Author: kannadanewsnow09

ಪೇಶಾವರ: ವಾಯುವ್ಯ ಪಾಕಿಸ್ತಾನದ ಪ್ರಕ್ಷುಬ್ಧ ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ನಡೆದ ಕೋಮು ಹಿಂಸಾಚಾರದಲ್ಲಿ ಕನಿಷ್ಠ 32 ಜನರು ಸಾವನ್ನಪ್ಪಿದ್ದಾರೆ ಮತ್ತು 30 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಫ್ಘಾನಿಸ್ತಾನದ ಗಡಿಯಲ್ಲಿರುವ ಕುರ್ರಾಮ್ ಜಿಲ್ಲೆಯ ಅಲಿಜೈ ಮತ್ತು ಬಗಾನ್ ಬುಡಕಟ್ಟು ಜನಾಂಗದವರ ನಡುವೆ ಗುರುವಾರ ಪ್ರಯಾಣಿಕರ ವ್ಯಾನ್ಗಳ ಬೆಂಗಾವಲು ವಾಹನದ ಮೇಲೆ ನಡೆದ ದಾಳಿಯ ನಂತರ ಘರ್ಷಣೆಗಳು ನಡೆದಿದ್ದು, ಇದರಲ್ಲಿ 47 ಜನರು ಸಾವನ್ನಪ್ಪಿದ್ದಾರೆ. ಬಲಿಷ್ಖೇಲ್, ಖಾರ್ ಕಾಳಿ, ಕುಂಜ್ ಅಲಿಜೈ ಮತ್ತು ಮಕ್ಬಾಲ್ನಲ್ಲಿಯೂ ಗುಂಡಿನ ದಾಳಿ ಮುಂದುವರೆದಿದೆ. ಬುಡಕಟ್ಟು ಜನಾಂಗದವರು ಭಾರಿ ಮತ್ತು ಸ್ವಯಂಚಾಲಿತ ಶಸ್ತ್ರಾಸ್ತ್ರಗಳಿಂದ ಪರಸ್ಪರ ಗುರಿಯಾಗಿಸುತ್ತಿದ್ದಾರೆ. ಘರ್ಷಣೆಯಲ್ಲಿ ಈವರೆಗೆ 18 ಜನರು ಸಾವನ್ನಪ್ಪಿದ್ದಾರೆ ಮತ್ತು 30 ಜನರು ಗಾಯಗೊಂಡಿದ್ದಾರೆ. ಘರ್ಷಣೆಯಲ್ಲಿ ೩೦ ಕ್ಕೂ ಹೆಚ್ಚು ಸಾವುಗಳು ಸಂಭವಿಸಿವೆ ಎಂದು ಸ್ವತಂತ್ರ ಮತ್ತು ಮಾಧ್ಯಮ ಮೂಲಗಳು ವರದಿ ಮಾಡಿವೆ. ಘರ್ಷಣೆಯಲ್ಲಿ ಮನೆಗಳು ಮತ್ತು ಅಂಗಡಿಗಳು ಸಹ ಹಾನಿಗೊಳಗಾಗಿವೆ. ವಿವಿಧ ಗ್ರಾಮಗಳ ಜನರು ಸುರಕ್ಷಿತ ಸ್ಥಳಗಳಿಗೆ…

