಿದ್ದರಾಮಯ್ಯನವರೇ ಸಿಎಂ ಎಂದು ಡಿ.ಕೆ.ಶಿವಕುಮಾರ್ ಹೇಳಲಿ. ಅದನ್ನು ಆರನೇ ಗ್ಯಾರಂಟಿ ಎಂದು ಅಂದುಕೊಂಡು ಸುಮ್ಮನಾಗುತ್ತೇವೆ ಎಂದರು. ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಮನಮೋಹನ್ ಸಿಂಗ್ ಹೆಸರು ಸೂಕ್ತವಲ್ಲ. ಜಿಲ್ಲೆಗಳ ಹೆಸರನ್ನು ಬದಲಿಸಿದಂತೆಯೇ ಏಕಾಏಕಿ ಹೆಸರು…
ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ಬಗ್ಗೆ ಅಸಂಸದೀಯ ಪದವನ್ನು ಬಿಜೆಪಿ ಎನ್.ರವಿಕುಮಾರ್ ಬಳಕೆ ಮಾಡಿದ್ದರು. ಈ ಹಿನ್ನಲೆಯಲ್ಲಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಪೊಲೀಸರಿಗೆ ದೂರು ನೀಡಿದೆ. ಇಂದು ವಿಧಾನಸೌಧ ಪೊಲೀಸ್ ಠಾಣೆಗೆ ತೆರಳಿದಂತ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್ ಮನೋಹರ್ ಅವರು ಬಿಜೆಪಿಯ ಎನ್ ರವಿಕುಮಾರ್ ವಿರುದ್ಧ ದೂರು ನೀಡಿದ್ದಾರೆ. ಎನ್ ರವಿಕುಮಾರ್ ಅವರು ಸಿಎಸ್ ಬಗ್ಗೆ ಅಸಂಸದೀಯ ಪದಗಳನ್ನು ಬಳಕೆ ಮಾಡಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಲಾಗಿದೆ. https://kannadanewsnow.com/kannada/the-state-cabinet-approved-the-name-of-manmohan-singh-for-the-bengaluru-city-university/ https://kannadanewsnow.com/kannada/breaking-explosion-in-telangana-chemical-factory-death-toll-rises-to-40-telangana-factory-blast/
ಬೆಂಗಳೂರು: ಡಿಪ್ಲೊಮಾ ಅಭ್ಯರ್ಥಿಗಳಿಗೆ ಎಂಜಿನಿಯರಿಂಗ್ನ 2ನೇ ವರ್ಷ ಅಥವಾ 3ನೇ ಸೆಮಿಸ್ಟರ್ಗೆ ನೇರ ಪ್ರವೇಶ ಕಲ್ಪಿಸುವ ಸಂಬಂಧ ಮೊದಲ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಜುಲೈ 3ರಿಂದ ಆರಂಭಿಸಲಿದ್ದು, ಫಲಿತಾಂಶವನ್ನು ಜುಲೈ 9ರಂದು ಪ್ರಕಟಿಸಲಿದೆ. ಅಭ್ಯರ್ಥಿಗಳು ತಮಗೆ ಬೇಕಾದ ಕೋರ್ಸ್ ಹಾಗೂ ಕಾಲೇಜುಗಳನ್ನು ಆಯ್ಕೆ ಮಾಡಿಕೊಂಡು, ಆದ್ಯತಾ ಕ್ರಮದಲ್ಲಿ ದಾಖಲಿಸಲು ಜುಲೈ 5ರಂದು ಬೆಳಿಗ್ಗೆ 11ಗಂಟೆವರೆಗೆ ಅವಕಾಶ ನೀಡಲಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ. ಜುಲೈ 7ರಂದು ಅಣಕು ಸೀಟು ಹಂಚಿಕೆ ಫಲಿತಂಶವನ್ನು ಪ್ರಕಟಿಸಲಾಗುತ್ತದೆ. ಬಳಿಕ ಅಭ್ಯರ್ಥಿಗಳು ತಮ್ಮ ಇಚ್ಛೆ/ಆಯ್ಕೆಗಳನ್ನು ಬದಲಿಸಿಕೊಳ್ಳಲು ಜುಲೈ 8ರಂದು ಸಂಜೆ 4ಗಂಟೆವರೆಗೆ ಅವಕಾಶ ಇರುತ್ತದೆ. ಅಂತಿಮವಾಗಿ ಜುಲೈ 9ರಂದು ಸೀಟು ಹಂಚಿಕೆ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಅವರು ಹೇಳಿದರು. ಸೀಟು ಹಂಚಿಕೆಯಾದ ಅಭ್ಯರ್ಥಿಗಳು ಛಾಯ್ಸ್ ಅನ್ನು ಆಯ್ಕೆ ಮಾಡಲು ಜು.10ರಿಂದ 13ರವರೆಗೆ ಅವಕಾಶ ಇರುತ್ತದೆ. ಛಾಯ್ಸ್-1 ಮತ್ತು 2 ಅನ್ನು ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳು ಚಲನ್ ಡೌನ್ ಲೋಡ್ ಮಾಡಿಕೊಳ್ಳಬಹುದು.…
