Author: kannadanewsnow09

ಬೆಳಗಾವಿ: ಜಿಲ್ಲೆಯಲ್ಲಿ ಮಹಾರಾಷ್ಟ್ರದಿಂದ ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದಂತ ಕ್ಯಾಂಟರ್ ಒಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ, ಮೂರು ಕರುಗಳು ಸ್ಥಳದಲ್ಲೇ ಸಾವನ್ನಪ್ಪಿ, ಎರಡು ಗೋವುಗಳು ಗಂಭೀರವಾಗಿ ಗಾಯಗೊಂಡಿರುವಂತ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ಚಿಕ್ಕಬಾಗೇವಾಡಿ ಗ್ರಾಮದ ಬಳಿಯಲ್ಲಿ ಕ್ಯಾಂಟರ್ ಒಂದು ಪಲ್ಟಿಯಾಗಿದೆ. ಈ ಕಾರಣದಿಂದ ಅದರಲ್ಲಿದ್ದಂತ ಜಾನುವಾರುಗಳು ಗಾಯಗೊಂಡಿದ್ದವು. ಕ್ಯಾಂಟರ್ ಪಲ್ಟಿಯಿಂದಾಗಿ ಸ್ಥಳದಲ್ಲೇ ಮೂರು ಕರುಗಳು ಸಾವನ್ನಪ್ಪಿದ್ರೇ, ಎರಡು ಗೋವುಗಳು ಗಂಭೀರವಾಗಿ ಗಾಯಗೊಂಡಿದ್ದಾವೆ. ಕ್ಯಾಂಟರ್ ಪಲ್ಟಿಯಾದ ನಂತ್ರ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಇನ್ನೂ ಗಾಯಗೊಂಡಿದ್ದಂತ ಜಾನುವಾರುಗಳನ್ನು ಹಿಂದೂ ಕಾರ್ಯಕರ್ತರು ರಕ್ಷಿಸಿ, ಸಮೀಪದ ಪಶು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಅಲ್ಲದೇ 9 ಗೋವುಗಳನ್ನು ಇಂಚುಲ ಗೋಶಾಲೆಗೆ ರವಾನಿಸಲಾಗಿದೆ. ಈ ವಿಷಯ ತಿಳಿದಂತ ಬೈಲಹೊಂಗಲ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. https://kannadanewsnow.com/kannada/india-ready-for-2036-olympics-pm-modi-from-red-fort/ https://kannadanewsnow.com/kannada/posting-for-coin-in-kptlc-226-je-transfer-pull-deal-maga-deal/

Read More

ನಾಳೆ ಶ್ರಾವಣ ಮಾಸದ ಶುಕ್ರವಾರ ವರಮಹಾಲಕ್ಷ್ಮೀ. ವರಲಕ್ಷ್ಮಿ ಉಪವಾಸವೂ ಸೇರಿದೆ. ಅಷ್ಟಲಕ್ಷ್ಮೀಯ ಸಂಪತ್ತು ಸಿಗಬೇಕಾದರೆ ನಾಳೆ ಮಾಡಬೇಕಾದ ಸರಳ ಪೂಜಾ ವಿಧಾನವನ್ನು ಇಂದಿನ ಆಧ್ಯಾತ್ಮಿಕ ಪೋಸ್ಟ್ ಮೂಲಕ ತಿಳಿಯಲಿದ್ದೇವೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಇಲ್ಲಿ ಪರಿಹಾರ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ…

