Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ಸತತ ಮೂರನೇ ಅವಧಿಗೆ ಭಾರತದಲ್ಲಿ ಅಧಿಕಾರಕ್ಕೆ ಮರಳಲು ಬಿಜೆಪಿ ಪ್ರಯತ್ನಿಸುತ್ತಿರುವುದರಿಂದ ಭಾರತೀಯ ಜನತಾ ಪಕ್ಷವು ರಾಜನಾಥ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ಚುನಾವಣಾ ಪ್ರಣಾಳಿಕೆ ಸಮಿತಿಯನ್ನು ರಚಿಸಿದೆ. ಬಿಜೆಪಿ ಚುನಾವಣಾ ಪ್ರಣಾಳಿಕೆ ಸಮಿತಿಯ ಸಂಚಾಲಕರಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ನೇಮಿಸಿದರೆ. ಅವರ ಕ್ಯಾಬಿನೆಟ್ ಸಹೋದ್ಯೋಗಿ ಮತ್ತು ವ್ಯಾಪಾರ ಸಚಿವ ಪಿಯೂಷ್ ಗೋಯಲ್ ಸಹ ಸಂಚಾಲಕರಾಗಿದ್ದಾರೆ. ಸುಮಾರು 97 ಕೋಟಿ ಅರ್ಹ ಭಾರತೀಯ ಮತದಾರರು ಏಪ್ರಿಲ್ 19 ರಿಂದ ಆರು ವಾರಗಳು ಮತ್ತು ಏಳು ಹಂತಗಳಲ್ಲಿ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದಲ್ಲಿ ಮುಂದಿನ ಸರ್ಕಾರವನ್ನು ಯಾವ ರಾಜಕೀಯ ಪಕ್ಷ ರಚಿಸುತ್ತದೆ ಎಂಬುದನ್ನು ನಿರ್ಧರಿಸಲಿದ್ದಾರೆ. 2014 ರಲ್ಲಿ ‘ಅಬ್ಕಿ ಬಾರ್ ಮೋದಿ ಸರ್ಕಾರ್’ ಮತ್ತು 2019 ರಲ್ಲಿ ‘ಫಿರ್ ಏಕ್ ಬಾರ್ ಮೋದಿ ಸರ್ಕಾರ್’ ಎಂಬ ಘೋಷಣೆಗಳ ನಂತರ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಹೊಸ ಪ್ರಚಾರ ಘೋಷಣೆ ‘ಅಬ್ಕಿ ಬಾರ್ 400 ಪಾರ್’ ಆಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಸತತ…
ಬೆಂಗಳೂರು: ಕಾಂಗ್ರೆಸ್ ಪಕ್ಷದ ಲಕ್ಷ್ಮಣ ರೇಖೆ ಯಾರೂ ದಾಟುವಂತಿಲ್ಲ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಹೆಸರೇಳದೇ ರಮೇಶ್ ಕುಮಾರ್, ಕೆ.ಹೆಚ್ ಮುನಿಯಪ್ಪ ಅವರಿಗೆ ಖಡಕ್ ಎಚ್ಚರಿಕೆಯನ್ನು ನೀಡಿದ್ದಾರೆ. ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಪ್ರತಿಕ್ರಿಯಿಸಿದರು. ಎಐಸಿಸಿಗೆ ಆದಾಯ ತೆರಿಗೆ ಇಲಾಖೆಯಿಂದ ನೊಟೀಸ್ ಜಾರಿ ಮಾಡಿರುವ ಬಗ್ಗೆ ಕೇಳಿದಾಗ ಅವರು ಶನಿವಾರ ಉತ್ತರಿಸಿದ ಅವರು, ಕೋಲಾರದ ಅಭ್ಯರ್ಥಿ ಘೋಷಣೆಯಾಗಿರುವ ಬಗ್ಗೆ ಕೇಳಿದಾಗ, “ನಾನು ಮುನಿಯಪ್ಪ, ಬೇರೆ ನಾಯಕರ ಜತೆ ಚರ್ಚೆ ಮಾಡಿದ್ದು, ಎಲ್ಲರೂ ತಮ್ಮ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇಲ್ಲಿ ಗುಂಪು ರಾಜಕೀಯಕ್ಕೆ ಅವಕಾಶವಿಲ್ಲ. ಶಿಸ್ತು ಇಲ್ಲಿ ಬಹಳ ಮುಖ್ಯ. ಯಾವುದೇ ಸಚಿವರು, ಶಾಸಕರು ಪಕ್ಷದ ಲಕ್ಷ್ಮಣ ರೇಖೆ ದಾಟಲು ಸಾಧ್ಯವಿಲ್ಲ ಎಂದು ಹೇಳಿದ್ದೇವೆ. ಗೆಲ್ಲುವುದು ಬಿಡುವುದು ಬೇರೆ ವಿಚಾರ. ಪಕ್ಷದಲ್ಲಿ ಶಿಸ್ತು ಕಾಪಾಡಿ ರಾಜ್ಯ ಹಾಗೂ ಪಕ್ಷದ ಹಿತಕ್ಕೆ ಕೆಲಸ ಮಾಡಬೇಕು. ವಿರೋಧ ವ್ಯಕ್ತಪಡಿಸಿದ ನಾಯಕರು ಕ್ಷಮೆ ಕೇಳಿದ್ದಾರೆ, ಮುನಿಯಪ್ಪ, ಸಚಿವ ಸುಧಾಕರ್ ಸೇರಿದಂತೆ ಇತರೆ ಶಾಸಕರು, ನಾಯಕರು…
ಬೆಂಗಳೂರು: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಇದೀಗ ವಿವಾಧ ಗೂಡಾಗಿ ಪರಿಣಮಿಸಿದೆ. ಲೋಕಸಭಾ ಚುನಾವಣಾ ಹೊತ್ತಲ್ಲಿ ವಿವಿ ಕೈಗೊಂಡ ನಿರ್ಧಾರದಿಂದಾಗಿ ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಮುಜುಗರದ ಪರಿಸ್ಥಿತಿಯನ್ನು ಎದುರಿಸುವಂತಾಗಿದೆ. ಕರ್ನಾಟಕ ರಾಜ್ಯ ಕಾನೂನು ವಿವಿ ಈ ಬಾರಿ ‘ಈಸ್ಟರ್’ ದಿನದಂದು ಪರೀಕ್ಷೆಯನ್ನು ನಿಗದಿಗೊಳಿಸಿದೆ. ಗುಡ್ಫ್ರೈಡೇ ನಂತರದ ಭಾನುವಾರ ನಡೆಯುವ ‘ಈಸ್ಟರ್’ ಇಡೀ ಜಗತ್ತಿಗೆ ಶ್ರದ್ಧಾಭಕ್ತಿಯ ಆಚರಣೆ. ಆದರೆ KSLU ನಡೆಯಿಂದಾಗಿ ಕ್ರೈಸ್ತ ಸಮುದಾಯವು ಸಿದ್ದರಾಮಯ್ಯ ಸರ್ಕಾರದ ವಿರುದ್ದ ತಿರುಗಿ ಬೀಳುವಂತಾಗಿದೆ. ಪರೀಕ್ಷೆ ಮುಂದೂಡುವ ಬದಲು ಹಿಂದೂಡಿದ ವಿವಿ..! ಏಪ್ರಿಲ್ 2ರಂದು ನಿಗದಿಯಾಗಿದ್ದ ಕಾನೂನು ವಿವಿ ಪರೀಕ್ಷೆಯನ್ನು ಪರೀಕ್ಷೆಯನ್ನು ಈಸ್ಟರ್ ಆಚರಣೆಯ ದಿನದಂದು ಪೂರ್ವನಿಗದಿ ಮಾಡಿದೆ. ಅದೂ ಕೂಡಾ ಭಾನುವಾರದ ರಜೆಯ ದಿನದಂದೇ ಈಸ್ಟರ್ ಇರುವುದನ್ನು ತಿಳಿದಿದ್ದರೂ ಅದೇ ದಿನ ಪರೀಕ್ಷೆಯನ್ನು ನಿಗದಿ ಮಾಡುವ ಮಾಡುವ ವಿವಿಯು ವಿವಾದದ ನಡೆ ಅನುಸರಿಸಿದೆ. ಈ ಬಗ್ಗೆ ವಿವಿ ಕುಲಪತಿ ಹಾಗೂ ಕುಲಸಚಿವರ ಕಚೇರಿಗೆ ಮನವರಿಕೆ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ಕ್ರೈಸ್ತ ಸಮುದಾಯಕ್ಕೆ ಸೇರಿದ…
