Author: kannadanewsnow09

ಶಿವಮೊಗ್ಗ: ಸಾಗರದ ಲಯನ್ಸ್ ಕ್ಲಬ್ ವತಿಯಿಂದ ನವರಾತ್ರಿ ಸಂಭ್ರಮದ ಅಂಗವಾಗಿ ಕ್ರಿಸ್ಟಲ್ ಸಾಗರ್ ಸಹಯೋಗದಲ್ಲಿ ಏರ್ಪಡಿಸಿದ್ದ ದಾಂಡಿಯಾ ಫೆಸ್ಟ್ ಕಾರ್ಯಕ್ರಮ ವನ್ನು ಲಯನ್ಸ್ ಸಂಸ್ಥೆಯ ನಾಗರಾಜ್ ಇ. ಉದ್ಘಾಟಿಸಿದರು. ಸಾಗರದ ಲಯನ್ಸ್ ಸಂಸ್ಥೆ ಅಧ್ಯಕ್ಷ ಡಾ.ಪ್ರಸನ್ನ ಟಿ., ಲಯನ್ಸ್ ಸಂಸ್ಥೆಯ ವಿ.ಸಿ.ಪಾಟೀಲ್, ತಿಮ್ಮಪ್ಪ ಎನ್., ವಿನಯ್‌ಕುಮಾರ್ ಎಂ., ಸಿಬಿನ್ ಸೋಮನ್, ಶ್ವೇತಾ ರಮೇಶ್, ಅಂಬಲಿ ಸೋಮನ್, ಅರ್ಚನಾ ಪ್ರಸನ್ನ, ಶ್ಯಾಮಲಾ ನಾಗರಾಜ್, ಕೆ.ಬಿ.ಮಹಾಬಲೇಶ್ ಉಪಸ್ಥಿತರಿದ್ದರು. ನಂತರ ವೈವಿಧ್ಯಮಯ ನೃತ್ಯ ಕಾರ್ಯಕ್ರಮ ನಡೆಯಿತು. https://kannadanewsnow.com/kannada/hills-will-become-plains-plains-will-become-hills-cody-shri-shocking-future/ https://kannadanewsnow.com/kannada/kodimath-sris-explosive-prediction-about-cm-siddaramaiahs-government/

Read More

ಶಿವಮೊಗ್ಗ: ಭಾವ ಇಲ್ಲದ ಅರ್ಚನೆಗೆ ಯಾವುದೇ ಫಲ ಇಲ್ಲ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಶಿವಮೊಗ್ಗ ಜಿಲ್ಲೆಯ ಸಾಗರ ಅಗ್ರಹಾರದಲ್ಲಿರುವ ಶ್ರೀ ರಾಘವೇಶ್ವರ ಭವನದ ಶ್ರೀಮನ್ನಗರ ವೇದಿಕೆಯಲ್ಲಿ ಏರ್ಪಡಿಸಿರುವ ನವರಾತ್ರ ನಮಸ್ಯಾದ 10 ನೇ ದಿನದ ಲಲಿತೋಪಾಖ್ಯಾನ ಪ್ರವಚನದಲ್ಲಿ ಅವರು ನುಡಿದರು. ಪೂಜೆಯಲ್ಲಿ ದೇವರಿಗೆ ಎಷ್ಟು ವಸ್ತು ಸಮರ್ಪಿಸುತ್ತಿದ್ದೇವೆ ಎನ್ನುವುದಕ್ಕಿಂತ ಭಕ್ತಿಯಲ್ಲಿ ಭಾವಿಸಿ ಪೂಜೆ ಮಾಡುತ್ತಿದ್ದೇವೆ ಎನ್ನುವುದು ಅತೀ ಮುಖ್ಯ, ಯಾರ ಕುರಿತು ಪೂಜಿಸುತ್ತೇವೋ ಆ ಕುರುಣಾಮಯಿಯ ಕುರಿತು ನಮ್ಮ ಚಿತ್ತಭಿತ್ತಿಯಲ್ಲಿ ಭಾವನೆಯೇ ಇಲ್ಲದಿದ್ದರೆ ಆ ಪೂಜೆ ಪರಿಪೂರ್ಣವಲ್ಲ ಎಂದರು. ದೇವಿಯ ಪ್ರತಿ ಸ್ತೋತ್ರ ಹೇಳುವಾಗ ಸೃಷ್ಟಿಯ ನೆಮ್ಮದಿಗಾಗಿ ಆಕೆ ಮಾಡಿದ ಪ್ರತಿ ಕಾರ್ಯವೂ ನಮ್ಮ ಮನದಲ್ಲಿದ್ದರೆ ಅದನ್ನು ಸ್ಮರಿಸಿ ಧ್ಯಾನಿಸಿದರೆ ಮಾತ್ರ ಅನುಗ್ರಹ ದೊರೆಯಲಿದೆ ಎಂದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜೇಂದ್ರ ಪತ್ನಿ ಪ್ರೇಮಾರೊಟ್ಟಿಗೆ ಆಗಮಿಸಿ ಲಲಿತಾದೇವಿ ಪೂಜೆಯಲ್ಲಿ ಪಾಲ್ಗೊಂಡರು ಹಾಗೂ ಉಡಿ ಸಮರ್ಪಣೆಗೈದು ನಂತರ ಶ್ರೀಗಳವರಿಂದ ಆಶೀರ್ವಾದ ಪಡೆದರು. ಇದಕ್ಕೂ ಮುನ್ನ ಬೆಳಗ್ಗೆ ಶುಂಭಹಾ ಉಪಾಸನೆ,…