Read More

ಕೊಪ್ಪಳ: ಜಿಲ್ಲೆಯ ತುಂಗಭದ್ರಾ ಡ್ಯಾಂನ 19ನೇ ಗೇಟ್ ಕೊಚ್ಚಿ ಹೋಗಿತ್ತು. ಅದನ್ನು ರಿಪೇರಿ ಕಾರ್ಯವನ್ನು ಆರಂಭಿಸಲಾಗಿದೆ. ಐದು ದಿನಗಳ ಬಳಿಕ ಆರಂಭಗೊಂಡಿರುವಂತ ಕ್ರಸ್ಟ್ ಗೇಟ್ ರಿಪೇರಿ ಕಾರ್ಯದ ಸಂದರ್ಭದಲ್ಲಿ ಮೂರು ಬಾರಿ ಪ್ರಯತ್ನಿಸಿದರೂ ಸಾಧ್ಯವಾಗಿಲ್ಲ. ಹೀಗಾಗಿ ರಿಪೇರಿ ಕಾರ್ಯವನ್ನು ಸ್ಥಗಿತಗೊಳಿಸಲಾಗಿದೆ. ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಕೊಚ್ಚಿ ಹೋದ ನಂತ್ರ, ಅದನ್ನು ಮರು ಅಳವಡಿಸುವ ಕಾರ್ಯ ಮುಂದುವರೆದಿದೆ. ಸ್ಟಾಪ್ ಲಾಗ್ ಗೇಟ್ ಕೂರಿಸುವಾಗ ಸಣ್ಣ ಮಟ್ಟದ ತಾಂತ್ರಿಕ ಸಮಸ್ಯೆ ಉಂಟಾಗಿತ್ತು. ಇದನ್ನು ಸರಿಪಡಿಸೋದಕ್ಕೆ ನೀರಿಗಿಳಿದು ತಾಂತ್ರಿಕ ಸಿಬ್ಬಂದಿ ಕೆಲಸ ಮಾಡುತ್ತಿದ್ದರು. ಈ ವೇಳೆಯಲ್ಲೇ ಎರಡು ಬೃಹತ್ ಗಾತ್ರದ ಕ್ರೇನ್ ಗಳ ಮೂಲಕ ಸ್ಟಾಪ್ ಲಾಗ್ ಗೇಟ್ ಇಳಿಸಿ, ಇದೇ ಮಾದರಿಯಲ್ಲಿ 5 ಎಲಿಮೆಂಟ್ ಗಳನ್ನು ಇರಿಸಿ, ಕೂರಿಸುವ ಯೋಜನೆ ಹಾಕಲಾಗಿತ್ತು. ಈ ಕಾರ್ಯಾಚರಣೆಯಲ್ಲಿ 80ಕ್ಕೂ ಹೆಚ್ಚು ಸಿಬ್ಬಂದಿಗಳು ಪಾಲ್ಗೊಂಡಿದ್ದರು. ಮೊದಲ ಹಂತದ ಎಲಿಮೆಂಟ್ ಅಳವಡಿಕೆ ಯಶಸ್ವಿಯಾದಲ್ಲಿ 25 ಟಿಎಂಸಿ ನೀರನ್ನು ಜಲಾಶಯದಿಂದ ಹೋಗುವುದನ್ನು ನಿಲ್ಲಿಸೋದಕ್ಕೆ ಸಾಧ್ಯವಾಗುತ್ತದೆ. ಆದರೇ ಅದು ಸಾಧ್ಯವಾಗಿಲ್ಲ. ಮೂರು…

Read More

ಬೆಂಗಳೂರು: ರಾಜ್ಯಾಧ್ಯಂತ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಅಲ್ಲದೇ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯ ಕಾರಣದಿಂದಾಗಿ ಆರೆಂಜ್ ಅಲರ್ಟ್, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಕುರಿತಂತೆ ಹವಾಮಾನ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ಮಲೆನಾಡು, ಉತ್ತರ ಒಳನಾಡು ಮತ್ತು ಕರಾವಳಿ ಭಾಗದ ಹಲವು ಜಿಲ್ಲೆಗಳಲ್ಲಿ ನಾಳೆ, ನಾಡಿದ್ದು ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ದಾವಣಗೆರೆ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ನೀಡಿದ್ದರೇ, ಯಾದಗಿರಿ, ಕೊಪ್ಪಳ, ರಾಯಚೂರು, ಬಳ್ಳಾರಿ, ಗದಗ, ಉಡುಪಿ, ಉತ್ತರ ಕನ್ನಡ, ಕೊಡಗು, ದಕ್ಷಿಣ ಕನ್ನಡ, ಹಾಸನ, ಮೈಸೂರು ಹಾಗೂ ತುಮಕೂರು ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಶನಿವಾರದಂದು ಕೊಡಗು, ಮೈಸೂರು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಕಾರಣ, ಯೆಲ್ಲೋ ಅಲರ್ಟ್ ನೀಡಲಾಗಿದೆ. ಬೆಂಗಳೂರಿನಲ್ಲಿಯೂ ಎರಡು ದಿನ ಮಳೆಯಾಗಲಿದೆ. ಸಂಜೆ ಅಥವಾ ರಾತ್ರಿಯ ವೇಳೆಯಲ್ಲಿ ಧಾರಾಕಾರ ಮಳೆಯಾಗಲಿದೆ ಎಂಬುದಾಗಿ ರಾಜ್ಯ ಹವಾಮಾನ ಇಲಾಖೆಯಿಂದ ಮುನ್ಸೂಚನೆ…

