Author: kannadanewsnow09

ಬೆಂಗಳೂರು: ನಗರದಲ್ಲಿ ರಾತ್ರಿ ವೇಳೆಯಲ್ಲಿ ನಡೆಯುತ್ತಿರುವಂತ ಅಪರಾಧ ತಡೆಗಾಗಿ ಮಹತ್ವದ ಕ್ರಮ ವಹಿಸಲಾಗಿದೆ. ಇದರ ಭಾಗವಾಗಿ ಎಲ್ಲಾ ಹಂತದ ಪೊಲೀಸರಿಗೆ ರಾತ್ರಿ ಗಸ್ತು ಕಡ್ಡಾಯಗೊಳಿಸಲಾಗಿದೆ. ಜೊತೆಗೆ ನಾಕಾಬಂದಿ ನಡೆಸುವಂತೆಯೂ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ ಬಿ ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವಂತ ಅವರು, ನಗರದಲ್ಲಿ ರಾತ್ರಿ ವೇಳೆ ಅಪರಾಧಗಳನ್ನು ನಿಯಂತ್ರಿಸುವ ಸಲುವಾಗಿ ಎಲ್ಲಾ ವಿಭಾಗಗಳ ವ್ಯಾಪ್ತಿಯಲ್ಲಿ ಪರಿಣಾಮಕಾರಿಯಾಗಿ ನಾಕಾಬಂದಿ ಹಾಕುವುದಾಗಿ ತಿಳಿಸಿದರು. ನಗರದಲ್ಲಿ ಪೊಲೀಸರ ರಾತ್ರಿ ಗಸ್ತು ವ್ಯವಸ್ಥೆಯನ್ನು ಹೆಚ್ಚು ಪರಿಣಾಮಕಾರಿಯಾಗಿಸುವ ನಿಟ್ಟಿನಲ್ಲಿ ಅಪರಾಧ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಒಂದು ಸುತ್ತಿನ ಸಭೆ ಮಾಡಿ ಚರ್ಚಿಸಲಾಗಿದೆ ಎಂದರು. ಬೆಂಗಳೂರಲ್ಲಿ ರಾತ್ರಿ ಗಸ್ತು, ಇ-ಬೀಟ್ ವ್ಯವಸ್ಥೆಯನ್ನು ಸುಧಾರಣೆಗೆ ತರುವ ನಿಟ್ಟಿನಲ್ಲಿ ಸಿಬ್ಬಂದಿಗೆ ವೀಡಿಯೋ ಕಾನ್ಫೆರೆನ್ಸ್ ಮುಖಾಂತರ ತರಬೇತಿ ನೀಡಲಾಗುವುದು ಎಂದು ಹೇಳಿದರು. https://kannadanewsnow.com/kannada/bengaluru-man-stabbed-to-death-by-mobile-thieves-in-majeschik/ https://kannadanewsnow.com/kannada/big-news-these-9-medicines-failed-in-state-lab-tests-minister-dinesh-gundu-rao-writes-to-centre-seeking-ban/

