Author: kannadanewsnow09

ಶಿವಮೊಗ್ಗ: ಲೋಕಸಭಾ ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನಲೆಯಲ್ಲಿ ಮಾ. 28 ರ ರಾತ್ರಿ ಸಾಗರ ಮಾರ್ಗವಾಗಿ ಬರುತ್ತಿದ್ದ ಟಾಟಾ ಏಸ್ ಗೂಡ್ಸ್ ವಾಹನದಲ್ಲಿ ಸಾಗಿಸುತ್ತಿದ್ದ ಅಂದಾಜು ರೂ. 2,23,046 ಮೌಲ್ಯದ ಪರವಾನಗಿ ಇಲ್ಲದ ಒಟ್ಟು 51.84 ಲೀಟರ್ ಅಕ್ರಮ ಮದ್ಯವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ. ಅಬಕಾರಿ ಉಪ ಆಯುಕ್ತರು, ಶಿವಮೊಗ್ಗ ಜಿಲ್ಲೆ, ಶಿವಮೊಗ್ಗ ಹಾಗೂ ಅಬಕಾರಿ ಉಪ ಅಧೀಕ್ಷಕರು, ಸಾಗರ ಉಪ ವಿಭಾಗರವರ ಮಾರ್ಗದರ್ಶನದಲ್ಲಿ ದಿನಾಂಕ 28.03.2024 ರಂದು ರಾತ್ರಿ 09.45 ಕ್ಕೆ ಸಾಗರ ತಾಲ್ಲೂಕು ಕಾನಲೆ ಕ್ರಾಸ್ ಬಳಿ ರಸ್ತೆಗಾವಲು ನಡೆಸುತ್ತಿದ್ದಾಗ ಟಾಟಾ ಏಸ್ ಗೂಡ್ಸ್ ನಾಲ್ಕು ಚಕ್ರದ ವಾಹನವು ತಾಳಗುಪ್ಪ ಕಡೆಯಿಂದ ಸಾಗರ ಮಾರ್ಗವಾಗಿ ಬರುತ್ತಿದ್ದು ತಪಾಸಣೆ ನಡೆಸುವ ಸಲುವಾಗಿ ನಿಲ್ಲಿಸಲು ಸೂಚಿಸಿದಾಗ ವಾಹನವನ್ನು ನಿಲ್ಲಿಸದೇ ತಿರುಗಿಸುವ ಬರದಲ್ಲಿ ವಾಹನವು ಬಂದ್ ಆಗಿದ್ದು, ತಕ್ಷಣ ಚಾಲನೆ ಮಾಡುತ್ತಿದ್ದ ಓರ್ವ ವ್ಯಕ್ತಿಯು ವಾಹನದಿಂದ ಇಳಿದು ಓಡಲಾರಂಭಿಸಿದನು. ಆತನ್ನನ್ನು ಹಿಡಿಯಲು ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಪ್ರಯತ್ನಿಸಲಾಗಿ ಸಿಗದೇ ಕತ್ತಲೆಯಲ್ಲಿ ಓಡಿ…

Read More

ನವದೆಹಲಿ: ಜೈಲಿನಲ್ಲಿದ್ದ ಭೂಗತ ಪಾತಕಿ ಮುಕ್ತಾರ್ ಅನ್ಸಾರಿ ನಿಧನರಾಗಿರೋದಾಗಿ ತಿಳಿದು ಬಂದಿದೆ. ಉತ್ತರ ಪ್ರದೇಶದ ಸರ್ಕಾರಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಮುಖ್ತಾರ್ ಅನ್ಸಾರಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ದರೋಡೆಕೋರ- ರಾಜಕಾರಣಿ ಮುಖ್ತಾರ್ ಅನ್ಸಾರಿ ಗುರುವಾರ ರಾತ್ರಿ ಹೃದಯಾಘಾತದಿಂದ ಬಂದಾ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆದರೆ ಆತನಿಗೆ ಚಿಕಿತ್ಸೆ ಸ್ಪಂದಿಸಿಲ್ಲ ಎನ್ನಲಾಗಿದೆ. ಇತ್ತೀಚೆಗೆ ಜೈಲಿನಲ್ಲಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜೈಲಿನಲ್ಲಿ ಆಹಾರದಲ್ಲಿ ಬೆರೆಸಿದ ವಸ್ತುವಿನಿಂದ ಮುಕ್ತಾರ್ ಅನ್ಸಾರಿ ವಿಷ ಸೇವಿಸಿದ್ದಾರೆ ಎಂದು ಅವರ ಸಹೋದರ ಅಫ್ಜಲ್ ಅನ್ಸಾರಿ ಹೇಳಿದ್ದಾರೆ. ವರದಿಗಳ ಪ್ರಕಾರ, ಉತ್ತರ ಪ್ರದೇಶದ ಹಲವು ಜಿಲ್ಲೆಗಳಲ್ಲಿ ಅಧಿಕಾರಿಗಳು 144 ವಿಧಿಸಿದ್ದಾರೆ.

Read More

ಮಂಡ್ಯ: ಕರ್ತವ್ಯದ ವೇಳೆ ಮೃತಪಟ್ಟಿದ್ದ ಗ್ರಾಮ ಪಂಚಾಯಿತಿ ನೌಕರನ ಕುಟುಂಬಕ್ಕೆ ಪರಿಹಾರ ನೀಡಲು ವಿಳಂಬ ಮಾಡಿದ ಕಾರಣ, ನ್ಯಾಯಾಲಯದ ಆದೇಶದಂತೆ ಮದ್ದೂರು ತಾಲೂಕಿನ ಕೊಪ್ಪ ಹೋಬಳಿಯ ಮರಳಿಗ ಗ್ರಾಪಂ ಕಚೇರಿಯ ಕಂಪ್ಯೂಟರ್, ಪೀಠೋಪಕರಣಗಳನ್ನು ಗುರುವಾರ ಜಪ್ತಿ ಮಾಡಲಾಯಿತು. ಜ. 20 2024 ರಂದು ಹಿರಿಯ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯವು ಮರಳಿಗ ಗ್ರಾಮ ಪಂಚಾಯಿತಿ ಕಚೇರಿಯ ಚರಾಸ್ತಿಗಳನ್ನು ಜಪ್ತಿ ಮಾಡಲು ಆದೇಶ ನೀಡಿದ ಮೇರೆಗೆ ನ್ಯಾಯಾಂಗ ಇಲಾಖೆಯ ಸಿಬ್ಬಂದಿ ಕಚೇರಿಯ ಕಂಪ್ಯೂಟರ್‌, ಪೀಠೋಪಕರಣಗಳನ್ನು ವಶಕ್ಕೆ ಪಡೆದರು. ಕಚೇರಿಗೆ ಎಂದಿನಂತೆ ಬಂದಿದ್ದ ಸಿಬ್ಬಂದಿ ಹಾಗೂ ಸಾರ್ವಜನಿಕರು ಜಪ್ತಿ ವಿಷಯ ಕೇಳಿದ ತಕ್ಷಣ ಕಂಗಾಲಾಗಿ, ಕಚೇರಿಯ ಹೊರ ನಡೆದರು. *ಏನಿದು ಪ್ರಕರಣ:* 2009 ರಲ್ಲಿ ಮರಳಿಗ ಗ್ರಾಮ ಪಂಚಾಯಿತಿ ಕಛೇರಿಯಲ್ಲಿ ಹೊರ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿದ್ದ ರವಿ ಎಂಬುವವರು ಬೀದಿ ದೀಪಗಳ ನಿರ್ವಹಣೆ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿದ್ದರು. ಈ ವಿಚಾರವಾಗಿ ಗ್ರಾಮ ಪಂಚಾಯಿತಿಯವರು ಪರಿಹಾರ ನೀಡುವಂತೆ ಆತನ ಪತ್ನಿ…