Read More

ಮಂಡ್ಯ: ’87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ 2024′ ರ ಸಮಿತಿಗಳ ಅಧ್ಯಕ್ಷರು ಮತ್ತು ಸದಸ್ಯರ ಸಭೆಗೆ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗಳ ದಿವ್ಯಸಾನಿದ್ಯದಲ್ಲಿ ಚಾಲನೆ ನೀಡುವ ಮೂಲಕ ನಾಡುನುಡಿಯ ಹಬ್ಬಕ್ಕೆ ಮುನ್ನುಡಿ ಬರೆಯಲಾಯಿತು. ನಗರದ ಅಂಬೇಡ್ಕರ್ ಭವನದಲ್ಲಿ, 87ನೇ ಕನ್ನಡ ಸಾಹಿತ್ಯ ಸಮ್ಮೇಳನದ 28 ಸಮಿತಿಗಳ ಅಧ್ಯಕ್ಷರು ಮತ್ತು ಸದಸ್ಯರ ಸಭೆ ಜರುಗಿತು. ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗಳು ಸಭೆಯನ್ನುದ್ದೇಶಿಸಿ ಮಾತನಾಡಿ, ಇದು ಕನ್ನಡದ ಹಬ್ಬ. ಭಾಷೆಯ ಹಬ್ಬ. ಮಂಡ್ಯದಲ್ಲಿ ನೆರವೇರಲಿರುವ ಸಾಹಿತ್ಯ ಸಮ್ಮೇಳನ ನೆನಪಿನ ಉಳಿಯುವಂತಾಗಬೇಕು. ಕನ್ನಡ ಕಟ್ಟುವ ಹಬ್ಬವಾಗುವುದರ ಜೊತೆಗೆ ರಾಜ್ಯ ಮಾತ್ರವಲ್ಲದೆ ಇಂಡಿಯಾ ಕೂಡ ಮಂಡ್ಯದತ್ತ ತಿರುಗಿ ನೋಡವಂತಾಗಬೇಕು ಎಂದು ಕರೆಕೊಟ್ಟರು. ಸಮ್ಮೇಳನದ ಯಶಸ್ವಿಗಾಗಿ ಸಲಹೆ, ಸೂಚನೆಗಳನ್ನು ಪಡೆಯಲು ಸಭೆ ಆಯೋಜಿಸಲಾಗಿದೆ. ರಾಷ್ಟ್ರಕವಿ ಕುವೆಂಪು ಅವರು ರಚಿಸಿರುವ ‘ಬಾರಿಸು ಕನ್ನಡ ಡಿಂಡಿಮವ’ ಪದ್ಯದ ಸಾಲುಗಳನ್ನು ನೆನಪಿನಲ್ಲಿಟ್ಟುಕೊಂಡು ಕೆಲಸ ಮಾಡಿದರೆ ಯಶಸ್ಸು ಸಾಧ್ಯ ಎಂದು ಹೇಳಿದರು. ನಾಡ…