ಬೆಂಗಳೂರು: ನಮ್ಮ ಮೆಟ್ರೋ ಕಾಮಗಾರಿಯ ಹಿನ್ನಲೆಯಲ್ಲಿ ಬೆಂಗಳೂರಿನ ಮೈಕೋ ಲೇಔಟ್ ನಿಂದ ಆನೆಪಾಳ್ಯದವರೆಗೆ ಉತ್ತರ ದಿಕ್ಕಿನ ಮಾರ್ಗವನ್ನು ಒಂದು ವರ್ಷ ಬಂದ್ ಮಾಡಲಾಗಿದೆ. ಈ ಕುರಿತಂತೆ ಬಿಎಂಆರ್ ಸಿಎಲ್ ನಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಈ ಮೂಲಕ ಸಾರ್ವಜನಿಕರ ಗಮನಕ್ಕೆ ತರುವುದೇನೆಂದರೆ ಲಕ್ಕಸಂದ್ರ ಸುರಂಗ ಮೆಟ್ರೋ ನಿಲ್ದಾಣದ ದಕ್ಷಿಣ ಭಾಗದ ಪ್ರವೇಶ ಕಾಮಗಾರಿಯ ನಿರ್ಮಾಣಕ್ಕೆ ಅನುಕೂಲವಾಗುವಂತೆ, ಬನ್ನೇರುಘಟ್ಟ ಮುಖ್ಯರಸ್ತೆಯಲ್ಲಿ ಉತ್ತರ ದಿಕ್ಕಿನ ಪಥವನ್ನು ಮೈಕೋ ಸಿಗ್ನಲ್ನಿಂದ ಆನೆಪಾಳ್ಯ ಜಂಕ್ಷನ್ವರೆಗೆ ಸಂಚಾರವನ್ನು ದಿನಾಂಕ 01.04.2024 ರಿಂದ ಒಂದು ವರ್ಷದ ಅವಧಿಗೆ ಮುಚ್ಚಲಾಗುವುದು ಎಂದು ತಿಳಿಸಿದೆ. ಈ ಸಂಬಂಧ ಬನ್ನೇರುಘಟ್ಟ ಮುಖ್ಯರಸ್ತೆಯಲ್ಲಿ ಡೈರಿ ಸರ್ಕಲ್ ಕಡೆಯಿಂದ ಚಲಿಸುವ ವಾಹನಗಳು ಆನೆಪಾಳ್ಯ ಜಂಕ್ಷನ್ ಕಡೆಗೆ ಚಲಿಸಬೇಕಾದ ವಾಹನಗಳು ಮೈಕೋ ಸಿಗ್ನಲ್ನಲ್ಲಿ ಬಲಕ್ಕೆ ತಿರುಗಿ ಭೋಷ್ ಲಿಂಕ್ ರಸ್ತೆಯ ಮೂಲಕ ಆಡುಗೋಡಿ ಸಿಗ್ನಲ್ ತಲುಪಿ ಎಡಕ್ಕೆ ತಿರುಗಿ ಚಲಿಸಬೇಕು. ಆನೆಪಾಳ್ಯ ಜಂಕ್ಷನ್ನಿಂದ ಡೈರಿ ಸರ್ಕಲ್ ಕಡೆಗೆ ಚಲಿಸುವ ವಾಹನ ಸಂಚಾರದಲ್ಲಿ ಯಾವುದೆ ವ್ಯತ್ಯಯವಿರುವುದಿಲ್ಲ. ಡೈರಿ ಸರ್ಕಲ್ನಿಂದ…
ನವದೆಹಲಿ. ಲೋಕಸಭೆಯ 514 ಹಾಲಿ ಸಂಸದರ ಪೈಕಿ 225 (ಶೇ.44) ಮಂದಿ ತಮ್ಮ ವಿರುದ್ಧ ಕ್ರಿಮಿನಲ್ ಪ್ರಕರಣಗಳಿವೆ ಎಂದು ಘೋಷಿಸಿದ್ದಾರೆ. ಸಂಸದರು ನೀಡಿದ ಅಫಿಡವಿಟ್ಗಳ ವಿಶ್ಲೇಷಣೆಯ ಆಧಾರದ ಮೇಲೆ ಎಡಿಆರ್ (ಅಸೋಸಿಯೇಷನ್ ಆಫ್ ಡೆಮಾಕ್ರಟಿಕ್ ರಿಫಾರ್ಮ್ಸ್) ಈ ಮಾಹಿತಿಯನ್ನು ನೀಡಿದೆ. ದೇಶದ ಶೇ.5ರಷ್ಟು ಸಂಸದರು ಶತಕೋಟ್ಯಾಧಿಪತಿಗಳಾಗಿದ್ದಾರೆ. ಅವರ ಘೋಷಿತ ಆಸ್ತಿ 100 ಕೋಟಿ ರೂ.