Read More

ಧಾರವಾಡ: ಎರಡೂವರೆ ವರ್ಷಕ್ಕೆ ಮುಖ್ಯಮಂತ್ರಿ ರಾಜ್ಯದಲ್ಲಿ ಬದಲಾವಣೆ ಆಗಲಿದ್ದಾರೆ ಎನ್ನಲಾಗುತ್ತಿತ್ತು. ಇದರ ನಡುವೆ ಕೋಡಿಮಠ ಶ್ರೀಗಳು ಸಿಎಂ ಸಿದ್ಧರಾಮಯ್ಯ ಸರ್ಕಾರದ ಬಗ್ಗೆ ಸ್ಪೋಟಕ ಭವಿಷ್ಯ ನುಡಿದ್ದಾರೆ. ಅದು ಏನು ಅಂತ ಮುಂದೆ ಓದಿ. ಇಂದು ದಸರಾ ಹಬ್ಬದ ಪ್ರಯುಕ್ತ ಜಂಬೂ ಸವಾರಿಗೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ದಸರಾದ ನಿಜವಾದಂತ ಅರ್ಥವೆಂದರೇ ದುಷ್ಟ ಶಕ್ತಿಗಳನ್ನು ದೂರ ಮಾಡುವುದು. ಮನುಷ್ಯನ ಕೋಪ, ತಾಪ, ಆಸೆಗಳನ್ನು ಗೆಲ್ಲುವಂತೆ ಮಾಡುವುದಾಗಿದೆ. ಅಲ್ಲದೇ ಮನುಷ್ಯನಿಗೆ ಶಾಂತಿ, ಸುಖ, ನೆಮ್ಮದಿಗಾಗಿ ದಸರಾವನ್ನು ಆಚರಿಸಲಾಗುತ್ತದೆ ಎಂದರು. ಸಿಎಂ ಸಿದ್ಧರಾಮಯ್ಯ ಅವರ ಸರ್ಕಾರದ ಬಗ್ಗೆ ಭವಿಷ್ಯ ನುಡಿದಂತ ಅವರು, ಸಂಕ್ರಾಂತಿಯವರೆಗೆ ಯಾವುದೇ ತೊಂದರೆ ಸಿದ್ಧರಾಮಯ್ಯ ಸರ್ಕಾರಕ್ಕೆ ಇಲ್ಲ. ಭಯವೂ ಇಲ್ಲ. ಸಂಕ್ರಾಂತಿ ಬಳಿಕ ಆ ಸಿದ್ಧರಾಮಯ್ಯ ಸರ್ಕಾರದ ಬಗ್ಗೆ ಭವಿಷ್ಯ ನುಡಿಯುವುದಾಗಿ ಹೇಳಿದರು. ಇನ್ನೂ ನಾನು ಈ ಹಿಂದೆಯೇ ಹೇಳಿದ್ದೇನೆ. ಅದೇನೆಂದರೇ ಬಯಲು ಸೀಮೆ ಮಲೆನಾಡು ಆಗಲಿದೆ. ಮಲೆನಾಡು ಬಯಲು ಸೀಮೆ ಆಗುತ್ತದೆ ಎಂಬುದಾಗಿ. ಅದರಂತೆ ನಮ್ಮಲ್ಲೀಗ ಬಯಲು…

