Author: kannadanewsnow09

ಬೆಂಗಳೂರು: ದಿನಾಂಕ 19.08.2025 (ಮಂಗಳವಾರ) ಬೆಳಿಗ್ಗೆ 10:30 ಗಂಟೆಯಿAದ ಮದ್ಯಾಹ್ನ 17:00 ಗಂಟೆಯವರೆಗೆ ‘66/11ಕೆ.ವಿ ಯೆಲ್ಲಾರ್ ಬಂಡೆ’ ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು. ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: ಎ.ಕೆ.ಅಶ್ರಮ ರಸ್ತೆ, ದೇವೆಗೌಡ ರಸ್ತೆ, ಆರ್.ಟಿ.ನಗರ 1ನೇ ಬ್ಲಾಕ್, ತಿಮ್ಮಯ್ಯ ಗಾರ್ಡನ್, ಮೋದಿ ಗಾರ್ಡನ್, ಮಿಲಿಟರಿ ಏರೀಯ, ವೀರಣ್ಣಪಾಳ್ಯ, ಲುಂಬಿನಿ ಗಾರ್ಡನ್, ಬಿ.ಡಬ್ಲುö್ಯ.ಎಸ್.ಎಸ್.ಬಿ ಸೆವೇಜ್ ಪ್ಲಾಟ್, ಮರಿಯಣ್ಣಪಾಳ್ಯ, ಕಾಫೀ ಬೋರ್ಡ್ ಲೇಔಟ್ ಕೆಂಪಾಪುರ, ದಾಸರಹಳ್ಳಿ, ಮಾರುತಿ ಲೇಔಟ್ ಭುವನೇಶ್ವರಿನಗರ, ಬಿ.ಇ.ಎಲ್. ಕಾರ್ಪೋರೇಟ್ ಆಫೀಸ್ ಚಾಣಕ್ಯ ಲೇಔಟ್ ನಾಗವಾರ ವ್ಯಾಪ್ತಿಯಲ್ಲಿ ಕರೆಂಟ್ ಇರಲ್ಲ. ಎಂ.ಎಸ್. ರಾಮಯ್ಯ ಉತ್ತರ ಸಿಟಿ, ತನಿಸಂದ್ರ ಮುಖ್ಯ ರಸ್ತೆ, ಆಶಿರ್ವಾದ್ ನಗರ, ಅಮರಜ್ಯೋತಿ ಲೇಔಟ್ ರಾಚೇನಹಳ್ಳಿ ಮುಖ್ಯ ರಸ್ತೆ, ಮೇಸ್ರಿö್ಟ ಪಾಳ್ಯ, ರಾಯಲ್ ಎನ್‌ಕ್ಲೇವ್, ಶ್ರೀರಾಂಪುರ ವಿಲೇಜ್, ವಿ.ಹೆಚ್.ಬಿ.ಸಿ.ಎಸ್ ಲೇಔಟ್ ವೀರಣ್ಣಪಾಳ್ಯ, ಜೋಜಪ್ಪ ಲೇಔಟ್, 17 ನೇ ಕ್ರಾಸ್, ಗೋವಿಂದಪುರ, ವೀರಣ್ಣಪಾಳ್ಯ ಮುಖ್ಯ ರಸ್ತೆ, ಬೈರಪ್ಪ ಲೇಔಟ್ ಮತ್ತು ಸುತ್ತಲಿನ…