Read More

ನಮ್ಮಲ್ಲಿ ಪ್ರತಿಯೊಬ್ಬರೂ ಕೂಡ ಹಣವನ್ನು ಸಂಪಾದನೆ ಮಾಡಬೇಕು ನಮ್ಮ ಆಸೆಗಳನ್ನು ಈಡೇರಿಸಿಕೊಳ್ಳಬೇಕು ಎಂಬ ಕನಸನ್ನು ಇಟ್ಟು ಕೊಂಡಿರುತ್ತಾರೆ. ಆದರೆ ಕೆಲವೊಂದಷ್ಟು ಜನರಿಗೆ ಇದು ಸಾಧ್ಯವಾಗುವುದಿಲ್ಲ ಎಷ್ಟೇ ಕಷ್ಟಪಟ್ಟು ಸಂಪಾದನೆ ಮಾಡಿದರು ಒಂದಲ ಒಂದು ರೀತಿಯಾಗಿ ಹಣ ಖರ್ಚಾಗುತ್ತಿರುತ್ತದೆ ಹಾಗೂ ಇನ್ನೂ ಕೆಲವೊಂದಷ್ಟು ಜನರು ಎಷ್ಟೇ ಪ್ರಯತ್ನ ಪಟ್ಟರು ಅತಿ ಹೆಚ್ಚಿನ ಹಣವನ್ನು ಸಂಪಾದನೆ ಮಾಡಲು ಸಾಧ್ಯವಾಗುವುದಿಲ್ಲ. ಹಾಗಾಗಿ ಇಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರು ಈ ಒಂದು ಪರಿಹಾರವನ್ನು ಮಾಡಿಕೊಳ್ಳುವು ದರಿಂದ ಈ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು ಅದೇನೆಂದು ನೋಡುವುದಾದರೆ 2 ರಿಂದ 4 ಲವಂಗವನ್ನು ಮಲ್ಲಿಗೆ ಎಣ್ಣೆಯಲ್ಲಿ ಹಾಕಿ ಆಂಜನೇಯನ ಮುಂದೆ ದೀಪವನ್ನು ಹಚ್ಚುವುದರಿಂದ ಅಲ್ಲಿ ನಿಮ್ಮ ಕೋರಿಕೆಗಳನ್ನು ಹೇಳಿಕೊಳ್ಳುವುದರ ಮೂಲಕ ದೀಪ ಹಚ್ಚಬೇಕು ಈ ರೀತಿ ಮಾಡುವುದರಿಂದ ನೀವು ಅಂತಹ ಒಂದು ಸಂಕಷ್ಟದಿಂದ ಪಾರಾಗಬಹುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್…

Read More

ಮಂಡ್ಯ: ಮಾಜಿ ಮುಖ್ಯಮಂಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭಾವೀ ಸಂಸದರು ಎಂದ ಕರೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು; ದೇಶದ ಭವಿಷ್ಯ ರೂಪಿಸುವ ಮಹಾಚುನಾವಣೆಗೆ ನಾವೆಲ್ಲರೂ ಸಾಕ್ಷಿಯಾಗುತ್ತಿದ್ದೇವೆ ಎಂದು ಪ್ರತಿಪಾದಿಸಿದರು. ಮಂಡ್ಯದಲ್ಲಿ ನಡೆದ ಜೆಡಿಎಸ್-ಬಿಜೆಪಿ ಮುಖಂಡರು, ಕಾರ್ಯಕರ್ತರ ಸಮನ್ವಯ ಸಮಿತಿ ಸಭೆಯಲ್ಲಿ ಪಾಲ್ಗೊಂಡು ಭಾಷಣ ಮಾಡಿದ ಅವರು; ರಾಜ್ಯದಲ್ಲಿ ಯಾರೂ ಭಾವಿಸಿರಲಿಲ್ಲ. ಒಂಭತ್ತು ತಿಂಗಳಿಂದ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಅಧಿಕಾರದ ಅಮಲಿನಲ್ಲಿ ತೇಲುತ್ತಿದೆ. ಈಗ ರಾಜ್ಯದಲ್ಲಿ ಭೀಕರ ಬರಗಾಲವಿದೆ. 800ಕ್ಕೂ ಹೆಚ್ಚು ರೈತರ ಆತ್ಮಹತ್ಯೆಗಳು ಆಗಿವೆ. ಜನ-ಜಾನುವಾರುಗಳು ಕುಡಿಯುವ ನೀರು, ಮೇವಿಲ್ಲದೆ ಪರಿತಪಿಸುತ್ತಿದೆ. ಕಷ್ಟದಲ್ಲಿರುವ ಜನರ ಬಗ್ಗೆ ಕನಿಕರ ಇಲ್ಲದ ಸಿಎಂ ಇದ್ದಾರೆ. ಅವರು ಒಂದು ವರ್ಗದ ಸಿಎಂ ಅಲ್ಲ, ಆರೂವರೆ ಕೋಟಿ ಜನರ ಸಿಎಂ ಎಂದು ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸಿದರು. ಜಾತಿ ಜಾತಿಗಳ ನಡುವೆ ಸಂಘರ್ಷ ಸೃಷ್ಟಿಸುತ್ತಿದೆ ಕಾಂಗ್ರೆಸ್. ಬಿಜೆಪಿ-ಜೆಡಿಎಸ್ ಒಂದಾಗ್ತಿದ್ದಂತೆ ಕಾಂಗ್ರೆಸ್ಗೆ ನಿದ್ರೆ ಬರ್ತಿಲ್ಲ. ಕಾಂಗ್ರೆಸ್ ಕಾರ್ಯಕರ್ತರು ತತ್ತರಿಸಿ ಹೋಗಿದ್ದಾರೆ. ಭಯದಿಂದ ಮಂತ್ರಿ ಮಂಡಲದ ಸದಸ್ಯರು ಚುನಾವಣೆ…

Read More

ಬೆಂಗಳೂರು: ಬೆಂಗಳೂರಿನಲ್ಲಿ ಜನರ ಬಳಿ ಹೋಗಿ ಮತ ಯಾಚಿಸುವ ಧೈರ್ಯ ಬಿಜೆಪಿಗಿದೆ. ಆದರೆ ಕಾಂಗ್ರೆಸ್‌ಗೆ ಅಂತಹ ಧೈರ್ಯವಿಲ್ಲ. ಅಲ್ಲದೆ ಜನರು ಕಾಂಗ್ರೆಸ್‌ಗೆ ಬಾಯ್‌ ಬಾಯ್‌ ಹೇಳಲು ತೀರ್ಮಾನಿಸಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರೊಂದಿಗೆ ಆರ್‌.ಅಶೋಕ ಅವರು ಬಿಜೆಪಿ-ಜೆಡಿಎಸ್‌ ಸಮನ್ವಯ ಸಭೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಬೆಂಗಳೂರಿನಲ್ಲಿ ಜನರ ಬಳಿ ಹೋಗಿ ಮತ ಯಾಚಿಸುವ ಧೈರ್ಯ ಬಿಜೆಪಿಗಿದೆ. ಕಳೆದ ವಿಧಾನಸಭಾ ಚುನಾವಣೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಸಿಕ್ಕಿದೆ. ದಕ್ಷಿಣ ಭಾರತದಲ್ಲೇ ಮೊದಲ ಬಾರಿಗೆ ಮೆಟ್ರೊ ಯೋಜನೆಯನ್ನು ಅಟಲ್‌ ಬಿಹಾರಿ ವಾಜಪೇಯಿ ನೀಡಿದರು. ಹಾಗೆಯೇ ವಿಮಾನ ನಿಲ್ದಾಣವನ್ನೂ ನೀಡಿದ್ದಾರೆ. ಉಪನಗರ ರೈಲು ಯೋಜನೆ, ಕಾವೇರಿ ಕುಡಿಯುವ ನೀರಿನ ಯೋಜನೆಯನ್ನು ಬಿಜೆಪಿ ನೀಡಿದೆ. ಈ ಎಲ್ಲ ಕಾರಣಗಳಿಂದಾಗಿ ಜನರ ಬಳಿ ಹೋಗಿ ಮತ ಯಾಚಿಸುವ ಹಕ್ಕು ಬಿಜೆಪಿಗಿದೆ. ಆದರೆ ಕಾಂಗ್ರೆಸ್‌ ಸರ್ಕಾರ ಕಳೆದ ಹತ್ತು ತಿಂಗಳಲ್ಲಿ…