Read More

ಬೆಂಗಳೂರು: 66/11 kV ಬ್ಯಾಡರಹಳ್ಳಿ, 66/11 ಕೆವಿ ಶ್ರೀಗಂಧಕಾವಲು ಉಪಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 23.02.2025ರ ಭಾನುವಾರದ ಇಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 04:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಇಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ (Power Cut) ಬ್ಯಾಡರಹಳ್ಳಿ, ಅಂಜಾನಗರ, ಬಿಇಎಲ್ ಲೇಔಟ್ 2ನೇ ಹಂತ, ಗಿಡ್ಡದಕೋನೇನಹಳ್ಳಿ, ಮುದ್ದಿನಪಾಳ್ಯ, ಬಿಡಿಏ 8ನೇ, 9ನೇ ಬ್ಲಾಕ್, ರೈಲ್ವೆ ಲೇಔಟ್, ಉಪಕಾರ ಲೇಔಟ್, ಬಾಲಾಜಿ ಲೇಔಟ್, ಭವಾನಿಲೇಔಟ್, ಗೊಲ್ಲರಹಟ್ಟಿ, ರತ್ನನಗರ, ಮಾರ್ಡನ್ ಲೇಔಟ್, ಡಿ ಗ್ರೂಪ್ ಲೇಔಟ್, ಹೇರೋಹಳ್ಳಿ, ತುಂಗಾನಗರ, ಕೇಪೇಗೌಡನಗರ, ಪೋಲಿಸ್ ಕ್ವಾಟ್ರಸ್, ಬೈರವೇಶ್ವರನಗರ ಇಂಡಸ್ಟ್ರೀಯಲ್ ಏಸ್ಟೇಟ್, ಹೊಸಹಳ್ಳಿ, ಚಿಕ್ಕ ಗೊಲ್ಲರಹಟ್ಟಿ, ಕಲ್ಲಹಳ್ಳಿ, ಹೊಸಹಳ್ಳಿ, ಬಿ.ಎಂ.ಟಿಸಿ. ಡಿಪೋ, ಅನಿಕೇತನನಗರ, ಪಂಮುಖಿ ಲೇಔಟ್, ನಡೇಕೇರಪ್ಪ ಇಂಡಸ್ಟ್ರೀಯಲ್ ಎಸ್ಟೇಟ್, ಮಹದೇಶ್ವರನಗರ, ಮಾರುತಿನಗರ, ನಾಗರಹೊಳೆನಗರ, ಮುನೇಶ್ವರ ನಗರ, ಸಂಜೀವ್ ನಗರ, ಅನ್ನಪೂರ್ಣೇಶ್ವರು ನಗರ, ಹೆಲ್ತ್ ಲೇಔಟ್, ಸುಂಕದಕಟ್ಟೆ ಇಂಡಸ್ಟ್ರೀಯಲ್ ಏರಿಯಾ ಕರೆಂಟ್…

Read More

ಬೆಂಗಳೂರು: 2024-25ನೇ ಸಾಲಿನ ಜಿಲ್ಲಾಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ಆಯೋಜಿಸಲು ದಿನಾಂಕ ಘೋಷಣೆ ಮಾಡಲಾಗಿದೆ. ಈ ಬಗ್ಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, 2024-25ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಉಲ್ಲೇಖ (1)ರ ಸರ್ಕಾರಿ ಆದೇಶದಲ್ಲಿ 2023-24 ಹಾಗೂ 2024-25ನೇ ಸಾಲಿನ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಸರ್ಕಾರದಿಂದ ಬಿಡುಗಡೆಯಾದ ರೂ.200.00 ಲಕ್ಷಗಳನ್ನು ರಾಜ್ಯಾಧ್ಯಕ್ಷರು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಈಗಾಗಲೇ ಬಿಡುಗಡೆ ಮಾಡಲಾಗಿರುತ್ತದೆ’ ಹಾಗೊ ದಿನಾಂಕ 7-08-2025 ರಿಂದ 9-08-2025 ರವರೆಗೂ 2023-24 ಹಾಗೂ 2024- 25 ನೇ ಸಾಲಿನ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟ ಬೆಂಗಳೂರಿನಲ್ಲಿ ಜರುಗಿರುತ್ತದೆ ಎಂದಿದ್ದಾರೆ. ಈ ಹಿನ್ನೆಲೆಯಲ್ಲಿ ದಿನಾಂಕ: 03-02-2025ರಂದು ಮಾನ್ಯ ಆಯುಕ್ತರ ಅಧ್ಯಕ್ಷತೆಯಲ್ಲಿ 2024-25ನೇ ಸಾಲಿನ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ಜಿಲ್ಲಾ ಮಟ್ಟದಲ್ಲಿ ಆಯೋಜಿಸುವ ಸಂಬಂಧ ರಾಜ್ಯಾಧ್ಯಕ್ಷರು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಹಾಗೂ ಸಂಘದ ಪದಾಧಿಕಾರಿಗಳೊಂದಿಗೆ ಸಭೆಯನ್ನು ನಡೆಸಲಾಗಿದ್ದು ಜಿಲ್ಲಾ ಮಟ್ಟದಲ್ಲಿ…