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಕೊಲೆಗಾರ ಎಂಬುದಾಗಿ ಹೇಳಿಕೆ ನೀಡಿದ್ದಂತ ಮಹೇಶ್ ತಿಮರೋಡಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಪ್ರಕರಣದಲ್ಲಿ ಇಂದು ಸಂಜೆಯೊಳಗೆ ಬಂಧಿಸುವಂತೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಪೊಲೀಸರಿಗೆ ಸೂಚಿಸಿದ್ದಾರೆ. ಸಿಎಂ ಸಿದ್ಧರಾಮಯ್ಯ ಕೊಲೆಗಾರ ಎಂಬುದಾಗಿ ಮಹೇಶ್ ತಿಮರೋಡಿ ಹೇಳಿಕೆ ನೀಡಿದ್ದರು. ಈ ವಿಚಾರ ವಿಧಾನಸಭೆಯಲ್ಲೂ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಈ ಹಿನ್ನಲೆಯಲ್ಲಿ ಮಹೇಶ್ ತಿಮರೋಡಿ ವಿರುದ್ಧ ಕಾನೂನು ಕ್ರಮಕ್ಕೆ ಪೊಲೀಸರಿಗೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಸೂಚಿಸಿದ್ದರು. ಈ ಹಿನ್ನಲೆಯಲ್ಲಿ ಅವರ ವಿರುದ್ಧ ಎಫ್ಐಆರ್ ಕೂಡ ದಾಖಲಾಗಿದೆ. ಇದಷ್ಟೇ ಅಲ್ಲದೇ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಿದವನೇ ಸಿದ್ಧರಾಮಯ್ಯ, ಅವರು ಕೊಲೆಗಾರ ಎಂಬುದಾಗಿ ವಿವಾದಾತ್ಮಕ, ಪ್ರಚೋಕನಕಾರಿ ಹೇಳಿಕೆ ನೀಡಿದ್ದರು. ಈ ಹಿನ್ನಲೆಯಲ್ಲಿ ಎಫ್ಐಆರ್ ದಾಖಲಿಸಿರುವಂತ ಪೊಲೀಸರಿಗೆ ಗೃಹ ಸಚಿವ ಪರಮೇಶ್ವರ್ ಇಂದು ಸಂಜೆಯೊಳಗೆ ಬಂಧಿಸುವಂತೆಯೂ ಖಡಕ್ ಸೂಚನೆಯನ್ನು ನೀಡಿರುವುದಾಗಿ ಹೇಳಲಾಗುತ್ತಿದೆ. https://kannadanewsnow.com/kannada/caution-if-the-sheep-thieves-are-criticized-imprisonment-is-fixed-draft-bill-prepared-by-the-state-government/ https://kannadanewsnow.com/kannada/breaking-fir-registered-against-mahesh-timarodi-arrest-possible-at-any-moment/

Read More

ಬೆಂಗಳೂರು: ರಾಜ್ಯದಲ್ಲಿ ಕುರಿಗಾಯಿಗಳ ಮೇಲಿನ ದೌರ್ಜನ್ಯ ತಡೆಗೆ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಇದಕ್ಕಾಗಿ ಕರಡು ಮಸೂದೆ ಸಿದ್ಧಪಡಿಸಲಾಗಿದೆ. ಈ ಮಸೂದೆಯನ್ನು ವಿಧಾನ ಮಂಡಲದ ಉಭಯ ಸದನಗಳಲ್ಲಿ ಮಂಡಿಸಲಿದೆ. ಒಂದು ವೇಳೆ ಮಸೂದೆಗೆ ಅಂಗೀಕಾರ ದೊರೆತರೇ, ಇನ್ಮುಂದೆ ರಾಜ್ಯದಲ್ಲಿ ಕುರಿಗಾಯಿಗಳನ್ನು ನಿಂದಿಸಿದ್ರೇ ಜೈಲೆ ಶಿಕ್ಷೆ ಖಚಿತವಾಗಲಿದೆ. ಹೌದು ಸಾಂಪ್ರದಾಯಿಕ ಕುರಿಗಾಹಿಗಳ ಮೇಲಿನ ದೌರ್ಜನ್ಯ, ಶೋಷಣೆ, ಅವಹೇಳನ ತಡೆದು ಹಿತ ಕಾಪಾಡುವ ಜೊತೆಗೆ ಆ ವರ್ಗಕ್ಕೆ ಕಲ್ಯಾಣ ಮಂಡಳಿ ಸ್ಥಾಪಿಸಿ, ಯೋಜನೆಗಳನ್ನು ಜಾರಿಗೊಳಿಸಲು ಕಾನೂನು ಜಾರಿಗೆ ರಾಜ್ಯ ಸರ್ಕಾರವು ಮುಂದಾಗಿದೆ. ರಾಜ್ಯದ ಕುರಿಗಾಹಿಗಳ ಹಿತರಕ್ಷಣೆಗೆ ಸರ್ಕಾರ ಬದ್ದವಾಗಿದೆ. ಈಗಾಗಲೇ ಕುರಿಗಾರರ ದೌರ್ಜನ್ಯ ತಡೆ ಕಾಯ್ದೆಯ ಕರಡು ಸಿದ್ದವಾಗಿದ್ದು ಮುಂದಿನ ಸಚಿವ ಸಂಪುಟದಲ್ಲಿ (ಆಗಸ್ಟ್‌ 19, 2025) ಒಪ್ಪಿಗೆ ಪಡೆದು, ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ಪಶುವೈದ್ಯಕೀಯ ಸಚಿವ ಕೆ.ವೆಂಕಟೇಶ್‌ ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯನ್ನು ನೀಡಿರುವ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಕಾಯ್ದೆಯ ಜಾರಿಗೆ ಬದ್ದತೆಯನ್ನು ವ್ಯಕ್ತಪಡಿಸಿದ್ದಾರೆ. ಕುರಿಗಾರರ ಸ್ವತ್ತುಗಳ ರಕ್ಷಣೆ,…