Read More

ತುಮಕೂರು: ಜಿಲ್ಲೆಯಲ್ಲಿ ಸ್ವಾತಂತ್ರ್ಯೋತ್ಸವದಲ್ಲಿ ಭಾಗಿಯಾಗಿ, ಮನೆಗೆ ತೆರಳುತ್ತಿದ್ದಂತ ವೇಳೆಯಲ್ಲೇ, ವಿದ್ಯಾರ್ಥಿಯೊಬ್ಬನಿಗೆ ವಿದ್ಯುತ್ ತಗುಲಿ ಧಾರುಣವಾಗಿ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ಬುಕ್ಕಾಪಟ್ಟಣ ಹೋಬಳಿಯ ಹೆಚ್.ಕಾವಲ್ ನಲ್ಲಿ ಈ ದುರ್ಘಟನೆ ಸಂಭವಿಸಿದೆ. ವಿದ್ಯಾರ್ಥಿ ಹೇಮಂತ್ ಎಂಬಾತ ಕಾವಲ್ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 2ನೇ ತರಗತಿ ಓದುತ್ತಿದ್ದನು. ಇಂದು ಸ್ವಾತಂತ್ರಯ ದಿನಾಚರಣೆ ಮುಗಿಸಿ ಮನೆಗೆ ತೆರಳುತ್ತಿದ್ದಾಗ ರಸ್ತೆ ಬದಿಯಲ್ಲಿ ಅಳವಡಿಸಿದ್ದಂತ ವಿದ್ಯುತ್ ಕಂಬ ಮುಟ್ಟಿದ್ದಾನೆ. ಈ ಪರಿಣಾಮ ವಿದ್ಯುತ್ ಶಾಕ್ ನಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಅಂದಹಾಗೇ ವಿದ್ಯುತ್ ಕಂಬದಲ್ಲಿ ಶಾಕ್ ಹೊಡೆಯುತ್ತಿರುವ ಬಗ್ಗೆ ಕೆಇಬಿಯವರಿಗೆ ಹಲವು ಬಾರಿ ಗ್ರಾಮಸ್ಥರು ಅಧಿಕಾರಿಗಳಿಗೆ ಮನವಿ ಮಾಡಿದ್ದರು. ಆದರೂ ಕಂಬವನ್ನು ಬದಲಾವಣೆ ಮಾಡಿರಲಿಲ್ಲ. ಹೀಗಾಗಿಯೇ ಇಂದು ವಿದ್ಯಾರ್ಥಿ ಹೇಮಂತ್ ಧಾರುಣವಾಗಿ ಸಾವನ್ನಪ್ಪುವಂತೆ ಆಗಿದೆ ಅಂತ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ತುಮಕೂರಲ್ಲಿ ಸ್ವಾತಂತ್ರ್ಯ ದಿನಾಚರಣೆಯಂದೇ ಘೋರ ದುರಂತ: ವಿದ್ಯುತ್ ಶಾಕ್ ನಿಂದ ವಿದ್ಯಾರ್ಥಿ ಸ್ಥಳದಲ್ಲೇ ಸಾವು https://kannadanewsnow.com/kannada/actress-khushbu-resigns-from-national-commission-for-women/ https://kannadanewsnow.com/kannada/good-news-home-minister-g-parameshwara-clarifies-that-appointment-orders-will-be-issued-to-545-psi-candidates-soon/ https://kannadanewsnow.com/kannada/posting-for-coin-in-kptlc-226-je-transfer-pull-deal-maga-deal/

Read More

ನವದೆಹಲಿ: ಭಾರತೀಯ ಜನತಾ ಪಕ್ಷದ (ಬಿಜೆಪಿ) ಪ್ರಮುಖ ಸದಸ್ಯೆ, ನಟಿ ಮತ್ತು ರಾಜಕಾರಣಿ ಖುಷ್ಬೂ ಸುಂದರ್ ( Actor and politician Khushbu Sundar ) ಅವರು ರಾಷ್ಟ್ರೀಯ ಮಹಿಳಾ ಆಯೋಗದ (National Commission for Women -NCW) ಸದಸ್ಯ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯನ್ನು ಅಂಗೀಕರಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ದೃಢಪಡಿಸಿದೆ, ಇದು ಜೂನ್ 28 ರಿಂದ ಜಾರಿಗೆ ಬರಲಿದೆ. ಫೆಬ್ರವರಿ 27, 2023 ರಂದು ರಾಷ್ಟ್ರೀಯ ಮಹಿಳಾ ಮತ್ತು ಮಕ್ಕಳ ಆಯೋಗದ ಸದಸ್ಯರಾಗಿ ನೇಮಕಗೊಂಡ ಖುಷ್ಬು, ಆಗಸ್ಟ್ 14, 2024 ರಂದು ಅನಿರೀಕ್ಷಿತವಾಗಿ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಘೋಷಿಸಿದರು. https://twitter.com/khushsundar/status/1823775405028839477 ತಮ್ಮ ಹೇಳಿಕೆಯಲ್ಲಿ, ಖುಷ್ಬು ಅವರು ಹುದ್ದೆಯಿಂದ ಕೆಳಗಿಳಿಯುವ ನಿರ್ಧಾರದ ಹಿಂದಿನ ಕಾರಣಗಳನ್ನು ವಿವರಿಸಿದ್ದಾರೆ. ರಾಜಕೀಯದಲ್ಲಿ 14 ವರ್ಷಗಳ ಸೇವೆಯ ನಂತರ, ತನ್ನ ಹೃದಯದಲ್ಲಿ ಆಳವಾದ ಬದಲಾವಣೆಯನ್ನು ಅನುಭವಿಸಿದ್ದೇನೆ ಎಂದು ಅವರು ವ್ಯಕ್ತಪಡಿಸಿದರು. ಅವರು ಹೆಚ್ಚು ಗೌರವಿಸುವ ಭಾರತೀಯ ಜನತಾ ಪಕ್ಷ…