Read More

ನವದೆಹಲಿ: ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಮೊದಲ ಪ್ರಗತಿಯಲ್ಲಿ, ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಮೂರು ರಾಜ್ಯಗಳ ಅನೇಕ ಸ್ಥಳಗಳಲ್ಲಿ ದಾಳಿ ನಡೆಸಿದ ನಂತರ ಪ್ರಮುಖ ಸಂಚುಕೋರನನ್ನು ಬಂಧಿಸಿದೆ. ಮುಜಮ್ಮಿಲ್ ಶರೀಫ್ ನನ್ನು ಸಹ ಸಂಚುಕೋರನಾಗಿ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಎನ್ ಐಎ ಗುರುವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಇತರ ಇಬ್ಬರು ಆರೋಪಿಗಳಾದ ಮುಸಾವಿರ್ ಶಜೀಬ್ ಹುಸೇನ್ ಮತ್ತು ಅಬ್ದುಲ್ ಮತೀನ್ ತಾಹಾ ಇನ್ನೂ ತಲೆಮರೆಸಿಕೊಂಡಿದ್ದಾರೆ ಎಂದು ತನಿಖಾ ಸಂಸ್ಥೆ ತಿಳಿಸಿದೆ. ಮಾರ್ಚ್ 1 ರಂದು ರಾಮೇಶ್ವರಂ ಕೆಫೆಯಲ್ಲಿ ಐಇಡಿ ಸ್ಫೋಟದ ಇತರ ಇಬ್ಬರು ಆರೋಪಿಗಳಿಗೆ ಶರೀಫ್ ಲಾಜಿಸ್ಟಿಕ್ ಬೆಂಬಲವನ್ನು ನೀಡಿದ್ದಾನೆ ಎಂದು ತಿಳಿದುಬಂದಿದೆ. https://twitter.com/mahendermanral/status/1773347821405499611?ref_src=twsrc%5Etfw%7Ctwcamp%5Etweetembed%7Ctwterm%5E1773347821405499611%7Ctwgr%5E9c8f9738f005d0ffad9443068a3569ebddb865bc%7Ctwcon%5Es1_&ref_url=https%3A%2F%2Findianexpress.com%2Farticle%2Findia%2Fnia-bengaluru-rameshwaram-cafe-arrest-9238628%2F