Read More

ಬೆಂಗಳೂರು: ರಾಜ್ಯದಲ್ಲಿ ದ್ವಿತೀಯ ಪಿಯುಸಿ, ಎಸ್ ಎಸ್ ಎಲ್ ಸಿ ಪರೀಕ್ಷಾ ಅಕ್ರಮ ನಡೆಸಿದ್ರೇ ಕಾನೂನು ಕ್ರಮ ಕ್ರಮ ಕೈಗೊಳ್ಳುವುದಾಗಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಎಚ್ಚರಿಕೆ ನೀಡಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ್‌ 1ರಿಂದ, ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್‌ 21ರಿಂದ ಆರಂಭವಾಗಲಿದ್ದು, ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮಗಳಿಗೆ ಉತ್ತೇಜನ ನೀಡುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ. ರಾಜ್ಯದ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಈ ಹಿಂದೆ ಪರೀಕ್ಷಾ ಅಕ್ರಮಗಳಲ್ಲಿ ತೊಡಗಿಸಿಕೊಂಡಿದ್ದ ವ್ಯಕ್ತಿಗಳನ್ನು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ಪಡೆದುಕೊಳ್ಳುವುದು ಅಥವಾ ಶಂಕಿತ ವ್ಯಕ್ತಿಗಳ ಮೇಲೆ ವಿಶೇಷ ನಿಗಾವಹಿಸಲಾಗಿದೆ. ಪರೀಕ್ಷಾ ಕೇಂದ್ರದ 200ಮೀ ಸುತ್ತಲು ಜೆರಾಕ್ಸ್ ಕೇಂದ್ರಗಳನ್ನು ಪರೀಕ್ಷೆಯ ಅವಧಿಯಲ್ಲಿ ಬಂದ್ ಮಾಡುವುದು. ಸೈಬರ್ ಸೆಂಟರ್, ಟ್ಯೂಷನ್ ಕೇಂದ್ರಗಳು, ಕಂಪ್ಯೂಟರ್ ಹಾಗೂ ಗೇಮ್ಸ್ ಸೆಂಟರ್ ಕೇಂದ್ರಗಳ ಮೇಲೆ ವಿಶೇಷ ನಿಗಾವಹಿಸಲು ಸೂಚಿಸಿದ್ದಾರೆ.…

Read More

ಬೆಂಗಳೂರು: ನಗರದಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಘಟನೆ ನಡೆದಿದೆ. ಮೊಬೈಲ್ ಕಳ್ಳತನಕ್ಕೆ ಯತ್ನಿಸಿದಾಗ ವ್ಯಕ್ತಿಯೊಬ್ಬ ಪ್ರತಿರೋದ ವ್ಯಕ್ತ ಪಡಿಸಿದ್ದಾರೆ. ಈ ವೇಳೆಯಲ್ಲಿ ಮೊಬೈಲ್ ಕಳ್ಳರು ಆತನ ಮೇಲೆ ಚಾಕುವಿನಿಂದ ಇರಿದು ಹತ್ಯೆ ಮಾಡಿ, ಮೊಬೈಲ್ ಕಸಿದುಕೊಂಡು ಪರಾರಿಯಾಗಿರುವಂತ ಘಟನೆ ಮೆಜೆಸ್ಟಿಕ್ ನಲ್ಲಿ ನಡೆದಿದೆ. ಹೌದು ಮೊಬೈಲ್ ಕದಿಯಲು ಪ್ರಯತ್ನಿಸಿದಾಗ ಎಚ್ಚರಗೊಂಡು ಪ್ರತಿರೋಧ ಒಡ್ಡಿದ ವ್ಯಕ್ತಿಗೆ ಇಬ್ಬರು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಹತ್ಯೆ ಮಾಡಿರುವಂತ ಬೆಚ್ಚಿ ಬೀಳಿಸೋ ಘಟನೆ ಬೆಂಗಳೂರಿನ ಹೃದಯ ಭಾಗದ ಮೆಜೆಸ್ಟಿಕ್ ನಲ್ಲಿ ನಡೆದಿದೆ. ಕಾಮಾಕ್ಷಿ ಪಾಳ್ಯದ ವೃಷಭಾವತಿ ನಗರದ ನಿವಾಸಿ ಚಂದ್ರ(45) ಎಂಬುವರೇ ಮೊಬೈಲ್ ಕಳ್ಳರಿಂದ ಹತ್ಯೆಯಾದಂತ ವ್ಯಕ್ತಿಯಾಗಿದ್ದಾರೆ. ಇವರು ಮೆಜೆಸ್ಟಿಕ್ ನಲ್ಲಿನ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಟರ್ಮಿನಲ್ 1ರ 15ನೇ ಪ್ಲಾಟ್ ಫಾರ್ಮ್ ನಲ್ಲಿ ಗುರುವಾರ ಮಧ್ಯಾಹ್ನ ಸುಮಾರು 1.30ಕ್ಕೆ ಬಸ್ ಗಾಗಿ ಕಾಯುತ್ತಿದ್ದಾಗ ಚಾಕು ಇರಿತಕ್ಕೆ ಒಳಗಾಗಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.…

