Author: kannadanewsnow09

ಮಂಡ್ಯ :  ಸಾರ್ವಜನಿಕ ಸ್ಮಶಾನಕ್ಕೆ ಹೋಗುವ ರಸ್ತೆಗೆ ರೈತನೋರ್ವ ಬೇಲಿ ಹಾಕಿ ಮೃತನ ಅಂತ್ಯಕ್ರಿಯೆಗೂ ರಸ್ತೆ ಬಿಟ್ಟು ಕೊಡದ ಹಿನ್ನೆಲೆಯಲ್ಲಿ ಸ್ಮಶಾನ ರಸ್ತೆಯಲ್ಲೇ ಮೃತ ವ್ಯಕ್ತಿಯ ಅಂತ್ಯಕ್ರಿಯೆ ನಡೆಸಿರುವ ಅಮಾನವೀಯ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿಹುಂಡಿ ಗ್ರಾಮದಲ್ಲಿ ಭಾನುವಾರ ನಡೆದಿದೆ. ಸೋಮವಾದಂದು ಗ್ರಾಮದ ಸತೀಶ್‌ ಎಂಬ ಯುವಕ ಮೃತಪಟ್ಟಿದ್ದರು. ಅದೇ ಗ್ರಾಮದ ರೈತ ಅಂದಾನಿಗೌಡ ಸ್ಮಶಾನದ ರಸ್ತೆ ತನ್ನ ಜಮೀನಿನಲ್ಲಿ ಇದೆ ಎಂದು ಕಳೆದ ಹದಿನೈದು ದಿನಗಳ ಹಿಂದೆ ಮುಳ್ಳು ತಂತಿ ಬೇಲಿ ಹಾಕಿಕೊಂಡಿದ್ದ. ಹೀಗಾಗಿ ಸ್ಮಶಾನಕ್ಕೆ ಮೃತ ವ್ಯಕ್ತಿಯ ಶವವನ್ನು ಕೊಂಡೊಯ್ಯಲು ಸಾಧ್ಯವಾಗಿರಲಿಲ್ಲ. ಎಷ್ಟೇ ದಾರಿ ಬಿಡುವಂತೆ ಕೇಳಿದರೂ ರೈತ ಅಂದಾನಿಗೌಡ ಮಾತ್ರ, ನನ್ನ ಹೊಲ ಇದು. ದಾರಿ ಬಿಡೋದಿಲ್ಲ ಎಂಬುದಾಗಿ ಪಟ್ಟು ಹಿಡಿದಿದ್ದಾನೆ. ಈ ಎಲ್ಲಾ ಕಾರಣದಿಂದಾಗಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಹೆಬ್ಬಾಡಿಹುಂಡಿ ಗ್ರಾಮದ ಮೃತ ಸತೀಶ್ ಪಾರ್ಥೀವ ಶರೀರವನ್ನು ಸ್ಮಶಾನಕ್ಕೆ ಕೊಂಡೊಯ್ಯೋದಕ್ಕೆ ದಾರಿಯೇ ಇಲ್ಲದಂತೆ ಆಗಿತ್ತು. ಈ ಹಿನ್ನೆಲೆಯಲ್ಲಿ ಮೃತ ವ್ಯಕ್ತಿಯ ಅಂತ್ಯಕ್ರಿಯೆಯನ್ನು ರಸ್ತೆ…

