Author: kannadanewsnow09

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನದೊಂದಿಗೆ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ, ಹಲವಾರು ರಾಜ್ಯಗಳಲ್ಲಿನ ಶಸ್ತ್ರಾಸ್ತ್ರ ತಯಾರಿಕಾ ಕಂಪನಿಗಳು ಉತ್ಪಾದನಾ ಗುರಿಯನ್ನು ತಲುಪಲು ಉದ್ಯೋಗಿಗಳ ದೀರ್ಘ ರಜೆಗಳನ್ನು ರದ್ದುಗೊಳಿಸಿವೆ. ಬಾಕಿ ಉಳಿದಿರುವ ಕೆಲಸಗಳು ಮತ್ತು ಪ್ರಸ್ತುತ ತಿಂಗಳ ಉತ್ಪಾದನಾ ಗುರಿಯನ್ನು ಸಾಧಿಸುವುದನ್ನು ಖಚಿತಪಡಿಸಿಕೊಳ್ಳಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕಂಪನಿಗಳು ತಿಳಿಸಿವೆ. ವಿವರಗಳನ್ನು ಒದಗಿಸುವಾಗ, ಅಧಿಕಾರಿಗಳು ಮತ್ತು ಉದ್ಯೋಗಿಗಳಿಗೆ ಎರಡು ದಿನಗಳಿಗಿಂತ ಹೆಚ್ಚಿನ ರಜೆಗಳನ್ನು ರದ್ದುಗೊಳಿಸಲಾಗಿದೆ ಎಂದು ಕಂಪನಿಗಳು ತಿಳಿಸಿವೆ. ಜಬಲ್ಪುರ್ ಆರ್ಡನೆನ್ಸ್ ಕಾರ್ಖಾನೆ ದೀರ್ಘ ರಜೆಗಳನ್ನು ರದ್ದು ಉತ್ಪಾದನಾ ಗುರಿಗಳನ್ನು ಪೂರೈಸಲು ವಿಸ್ತೃತ ರಜೆಗಳನ್ನು ರದ್ದುಗೊಳಿಸಲಾಗಿದೆ ಎಂದು ಮಧ್ಯಪ್ರದೇಶದ ಜಬಲ್ಪುರ್ ಜಿಲ್ಲೆಯ ಆರ್ಡನೆನ್ಸ್ ಕಾರ್ಖಾನೆ ಖಮರಿಯಾ (OFK) ಶನಿವಾರ ಘೋಷಿಸಿದೆ. ಈ ಕಾರ್ಖಾನೆಯಲ್ಲಿ 4,000 ಕ್ಕೂ ಹೆಚ್ಚು ಉದ್ಯೋಗಿಗಳು ಕೆಲಸ ಮಾಡುತ್ತಾರೆ. ಇದು ಮುನಿಷನ್ಸ್ ಇಂಡಿಯಾ ಲಿಮಿಟೆಡ್ (MIL) ನ ಅತಿದೊಡ್ಡ ಘಟಕಗಳಲ್ಲಿ ಒಂದಾಗಿದೆ. ಉತ್ಪಾದನಾ ಗುರಿಯನ್ನು ಪೂರೈಸಲು ಎರಡು ದಿನಗಳಿಗಿಂತ ಹೆಚ್ಚು ಅಧಿಕಾರಿಗಳು ಮತ್ತು ಉದ್ಯೋಗಿಗಳ ರಜೆಯನ್ನು ತಕ್ಷಣದಿಂದ…