Read More

ವಿಧಾನಪರಿಷತ್ : ಅರಣ್ಯ ಇಲಾಖೆಯಲ್ಲಿ ಮುಂಚೂಣಿ ಸಿಬ್ಬಂದಿ ಕೊರತೆ ನೀಗಿಸಲು ಕ್ರಮ ವಹಿಸಲಾಗಿದ್ದು, ಈಗಾಗಲೇ 310 ಅರಣ್ಯ ವೀಕ್ಷಕರ ನೇಮಕಾತಿ ಮಾಡಲಾಗಿದ್ದು, ಈಗ 540 ಅರಣ್ಯ ರಕ್ಷಕರ (ಗಾರ್ಡ್) ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ವಿಧಾನಪರಿಷತ್ತಿನಲ್ಲಿಂದು ಎಸ್.ಕೇಶವ ಪ್ರಸಾದ್ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಕಾಡಾನೆ ದಾಳಿ, ಹುಲಿ ದಾಳಿ ಸೇರಿದಂತೆ ವನ್ಯಜೀವಿ ದಾಳಿಯಿಂದ ಮೃತಪಟ್ಟವರಿಗೆ ಪ್ರಸ್ತುತ 20 ಲಕ್ಷ ರೂ. ಪರಿಹಾರ ನೀಡಲಾಗುತ್ತಿದೆ. ಹಾವು ಕಚ್ಚಿ ಮೃತಪಟ್ಟವರಿಗೆ ಕೃಷಿ ಇಲಾಖೆಯ ವತಿಯಿಂದ 2 ಲಕ್ಷ ರೂ. ಪರಿಹಾರ ಒದಗಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು. ರಾಜ್ಯದಲ್ಲಿ ವನ್ಯಜೀವಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಸರ್ಕಾರ ಮಾನವ-ವನ್ಯಜೀವಿ ಸಂಘರ್ಷ ನಿಯಂತ್ರಣಕ್ಕೆ ಕ್ರಮ ಕೈಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ಪ್ರತ್ಯೇಕವಾಗಿ ಆನೆ ಕಾರ್ಯಪಡೆಯನ್ನು ಮಂಜೂರು ಮಾಡಲು ಸೂಚಿಸಲಾಗಿದ್ದು, 2-3 ದಿನಗಳಲ್ಲಿ ಅಧಿಕೃತವಾಗಿ ಪ್ರಕಟಿಸಲಾಗುವುದು. ಈ ಪಡೆಯಲ್ಲಿ 32 ಸಿಬ್ಬಂದಿ ಇರುತ್ತಾರೆ. ಅವರು ಆನೆಗಳನ್ನು…