Read More

ಧಾರವಾಡ: ಮಲೆನಾಡು ಬಯಲು ಸೀಮೆಯಂತೆ ಆಗಲಿದೆ. ಬಯಲು ಸೀಮೆ ಮಲೆನಾಡಿನಂತೆ ಆಗಲಿದೆ ಎಂಬುದಾಗಿ ಕೋಡಿಮಠದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಶಾಕಿಂಗ್ ಭವಿಷ್ಯ ನುಡಿದಿದ್ದಾರೆ. ಇಂದು ದಸರಾ ಹಬ್ಬದ ಪ್ರಯುಕ್ತ ಜಂಬೂ ಸವಾರಿಗೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ದಸರಾದ ನಿಜವಾದಂತ ಅರ್ಥವೆಂದರೇ ದುಷ್ಟ ಶಕ್ತಿಗಳನ್ನು ದೂರ ಮಾಡುವುದು. ಮನುಷ್ಯನ ಕೋಪ, ತಾಪ, ಆಸೆಗಳನ್ನು ಗೆಲ್ಲುವಂತೆ ಮಾಡುವುದಾಗಿದೆ. ಅಲ್ಲದೇ ಮನುಷ್ಯನಿಗೆ ಶಾಂತಿ, ಸುಖ, ನೆಮ್ಮದಿಗಾಗಿ ದಸರಾವನ್ನು ಆಚರಿಸಲಾಗುತ್ತದೆ ಎಂದರು. ಸಿಎಂ ಸಿದ್ಧರಾಮಯ್ಯ ಅವರ ಸರ್ಕಾರದ ಬಗ್ಗೆ ಭವಿಷ್ಯ ನುಡಿದಂತ ಅವರು, ಸಂಕ್ರಾಂತಿಯವರೆಗೆ ಯಾವುದೇ ತೊಂದರೆ ಸಿದ್ಧರಾಮಯ್ಯ ಸರ್ಕಾರಕ್ಕೆ ಇಲ್ಲ. ಭಯವೂ ಇಲ್ಲ. ಸಂಕ್ರಾಂತಿ ಬಳಿಕ ಆ ಬಗ್ಗೆ ಭವಿಷ್ಯ ನುಡಿಯುವುದಾಗಿ ಹೇಳಿದರು. ಇನ್ನೂ ನಾನು ಈ ಹಿಂದೆಯೇ ಹೇಳಿದ್ದೇನೆ. ಅದೇನೆಂದರೇ ಬಯಲು ಸೀಮೆ ಮಲೆನಾಡು ಆಗಲಿದೆ. ಮಲೆನಾಡು ಬಯಲು ಸೀಮೆ ಆಗುತ್ತದೆ ಎಂಬುದಾಗಿ. ಅದರಂತೆ ನಮ್ಮಲ್ಲೀಗ ಬಯಲು ಸೀಮೆ ಮಲೆನಾಡು ಆಗಿದೆ ಎಂಬುದಾಗಿ ಶಾಂಕಿಂಗ್ ಭವಿಷ್ಯ ನುಡಿದರು. https://kannadanewsnow.com/kannada/six-children-die-after-consuming-cough-syrup-lab-tests-reveal-shocking-information/ https://kannadanewsnow.com/kannada/nadu-bangarada-gindele-nadu-siriagilatate-parar-sukshetra-devaragudda-karnika-nudi/