Read More

ನವದೆಹಲಿ: ದೆಹಲಿಯಿಂದ ಮಹಾರಾಷ್ಟ್ರದ ಶಿರಡಿಗೆ ತೆರಳುತ್ತಿದ್ದ ವಿಮಾನದಲ್ಲಿ ಗಗನಸಖಿಗೆ ಕುಡಿದ ಮತ್ತಿನಲ್ಲಿ ಪುರುಷ ಪ್ರಯಾಣಿಕನೊಬ್ಬ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಪೊಲೀಸರನ್ನು ಉಲ್ಲೇಖಿಸಿ ಪಿಟಿಐ ಸುದ್ದಿ ಸಂಸ್ಥೆ ಭಾನುವಾರ ವರದಿ ಮಾಡಿದೆ. ಶುಕ್ರವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಇಂಡಿಗೊ ವಿಮಾನ ಶಿರಡಿ ವಿಮಾನ ನಿಲ್ದಾಣದಲ್ಲಿ ಇಳಿದ ನಂತರ ಆರೋಪಿಯನ್ನು ಬಂಧಿಸಲಾಗಿದೆ. ವಿಮಾನದ ಶೌಚಾಲಯದ ಬಳಿ ಪ್ರಯಾಣಿಕರು ಗಗನಸಖಿಯನ್ನು ಅನುಚಿತವಾಗಿ ಸ್ಪರ್ಶಿಸಿದ್ದಾರೆ ಎಂದು ಅಪರಿಚಿತ ಪೊಲೀಸ್ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ. ಈ ಅಸಭ್ಯ ಕೃತ್ಯದಿಂದ ಕೋಪಗೊಂಡಂತ ಗಗನಸಖಿ ತನ್ನ ಸಿಬ್ಬಂದಿ ವ್ಯವಸ್ಥಾಪಕರಿಗೆ ಮಾಹಿತಿ ನೀಡಿದ್ದಾರೆ. ಅವರು ವಿಮಾನವು ಶಿರಡಿ ವಿಮಾನ ನಿಲ್ದಾಣದಲ್ಲಿ ಇಳಿದ ನಂತರ ಭದ್ರತಾ ಸಿಬ್ಬಂದಿಗೆ ಮಾಹಿತಿ ನೀಡಿದರು. ಈ ವೇಳೆ ಪ್ರಯಾಣಿಕನನ್ನು ಭದ್ರತಾ ಸಿಬ್ಬಂದಿಗಳು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿ ಹೇಳಿದರು. ಅವರನ್ನು ರಹತಾ ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು. ಅಲ್ಲಿ ಕಿರುಕುಳ ಪ್ರಕರಣ ದಾಖಲಿಸಲಾಗಿದೆ. ಅವರ ವೈದ್ಯಕೀಯ ಪರೀಕ್ಷೆಯಲ್ಲಿ ಅವರು ಮದ್ಯ ಸೇವಿಸಿರುವುದು ದೃಢಪಟ್ಟಿದೆ ಎಂದು ಪಿಟಿಐ…

Read More

ನವದೆಹಲಿ: ಪಹಲ್ಗಾಮ್ ದಾಳಿಯ ನಂತ್ರದ ಉಗ್ರರ ಭೀತಿಯ ನಡುವೆಯೂ ಬದರೀನಾಥ ಧಾಮದ ಬಾಗಿಲನ್ನು ತೆರೆಯಲಾಗಿದೆ. ಈ ಮೂಲಕ ಪ್ರಸಿದ್ಧ ಚಾರ್ ಧಾಮ್ ಯಾತ್ರೆ ಅಧಿಕೃತವಾಗಿ ಪ್ರಾರಂಭಗೊಂಡಿದೆ. ಬದರೀನಾಥ್ ಧಾಮದ ಪವಿತ್ರ ದ್ವಾರಗಳನ್ನು ಸಾಂಪ್ರದಾಯಿಕ ಆಚರಣೆಗಳು ಮತ್ತು ವೈದಿಕ ಮಂತ್ರಗಳೊಂದಿಗೆ ತೆರೆಯಲಾಗಿದ್ದು, ಇದು ಚಾರ್ ಧಾಮ್ ಯಾತ್ರೆಯ ಅಧಿಕೃತ ಆರಂಭವನ್ನು ಸೂಚಿಸುತ್ತದೆ. ಇದಕ್ಕೂ ಮೊದಲು, ಏಪ್ರಿಲ್ 30 ರಂದು ಅಕ್ಷಯ ತೃತೀಯದ ಸಮಯದಲ್ಲಿ ಗಂಗೋತ್ರಿ ಮತ್ತು ಯಮುನೋತ್ರಿಯ ಬಾಗಿಲುಗಳನ್ನು ತೆರೆಯಲಾಯಿತು. ಕೇದಾರನಾಥ ಧಾಮದ ಕಪಟ್ ಅನ್ನು ಮೇ 2 ರಂದು ತೆರೆಯಲಾಯಿತು. ಬದರೀನಾಥವನ್ನು ತೆರೆಯುವುದರೊಂದಿಗೆ, ಚಾರ್ ಧಾಮ್ ಯಾತ್ರೆ ಈಗ ಔಪಚಾರಿಕವಾಗಿ ಪ್ರಾರಂಭವಾಗಿದೆ. ದೇವಾಲಯವನ್ನು 40 ಕ್ವಿಂಟಾಲ್ ಹೂವುಗಳಿಂದ ಸುಂದರವಾಗಿ ಅಲಂಕರಿಸಲಾಗಿದ್ದು, ಹಿಮಾಲಯ ಪರ್ವತಗಳ ನಡುವೆ ದೈವಿಕ ಮತ್ತು ಸುಂದರವಾದ ನೋಟವನ್ನು ಸೃಷ್ಟಿಸುತ್ತದೆ. ಭಗವಾನ್ ಬದರಿ ವಿಶಾಲನ ಆಶೀರ್ವಾದ ಪಡೆಯಲು ಭಾರತದಾದ್ಯಂತ ಮತ್ತು ವಿದೇಶಗಳಿಂದ ಭಕ್ತರು ಬದರೀನಾಥಕ್ಕೆ ಬರಲು ಪ್ರಾರಂಭಿಸಿದ್ದಾರೆ. ದೇವಾಲಯವನ್ನು ತಲುಪುವ ಸವಾಲಿನ ಪ್ರಯಾಣದ ಹೊರತಾಗಿಯೂ, ಯಾತ್ರಾರ್ಥಿಗಳು ಪ್ರತಿವರ್ಷ ಈ ಶುಭ…