Read More

ಬೆಂಗಳೂರು: ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ದಿಗ್ವಿಜಯ ಸಾಧಿಸಿದ್ದಾರೆ. ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್, ಶಿಗ್ಗಾಂವಿಯಲ್ಲಿ ಯಾಸಿರ್ ಅಹ್ಮದ್ ಪಠಾಣ್ ಹಾಗೂ ಸಂಡೂರಿನಲ್ಲಿ ಅನ್ನಪೂರ್ಣ ತುಕಾರಾಂ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಸರ್ಕಾರವನ್ನು ಅಭೂತಪೂರ್ವಕವಾಗಿ ಬೆಂಬಲಿಸಿದ ಕರ್ನಾಟಕ ಜನತೆಗೆ ಸಚಿವ ಪ್ರಿಯಾಂಕ್ ಖರ್ಗೆ ಧನ್ಯವಾದಗಳನ್ನು ಹೇಳಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು, ಮೂರೂ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಆಶೀರ್ವದಿಸಿದ ಮತದಾರರಿಗೆ ಧನ್ಯವಾದಗಳು. ಈ ಉಪ ಚುನಾವಣೆಯ ಅಭೂತಪೂರ್ವ ಫಲಿತಾಂಶವು ನಮ್ಮ ಸರ್ಕಾರದ ಜನಪರ ಆಡಳಿತಕ್ಕೆ, ಅಭಿವೃದ್ಧಿಪರ ನೀತಿಗೆ ಹಾಗೂ ಜನರ ಬದುಕನ್ನು ಬದಲಿಸಿದ ಗ್ಯಾರಂಟಿ ಯೋಜನೆಗಳ ಯಶಸ್ಸಿಗೆ ಹಿಡಿದ ಕನ್ನಡಿಯಾಗಿದೆ. ಈ ಉಪ ಚುನಾವಣೆಯ ಗೆಲುವು ನಮ್ಮ ಸರ್ಕಾರಕ್ಕೆ ಮತ್ತಷ್ಟು ಬಲ ನೀಡಿದೆ, ಇನ್ನಷ್ಟು ಜನಹಿತದ ಕಾರ್ಯಕ್ರಮಗಳನ್ನು ಕೈಗೊಳ್ಳಲು ಪ್ರೇರಣೆ ಮತ್ತು ಚೈತನ್ಯವನ್ನು ನೀಡಿದೆ ಎಂದಿದ್ದಾರೆ. ಕರ್ನಾಟಕದ ಪ್ರಬುದ್ಧ ಹಾಗೂ ಪ್ರಜ್ಞಾವಂತ ಮತದಾರರು ಪ್ರಗತಿ, ಶಾಂತಿ, ಸೌಹಾರ್ದತೆಯನ್ನು ಬಯಸುತ್ತಾರೆ, ಭವಿಷ್ಯ ರೂಪಿಸುವ ಉದ್ಯೋಗ…

Read More

ಬೆಂಗಳೂರು: ಬಿಜೆಪಿಯ ಕೋಮು ಆಧಾರಿತ ಕ್ಷುಲ್ಲಕ ರಾಜಕಾರಣ ನಡೆಯಲ್ಲ ಎಂಬ ಸಂದೇಶವನ್ನ ಮೂರು ಕ್ಷೇತ್ರಗಳಲ್ಲಿ ಜನರು ತಮ್ಮ ಮತದಾನದ ಮೂಲಕ ತೋರ್ಪಡಿಸಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸಿದ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಸಚಿವರು, ಚುನಾವಣೆಯಲ್ಲಿ ಬಿಜೆಪಿ ಸುಳ್ಳಿನ ಪ್ರಚಾರ ನಡೆಸಿತ್ತು ಎಂದರು. ಒಂದು ಸಮುದಾಯವನ್ನ ಟಾರ್ಗೆಟ್ ಮಾಡುವ ಬಿಜೆಪಿಯ ಕ್ಷುಲ್ಲಕ ರಾಜಕಾರಣವನ್ನ ನಾವು ಒಪ್ಪುವುದಿಲ್ಲ ಎಂಬ ಸಂದೇಶವನ್ನ ಜನರು ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಜನರು ಸ್ಪಂದಿಸಿದ್ದಾರೆ. ಈ ಚುನಾವಣೆಯ ಫಲಿತಾಂಶ ಕಾಂಗ್ರೆಸ್ ಸರ್ಕಾರ ಇನ್ನಷ್ಟು ಒಳ್ಳೆಯ ಕೆಲಸಗಳನ್ನ ಮಾಡಲು ಪ್ರೇರಣೆಯಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಸಂಡೂರ ಕಾಂಗ್ರೆಸ್ ಗೆದ್ದ ಕ್ಷೇತ್ರವಾಗಿತ್ತು. ಅಲ್ಲಿ ಗೆಲ್ಲುವ ವಿಶ್ವಾಸವಿತ್ತು. ಶಿಗ್ಗಾವಿಯಲ್ಲಿ ಕಾಂಗ್ರೆಸ್ ಗೆಲುವು ಪಕ್ಷಕ್ಕೆ ಹೆಚ್ಚಿನ ಬಲ ತುಂಬಲಿದೆ. ಅಲ್ಪಸಂಖ್ಯಾತ ಸಮುದಾಯದ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿರುವುದು ಬಿಜೆಪಿಯ ಕೋಮು ರಾಜಕಾರಣಕ್ಕೆ ತಕ್ಕ ಪಾಠ ಕಲಿಸಿದಂತಾಗಿದೆ. ಚೆನ್ನಪಟ್ಟಣದಲ್ಲಿ ಕಾಂಗ್ರೆಸ್ ಗೆ ಮೊದಲಿನಿಂದಲು ಬೆಂಬಲವಿತ್ತು. ಕುಮಾರಸ್ವಾಮಿ…