Read More

ಮಧ್ಯಪ್ರದೇಶ: ಇಲ್ಲಿನ ಚಿಂದ್ವಾರದಲ್ಲಿ ಕೆಮ್ಮಿನ ಸಿರಪ್ ಸೇವನೆಯಿಂದ ಆರು ಮಕ್ಕಳು ಸಾವನ್ನಪ್ಪಿದ್ದಾರೆ ಎಂಬ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ಬಯಾಪ್ಸಿ ವರದಿಗಳು ಮಕ್ಕಳಿಗೆ ಮೂತ್ರಪಿಂಡ ವೈಫಲ್ಯ ಉಂಟಾಗಿದೆ ಎಂದು ಬಹಿರಂಗಪಡಿಸಿವೆ. ವಿಷಯ ಬೆಳಕಿಗೆ ಬಂದ ತಕ್ಷಣ, ಚಿಂದ್ವಾರ ಕಲೆಕ್ಟರ್ ತಕ್ಷಣ ಕ್ರಮ ಕೈಗೊಂಡು ಎರಡು ಕೆಮ್ಮಿನ ಸಿರಪ್‌ಗಳಾದ ಕೋಲ್ಡ್ರಿಫ್ ಮತ್ತು ನೆಕ್ಸ್ಟ್ರೋ-ಡಿಎಸ್ ಮೇಲೆ ನಿಷೇಧ ಹೇರಿದರು. ಚಿಂದ್ವಾರದ ಪರಾಸಿಯಾ ಪ್ರದೇಶದಲ್ಲಿ ಹರಡುತ್ತಿರುವ ನಿಗೂಢ ಕಾಯಿಲೆಯ ಬಗ್ಗೆ ಹೊಸ ಸಂಗತಿಗಳು ಬೆಳಕಿಗೆ ಬರುತ್ತಿವೆ. ವೈರಾಣು ಪ್ರಯೋಗಾಲಯದಲ್ಲಿ ಪರೀಕ್ಷಿಸಲಾದ ಮೂರು ಮಾದರಿಗಳ ವರದಿಗಳು ಬಲಿಪಶುಗಳಲ್ಲಿ ಮೂತ್ರಪಿಂಡ ವೈಫಲ್ಯಕ್ಕೆ ಬಹು ಪ್ರತಿಜೀವಕ ಔಷಧಿಗಳು ಪ್ರಾಥಮಿಕ ಕಾರಣವಾಗಿರಬಹುದು ಎಂದು ಸೂಚಿಸಿವೆ. ಕಳೆದ ಒಂದು ತಿಂಗಳಿನಿಂದ, ಆರಕ್ಕೂ ಹೆಚ್ಚು ಮಕ್ಕಳು ಮೂತ್ರಪಿಂಡ ವೈಫಲ್ಯದಿಂದ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ವೈದ್ಯರು ಹೇಳೋದೇನು? ಚಿಂದ್ವಾರ ವೈದ್ಯಕೀಯ ಕಾಲೇಜಿನ ಮಕ್ಕಳ ತಜ್ಞ ದೀಪಕ್ ಪಟೇಲ್, “ಮಕ್ಕಳಲ್ಲಿ ವಿಚಿತ್ರ ರೀತಿಯ ಅನಾರೋಗ್ಯವನ್ನು ನಾವು ನೋಡುತ್ತಿದ್ದೇವೆ. ಅವರಿಗೆ ಜ್ವರ ಬರುತ್ತದೆ ಮತ್ತು ಐದರಿಂದ ಏಳು ದಿನಗಳಲ್ಲಿ…