Read More

ನವದೆಹಲಿ: ದೇಶದ ಹೆಚ್ಚಿನ ಭಾಗಗಳಲ್ಲಿ ಸಾರ್ವಜನಿಕ ರಜಾದಿನವಾಗಿದ್ದರೂ, ಸರ್ಕಾರಿ ವಹಿವಾಟುಗಳನ್ನು ನಿರ್ವಹಿಸುವ ಎಲ್ಲಾ ಏಜೆನ್ಸಿ ಬ್ಯಾಂಕುಗಳು ಮಾರ್ಚ್ 31, 2025 ರಂದು ತೆರೆದಿರಬೇಕು ಎಂದು ಭಾರತೀಯ ರಿಸರ್ವ್ ಬ್ಯಾಂಕ್ (RBI) ಘೋಷಿಸಿದೆ.  ಈ ನಿರ್ಧಾರವು 2024-25ರ ಹಣಕಾಸು ವರ್ಷಕ್ಕೆ ಸಂಬಂಧಿಸಿದ ಎಲ್ಲಾ ಹಣಕಾಸು ವಹಿವಾಟುಗಳು ಅದೇ ಹಣಕಾಸು ಅವಧಿಯಲ್ಲಿ ಪೂರ್ಣಗೊಳ್ಳುವುದನ್ನು ಖಚಿತಪಡಿಸುತ್ತದೆ. ಮಾರ್ಚ್ 31 ರಂದು ಬ್ಯಾಂಕುಗಳು ತೆರೆದಿರಲು ಕಾರಣವೇನು? ಆರ್‌ಬಿಐ ಪ್ರಕಾರ, ಸರ್ಕಾರಕ್ಕೆ ಸಂಬಂಧಿಸಿದ ಪಾವತಿಗಳು ಮತ್ತು ರಶೀದಿಗಳನ್ನು ಸುಗಮಗೊಳಿಸಲು ಭಾರತ ಸರ್ಕಾರ ಮಾರ್ಚ್ 31 ರಂದು ಬ್ಯಾಂಕುಗಳು ತೆರೆದಿರಬೇಕೆಂದು ವಿನಂತಿಸಿದೆ. ಇದರಲ್ಲಿ ತೆರಿಗೆ ಪಾವತಿಗಳು, ಪಿಂಚಣಿ ವಿತರಣೆಗಳು ಮತ್ತು ಹಣಕಾಸು ವರ್ಷವನ್ನು ಮುಕ್ತಾಯಗೊಳಿಸಲು ನಿರ್ಣಾಯಕವಾದ ಇತರ ಹಣಕಾಸು ಚಟುವಟಿಕೆಗಳು ಸೇರಿವೆ. ಆರಂಭದಲ್ಲಿ, ಮಾರ್ಚ್ 31 ಅನ್ನು ರಂಜಾನ್-ಈದ್ (ಈದ್-ಉಲ್-ಫಿತರ್) ಗಾಗಿ ಹೆಚ್ಚಿನ ರಾಜ್ಯಗಳಲ್ಲಿ (ಐಜ್ವಾಲ್ ಮತ್ತು ಶಿಮ್ಲಾ ಹೊರತುಪಡಿಸಿ) ಬ್ಯಾಂಕ್ ರಜೆ ಎಂದು ಘೋಷಿಸಲಾಯಿತು. ಆದಾಗ್ಯೂ, ಆರ್‌ಬಿಐ ಈಗ ಎಲ್ಲಾ ಏಜೆನ್ಸಿ ಬ್ಯಾಂಕ್‌ಗಳಿಗೆ ಈ ದಿನದಂದು ಕಾರ್ಯನಿರ್ವಹಿಸಲು ಸೂಚನೆ…