Read More

ಬೆಂಗಳೂರು: ಇಂದು ನಡೆದಂತ ನೀಟ್ ಪರೀಕ್ಷೆಯ ವೇಳೆಯಲ್ಲಿ ಕಲಬುರ್ಗಿ ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿಯೊಬ್ಬ ಜನಿವಾರವನ್ನು ತೆಗೆಸಿದ್ದರು. ಇಂತಹ ಘಟನೆಯನ್ನು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ತೀವ್ರವಾಗಿ ವಿರೋಧಿಸಿ, ಖಂಡಿಸಿದೆ. ಇಂದು ಈ ಘಟನೆಯ ಬಗ್ಗೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ರಘುನಾಥ್ ಮಾತನಾಡಿ, ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ವಿಚಾರ ಗಮನಕ್ಕೆ ಬಂದಿದೆ. ಈ ಘಟನೆ ಮತ್ತೊಮ್ಮೆ ನಡೆದಿರುವುದು ದುರದೃಷ್ಟಕರ. ಸರ್ಕಾರ ಕ್ರಮವಹಿಸಿದ್ದರೂ ಈ ರೀತಿ ಆಗಿದ್ದು ಖಂಡನೀಯ. ಈ ಬಗ್ಗೆ ನಾವು ಮತ್ತೊಮ್ಮೆ ಸರ್ಕಾರದ ಗಮನಕ್ಕೆ ತರುತ್ತೇವೆ ಎಂದರು. ಮುಂದಿನ ದಿನಗಳಲ್ಲಿ ಪರೀಕ್ಷೆ ವೇಳೆಯಲ್ಲಿ ಜನಿವಾರ ತೆಗೆಸಿದ್ರೇ ಹೋರಾಟಕ್ಕೂ ಪ್ಲಾನ್ ಮಾಡುತ್ತೇವೆ. ಇಂದು ನೀಟ್ ಪರೀಕ್ಷೆಯ ವೇಳೆಯಲ್ಲಿ ಜನಿವಾರ ತೆಗೆಸಿದಂತ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. https://kannadanewsnow.com/kannada/ready-to-resign-if-it-is-proved-that-it-was-not-congress-that-defeated-ambedkar-narayanasamy/ https://kannadanewsnow.com/kannada/who-all-have-a-share-in-the-fathers-property-what-does-the-law-say-heres-the-information/