Read More

ಹಾವೇರಿ: ನಾಡು ಬಂಗಾರದ ಗಿಂಡಿಲೇ.. ನಾಡು ಸಿರಿಯಾಗಿಲತೇ ಪರಾಕ್ ಎಂಬುದಾಗಿ ಸುಕ್ಷೇತ್ರ ದೇವರಗುಡ್ಡದ ಕಾರ್ಣಿಕ ನುಡಿಯನ್ನು ನುಡಿಯಲಾಗಿದೆ. ಈ ವರ್ಷ ಮಳೆ, ಬೆಳೆ ಸಮೃದ್ಧಿಯಾಗಿ ಆಗಲಿದೆ ಎಂಬುದಾಗಿ ಕಾರ್ಣಿಕ ನುಡಿಯನ್ನು ವಿಶ್ಲೇಷಣೆ ಮಾಡಲಾಗಿದೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ಸುಕ್ಷೇತ್ರ ದೇವರಗುಡ್ಡದ ಕಾರ್ಣಿಕ ನುಡಿಯನ್ನು ವಿಜಯದಶಮಿ ಸಂದರ್ಭದಲ್ಲಿ ನುಡಿಯಲಾಗಿದೆ. ದೇವರಗುಡ್ಡದ ಮಾಲತೇಶ ದೇವರ ಕಾರ್ಣಿಕೋತ್ಸವದಲ್ಲಿ ಭವಿಷ್ಯವಾಣಿಯನ್ನು ನುಡಿಯಲಾಗಿದೆ. ನಾಡಿನಾದ್ಯಂತ ಪ್ರಸಕ್ತ ವರ್ಷ ಮಳೆ, ಬೆಳೆ ಸಮೃದ್ಧವಾಗಿ ಬರಲಿದೆ. ಹಿಂಗಾರು ಬೆಳೆಗಳು ಸಮೃದ್ಧವಾಗಿ ಬರಲಿದೆ ಎಂದು ದೈವವಾಣಿಯನ್ನು ವಿಶ್ಲೇಷಣೆ ಮಾಡಲಾಗಿದೆ. ಪ್ರಸ್ತುತ ವರ್ಷದ ದೈವವಾಣಿ ನುಡಿಯನ್ನು ನಾಗಪ್ಪ ಉರ್ಮಿ ಗೊರವಯ್ಯ ನುಡಿದಿದ್ದಾರೆ. 10 ಅಡಿ ಎತ್ತರದ ಬಿಲ್ಲನೇರಿ ಕಾರ್ಣಿಕ ನುಡಿಯನ್ನು ಗೊರವಯ್ಯ ಸ್ವಾಮಿ ನುಡಿದಿದ್ದಾರೆ. ಅಂದಹಾಗೇ ಪ್ರತಿ ವರ್ಷ ವಿಜಯದಶಮಿಯಂದು ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ಸುಕ್ಷೇತ್ರ ದೇವರಗುಡ್ಡದಲ್ಲಿ ಗೊರವಯ್ಯ ಕಾರ್ಣಿಕ ನುಡಿ ನುಡಿಯಲಿದ್ದಾರೆ. ಆ ನುಡಿಯನ್ನು ವರ್ಷ ಭವಿಷ್ಯವಾಣಿ ಎಂದೇ ನಂಬಲಾಗಿದೆ. ಈ ಭವಿಷ್ಯವಾಣಿ ಕೇಳಲು ರಾಜ್ಯ ಸೇರಿದಂತೆ ಹೊರ ರಾಜ್ಯಗಳಿಂದಲೂ…