Read More

ಬೆಂಗಳೂರು: ಕರ್ನಾಟಕದಲ್ಲಿ ಮೀಟರ್ ಬಡ್ಡಿ ದಂಧೆ ನಿಯಂತ್ರಣಕ್ಕೆ ಸರ್ಕಾರ ನಿರ್ಧಾರ ಕೈಗೊಂಡಿತ್ತು. ಅದರಂತೆ ವಿಧಾನ ಮಂಡಲದ ಅಧಿವೇಶನದಲ್ಲಿ ವಿಧೇಯಕವನ್ನು ಮಂಡಿಸಿ, ಉಭಯ ಸದನಗಳಲ್ಲಿ ಅಂಕಿತ ಪಡೆದಿತ್ತು. ಈಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕರ್ನಾಟಕ ಮಿತಿ ಮೀರಿದ ಬಡ್ಡಿ ವಿಧಿಸುವಿಕೆಯ ನಿಷೇಧ (ತಿದ್ದುಪಡಿ ) ಅಧಿನಿಯಮ 2025ಕ್ಕೆ ಅಂಕಿತ ನೀಡಿದ್ದಾರೆ. ಹೀಗಾಗಿ ಇನ್ಮುಂದೆ ಅಕ್ರಮ ಮೀಟರ್ ಬಡ್ಡಿ ದಂಧೆ ನಡೆಸಿದ್ರೇ ಜೈಲು, ದಂಡ ಫಿಕ್ಸ್ ಆದಂತೆ ಆಗಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಗೆಜೆಟ್ ಅಧಿಸೂಚನೆ ಹೊರಡಿಸಲಾಗಿದ್ದು, ಸಾಮಾನ್ಯ ತಿಳುವಳಿಕೆಗಾಗಿ ಇದನ್ನು 2025ರ ಕರ್ನಾಟಕ ಅಧಿನಿಯಮ ಸಂಖ್ಯೆ 17 ಎಂಬುದಾಗಿ ಕರ್ನಾಟಕ ರಾಜ್ಯಪತ್ರದ ವಿಶೇಷ ಸಂಚಿಕೆಯಲ್ಲಿ (ಭಾಗ IV) ಪ್ರಕಟಿಸಬೇಕೆಂದು ಆದೇಶಲಾಗಿದೆ ಎಂದಿದ್ದಾರೆ. ಕರ್ನಾಟಕ ಮಿತಿಮೀರಿದ ಬಡ್ಡಿ ವಿಧಿಸುವಿಕೆಯ ನಿಷೇಧ (ತಿದ್ದುಪಡಿ) ಅಧಿನಿಯಮ, 2025 (2025 ರ ಮಾರ್ಚ್ ತಿಂಗಳ 24ನೇ ದಿನಾಂಕದಂದು ರಾಜ್ಯಪಾಲರಿಂದ ಒಪ್ಪಿಗೆಯನ್ನು ಪಡೆಯಲಾಗಿದೆ) ಕರ್ನಾಟಕ ಮಿತಿಮೀರಿದ ಬಡ್ಡಿ ವಿಧಿಸುವಿಕೆಯ ನಿಷೇಧ ಅಧಿನಿಯಮ, 2004ನ್ನು ತಿದ್ದುಪಡಿ ಮಾಡಲು ಒಂದು ಅಧಿನಿಯಮ.…