Read More

ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಹಣದ ಹೊಳೆ ಹರಿಸಿ ವಿಜಯ ಸಾಧಿಸಿದೆ. ಜೊತೆಗೆ ಜನರು ಕೂಡ ಅಭಿವೃದ್ಧಿಯಿಂದ ವಂಚಿತರಾಗುತ್ತೇವೆ ಎಂಬ ದೃಷ್ಟಿಯಿಂದ ಕಾಂಗ್ರೆಸ್‌ಗೆ ಮತ ಹಾಕಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಜನರು ನೀಡಿದ ತೀರ್ಪಿಗೆ ತಲೆಬಾಗುತ್ತೇನೆ. ಶಿಗ್ಗಾಂವಿ, ಚನ್ನಪಟ್ಟಣದಲ್ಲಿ ಕೊನೆ ಗಳಿಗೆಯಲ್ಲಿ ಅಭ್ಯರ್ಥಿಯನ್ನು ತೀರ್ಮಾನಿಸಲಾಗಿತ್ತು. ಇದು ನಮಗೆ ನಕಾರಾತ್ಮಕವಾಗಿ ಪರಿಣಮಿಸಿದೆ. ಸಂಡೂರಿನಲ್ಲಿ ಉತ್ತಮ ಸ್ಪರ್ಧೆ ನೀಡಲಾಗಿದೆ. ನಿಖಿಲ್‌ ಕುಮಾರಸ್ವಾಮಿ ಎರಡು ಬಾರಿ ಸೋತಿದ್ದಾರೆ ಎಂಬ ಅನುಕಂಪವಿದ್ದು, ಈ ಬಾರಿ ಗೆಲ್ಲುವ ನಿರೀಕ್ಷೆ ಇತ್ತು. ಆದರೆ ಆ ನಿರೀಕ್ಷೆ ಸುಳ್ಳಾಗಿದೆ. ಇದು ಸಿದ್ದರಾಮಯ್ಯ ಅಥವಾ ಡಿ.ಕೆ.ಶಿವಕುಮಾರ್‌ ಅವರ ಗೆಲುವಲ್ಲ. ಈ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಹಣದ ಹೊಳೆ ಹರಿಸಿದೆ. ಅಧಿಕಾರಿಗಳು, ಗುತ್ತಿಗೆದಾರರು ಸರ್ಕಾರದ ಪರವಾಗಿ ಕೆಲಸ ಮಾಡಿದ್ದಾರೆ. ಅಧಿಕಾರವಿದ್ದಾಗ ಜನರು ಕೂಡ ಅಭಿವೃದ್ಧಿಯಿಂದ ವಂಚಿತರಾಗುತ್ತೇವೆ ಎಂಬ ಭಯದಿಂದ ಮತ ಹಾಕುತ್ತಾರೆ ಎಂದರು. ಈ ಫಲಿತಾಂಶದ ಕುರಿತು ಪಕ್ಷದ ವೇದಿಕೆಯಲ್ಲಿ…