Read More

ನವದೆಹಲಿ: ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿಗಳ ಬಗ್ಗೆ ಮಾತನಾಡುವಾಗ ಅಂಬಾನಿ ಕುಟುಂಬವನ್ನು ಉಲ್ಲೇಖಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ. M3M ಹುರುನ್ ಇಂಡಿಯಾ ಶ್ರೀಮಂತ ಪಟ್ಟಿ 2025 ಇಂದು ಬಿಡುಗಡೆಯಾಗುತ್ತಿದ್ದಂತೆ, ಇದು ಎಲ್ಲಾ ಕೈಗಾರಿಕೆಗಳಲ್ಲಿ ಹದಿಮೂರು ಹೊಸ ಪ್ರವೇಶಗಳನ್ನು ಕಂಡಿದೆ. ವೇಗವಾಗಿ ಚಲಿಸುವ ಗ್ರಾಹಕ ಸರಕುಗಳು ಮತ್ತು ರಿಯಲ್ ಎಸ್ಟೇಟ್‌ನಿಂದ, ಈ ಆಟಗಾರರು ಅಧಿಕೃತವಾಗಿ ಬಿಲಿಯನೇರ್ ಕ್ಲಬ್‌ಗೆ ಸೇರಿದ್ದಾರೆ. ಇತ್ತೀಚಿನ ಹುರುನ್ ದತ್ತಾಂಶದ ಪ್ರಕಾರ, ಮುಖೇಶ್ ಅಂಬಾನಿ ಮತ್ತು ಕುಟುಂಬವು ಸಂಪತ್ತಿನ ಶಿಖರವನ್ನು ದಾಟಿದೆ, ಇದರ ಮೌಲ್ಯ 9.5 ಲಕ್ಷ ಕೋಟಿ ರೂ. ಆಗಿದೆ. ಆದಾಗ್ಯೂ, ಹೊಸದಾಗಿ ಪ್ರವೇಶಿಸಿದವರು ಬಲವನ್ನು ಚಾಲನೆ ಮಾಡುತ್ತಿದ್ದಾರೆ ಮತ್ತು ಭಾರತದ ಬೆಳೆಯುತ್ತಿರುವ ಬಿಲಿಯನೇರ್‌ಗಳ ಕೇಂದ್ರವನ್ನು ಸೂಚಿಸುತ್ತಿದ್ದಾರೆ. ಅತ್ಯಂತ ಗಮನಾರ್ಹ ಪ್ರವೇಶವನ್ನು HCL ನ ರೋಶ್ನಿ ನಾಡರ್ ಮಲ್ಹೋತ್ರಾ ಮತ್ತು ಕುಟುಂಬವು ಪಡೆದುಕೊಂಡಿದೆ, ಅವರು ನೇರವಾಗಿ ಟಾಪ್ 3 ರಲ್ಲಿ ಸ್ಥಾನ ಪಡೆದರು. ಹಂಗರ್ ಫಾರ್ ಬಿಲಿಯನೇರ್ಸ್ ಮನೋಹರ್ ಲಾಲ್ ಅಗರ್ವಾಲ್, ಮಧುಸೂಧನ್ ಅಗರ್ವಾಲ್ ಮತ್ತು ಶಿವಕಿಶನ್ ಮೂಲ್ಚಂದ್ ಅಗರ್ವಾಲ್ ಸೇರಿದಂತೆ…

Read More

ಮೈಸೂರು: ಕೇಂದ್ರ ಸರ್ಕಾರಿ ನೌಕರರಿಗೆ ದೀಪಾವಳಿ ಉಡುಗೋರೆ ಎನ್ನುವಂತೆ ಶೇ.3ರಷ್ಟು ತುಟ್ಟಿಭತ್ಯೆಯನ್ನು ಹೆಚ್ಚಿಸಿ ಕೇಂದ್ರ ಸಚಿವ ಸಂಪುಟ ಅನುಮೋದಿಸಿದೆ. ಈ ಬೆನ್ನಲ್ಲೇ ರಾಜ್ಯ ಸರ್ಕಾರಿ ನೌಕರರಿಗೂ ತುಟ್ಟಿ ಭತ್ಯೆ ಹೆಚ್ಚಳದ ಬಗ್ಗೆ ಸಿಎಂ ಸಿದ್ಧರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಇಂದು ಮೈಸೂರು ವಿಮಾನನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರು ದಸರಾಕ್ಕೆ ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಆಗಮಿಸಲಿದ್ದಾರೆ. ದಸರಾದಲ್ಲಿ ಏರ್ ಶೋ, ದೀಪಾಲಂಕಾರ, ಡ್ರೋನ್ ಶೋ ಸೇರಿದಂತೆ ವಿವಿಧ ಕಾರ್ಯಕ್ರಮಗಳು ಜನಪ್ರಿಯವಾಗಿದೆ. ಜನರು ಸಂತಸದಿಂದ ಪಾಲ್ಗೊಳ್ಳುವುದೇ ದಸರಾ ಉತ್ಸವ. ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರ, ವಸ್ತು ಪ್ರದರ್ಶನ ಪ್ರಾಧಿಕಾರ ಈಗಾಗಲೇ ಅಸ್ತಿತ್ವದಲ್ಲಿರುವುದರಿಂದ ದಸರಾ ಪ್ರಾಧಿಕಾರದ ಅವಶ್ಯಕತೆ ಇಲ್ಲ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದರು. ಕರ್ನಾಟಕ ಜಾತ್ಯಾತೀತ ರಾಜ್ಯ ದಸರಾ ಉದ್ಘಾಟಕರ ಬಗ್ಗೆ ಬಿಜೆಪಿಯವರು ವಿರೋಧದ ಧ್ವನಿಯೆತ್ತಿದ್ದರು. ಕರ್ನಾಟಕ ಜಾತ್ಯಾತೀತ ರಾಜ್ಯವಾಗಿದ್ದು, ಸಂವಿಧಾನದ ಬಗ್ಗೆ ಅರಿವಿಲ್ಲದವರೇ ಇಂತಹ ವಿರೋಧವನ್ನು ವ್ಯಕ್ತಪಡಿಸುತ್ತಾರೆ. ಆದ್ದರಿಂದ ಸುಪ್ರೀಂ ಕೋರ್ಟ್ ನಲ್ಲಿಯೂ ಕೂಡ ವಿರೋಧಕ್ಕೆ ಛೀಮಾರಿಯಾಯಿತು.ದಸರಾ ಉತ್ಸವ ರಾಜಕೀಯದ…