Read More

ಬೆಂಗಳೂರು: 16ನೇ ವಿಧಾನಸಭೆಗೆ ಆಯ್ಕೆಯಾಗಿರುವಂತ ರಾಜ್ಯದ ಶಾಸಕರು ತಮ್ಮ ಹಾಗೂ ತಮ್ಮ ಕುಟುಂಬದ ಸದಸ್ಯರ ಆಸ್ತಿ ವಿವರವನ್ನು ಜೂನ್.30ರೊಳಗೆ ಸಲ್ಲಿಸುವಂತೆ ಲೋಕಾಯುಕ್ತ ಡೆಡ್ ಲೈನ್ ನೀಡಿದೆ. ಈ ಸಂಬಂಧ ವಿಧಾನಸಭೆ ಸದಸ್ಯರಿಗೆ ಪತ್ರ ಬರೆದಿರುವಂತ ಕಾರ್ಯದರ್ಶಿ ಎಂ.ಕೆ ವಿಶಾಲಾಕ್ಷಿ ಅವರು, ಕರ್ನಾಟಕ ಲೋಕಾಯುಕ್ತ ಅಧಿನಿಯಮ 1984ರ ಕಲಂ 7 ರ ಉಪ ಕಲಂ (1)ರಡಿ ಉಲ್ಲೇಖಿಸಿರುವಂತೆ ಪ್ರತಿಯೊಬ್ಬ ವಿಧಾನಸಭೆಯ ಸದಸ್ಯರು, ಆಯಾ ವರ್ಷದ ಜೂನ್ 30ರೊಳಗಾಗಿ ತಮ್ಮ ಹಾಗೂ ತಮ್ಮ ಕುಟುಂಬ ಸದಸ್ಯರ ಆಸ್ತಿ ಮತ್ತು ದಾಯಿತ್ವಗಳ ಪಟ್ಟಿಯನ್ನು ನಿಗದಿಪಡಿಸಲಾದ ನಮೂನೆಯಲ್ಲಿ ಮಾನ್ಯ ಲೋಕಾಯುಕ್ತರಿಗೆ ಸಲ್ಲಿಸತಕ್ಕದೆಂದು ಕರ್ನಾಟಕ ಲೋಕಾಯುಕ್ತ ಕಾಯಿದೆ, 1984ರ ಕಲಂ 22ರಲ್ಲಿ ಅಧ್ಯಾದೇಶಿಸಲಾಗಿದ್ದು, ಅದರಂತೆ ಪಟ್ಟಿಯನ್ನು ಸಲ್ಲಿಸಲು ಮಾನ್ಯ ಸದಸ್ಯರುಗಳಿಗೆ ತಿಳಿಸುವಂತೆ ದಿನಾಂಕ:21.03.2025ರಂದು ಲೋಕಾಯುಕ್ತ ನಿಬಂಧಕರು ಬರೆದಿರುವ ಪತ್ರದಲ್ಲಿ ತಿಳಿಸಿರುತ್ತಾರೆ ಎಂದಿದ್ದಾರೆ. ಆದುದರಿಂದ, 16ನೇ ವಿಧಾನಸಭೆಗೆ ಆಯ್ಕೆಯಾಗಿರುವ ಮಾನ್ಯ ಸದಸ್ಯರು 2024-25ನೇ ಸಾಲಿಗೆ ಸಂಬಂಧಿಸಿದ ತಮ್ಮ ಹಾಗೂ ತಮ್ಮ ಕುಟುಂಬದ ಸದಸ್ಯರ ಆಸ್ತಿ ಮತ್ತು ದಾಯಿತ್ವಗಳ ಪಟ್ಟಿಯನ್ನು ಲಗತ್ತಿಸಿರುವ…

Read More

ಬೆಂಗಳೂರು: ಕರ್ನಾಟಕದಲ್ಲಿ ಮೈಕ್ರೋ ಫೈನಾನ್ಸ್ ದಂಧೆ ತಡೆಗೆ ರಾಜ್ಯ ಸರ್ಕಾರ ಸುಗ್ರೀವಾಜ್ಞೆಯ ಮೂಲಕ ಕಾಯ್ದೆ ಜಾರಿಗೆ ತಂದಿತ್ತು. ಆ ಬಳಿಕ ವಿಧಾನ ಮಂಡಲದ ಉಭಯ ಸದನಗಳಲ್ಲಿ ಮಂಡಿಸಿ ಅಂಗೀಕಾರ ಪಡೆದಿತ್ತು. ಈಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕರ್ನಾಟಕ ಕಿರು(Micro) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಅಧಿನಿಯಮ 2025ಕ್ಕೆ ಅಂಕಿತ ನೀಡಿದ್ದಾರೆ. ಹೀಗಾಗಿ ಇನ್ಮುಂದೆ ಅಕ್ರಮ ಮೈಕ್ರೋ ಫೈನಾನ್ಸ್ ದಂಧೆಗೆ ಕಡಿವಾಣ ಬಿದ್ದಂತೆ ಆಗಿದೆ. ಅಲ್ಲದೇ ಕಿರುಕುಳ ನೀಡಿದ್ರೇ ಜೈಲು, ದಂಡ ಫಿಕ್ಸ್ ಆದಂತೆ ಆಗಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಗೆಜೆಟ್ ಅಧಿಸೂಚನೆ ಹೊರಡಿಸಲಾಗಿದ್ದು,  ಕರ್ನಾಟಕ ಕಿರು (Micro) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ವಿಧೇಯಕ, 2025 ಇದಕ್ಕೆ 2025 ರ ಮಾರ್ಚ್ ತಿಂಗಳ 24ನೇ ದಿನಾಂಕದಂದು ರಾಜ್ಯಪಾಲರ ಒಪ್ಪಿಗೆ ದೊರೆತಿದ್ದು, ಸಾಮಾನ್ಯ ತಿಳುವಳಿಕೆಗಾಗಿ ಇದನ್ನು 2025ರ ಕರ್ನಾಟಕ ಅಧಿನಿಯಮ ಸಂಖ್ಯೆ:15 ಎಂಬುದಾಗಿ ಕರ್ನಾಟಕ ರಾಜ್ಯ ಪತ್ರದ ವಿಶೇಷ ಸಂಚಿಕೆಯಲ್ಲಿ (ಭಾಗ IV)…