Read More

ಮಂಡ್ಯ: ರಾಜ್ಯದ ಪ್ರತಿಷ್ಠಿತ ಕ್ಷೇತ್ರ ಮಂಡ್ಯದ ಜೆಡಿಎಸ್-ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರ ಹೆಸರು ನಿಕ್ಕಿಯಾದ ಮೇಲೆ ಇಂದಿಲ್ಲಿ ನಡೆದ ಎರಡೂ ಪಕ್ಷಗಳ ಕಾರ್ಯಕರ್ತರು, ಮುಖಂಡರ ಸಮನ್ವಯ ಸಮಿತಿ ಸಭೆ ಅತ್ಯಂತ ಯಶಸ್ವಿಯಾಗಿ ನಡೆಯಿತು. ಕುಮಾರಸ್ವಾಮಿ ಅವರು ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಸಮ್ಮುಖದಲ್ಲಿ ನಡೆದ ಈ ಸಭೆಯಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಪ್ರಧಾನಮಂತ್ರಿ ಮಾಡುವ ನಿಟ್ಟಿನಲ್ಲಿ ಎರಡೂ ಪಕ್ಷಗಳ ಕಾರ್ಯಕರ್ತರು ಹೆಚ್‌ಡಿಕೆ ಅವರನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಲು ಶಪಥ ಮಾಡಿದರು. ಸುಮಲತಾ ನನಗೆ ಆಶೀರ್ವಾದ ಮಾಡುವ ವಿಶ್ವಾಸವಿದೆ ಸುಮಲತಾ ಅವರ ಬಗ್ಗೆ ಮಾತನಾಡಿದ ಕುಮಾರಸ್ವಾಮಿ ಅವರು; ನಾನು ಮತ್ತು ಅಂಬರೀಶ್ ಸ್ನೇಹಿತರು. ಅದೂ ಎಲ್ಲರಿಗೂ ತಿಳಿದಿರುವ ವಿಚಾರವೇ. ಸುಮಲತಾ ಅವರು ನನಗೆ ಅಂಬರೀಶ್‌ ಅವರೊಂದಿಗೆ ಊಟ ಬಡಿಸಿದ್ದಾರೆ. ನಾವು ಶತ್ರುಗಳಲ್ಲ. ಅವರು ನನಗೆ ಆಶೀರ್ವಾದ ಮಾಡುವ ವಿಶ್ವಾಸವಿದೆ. ಅವರು ನಿರ್ಧಾರ ಮಾಡಿ ಘೋಷಣೆ ಮಾಡುತ್ತಾರೆ ಎಂದರಲ್ಲದೆ; ಮತ್ತೊಬ್ಬ ಡಾ.ಸಿ.ಎನ್.ಮಂಜುನಾಥ್ ಅವರ ಬಗ್ಗೆಯೂ ಇದೇ…

Read More

ಮಂಡ್ಯ: ರಾಜ್ಯದ ಪ್ರತಿಷ್ಠಿತ ಕ್ಷೇತ್ರ ಮಂಡ್ಯದ ಜೆಡಿಎಸ್-ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರ ಹೆಸರು ನಿಕ್ಕಿಯಾದ ಮೇಲೆ ಇಂದಿಲ್ಲಿ ನಡೆದ ಎರಡೂ ಪಕ್ಷಗಳ ಕಾರ್ಯಕರ್ತರು, ಮುಖಂಡರ ಸಮನ್ವಯ ಸಮಿತಿ ಸಭೆ ಅತ್ಯಂತ ಯಶಸ್ವಿಯಾಗಿ ನಡೆಯಿತು. ಕುಮಾರಸ್ವಾಮಿ ಅವರು ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಸಮ್ಮುಖದಲ್ಲಿ ನಡೆದ ಈ ಸಭೆಯಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಪ್ರಧಾನಮಂತ್ರಿ ಮಾಡುವ ನಿಟ್ಟಿನಲ್ಲಿ ಎರಡೂ ಪಕ್ಷಗಳ ಕಾರ್ಯಕರ್ತರು ಹೆಚ್‌ಡಿಕೆ ಅವರನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಲು ಶಪಥ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿಗಳು; ಜೆಡಿಎಸ್‌ ಮತ್ತು ಬಿಜೆಪಿ ನಡುವೆ ಆಗಿರುವ ಈ ಮೈತ್ರಿಯೂ ರಾಜ್ಯದಲ್ಲಿ ಹೊಸ ಮನ್ವಂತರಕ್ಕೆ ನಾಂದಿ ಹಾಡಲಿದೆ. ನಾನು ಮಂಡ್ಯ ಲೋಕಸಭೆ ಅಭ್ಯರ್ಥಿಯಾಗಿ ಏಪ್ರಿಲ್‌ 4ರಂದು ನಾಮಪತ್ರ ಸಲ್ಲಿಕೆ ಮಾಡುತ್ತೇನೆ ಎಂದು ಪ್ರಕಟಿಸಿದರು. ಬಿರಿಯಾನಿ ತಿಂದು ಪಾದಯಾತ್ರೆ ಮಾಡಿದರೆ ಮೇಕೆದಾಟು ಆಗುತ್ತಾ? ಮೇಕೆದಾಟುಗಾಗಿ ಪಾದಯಾತ್ರೆ ಮಾಡಿದರು ಕಾಂಗ್ರೆಸ್‌ ನವರು. ಇವತ್ತು ಏನಾಗಿದೆ? ಮೇಕೆದಾಟು ಕಟ್ಟಲು ಅನುಮತಿ…