Read More

ನವದೆಹಲಿ: ನೌಕರರ ಭವಿಷ್ಯ ನಿಧಿ ಸಂಸ್ಥೆ (Employees’ Provident Fund Organisation – EPFO) ಸದಸ್ಯರು ಶೀಘ್ರದಲ್ಲೇ ತಮ್ಮ ನೌಕರರ ಭವಿಷ್ಯ ನಿಧಿ (employee provident fund – EPF) ಕ್ಲೈಮ್ಗಳನ್ನು ಯುನೈಟೆಡ್ ಪೇಮೆಂಟ್ಸ್ ಇಂಟರ್ಫೇಸ್ (United Payments Interface -UPI) ಮೂಲಕ ಹಿಂಪಡೆಯಲು ಸಾಧ್ಯವಾಗುತ್ತದೆ. ಇಪಿಎಫ್ಒ ಈಗಾಗಲೇ ಯೋಜನೆಯನ್ನು ಅಭಿವೃದ್ಧಿಪಡಿಸಿದೆ ಮತ್ತು ಮುಂದಿನ 2-3 ತಿಂಗಳಲ್ಲಿ ಯುಪಿಐ ಪ್ಲಾಟ್ಫಾರ್ಮ್ಗಳಲ್ಲಿ ಈ ವೈಶಿಷ್ಟ್ಯವನ್ನು ಪರಿಚಯಿಸಲು ನ್ಯಾಷನಲ್ ಪೇಮೆಂಟ್ ಕಾರ್ಪೊರೇಷನ್ ಆಫ್ ಇಂಡಿಯಾ (ಎನ್ಪಿಸಿಐ) ಯೊಂದಿಗೆ ಮಾತುಕತೆ ನಡೆಸುತ್ತಿದೆ ಎಂದು ಪರಿಚಿತ ಮೂಲಗಳನ್ನು ಉಲ್ಲೇಖಿಸಿ ದಿ ಫೈನಾನ್ಷಿಯಲ್ ಎಕ್ಸ್ಪ್ರೆಸ್ ವರದಿ ಮಾಡಿದೆ. ಯುಪಿಐನೊಂದಿಗೆ ಇಪಿಎಫ್ಒನ ಏಕೀಕರಣವು ಕಾರ್ಯಾಚರಣೆಯ ದಕ್ಷತೆಯನ್ನು ಹೆಚ್ಚಿಸುತ್ತದೆ ಮತ್ತು 7.4 ಮಿಲಿಯನ್ ಸದಸ್ಯ ಚಂದಾದಾರರಿಗೆ ಪ್ರಕ್ರಿಯೆಯನ್ನು ಹೆಚ್ಚು ಪ್ರವೇಶಿಸುವಂತೆ ಮಾಡುತ್ತದೆ. ಇಪಿಎಫ್ ಅನ್ನು ಯುಪಿಐಗೆ ಲಿಂಕ್ ಮಾಡುವ ಮೂಲಕ, ಹಣಕಾಸು ವಹಿವಾಟುಗಳನ್ನು ಸುಗಮಗೊಳಿಸುವ ಗುರಿಯನ್ನು ಸರ್ಕಾರ ಹೊಂದಿದೆ. ಬಳಕೆದಾರರಿಗೆ ತ್ವರಿತ ಮತ್ತು ಹೆಚ್ಚು ಪರಿಣಾಮಕಾರಿ ಕ್ಲೈಮ್ ಪ್ರಕ್ರಿಯೆಯನ್ನು ಖಚಿತಪಡಿಸುತ್ತದೆ ಎಂದು…