Read More

ಮೈಸೂರು: ಉದಯಗಿರಿ ಠಾಣೆಯಲ್ಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಸಬ್ ಇನ್ಸ್ ಪೆಕ್ಟರ್ ಸೇರಿದಂತೆ ಮೂವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ. ಈ ಸಂಬಂಧ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ ಹೊರಡಿಸಿದ್ದಾರೆ. ಅದರಲ್ಲಿ ಉದಯಗಿರಿ ಪೊಲೀಸ್ ಠಾಣೆ ವ್ಯಾಪ್ತಿಯ ಗಲಭೆ ಪ್ರಕರಣದಲ್ಲಿ ಒರ್ವ ಸಬ್ ಇನ್ಸ್ಪೆಕ್ಟರ್ ಸೇರಿದಂತೆ ಮೂವರು ಪೊಲೀಸರು ಅಮಾನತುಗೊಳಿಸಿರುವುದಾಗಿ ತಿಳಿಸಿದ್ದಾರೆ. ಮೂವರು ಪೊಲೀಸ್ ಅಧಿಕಾರಿ, ಸಿಬ್ಬಂದಿಗಳನ್ನು ಕರ್ತವ್ಯ ಲೋಪದ ಮೇಲೆ ಸಿಬ್ಬಂದಿ ಅಮಾನತುಗೊಳಿಸಿದ ನಗರ ಪೊಲೀಸ್ ಆಯುಕ್ತರು ಆದೇಸಿದ್ದಾರೆ. ಇನ್ನೂ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಫೋಸ್ಟರ್ ಗಲಭೆಗೆ ಮೂಲಕ ಗಲಭೆ ಪ್ರಕರಣವನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ವಿಫಲವಾದ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. https://kannadanewsnow.com/kannada/governor-gives-assent-to-microfinance-harassment-control-bill-in-the-state-gazette-notification-issued/ https://kannadanewsnow.com/kannada/disciplinary-committee-issues-notice-to-five-bjp-leaders-in-the-state/

Read More

ವಿಶ್ವಾವಸು ಸಂವತ್ಸರ ಈ ಸಂವತ್ಸರದಲ್ಲಿ ಗುರು ಅಸ್ತ (ಮೌಢ್ಯ) 15-06-2025* ರಿಂದ 07-07-2025 ತನಕ* ವಿಶ್ವಾವಸು ಸಂವತ್ಸರದಲ್ಲಿ ಗುರುವು ಜ್ಯೇಷ್ಠ ಕೃಷ್ಣ ಚತುರ್ಥಿ ಭಾನುವಾರ 2025 ಜೂನ್ 15 ಪಶ್ಚಿಮದಲ್ಲಿ ಅಸ್ತನಾಗಿ ಆಷಾಢ ಶುಕ್ಲ ದ್ವಾದಶಿ ಯು ಸೋಮವಾರ 2025 ಜುಲೈ 7ನೇ ತಾರೀಕು ಪೂರ್ವ ದಿಕ್ಕಿನಲ್ಲಿ ಉದಯಿಸುವನು ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ಶುಕ್ರ ಅಸ್ತ(ಮೌಢ್ಯ) 16-12-2025 ರಿಂದ. 02-02-2026 ತನಕ ವಿಶ್ವಾವಸು ಸಂವತ್ಸರದಲ್ಲಿ ಶುಕ್ರನು ಮಾರ್ಗಶಿರ ಕೃಷ್ಣ ದ್ವಾದಶಿ ಮಂಗಳವಾರ ಡಿಸೆಂಬರ್ 16ಕ್ಕೆ ಪೂರ್ವ ದಿಕ್ಕಿನಲ್ಲಿ ಅಸ್ತನಾಗಿ ಮಾಘ ಕೃಷ್ಣ ಪಾಡ್ಯ ಸೋಮವಾರ 2026 ಫೆಬ್ರವರಿ 2 ಪಶ್ಚಿಮ ದಿಕ್ಕಿನಲ್ಲಿ ಉದಯಿಸುತ್ತಾನೆ ಈ ಗುರು ಮತ್ತು ಶುಕ್ರ ಗ್ರಹಗಳ ಅಸ್ತಂಗತ ಕಾಲವು ಮದುವೆ…