Read More

ಬೆಂಗಳೂರು: ನಮ್ಮ ಆಡಳಿತ ಮೇಲೆ ವಿಶ್ವಾಸವಿಟ್ಟು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ ಸಂಡೂರು, ಶಿಗ್ಗಾಂವಿ ಮತ್ತು ಚನ್ನಪಟ್ಟಣದ ಮತದಾರರಿಗೆ ಅನಂತ ಧನ್ಯವಾದಗಳು ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಇಂದು 3 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಿದ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳಿಗೆ ಮತನೀಡಿ, ಆಶೀರ್ವದಿಸಿದ ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟಣದ ಮತದಾರರಿಗೆ ನನ್ನ ಪ್ರೀತಿಪೂರ್ವಕ ಧನ್ಯವಾದಗಳು ಎಂದಿದ್ದಾರೆ. ಈ ಮೂರೂ ಕ್ಷೇತ್ರಗಳಲ್ಲಿ ಭರ್ಜರಿ ಜಯ ದಾಖಲಿಸಿ, ವಿಧಾನಸಭೆಗೆ ಪ್ರವೇಶಿಸಿರುವ ನಮ್ಮ ಅಭ್ಯರ್ಥಿಗಳಾದ ಯಾಸಿರ್‌ ಅಹ್ಮದ್‌ ಖಾನ್‌ ಪಠಾಣ್‌, ಅನ್ನಪೂರ್ಣ ತುಕಾರಾಮ್‌ ಹಾಗೂ ಸಿ.ಪಿ. ಯೋಗೇಶ್ವರ್‌ ಅವರಿಗೆ ಹೃದಯಪೂರ್ವಕ ಅಭಿನಂದನೆಗಳು ಅಂತ ಹೇಳಿದ್ದಾರೆ. ವಿಪಕ್ಷಗಳ ನಿರಂತರ ಅಪಪ್ರಚಾರ, ಸುಳ್ಳು ಆರೋಪಗಳನ್ನು ಮೆಟ್ಟಿನಿಂತು ನಾವು ಸಾಧಿಸಿರುವ ಈ ಗೆಲುವು ದಿಗ್ವಿಜಯವಾಗಿ ಕಾಣುತ್ತಿದೆ. ಈ ಗೆಲುವಿನ ಹಿಂದಿರುವ ನಮ್ಮ ಕಾರ್ಯಕರ್ತರು ಮತ್ತು ಮುಖಂಡರ ಅಪಾರ ಶ್ರಮವನ್ನು ಇದೇ ವೇಳೆ ನೆನೆಯುತ್ತೇನೆ ಅಂತ ತಿಳಿಸಿದ್ದಾರೆ. ಈ ಗೆಲುವು ನಮ್ಮ…