Read More

ಬೆಂಗಳೂರು: ಶೀಘ್ರವೇ ಸ್ಥಳೀಯ ಸಂಸ್ಥೆಗಳ ಮತ್ತು ಬಿಬಿಎಂಪಿ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಕಾರ್ಯಕರ್ತರು ಬೂತ್ ಮಟ್ಟದಲ್ಲಿ ಸಿದ್ಧತೆ ಮಾಡಿಕೊಳ್ಳಬೇಕು ಅಂತ ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮುಂದಿನ ಎರಡು ಮೂರು ತಿಂಗಳಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯಲಿದೆ. ಅದರ ಜೊತೆಗೆ ಶೀಘ್ರವೇ ಬಿಬಿಎಂಪಿ ಚುನಾವಣೆಯನ್ನು ಮಾಡುಲಾಗುವುದು ಎಂದರು. ಈ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಬೇಕಾಗಿದ್ದು, ಚುನಾವಣೆ ಕುರಿತು ನಾವು ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಸಲಿದ್ದೇವೆ. ತಾಲ್ಲೂಕು ಮತ್ತು ಜಿಲ್ಲಾ ಪಂಚಾಯ್ತಿಗಳಿಗೆ ಸಂಬಂಧಿಸಿದ ಮೀಸಲಾತಿ, ಕ್ಷೇತ್ರ ಮರು ವಿಂಗಡಣೆ ಕೆಲಸ ಮಾಡಲಾಗುತ್ತದೆ ಎಂಬುದಾಗಿ ತಿಳಿಸಿದರು. https://kannadanewsnow.com/kannada/big-news-these-9-medicines-failed-in-state-lab-tests-minister-dinesh-gundu-rao-writes-to-centre-seeking-ban/ https://kannadanewsnow.com/kannada/minister-laxmi-hebbalkars-good-news-for-women-3-month-old-grihalakshmi-money-to-be-credited-to-her-account-next-week/