Read More

ಬೆಂಗಳೂರು: ರಾಜ್ಯದ ಐವರು ಬಿಜೆಪಿ ನಾಯಕರಿಗೆ ಬಿಜೆಪಿ ಹೈಕಮಾಂಡ್ ಬಿಗ್ ಶಾಕ್ ನೀಡಿದೆ. 72 ಗಂಟೆಯಲ್ಲಿ ಉತ್ತರಿಸುವಂತೆ ಐವರು ಬಿಜೆಪಿ ನಾಯಕರಿಗೆ ಶೋಕಾಸ್ ನೋಟಿಸ್ ನೀಡಿದೆ. ಈ ಸಂಬಂಧ ಬಿಜೆಪಿಯ ಶಿಸ್ತು ಪಾಲನಾ ಸಮಿತಿಯಿಂದ ಕರ್ನಾಟಕದ ಐವರು ಬಿಜೆಪಿ ನಾಯಕರಿಗೆ ನೋಟಿಸ್ ನೀಡಲಾಗಿದೆ. ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ, ಕಟ್ಟಾ ಸುಬ್ರಹ್ಮಣ್ಯ ನಾಯ್ಡು,  ಬಿ.ಪಿ ಹರೀಶ್, ಶಿವರಾಮ್ ಹೆಬ್ಬಾರ್ ಹಾಗೂ ಎಸ್ ಟಿ ಸೋಮಶೇಖರ್ ಗೆ ಶಿಸ್ತು ಸಮಿತಿಯಿಂದ ನೋಟಿಸ್ ನೀಡಲಾಗಿದೆ. ಬಿಜೆಪಿ ಶಿಸ್ತು ಪಾಲನಾ ಸಮಿತಿಯಿಂದ ನೀಡಿರುವಂತ ನೋಟಿಸ್ ನಲ್ಲಿ 72 ಗಂಟೆಯಲ್ಲಿ ಉತ್ತರಿಸುವಂತೆ ತಿಳಿಸಲಾಗಿದೆ. ಈ ಮೂಲಕ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬೆನ್ನಲ್ಲೇ ಐವರು ಬಿಜೆಪಿ ನಾಯಕರಿಗೂ ಬಿಜೆಪಿ ಹೈಕಮಾಂಟ್ ನೋಟಿಸ್ ನೀಡಿ ಶಾಕ್ ನೀಡಲಾಗಿದೆ. https://kannadanewsnow.com/kannada/governor-gives-assent-to-microfinance-harassment-control-bill-in-the-state-gazette-notification-issued/ https://kannadanewsnow.com/kannada/state-govt-orders-transfer-of-sagar-sub-divisional-officer-yathish-r/