Read More

ಶಿವಮೊಗ್ಗ: ಕೇಂದ್ರ ಲೋಕಸೇವಾ ಆಯೋಗ ನಡೆಸಿದಂತ ಐಎಎಸ್ ಪರೀಕ್ಷೆಯಲ್ಲಿ 288ನೇ ಶ್ರೇಯಾಂಕದಲ್ಲಿ ಸಾಗರದ ವಿಕಾಸ್ ತೇರ್ಗಡೆಯಾಗಿದ್ದರು. ಈ ಮೂಲಕ ಐಎಎಸ್ ಪಾಸ್ ಮಾಡಿದ್ದರು. ಇಂತಹ ವಿಕಾಸ್ ಗೆ ಸಾಗರ ನಗರಸಭೆ ವತಿಯಿಂದ ಮೇ.5ರ ನಾಳೆ ನಾಗರೀಕ ಸನ್ಮಾನ ಮಾಡಲಾಗುತ್ತಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಸಾಗರ ನಗರಸಭೆ ಕಮೀಷನರ್ ಹೆಚ್.ಕೆ ನಾಗಪ್ಪ ಅವರು, ಸಾಗರ ನಗರದಲ್ಲಿ ಪ್ರಪ್ರಥಮ ಬಾರಿಗೆ ಯುಪೆಸ್ಸಿ ಪರೀಕ್ಷೆಯಲ್ಲಿ 288ನೇ ಶ್ರೇಯಾಂಕದಲ್ಲಿ ಐಎಎಸ್ ಅಧಿಕಾರಿಯಾಗಿ ನಮ್ಮೂರಿನ ವಿಕಾಸ್.ವಿ ಆಯ್ಕೆಯಾಗಿದ್ದಾರೆ. ಅವರಿಗೆ ಸಾಗರ ಜನತೆಯ ಪರವಾಗಿ ನಗರಸಭೆ ವತಿಯಿಂದ ನಾಗರೀಕ ಸನ್ಮಾನ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಮೇ.5ರ ನಾಳೆ ಬೆಳಗ್ಗೆ 11 ಗಂಟೆಗೆ ಸಾಗರದ ಪುರಭವನದಲ್ಲಿ ಐಎಎಸ್ ಅಧಿಕಾರಿಯಾಗಿ ಆಯ್ಕೆಯಾಗಿರುವಂತ ವಿಕಾಸ್.ವಿ ಅವರನ್ನು ಸನ್ಮಾನಿಸಲಾಗುತ್ತದೆ. ಸಾಗರ ತಾಲ್ಲೂಕಿನ ಜನತೆ ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ನಮ್ಮೂರಿನ ಹೆಮ್ಮೆಯ ಪುತ್ರ ವಿಕಾಸ್.ವಿ ಅಭಿನಂದಿಸುವಂತೆ ಕೋರಿದ್ದಾರೆ. ಮೊದಲ ಪ್ರಯತ್ನದಲ್ಲೇ ‘UPSC’ ತೇರ್ಗಡೆ: 288ನೇ Rank ಗಳಿಸಿದ ‘ಸಾಗರದ ವಿಕಾಸ್’ ಶಿವಮೊಗ್ಗ ಜಿಲ್ಲೆಯ…