Read More

ಮೈಸೂರು: ಸಂವಿಧಾನದ ಬಗ್ಗೆ ಅರಿವಿಲ್ಲದವರೇ ದಸರಾ ಉದ್ಘಾಟಿಸುವವರ ಬಗ್ಗೆ ವಿರೋಧವನ್ನು ವ್ಯಕ್ತಪಡಿಸಿದವರಿಗೆ ಸುಪ್ರೀಂ ಕೋರ್ಟ್ ನಲ್ಲಿಯೂ ಛೀಮಾರಿ ಹಾಕಲಾಯಿತು. ದಸರಾ ಉತ್ಸವ ರಾಜಕೀಯದ ವಿಷಯವಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅಲ್ಲದೇ ಮುಂದಿನ ವರ್ಷವೂ ಏಕೆ ದಸರಾ ಪುಷ್ಪಾರ್ಚನೆ ಮಾಡಬಾರದು ಎಂದು ಪ್ರಶ್ನಿಸಿದಂತ ಅವರು, I Hope So ನಾನೇ ಮಾಡಬಹುದು ಎಂಬುದಾಗಿ ಹೇಳಿದ್ದಾರೆ. ಇಂದು ಮೈಸೂರು ವಿಮಾನನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರು ದಸರಾಕ್ಕೆ ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಆಗಮಿಸಲಿದ್ದಾರೆ. ದಸರಾದಲ್ಲಿ ಏರ್ ಶೋ, ದೀಪಾಲಂಕಾರ, ಡ್ರೋನ್ ಶೋ ಸೇರಿದಂತೆ ವಿವಿಧ ಕಾರ್ಯಕ್ರಮಗಳು ಜನಪ್ರಿಯವಾಗಿದೆ. ಜನರು ಸಂತಸದಿಂದ ಪಾಲ್ಗೊಳ್ಳುವುದೇ ದಸರಾ ಉತ್ಸವ. ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರ, ವಸ್ತು ಪ್ರದರ್ಶನ ಪ್ರಾಧಿಕಾರ ಈಗಾಗಲೇ ಅಸ್ತಿತ್ವದಲ್ಲಿರುವುದರಿಂದ ದಸರಾ ಪ್ರಾಧಿಕಾರದ ಅವಶ್ಯಕತೆ ಇಲ್ಲ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದರು. ಕರ್ನಾಟಕ ಜಾತ್ಯಾತೀತ ರಾಜ್ಯ ದಸರಾ ಉದ್ಘಾಟಕರ ಬಗ್ಗೆ ಬಿಜೆಪಿಯವರು ವಿರೋಧದ ಧ್ವನಿಯೆತ್ತಿದ್ದರು. ಕರ್ನಾಟಕ ಜಾತ್ಯಾತೀತ ರಾಜ್ಯವಾಗಿದ್ದು, ಸಂವಿಧಾನದ ಬಗ್ಗೆ ಅರಿವಿಲ್ಲದವರೇ ಇಂತಹ…