Read More

ಕೆಎನ್ಎನ್ ಡಿಜಿಟಲ್ ಡೆಸ್ಕ್: ತಿಂಗಳಿಗೆ 1 ಲಕ್ಷ ರೂ.ಗಳ ಸಂಬಳವು ವೃತ್ತಿಪರ ಜೀವನದಲ್ಲಿ ಅನೇಕ ಜನರಿಗೆ ಗಮನಾರ್ಹ ಮೈಲಿಗಲ್ಲಾಗಿದೆ. ಇದು ಸ್ಮಾರ್ಟ್ ಹಣಕಾಸು ಯೋಜನೆಯೊಂದಿಗೆ ಆರ್ಥಿಕ ಸ್ವಾತಂತ್ರ್ಯ ಮತ್ತು ಸಂಪತ್ತಿನ ಸೃಷ್ಟಿಗೆ ಉತ್ತಮ ಅವಕಾಶಗಳನ್ನು ನೀಡುತ್ತದೆ. ಹಾಗಾದರೇ ನೀವು 1 ಲಕ್ಷ ಸಂಬಳದಲ್ಲಿ 10 ವರ್ಷಗಳಲ್ಲಿ 1 ಕೋಟಿ ಗಳಿಸುವುದು ಹೇಗೆ ಎನ್ನುವ ಬಗ್ಗೆ ಮಾಹಿತಿ ಮುಂದಿದೆ ಓದಿ. ತಿಂಗಳಿಗೆ 1 ಲಕ್ಷ ರೂ.ಗಳ ಸಂಬಳದೊಂದಿಗೆ ನಿಮ್ಮ ಮೊದಲ 1 ಕೋಟಿ ರೂ.ಗಳ ಕಾರ್ಪಸ್ ಅನ್ನು ನಿರ್ಮಿಸಲು ನೀವು ಎದುರು ನೋಡುತ್ತಿದ್ದರೆ, ಅದಕ್ಕೆ ಸ್ಥಿರವಾದ ಹೂಡಿಕೆ ಮತ್ತು ಪರಿಣಾಮಕಾರಿ ಹಣಕಾಸು ಯೋಜನೆಯ ಅಗತ್ಯವಿದೆ. 1 ಕೋಟಿ ರೂ.ಗಳ ಕಾರ್ಪಸ್ ನ ಮಹತ್ವದ ಮೈಲಿಗಲ್ಲನ್ನು ಸಾಧಿಸಲು, ನಿಮ್ಮ ಹಣಕಾಸಿನ ಅಗತ್ಯಗಳಿಗೆ ಅನುಗುಣವಾಗಿ ನೀವು ಅವಧಿ ಮತ್ತು ಹೂಡಿಕೆ ಮೊತ್ತವನ್ನು ಆಯ್ಕೆ ಮಾಡಬಹುದು. ದೀರ್ಘಾವಧಿಯಲ್ಲಿ ಸ್ಥಿರವಾದ ಆದಾಯವನ್ನು ಖಚಿತಪಡಿಸಿಕೊಳ್ಳುವಾಗ ಅಪಾಯವನ್ನು ಕಡಿಮೆ ಮಾಡಲು ನೀವು ವಿವಿಧ ಹೂಡಿಕೆ ಸಾಧನಗಳಲ್ಲಿ ನಿಮ್ಮ ಪೋರ್ಟ್ಫೋಲಿಯೊವನ್ನು ವೈವಿಧ್ಯಗೊಳಿಸಬಹುದು. ನೀವು…

Read More

ವಿಜಯನಗರ: ಜಿಲ್ಲೆಯ ಹರಪನಹಳ್ಳಿ ಶಾಸಕಿ ಲತಾ ಮಲ್ಲಿಕಾರ್ಜುನ ಅವರು ಪ್ರವಾಸಕ್ಕೆ ತೆರಳಿದ್ದಂತ ಸಂದರ್ಭದಲ್ಲಿ ಅವರ ಕಚೇರಿ ಬೀಗ ಮುರಿದು ಕಳವು ಮಾಡಲಾಗಿದೆ. ಹರಪನಹಳ್ಳಿಯ ಕಾಶಿ ಸಂಗಮೇಶ್ವರ ಬಡಾವಣೆಯಲ್ಲಿರುವ ಲತಾ ಮಲ್ಲಿಕಾರ್ಜುನ ಅವರ ಕಚೇರಿಯ ಬೀಗ ಮುರಿದು ಕಳ್ಳರು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ. ವಿಜಯನಗರ ಜಿಲ್ಲೆಯ ಹರಪನಹಳ್ಳಿ ಕಾಶಿ ಸಂಗಮೇಶ್ವರ ಬಡಾವಣೆಯಲ್ಲಿ ಈ ಕೃತ್ಯ ನಡೆಸಲಾಗಿದೆ. ರಾತ್ರಿ ಒಂದು ಗಂಟೆಯಿಂದ ಬೆಳಗಿನ ಜಾವ 4 ಗಂಟೆ ನಡುವೆ ಕಳ್ಳತನ ಮಾಡಲಾಗಿದೆ. ಲತಾ ಮಲ್ಲಿಕಾರ್ಜನು ಅವರ ಕಚೇರಿಯಲ್ಲಿದ್ದಂತ 2.5 ಲಕ್ಷ ನಗದು, 10.80 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಆಭರಣಗಳನ್ನು ಕಳವು ಮಾಡಲಾಗಿದೆ. ಶಾಸಕಿ ಲತಾ ಮಲ್ಲಿಕಾರ್ಜುನ ಕಚೇರಿಗೆ ನುಗ್ಗಿದಂತ ನಾಲ್ವರು ಮುಸುಕುಧಾರಿಗಳಿಂದ ನಗ ನಾಣ್ಯ ಕಳವು ಮಾಡಲಾಗಿದೆ. ಈ ಸಂಬಂಧ ಹರಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/another-good-news-for-property-owners-from-the-state-government/ https://kannadanewsnow.com/kannada/life-style-are-you-not-getting-pregnant-then-these-could-also-be-the-reason/