Read More

ತುಮಕೂರು: ಮಧುಗಿರಿ ಪಟ್ಟಣವನ್ನೇ ಬೆಚ್ಚಿಬೀಳಿಸಿದ ಕೊಲೆ ಪ್ರಕರಣದ 4 ಜನ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ತಲಾ ರೂ.50 ಸಾವಿರ ದಂಡವನ್ನು ವಿಧಿಸಿ ಕೋರ್ಟ್ ಆದೇಶಿಸಿದೆ. ಈ ಕುರಿತಂತೆ ತುಮಕೂರು ಪೊಲೀಸ್ ವರಿಷ್ಠಾಧಿಕಾರಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ: 12-03-2021 ರಂದು ಬೆಳಗ್ಗೆ ಸುಮಾರು 09:15 ಗಂಟೆ ಸಮಯದಲ್ಲಿ ಕೂಲ್ ಹೇರ್ ಸ್ಟೈಲ್ ಕಟಿಂಗ್ ಶಾಪ್ ಎದುರು ಇದೇ ಮಧುಗಿರಿಯ ಗುರುಕಿರಣ್ ಬಿನ್ ಗಂಗಾಧರಪ್ಪ, ಮಧುಗೌಡ ಬಿನ್ ರಂಗಪ್ಪ, ಎಂ.ವಿ. ಧನಂಜಯಾ ಬಿನ್ ವೀರಣ್ಣ ಇವರುಗಳು ಕೂಲ್ ಹೇರ್ ಸ್ಟೈಲ್ ಅಂಗಡಿಯ ಮುಂಭಾಗದ ಸಿಮೆಂಟ್ ಕಟ್ಟೆಯ ಮೇಲೆ ಕುಳಿತಿದ್ದ ಮೃತ ಆರ್. ವೀರಭದ್ರಸ್ವಾಮಿಯನ್ನು ಕೊಲೆ ಮಾಡುವ ಉದ್ದೇಶದಿಂದ ಕೆಳಕ್ಕೆ ಎಳೆದುಕೊಂಡು ಆರೋಪಿ-1 ಗುರುಕಿರಣ್‌ ಡ್ರಾಗರ್‌ನಿಂದ, 2ನೇ ಆರೋಪಿ ಮಧುಗೌಡ ಬಟನ್ ಚಾಕುವಿನಿಂದ, 3ನೇ ಆರೋಪಿ ಸ್ಟೀಲ್ ರಾಡಿನಿಂದ ಮಾರಣಾಂತಿಕ ಹಲ್ಲೆ ಮಾಡಿದ್ದು, ಚಿಕಿತ್ಸೆ ಫಲಕಾರಿಯಾಗದೇ ಅದೇ ದಿನ ಆರ್.ವಿ ಸ್ವಾಮಿ ತುಮಕೂರಿನ ಸಿದ್ದಗಂಗಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು ಎಂದಿದ್ದಾರೆ. ಸದರಿ 3…

Read More

ಹಾನಗಲ್ : “ಕುಸುಮ್ ಯೋಜನೆ ಮೂಲಕ ಪ್ರತಿ ತಾಲ್ಲೂಕಿನಲ್ಲಿ 20 ಮೆ.ವ್ಯಾ ಸಾಮರ್ಥ್ಯದ ಸೋಲಾರ್ ವಿದ್ಯುತ್ ಘಟಕ ಸ್ಥಾಪನೆ ಮಾಡಿ ಇದರಿಂದ ಹಗಲು ಹೊತ್ತಿನಲ್ಲಿಯೇ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ನೀಡಲು ಸರ್ಕಾರ ತೀರ್ಮಾನ ಮಾಡಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಹಾವೇರಿ ಜಿಲ್ಲೆಯ ಹಾನಗಲ್ ವಿಧಾನಸಭಾ ಕ್ಷೇತ್ರದ ಅಕ್ಕಿ ಆಲೂರಿನಲ್ಲಿ ಭಾನುವಾರ ನಡೆದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಮಾಜಿ ಸಿಎಂ ಬಂಗಾರಪ್ಪ ಅವರ ಅವಧಿಯಲ್ಲಿ ರೈತರ ಪಂಪ್ ಸೆಟ್ ಗೆ ಉಚಿತ ವಿದ್ಯುತ್ ನೀಡಲಾಯಿತು. 2013 ರ ಕಾಂಗ್ರೆಸ್ ಸರ್ಕಾರದ ವೇಳೆ ನಾನು ಇಂಧನ ಸಚಿವನಾಗಿದ್ದಾಗ ರೈತರ ಪಂಪ್ ಸೆಟ್ ಗಳಿಗೆ ನೀಡುವ ತ್ರೀ‌ ಫೇಸ್ ವಿದ್ಯುತ್ ಪೂರೈಕೆಯನ್ನು 6 ಗಂಟೆಯಿಂದ 7 ಗಂಟೆಗೆ ಹೆಚ್ಚಳ ಮಾಡಲಾಯಿತು” ಎಂದು ಹೇಳಿದರು. “665.75 ಕೋಟಿ ಹಣವನ್ನು ನಿಮ್ಮ ಕ್ಷೇತ್ರದ ಅಭಿವೃದ್ಧಿಗೆ ನೀಡುತ್ತಿದ್ದೇವೆ. 418 ಕೋಟಿ ವೆಚ್ಚದಲ್ಲಿ ಬಾಳಂಬೀಡು ಹಾಗೂ ಇತರೇ 72 ಗ್ರಾಮಗಳ 162 ಕೆರೆಗಳು.…