Read More

ಬೆಂಗಳೂರು: ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಬೆಂಗಳೂರಿನ ಹೆಣ್ಣೂರು ಠಾಣಾ ವ್ಯಾಪ್ತಿಯಲ್ಲಿನ ಪ್ರಕರಣವೊಂದರಲ್ಲಿ ಸ್ಥಳೀಯ ಪೊಲೀಸರ ಕರ್ತವ್ಯಲೋಪ ಪ್ರಕರಣದಲ್ಲಿ ಖುದ್ದು ಹಾಜರಾಗುವಂತೆ ನಗರ ಪೊಲೀಸ್ ಆಯುಕ್ತರಿಗೆ ಬೆಂಗಳೂರಿನ ನ್ಯಾಯಾಲಯವು ಸಮನ್ಸ್ ಹೊರಡಿಸಿದೆ. ಬೆಂಗಳೂರಿನ ಹೆಣ್ಣೂರು ಠಾಣಾವ್ಯಾಪ್ತಿಯಲ್ಲಿ ಕೆಲವು ದಿನಗಳ ಹಿಂದೆ ಕೇರಳ ಮೂಲದ ವ್ಯಕ್ತಿಯ ಕೌಟುಂಬಿಕ ವ್ಯಾಜ್ಯದ ನಡುವೆ ಕೆಲವು ರೌಡಿಗಳು ಸಜಿ ಜೋಸೆಫ್ ಎಂಬವರ ಜಮೀನಿಗೆ ನುಗ್ಗಿ ದಾಂದಲೆ ನಡೆಸಿದ್ದ ಘಟನೆ ಭಾರೀ ಸುದ್ದಿಯಾಗಿತ್ತು. ತಾವು ಸಚಿವ ಭೈರತಿ ಸುರೇಶ್ ಸಹಚರರೆಂದು ಹೇಳಿ ಸ್ಥಳೀಯ ರೌಡಿಗಳು ಜಮೀನು ಬಿಟ್ಟುಕೊಡುವಂತೆ ಜೀವಬೆದರಿಕೆಯೊಡ್ಡಿದ್ದರು. ಅಷ್ಟೇ ಅಲ್ಲ, ಕೆಲವು ವ್ಯಕ್ತಿಗಳನ್ನು ಹಾಗೂ ನಿಷೇಧಿತ ನಾಯಿಯನ್ನೂ ಸ್ಥಳದಲ್ಲಿ ನಿಯೋಜಿಸಿದ್ದಾರೆ ಎಂದು ಕಿರುಕುಳಕ್ಕೆ ಒಳಗಾದ ಸಜಿ ಜೋಸೆಫ್ ಆರೋಪಿಸಿದ್ದರು. ರೌಡಿಗಳ ಜೊತೆ ಸ್ಥಳೀಯ ಪೊಲೀಸರೂ ಸ್ಥಳಕ್ಕೆ ಭೇಟಿ ನೀಡಿ ತಮಗೆ ಬೆದರಿಸಿದ್ದರು ಎಂದು ಜೋಸೆಫ್ ಆರೋಪಿಸಿದ್ದರು. ಈ ಸಂಬಂಧ ಗೃಹ ಸಚಿವರು, ರಾಜ್ಯ ಪೊಲೀಸ್ ಮಹಾನಿರ್ದೇಶಕರು ಹಾಗೂ ಪೊಲೀಸ್ ಆಯುಕ್ತರು ಸೇರಿದಂತೆ ಹಿರಿಯ ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದರು. ಆದರೂ ಪೊಲೀಸರು…