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಸ್ತಿ ಮಾಲೀಕರಿಗೆ ಮತ್ತೊಂದು ಗುಡ್ ನ್ಯೂಸ್ ನೀಡಲಾಗಿದೆ. ಅದೇ ಇನ್ಮುಂದೆ ಬಿ ಖಾತಾ ಆಸ್ತಿಗಳಿಗೂ ಎ ಖಾತಾ ರೀತಿಯಲ್ಲಿ ಅಧಿಕೃತ ಮಾನ್ಯತೆ ನೀಡಲು ಇಂದು ನಡೆದಂತ ಸಿಎಂ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ 17-07-2025 ರಂದು ನಡೆದ ಸಚಿವ ಸಂಪುಟಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳು ಈ ಕೆಳಗಿನಂತಿವೆ. · ರಾಯಚೂರು ಜಿಲ್ಲೆ ತಾಲ್ಲೂಕಿನಲ್ಲಿ ನೂತನ ಜವಳಿ ಪಾರ್ಕನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವ(ಪಿಪಿಪಿ) ಮಾದರಿಯಲ್ಲಿ ಒಟ್ಟು 24.50 ಕೋಟಿಗಳ ಮೊತ್ತದಲ್ಲಿ ಅಭಿವೃದ್ಧಿಪಡಿಸಲು ಸಚಿವ ಸಂಪುಟ ನಿರ್ಣಯ ಕೈಗೊಂಡಿದೆ. · ಕರ್ನಾಟಕ ರಾಜ್ಯದಲ್ಲಿ ಪರಮಾಣು ವಿದ್ಯುತ್ ಸ್ಥಾವರ ಸ್ಥಾಪಿಸಲು ತಾತ್ವಿಕ ಅನುಮೋದನೆ ಹಾಗೂ ಎನ್ ಟಿಪಿಸಿ ಸಂಸ್ಥೆಯು ಕರ್ನಾಟಕದಲ್ಲಿ ಪರಮಾಣು ವಿದ್ಯುತ್ ಸ್ಥಾಪನೆಗೆ ಗುರುತಿಸಿರುವ ಸಂಭಾವ್ಯ ಸ್ಥಳಗಳ್ಲಿ ಪ್ರಾಥಮಿಕ ಅಧ್ಯಯನ ನಡೆಸಲು ಅನುಮತಿ ನೀಡಲು ಸಚಿವ ಸಂಪುಟದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. · ಆಯುಷ್ ಇಲಾಖೆಯ ಆಯುರ್ವೇದ, ಸಿದ್ದ ಮತ್ತು…