Read More

ಲಂಡನ್: ಪಾಕಿಸ್ತಾನದ ಇಬ್ಬರು ಪತ್ರಕರ್ತರಾದ ಸಫೀನಾ ಖಾನ್ ಮತ್ತು ಅಸಾದ್ ಅಲಿ ಮಲಿಕ್ ಲಂಡನ್ನ ಉಪಾಹಾರ ಗೃಹದಲ್ಲಿ ಪರಸ್ಪರ ನಿಂದಿಸುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಎಆರ್ವೈ ನ್ಯೂಸ್ ಮತ್ತು ಹಮ್ ನ್ಯೂಸ್ನ ಇತರ ಪತ್ರಕರ್ತರೊಂದಿಗೆ ಮಲಿಕ್ ತನ್ನ ಮೇಲೆ ಸಾಮೂಹಿಕ ಹಲ್ಲೆ ನಡೆಸಿ ಬೆದರಿಕೆ ಹಾಕಿದ್ದಾರೆ ಎಂದು ಖಾನ್ ಆರೋಪಿಸಿದ್ದಾರೆ. ನಿಯೋ ನ್ಯೂಸ್ನಲ್ಲಿ ಕೆಲಸ ಮಾಡುವ ಮತ್ತು ಲಂಡನ್ನ ಪಾಕಿಸ್ತಾನ್ ಪ್ರೆಸ್ ಕ್ಲಬ್ನ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಖಾನ್, ಯುಕೆ ಪೊಲೀಸರನ್ನು ಟ್ಯಾಗ್ ಮಾಡುವ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ತನಗೆ ಏನಾದರೂ ಸಂಭವಿಸಿದರೆ, ಎಆರ್ವೈ ನ್ಯೂಸ್ ವರದಿಗಾರ ಫರೀದ್ ಮತ್ತು ಹಮ್ ನ್ಯೂಸ್ ಪತ್ರಕರ್ತ ರಫೀಕ್ ಅವರನ್ನು ಹೊಣೆಗಾರರನ್ನಾಗಿ ಮಾಡಬೇಕು ಎಂದು ಲಂಡನ್ ಮೂಲದ ಪತ್ರಕರ್ತೆ ಹೇಳಿದ್ದಾರೆ. ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಪ್ರಧಾನ ಕಾರ್ಯದರ್ಶಿ ಸಲ್ಮಾನ್ ಅಕ್ರಮ್ ರಾಜಾ ಅವರ ಮಾಧ್ಯಮ ಪ್ರಸಾರದ ಸಮಯದಲ್ಲಿ ಈ ಘಟನೆ ನಡೆದಿದೆ ಎಂದು ಆರೋಪಿಸಲಾಗಿದೆ. ಸಲ್ಮಾನ್ ಅಕ್ರಮ್ ರಾಜಾ ಅವರ ಪ್ರಸಾರದ…