Read More

ಬೆಂಗಳೂರು: ನಗರದಲ್ಲಿ ಲೋಕಸಭಾ ಚುನಾವಣೆಯ ವೇಳೆಯಲ್ಲಿ ಚುನಾವಣಾಧಿಕಾರಿಗಳು ಇಂದು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಇಂದು ಒಂದೇ ದಿನ ಬರೋಬ್ಬರಿ 79.54 ಲಕ್ಷ ಹಣ, ವಸ್ತು, ಮದ್ಯ ಸೇರಿದಂತೆ ವಿವಿಧ ಉಡುಗೋರೆಗಳನ್ನು ಜಪ್ತಿ ಮಾಡಿದ್ದಾರೆ. ಈ ಕುರಿತಂತೆ ಬಿಬಿಎಂಪಿಯ ಚುನಾವಣಾ ವಿಭಾಗ ವಿಶೇಷ ಕಮೀಷನ್ ಮಾಹಿತಿ ನೀಡಿದ್ದು, ಇಂದು ದಾಖಲೆಯಿಲ್ಲದೇ ಸಾಗಿಸುತ್ತಿದ್ದಂತ 19,00,000 ಹಣವನ್ನು ಸೀಜ್ ಮಾಡಲಾಗಿದೆ. 120.877 ಲೀಟರ್ ಮದ್ಯವನ್ನು ವಶಕ್ಕೆ ಪಡೆಯಲಾಗಿದೆ ಎಂದಿದೆ. ಜಪ್ತಿಯಾದಂತ 120.877 ಲೀಟರ್ ಮದ್ಯದ ಬೆಲೆ 1,13,772 ಆಗಿದೆ. ಇದಲ್ಲದೇ 13.79 ಕೆಡಿ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಮೌಲ್ಯ ರೂ.18,42,800 ಆಗಿರುತ್ತದೆ ಎಂದು ತಿಳಿಸಿದೆ. ಇನ್ನೂ ಗಿಫ್ಟ್, ಉಡುಗೋರೆ ರೂಪದಲ್ಲಿ ಸಂಗ್ರಹಿಸಿದ್ದಂತ 7,90,000 ವಸ್ತುಗಳನ್ನು ಸೀಜ್ ಮಾಡಲಾಗಿದೆ. ಇಂದು ಒಟ್ಟಾರೆ ರೂ.79,54,572 ಮೌಲ್ಯದ ಹಣ, ಮದ್ಯ, ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಅಲ್ಲದೇ ಈ ಸಂಬಂಧ 51 ಎಫ್ಐಆರ್ ದಾಖಲಿಸಿರೋದಾಗಿ ಹೇಳಿದೆ. https://kannadanewsnow.com/kannada/jee-main-2024-jee-main-april-session-exam-date-updated-heres-the-details/ https://kannadanewsnow.com/kannada/karnataka-is-in-a-very-unfortunate-situation-bjp-state-vice-president-malavika-avinash/

Read More