Read More

ಬೆಂಗಳೂರು: ‘ಕತ್ತಲೆ ಜಗತ್ತು’ ಈ ಪುಸ್ತಕದಲ್ಲಿ ಪ್ರತಾಪ್ ಸಿಂಹ ಅವರ ನಡೆ-ನುಡಿ-ವಿವಾದಗಳ ಬಗ್ಗೆ ಹೆಚ್ಚಾಗಿ ಸಂಗತಿಗಳು ಇದೆ ಎಂಬ ಕಾರಣಕ್ಕಾಗಿ ಬಾರೀ ಸುದ್ದಿಗೆ ಗ್ರಾಸವಾಗಿದೆ. ಪ್ರತಾಪ್ ಸಿಂಹ ಅವರ ರಾಜಕೀಯ ಎದುರಾಳಿಗಳ ಕೈಯಲ್ಲೇ ಈ ಪುಸ್ತಕ ಹರಿದಾಡುತ್ತಿದ್ದು ಈ ಬೆಳವಣಿಗೆ ಬಗ್ಗೆ ಪ್ರತಾಪ್ ಸಿಂಹ ಅವರು ಗಲಿಬಿಲಿಗೊಂಡಿದ್ದಾರೆ. ಈ ಪುಸ್ತಕದಲ್ಲಿನ ಬರಹಗಳು ತಮ್ಮ ಬಗ್ಗೆ ಅಪರಾಚರ ಮಾಡುಂತಿದ್ದು ಇದರ ಬಿಡುಗಡೆಗೆ ನಿರ್ಬಂಧ ಕೋರಿ ಪ್ರತಾಪ್ ಸಿಂಹ ಅವರು ಕೋರ್ಟ್ ಮೊರೆಹೋಗಿದ್ದಾರೆ. ಸಧ್ಯಕ್ಕೆ ಬೆಂಗಳೂರಿನ ಸಿವಿಲ್ ಕೋರ್ಟ್ ‘ಕತ್ತಲೆ ಜಗತ್ತು’ ಪುಸ್ತಕದ ಬಿಡುಗಡೆಗೆ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಆದರೆ ಅಷ್ಟರಲ್ಲೇ ಸಾವಿರಾರು ಪುಸ್ತಕಗಳು ಮಾರುಕಟ್ಟೆಯಲ್ಲಿ ಬಿಕಾರಿಯಾಗಿವೆ ಎನ್ನಲಾಗುತ್ತಿದೆ. ಪತ್ರಕರ್ತ ಹಾಗೂ ‘ಬೆತ್ತಲೆ ಜಗತ್ತು’ ಅಂಕಣ ಖ್ಯಾತಿಯ ಪ್ರತಾಪ್ ಸಿಂಹ ಎರಡು ಬಾರಿ ಮೈಸೂರು ಲೋಕಸಭಾ ಕ್ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಮೂಲಕ ಸಂಸತ್ತಿಗೆ ಆಯ್ಕೆಗೊಂಡಿದ್ದರಾದರೂ ಕಳೆದ 2024ರ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ವಂಚಿತರಾಗಿದ್ದರು. ಈ ಟಿಕೆಟ್ ವಂಚಿತರಾಗಲು ಕಾರಣ ಏನು ಎಂಬ ಕುತೂಹಲ ಎಲ್ಲರದ್ದಾಗಿದೆ.…