ಹಾಸನ: ಜಿಲ್ಲೆಯಲ್ಲಿ ಹೃದಯಾಘಾತಗಳ ಪ್ರಕರಣಗಳು ಮುಂದುವರೆದಿವೆ. ಇಂದು ಮತ್ತೊಬ್ಬ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಹಾಸನ ತಾಲ್ಲೂಕಿನ ಮುಟ್ನಳ್ಳಿ ಗ್ರಾಮ ಸಣ್ಣಪ್ಪಶೆಟ್ಟಿ(52) ಎಂಬುವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಎದೆ ನೋವಿನಿಂದ ಕುಸಿದು ಬಿದ್ದು ಸಣ್ಣಪ್ಪ ಶೆಟ್ಟಿ ಮನೆ ಮುಂದೆಯೇ ಸಾವನ್ನಪ್ಪಿದ್ದಾರೆ. ರೈತ ಸಣ್ಣಪ್ಪಶೆಟ್ಟಿ ಎದೆ ನೋವು ಅಂತ ಮನೆಯವರಿಗೆ ತಿಳಿಸಿದ್ದಾರೆ. ಕೂಡಲೇ 108ಗೆ ಕರೆ ಮಾಡಿ ಸಹೋದರ ತಿಳಿಸಿದ್ದಾರೆ. ಆಂಬುಲೆನ್ಸ್ ಮನೆ ಬಳಿ ಬರುತ್ತಿದ್ದಂತೆ ಸಣ್ಣಪ್ಪ ಶೆಟ್ಟಿ ಮೃತಪಟ್ಟಿದ್ದಾರೆ. ಹೀಗಾಗಿ ಹಾಸನ ಜಿಲ್ಲೆಯಲ್ಲಿ ಒಂದೂವರೆ ತಿಂಗಳಿನಲ್ಲಿ 27 ಮಂದಿ ಸಾವನ್ನಪ್ಪಿದಂತೆ ಆಗಿದೆ. https://kannadanewsnow.com/kannada/attention-railway-passengers-this-special-express-train-service-has-been-extended/ https://kannadanewsnow.com/kannada/the-clarity-in-the-conditions-and-instructions-for-kptcl-is-not-in-the-order-je-transfer-confusion-this-year-too/
ಬೆಂಗಳೂರು: ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಭಾಯಿಸಲು, ನೈಋತ್ಯ ರೈಲ್ವೇಯು ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮತ್ತು ಬೀದರ್, ನಾರಂಗಿ ಹಾಗೂ ಮಾಲ್ಡಾ ಟೌನ್ ನಡುವೆ ಈ ಹಿಂದೆ ಚಲಿಸುತ್ತಿದ್ದ ವಿಶೇಷ ರೈಲು ಸೇವೆಗಳನ್ನು ಈಗಿರುವ ಸಮಯ, ನಿಲುಗಡೆಗಳು ಮತ್ತು ಬೋಗಿಗಳ ಸಂಯೋಜನೆಯೊಂದಿಗೆ ಮುಂದುವರಿಸಲು ನಿರ್ಧರಿಸಿದೆ. ವಿವರಗಳು ಕೆಳಕಂಡಂತಿವೆ: • ಎಸ್ಎಂವಿಟಿ ಬೆಂಗಳೂರು – ಬೀದರ್ – ಎಸ್ಎಂವಿಟಿ ಬೆಂಗಳೂರು ಎಕ್ಸ್ ಪ್ರೆಸ್ ವಿಶೇಷ: 1. ರೈಲು ಸಂಖ್ಯೆ 06539 ಎಸ್ಎಂವಿಟಿ ಬೆಂಗಳೂರು – ಬೀದರ್ ಎಕ್ಸ್ ಪ್ರೆಸ್ ವಿಶೇಷ ರೈಲು ಶುಕ್ರವಾರ ಮತ್ತು ಭಾನುವಾರಗಳಂದು ಮುಂದುವರಿಯಲಿದೆ. ಈ ಹಿಂದೆ 29.06.2025 ರವರೆಗೆ ಕಾರ್ಯನಿರ್ವಹಿಸಲು ತಿಳಿಸಲಾಗಿತ್ತು, ಈಗ ಈ ಸೇವೆಯನ್ನು 04.07.2025 ರಿಂದ 31.08.2025 ರವರೆಗೆ ವಿಸ್ತರಿಸಲಾಗಿದೆ. 2. ರೈಲು ಸಂಖ್ಯೆ 06540 ಬೀದರ್ – ಎಸ್ಎಂವಿಟಿ ಬೆಂಗಳೂರು ಎಕ್ಸ್ ಪ್ರೆಸ್ ವಿಶೇಷ ರೈಲು ಶನಿವಾರ ಮತ್ತು ಸೋಮವಾರಗಳಂದು ಮುಂದುವರಿಯಲಿದೆ. ಈ ಹಿಂದೆ 30.06.2025 ರವರೆಗೆ ಕಾರ್ಯನಿರ್ವಹಿಸಲು ತಿಳಿಸಲಾಗಿತ್ತು, ಈಗ ಈ…