Read More

ಹಾವೇರಿ: “ಕುಸುಮ್ ಯೋಜನೆ ಮೂಲಕ ಪ್ರತಿ ತಾಲ್ಲೂಕಿನಲ್ಲಿ 20 ಮೆ.ವ್ಯಾ ಸಾಮರ್ಥ್ಯದ ಸೋಲಾರ್ ವಿದ್ಯುತ್ ಘಟಕ ಸ್ಥಾಪನೆ ಮಾಡಿ ಇದರಿಂದ ಹಗಲು ಹೊತ್ತಿನಲ್ಲಿಯೇ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ನೀಡಲು ಸರ್ಕಾರ ತೀರ್ಮಾನ ಮಾಡಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಹಾವೇರಿ ಜಿಲ್ಲೆಯ ಹಾನಗಲ್ ವಿಧಾನಸಭಾ ಕ್ಷೇತ್ರದ ಅಕ್ಕಿ ಆಲೂರಿನಲ್ಲಿ ಭಾನುವಾರ ನಡೆದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಮಾಜಿ ಸಿಎಂ ಬಂಗಾರಪ್ಪ ಅವರ ಅವಧಿಯಲ್ಲಿ ರೈತರ ಪಂಪ್ ಸೆಟ್ ಗೆ ಉಚಿತ ವಿದ್ಯುತ್ ನೀಡಲಾಯಿತು. 2013 ರ ಕಾಂಗ್ರೆಸ್ ಸರ್ಕಾರದ ವೇಳೆ ನಾನು ಇಂಧನ ಸಚಿವನಾಗಿದ್ದಾಗ ರೈತರ ಪಂಪ್ ಸೆಟ್ ಗಳಿಗೆ ನೀಡುವ ತ್ರೀ‌ ಫೇಸ್ ವಿದ್ಯುತ್ ಪೂರೈಕೆಯನ್ನು 6 ಗಂಟೆಯಿಂದ 7 ಗಂಟೆಗೆ ಹೆಚ್ಚಳ ಮಾಡಲಾಯಿತು” ಎಂದು ಹೇಳಿದರು. “665.75 ಕೋಟಿ ಹಣವನ್ನು ನಿಮ್ಮ ಕ್ಷೇತ್ರದ ಅಭಿವೃದ್ಧಿಗೆ ನೀಡುತ್ತಿದ್ದೇವೆ. 418 ಕೋಟಿ ವೆಚ್ಚದಲ್ಲಿ ಬಾಳಂಬೀಡು ಹಾಗೂ ಇತರೇ 72 ಗ್ರಾಮಗಳ 162 ಕೆರೆಗಳು. 116…

Read More

ಹಾಸನ: ನಾನು ಟೈಂ ಬರ್ಲಿ ಅಂತ ಕಾಯ್ತಾ ಇದ್ದೀನಿ. ಎಲ್ಲವನ್ನೂ ಬಡ್ಡಿ ಸಮೇತ ತೀರಿಸದೇ ಹೋದ್ರೆ ನಾನು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರ ಮಗನೇ ಅಲ್ಲ ಎಂಬುದಾಗಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಗುಡುಗಿದ್ದಾರೆ. ಜಿಲ್ಲೆಯ ದ್ಯಾಪಲಾಪುರ ಗ್ರಾಮದಲ್ಲಿ ನಡೆದಂತ ಶ್ರೀ ಆಂಜನೇಯ ಸ್ವಾಮಿ ದೇವಾಲಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದಂತ ಅವರು, ಕೆಲವರು ಹೇಳುತ್ತಿದ್ದಾರೆ. ರೇವಣ್ಣ, ದೇವೇಗೌಡರದ್ದು ಮುಗೀತು ಅಂತ. ಆದರೇ ಈ ಜಿಲ್ಲೆಯ ಜನರಿಗೆ ಗೊತ್ತು, ದೇವೇಗೌಡ ಅವರ ಕೊಡುಗೆ ಏನು ಅಂತ ಎಂಬುದಾಗಿ ಹೇಳಿದರು. ಹಾಸನದಲ್ಲಿ ರೈಲ್ವೆ ಯೋಜನೆ, ಇಂಜಿನಿಯರಿಂಗ್ ಕಾಲೇಜು, ಮೆಡಿಕಲ್ ಕಾಲೇಜು, ನರ್ಸಿಂಗ್ ಕಾಲೇಜು ಮಾಡಿದ್ದು ಯಾರು.? ಕುಮಾರಸ್ವಾಮಿ ಅವರು ಹಾಸನ ಜಿಲ್ಲೆಯ ಶಿಕ್ಷಣಕ್ಕೆ ಐದು ಸಾವಿರ ಕೋಟಿ ಕೊಟ್ಟಿದ್ರು ಎಂಬುದಾಗಿ ತಿಳಿಸಿದರು. ಕೆಲವು ಅಧಿಕಾರಿಗಳು ರೇವಣ್ಣ ಹಾಗೂ ದೇವೇಗೌಡರದ್ದು ಮುಗೀತು ಎಂದು ತಿಳಿದುಕೊಂಡಿದ್ದಾರೆ. ಈ ಜಿಲ್ಲೆ ಲೂಟಿಕೋರರ ಕೈ ಸೇರಿದೆ. ನಾನು ಇಲ್ಲೇ ಇರ್ತೀನಿ. ಇದೆಲ್ಲ ಎಷ್ಟು ದಿನ ಇರುತ್ತೋ ಕಾದು…

Read More