Read More

ಧಾರವಾಡ : ಸಸ್ಯಹಾರಿಗಳಾದಂತ ಅವರು ಡೊಮಿನೊಸ್ ನಲ್ಲಿ ತಂದುರಿ ಪನೀರ ಪಿಜ್ಜಾ, ಪನೀರ್ ಟಿಕ್ಕಾ ಸ್ಟಫ್ಡ್‍ಗಾರ್ಲಿಕ್ ಬ್ರೇಡ್, ವೆಜ್‍ಜಿಂಗಿ ಪಾರ್ಸೆಲ್ ಹಾಗೂ ಚೀಸ್‍ಡಿಪ್‍ ಅನ್ನು ಆರ್ಡರ್ ಮಾಡಿದ್ದರು. ಆದರೇ ಮಾಂಸಹಾರ ಕಳುಹಿಸಲಾಗಿತ್ತು. ಇದನ್ನು ನೋಡದೇ ಆ ಕುಟುಂಬಸ್ಥರು ಸೇವಿಸಿಬಿಟ್ಟಿದ್ದರು. ಹೀಗಾಗಿ ಡೊಮಿನೋಸ್ ವಿರುದ್ಧ ಗ್ರಾಹಕರ ನ್ಯಾಯಾಲಯಕ್ಕೆ ದೂರು ನೀಡಿದ್ದರು. ಈ ದೂರು ಆಧರಿಸಿ ದಂಡ, ಪರಿಹಾರಕ್ಕೆ ಆದೇಶಿಸಲಾಗಿದೆ. ಧಾರವಾಡದ ವಿದ್ಯಾಗಿರಿಯ ನಿವಾಸಿ ಹಾಗೂ ವಿದ್ಯಾರ್ಥಿಯಾದ ಪ್ರದ್ಯುಮ್ನ ಇನಾಮದಾರ ಎನ್ನುವವರು ಎದುರುದಾರರ ಜಾಹಿರಾತನ್ನು ನೋಡಿ ಸಸ್ಯಹಾರಿ ಪದಾರ್ಥಗಳಾದ ಇಂಡಿ ತಂದುರಿ ಪನೀರ ಪಿಜ್ಜಾ, ಪನೀರ್ ಟಿಕ್ಕಾ ಸ್ಟಫ್ಡ್‍ಗಾರ್ಲಿಕ್ ಬ್ರೇಡ್, ವೆಜ್‍ಜಿಂಗಿ ಪಾರ್ಸೆಲ್ ಹಾಗೂ ಚೀಸ್‍ಡಿಪ್‍ನ್ನು ರೂ.555 ಪಾವತಿಸಿ ಆರ್ಡರ ಮಾಡಿದ್ದರು. ಅದು ಮನೆಗೆ ತಲುಪಿದ ನಂತರ ದೂರುದಾರರು ಅದನ್ನು ಸೇವಿಸಲು ಪ್ರಾರಂಭಿಸಿದರು. ನಂತರ ಅವರಿಗೆ ಅದು ಸಸ್ಯಹಾರಿ ಆಹಾರ ಅಲ್ಲದೇ ಅದು ಮಾಂಸಹಾರಿ ಪದಾರ್ಥ ಅನ್ನುವುದು ಗೊತ್ತಾಗಿದೆ. ಎದುರುದಾರರು ಕಳುಹಿಸಿದಂತಹ ವೆಜ್‍ಜಿಂಗಿ ಪಾರ್ಸೆಲ್ ಬಾಕ್ಸ್‍ನ ಮೇಲೆ ಹಸಿರು ಸ್ಟೀಕರ್ ಅಂಟಿಸಿದ್ದು ಆದರೆ ಅದರಲ್ಲಿ…

Read More

ಬಳ್ಳಾರಿ : ತೋಟಗಾರಿಕೆ ಇಲಾಖೆಯಿಂದ ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆ ಬೆಳೆಯುವ ರೈತ ಫಲಾನುಭವಿಗಳಿಗೆ 2025-26 ನೇ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಡಿ ಸಹಾಯಧನ ನೀಡಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಯೋಜನೆಗಳು: ಮಹಾತ್ಮಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ: ಹೊಸ ಪ್ರದೇಶ ವಿಸ್ತರಣೆ ಕಾರ್ಯಕ್ರಮದಡಿ (ಬಾಳೆ, ಅಂಜೂರ, ದಾಳಿಂಬೆ, ನುಗ್ಗೆ, ಪೇರಲ, ಪಪ್ಪಾಯ, ತೆಂಗು, ಡ್ರಾಗನ್ ಫ್ರೂಟ್, ನೇರಳೆ, ಸಪೋಟ, ಮಾವು, ಸೀತಾಫಲ್, ಹುಣಸೆ, ಕರಿಬೇವು, ಗುಲಾಬಿ ಹಾಗೂ ಇತರೆ) ಬೆಳೆಗಳಿಗೆ ಮತ್ತು ಕೃಷಿ ಹೊಂಡ, ಬದುಗಳ ನಿರ್ಮಾಣ, ಕೊಳವೆ ಬಾವಿ ಮರುಪೂರಣ ಘಟಕ ಇತ್ಯಾದಿ ಅನುಷ್ಠಾನಗೊಳಿಸಲಾಗುವುದು. ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ: ಹೊಸ ಪ್ರದೇಶ ವಿಸ್ತರಣೆ, ಕೃಷಿಹೊಂಡ (21*21*3ಮೀ), ಈರುಳ್ಳಿ ಶೇಖರಣ ಘಟಕ, ನೆರಳು ಪರದೆ, ಪ್ಲಾಸ್ಟಿಕ್ ಹೊದಿಕೆ, 20 ಹೆಚ್.ಪಿ ಕಡಿಮೆಯುಳ್ಳ ಟ್ರಾಕ್ಟರ್, ಟ್ರಾಕ್ಟರ್ ಚಾಲಿತ ಔಷಧಿ ಸಿಂಪರಣೆ ಉಪಕರಣಗಳು ಮತ್ತು ವಿವಿಧ ಘಟಕಗಳಿಗೆ ಎಲ್ಲಾ ವರ್ಗದ ರೈತರಿಗೆ ಶೇ.50 ರಷ್ಟು ಲಭ್ಯತೆಯ ಮೇರೆಗೆ ಸಹಾಯಧನ ವಿತರಿಸಲಾಗುತ್ತದೆ.…