Read More

ಕೆಎನ್ಎನ್ ಸ್ಪೆಷಲ್ ಡೆಸ್ಕ್: ನಿಮ್ಮ ದೇಹದಲ್ಲಿನ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡೋದಕ್ಕೆ ತರಾವರಿ ಪ್ರಯತ್ನ ಮಾಡ್ತಾ ಇರುತ್ತೀರಿ. ಆದರೇ ಅದ್ಯಾವುದು ಬೇಡ. ಆಯುರ್ವೇದದಂತೆ ಈ ಎಲೆಗಳನ್ನು ಸೇವಿಸಿ, ನೈಸರ್ಗಿಕವಾಗಿಯೇ ಕೊಲೆಸ್ಟ್ರಾಲ್ ಮಟ್ಟ ಕಡಿಮೆಯಾಗಲಿದೆ. ಅರ್ಜುನ ಎಲೆಗಳು ಆಯುರ್ವೇದದಲ್ಲಿ ಪ್ರಸಿದ್ಧ ಹೃದಯ ಟಾನಿಕ್ ಆಗಿದೆ. ಇದರ ತೊಗಟೆಯನ್ನು ಹೆಚ್ಚಾಗಿ ಬಳಸಲಾಗುತ್ತದೆ, ಆದರೆ ಎಲೆಗಳು ಫ್ಲೇವನಾಯ್ಡ್‌ಗಳು, ಸಪೋನಿನ್‌ಗಳು ಮತ್ತು ಉತ್ಕರ್ಷಣ ನಿರೋಧಕಗಳನ್ನು ಸಹ ಹೊಂದಿರುತ್ತವೆ, ಇದು LDL (ಕೆಟ್ಟ ಕೊಲೆಸ್ಟ್ರಾಲ್) ಅನ್ನು ಕಡಿಮೆ ಮಾಡಲು ಮತ್ತು HDL (ಉತ್ತಮ ಕೊಲೆಸ್ಟ್ರಾಲ್) ಅನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಅರ್ಜುನ ಎಲೆಗಳು ಹೃದಯದ ಕಾರ್ಯವನ್ನು ಬೆಂಬಲಿಸುತ್ತದೆ, ರಕ್ತ ಪರಿಚಲನೆ ಸುಧಾರಿಸುತ್ತದೆ ಮತ್ತು ಅಪಧಮನಿಗಳಲ್ಲಿ ಪ್ಲೇಕ್ ಸಂಗ್ರಹವನ್ನು ಕಡಿಮೆ ಮಾಡುತ್ತದೆ. ತುಳಸಿ ಎಲೆಗಳು ತುಳಸಿಯನ್ನು ಆಯುರ್ವೇದದಲ್ಲಿ ಪೂಜಿಸಲಾಗುತ್ತದೆ. ಇದು ಯುಜೆನಾಲ್ ಮತ್ತು ಉರ್ಸೋಲಿಕ್ ಆಮ್ಲವನ್ನು ಹೊಂದಿರುತ್ತದೆ, ಇದು ಕಡಿಮೆ ಕೊಲೆಸ್ಟ್ರಾಲ್ ಮತ್ತು ಸುಧಾರಿತ ಲಿಪಿಡ್ ಪ್ರೊಫೈಲ್‌ಗಳಿಗೆ ಸಂಬಂಧಿಸಿದೆ. ತುಳಸಿ ಯಕೃತ್ತಿನ ಕಾರ್ಯವನ್ನು ಸಹ ಬೆಂಬಲಿಸುತ್ತದೆ, ಇದು ಕೊಲೆಸ್ಟ್ರಾಲ್ ಉತ್ಪಾದನೆ…

Read More