Read More

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಗುರುವಾರ ದೆಹಲಿಯ ವಿಜ್ಞಾನ ಭವನದಲ್ಲಿ 98ನೇ ಅಖಿಲ ಭಾರತ ಮರಾಠಿ ಸಾಹಿತ್ಯ ಸಮ್ಮೇಳನವನ್ನ ಉದ್ಘಾಟಿಸಿದರು. ಈ ಸಮಯದಲ್ಲಿ ಪ್ರಧಾನಿ ಮೋದಿ ಅವರು ಮರಾಠಿ ಭಾಷೆ ಅಮೃತಕ್ಕಿಂತ ಸಿಹಿಯಾಗಿದೆ ಮತ್ತು ಈ ಭಾಷೆಯನ್ನ ಮಾತನಾಡಲು ಮತ್ತು ಅದರ ಹೊಸ ಪದಗಳನ್ನ ಕಲಿಯಲು ನಿರಂತರವಾಗಿ ಪ್ರಯತ್ನಿಸುತ್ತಿದ್ದೇನೆ ಎಂದು ಹೇಳಿದರು. ಪ್ರಧಾನಿ ಮೋದಿ ಅವರೊಂದಿಗೆ ಶರದ್ ಪವಾರ್ ಕೂಡ ಈ ಸಮ್ಮೇಳನದಲ್ಲಿ ಭಾಗವಹಿಸಿದ್ದರು. ಶರದ್ ಪವಾರ್ ಸಮ್ಮೇಳನಕ್ಕೆ ಬಂದಾಗ, ಪ್ರಧಾನಿ ಮೋದಿ ಅವರನ್ನ ಗೌರವದಿಂದ ಸ್ವಾಗತಿಸಿದರು. ಪ್ರಧಾನಿ ಮೋದಿ ಶರದ್ ಪವಾರ್ ಅವರ ಲೋಟದಲ್ಲಿ ನೀರು ತುಂಬಿಸಿದ ಪ್ರಧಾನಿ.! ಪ್ರಧಾನಿ ಮೋದಿಯವರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈ ವಿಡಿಯೋ ದೆಹಲಿಯ ವಿಜ್ಞಾನ ಭವನದಲ್ಲಿ ನಡೆದ 98ನೇ ಅಖಿಲ ಭಾರತ ಮರಾಠಿ ಸಾಹಿತ್ಯ ಸಮ್ಮೇಳನದ ಉದ್ಘಾಟನೆಯ ವಿಡಿಯೋ. ಈ ಸಮಯದಲ್ಲಿ, ಪ್ರಧಾನಿ ಮೋದಿ ಮತ್ತು ಶರದ್ ಪವಾರ್ ಅವರ ಕುರ್ಚಿಗಳನ್ನ ಪರಸ್ಪರ ಹತ್ತಿರ ಇರಿಸಲಾಗಿತ್ತು, ಶರದ್ ಪವಾರ್…

Read More

ಪ್ರಯಾಗ್ ರಾಜ್: ಮಹಾಕುಂಭಮೇಳದಲ್ಲಿ 57 ಕೋಟಿಗೂ ಹೆಚ್ಚು ಭಕ್ತರು ಗಂಗಾನದಿಯಲ್ಲಿ ಪವಿತ್ರ ಸ್ನಾನ ಮಾಡಿದ ನಂತರವೂ ಅದರ ಪರಿಶುದ್ಧತೆಯ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. ಈ ಹಿಂದೆ ಕ್ಷಿಪಣಿ ಮನುಷ್ಯ ಡಾ.ಎಪಿಜೆ ಅಬ್ದುಲ್ ಕಲಾಂ ಅವರೊಂದಿಗೆ ವೈಜ್ಞಾನಿಕ ಚರ್ಚೆಯಲ್ಲಿ ತೊಡಗಿದ್ದ ಪದ್ಮಶ್ರೀ ವಿಜ್ಞಾನಿ ಡಾ.ಅಜಯ್ ಕುಮಾರ್ ಸೋಂಕರ್ ಅವರು ಗಂಗಾ ನೀರು ಸ್ನಾನಕ್ಕೆ ಮಾತ್ರವಲ್ಲ, ಕ್ಷಾರೀಯ ನೀರಿನಷ್ಟೇ ಶುದ್ಧವಾಗಿದೆ ಎಂದು ತಮ್ಮ ಪ್ರಯೋಗಾಲಯದಲ್ಲಿ ಸಾಬೀತುಪಡಿಸಿದ್ದಾರೆ. ಸಂದೇಹವಾದಿಗಳಿಗೆ ಸವಾಲು ಹಾಕಿದ ವಿಜ್ಞಾನಿ, ವೈಜ್ಞಾನಿಕ ಪುರಾವೆಗಳೊಂದಿಗೆ ಗಂಗಾನದಿಯ ಪರಿಶುದ್ಧತೆಯ ಬಗ್ಗೆ ಅನುಮಾನಗಳನ್ನು ನಿವಾರಿಸಿದರು. ಗಂಗಾ ನೀರನ್ನು ತನ್ನ ಮುಂದೆ ತಂದು ಪ್ರಯೋಗಾಲಯ ಪರೀಕ್ಷೆಯ ಮೂಲಕ ಅದರ ಪರಿಶುದ್ಧತೆಯನ್ನು ಪರಿಶೀಲಿಸುವಂತೆ ಸಣ್ಣ ಸಂದೇಹವಿರುವ ಯಾರಿಗಾದರೂ ಅವರು ಬಹಿರಂಗ ಸವಾಲು ಹಾಕಿದರು. ಮುತ್ತು ಕೃಷಿಯಲ್ಲಿ ಜಪಾನ್ ಪ್ರಾಬಲ್ಯಕ್ಕೆ ಸವಾಲೊಡ್ಡಲು ಹೆಸರುವಾಸಿಯಾದ ಡಾ.ಸೋಂಕರ್, ಮಹಾಕುಂಭ ನಗರದ ಸಂಗಮ್ ನೋಸ್ ಮತ್ತು ಅರೈಲ್ ಸೇರಿದಂತೆ ಐದು ಪ್ರಮುಖ ಸ್ನಾನ ಘಟ್ಟಗಳಿಂದ ಗಂಗಾನದಿಯ ನೀರಿನ ಮಾದರಿಗಳನ್ನು ಸಂಗ್ರಹಿಸಿದ್ದಾರೆ. ಈ ಮಾದರಿಗಳನ್ನು ನಂತರ ಅವರ…