Read More

ಬೆಂಗಳೂರು ಗ್ರಾಮಾಂತರ: ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಜಾರಿಗೊಳಿಸಲಾಗಿರುವಂತ ಗ್ಯಾರಂಟಿ ಯೋಜನೆಯಲ್ಲಿ ಯಾವುದೇ ಬದಲಾವಣೆಯಿಲ್ಲ. ಯಾರೂ ಆ ಬಗ್ಗೆ ಕಿವಿಗೊಡಬಾರದು ಎಂಬುದಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸ್ಪಷ್ಟ ಪಡಿಸಿದ್ದಾರೆ. ಬೆಂಗಳೂರು ಗ್ರಾಮಾಂತರದ ನೆಲಮಂಗಲದಲ್ಲಿ ವೀರಭದ್ರೇಶ್ವರ ದೇವಾಲಯಕ್ಕೆ ಭೇಟಿ ನೀಡಿದ ಬಳಿಕ, ಸುದ್ದಿಗಾರರೊಂದಿಗೆ ಮಾತನಾಡಿದಂತ ಡಿಸಿಎಂ ಡಿಕೆ ಶಿವಕುಮಾರ್ ಅವರು, ಚನ್ನಪಟ್ಟಣ ಬೈ ಎಲೆಕ್ಷನ್ ಗೆ ನಾನೇ ಅಭ್ಯರ್ಥಿಯಾಗಿದ್ದೇನೆ ಎಂಬುದಾಗಿ ಘೋಷಿಸಿದರು. ಗ್ಯಾರಂಟಿ ಯೋಜನೆಯಲ್ಲಿ ಯಾವುದೇ ಬದಲಾವಣೆಯಿಲ್ಲ. ಯಾವ ಸಚಿವರು ಏನೂ ಮಾತನಾಡಲ್ಲ. ಏನೂ ಇಲ್ಲ. ಯಾವುದೇ ಬದಲಾವಣೆಯಿಲ್ಲ. ಗ್ಯಾರಂಟಿ ಯೋಜನೆಗಳು ಮುಂದುವರೆಯಲಿದ್ದಾವೆ ಎಂಬುದಾಗಿ ಸ್ಪಷ್ಟ ಪಡಿಸಿದರು. https://kannadanewsnow.com/kannada/i-will-be-my-candidate-for-channapatna-assembly-by-election-dk-shivakumar/ https://kannadanewsnow.com/kannada/posting-for-coin-in-kptlc-226-je-transfer-pull-deal-maga-deal/ https://kannadanewsnow.com/kannada/india-ready-for-2036-olympics-pm-modi-from-red-fort/

Read More

ನೆಲಮಂಗಲ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದಂತ ಹೆಚ್.ಡಿ ಕುಮಾರಸ್ವಾಮಿ ಸಂಸದರಾದ ಬಳಿಕ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದೆ. ಈ ವೇಳೆಯಲ್ಲೇ ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಗೆ ನಾನೇ ಅಭ್ಯರ್ಥಿ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಘೋಷಣೆ ಮಾಡಿದ್ದಾರೆ. ಬೆಂಗಳೂರು ಗ್ರಾಮಾಂತರದ ನೆಲಮಂಗಲದಲ್ಲಿ ವೀರಭದ್ರೇಶ್ವರ ದೇವಾಲಯಕ್ಕೆ ಭೇಟಿ ನೀಡಿದ ಬಳಿಕ, ಸುದ್ದಿಗಾರರೊಂದಿಗೆ ಮಾತನಾಡಿದಂತ ಡಿಸಿಎಂ ಡಿಕೆ ಶಿವಕುಮಾರ್ ಅವರು, ಚನ್ನಪಟ್ಟಣ ಬೈ ಎಲೆಕ್ಷನ್ ಗೆ ನಾನೇ ಅಭ್ಯರ್ಥಿಯಾಗಿದ್ದೇನೆ ಎಂಬುದಾಗಿ ಘೋಷಿಸಿದರು. ಗ್ಯಾರಂಟಿ ಯೋಜನೆಯಲ್ಲಿ ಯಾವುದೇ ಬದಲಾವಣೆಯಿಲ್ಲ. ಯಾವ ಸಚಿವರು ಏನೂ ಮಾತನಾಡಲ್ಲ. ಏನೂ ಇಲ್ಲ. ಯಾವುದೇ ಬದಲಾವಣೆಯಿಲ್ಲ. ಗ್ಯಾರಂಟಿ ಯೋಜನೆಗಳು ಮುಂದುವರೆಯಲಿದ್ದಾವೆ ಎಂಬುದಾಗಿ ಸ್ಪಷ್ಟ ಪಡಿಸಿದರು. https://kannadanewsnow.com/kannada/india-ready-for-2036-olympics-pm-modi-from-red-fort/ https://kannadanewsnow.com/kannada/good-news-home-minister-g-parameshwara-clarifies-that-appointment-orders-will-be-issued-to-545-psi-candidates-soon/ https://kannadanewsnow.com/kannada/posting-for-coin-in-kptlc-226-je-transfer-pull-deal-maga-deal/