ಗಿಂತ ಹೆಚ್ಚಾಗಿದೆ. ಎಡಿಆರ್ ವರದಿಯ ಪ್ರಕಾರ, ಹಾಲಿ ಸಂಸದರ ಅಫಿಡವಿಟ್ಗಳನ್ನು ಪರಿಶೀಲಿಸಿದಾಗ ಶೇಕಡಾ 29 ರಷ್ಟು ಸಂಸದರು ಗಂಭೀರ ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಇವುಗಳಲ್ಲಿ ಕೊಲೆ, ಕೊಲೆ ಯತ್ನ, ಕೋಮು ಸಾಮರಸ್ಯವನ್ನು ಉತ್ತೇಜಿಸುವುದು, ಅಪಹರಣ ಮತ್ತು ಮಹಿಳೆಯರ ವಿರುದ್ಧದ ಅಪರಾಧಗಳು ಸೇರಿವೆ. ಐವರು ಬಿಜೆಪಿ ಸಂಸದರ ವಿರುದ್ಧ ಕೊಲೆ ಪ್ರಕರಣ ದಾಖಲು ಹಾಲಿ ಸಂಸದರ ವಿರುದ್ಧ ಗಂಭೀರ ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದು, ಅವರಲ್ಲಿ 9 ಮಂದಿ ಕೊಲೆ ಪ್ರಕರಣಗಳಲ್ಲಿ ಆರೋಪಿಗಳಾಗಿದ್ದಾರೆ. ಈ ಪೈಕಿ ಐವರು ಸಂಸದರು ಬಿಜೆಪಿಗೆ ಸೇರಿದವರಾಗಿದ್ದಾರೆ. 28 ಸಂಸದರು ತಮ್ಮ ವಿರುದ್ಧ…
ಬೆಂಗಳೂರು : “ಲೋಕಸಭೆ ಚುನಾವಣೆಯಲ್ಲಿ ಸೋಲಿನ ಭೀತಿಯಿಂದಾಗಿ ಕೇಂದ್ರ ಬಿಜೆಪಿ ಸರ್ಕಾರ, ಕಾಂಗ್ರೆಸ್ ಮತ್ತು ಕಮ್ಯುನಿಷ್ಟ್ ಪಕ್ಷ ಸೇರಿದಂತೆ ವಿರೋಧ ಪಕ್ಷಗಳಿಗೆ ಕಿರುಕುಳ ನೀಡುತ್ತಿದೆ” ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ವಾಗ್ದಾಳಿ ನಡೆಸಿದರು. ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಪ್ರತಿಕ್ರಿಯಿಸಿದರು. ಎಐಸಿಸಿಗೆ ಆದಾಯ ತೆರಿಗೆ ಇಲಾಖೆಯಿಂದ ನೊಟೀಸ್ ಜಾರಿ ಮಾಡಿರುವ ಬಗ್ಗೆ ಕೇಳಿದಾಗ ಅವರು ಶನಿವಾರ ಉತ್ತರಿಸಿದ್ದು ಹೀಗೆ; “1800 ಕೋಟಿ ತೆರಿಗೆ ಪಾವತಿಸಬೇಕು ಎಂದು ಆದಾಯ ತೆರಿಗೆ ಇಲಾಖೆ ಕಾಂಗ್ರೆಸ್ ಪಕ್ಷಕ್ಕೆ ನೊಟೀಸ್ ಜಾರಿ ಮಾಡಿದೆ. ಇದು ಪ್ರಜಾಪ್ರಭುತ್ವ ದೇಶ. ಆದರೂ ಬಿಜೆಪಿ ಸರ್ಕಾರ ಅಧಿಕಾರಿಗಳ ಮೂಲಕ ವಿರೋಧ ಪಕ್ಷಗಳಿಗೆ ಕಿರುಕುಳ ನೀಡುತ್ತಿದೆ. ಸೂರ್ಯ ಮುಳುಗುತ್ತಾನೆ, ಮತ್ತೆ ಹುಟ್ಟುತ್ತಾನೆ. ಇಲ್ಲಿ ಯಾವುದೂ ಶಾಶ್ವತವಲ್ಲ. ಕಾಂಗ್ರೆಸ್ ಹಾಗೂ ಇಂಡಿಯಾ ಮೈತ್ರಿಕೂಟಕ್ಕೆ ಬಿಜೆಪಿ ಸರ್ಕಾರ ಬೆದರಿದೆ. ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ ಎಂದು ಅವರಿಗೆ ಅರಿವಾಗಿದೆ. ಹೀಗಾಗಿ ಅವರು ಎಲ್ಲರಿಗೂ ಕಿರುಕುಳ ನೀಡುತ್ತಿದ್ದಾರೆ. ನನಗೂ ನೊಟೀಸ್ ಬಂದಿದೆ: ನನ್ನ ವಿರುದ್ಧದ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಲೋಕಸಭಾ ಚುನಾವಣೆಯ ಮತದಾನದಂದು ಸಾರ್ವತ್ರಿಕ ರಜೆಯನ್ನು ಘೋಷಣೆ ಮಾಡಿ ಇಂದು ಅಧಿಕೃತ ಆದೇಶ ಹೊರಡಿಸಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ಭಾರತ ಚುನಾವಣಾ ಆಯೋಗವು ಲೋಕಸಭೆಗೆ ಸಾರ್ವತ್ರಿಕ ಚುನಾವಣೆ 2024ನ್ನು ಘೋಷಿಸಿದ್ದು, ಕರ್ನಾಟಕದಲ್ಲಿ ಮೊದಲ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ದಿನಾಂಕ:26.04.2024ರ ಶುಕ್ರವಾರದಂದು ಹಾಗೂ ಇನ್ನುಳಿದ 14 ಲೋಕಸಭಾ ಕ್ಷೇತ್ರಗಳಿಗೆ ಎರಡನೇ ಹಂತ ಹಾಗೂ ಶೋರಾಪುರ-36 ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯನ್ನು ದಿನಾಂಕ:07.05.2024ರ ಮಂಗಳವಾರದಂದು ನಡೆಸುತ್ತಿದೆ ಎಂದಿದ್ದಾರೆ. ಸದರಿ ಚುನಾವಣಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವಂತಹ ಮತದಾರರು ಮತ ಚಲಾಯಿಸಲು ಅನುಕೂಲವಾಗುವಂತೆ ಆಯಾ ಚುನಾವಣಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ಎಲ್ಲಾ ರಾಜ್ಯ ಸರ್ಕಾರಿ ಕಛೇರಿಗಳಿಗೆ, ಶಾಲಾ ಕಾಲೇಜುಗಳಿಗೆ (ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ) ಹಾಗೂ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಒಳಗೊಂಡಂತೆ ದಿನಾಂಕ:26.04.2024 ಮತ್ತು ದಿನಾಂಕ:07.05.2024ರಂದು ನಡೆಯುವ ಚುನಾವಣೆಗೆ ಕೆಳಗಿನ ಅಂಕಣದಲ್ಲಿ ನಮೂದಿಸಿರುವ ಆಯಾ ಚುನಾವಣಾ ಕ್ಷೇತ್ರಗಳಿಗೆ ಸೀಮಿತಗೊಳಿಸಿ ಸಾರ್ವತ್ರಿಕ ರಜೆಯನ್ನು ಘೋಷಿಸಿದ್ದಾರೆ. ಲೋಕಸಭಾ ಕ್ಷೇತ್ರಗಳ…
ನವದೆಹಲಿ: ಹಿರಿಯ ಎನ್ ಸಿ ಪಿ ನಾಯಕ ನವಾಬ್ ಮಲ್ಲಿಕ್ ಅವರ ಆರೋಗ್ಯದಲ್ಲಿ ಏರುಪೇರು ಆಗಿರೋ ಕಾರಣ, ಆಸ್ಪತ್ರೆಗೆ ದಾಖಲಾಗಿರೋದಾಗಿ ತಿಳಿದು ಬಂದಿದೆ. ಹಿರಿಯ ಎನ್ಸಿಪಿ ಮುಖಂಡ ಮತ್ತು ಮಹಾರಾಷ್ಟ್ರದ ಮಾಜಿ ಸಚಿವ ನವಾಬ್ ಮಲಿಕ್ ಅವರನ್ನು ಉಸಿರಾಟದ ತೊಂದರೆಯಿಂದಾಗಿ ಶನಿವಾರ ಕುರ್ಲಾದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರ ಮಗಳು ಸುದ್ದಿ ಸಂಸ್ಥೆ ಎಎನ್ಐಗೆ ಖಚಿತಪಡಿಸಿದ್ದಾರೆ. https://twitter.com/ANI/status/1773982143745786162