Read More

ಬೆಂಗಳೂರು: ಸರ್ಕಾರಿ ನೌಕರರು, ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ, ಉಳಿದಂತೆ ಯಾರೊಬ್ಬರ ಪಡಿತರ ಚೀಟಿಯನ್ನು ರದ್ದು ಮಾಡದಂತೆ ಆಹಾರ ಇಲಾಖೆ ಖಡಕ್ ಆದೇಶ ಹೊರಡಿಸಿದೆ. ಈ ಕುರಿತಂತೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಆಯುಕ್ತರು ಸುತ್ತೋಲೆಯನ್ನು ಹೊರಡಿಸಿದ್ದು, ಆದ್ಯತಾ ಪಡಿತರ ಚೀಟಿಯನ್ನು ನೀಡಲು ಸರ್ಕಾರದಿಂದ ನಿಗಧಿಪಡಿಸಿರುವ ಮಾನದಂಡಗಳನ್ನು ಪರಿಶೀಲಿಸಿ ಅನರ್ಹ ಪಡಿತರ ಚೀಟಿಗಳನ್ನು ರದ್ದುಗೊಳಿಸಲು ಕ್ರಮ ವಹಿಸುವಂತೆ ಸೂಚಿಸಲಾಗಿತ್ತು ಎಂದಿದ್ದಾರೆ. ಈ ಸಂಬಂಧ ಆದಾಯ ತೆರಿಗೆ ಪಾವತಿದಾರರು ಹಾಗೂ ಸರ್ಕಾರಿ ನೌಕರರನ್ನು ಹೊರತುಪಡಿಸಿ, ಉಳಿದಂತೆ ತೆಗೆದುಕೊಂಡಿರುವ ಕ್ರಮವನ್ನು ಮರುಸ್ತಾಪಿಸಲು ಕೂಡಲೇ ಕ್ರಮ ವಹಿಸಲು ಉಲ್ಲೇಖ (1)ರ ಸರ್ಕಾರದ ಪತ್ರದಲ್ಲಿ ನಿರ್ದೇಶಿಸಲಾಗಿರುತ್ತದೆ. ಹಾಗೂ ಈ ಮರುಸ್ತಾಪನೆ ಕ್ರಮವು ಕೇವಲ ಉಲ್ಲೇಖ (2)ರ ಸಭಾ ನಡವಳಿಯಲ್ಲಿ ನೀಡಿರುವ ನಿರ್ದೇಶನದ ಕ್ರಮಕ್ಕೆ ಮಾತ್ರ ಅನ್ವಯವಾಗುವಂತೆ ಈ ಕೆಳಕಂಡಂತೆ ಕ್ರಮ ವಹಿಸಲು ಆದೇಶಿಸಿದೆ. 1. ಸದರಿ ಮರುಸ್ತಾಪನೆ ಕಾರ್ಯವನ್ನು ಮಾಡಲು ಆಹಾರ ತಂತ್ರಾಂಶದಲ್ಲಿ ಜಂಟಿ/ಉಪ ನಿರ್ದೇಶಕರ ಲಾಗಿನ್ ನಲ್ಲಿ ಅವಕಾಶ ನೀಡಲಾಗಿರುತ್ತದೆ. 2.…

Read More

ಹಾವೇರಿ: ಜಿಲ್ಲೆಯ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪಠಾಣ್ ಯಾಸೀರ್ ಅಹ್ಮದ್ ಖಾನ್ ಅವರು ಗೆಲುವು ಸಾಧಿಸಿರುವುದಾಗಿ ಚುನಾವಣಾ ಆಯೋಗವು ಅಧಿಕೃತವಾಗಿ ಘೋಷಿಸಿದೆ. ಈ ಸಂಬಂಧ ಫಾರಂ ನಂ.21ಇ ನಲ್ಲಿ ಅಧಿಕೃತ ಘೋಷಣೆ ಮಾಡಿರುವಂತ ರಾಜ್ಯ ಚುನಾವಣಾ ಆಯೋಗದ ಅಧಿಕಾರಿಗಳು ಇಂದಿನ ಶಿಗ್ಗಾಂವಿ ವಿಧಾನಸಭಾ ಉಪ ಚುನಾವಣೆಯಲ್ಲಿ ಬಿಜೆಪಿಯ ಭರತ್ ಬೊಮ್ಮಾಯಿ 87,308 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಪಠಾಣ್ ಯಾಸಿರ್ ಅಹ್ಮದ್ ಖಾನ್ ಅವರು 1,00,756 ಮತಗಳನ್ನು ಪಡೆದಿರುವುದಾಗಿ ತಿಳಿಸಿದೆ. ಇನ್ನೂ ಸೋಷಿಯಲ್ ಪಾರ್ಟಿಯ ಕಜ್ಜದ್ ಮೊಹ್ಮದ್ದೀನ್ ಗುಂಡಗೇರಿ ಅವರು 664, ಕರ್ನಾಟಕ ರಾಷ್ಟ್ರ ಸಮಿತಿಯ ಅಭ್ಯರ್ಥಿ ರವಿಕೃಷ್ಣಾ ರೆಡ್ಡಿ ಅವರು 1,876 ಮತಗಳನ್ನು, ಸ್ವಂತ್ರ ಅಭ್ಯರ್ಥಿ ಡಾ.ಜಿಹೆಚ್ ಇಮ್ರಾಪುರ್ 89, ಸಿದ್ದಪ್ಪ ಹೊಸಳ್ಳಿ 80, ಎಸ್ ಎಸ್ ಪಾಟೀಲ್ 184, ಶೆಟ್ಟಪ್ಪ ನೀಲಪ್ಪ ದೇಸಾಯಿ 463 ಮತಗಳನ್ನು ಪಡೆದಿದ್ದಾರೆ ಎಂದು ತಿಳಿಸಿದೆ. ಒಟ್ಟು ಶಿಗ್ಗಾಂವಿ ವಿಧಾನಸಭಾ ಉಪ ಚುನಾವಣೆಯಲ್ಲಿ 2,37,671 ಮತದಾನದಲ್ಲಿ 1,91,420 ಮತಗಳು…