Read More

ಬೆಂಗಳೂರು: ಕೃಷಿ ಇಲಾಖೆಯು ಮಳೆ ನೀರನ್ನು ಸಂಗ್ರಹಿಸಿ ಕೃಷಿಯಲ್ಲಿ ಸದ್ಬಳಕೆ ಮಾಡಲು ರೈತರನ್ನು ಉತ್ತೇಜಿಸುವ ಸಲುವಾಗಿ ಕರ್ನಾಟಕ ಸರ್ಕಾರವು ಕೃಷಿ ಭಾಗ್ಯ ಯೋಜನೆಯನ್ನು ಜಾರಿಗೆ ತಂದಿದ್ದು, ಈ ಯೋಜನೆಯಡಿ ವಿವಿದ ಸೌಲಭ್ಯಗಳನ್ನು ಪಡೆದುಕೊಳ್ಳಲು ರೈತರಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕೃಷಿ ಭಾಗ್ಯ ಯೋಜನೆಯು ಪ್ಯಾಕೇಜ್ ಮಾದರಿಯಲ್ಲಿ ಅನುಷ್ಟಾನಗೊಳ್ಳುತ್ತಿದ್ದು, ಬದು, ಕೃಷಿ ಹೊಂಡ, ಕೃಷಿಹೊಂಡದ ಸುತ್ತ ತಂತಿ ಬೇಲಿ, ಕೃಷಿಹೊಂಡಕ್ಕೆ ಪಾಲೀಥಿನ್ ಹೊದಿಕೆ, ಪಂಪ್ ಸೆಟ್ ಹಾಗೂ ಲಘು ನೀರಾವರಿ ಘಟಕಗಳನ್ನು ಅನುಷ್ಠಾನ ಮಾಡಲು ಸಹಾಯಧನ ನೀಡಲಾಗುತ್ತಿದೆ. ರೈತರು ಈ ಎಲ್ಲಾ ಘಟಕಗಳನ್ನು ಕಡ್ಡಾಯವಾಗಿ ಅನುಷ್ಠಾನ ಮಾಡಬೇಕಾಗಿರುತ್ತದೆ. ಸಾಮಾನ್ಯ ವರ್ಗದ ರೈತರಿಗೆ ಶೇ. 80 ರಷ್ಟು ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರಿಗೆ ಶೇ. 90% ಸಹಾಯಧನ ನೀಡಲು ಅವಕಾಶವಿರುತ್ತದೆ. ಅರ್ಜಿ ಸಲ್ಲಿಕೆ ಹೇಗೆ? ಆಸಕ್ತ ರೈತರು ರೈತ ಸಂಪರ್ಕ ಕೇಂದ್ರಗಳಲ್ಲಿ ಅರ್ಜಿಯನ್ನು ಪಡೆದುಕೊಂಡು, ಭರ್ತಿ ಮಾಡಿದ ಅರ್ಜಿಯೊಂದಿಗೆ ಪಾಸ್ ಪೋರ್ಟ್ ಸೈಜ್ ಪೋಟೊ, ಪಹಣಿ, ಜಾತಿ ಪ್ರಮಾಣ ಪತ್ರ ಬ್ಯಾಂಕ್ ಪಾಸ್…

Read More