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ ಸಾಗರದ ಉಪ ವಿಭಾಗಾಧಿಕಾರಿ ಯತೀಶ್ ಆರ್ ಸೇರಿದಂತೆ ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ವರ್ಗಾವಣೆ ಅಧಿಸೂಚನೆ ಹೊರಡಿಸಲಾಗಿದ್ದು, ಬೆಂಗಳೂರಿನ ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ, ಭೂಮಿ ಮತ್ತು ಯುಪಿಒಆರ್) ಸರ್ಕಾರದ ಪ್ರಧಾನ ಕಾರ್ಯದರ್ಶಿ  ವಿ.ರಶ್ಮಿ ಮಹೇಶ್, ಐಎಎಸ್ (ಕೆಎನ್: 1996) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ. ಮುಂದಿನ ಆದೇಶದವರೆಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಬೆಂಗಳೂರಿನ ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ, ಭೂಮಿ ಮತ್ತು ಯುಪಿಒಆರ್) ಸರ್ಕಾರದ ಪ್ರಧಾನ ಕಾರ್ಯದರ್ಶಿ ಹುದ್ದೆಯ ಸಹವರ್ತಿ ಪ್ರಭಾರದಲ್ಲಿ ವಿ. ರಶ್ಮಿ ಮಹೇಶ್, ಐಎಎಸ್ (ಕೆಎನ್: 1996) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ನೇಮಕ ಮಾಡಲಾಗಿದೆ. ಬೆಂಗಳೂರಿನ ಕರ್ನಾಟಕ ರಾಜ್ಯ ಏಡ್ಸ್ ತಡೆಗಟ್ಟುವಿಕೆ ಸೊಸೈಟಿಯ ಯೋಜನಾ ನಿರ್ದೇಶಕರಾದ ನಾಗರಾಜ ಎನ್. ಎಂ.,…

Read More

ಚೆನ್ನೈ: ಖ್ಯಾತ ತಮಿಳು ನಟ ಮತ್ತು ನಿರ್ದೇಶಕ ಮನೋಜ್ ಭಾರತಿರಾಜ ಅವರು ಕೇವಲ 48 ನೇ ವಯಸ್ಸಿನಲ್ಲಿ ಹೃದಯಾಘಾತದಿಂದ ನಿಧನರಾದರು. ಮನೋಜ್ ಪ್ರಸಿದ್ಧ ನಿರ್ದೇಶಕ ಭಾರತಿರಾಜ ಅವರ ಪುತ್ರ. ಈ ಸುದ್ದಿ ಇಡೀ ಚಿತ್ರರಂಗವನ್ನು ಮತ್ತು ಅಭಿಮಾನಿಗಳನ್ನು ಆಘಾತಕ್ಕೀಡು ಮಾಡಿದೆ. ವರದಿಗಳ ಪ್ರಕಾರ, ಅವರು ಇಂದು ಸಂಜೆ ಚೆನ್ನೈನಲ್ಲಿ ಹೃದಯಾಘಾತಕ್ಕೆ ಒಳಗಾಗಿದ್ದರು. ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೇ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಅವರು ಭಾರತಿರಾಜ ಅವರ ತಾಜ್ ಮಹಲ್ ಮೂಲಕ ನಾಯಕ ನಟನಾಗಿ ಪಾದಾರ್ಪಣೆ ಮಾಡಿದರು. ಅಲ್ಲಿ ಅರ್ಜುನ, ಸಮುಧಿರಾಮ್, ಈಶ್ವರನ್, ವಿರುಮನ್ ಮತ್ತು ಇತರ ಚಿತ್ರಗಳಲ್ಲಿ ನಟಿಸಿದರು. ಅವರ ತಂದೆಯ ನಂತರ, ಅವರು ಮಾರ್ಗಜಿ ತಿಂಗಲ್ ಎಂಬ ಚಿತ್ರವನ್ನು ಸಹ ನಿರ್ದೇಶಿಸಿದರು. https://kannadanewsnow.com/kannada/rbi-cancels-bank-holiday-on-march-31/ https://kannadanewsnow.com/kannada/governor-gives-assent-to-microfinance-regulation-bill-imposes-jail-term-penalty-for-harassment/

Read More