Read More

ಬೆಂಗಳೂರು: ಕರ್ನಾಟಕ ಮಿನಿ ಸಮರದಲ್ಲಿ ಮತದಾನೋತ್ತರ ಸಮೀಕ್ಷೆಗಳು ಉಲ್ಟಾ ಆಗಿದ್ದಾವೆ. ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು, ಒಂದು ಕ್ಷೇತ್ರದಲ್ಲಿ ಕಾಂಗ್ರೆಸ್ ಮಾತ್ರ ಗೆಲ್ಲಲಿದೆ ಎನ್ನುವಂತ ಸಮೀಕ್ಷಾ ವರದಿಯೇ ಸುಳ್ಳಾಗಿದೆ. ಕರ್ನಾಟಕದ ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಮೂರಕ್ಕೆ ಮೂರು ಗೆದ್ದುಕೊಳ್ಳುವ ಮೂಲಕ ಹೊಸ ದಾಖಲೆ ನಿರ್ಮಿಸಿದೆ. ಕರ್ನಾಟಕದ ಮೂರು ಉಪ ಚುನಾವಣೆಯ ಮತದಾನದ ನಂತ್ರ ಮತದಾನೋತ್ತರ ಚುನಾವಣಾ ಸಮೀಕ್ಷೆಗಳು ಪ್ರಕಟವಾಗಿದ್ದವು. ಪಿ-ಮಾರ್ಕ್ಸ್ ಸಮೀಕ್ಷೆಯಂತೆ ಒಂದು ಕ್ಷೇತ್ರದಲ್ಲಿ ಕಾಂಗ್ರೆಸ್, ಇನ್ನೆರಡು ಕ್ಷೇತ್ರಗಳಲ್ಲಿ ಎನ್ ಡಿಎ ಅಭ್ಯರ್ಥಿಗಳು ಗೆಲುವು ಸಾಧಿಸುವುದಾಗಿ ತಿಳಿಸಿತ್ತು. ಇನ್ನೂ ಹಿರಿಯ ವಾರ್ತಾ ವಾಚಕ ರಾಘವೇಂದ್ರ ಗಂಗಾವತಿ ಅವರ ಸಾರಥ್ಯದ ಚಾಣಕ್ಯ ಟೈಮ್ಸ್ 24X7 ಸಮೀಕ್ಷೆ ಕೂಡ ಪ್ರಕಟವಾಗಿದೆ. ಅದರಲ್ಲಿ ಚನ್ನಪಟ್ಟಣದಲ್ಲಿ ಎನ್ ಡಿಎ ಅಭ್ಯರ್ಥಿಯಾಗಿರುವಂತ ನಿಖಿಲ್ ಕುಮಾರಸ್ವಾಮಿ ಗೆಲುವು ಸಾಧಿಸಲಿದ್ದಾರೆ ಅಂತ ಹೇಳಿತ್ತು. ಹಾವೇರಿಯ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಸಂಸದ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿ ಗೆಲ್ಲಲಿದ್ದಾರೆ. ಶಿಗ್ಗಾವಿ ಬಿಜೆಪಿ ಪಾಲಾಗುವುದಾಗಿ ಚಾಣಕ್ಯ ಟೈಮ್ಸ್…

Read More