Read More

ಬೀದರ್: ರಾಜ್ಯದ ಬಿಜೆಪಿಯ ಮಾಜಿ ಸಚಿವ ಪ್ರಭು ಚವ್ಹಾಣ್ ಪುತ್ರನ ವಿರುದ್ಧ ಮದುವೆಯಾಗುವುದಾಗಿ ನಂಬಿಸಿ ವಂಚನೆ ಮಾಡಿದ ಸಂಬಂಧ ರಾಜ್ಯ ಮಹಿಳಾ ಆಯೋಗಕ್ಕೆ ಯುವತಿ ದೂರು ನೀಡಿದ್ದಾರೆ. ಬಿಜೆಪಿ ಮಾಜಿ ಸಚಿವ ಪ್ರಭು ಚವ್ಹಾಣ್ ಪತ್ರ ಪ್ರತೀಕ್ ಚವ್ಹಾಣ್ ಹಾಗೂ ಯುವತಿಯ ಜೊತೆಗೆ 2 ವರ್ಷಗಳ ಹಿಂದೆ ಮದುವೆಗೆ ನಿಶ್ಚಿತಾರ್ಥ ನೆರವೇರಿತ್ತು. ಆ ಬಳಿಕ ಮದುವೆಯಾಗಲು ವಿಳಂಬ ಮಾಡಲಾಗಿತ್ತು. ಎರಡು ಮನೆಯ ಕುಟುಂಬಸ್ಥರು ಒಪ್ಪಿ ಪ್ರತೀಕ್ ಚವ್ಹಾಣ್ ಹಾಗೂ ಯುವತಿಯ ನಿಶ್ಚಿತಾರ್ಥ ನೆರವೇರಿಸಿದ್ದರು. ಈ ಬಳಿಕ ಪ್ರತೀಕ್ ಯುವತಿಯೊಂದಿಗೆ ದೈಹಿಕ ಸಂಪರ್ಕವನ್ನು ಬೆಳೆಸಿದ್ದರು ಎಂಬುದಾಗಿ ದೂರಿನಲ್ಲಿ ಆರೋಪಿಸಲಾಗಿದೆ. ನಿಶ್ಚಿತಾರ್ಥದ ಬಳಿಕ ದೈಹಿಕ ಸಂಪರ್ಕವನ್ನೂ ಬೆಳಸಿದಂತ ಮಾಜಿ ಸಚಿವ ಪ್ರಭು ಚವ್ಹಾಣ್ ಅವರ ಪುತ್ರ ಪ್ರತೀಕ್ ಚೌವ್ಹಾಣ್ ಮದುವೆಯಾಗಲು ವಿಳಂಬ ಮಾಡುತ್ತಿದ್ದಾರೆ. ಈ ಮೂಲಕ ತಮಗೆ ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದಾರೆ. ಈ ಬಗ್ಗೆ ಪೊಲೀಸರಿಗೆ ದೂರು ಸ್ವೀಕರಿಸದೇ ನಿರ್ಲಕ್ಷ್ಯ ವಹಿಸಿದ್ದಾರೆ ಎಂಬುದಾಗಿ ದೂರಿನಲ್ಲಿ ಸಂತ್ರಸ್ತೆ ಉಲ್ಲೇಖಿಸಿದ್ದಾರೆ. ತಾನು ಬೀದರ್ ಜಿಲ್ಲೆಯ ಹೊಕ್ರಾಣೆ…

Read More