ಬೀದರ್: ಜಿಲ್ಲೆಯಲ್ಲಿ ಇಂದು ಶಾಕ್ ಎನ್ನುವಂತೆ ಓವರ್ ಟ್ಯಾಂಕ್ ಒಂದನ್ನು ಓರಿದಂತ ಯುವಕನೊಬ್ಬ ಅದಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದ್ಯಾವುದನ್ನು ಅರಿಯದಂತ ಜನರು ಮಾತ್ರ ಅದೇ ನೀರನ್ನು 4-5 ದಿನಗಳ ಕಾಲ ಕುಡಿದಿದ್ದಾರೆ. ಕೊನೆಗೆ ವಾಸನೆಯ ನಂತ್ರ ಓವರ್ ಟ್ಯಾಂಕ್ ನಲ್ಲಿ ಚೆಕ್ ಮಾಡಿದಾಗ ಯುವಕ ಶವ ಕಂಡು ಶಾಕ್ ಆಗಿದ್ದಾರೆ. ಬೀದರ್ ತಾಲೂಕಿನ ಅಣದೂರು ಗ್ರಾಮದ ರಾಜಕುಮಾರ ದಾಸ ಎಂಬಾತ ಪತ್ನಿಯ ಅನೈತಿಕ ಸಂಬಂಧದ ಹಿನ್ನಲೆಯಲ್ಲಿ ಬೇಸತ್ತು, ಓವರ್ ಟ್ಯಾಂಕ್ ಏರಿ ಅದರೊಳಗಿನ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರಾಜಕುಮಾರ ಆತ್ಮಹತ್ಯೆ ಮಾಡಿಕೊಂಡಿದ್ದಂತ ವಿಷಯ ತಿಳಿಯದ ಅಣದೂರು ಗ್ರಾಮಸ್ಥರು ಮಾತ್ರ 4-5 ದಿನಗಳಿಂದ ಅದೇ ನೀರು ಕುಡಿದಿದ್ದಾರೆ. ಕುಡಿಯುವ ನೀರು ವಿಪರೀತವಾಗಿ ವಾಸನೆ ಬರುತ್ತಿದೆ. ಅದರಲ್ಲಿ ಕೂದಲುಗಳು ಬರ್ತಾ ಇದ್ದಾವೆ ಎಂಬುದಾಗಿ ಗ್ರಾಮಸ್ಥರು ಪಿಡಿಓ, ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಗ್ರಾಮಸ್ಥರ ದೂರಿನಿಂದ ಗ್ರಾಮದಲ್ಲಿ ಎಲ್ಲೋ ಕುಡಿಯೋ ನೀರಿನ ಪೈಪಿಗೆ ಚರಂಡಿ ನೀರು ಸೇರುತ್ತಿರಬೇಕು ಅಂತ ಹುಡುಕಾಡಿದ್ದಾರೆ. ಕೊನೆಗೆ ಸಿಗದ ಕಾರಣ…
ಬೆಂಗಳೂರು: ಕರ್ನಾಟಕ ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿದೆ. ಅಚ್ಚರಿಯೆನ್ನುವಂತೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ರಕ್ಷಾ ರಾಮಯ್ಯ ಅವರಿಗೆ ಟಿಕೆಟ್ ನೀಡಲಾಗಿದೆ. ಈ ಕುರಿತಂತೆ ಎಐಎಸಿಸಿ ಜನರಲ್ ಸೆಕ್ರೇಟರಿ ಕೆಸಿ ವೇಣುಗೋಪಾಲ್ ಪಟ್ಟಿ ಪ್ರಕಟಿಸಿದ್ದು, ಬಳ್ಳಾರಿ ಎಸ್ಟಿ ಮೀಸಲು ಲೋಕಸಭಾ ಕ್ಷೇತ್ರಕ್ಕೆ ಈ ತುಕಾರಾಂ ಅವರಿಗೆ ಟಿಕೆಟ್ ನೀಡಲಾಗಿದೆ. ಇನ್ನೂ ಚಾಮರಾಜನಗರ ಎಸ್ಸಿ ಮೀಸಲು ಲೋಕಸಭಾ ಕ್ಷೇತ್ರಕ್ಕೆ ಸುನೀಲ್ ಬೋಸ್, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ರಕ್ಷಾ ರಾಮಯ್ಯ ಅವರಿಗೆ ಟಿಕೆಟ್ ನೀಡಲಾಗಿದೆ.