Read More

ಬೆಂಗಳೂರು: ಉನ್ನತ ಗುಣಮಟ್ಟದ ಸೋಲಾರ್ ಫೋಟೋವೋಲ್ಟಾಯಿಕ್ ಕೋಶಗಳು ಮತ್ತು ಮಾಡ್ಯೂಲ್ ಉತ್ಪಾದನೆಗೆ ಹೆಸರಾಗಿರುವ, ಬೆಂಗಳೂರು ಮೂಲದ ಎಮ್ವಿ ಎನರ್ಜಿ ಕಂಪನಿಯು ತನ್ನ ಉತ್ಪಾದನಾ ಘಟಕ ಆರಂಭಿಸಲು ಹಂತಹಂತವಾಗಿ 15 ಸಾವಿರ ಕೋಟಿ ರೂಪಾಯಿ ಹೂಡಲು ತೀರ್ಮಾನಿಸಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ಗುರುವಾರ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಕಂಪನಿಯ ಉನ್ನತ ಮಟ್ಟದ ಪ್ರತಿನಿಧಿಗಳ ಜತೆ ಅವರು ಈ ಸಂಬಂಧ ಸಭೆ ನಡೆಸಿದರು. ಕಂಪನಿಯೊಂದಿಗೆ ಹೂಡಿಕೆ ಸಂಬಂಧ ಇತ್ತೀಚಿಗೆ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಒಡಂಬಡಿಕೆ ಮಾಡಿಕೊಂಡಿದ್ದು, ಕಾರ್ಯರೂಪಕ್ಕೆ ಬರುತ್ತಿರುವುದು ಸಂತಸದ ಸಂಗತಿ ಎಂದು ಸಚಿವರು ಹೇಳಿದ್ದಾರೆ. https://twitter.com/KarnatakaVarthe/status/1892926779150467243 ಕಂಪನಿಯು ಮೊದಲ ಹಂತದಲ್ಲಿ 5,000 ಕೋಟಿ ರೂಪಾಯಿ ಹೂಡಿಕೆ ಮಾಡಲಿದ್ದು, 5 ಗಿಗಾವ್ಯಾಟ್ ಸಾಮರ್ಥ್ಯದ ಉತ್ಪಾದನೆ ಮಾಡಲಿದೆ. ಒಟ್ಟು ಯೋಜನೆಯಿಂದ 10 ಸಾವಿರ ಉದ್ಯೋಗ ಸೃಷ್ಟಿಯಾಗಲಿದೆ ಎಂದಿದ್ದಾರೆ. ಎಮ್ವಿ ಎನರ್ಜಿ ಕಂಪನಿಯು ಬೆಂಗಳೂರಿನ ಐಟಿಐಆರ್ ವಲಯದಲ್ಲಿ 120 ಎಕರೆ ಜಮೀನನ್ನು ಕೇಳಿದೆ. ಇದನ್ನು ಸಕಾರಾತ್ಮಕವಾಗಿ…

Read More